LATEST NEWS
ಮಂಗಳೂರು: ಪಲ್ಗುಣಿ ನದಿಗೆ ಕೈಗಾರಿಕಾ ವಿಷ ತ್ಯಾಜ್ಯ- ಸತ್ತು ಬಿದ್ದ ಮತ್ಸ್ಯರಾಶಿ
ಮಂಗಳೂರು: ನಗರ ಹೊರವಲಯದ ಮರವೂರು ಸಮೀಪ ಪಲ್ಗುಣಿ ನದಿಯಲ್ಲಿ ವಿಷ ತ್ಯಾಜ್ಯದಿಂದ ಅಪಾರ ಸಂಖ್ಯೆಯಲ್ಲಿ ಮೀನುಗಳು ಸತ್ತು ಬಿದ್ದಿವೆ.
ನೀರು ಕೆಟ್ಟ ರೀತಿಯಲ್ಲಿ ವಾಸನೆ ಬರುತ್ತಿದೆ. ಇಂದು ಸ್ಥಳಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಸದ್ಯ ನದಿ ನೀರು ಕಪ್ಪು ಬಣ್ಣಕ್ಕೆ ತಿರುಗಿದೆ. ನದಿ ತಟದ ಬಾವಿಗಳ ನೀರು ಕಳೆದೆರಡು ದಿನಗಳಿಂದ ಕಲುಷಿತಗೊಂಡಿದ್ದು, ನಾಗರಿಕರು ಆತಂಕ ವ್ಯಕ್ತಪಡಿಸಿದ್ದಾರೆ.
ಇದು ಬೈಕಂಪಾಡಿ ಕೈಗಾರಿಕಾ ವಲಯದಿಂದ ಸೇರುವ ತೋಕೂರು ಹಳ್ಳದ ತ್ಯಾಜ್ಯ ಎನ್ನಾಗುತ್ತಿದೆ.
ಇದೇ ನದಿಯಿಂದ ಗುರುಪುರ, ಕಂದಾವರ, ಗಂಜಿಮಠ ಮತ್ತು ಪಡುಪೆರಾರ ಗ್ರಾಪಂಗಳಿಗೆ ಕುಡಿಯುವ ನೀರು ಪೂರೈಕೆಯಾಗುತ್ತಿದೆ.
ಕಳೆದ ಒಂದು ದಶಕದಿಂದ ಇಂತಹ ಘಟನೆಗಳು ಈ ಪ್ರದೇಶದಲ್ಲಿ ಮತ್ತೆ ಮರುಕಳಿಸುತ್ತಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ಈ ಬಗ್ಗೆ ಸ್ಥಳೀಯರು ಗ್ರಾಮಪಂಚಾಯ್, ತಹಶಿಲ್ದಾರ್ ಸೇರಿ ಎಲ್ಲರಿಗೂ ದೂರು ನೀಡುತ್ತಿದ್ದರೂ ಯಾವುದೇ ಕ್ರಮ ಆಗುತ್ತಿಲ್ಲವೆಂದು ಕಿಡಿಕಾರಿದ್ದಾರೆ.
ನದಿ ತಟದ ಬೃಹತ್ ಕೈಗಾರಿಕೆಗಳು ಹರಿಸುವ ವಿಷ ತ್ಯಾಜ್ಯದಿಂದ ನೀರು ಕಲುಷಿತಗೊಳ್ಳುತ್ತಿದೆಯಾದರೂ ಜನವಸತಿಯಿಂದ ಹರಿಯುವ ಡ್ರೈನೇಜ್ ನೀರಿನಿಂದ ಈ ರೀತಿಯಾಗುತ್ತಿದೆ ಎಂದು ಅಧಿಕಾರಿಗಳು ತಿಪ್ಪೆ ಸಾರಿಸುತ್ತಿದ್ದಾರೆ.
ಪಲ್ಗುಣಿ ನದಿಗೆ ತ್ಯಾಜ್ಯದ ನೀರು ಸೇರುತ್ತಿರುವ ಬಗ್ಗೆ ಮಹಾನಗರ ಪಾಲಿಕೆ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಉಗಿದು ಉಪ್ಪಿನ ಕಾಯಿ ಹಾಕಿದ್ದರೂ ಅಧಿಕಾರಿಗಳು ಮಾತ್ರ ತಮಗೂ ಅದಕ್ಕೂ ಸಂಬಂಧವಿಲ್ಲಂತೆ ನಟಿಸುತ್ತಿದ್ದಾರೆ.
ಇಂದು ಮತ್ತೊಂದು ಸಮಸ್ಯೆ ಕಂಡುಬಂದಿದ್ದರಿಂದ ನಾಮಕಾವಾಸ್ತೆ ಅಧಿಕಾರಿಗಳು ಭೇಟಿ ನೀಡಿದ್ದಾರೆ ಎಂದು ಸ್ಥಳೀಯರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ಮರವೂರು ಸಮೀಪ ಪಲ್ಗುಣಿ ನದಿಯಲ್ಲಿ ಅಪಾರ ಸಂಖ್ಯೆಯಲ್ಲಿ ಮೀನುಗಳು ಸತ್ತು ಬಿದ್ದಿವೆ. ಜೀವನದಿಯಲ್ಲಿ ನೀರು ಕಪ್ಪು ಬಣ್ಣಕ್ಕೆ ತಿರುಗಿದೆ. ಸುತ್ತಲ ಬೃಹತ್ ಕೈಗಾರಿಕೆಗಳು ಹರಿಸುವ ವಿಷ ತ್ಯಾಜ್ಯ ಜೀವನದಿಯನ್ನು ಕೊಲ್ಲುತ್ತಿದೆ.
ಸುತ್ತಲ ಅಂತರ್ಜಲ ವಿಷಮಯಗೊಂಡಿದೆ. ಕೃಷಿ ನಾಶವಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಅಧಿಕಾರಿ ವರ್ಗ ಮಾತ್ರ ಇದು ಜನವಸತಿಯಿಂದ ಹರಿಯುವ ಡ್ರೈನೇಜ್ ನೀರಿನ ಪರಿಣಾಮ ಅಂತ ತಿಪ್ಪೇ ಸಾರಿಸಿ ಕೈಗಾರಿಕಾ ಖಳನಾಯಕರನ್ನು ರಕ್ಷಿಸುತ್ತಾ ಬಂದಿದೆ.
ಇದು ಒಂದು ದಶಕದಿಂದ ಪುನರಾವರ್ತಿತ ವಿದ್ಯಮಾನ. ಜನತೆ ಮಾತ್ರ ತಮಗೂ ಪಲ್ಗುಣಿ ನದಿ ನಾಶ ಹೊಂದುತ್ತಿರುವುದಕ್ಕೂ ಸಂಬಂಧ ಇಲ್ಲ ಎಂಬಂತೆ ಮೌನ ವಹಿಸಿದ್ದಾರೆ ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.
FILM
ಟಿ ಆರ್ ಪಿ ಪಟ್ಟಿಯಲ್ಲಿ ಯಾವ ಧಾರಾವಾಹಿಗೆ ಸಿಕ್ಕಿದೆ ಮೊದಲ ಸ್ಥಾನ?
ಬೆಂಗಳೂರು : ‘ಕಿರುತೆರೆ’ ಜನರ ನೆಚ್ಚಿನ ಮನರಂಜನಾ ತಾಣ. ಇಲ್ಲಿ ಸಾವಿರಾರು ಧಾರಾವಾಹಿಗಳು, ರಿಯಾಲಿಟಿ ಶೋ ಗಳದೇ ದರ್ಬಾರು. ಮನೆಮಂದಿಯೆಲ್ಲಾ ಕಿರುತೆರೆಯನ್ನು ನೆಚ್ಚಿಕೊಂಡಿದ್ದಾರೆ. ದೈನಂದಿನ ದಿನಚರಿಯಲ್ಲಿ ಧಾರಾವಾಹಿಗಳೂ ಸೇರಿಕೊಂಡಿವೆ. ತಮ್ಮ ನೆಚ್ಚಿನ ಧಾರಾವಾಹಿಗಳನ್ನು ನೋಡಲು ಕಾಯುತ್ತಿರುತ್ತಾರೆ.
ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರ ವರೆಗೆ ಎಲ್ಲರೂ ಧಾರಾವಾಹಿ ಪ್ರಿಯರು. ಮಧ್ಯಾಹ್ನ, ರಾತ್ರಿ ಪ್ರಸಾರವಾಗುವ ಧಾರಾವಾಹಿಗಳನ್ನು ಬಿಡದೆ ನೋಡುವ ವರ್ಗವಿದೆ. ಆಯಾ ಧಾರಾವಾಹಿಗೆ ಆಯಾ ವೀಕ್ಷಕ ವರ್ಗವಿದೆ. ಹೀಗಿರುವ ಯಾವ ಧಾರಾವಾಹಿ ಎಷ್ಟು ಟಿ ಆರ್ ಪಿ ಹೊಂದಿದೆ ಅನ್ನೋ ಡಿಟೇಲ್ಸ್ ಇಲ್ಲಿದೆ.
ಟಾಪ್ 5 ಧಾರಾವಾಹಿಗಳು :
ಪುಟ್ಟಕ್ಕನ ಮಕ್ಕಳು
ಮೂವರು ಹೆಣ್ಣುಮಕ್ಕಳ ತಾಯಿಯಾಗಿ ಕಷ್ಟ ಕಾರ್ಪಣ್ಯಗಳಿಂದ ಬೆಂದಿರುವ ಮಹಿಳೆಯ ಪ್ರಧಾನ ಕಥೆ ಒಳಗೊಂಡಿರುವ ಧಾರಾವಾಹಿ ‘ಪುಟ್ಟಕ್ಕನ ಮಕ್ಕಳು’. ಹಿರಿಯ ನಟಿ ಉಮಾಶ್ರೀ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಪುಟ್ಟಕ್ಕನ ಮಕ್ಕಳು ಧಾರಾವಾಹಿ 17ನೇ ವಾರದ ಟಿಆರ್ಪಿ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ವೀಕ್ಷಕರ ಅಚ್ಚುಮೆಚ್ಚಿನ ಧಾರಾವಾಹಿಯಾಗಿ ಹೊರಹೊಮ್ಮಿದೆ. ಹಿರಿಯ ನಟಿ ಉಮಾಶ್ರೀ, ಹಿರಿಯ ನಟ ರಮೇಶ್ ಪಂಡಿತ್, ಸಂಜನಾ ಬುರ್ಲಿ, ಧನುಷ್ ಎನ್ಎಸ್ ಮೊದಲಾದವರು ಪಾತ್ರವಾಗಿದೆ.
ಲಕ್ಷ್ಮೀ ನಿವಾಸ
ಇತ್ತೀಚೆಗೆ ಆರಂಭಗೊಂಡ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಜನಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಇದೀಗ ಟಿಆರ್ಪಿ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಮೊದ ಮೊದಲು ಮೊದಲ ಸ್ಥಾನದಲ್ಲಿದ್ದ ಲಕ್ಷ್ಮೀ ನಿವಾಸ ಧಾರಾವಾಹಿ ಈ ವಾರ ಕೆಲವೇ ಕೆಲವು ಪಾಯಿಂಟ್ ಅಂತರದಲ್ಲಿ ಎರಡನೇ ಸ್ಥಾನದದಲ್ಲಿದೆ. ಕೌಟುಂಬಿಕ ಕಥಾಹಂದರವುಳ್ಳ ಈ ಧಾರಾವಾಹಿ ಲಕ್ಷ್ಮೀ ನಿವಾಸ ಧಾರಾವಾಹಿಯಲ್ಲಿ ನವಿರಾದ ಪ್ರೇಮಕಥೆ, ಸಂಸಾರದ ತಲ್ಲಣಗಳಿವೆ.
ಸೀತಾ ರಾಮ
ನವಿರಾದ ಪ್ರೇಮಕಥೆ ಇರುವ ಸೀತಾ ರಾಮ ಧಾರಾವಾಹಿ ಮೂರನೇ ಸ್ಥಾನದಲ್ಲಿದೆ. ಜನಮನ ಗೆದ್ದಿರುವ ಈ ಧಾರಾವಾಹಿಯಲ್ಲಿ ಪುಟಾಣಿ ಸಿಹಿ ಎಲ್ಲರಿಗೂ ಅಚ್ಚುಮೆಚ್ಚು. ದಿನದಿಂದ ದಿನಕ್ಕೆ ಸೀತಾ ರಾಮ ಧಾರಾವಾಹಿ ಕುತೂಹಲ ಪೂರ್ಣವಾಗಿ ಸಾಗುತ್ತಿದೆ, ಹಿರಿಯ ನಟ ಮುಖ್ಯಮಂತ್ರಿ ಚಂದ್ರು, ವೈಷ್ಣವಿ ಗೌಡ, ಗಗನ್ ಚಿನ್ನಪ್ಪ, ರೀತು ಸಿಂಗ್ ಮೊದಲಾದವರು ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಇದನ್ನೂ ಓದಿ : ಅಭಿಮಾನಿಗಳಿಗೆ ಹೊಸ ಸಿನಿಮಾದ ಗುಡ್ ನ್ಯೂಸ್ ಕೊಟ್ಟ ಶಾರುಖ್
ಶ್ರಾವಣಿ ಸುಬ್ರಮಣ್ಯ
ಇತ್ತೀಚೆಗೆ ಆರಂಭಗೊಂಡ ವಿಭಿನ್ನ ಕಥಾ ಹಂದರ ಹೊಂದಿರುವ ಶ್ರಾವಣಿ ಸುಬ್ರಮಣ್ಯ ಧಾರಾವಾಹಿ ಟಿಆರ್ಪಿ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಮಿನಿಸ್ಟರ್ ಮಗಳು ಶ್ರಾವಣಿಯ ತರಲೆ, ಮಿನಿಸ್ಟರ್ ಬಲಗೈ ಬಂಟ ಸುಬ್ರಮಣ್ಯನ ಕಥೆ ಧಾರಾವಾಹಿಯಲ್ಲಿದೆ. ಮಗಳನ್ನು ದ್ವೇಷಿಸುವ ತಂದೆ, ತಂದೆಯನ್ನು ಪ್ರೀತಿಸುವ ಮಗಳು, ಒಂದಷ್ಟು ಸಸ್ಪೆನ್ಸ್ ಧಾರಾವಾಹಿಯ ಜೀವಾಳ.
ರಾಮಾಚಾರಿ :
ವಿಭಿನ್ನ ಕತೆಯನ್ನೊಳಗೊಂಡ ರಾಮಾಚಾರಿ ಆರಂಭದಿಂದಲೂ ಜನಮನ ಗೆದ್ದಿತ್ತು. ಟಿಆರ್ಪಿ ಪಟ್ಟಿಯಲ್ಲಿ ರಾಮಾಚಾರಿ ಐದನೇ ಸ್ಥಾನದಲ್ಲಿದೆ. ಸದ್ಯ ಧಾರಾವಾಹಿ ಬೇರೆಯೇ ಆದ ಆಯಾಮಕ್ಕೆ ಹೊರಳಿದೆ. ರಾಮಾಚಾರಿಗೊಬ್ಬ ತಮ್ಮನೂ ಎಂಟ್ರಿ ಕೊಟ್ಟಾಗಿದೆ. ಅಣ್ಣ-ತಮ್ಮ ಹಾಗೂ ಚಾರು ಒಂದಾಗಿ ಶತ್ರುಗಳ ವಿರುದ್ಧ ಗೆಲ್ಲುವ ಹೋರಾಟಕ್ಕೆ ಇಳಿದಿದ್ದಾರೆ.
LATEST NEWS
ಜೀವಾಂತ್ಯವಾದ ಕಾಂತಾಬಾರೆ-ಬೂದಬಾರೆ ಜನ್ಮಕ್ಷೇತ್ರದ ಮರ..! ಇತಿಹಾಸದ ಜೀವಂತ ಸಾಕ್ಷಿಯ ಅಂತ್ಯ..!
ಕಿನ್ನಿಗೋಳಿ: ಮುಲ್ಕಿ ತಾಲೂಕು ಕೊಲ್ಲೂರಿನ ಶ್ರೀ ಕಾಂತಬಾರೆ-ಬೂದಬಾರೆ ಜನ್ಮ ಕ್ಷೇತ್ರದ ತಾಕೊಡೆ ಮರ ಶುಕ್ರವಾರ(ಎ.3) ಮದ್ಯಾಹ್ನ ಬುಡಸಹಿತ ಧರೆಗುರುಳುವುದರೊಂದಿಗೆ ಇತಿಹಾಸದ ಜೀವಂತ ಸಾಕ್ಷಿಯೊಂದು ಅಂತ್ಯ ಕಂಡಂತಾಗಿದೆ.
ಸುಮಾರು 800 ರಿಂದ 1000 ವರ್ಷಗಳ ಹಿನ್ನೆಲೆ ಈ ತಾಕೊಡೆ ಮರಕ್ಕೆ ಇತ್ತು ಅನ್ನುವುದು ಅಧ್ಯಯನಗಳಿಂದಲೂ ದೃಢವಾಗಿದೆ. ಮೂಲ್ಕಿ ಸಾವಂತ ಅರಸರ ದಳವಾಯಿಗಳಾಗಿದ್ದ ಅವಳಿ ವೀರರಾದ ಕಾಂತಬಾರೆ-ಬೂದಬಾರೆಯರು. ಹುಟ್ಟಿದ್ದು ಇದೇ ತಾಕೊಡೆ ಮರದಡಿಯಲ್ಲಿ ಮತ್ತು ಆಗ ತಾನೆ ಹುಟ್ಟಿದ ಅವಳಿ ಮಕ್ಕಳನ್ನು ಬಟ್ಟೆಯ ತೊಟ್ಟಿಲು ಹಾಕಿ ತೂಗಿದ್ದು ಇದೇ ತಾಕೊಡೆ ಮರದ ಪಡ್ಡಾಯಿ ಕೊಂಬೆ ಅನ್ನುವುದು ಉಲ್ಲೇಖನೀಯ. ಬೃಹದಾಕಾರದ ಈ ಮರದ ಪಡ್ದಾಯಿ ಗೆಲ್ಲು ಕೆಲ ವರ್ಷಗಳ ಹಿಂದೆ ಭಾರೀ ಗಾಳಿಮಳೆಯ ಸಂದರ್ಭ ಬಿದ್ದಿತ್ತು.
ಮುಂದೆ ಓದಿ..; ಪ್ರಾಂಶುಪಾಲೆ, ಶಿಕ್ಷಕಿ ನಡುವೆ ಹೊಯ್ ಕೈ..!! ವೀಡಿಯೋ ವೈರಲ್
ಸುಮಾರು 2ರಿಂದ 3 ಮೀಟರ್ಗಳಷ್ಟು ವ್ಯಾಸವಿದ್ದ ಈ ಮರದ ಉತ್ತರ ದಿಕ್ಕಿನ ಗೆಲ್ಲು ಕೆಲ ದಿನಗಳ ಹಿಂದೆ ಬಿದ್ದಿತ್ತು. ಸುದೀರ್ಘ ಕಾಲಮಾನದಲ್ಲಿ ಅದರಷ್ಟೇ ಆದ ಯಾವುದೇ ಗಿಡ ಚಿಗುರಿದರೂ ಜೀವಂತ ಉಳಿದಿರಲಿಲ್ಲ. ಆದರೆ ಇದೀಗ ಪರ್ಯಾಯವಾಗಿ ಪಕ್ಕದಲ್ಲಿ ತಾಕೊಡೆಯ ಗಿಡವೊಂದು ಭವಿಷ್ಯದ ಸಾಕ್ಷಿಯಾಗಿ ಗೋಚರವಾಗಿದೆ. ಧಾರ್ಮಿಕ ಮಹತ್ವದ ಧರೆಗುರುಳಿದ ಮರದ ತೆರವಿಗೆ ಪೂರ್ವಭಾವಿಯಾಗಿ ಧಾರ್ಮಿಕ ಪ್ರಕ್ರಿಯೆ ಸಹಿತ ಪ್ರಶ್ನಾಚಿಂತನೆ ನಡೆಸಿ ಆ ಪ್ರಕಾರ ಮುಂದುವರಿಯಲು ಕ್ಷೇತ್ರದ ಆಡಳಿತ ಸಮಿತಿ ಹಾಗೂ ಟ್ರಸ್ಟ್ ತೀರ್ಮಾನಿಸಿದೆ.
FILM
ಅಭಿಮಾನಿಗಳಿಗೆ ಹೊಸ ಸಿನಿಮಾದ ಗುಡ್ ನ್ಯೂಸ್ ಕೊಟ್ಟ ಶಾರುಖ್
ಮುಂಬೈ : ಬಾಲಿವುಡ್ ಖ್ಯಾತ ನಟ ಶಾರುಖ್ ಖಾನ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಪಠಾಣ್, ಜವಾನ್, ಡಂಕಿ ಸಿನಿಮಾದ ನಂತರ ಹೊಸ ಸಿನಿಮಾ ಘೋಷಣೆ ಮಾಡದೇ ಉಳಿದಿದ್ದ ಅವರು, ಅಭಿಮಾನಿಗಳಿಗೆ ಹೊಸ ಚಿತ್ರದ ಅಪ್ ಡೇಟ್ ನೀಡಿದ್ದಾರೆ. ತಮ್ಮ ಹೊಸ ಸಿನಿಮಾ ಜುಲೈ ಅಥವಾ ಆಗಸ್ಟ್ ನಿಂದ ಶುರುವಾಗಲಿದೆ ಎಂದಿದ್ದಾರೆ. ಉಳಿದಂತೆ ಅವರು ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ.
ಈ ನಡುವೆ ಶಾರುಖ್ ಖಾನ್ ಕುರಿತಾಗಿ ದಕ್ಷಿಣದ ಹೆಸರಾಂತ ನಟ ಕಮಲ್ ಹಾಸನ್ ಅಚ್ಚರಿಯ ಮಾತುಗಳನ್ನು ಆಡಿದ್ದಾರೆ. ಪುತ್ರಿ ಶ್ರುತಿ ಹಾಸನ್ ಜೊತೆಗಿನ ಮಾತುಕತೆಯಲ್ಲಿ ಶಾರುಕ್ ಆಸೆಗಳನ್ನು ಅವರು ರಿವೀಲ್ ಮಾಡಿದ್ದಾರೆ.
ತಂದೆಗೆ ಇನ್ನೂ ಏನಾದರೂ ಆಸೆಗಳು ಉಳಿದಿದ್ದವಾ? ಎಂದು ಶ್ರುತಿ ಕೇಳ್ತಾರೆ. ಆಗ ಯಾವುದೇ ಆಸೆಗಳು ಇಲ್ಲ ಎಂದು ಹೇಳುವ ಕಮಲ್ ಹಾಸನ್, ಈ ಸಮಯದಲ್ಲಿ ಶಾರುಖ್ ಆಸೆಯನ್ನು ಹೊರ ಹಾಕುತ್ತಾರೆ. ಮಣಿರತ್ನಂ ಜೊತೆ ಸಿನಿಮಾ ಮಾಡಬೇಕು ಎನ್ನುವುದು ಶಾರುಖ್ ಆಸೆ. ಅದಕ್ಕಾಗಿ ಅವರು ಪ್ರೈವೆಟ್ ಜೆಟ್ ತಗೆದುಕೊಳ್ಳೊ ಕನಸು ಕಂಡಿದ್ದಾರೆ ಎಂದಿದ್ದಾರೆ ಕಮಲ್.
ಶಾರುಖ್ ಅವರಿಗೆ ವಿಮಾನ ಖರೀದಿಸುವ ಮತ್ತು ಮಣಿರತ್ನಂ ಸಿನಿಮಾದಲ್ಲಿ ನಟಿಸುವ ಆಸೆಯನ್ನು ವ್ಯಕ್ತ ಪಡಿಸಿರುವ ವಿಚಾರ ಅವರ ಅಭಿಮಾನಿಗಳಲ್ಲಿ ಸಹಜವಾಗಿಯೇ ಅಚ್ಚರಿ ತರಿಸಿದೆ. ವಿಮಾನ ಏನೋ ಖರೀದಿಸಬಹುದು. ಆದರೆ, ಮಣಿರತ್ನಂ ಅವರನ್ನು ಖರೀದಿಸೋಕೆ ಆಗಲ್ಲ ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ.
- DAKSHINA KANNADA2 days ago
ಸುಬ್ರಹ್ಮಣ್ಯ: ಕೆಎಸ್ಸಾರ್ಟಿಸಿ ಬಸ್ಗಳ ಹಗಲು ದರೋಡೆ..! ಏನಿದು ಘಟನೆ?
- LATEST NEWS7 days ago
ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿ; ಯುವತಿ ಸಾವು!
- FILM4 days ago
ಬಿಗ್ ಬಾಸ್ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ನಮ್ರತಾ ಗೌಡ!
- BELTHANGADY3 days ago
ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು