Connect with us

DAKSHINA KANNADA

ಹಿರಿ ವಯಸ್ಸಿನ ಮಹಿಳಾ ರೋಗಿಗೆ ಹೃದಯ ಕಸಿ ಮಾಡುವುದನ್ನು ತಪ್ಪಿಸಿದ ಇಂಡಿಯಾನ ಆಸ್ಪತ್ರೆ..!

Published

on

ಮಂಗಳೂರು : ಅತ್ಯಂತ ಅಪರೂಪದ ಜೀವ ಉಳಿಸುವ ಪ್ರಕ್ರಿಯೆಯೊಂದರಲ್ಲಿ, ಮಂಗಳೂರಿನ ಇಂಡಿಯಾನಾ ಆಸ್ಪತ್ರೆ ಮತ್ತು ಹಾರ್ಟ್ ಇನ್‌ಸ್ಟಿಟ್ಯೂಟ್‌ನ ಖ್ಯಾತ ಹೃದಯ ಶಸ್ತ್ರಚಿಕಿತ್ಸಕರಾದ ಡಾ. ಎಂ. ಕೆ. ಮೂಸಾ ಕುನ್ಹಿ ಮತ್ತು ಅವರ ವೈದ್ಯಕೀಯ ತಂಡವು ಹಿರಿವಯಸ್ಸಿನ ಮಹಿಳಾ ರೋಗಿಗೆ ಅಪರೂಪದ ಹಾಗು ಬಹು ಕಷ್ಟದ ಬೈಪಾಸ್  ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದೆ.

ಈ ಮೂಲಕ  ಆಕೆಗೆ ಹೊಸ ಜೀವನವನ್ನು  ಆಸ್ಪತ್ರೆ ನೀಡಿದೆ. ರೋಗಿ ಕಾಸರಗೋಡಿನ ೬೧ ವರ್ಷದ ಶ್ರೀಮತಿ ನಬೀಸಾ ಹೃದಯ ಪಂಪ್ ಮಾಡುವ ಶಕ್ತಿ ೧೫%ಕ್ಕಿಂತ ಕಡಿಮೆ ಇರುವ ಅಪಾಯದ ಪರಿಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು.

ಸುಧಾರಿತ ಹೊಸ ತಂತ್ರಗಳನ್ನು ಬಳಸಿಕೊಂಡು ಮಾಡಿದ ಯಶಸ್ವಿ ಬೈಪಾಸ್  ಶಸ್ತ್ರಚಿಕಿತ್ಸೆ ಅವರಿಗೆ ಹೃದಯ ಕಸಿ ಮಾಡುವಿಕೆಯ ಅಗತ್ಯವನ್ನು ತಪ್ಪಿಸಿದೆಯಲ್ಲದೆ ಸನ್ನಿಹಿತ ಸಾವಿನಿಂದ ಅವರನ್ನು ರಕ್ಷಿಸಿದೆ.

“ಇಂತಹ ರೋಗಿಗೆ ಸಾಮಾನ್ಯವಾಗಿ ಹೃದಯ ಕಸಿ ಅಗತ್ಯವಿರುತ್ತದೆ,” ಎಂದು ಡಾ. ಮೂಸಾ ಹೇಳಿದ್ದಾರೆ.

“ಹೃದಯ ಪಂಪ್ ಮಾಡುವ ಶಕ್ತಿ 15% ಮತ್ತು ಅದಕ್ಕಿಂತ ಕಡಿಮೆ ಇರುವುದು ಜೀವಕ್ಕೆ ಅಪಾಯಕಾರಿಯಾದ ಸ್ಥಿತಿಯಾಗಿದೆ. ಸೂಕ್ತ ಚಿಕಿತ್ಸೆಯಿಲ್ಲದಲ್ಲಿ ಅಂತಹ ರೋಗಿಗಳು ಕೆಲವು ದಿನಗಳವರೆಗೂ ಬದುಕುವುದಿಲ್ಲ.” ಅತ್ಯಂತ ಕಡಿಮೆ ಹೃದಯ ಪಂಪ್ ಮಾಡುವ ಶಕ್ತಿಯನ್ನು ಹೊಂದಿರುವ ರೋಗಿಗಳಿಗೆ ಬೈಪಾಸ್ ಶಸ್ತ್ರಚಿಕಿತ್ಸೆಯನ್ನು ಬಹಳ ವಿರಳವಾಗಿ ಪ್ರಯತ್ನಿಸಲಾಗುತ್ತಿದೆೆ. ಬಹುಶಃ ಮಂಗಳೂರಿನಲ್ಲಿ ಮತ್ತು ದೇಶದ ಈ ಭಾಗದಲ್ಲಿ ಇದೇ ಮೊದಲನೆಯದಾಗಿದೆ. ಹಾರ್ಟ್-ಲಂಗ್ ಯಂತ್ರದ ಬಳಕೆಯ ಅಗತ್ಯವಿಲ್ಲದ ಅತ್ಯಾಧುನಿಕ ‘ಆಫ್-ಪಂಪ್ ಬೈಪಾಸ್ ಸರ್ಜರಿ’ ತಂತ್ರವನ್ನು ಬಳಸಿ ಶಸ್ತ್ರಚಿಕಿತ್ಸೆಯನ್ನು ನಡೆಸಲಾಯಿತು.
ಶಸ್ತçಚಿಕಿತ್ಸೆ ನಡೆದ ಒಂದು ವಾರದೊಳಗೆ ರೋಗಿಯು ಚೆನ್ನಾಗಿ ಚೇತರಿಸಿಕೊಂಡಿದ್ದಾರೆ. ಶಸ್ತ್ರಚಿಕಿತ್ಸೆಯು ಸುಮಾರು ಆರು ಗಂಟೆಗಳ ಕಾಲ ನಡೆಯಿತು ಮತ್ತು ಆಕೆಯ ಹೃದಯದಲ್ಲಿನ ನಾಲ್ಕು ಬ್ಲಾಕ್‌ಗಳನ್ನು ಬೈಪಾಸ್ ಮಾಡಲಾಗಿದೆ. ಈಗ ಆಕೆಯ ಹೃದಯ ಪಂಪಿಂಗ್ ಶಕ್ತಿ 22%ಕ್ಕಿಂತ ಹೆಚ್ಚಾಗಿದೆ.

ಅವರು ಸಹಜವಾಗಿ ನಡೆದಾಡುವಷ್ಟು ಮತ್ತು ಎರಡು ಮಹಡಿಗಳನ್ನು ಹತ್ತುವಷ್ಟು ಸಶಕ್ತರಾಗಿದ್ದರೆ. ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವಷ್ಟು ಗುಣಮುಖರಾಗಿದ್ದಾರೆ. “ನನ್ನ ಅನುಭವದಲ್ಲಿ, ಅವರು ಹೃದಯದ ಸಹಜ ಪಂಪಿಂಗ್ ಸಾಮರ್ಥ್ಯ ಮರಳಿ ಪಡೆಯಲು ಕೆಲವು ತಿಂಗಳುಗಳಿಂದ ಎರಡು ವರ್ಷಗಳವರೆಗೆ ತೆಗೆದುಕೊಳ್ಳಬಹುದು,” ಎಂದು ಡಾ. ಮೂಸಾ ಅಭಿಪ್ರಾಯಪಟ್ಟಿದ್ದಾರೆ.

ಇಂಡಿಯಾನಾ ಆಸ್ಪತ್ರೆಯ ಮುಖ್ಯ ಇಂಟರ್ವೆನ್ಷನಲ್ ಕಾರ್ಡಿಯಾಲಜಿಸ್ಟ್ ಮತ್ತು ವ್ಯವಸ್ಥಾಪಕ ನಿರ್ದೇಶಕ ಡಾ. ಯೂಸುಫ್ ಕುಂಬ್ಳೆ ಅವರು ರೋಗಿಯನ್ನು ಆರಂಭದಲ್ಲೇ ಪತ್ತೆ ಹಚ್ಚಿ ಶಸ್ತçಚಿಕಿತ್ಸೆಗೆ ಶಿಫಾರಸು ಮಾಡಿದ್ದರು.

“ರೋಗಿ ನನ್ನನ್ನು ಸಂಪರ್ಕಿಸಿದಾಗ ತುಂಬಾ ಗಂಭೀರ ಸ್ಥಿತಿಯಲ್ಲಿದ್ದರು. ಅವರು ತೀವ್ರ ಉಸಿರಾಟದ ತೊಂದರೆ, ಕಡಿಮೆ ರಕ್ತದೊತ್ತಡ, ರಕ್ತದಲ್ಲಿ ಕಡಿಮೆ ಆಮ್ಲಜನಕದ ಮಟ್ಟ ಮತ್ತು ಪಲ್ಮನರಿ ಎಡಿಮಾವನ್ನು ಹೊಂದಿದ್ದರು. ಅವರನ್ನು ಜೀವಂತವಾಗಿಡಲು ಮತ್ತು ಬೈಪಾಸ್ ಶಸ್ತçಚಿಕಿತ್ಸೆಗೆ ಸರಿಹೊಂದಿಸಲು ಕೆಲವು ದಿನಗಳ ವೆಂಟಿಲೇಟರ್ ಸಪೋರ್ಟ್ ಮತ್ತು ಆಮ್ಲಜನಕದ ಒದಗುವಿಕೆಯ ಅಗತ್ಯವಿತ್ತು,” ಎಂದು ಡಾ. ಯೂಸುಫ್ ತಿಳಿಸಿದರು.

“ಈ ರೀತಿಯ ಅತ್ಯಂತ ಅಪರೂಪದ ಬೈಪಾಸ್ ಶಸ್ತ್ರಚಿಕಿತ್ಸೆಯಲ್ಲಿ ಪರಿಣತಿಯುಳ್ಳ ಭಾರತ ಮತ್ತು ಪ್ರಪಂಚದ ಬೆರಳೆಣಿಕೆಯಷ್ಟು ಹೃದಯ ಶಸ್ತ್ರಚಿಕಿತ್ಸಕರಲ್ಲಿ ಡಾ. ಮೂಸಾ ಒಬ್ಬರು,” ಎಂದು ಅವರು ಹೇಳಿದರು.

ಬಹು ಬ್ಲಾಕ್‌ಗಳೊಂದಿಗೆ ಕಡಿಮೆ ಪಂಪ್ ಮಾಡುವ ಶಕ್ತಿಯನ್ನು ಹೊಂದುವಂತೆ ಮಾಡುವ ಈ ಹೃದ್ರೋಗಕ್ಕೆ ಇಸ್ಕೆಮಿಕ್ ಕಾರ್ಡಿಯೋಮಿಯೋಪತಿ ಮತ್ತು ಹೃದಯ ವೈಫಲ್ಯ ಎಂದು ವೈದ್ಯಕೀಯವಾಗಿ ಕರೆಯಲಾಗುತ್ತದೆ.

ಇಂತಹ ರೋಗಿಗಳು ಬಹಳ ಕಡಿಮೆ ಜೀವಿತಾವಧಿಯನ್ನು ಹೊಂದಿರುತ್ತಾರೆ. ಶ್ರೀಮತಿ ನಬೀಸಾ ಉತ್ತಮ ಆರೋಗ್ಯವನ್ನು ಅನುಭವಿಸುತ್ತಿದ್ದರು.

ಸುಮಾರು ಒಂದು ತಿಂಗಳ ಹಿಂದೆ, ಆಕೆಗೆ ಇದ್ದಕ್ಕಿದ್ದಂತೆ ತೀವ್ರ ಉಸಿರಾಟದ ತೊಂದರೆ ಮತ್ತು ಎದೆಯ ಅಸ್ವಸ್ಥತೆ ಕಾಣಿಸಿಕೊಂಡಿತು. ಉಸಿರಾಟದ ತೊಂದರೆಯಿಂದಾಗಿ ಆಕೆಗೆ ನಡೆಯಲು ಅಥವಾ ಮಲಗಲು ಸಾಧ್ಯವಾಗುತ್ತಿರಲಿಲ್ಲ್ಲ.

“ಬಹುಶಃ ಅವರು ಸೈಲೆಂಟ್ ಹಾರ್ಟ್ ಅಟ್ಯಾಕ್ (ಮೌನ ಹೃದಯಾಘಾತ) ನಿಂದ ಬಳಲುತ್ತಿದ್ದರು,” ಎಂದು ಡಾ. ಯೂಸುಫ್ ಅಭಿಪ್ರಾಯಪಟ್ಟಿದ್ದಾರೆ.

ಇಂಡಿಯಾನಾ ಆಸ್ಪತ್ರೆಯಲ್ಲಿ ಮಾಡಿದ ಆಂಜಿಯೋಗ್ರಾಮ್ ಮತ್ತು ಇತರ ವೈದ್ಯಕೀಯ ತನಿಖೆಗಳ ಮೂಲಕ ಹೃದಯದ ಪಂಪಿಂಗ್ ಶಕ್ತಿಯನ್ನು ಕೇವಲ 15%, ಸ್ಥೂಲವಾಗಿ ವಿಸ್ತರಿಸಿದ ಹೃದಯ ಮತ್ತು ಮುಖ್ಯ ಅಪಧಮನಿ ಬ್ಲಾಕ್ ಸೇರಿದಂತೆ ನಾಲ್ಕು ನಿರ್ಣಾಯಕ ಬ್ಲಾಕ್‌ಗಳನ್ನು ಹೊಂದಿರುವುದು ಕಂಡು ಬಂತು, ಇದು ‘ತುರ್ತು ಜೀವ ಬೆದರಿಕೆ’ ಯೆಂದು ಪರಿಗಣಿಸಲಾಯಿತು.

ಅಂತರಾಷ್ಟ್ರೀಯವಾಗಿ ಈಗ ಹೃದಯ ಕಸಿ ಮಾಡುವ ಬದಲು ಈ ರೀತಿಯ ರೋಗಿಗಳ ಮೇಲೆ ಬೈಪಾಸ್ ಶಸ್ತ್ರಚಿಕಿತ್ಸೆಗೆ ಪ್ರಯತ್ನಿಸುವ ಉದಯೋನ್ಮುಖ ಪ್ರವೃತ್ತಿ ಇದೆ ಎಂದು ಡಾ. ಮೂಸಾ ವಿವರಿಸಿದ್ದಾರೆ.

ಇಸ್ಕೆಮಿಕ್ ಕಾರ್ಡಿಯೋಮಯೋಪತಿ ಮತ್ತು ಹೃದಯ ವೈಫಲ್ಯ ಪ್ರಕರಣಗಳು ಭಾರತ ಹಾಗೂ ವಿಶ್ವಾದ್ಯಂತ ಹೆಚ್ಚುತ್ತಿವೆ. ಭಾರತದಲ್ಲಿ 2.5 ಕೋಟಿಗೂ ಹೆಚ್ಚು ಜನರು ತೀವ್ರ ಹೃದಯ ವೈಫಲ್ಯದಿಂದ ಬಳಲುತ್ತಿದ್ದಾರೆ ಮತ್ತು ಯಶಸ್ವಿ ಚಿಕಿತ್ಸೆಯ ಸೀಮಿತ ಆಯ್ಕೆಗಳನ್ನು ಹೊಂದಿದ್ದಾರೆ.

ಅತ್ಯಂತ ಭರವಸೆಯ ಚಿಕಿತ್ಸೆಗಳೆಂದರೆ ಹೃದಯ ಕಸಿ ಮತ್ತು ಕೃತಕ ಹೃದಯ ಅಳವಡಿಕೆ. ಆದರೆ ಇವು ನಮ್ಮ ದೇಶದಲ್ಲಿ ವ್ಯಾಪಕವಾಗಿ ಲಭ್ಯವಿಲ್ಲ. “ಈ ಕ್ಷೇತ್ರದ ಇತ್ತೀಚಿನ ಬೆಳವಣಿಕೆಯೆಂದರೆ ಬೈಪಾಸ್ ಶಸ್ತ್ರಚಿಕಿತ್ಸೆ, ವಿಶೇಷವಾಗಿ ಶ್ವಾಸಕೋಶ ಯಂತ್ರವನ್ನು ಬಳಸದೆ ‘ಬೀಟಿಂಗ್ ಹಾರ್ಟ್’ ಬೈಪಾಸ್ ಶಸ್ತ್ರಚಿಕಿತ್ಸೆ ಮಾಡುವುದು ಉತ್ತಮ ಫಲಿತಾಂಶವನ್ನು ನೀಡುತ್ತದೆ ಎಂದು ಕಂಡುಬಂದಿದೆ. ಇದು ಈ ರೋಗಿಗಳಿಗೆ ಹೊಸ ಭರವಸೆಯನ್ನು ನೀಡುತ್ತಿದೆ,” ಎಂದು ಡಾ.ಮೂಸಾ ಹೇಳಿದರು.

ಈ ಪ್ರಕರಣವು ಸೈಲೆಂಟ್ ಹಾರ್ಟ್ ಅಟ್ಯಾಕ್ (ಮೌನ ಹೃದಯಾಘಾತ) ಬಗ್ಗೆ ಗಮನ ಸೆಳೆದಿದೆ. ಈ ರೀತಿಯ ಹೃದಯಾಘಾತವಾದಲ್ಲಿ ರೋಗಿಯು ಎದೆ ನೋವು ಅಥವಾ ಉಸಿರಾಟದಂತಹ ಯಾವುದೇ ಸಾಮಾನ್ಯ ಲಕ್ಷಣಗಳನ್ನು ತೋರಿಸುವುದಿಲ್ಲ. ಆದ್ದರಿಂದ ಜನರು ಈ ಸ್ಥಿತಿಯನ್ನು ಹೃದಯಾಘಾತವೆಂದು ಗುರುತಿಸುವುದಿಲ್ಲ. ಈ ರೀತಿಯ ಹೃದಯಾಘಾತದ ರೋಗಿಗಳನ್ನು ಸಾಮಾನ್ಯವಾಗಿ ತಡವಾಗಿ ಗುರುತಿಸಲಾಗುತ್ತದೆ ಮತ್ತು ಅವರಲ್ಲಿ ಹೆಚ್ಚಿನವರು ಸಕಾಲಿಕ ಚಿಕಿತ್ಸೆಗಾಗಿ ಆಸ್ಪತ್ರೆಗೆ ತಲುಪುವುದಿಲ್ಲ. ಮೌನ ಹೃದಯಾಘಾತದ ಬಗ್ಗೆ ಸಾರ್ವಜನಿಕ ಅರಿವು ಅಗತ್ಯ ಎಂದು ಡಾ.ಮೂಸಾ ಹೇಳಿದರು.

Click to comment

Leave a Reply

Your email address will not be published. Required fields are marked *

DAKSHINA KANNADA

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂ*ಬ್ ಬೆದರಿಕೆ! ಇ ಮೇಲ್ ನಲ್ಲಿ ಏನಿದೆ?

Published

on

ಮಂಗಳೂರು : ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂ*ಬ್ ಬೆದರಿಕೆ ಹಾಕಲಾಗಿದೆ. ಹೀಗಾಗಿ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ರಾಮೇಶ್ವರಂ ಕೆಫೆ ಸ್ಫೋ*ಟ ಪ್ರಕರಣವೇ ಇನ್ನೂ ಜೀವಂತವಿದೆ. ಅಲ್ಲದೇ, ಶಾಲೆಗಳಿಗೂ ಬೆದರಿಕೆ ಕರೆ ಬಂದಿದ್ದವು. ಇದೀಗ ಮಂಗಳೂರು ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಬಂದಿದೆ.


ಇ ಮೇಲ್ ಮೂಲಕ ಬಂತು ಬೆದರಿಕೆ :

ಕಳೆದ ಎಪ್ರಿಲ್‌ 29 ರಂದು ದೇಶದ ವಿವಿಧ ವಿಮಾನ ನಿಲ್ದಾಣಗಳಿಗೆ ಬಾಂಬ್‌ ಬೆದರಿಕೆ ಸಂದೇಶಗಳು ಇ-ಮೇಲ್ ಮೂಲಕ ರವಾನೆಯಾಗಿದ್ದು, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಅದೇ ದಿನ ಬಾಂಬ್‌ ಬೆದರಿಕೆ ಸಂದೇಶ ಬಂದಿತ್ತು ಎಂದು ತಡವಾಗಿ ಬೆಳಕಿಗೆ ಬಂದಿದೆ.
ಎಪ್ರಿಲ್‌ 29 ರಂದು ಬೆಳಗ್ಗೆ 9.37 ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಇ – ಮೇಲ್ ಐಡಿ ಗೆ ಅಪರಿಚಿತ ವ್ಯಕ್ತಿಯೊಬ್ಬ ತನ್ನ ಇ – ಮೇಲ್‌ ನಿಂದ ‘ವಿಮಾನ ನಿಲ್ದಾಣದಲ್ಲಿ ಮತ್ತು ವಿಮಾನದ ಒಳಗಡೆ ಸ್ಫೋಟಕಗಳನ್ನು ಇರಿಸಿದ್ದು, ಈ ಸ್ಫೋಟಕಗಳನ್ನು ಸ್ಫೋಟಿಸಿ ಜೀವ ಹಾನಿ ಮಾಡುವುದಾಗಿ’ ಬೆದರಿಕೆ ಸಂದೇಶ ಕಳುಹಿಸಿದ್ದನು.

ಇದನ್ನೂ ಓದಿ : ಉಪ್ಪಿನಂಗಡಿ : ಹೃದಯಾ*ಘಾತದಿಂದ ಮಲಗಿದ್ದಲ್ಲೇ ಇಹಲೋಕ ತ್ಯಜಿಸಿದ ಯುವಕ

ಈ ಬಗ್ಗೆ ವಿಮಾನ ನಿಲ್ದಾಣದ ಮುಖ್ಯ ಭದ್ರತಾ ಅಧಿಕಾರಿ ಮೋನಿಶ ಕೆ.ಜಿ. ಅವರು ನೀಡಿದ ದೂರಿನ ಆಧಾರದಲ್ಲಿ ಬಜಪೆ ಪೊಲೀಸ್‌ ಠಾಣೆಯಲ್ಲಿ ಐಪಿಸಿ 507 ಕಲಂ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯಲ್ಲಿದೆ ಎಂದು ಪೊಲೀಸ್‌ ಕಮಿಷನರ್‌ ಅನುಪಮ್‌ ಅಗರ್ವಾಲ್‌ ತಿಳಿಸಿದ್ದಾರೆ.
ಈ ಕುರಿತು ತನಿಖೆ ನಡೆಸಿದಾಗ ಅಪರಿಚಿತ ವ್ಯಕ್ತಿಯು ಇದೇ ರೀತಿ ಮಂಗಳೂರು ವಿಮಾನ ನಿಲ್ದಾಣ ಸೇರಿದಂತೆ ದೇಶದ 25 ಕ್ಕೂ ಹೆಚ್ಚು ವಿಮಾನ ನಿಲ್ದಾಣಗಳಿಗೆ ಬೆದರಿಕೆ ಸಂದೇಶಗಳನ್ನು ಕಳುಹಿಸಿರುವುದು ಕಂಡು ಬಂದಿದೆ. ಆರೋಪಿಯ ಪತ್ತೆಗಾಗಿ ಬಜಪೆ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ ಎಂದು ಪೊಲೀಸ್‌ ಕಮಿಷನರ್‌ ವಿವರಿಸಿದ್ದಾರೆ.

ಇ ಮೇಲ್ ನಲ್ಲಿ ಏನಿದೆ ?

ಇ ಮೇಲ್ ನಲ್ಲಿ, ‘ಮಂಗಳೂರು ವಿಮಾನ ನಿಲ್ದಾಣದ ಆವರಣದಲ್ಲಿ ಸ್ಪೋಟಕಗಳನ್ನು ಇಡಲಾಗಿದೆ. ಮೂರು ವಿಮಾನದಲ್ಲಿಯೂ ಬಾಂಬ್ ಇಡಲಾಗಿದೆ. ಕೆಲವೇ ಗಂಟೆಗಳಲ್ಲಿ ದೊಡ್ಡಮಟ್ಟದ ರಕ್ತಪಾತ ನಡೆಯಲಿದೆ. ಈ ಕೃತ್ಯದ ಹಿಂದೆ ಟೆರರೈಸರ್ಸ್ 111 ಕೈವಾಡವಿದೆ’ ಎಂದು ಸಂದೇಶದಲ್ಲಿ ಬರೆಯಲಾಗಿದೆ.

Continue Reading

DAKSHINA KANNADA

ಮನೆಯಲ್ಲಿ ಒಂದಕ್ಕಿಂತ ಹೆಚ್ಚು ತುಳಸಿ ಗಿಡ ನೆಟ್ಟರೆ ಏನಾಗುತ್ತದೆ ನೋಡಿ..!

Published

on

ಮಂಗಳೂರು: ನಾವು ಯಾವುದೇ ಹಿಂದೂ ಧರ್ಮದವರ ಮನೆಗೆ ಹೋದಾಗ ಅಲ್ಲಿ ಏನು ನೋಡುತ್ತೇವೊ ಗೊತ್ತಿಲ್ಲ ಆದರೆ ಮನೆಯ ಎದುರೊಂದು ತುಳಸಿ ಗಿಡ ಇದ್ದೇ ಇರುತ್ತದೆ. ಯಾಕೆಂದರೆ ಹಿಂದೂ ಧರ್ಮದಲ್ಲಿ ತುಳಸಿ ಗಿಡಕ್ಕೆ ಪೂಜನೀಯ ಸ್ಥಾನ ಕೊಡುತ್ತಾರೆ. ಬೆಳಗ್ಗೆ ಎದ್ದ ಕೂಡಲೇ ಮಹಿಳೆಯರು ದೇವರಿಗೆ ದೀಪ ಇಟ್ಟು ಬಳಿಕ ತುಳಸಿ ಗಿಡಕ್ಕೆ ಕಲಶದಲ್ಲಿ ನೀರನ್ನು ಹಾಕುತ್ತಾರೆ.

ಕೆಲವರ ಮನೆಯಲ್ಲಿ ಒಂದೇ ತುಳಸಿ ಗಿಡವನ್ನು ನೋಡಿದರೆ ಇನ್ನು ಕೆಲವರ ಮನೆಯಲ್ಲಿ ಒಂದಕ್ಕಿಂತ ಹೆಚ್ಚು ತುಳಸಿ ಗಿಡ ಇರುತ್ತದೆ. ಆರೋಗ್ಯದ ಪ್ರಯೋಜನವಾಗಿಯೂ ಇದನ್ನು ಬಳಸುತ್ತಾರೆ. ಆದರೆ ಕೆಲವೊಂದು ನಿಯಮವನ್ನು ಅನುಸರಿಸುವುದು ಮುಖ್ಯವಾಗಿರುತ್ತದೆ. ಒಂದಕ್ಕಿಂತ ಹೆಚ್ಚು ತುಳಸಿ ಗಿಡವನ್ನು ಇಟ್ಟು ಕೊಂಡರೆ ಏನಾಗುತ್ತದೆ ಎಂಬುದರ ಬಗ್ಗೆ ತಿಳಿಯೋಣ.

ತುಳಸಿ ಗಿಡ ಬೆಸ ಸಂಖ್ಯೆಯಲ್ಲಿ ಇರಬೇಕು:

ಕೆಲವೊಂದು ಮನೆಯಲ್ಲಿ ತುಳಸಿ ಗಿಡ ಎಲ್ಲಾ ಕಡೆಯಲ್ಲಿ ಬೆಳೆಯುತ್ತದೆ. ಇನ್ನು ಕೆಲವು ಮನೆಯಲ್ಲಿ ನೆಟ್ಟ ಒಂದು ಗಿಡವೂ ಸರಿಯಾಗಿ ಉಳಿಯುವುದು ಕಷ್ಟ. ಆದರೆ ತುಳಸಿ ಗಿಡದ ಸಂಖ್ಯೆ ಬೆಸಸಂಖ್ಯೆಯಲ್ಲಿರಬೇಕು. 1, 3, 5, 7 ಹೀಗೆ ಬೆಸಸಂಖ್ಯೆಯಲ್ಲಿ ತುಳಸಿ ಗಿಡವನ್ನು ಮನೆಯಲ್ಲಿಟ್ಟುಕೊಳ್ಳಬೇಕು. ಈ ರೀತಿಯಾಗಿ ಇದ್ದರೆ ಮಂಗಳಕರವೆಂದು ಪರಿಗಣಿಸಲಾಗುತ್ತದೆ.

ತುಳಸಿ ಗಿಡವನ್ನು ಹೀಗೆ ನೆಡಬೇಕು:

ತುಳಸಿ ಗಿಡವನ್ನು ನೇರವಾಗಿ ನೆಲದ ಮೇಲೆ ನೆಡಬಾರದು. ಇಂತಹ ತಪ್ಪನ್ನು ಎಂದಿಗೂ ಮಾಡಬಾರದು. ಈ ಸಸಿಯನ್ನು ಕುಂಡದಲ್ಲಿ ಅಥವಾ ತೊಟ್ಟೆಯಲ್ಲಿ ಪ್ರತ್ಯೇಕವಾಗಿ ನೆಡಬೇಕು. ಕುಂಡದಲ್ಲಿ ತುಳಸಿ ಗಿಡವನ್ನು ನೆಟ್ಟರೆ ಯಾವೂದೇ ರೀತಿಯ ಅಶುದ್ಧತೆಗಳು ತುಳಸಿ ಗಿಡವನ್ನು ಮುಟ್ಟುವುದಿಲ್ಲ.

ಈ ದಿನದಂದು ತುಳಸಿಯನ್ನು ಕೀಳಬಾರದು:

ತುಳಸಿ ಗಿಡವನ್ನು ಎಲ್ಲಾ ದಿನ ನೆಡಬಾರದು. ತುಳಸಿಯನ್ನು ಭಾನುವಾರದಂದು ಮತ್ತು ಏಕಾದಶಿಯ ದಿನದಂದು ನೆಡಬಾರದು ಮತ್ತು ಅದರ ಎಲೆಗಳನ್ನು ತೆಗೆಯಬಾರದು. ಈ ಎರಡು ದಿನ ತುಳಸಿಯನ್ನು ಕೀಳುವುದು ಮತ್ತು ಮುಟ್ಟುವುದು ಮಾಡಿದರೆ ಅಶುಭವೆಂದು ಹೇಳುತ್ತಾರೆ.

ತುಳಸಿಯನ್ನು ನಾವು ಮನೆಯಲ್ಲಿ ನೆಡುವಾಗ ಈ ಮೇಲಿನ ನಿಯಮಗಳನ್ನು ಗಮನದಲ್ಲಿಟ್ಟುಕೊಂಡು ನೆಡಬೇಕು. ಒಂದು ವೇಳೆ ನಿಮ್ಮ ಮನೆಯಲ್ಲಿ ಸಮ ಸಂಖ್ಯೆಯಲ್ಲಿ ತುಳಸಿ ಗಿಡವಿದ್ದರೆ ಯಾವೂದಾದರು ಒಂದನ್ನು ಬೇರೆಯವರಿಗೆ ದಾನ ಮಾಡಿ. ಇದರಿಂದ ಯಾವೂದೇ ರೀತಿಯ ಸಮಸ್ಯೆಗಳು ಉಂಟಾಗುವುದಿಲ್ಲ.

Continue Reading

DAKSHINA KANNADA

ಉಪ್ಪಿನಂಗಡಿ : ಹೃದಯಾ*ಘಾತದಿಂದ ಮಲಗಿದ್ದಲ್ಲೇ ಇಹಲೋಕ ತ್ಯಜಿಸಿದ ಯುವಕ

Published

on

ಉಪ್ಪಿನಂಗಡಿ : ಕೋವಿಶೀಲ್ಡ್‌ ಲಸಿಕೆಯಿಂದ ರಕ್ತ ಹೆಪ್ಪುಗಟ್ಟುವಿಕೆಯಂತ ಅಡ್ಡ ಪರಿಣಾಮದ ಬಗ್ಗೆ ಒಪ್ಪಿಕೊಂಡಿದ್ದ ಸೀರಂ ಸಂಸ್ಥೆಯಿಂದ ಭಾರತದ ಜನರಲ್ಲಿ ಆತಂಕ ಹೆಚ್ಚಾಗಿದೆ. ಕೋವಿಡ್ ಲಸಿಕೆಯ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿರುವಾಗಲೇ ಆರೋಗ್ಯವಾಗಿದ್ದ ಯುವಕನೊಬ್ಬ ಹೃದಯಾ*ಘಾತಕ್ಕೊಳಗಾಗಿ ಇಹಲೋಕ ತ್ಯಜಿಸಿದ್ದಾರೆ.


ಗಾರೆ ಕೆಲಸ ಮಾಡಿಕೊಂಡು ಆರೋಗ್ಯವಾಗಿದ್ದ 27 ವರ್ಷದ ಜನಾರ್ದನ ಎಂಬ ಯುವಕ ಅಸು ನೀಗಿದ್ದಾನೆ. ಉಪ್ಪಿನಂಗಡಿ ಸಮೀಪದ ನಿನ್ನಿಕಲ್ಲು ನಿವಾಸಿಯಾಗಿದ್ದ ಜನಾರ್ದನ ಮೇಸ್ತ್ರಿಯಾಗಿ ಗಾರೆ ಕೆಲಸ ಮಾಡಿಕೊಂಡಿದ್ದರು. ಶುಕ್ರವಾರ ಮಧ್ಯಾಹ್ನ ಕೆಲಸಕ್ಕೆ ರಜೆ ಹಾಕಿ ಬಂದಿದ್ದ ಅವರು ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದರು.ಈ ವೇಳೆ ನಿದ್ರೆಗೆ ಜಾರಿದ ಜನಾರ್ದನ್ ಮತ್ತೆ ಮೇಲೆದ್ದಿಲ್ಲ.

ಇದನ್ನೂ ಓದಿ : ಸಿಡಿಲ ಬಡಿತಕ್ಕೆ ನವವಿವಾಹಿತ ದುರ್ಮರ*ಣ..!10 ದಿನಗಳ ಹಿಂದೆಯಷ್ಟೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ವಿಧಿಯಾಟಕ್ಕೆ ಬ*ಲಿ!!

ಮಗ ಮಲಗಿದ್ದಾನೆ ಅಂತ ತಾಯಿ ತೋಟದ ಕೆಲಸಕ್ಕೆ ಹೋಗಿದ್ದು ಸಂಜೆ ಬಂದು ಮಗನನ್ನು ಎಬ್ಬಿಸಿದಾಗಲೇ ವಿಚಾರ ಗೊತ್ತಾಗಿದೆ. ಕರೆದರೂ ಮಗ ಎದ್ದಿಲ್ಲ ಎಂದು ತಾಯಿ ಮಗನನ್ನು ಅಲುಗಾಡಿಸಿ ಎಚ್ಚರಿಸುವ ಪ್ರಯತ್ನ ನಡೆಸಿದ್ದಾರೆ. ಆದರೆ, ಆ ವೇಳೆ ಯಾವುದೇ ರೆಸ್ಪಾನ್ಸ್‌ ಇಲ್ಲದ ಕಾರಣ ತಾಯಿಗೆ ಅನುಮಾನ ಬಂದು ಉಸಿರು ಪರಿಶೀಲಿಸಿದಾಗ ಮಗ ಮೃ*ತಪಟ್ಟಿರುವುದು ಆರಿವಾಗಿದೆ.

 

Continue Reading

LATEST NEWS

Trending