DAKSHINA KANNADA
ಬಿ ಕೇರ್ಫುಲ್: ಇನ್ಮುಂದೆ ಮಂಗಳೂರಿನಲ್ಲಿ ಕಾನೂನು ಮುರಿಯುವುದು ಅಷ್ಟು ಸುಲಭವಲ್ಲ..!
ಮಂಗಳೂರು: ಸ್ಮಾರ್ಟ್ಸಿಟಿಯಾಗಿ ಬೆಳೆಯುತ್ತಿರುವ ಮಂಗಳೂರಿನಲ್ಲಿ ಘನತ್ಯಾಜ್ಯ ನಿರ್ವಹಣೆ, ಬಸ್, ಶಾಲಾ ಮಕ್ಕಳು ಸೇರಿದಂತೆ ಖಾಸಗಿ ವಾಹನಗಳ ಸಂಚಾರದ ಮೇಲೆ ನಿಗಾ ಇಡುವ, ಪರಿಸರ ನಿಯಂತ್ರಣ, ವಿಕೋಪಗಳ ನಿರ್ವಹಣೆ, ಹೀಗೆ ಪ್ರತಿಯೊಂದು ಕಾರ್ಯವನ್ನು ಗಮನಿಸುವ ಕಮಾಂಡ್ ಆಂಡ್ ಕಂಟ್ರೋಲ್ ಸೆಂಟರ್ ಮಂಗಳೂರಿನಲ್ಲೂ ಕಾರ್ಯಾರಂಭಿಸಿದೆ.
ದಿನನಿತ್ಯ ವಾಹನಗಳು ಗಿಜಿಗುಟ್ಟುತ್ತಿದೆ. ಈ ಹಿನ್ನೆಲೆಯಲ್ಲಿ ನಗರ ಪೊಲೀಸರಿಗೆ ಸಂಚಾರ ನಿಯಂತ್ರಣವೂ ನಿತ್ಯ ಸವಾಲಿನ ಕೆಲಸವಾಗುತ್ತಿದೆ.
ಪಂಜಾಬ್ನ ಲುಧಿಯಾನ ಬಳಿಕ ದೇಶದ ಎರಡನೇ ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್ ಕಡಲ ನಗರಿ ಕರ್ನಾಟಕದ ವಾಣಿಜ್ಯ ಹೆಬ್ಬಾಗಿಲು ಮಂಗಳೂರು ನಗರದಲ್ಲಿ ಇದೀಗ ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭ ಮಾಡಿದೆ.
ನಗರದ ಲಾಲ್ಬಾಗ್ ನ ಮಹಾನಗರ ಪಾಲಿಕೆಯಲ್ಲಿ ಕಟ್ಟಡದಲ್ಲಿ ಸ್ಮಾರ್ಟ್ಸಿಟಿ ಯೋಜನೆ ಮೂಲಕ ನಿರ್ಮಾಣಗೊಂಡ ಈ ನಿಯಂತ್ರಣ ಕೇಂದ್ರದಲ್ಲಿ ಕೇವಲ ಸಂಚಾರ ವ್ಯವಸ್ಥೆ ಮಾತ್ರವಲ್ಲ,
ಘನ ತ್ಯಾಜ್ಯ ನಿರ್ವಹಣೆ, ಬಸ್ಗಳ ಸಂಚಾರ ವ್ಯವಸ್ಥೆ, ಪರಿಸರ ನಿಯಂತ್ರಣ, ವಿಕೋಪಗಳ ನಿರ್ವಹಣೆ, ಯುನಿಫೈಡ್ ಮೆಸೇಜ್ ಸಿಸ್ಟಮ್ ಹೀಗೆ ಅನೇಕ ಕಾರ್ಯಗಳನ್ನು ಮಾಡುವ ವ್ಯವಸ್ಥೆಯನ್ನು ಒಂದೇ ಜಾಗದಲ್ಲಿ ಸ್ಥಾಪಿಸಲಾಗಿದೆ.
ಎಲ್ಲಾ ಚಟುವಟಿಕೆಗಳು ದೊಡ್ಡ ಸ್ಮಾರ್ಟ್ಪರದೆಯಲ್ಲಿ ಪ್ರದರ್ಶನವಾಗುತ್ತಿದೆ.
ಟ್ರಾಫಿಕ್ಪೊಲೀಸರು, ಕೋವಿಡ್ನಿಯಂತ್ರಣ ಸಿಬ್ಬಂದಿ ಹಾಗೂ ಕಮಾಂಡ್ಸೆಂಟರ್ಸಿಬ್ಬಂದಿ ಈ ಎಲ್ಲಾ ಚಟುವಟಿಕೆಗಳ ಮೇಲೆ ನಿಗಾ ಇರಿಸಿಕೊಂಡಿದ್ದು ದಿನದ 24 ಗಂಟೆಯೂ ನಿರಂತರವಾಗಿ ಕಾರ್ಯಾಚರಿಸುತ್ತಿದೆ.
ಈ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿರುವ ತಜ್ಞರು “ಇಲ್ಲಿ ಕೇವಲ ನಗರದ ಸಂಚಾರ ವ್ಯವಸ್ಥೆ ನಿರ್ವಹಣೆ ಮಾತ್ರವಲ್ಲದೇ ನಗರದ ಮನೆಗಳ ಆವರಣದಲ್ಲಿ ಈಗಾಗಲೇ ಕ್ಯೂಆರ್ಕೋಡ್ ಅಂಟಿಸಲಾಗಿದೆ.
ಸಿಬಂದಿ ಮನೆಯ ಕಸ ಪಡೆದು ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿ ಕಸ ವಿಲೇ ಮಾಡಿದ ಮಾಹಿತಿಯನ್ವಯ ದಾಖಲಿಸಬೇಕಿದೆ.
ಪ್ರತಿದಿನ ತ್ಯಾಜ್ಯ ಸಂಗ್ರಹಿಸಲು ಹೋಗುವ ಸಿಬ್ಬಂದಿ ಅಲ್ಲಿ ಕಸವನ್ನು ತೆಗೆಯದೇ ಇದ್ದರೂ ಕೂಡಾ ಕಂಟ್ರೋಲ್ ರೂಂನಲ್ಲಿ ಈ ವಿಚಾರವನ್ನು ತಿಳಿಯಲು ಸಾಧ್ಯವಿದೆ” ಎನ್ನುತ್ತಾರೆ.
ಇನ್ನೂ ಹಲವು ಆಧುನಿಕ ವ್ಯವಸ್ಥೆಗಳನ್ನು ಈ ಮಾಸ್ಟರ್ ಕಂಟ್ರೋಲ್ ರೂಂನಿಂದ ನಿರ್ವಹಿಸಲು ಸಾಧ್ಯವಿದೆ, ಆರೋಗ್ಯ, ಅಪಘಾತ, ಪ್ರಾಕೃತಿಕ ದುರಂತ, ಅಥವಾ ಇನ್ನಿತರ ಯಾವುದೇ ತುರ್ತು ಕರೆಗೆ ಕ್ಷ ಣ ಮಾತ್ರದಲ್ಲಿ ಸ್ಪಂದಿಸುವ ವ್ಯವಸ್ಥೆ ಇಲ್ಲಿದೆ.
ಪ್ರಕೃತಿ ವಿಕೋಪ, ಅವಘಡ, ದುರಂತ ನಡೆದರೆ ಸಾರ್ವಜನಿಕರ ಮೂಲಕ ಕಮಾಂಡ್ಸೆಂಟರ್ಗೆ ತಲುಪಿ, ತಕ್ಷಣ ಪೊಲೀಸ್, ಅಗ್ನಿಶಾಮಕ ಸೇವೆ, ಆಂಬ್ಯುಲೆನ್ಸ್ಇತ್ಯಾದಿಗಳಿಗೆ ಸಂದೇಶ ರವಾನೆಯಾಗುತ್ತದೆ.
ಈ ಮಾಸ್ಟರ್ ಕಂಟ್ರೋಲ್ ರೂಮ್ ನ ಸಾರ್ವಜನಿಕರು ಸಂಪರ್ಕಿಸಲು ಅಗತ್ಯ ಇರುವ ಅಪ್ಲಿಕೇಶನ್ಗಳು ಒನ್ಟಚ್ಮಂಗಳೂರು ಆ್ಯಪ್ನಲ್ಲಿ ಲಭ್ಯವಾಗಲಿದೆ.
ಒಟ್ಟಾರೆಯಾಗಿ ವಿದೇಶಗಳಲ್ಲಿ ಮಾತ್ರ ಕಾಣ ಸಿಗುವ ಈ ವ್ಯವಸ್ಥೆಗಳು ಇದೀಗ ಮಂಗಳೂರಿನ ಜನತೆಗೂ ಲಭ್ಯವಾಗಲಿದ್ದು ಈ ಮೂಲಕ ಸಾಮಾಜಿಕ ಮತ್ತು ಸುರಕ್ಷಾ ವ್ಯವಸ್ಥೆ ಸುಧಾರಣೆಗೆ ಪೂರಕವಾಗುವ ನಿರೀಕ್ಷೆಯಿದೆ.
DAKSHINA KANNADA
ತ್ರಿಶೂರ್ ಪೂರಂ..! ದೇಶದ ಹೆಮ್ಮೆಯ ಉತ್ಸವ..!
ವಿವಿಧತೆಯಲ್ಲಿ ಏಕತೆ ಕಾಣುವ ನಮ್ಮ ದೇಶ ಹಲವು ಸಂಸ್ಕೃತಿ, ಕಲೆ, ಆಚರಣೆ, ಭಾಷೆ, ಜಾತಿ, ಧರ್ಮದ ಮೂಲಕ ವಿಶ್ವದ ಗಮನ ಸೆಳೆದಿದೆ. ದಿಪಾವಳಿ, ಹೋಳಿ, ಈದ್ , ಕ್ರಿಸ್ಮಸ್, ಹೀಗೆ ಹಲವು ಹಬ್ಬಗಳು ರಾಷ್ಟ್ರೀಯ ಮಟ್ಟದಲ್ಲಿ ಆಚರಣೆ ಆದ್ರೆ, ಇನ್ನೂ ಕೆಲವು ಹಬ್ಬಗಳು ರಾಜ್ಯದಿಂದ ರಾಜ್ಯಕ್ಕೆ ಬೇರೆ ಬೇರೆಯಾಗಿದೆ. ಅದರಲ್ಲಿ ವಿಶೇಷ ಹಬ್ಬವಾಗಿ ಕೇರಳದಲ್ಲಿ ಆಚರಿಸುವ ತ್ರಿಶೂರ್ ಪೂರಂ ಸದ್ಯ ಏಷ್ಯಾದಲ್ಲೇ ಅತೀ ಹೆಚ್ಚು ಜನರು ಭಾಗವಹಿಸುವ ಉತ್ಸವವಾಗಿ ಜಗತ್ಪ್ರಸಿದ್ದಿಯನ್ನು ಪಡೆದುಕೊಂಡಿದೆ.
ಏನಿದು ತ್ರಿಶೂರ್ ಪೂರಂ ಹಬ್ಬ
ತ್ರಿಶೂರ್ ಪೂರಂ ಅನ್ನೋದು ತ್ರಿಶೂರಿನ ಶಿವ ದೇವಾಲಯದಲ್ಲಿ ನಡೆಯುವ ವಾರ್ಷಿಕ ಜಾತ್ರೋತ್ಸವ. ಮಲೆಯಾಳಂ ಕ್ಯಾಲೆಂಡರ್ ಪ್ರಕಾರ ಪೂರಂ ನಕ್ಷತ್ರದಲ್ಲಿ ಚಂದ್ರೋದಯದ ವೇಳೆಯಲ್ಲಿ ನಡೆಯುವ ಉತ್ಸವ ಇದು. ತ್ರಿಶೂರ್ ನಲ್ಲಿರೋ ವಡಕ್ಕುನಾಥನ್ ಅರ್ಥಾತ್ ಶಿವ ದೇವಸ್ಥಾನದಲ್ಲಿ ನಡೆಯುವ ವಾರ್ಷಿಕ ಜಾತ್ರೆ ಇದು. ಆನೆಗಳ ಮೂಲಕ ದೇವರನ್ನು ಹೊತ್ತುಕೊಂಡು ದೇವಸ್ಥಾನದ ಬಾಗಿಲು ಪ್ರವೇಶ ಮಾಡೋದು ಈ ಉತ್ಸವದ ವಿಶೇಷ. ಹೀಗಾಗಿ ಸಾವಿರಾರು ವಿದೇಶಿಗರು ಉತ್ಸವ ನೋಡಲು ಆಗಮಿಸ್ತಾರೆ ಅನ್ನೋದೇ ವಿಶೇಷ.
ತ್ರಿಶೂರ್ ಪೂರಂ ಹಬ್ಬದ ಹಿನ್ನೆಲೆ
ರಾಮವರ್ಮ ಕುಂಞಿಪಿಳ್ಳೆ ಎಂಬ ಕೊಚ್ಚಿನ್ ಮಹಾರಾಜ 17 ನೇ ಶತಮಾನದಲ್ಲಿ ಅರುಟ್ಟುಪುಳ ಪೂರಂ ಎಂಬ ಉತ್ಸವವನ್ನು ನಡೆಸಿಕೊಂಡು ಬಂದಿದ್ದರು. ಅರುಟ್ಟುಪುಳ ಪೂರಂ ಎಂಬ ಒಂದು ದಿನದ ಉತ್ಸವಕ್ಕೆ ತ್ರಿಶೂರು ಸೇರಿದಂತೆ ಸುತ್ತಮುತ್ತಲಿನ ದೇವಸ್ತಾನಗಳು ಇದರಲ್ಲಿ ಭಾಗಿ ಆಗುತ್ತಿದ್ದವು. 1796 ರಲ್ಲಿ ಮಳೆಯ ಕಾರಣಿದಿಂದ ತ್ರಿಶೂರ್ನಿಂದ ಹೊರಟಿದ್ದ ದೇವಾಲಯ ತಂಡಗಳಿಗೆ ಅರುಟ್ಟುಪುಳ ಪೂರಂ ಉತ್ಸವದಲ್ಲಿ ಭಾಗವಹಿಸಲು ಅವಕಾಶ ನಿರಾಕರಿಸಲಾಗಿತ್ತು. ಇದರಿಂದ ಕೋಪಗೊಂಡಿದ್ದ ತ್ರಿಶೂರಿನ ರಾಜ ಶಕ್ತನ್ 1796 ರಲ್ಲೇ ತ್ರಿಶೂರಿನಲ್ಲೇ ಈ ಪೂರಂ ಉತ್ಸವ ಆರಂಭಿಸಿದ್ರು ಅನ್ನೋ ಐತಿಹಾಸಿಕ ಕಥೆ ಇದೆ. ಅಂದಿನಿಂದ ತ್ರಿಶೂರಿನ ಹತ್ತು ದೇವಾಲಯಗಳು ಒಟ್ಟಾಗಿ ತ್ರಿಶೂರ್ ಪೂರಂ ಆಚರಿಸಲು ಆರಂಭವಾಯ್ತು ಅನ್ನೋ ದಾಖಲೆಗಳು ಸಿಗುತ್ತದೆ.
ಧರ್ಮಾತೀತವಾಗಿ ನಡೆಯುವ ಪೂರಂ ಉತ್ಸವ
ತ್ರಿಶೂರ್ ಪೂರಂ ಅಂದ ತಕ್ಷಣ ನೆನಪಾಗುವುದು ಅಲ್ಲಿ ಕಾಣಸಿಗುವ ಸರ್ವಧರ್ಮ ಸಮನ್ವಯತೆ. ಇಂತಹ ದೃಶ್ಯ ಬಹುಶಃ ದೇಶದ ಬೇರೆಲ್ಲೂ ಕಾಣಲು ಸಿಗಲಾರದು. ತ್ರಿಶೂರ್ ಪೂರಂ ಉತ್ಸವದಲ್ಲಿ ಪ್ರತಿ ವರ್ಷ ಹೊಸ ಕೊಡೆಗಳನ್ನು ತಯಾರಿಸಲಾಗುತ್ತದೆ. ಕುಡವಟ್ಟಂ ಎಂದು ಕರೆಯುವ ಈ ಕೊಡೆಗಳ ವಿಶೇಷ ಆಕರ್ಷಣೆಗೆ ಕ್ರೈಸ್ತ ಸಮೂದಾಯದವರ ಕೊಡುಗೆ ಇದ್ರೆ, ಪೂರಂಗೆ ಬೇಕಾದ ಪೆಂಡಾಲ್ ಹಾಕೋದು ಇಲ್ಲಿನ ಮುಸ್ಲಿಂ ಸಮೂದಾಯದವರು. ಇನ್ನು ಉತ್ಸವ ನೋಡಲು ಹಿಂದೂ ಮುಸ್ಲಿಂ ಕ್ರೈಸ್ತ ಹೀಗೆ ಎಲ್ಲಾ ಧರ್ಮದವರೂ ಆಗಮಿಸುವುದು ಇಲ್ಲಿನ ವಿಶೇಷ. ಇದೇ ಕಾರಣಕ್ಕೆ ಈ ತ್ರಿಶೂರ್ ಪೂರಂ ಇಂದು ಜಗತ್ಪ್ರಸಿದ್ಧಿಯನ್ನು ಪಡೆದುಕೊಂಡಿದೆ.
ತ್ರಿಶೂರ್ ಪೂರಂ ಹಬ್ಬ ಹೇಗೆ ನಡೆಯುತ್ತದೆ
ತ್ರಿಶೂರು ಹಾಗೂ ಸುತ್ತಮುತ್ತಲಿನ ಹತ್ತು ದೇವಲಾಯಗಳಿಂದ ಆನೆಯ ಮೂಲಕ ದೇವರನ್ನು ಹೊತ್ತು ಶಿವ ದೇವಾಲಯಕ್ಕೆ ತರಲಾಗುತ್ತದೆ. ಒಂದೊಂದು ದೇವಸ್ಥಾನದಿಂದ ದೇವರನ್ನು ಹೊತ್ತು ಬಾಗಿಲು ದಾಟಿ ಬರುವ ಆನೆಗಳನ್ನು ನೋಡಲು ಸಾವಿರಾರು ಭಕ್ತರು ಕಾತರದಿಂದ ಕಾಯುತ್ತಿರುತ್ತಾರೆ. ಈ ವೇಳೆ ಮೊಳಗುವ ಪಂಚ ವಾದ್ಯಗಳನ್ನು ಕೇಳಲೆಂದೇ ಕೆಲವರು ಬರುವುದಿದೆ. ಕಣಿಮಂಗಲಂ ಶಾಸ್ತಾವು ದೇವಾಲಯದಿಂದ ಆರಂಭವಾಗುವ ಈ ಉತ್ಸವ ಬಳಿಕ ಒಂದೊಂದೆ ದೇವಸ್ಥಾನದಿಂದ ಬರಲು ಆರಂಭವಾಗುತ್ತದೆ. ಚಂಡೆ, ಮದ್ದಳೆ, ಕಹಳೆ,ತಾಳ ಹಾಗೂ ಎಡಕ್ಕ ಹೀಗೆ ಪಂಚವಾದ್ಯದ ಮೆರವಣಿಗೆ ನಡೆಯುತ್ತದೆ. ಹತ್ತು ಆನೆಗಳು ದೇವಾಲಯದ ಮುಂದೆ ನಿಂತಿದ್ದರೆ , ಐವತ್ತಕ್ಕೂ ಹೆಚ್ಚು ಆನೆಗಳು ಉತ್ಸವದಲ್ಲಿ ಭಾಗಿಯಾಗುತ್ತದೆ. ಚಿನ್ನದ ಹಣೆಪಟ್ಟಿ, ಚಿನ್ನದ ಪ್ರಭಾವಳಿಯನ್ನು ಹಿಡಿದು , ಪಾರೆಮೆಕ್ಕಾವು ಮತ್ತು ತಿರುವಂಬಾಡಿ ಎಂಬ ಎರಡು ತಂಡಗಳು ಪೂರಂ ನಡೆಯುವ ಸ್ಥಳದಲ್ಲಿ ಮುಖಾಮುಖಿಯಾಗಿ ನಿಂತು ಛತ್ರಿ ವಿನಿಯಮ ಮಾಡಿಕೊಳ್ಳುವ ದೃಶ್ಯ ಪೂರಂನಲ್ಲಿ ವಿಶೇಷ ಅನುಭವ ನೀಡುವ ದೃಶ್ಯ ಕೂಡಾ ಹೌದು. ಕುಡಮಟ್ಟಂ ಅಂತ ಇದನ್ನು ಕರೆಯಲಾಗುತ್ತಿದ್ದು ಶಿವದೇವಲಾಯದ ಪಶ್ಚಿಮ ಗೋಪುರದ ಬಳಿ ಇದು ಸಂಪನ್ನಗೊಳ್ಳುತ್ತದೆ.
DAKSHINA KANNADA
MANGALURU : ಪೆಟ್ರೋಲ್ ಬಂಕ್ ಸಿಬ್ಬಂದಿ ಎಡವಟ್ಟು; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿ ಅನಾಹುತ
ಮಂಗಳೂರು : ಪೆಟ್ರೋಲ್ ಬಂಕ್ ಸಿಬ್ಬಂದಿ ಎಡವಟ್ಟಿನಿಂದ ಕಾರಿಗೆ ಪೆಟ್ರೋಲ್ ತುಂಬಿಸುವ ಬದಲು ಡೀಸೆಲ್ ತುಂಬಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪರಿಣಾಮ ಕಾರು ಇಂಜಿನ್ ಸಂಪೂರ್ಣ ಹಾಳಾಗಿ ಲಕ್ಷಾಂತರ ರೂ.ನಷ್ಟವಾಗಿದೆ ಎಂದು ಕಾರು ಮಾಲಕ ಆರೋಪಿಸಿದ್ದಾರೆ.
ಹೊಟೇಲ್ ಉದ್ಯಮಿ ಜೀವನ್ ಶೆಟ್ಟಿ ಎಂಬವರು ತಮ್ಮ ಹುಂಡೈ ಐ 10 ಗ್ರ್ಯಾಂಡ್ ಕಾರ್ ಗೆ ಪೆಟ್ರೋಲ್ ತುಂಬಿಸುವ ಸಲುವಾಗಿ, ಎಪ್ರಿಲ್ 5 ರಂದು ಮಧ್ಯಾಹ್ನ 12 ರ ಸುಮಾರಿಗೆ ಬಲ್ಮಠದ ಜ್ಯೂಸ್ ಜಂಕ್ಷನ್ ಮುಂಭಾಗದ ಹೆಚ್ ಪಿ ಪೆಟ್ರೋಲ್ ಬಂಕ್ ಗೆ ಬಂದಿದ್ದರು. ಕ್ಯಾಪ್ ಮೇಲೆ ಪೆಟ್ರೋಲ್ ಎಂದು ಬರೆದಿದ್ದರೂ, ಸಿಬ್ಬಂದಿ ಮಾತ್ರ ಕಾರಿಗೆ ಡೀಸೆಲ್ ತುಂಬಿಸಿದ್ದಾರೆ.
ಪರಿಣಾಮ ಕಾರು ಕೆಲವೇ ಕಿಲೋ ಮೀಟರ್ ಸಂಚರಿಸಿ ಮುಂದಕ್ಕೆ ಹೋಗದೆ ನಿಂತಿದೆ. ಪರಿಶೀಲಿಸಿದಾಗ ಬಂಕ್ ಸಿಬ್ಬಂದಿ ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ತುಂಬಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಪ್ರಶ್ನಿಸಿದಾಗ ಪೆಟ್ರೋಲ್ ಬಂಕ್ ಮ್ಯಾನೇಜರ್ ತಮಗೂ ಇದಕ್ಕೂ ಸಂಬಂಧವೇ ಇಲ್ಲ ಎಂದು ವರ್ತಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಕಾರು ಇಂಜಿನ್ ದುರಸ್ಥಿಗೆ 2 ಲಕ್ಷಕ್ಕೂ ಅಧಿಕ ಖರ್ಚು ಆಗಲಿದೆ. ಆದರೆ, ಪೆಟ್ರೋಲ್ ಬಂಕ್ ಮಾಲಕ ಬರೀ 30 ಸಾವಿರ ಕೊಟ್ಟು ಸುಮ್ಮನಾಗಿದ್ದಾರೆ ಎಂದು ಜೀವನ್ ಶೆಟ್ಟಿ ದೂರಿದ್ದಾರೆ. ಕಡಿಮೆ ಸಂಬಳಕ್ಕೆ ಅನುಭವವಿಲ್ಲದ ಕಾರ್ಮಿಕರನ್ನು ನೇಮಿಸುತ್ತಾರೆ. ಇಂತಹ ಸಮಸ್ಯೆಯಾದಾಗ ತಮ್ಮ ಇನ್ಶೂರೆನ್ಸ್ ನಲ್ಲಿ ಪರಿಹಾರ ನೀಡುವ ಅವಕಾಶವಿದ್ದರೂ ಬಂಕ್ ಮಾಲಕರು ಮಾತ್ರ ಹಿಂದೇಟು ಹಾಕುತ್ತಿದ್ದಾರೆ. ಆದ್ದರಿಂದ ತಾನು ಪರಿಹಾರಕ್ಕಾಗಿ ಗ್ರಾಹಕ ನ್ಯಾಯಾಲಯದ ಮೊರೆ ಹೋಗುವುದಾಗಿ ಜೀವನ್ ಶೆಟ್ಟಿ ಹೇಳಿದ್ದಾರೆ.
DAKSHINA KANNADA
ಹೊತ್ತಿ ಉರಿದು ಭಸ್ಮ*ವಾದ ಸ್ವೀಟ್ ಕಾರ್ನ್ ಸ್ಟಾಲ್..!! ಓಡಿ ಜೀವ ಉಳಿಸಿಕೊಂಡ ಸ್ಟಾಲ್ ಮಾಲೀಕ, ಗ್ರಾಹಕರು
ಉಳ್ಳಾಲ: ರಸ್ತೆಯ ಬದಿಯಲ್ಲಿ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಸ್ಟಾಲ್ ಒಂದರಲ್ಲಿ ಆಕಸ್ಮಿ*ಕ ಬೆಂಕಿಯಿಂದಾಗಿ ಸ್ಟಾಲ್ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಉಳ್ಳಾಲದ ದೇರಳಕಟ್ಟೆಯಲ್ಲಿ ನಡೆದಿದೆ.
ಗ್ಯಾಸ್ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡಿದೆ. ರಸ್ತೆಯ ಬದಿಯಲ್ಲೇ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಅಂಗಡಿ ಮಾಲೀಕ ಕಾರ್ನ್ ತಯಾರಿಸುವಾಗ ಈ ಅವಘಡ ಸಂಭವಿಸಿದೆ. ತಕ್ಷಣ ಅಂಗಡಿ ಮಾಲೀಕ ಹಾಗೂ ಸ್ವೀಟ್ ಕಾರ್ನ ತಿನ್ನಲು ಬಂದಿದ್ದ ಗ್ರಾಹಕರು ಓಡಿ ತಪ್ಪಿಸಿಕೊಂಡಿದ್ದಾರೆ. ಸ್ಥಳೀಯರು ತಕ್ಷಣ ಮರಳು ಹಾಗೂ ನೀರನ್ನ ಹಾಕಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಆದ್ರೆ ಅಷ್ಟರಲ್ಲಾಗಲೇ ಸ್ಟಾಲ್ ಉರಿದು ಭಸ್ಮವಾಗಿ ಹೋಗಿದೆ.
Read More..; ಬೆಂಕಿ ಹಚ್ಚಿ ಯುವತಿಯ ಬರ್ಬ*ರ ಹ*ತ್ಯೆ..!! ಕತ್ತು ಕೊಯ್ದು ಸು*ಟ್ಟು ಹಾಕಿರುವ ಶಂಕೆ