LATEST NEWS
ಭಾರತಕ್ಕೆ ದೊಡ್ಡ ಆಘಾತ.. ವಿನೇಶ್ ಫೋಗಾಟ್ ಒಲಿಂಪಿಕ್ಸ್ನಿಂದ ಅನರ್ಹ
ಆಗಸ್ಟ್ 6 ರಂದು ಒಲಿಂಪಿಕ್ಸ್ನಲ್ಲಿ ನಡೆದ ಮಹಿಳೆಯರ 50 ಕೆಜಿ ತೂಕ ವಿಭಾಗದ ಕುಸ್ತಿ ಸ್ಪರ್ಧೆಯ ಸೆಮಿಫೈನಲ್ ಪಂದ್ಯದಲ್ಲಿ ಕ್ಯೂಬಾದ ಗುಜ್ಮನ್ ಲೋಪೆಜ್ ಅವರನ್ನು 5-0 ಅಂತರದಿಂದ ಮಣಿಸಿ ಫೈನಲ್ ಪ್ರವೇಶಿಸಿದ್ದ ಭಾರತದ ವಿನೇಶ್ ಫೋಗಟ್ ಇದೀಗ ಸ್ಪರ್ಧೆಯಿಂದ ಅನರ್ಹಗೊಂಡಿದ್ದಾರೆ.
ವಾಸ್ತವವಾಗಿ ಫೈನಲ್ ಪಂದ್ಯಕ್ಕೂ ಮುನ್ನ ನಡೆದ ವಿನೇಶ್ ಅವರ ತೂಕ ಪರೀಕ್ಷೆಯಲ್ಲಿ ಅವರ ತೂಕವು ನಿಗದಿತ ಮಿತಿಗಿಂತ 100 ಗ್ರಾಂ ಹೆಚ್ಚಿರುವುದು ಕಂಡುಬಂದಿದೆ. ನಿಯಮಗಳ ಪ್ರಕಾರ, ಯಾವುದೇ ಕುಸ್ತಿಪಟುವಿಗೆ ಯಾವುದೇ ವಿಭಾಗದಲ್ಲಿ 100 ಗ್ರಾಂ ಹೆಚ್ಚುವರಿ ತೂಕದ ಭತ್ಯೆ ನೀಡಲಾಗುತ್ತದೆ. ಆದರೆ ವಿನೇಶ್ ಅವರ ತೂಕ ಇದಕ್ಕಿಂತ ಹೆಚ್ಚಿದೆ ಹೀಗಾಗಿ ಅವರು ಫೈನಲ್ ಸ್ಪರ್ಧೆಯಿಂದ ಹೊರಬಿದ್ದಿದ್ದಾರೆ ಎಂದು ವರದಿಯಾಗಿದೆ.
ವಿನೇಶ್ ಫೋಗಟ್ಗೆ ಬಿಗ್ ಶಾಕ್
ಭಾರತೀಯ ಒಲಿಂಪಿಕ್ಸ್ ಸಂಸ್ಥೆ ಕೂಡ ವಿನೇಶ್ ಫೋಗಟ್ ಅನರ್ಹತೆಯನ್ನು ಖಚಿತಪಡಿಸಿದೆ. ವಿನೇಶ್ ಇಂದು ಮಧ್ಯಾಹ್ನ 12:45 ಕ್ಕೆ ಯುಎಸ್ಎ ಕುಸ್ತಿಪಟು ವಿರುದ್ಧ ಚಿನ್ನದ ಪದಕದ ಪಂದ್ಯವನ್ನು ಆಡಬೇಕಾಗಿತ್ತು. ಆದರೆ ನಿನ್ನೆ ನಡೆದ ತೂಕ ಪರೀಕ್ಷೆಯಲ್ಲಿ ವಿನೇಶ್ ಅವರ ತೂಕ ನಿಗದಿಗಿಂತ ಹೆಚ್ಚಿತ್ತು. ಹೀಗಾಗಿ ತಂಡವು ರಾತ್ರಿಯಿಡೀ ಅವರ ತೂಕವನ್ನು ಕಡಿಮೆ ಮಾಡಲು ಪ್ರಯತ್ನಿಸಿತು. ಆದರೆ ಇಂದು ಬೆಳಿಗ್ಗೆ ನಡೆದ ತೂಕ ಪರೀಕ್ಷೆಯಲ್ಲಿ ಅವರ ತೂಕವು 50 ಕೆಜಿಗಿಂತ ಸ್ವಲ್ಪ ಹೆಚ್ಚಿತ್ತು. ಹೀಗಾಗಿ ಅವರನ್ನು ಅನರ್ಹಗೊಳಿಸಲಾಗಿದೆ.
ಸದ್ಯಕ್ಕೆ ಭಾರತ ತಂಡದಿಂದ ಯಾವುದೇ ಪ್ರತಿಕ್ರಿಯೆ ನಿರೀಕ್ಷಿಸುವಂತಿಲ್ಲ. ಜೊತೆಗೆ ವಿನೇಶ್ ಅವರ ಗೌಪ್ಯತೆಯನ್ನು ಗೌರವಿಸಲು ನಾವೆಲ್ಲರೂ ನಿಮ್ಮನ್ನು ವಿನಂತಿಸುತ್ತೇವೆ. ಇದರಿಂದ ನಾವು ಮುಂಬರುವ ಈವೆಂಟ್ನತ್ತ ಗಮನ ಹರಿಸಬಹುದು ಎಂದು ಐಒಎ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ವಿನೇಶ್ಗೆ ಯಾವುದೇ ಪದಕ ಸಿಗುವುದಿಲ್ಲ..!
ಫೈನಲ್ ಸ್ಪರ್ಧೆಗೂ ಮುನ್ನ ವಿನೇಶ್ ಫೋಗಟ್ ಅನರ್ಹಗೊಂಡಿರುವುದರಿಂದಾಗಿ ಇದೀಗ 50 ಕೆ.ಜಿ. ವಿಭಾಗದಲ್ಲಿ ಯಾವುದೇ ಕುಸ್ತಿಪಟು ಬೆಳ್ಳಿ ಪದಕ ಪಡೆಯಲು ಸಾಧ್ಯವಾಗುವುದಿಲ್ಲ. ಉಳಿದಂತೆ ಈ ವಿಭಾಗದಲ್ಲಿ ವಿನೇಶ್ ಅವರೊಂದಿಗೆ ಫೈನಲ್ನಲ್ಲಿ ಸ್ಪರ್ಧಿಸಬೇಕಿದ್ದ ಅಮೆರಿಕದ ಕುಸ್ತಿಪಟುಗೆ ಚಿನ್ನದ ಪದಕ ಸಿಗಲಿದೆ. ಆದರೆ ಚೊಚ್ಚಲ ಪದಕದ ನಿರೀಕ್ಷೆಯಲ್ಲಿದ್ದ ವಿನೇಶ್ ಅವರಿಗೆ ಯಾವುದೇ ಪದಕ ಸಿಗುವುದಿಲ್ಲ.
ವಾಸ್ತವವಾಗಿ ಈ ಹಿಂದೆ 53 ಕೆಜಿ ವಿಭಾಗದಲ್ಲಿ ಭಾಗವಹಿಸುತ್ತಿದ್ದ ವಿನೇಶ್, 50 ಕೆಜಿ ವಿಭಾಗದಲ್ಲಿ ಅರ್ಹತೆ ಪಡೆಯಲು ಅಧಿಕ ತೂಕದ ಸಮಸ್ಯೆ ಎದುರಿಸುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ, ಅವರು ಒಲಿಂಪಿಕ್ ಅರ್ಹತಾ ಪಂದ್ಯಗಳಲ್ಲಿಯೂ ಇದೇ ರೀತಿಯ ಸಮಸ್ಯೆಯನ್ನು ಎದುರಿಸಬೇಕಾಯಿತು. ಆದರೆ ಅತ್ಯಂತ ಕಡಿಮೆ ಅಂತರದಿಂದ ಒಲಿಂಪಿಕ್ಸ್ ಅರ್ಹತಾ ಸುತ್ತಿಗೆ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು.
DAKSHINA KANNADA
ಕೋಟಿ ಗಾಯತ್ರಿ ಯಾಗ: ಸೆ. 29ರಂದು ಚಿತ್ರಾಪುರ ಮಠದಲ್ಲಿ ಸಂಕಲ್ಪ ದಿನ
ಮಂಗಳೂರು : ಅಖಿಲ ಭಾರತ ಬ್ರಾಹ್ಮಣ ಮಹಾಸಭಾ ವತಿಯಿಂದ ಅಕ್ಟೋಬರ್ 26 ಮತ್ತು 27ರಂದು ನಡೆಯಲಿರುವ ಕೋಟಿ ಗಾಯತ್ರಿ ಯಾಗದ ಪೂರ್ವಭಾವಿಯಾಗಿ ಸೆ. 29ರ ಭಾನುವಾರ ಮುಂಜಾನೆ ಸಂಕಲ್ಪ ದಿನವನ್ನು ಮಂಗಳೂರಿನ ಚಿತ್ರಾಪುರ ಮಠದಲ್ಲಿ ನಡೆಲು ಉದ್ದೇಶಿಸಲಾಗಿದೆ ಎಂದು ಪ್ರಧಾನ ಸಂಚಾಲಕ ಶ್ರೀಧರ ಹೊಳ್ಳ ಹೇಳಿದರು. ಚಿತ್ರಾಪುರ ಮಠದಲ್ಲಿ ನಡೆದ ಬ್ರಾಹ್ಮಣ ಸಮುದಾಯದ ಸಮಸ್ತರ ಸಭೆಯಲ್ಲಿ ಕೋಟಿ ಗಾಯತ್ರಿ ಯಾಗದ ಯಶಸ್ವಿಗಾಗಿ ನಾನಾ ಸಮಿತಿಗಳನ್ನು ರಚನೆಯ ಬಗ್ಗೆ ಚರ್ಚಿಸಿ ನಿರ್ಣಯಿದ ಬಳಿಕ ನಡೆದ ಸಭೆಯಲ್ಲಿ ಮಾತನಾಡಿದರು.
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಬ್ರಾಹ್ಮಣ ಸಮುದಾಯವು ಈಗಾಗಲೇ ಗಾಯತ್ರಿ ಯಜ್ಞದ ಪೂರ್ವಭಾವಿಯಾಗಿ ಜಪದ ಸಂಕಲ್ಪ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಹೊರಭಾಗದಲ್ಲಿರುವ ಜಿಲ್ಲೆಯ ಬ್ರಾಹ್ಮಣರು ಕೂಡಾ ಹೆಸರು ನೋಂದಾಯಿಸಿಕೊಳ್ಳುತ್ತಿದ್ದಾರೆ. ಇನ್ನೂ ಹೆಚ್ಚಿನ ಮಂದಿ ಹೆಸರು ನೋಂದಾಯಿಸುವ ನಿಟ್ಟಿನಲ್ಲಿ ಪ್ರೇರೇಪಿಸುವ ಕೆಲಸವಾಗಬೇಕು ಎಂದರು. ಬ್ರಾಹ್ಮಣ ಸಮಾಜದ ಎಲ್ಲಾ ಬಾಂಧವರು ಒಂದೇ ಸೂರಿನಡಿ ಸೇರಿಸಿ, ಹೊರ ಜಗತ್ತಿಗೆ ಬ್ರಾಹ್ಮಣ ಎಂಬ ಸಂದೇಶ ಮುಟ್ಟಿಸುವಂತಾಗಬೇಕು. ಇದೊಂದು ವಿಶೇಷ ಕಾರ್ಯಕ್ರಮ ಈ ಕಾರ್ಯಕ್ರಮವು ಗಾಯತ್ರಿ ಸಂಗಮವಾಗಿದೆ. ’ಸಾಮರಸ್ಯದಿ ಜಗವ ಬೆಳಗುವ ಬ್ರಹ್ಮ ತೇಜದ ಬೆಳಕಲಿ’ ಶೀರ್ಷಿಕೆಯಡಿ ಜರಗಲಿದೆ. ಆದುದರಿಂದ ರಚನೆಯಾದ ಸಮಿತಿಯ ಸದಸ್ಯರು ಎಲ್ಲರೂ ಒಂದಾಗಿ ತಮ್ಮ ಮನೆ ಕಾರ್ಯಕ್ರಮ ಎಂಬ ರೀತಿಯಲ್ಲಿ ದುಡಿಯಬೇಕು. ಆ ಮೂಲಕ ಸಮಾಜಕ್ಕೆ ನಮ್ಮ ಒಗ್ಗಟ್ಟನ್ನು ತೋರಿಸಿಕೊಡಬೇಕು ಎಂದು ಸಮಿತಿಯ ಕಾರ್ಯಾಧ್ಯಕ್ಷ ನ್ಯಾಯವಾದಿ ಶ್ರೀ ಮಹೇಶ್ ಕಜೆ ಹೇಳಿದರು.
ನಾನಾ ಸಮಿತಿಗಳ ಜವಾಬ್ದಾರಿ, ಹೋಮದ ರೂಪು ರೇಶೆ, ಹೋಮದ ಉದ್ದೇಶ, ಕಾರ್ಯಯೋಜನೆಯ ಕುರಿತು ಮಾಹಿತಿ ನೀಡಿದ ವಿದ್ವಾನ್ ಕಶೆಕೋಡಿ ಸೂರ್ಯನಾರಾಯಣ ಭಟ್ ಸಾಂದರ್ಭಿಕವಾಗಿ ಮಾತನಾಡಿದರು. ಅ. 26ರಂದು ಮಹಿಳೆಯರಿಗಾಗಿ ಮಾತೃ ಸಂಗಮ ಕಾರ್ಯಕ್ರಮ ಆಯೋಜಿಸಲಾಗಿದೆ. ಎಲ್ಲ ಮಾತೆಯರು ಈ ಸಂಗಮದಲ್ಲಿ ಭಾಗವಹಿಸಬೇಕು. ಮುಂದಿನ ದಿನಗಳಲ್ಲಿ ಈ ವೇದಿಕೆಯೇ ಇಡೀ ಸಮಾಜದ ಮುಖವಾಗಬೇಕು ಎಂಬ ಅಭಿಪ್ರಾಯ ವ್ಯಕ್ತವಾಯಿತು. ಈ ಹಿಂದೆ ಗಾಯತ್ರಿ ಯಾಗ ಮಾಡಿ ಅನುಭವ ಇರುವ ವಿದ್ವಾನ್ ಬಂದಗದ್ದೆ ನಾಗರಾಜ್ ಮಾತನಾಡಿ, ಗಾಯತ್ರಿ ಮಂತ್ರ ಅನುಷ್ಠಾನ ಮಾಡುವುದರಿಂದ ಸಿಗುವ ಲಾಭ, ಮಾನಸಿಕ ವಿಕಸನದ ಬಗ್ಗೆ ತಮ್ಮ ಅನುಭವವನ್ನು ಹಂಚಿಕೊಂಡರು.
ವಿದ್ವಾನ್ ಕಟೀಲಿನ ಶ್ರೀಹರಿ ನಾರಾಯಣದಾಸ ಆಸ್ರಣ್ಣ ಮಾತನಾಡಿ, ಎಲ್ಲಾ ವಿಪ್ರ ಸಮಾಜ ಬಾಂಧವರು ಒಟ್ಟು ಸೇರಿ ಈ ಯಜ್ಞ ಕಾರ್ಯದಲ್ಲಿ ಭಾಗಿಗಳಾಗೋಣ, ಪ್ರತಿಯೊಬ್ಬ ಬ್ರಾಹ್ಮಣನು ಸಹ ಕುಟುಂಬ ಸಹಿತ ಪಾಲ್ಗೊಳ್ಳಬೇಕು ಹಾಗೂ ಸೆ.೨೯ರ ಸಂಕಲ್ಪ ಕಾರ್ಯದಲ್ಲಿ ಕನಿಷ್ಠ ೫೦೦ ಜನ ಬಾಂಧವರು ಸೇರಬೇಕು ಎಂದರು. ಬ್ರಾಹ್ಮಣ ಮಹಾಸಭಾ ಸುರತ್ಕಲ್ನ ಗೌರವಾಧ್ಯಕ್ಷ ಪಿ. ಪುರುಷೋತ್ತಮ ರಾವ್ ಇದು ನಮ್ಮೆಲ್ಲರ ಕಾರ್ಯಕ್ರಮ ಪ್ರತಿಯೊಬ್ಬರು ತಾನು ಮನ ಧನಗಳಿಂದ ಸಾಹಕರಿಸೋಣ ಎಂದರು.
ವಿವಿಧ ಬ್ರಾಹ್ಮಣ ಸಮಾಜದ ಪ್ರಮುಖರಾದ ಕರ್ಗಿ ಶ್ರೀನಿವಾಸ ಅಚಾರ್, ಶ್ರೀನಿವಾಸ್ ಚಿತ್ರಾಪುರ, ಸುರೇಶ್ ರಾವ್ ಚಿತ್ರಾಪುರ, ಶ್ರೀಕರ ದಾಮ್ಲೆ, ಎಂ.ಟಿ. ಭಟ್, ಉದಯ ಕುಮಾರ್, ಉದಯ ಕುಮಾರ್ ಸುರತ್ಕಲ್, ಕಾತ್ಯಾಯಿನಿ ರಾವ್, ಶೋಭಾ ಚಿತ್ರಾಪುರ, ಸಾವಿತ್ರಿ ಹೆಚ್ ಭಟ್, ಹೊಸಬೆಟ್ಟು, ರಮಾ.ವಿ ರಾವ್, ಯಮುನಾ ಪಿ ರಾವ್, ಎಂ ಸದಾಶಿವ ಕುಳಾಯಿ, ಪ್ರಕಾಶ್ ಕೋಟೆಕಾರ್, ಜಯಪ್ರಕಾಶ್ ಹೆಬ್ಬಾರ್, ಜಯರಾಮ್ ಭಟ್, ಸುಬ್ರಹ್ಮಣ್ಯ ವಿ ಭಟ್, ಗೋಪಾಲಕೃಷ್ಣ ಮಯ್ಯ, ಜ್ಯೋತಿಷಿ ರಂಗ ಐತಾಳ್ ಕದ್ರಿ, ವಿದ್ವಾನ್ ಸತ್ಯಕೃಷ್ಣ ಭಟ್ ಮೊದಲಾದ ಪ್ರಮುಖರು ಉಪಸ್ಥಿತರಿದ್ದರು.
LATEST NEWS
ಪೋಕ್ಸೋ ಪ್ರಕರಣ: ಖ್ಯಾತ ಜ್ಯೋತಿಷಿ ಬಂಧನ
ಸುಳ್ಯ: ತಾಲೂಕಿನ ಬೆಳ್ಳಾರೆಯ ಪೊಲೀಸರು ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಜ್ಯೋತಿಷಿಯೊಬ್ಬನನ್ನು ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಯಲ್ಲಿ ಧಾರ್ಮಿಕ ಉಪನ್ಯಾಸದ ಜೊತೆಗೆ ಜ್ಯೋತಿಷ್ಯ ಶಾಸ್ತ್ರದ ಮೂಲಕ ಫೇಮಸ್ ಆಗಿದ್ದ ನರಸಿಂಹ ಪ್ರಸಾದ್ ಪಾಂಗಣೇಯ ಬಂಧಿತ ಆರೋಪಿ.
ಕಾಣಿಯೂರಿನ ಬೆಳಂದೂರು ನಿವಾಸಿಯಾಗಿರುವ ಈತನ ಮನೆಗೆ ಮುಂಜಾನೆಯ ವೇಳೆ ದಾಳಿ ಮಾಡಿದ ಪೊಲೀಸರು ಪ್ರಸಾದ್ ಪಾಂಗಣೇಯನನ್ನು ಬಂಧಿಸಿದ್ದಾರೆ. ಮಂಗಳೂರಿನಲ್ಲಿ ಬಾಲಕಿಯೊಬ್ಬಳ ಕೌನ್ಸಿಲಿಂಗ್ ವೇಳೆ ಸಿಕ್ಕ ಮಾಹಿತಿಯ ಆಧಾರದಲ್ಲಿ ಈ ಬಂಧನ ಆಗಿದೆ ಎಂಬ ಮಾಹಿತಿ ದೊರೆತಿದೆ.
LATEST NEWS
ಗೌರವಧನ ಸರಿಯಾಗಿ ನೀಡದೇ ಇದ್ದಲ್ಲಿ ಕೆಲಸ ಸ್ಥಗಿತ: ಅಂಗನವಾಡಿ ಕಾರ್ಯಕರ್ತೆಯರಿಂದ ಎಚ್ಚರಿಕೆ
ಉಡುಪಿ: ವಿವಿಧ ಬೇಡಿಕೆಗಳನ್ನು ಈಡೇರಿಸಿ ಅಂತ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಪ್ರತಿಭಟನೆ ನಡೆಸಿದ್ದಾರೆ.
ಉಡುಪಿ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತರೆಯರು ಹಾಗೂ ಸಹಾಯಕಿಯರು ಈ ಪ್ರತಿಭಟನೆ ನಡೆಸಿದ್ದಾರೆ. ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ದಾರೆ.
ಪ್ರಮುಖವಾಗಿ ಗೌರವಧನವನ್ನು ಪ್ರತಿ ತಿಂಗಳ ಸರಿಯಾಗಿ ಪಾವತಿ ಮಾಡಬೇಕು ಹಾಗೂ ಮೊಟ್ಟೆ ವಿತರಣೆಗೆ ತಗಲುವ ಖರ್ಚನ್ನು ಮುಂಚಿತವಾಗಿ ನೀಡಬೇಕು ಮತ್ತು ಮಾರುಕಟ್ಟೆ ದರದಲ್ಲಿ ಏರಿಳಿತಕ್ಕೆ ತಕ್ಕಂತೆ ಮೊಟ್ಟದರವನ್ನು ನಿಗದಿ ಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.
ನಮ್ಮನ್ನು ದುಡಿಸಿಕೊಳ್ಳೂತ್ತಿರುವ ಸರ್ಕಾರ ನಮಗೆ ಸಾಮಾಜಿಕ ಮತ್ತು ಆರ್ಥಿಕ ಭದ್ರತೆಯನ್ನು ನೀಡದೆ ಶೋಷಣೆ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಈ ವೇಳೆ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷೆ ಫಿಲೋಮಿನಾ ಫೆರ್ನಾಂಡಿಸ್ ಸರ್ಕಾರ ಸೂಕ್ತವಾಗಿ ಸ್ಪಂಧಿಸದೇ ಇದ್ದಲ್ಲಿ ಕೆಲಸ ಸ್ಥಗಿತಗೊಳಿಸುವುದಾಗಿ ಎಚ್ಚರಿಸಿದ್ದಾರೆ.
- DAKSHINA KANNADA7 days ago
ಫುಟ್ ಬೋರ್ಡ್ನಲ್ಲಿ ನೇತಾಡಿ ಪ್ರಯಾಣಿಸಿದ ವಿದ್ಯಾರ್ಥಿಗಳು; ಬಸ್ ಸೀಝ್
- LATEST NEWS4 days ago
ಆಪಲ್ ಮೊಬೈಲ್ ವಿರುದ್ಧ ಗ್ರಾಹಕರ ಪ್ರತಿಭಟನೆ
- International news3 days ago
ಖಾಸಗಿ ಬಾಹ್ಯಾಕಾಶ ನಡಿಗೆ ಯಶಸ್ವಿ; ಸುರಕ್ಷಿತವಾಗಿ ಭೂಮಿಗೆ ಮರಳಿದ ಗಗನಯಾತ್ರಿಗಳು
- BELTHANGADY6 days ago
ಬೆಳ್ತಂಗಡಿ: ತಂದೆ ತೀರ್ಪುಗಾರ… ಮಗಳಿಗೆ ಪ್ರಥಮ ಸ್ಥಾನ
Pingback: ಭಾವುಕ ಸಂದೇಶದೊಂದಿಗೆ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್ ಫೋಗಾಟ್..! ಬೆಳ್ಳಿ ಪದಕಕ್ಕಾಗಿ ನ್ಯಾಯಾಲಯದ ಮೊರೆ -