DAKSHINA KANNADA
ಆರ್ಥಿಕ ಮುಗ್ಗಟ್ಟಿನಿಂದ ಶಾಲೆ ಮುಚ್ಚುವ ನಿರ್ಧಾರಕ್ಕೆ ಪೋಷಕರ ವಿರೋಧ
ಮಂಗಳೂರು: ಆರ್ಥಿಕ ಮುಗ್ಗಟ್ಟಿನಿಂದ ಶಾಲೆಯನ್ನು ಮುಚ್ಚುತ್ತೇವೆ ಎಂಬ ಹೇಳಿಕೆಯಿಂದ ಗೊಂದಲಗೊಂಡು ವಿದ್ಯಾರ್ಥಿಗಳ ಪೋಷಕರು ಗಲಾಟೆ ನಡೆಸಿದ ಘಟನೆ ನಗರದ ಬೊಳೂರಿನಲ್ಲಿ ನಡೆದಿದೆ.
ನಗರದ ಬೊಳೂರಿನಲ್ಲಿ ಇನ್ಫೆಂಟ್ ಜೀಸಸ್ ಜೋಯ್ಲ್ಯಾಂಡ್ ಶಾಲೆಯನ್ನು ಮುಚ್ಚಲಾಗುತ್ತಿದೆ ಎಂದು ಶಾಲೆಯ ಮುಖ್ಯಸ್ಥೆ ಫ್ರಾನ್ಸಸ್ ಪಿಂಟೊ ಹೇಳಿಕೆ ನೀಡಿದ್ದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳ ಪೋಷಕರು ಶಾಲೆಗೆ ಆಗಮಿಸಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥೆಯನ್ನು ತರಾಟೆಗೆ ತೆಗೆದುಕೊಂಡರಲ್ಲದೇ, ಶಿಕ್ಷಣಾಧಿಕಾರಿಗಳನ್ನು ಕರೆಸಿ ಸಭೆಯನ್ನು ನಡೆಸಿದ ಘಟನೆ ಬೋಳಾರದಲ್ಲಿ ನಡೆಯಿತು.
ಕಳೆದ 31 ವರ್ಷಗಳಿಂದ ಈ ಶಾಲೆಯ ತರಗತಿ ನಡೆಯುತ್ತಿದೆ. ಒಂದನೇ ತರಗತಿಯಿಂದ 10ನೇ ತರಗತಿಯವರೆಗೆ ಇಲ್ಲಿ ವಿದ್ಯಾರ್ಜನೆ ಮಾಡಲಾಗುತ್ತಿದೆ. ಸುಮಾರು 300 ಮಂದಿ ಮಕ್ಕಳೂ ಇಲ್ಲಿದ್ದಾರೆ. ಆದರೆ ನಿನ್ನೆ ಆರ್ಥಿಕ ಮುಗ್ಗಟ್ಟಿನಿಂದ ಶಾಲೆಯ ಕೆಲವು ಶಿಕ್ಷಕರು ಮುಖ್ಯ ಶಿಕ್ಷಕರ ಜೊತೆಗೆ ಸೇರಿ ಶಾಲೆಯನ್ನು ಮುಚ್ಚುವ ಹಂತಕ್ಕೆ ಬಂದಿದೆ ಎನ್ನುವ ತೀರ್ಮಾನಕ್ಕೆ ಬಂದು ವಿದ್ಯಾರ್ಥಿಗಳನ್ನು ಬೇರೆ ಶಾಲೆಗಳಿಗೆ ಸೇರಿಸಿ, ಶಾಲೆಯನ್ನು ಮುಚ್ಚುತ್ತಿದ್ದೇವೆ ಎಂಬ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಇದರಿಂದ ಆಕ್ರೋಶಗೊಂಡ ಪೋಷಕರು ಇಂದು ಏಕಾಏಕಿ ಶಾಲೆಗೆ ಆಗಮಿಸಿ ಶಿಕ್ಷಕಿಯರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಬಳಿಕ ವಿವಾದ ಉದ್ವಿಗ್ನ ಸ್ಥಿತಿ ಪಡೆಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಶಿಕ್ಷಣ ಇಲಾಖಾಧಿಕಾರಿಗಳು, ಪೊಲೀಸರು ಆಗಮಿಸಿ ಮಾತುಕತೆ ನಡೆಸಿದ್ದಾರೆ.
DAKSHINA KANNADA
ಮನೆಯೊಳಗೆ ಈ ಪ್ರಾಣಿ ಪಕ್ಷಿಗಳು ಬರಬಾರದಂತೆ, ಯಾವುದು? ಯಾಕೆ ಗೊತ್ತಾ?
ಕಷ್ಟಗಳು ಮನುಷ್ಯನಿಗೆ ಬರದೇ ಮರಕ್ಕೆ ಬರುತ್ತಾ ಎನ್ನುವ ಮಾತಿದೆ. ಹುಟ್ಟಿದ ಪ್ರತಿಯೊಬ್ಬ ಮನುಷ್ಯನು ಕಷ್ಟ ಸುಖ ಎರಡನ್ನು ಸಮಭಾಗವಾಗಿ ಸ್ವೀಕರಿಸಬೇಕು. ಆದರೆ ಜ್ಯೋತಿಷ್ಯದ ಪ್ರಕಾರ ಈ ಪ್ರಾಣಿ ಪಕ್ಷಿಗಳು ಮನೆಯೊಳಗೆ ಬಂದರೆ ಸಂಕಷ್ಟ ಕಟ್ಟಿಟ್ಟ ಬುತ್ತಿ. ಹೀಗಾಗಿ ಈ ಕೆಲವು ಪ್ರಾಣಿ ಹಾಗೂ ಪಕ್ಷಿಗಳು ಮನೆಯನ್ನು ಪ್ರವೇಶಿಸಬಾರದು ಎಂದು ಹೇಳುತ್ತಾರೆ. ಆದರೆ ಇದರಿಂದ ಏನೆಲ್ಲಾ ಸಮಸ್ಯೆಗಳು ಉಂಟಾಗುತ್ತದೆ ಎನ್ನುವುದು ಅನೇಕರಿಗೆ ತಿಳಿದಿಲ್ಲ.
ಏಡಿ : ಏಡಿಯು ಮನೆಯೊಳಗೆ ಪ್ರವೇಶಿಸಿದರೆ ಮನೆಗೆ ಮಾಟ ಮಾಡಿದ್ದಂತೆ ಎನ್ನಲಾಗುತ್ತದೆ. ಇದು ಪ್ರವೇಶಿಸಿದರೆ ಮನೆಯಲ್ಲಿ ಸಂಕಷ್ಟಗಳು ಎದುರಾಗಿ ಮನೆಯೇ ಸರ್ವನಾಶವಾಗುತ್ತದೆ ಎನ್ನಲಾಗುತ್ತದೆ.
ಕಪ್ಪು ಬೆಕ್ಕು : ಕೆಲವೊಮ್ಮೆ ಬೇರೆಯವರ ಮನೆಯ ಬೆಕ್ಕು ಮನೆಗೆ ಬಂದು ಉಳಿಯುತ್ತವೆ. ಆದರೆ ಕಪ್ಪು ಬೆಕ್ಕು ಮನೆಯನ್ನು ಪ್ರವೇಶಿಸುವುದು ಒಳ್ಳೆಯದಲ್ಲ. ಈ ಬೆಕ್ಕು ಅಪಶಕುನವಂತೆ, ಮನೆಗೆ ಬಂದರೆ ಕೆಟ್ಟದಾಗುತ್ತದೆ ಎನ್ನಲಾಗುತ್ತದೆ.
ಉಡ : ಅಪರೂಪವಾಗಿ ಕಾಣಸಿಗುವ ಉಡವನ್ನು ನೋಡುವುದೇ, ಅದರ ಬಗ್ಗೆ ಮಾತನಾದುವುದೇ ಕೆಟ್ಟದಂತೆ. ಈ ಪ್ರಾಣಿಯು ಅನಿಷ್ಟವಂತೆ, ಹೀಗಾಗಿ ಮನೆಗೆ ಬರುವುದು ಒಳ್ಳೆಯದಲ್ಲ. ಒಂದು ವೇಳೆ ಅಪ್ಪಿ ತಪ್ಪಿ ಮನೆಯನ್ನು ಪ್ರವೇಶಿಸಿದರೆ ಮನೆಗೆ ಮಾಟ ಮಾಡಿದ್ದಂತೆ. ಇದರಿಂದ ಮನೆಯೇ ನಾಶವಾಗುತ್ತದೆ ಎನ್ನಲಾಗುತ್ತದೆ.
ಕಾಗೆ : ಕಾಗೆಯು ಮನೆಗೆ ಬಂದರೆ ಶನಿಯು ಮನೆಗೆ ಪ್ರವೇಶಿಸುತ್ತಿದ್ದಾನೆ ಎನ್ನುವುದರ ಸೂಚಕ. ಕಾಗೆಯೂ ಮನೆಯೊಳಗೆ ಬಂದರೆ ಸಂಕಷ್ಟಗಳು ಎದುರಾಗುತ್ತದೆ. ಆರ್ಥಿಕ ಧನನಷ್ಟ ಹಾಗೂ ಆರೋಗ್ಯ ಸಮಸ್ಯೆಯು ಕಾಣಿಸಿಕೊಳ್ಳುತ್ತದೆ ಎನ್ನಲಾಗಿದೆ.
ಬಾವುಲಿ : ಬಾವಲಿಯು ಮನೆಗೆ ಪ್ರವೇಶಿಸುವುದರಿಂದ ಮನೆಯು ಹಾಳಾಗುತ್ತಿದೆ ಎಂದು ಸೂಚಿಸುತ್ತದೆ. ಇದರಿಂದ ನಕಾರಾತ್ಮಕ ಶಕ್ತಿಗಳು ಮನೆಯಲ್ಲಿ ಉಳಿಯುತ್ತವೆ. ಅಷ್ಟೇ ಅಲ್ಲದೇ, ಮನೆಯಲ್ಲಿ ವಾಸಿಸುವ ಜನರ ಜೀವನದಲ್ಲಿ ಸಮಸ್ಯೆಗಳು ಆರಂಭವಾಗುತ್ತದೆಯಂತೆ.
ಜೇನುಗೂಡು ಅಥವಾ ಜೇನುಹುಳ: ಮನೆಯೊಳಗೆ ಜೇನುಹುಳಗಳು ಒಂದೆರಡು ಬಂದರೆ ಪರವಾಗಿಲ್ಲ. ಆದರೆ ಜೇನುಹುಳಗಳು ಮನೆಯೊಳಗೆ ಗೂಡು ಕಟ್ಟುವುದು ಒಳ್ಳೆಯದಲ್ಲ. ಇದರಿಂದ ಆ ಮನೆಯಲ್ಲಿ ವಾಸಿಸುತ್ತಿರುವವರಿಗೆ ಸಂಕಷ್ಟ ಎದುರಾಗುತ್ತದೆ.
ಗೂಬೆ : ಗೂಬೆಯು ಅನಿಷ್ಟ ವಾಗಿದ್ದು ಇದರ ಆಗಮನವು ನಕಾರಾತ್ಮಕ ಶಕ್ತಿಯನ್ನು ಸೃಷ್ಟಿಸುತ್ತದೆ. ಮನೆಗೆ ಗೂಬೆ ಬಂದರೆ ಮನೆಯ ಪ್ರಗತಿಯು ಕುಂಠಿತವಾಗುತ್ತದೆ. ಮನೆಯಲ್ಲಿ ವಾಸಿಸುವ ಸದಸ್ಯರ ನಡುವೆ ವೈಮನಸ್ಸು ಉಂಟಾಗಿ ಮನೆಯೇ ನಾಶವಾಗುವ ಸಾಧ್ಯತೆ ಇರುತ್ತದೆ.
ರಣಹದ್ದುಗಳು : ರಣ ಹದ್ದುಗಳು ಮನೆಯೊಳಗೆ ಪ್ರವೇಶಿಸಿದರೆ ಯಜಮಾನನಿಗೆ ಸಮಸ್ಯೆಯಾಗುತ್ತದೆ. ಅದಲ್ಲದೇ, ಮನೆಯಲ್ಲಿ ಭಿನ್ನಾಭಿಪ್ರಾಯಗಳು ಮೂಡುತ್ತದೆ ಎನ್ನಲಾಗಿದೆ.
DAKSHINA KANNADA
ಮಂಗಳೂರು: ವಿಮಾನ ನಿಲ್ದಾಣದ ರನ್ ವೇಯಿಂದ ಮನೆಗಳಿಗೆ ನುಗ್ಗುತ್ತಿದೆ ನೀರು…!
ವಿಮಾನ ನಿಲ್ದಾಣ ಮುಖ್ಯದ್ವಾರ ಬಂದ್ ಮಾಡಿ ಸ್ಥಳೀಯರ ಪ್ರತಿಭಟನೆ
ಮಂಗಳೂರು: ಭಾರೀ ಮಳೆಯಿಂದಾಗಿ ವಿಮಾನ ನಿಲ್ದಾಣದ ರನ್ ವೇಯಿಂದ ಹರಿದು ಬಂದ ನೀರು ಏಳು ಮನೆಗಳಿಗೆ ಹಾನಿ ಉಂಟು ಮಾಡಿದ ಹಿನ್ನೆಲೆಯಲ್ಲಿ ಕರಂಬಾರ ಸ್ಥಳೀಯರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರವೇಶ ದ್ವಾರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ವಿಮಾನ ನಿಲ್ದಾಣದಿಂದ ಮಳೆ ನೀರು ಹರಿದು ಹೋಗಲು ಏರ್ಪೋರ್ಟ್ ಆಡಳಿತ ಸರಿಯಾದ ವ್ಯವಸ್ಥೆ ಕಲ್ಪಿಸಿಲ್ಲ. ಹೀಗಾಗಿ ಕೆಂಜಾರು ಹಾಗೂ ಏರ್ಪೋರ್ಟ್ ಸುತ್ತಮುತ್ತಲಿನ ಹಲವು ಮನೆಗಳಿಗೆ ನೆರೆ ಭೀತಿ ಸೃಷ್ಟಿಯಾಗಿದೆ. ಸೂಕ್ತ ವ್ಯವಸ್ಥೆ ಕಲ್ಪಿಸದೆ ಮಳೆ ನೀರನ್ನು ಅವೈಜ್ಞಾನಿಕವಾಗಿ ಹೊರ ಬಿಡಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಟೇಬಲ್ ಟಾಪ್ ಏರ್ಪೋರ್ಟ್ ಆಗಿರುವ ಕಾರಣ ಕೆಲ ಭಾಗದ ಜನ ವಸತಿ ಪ್ರದೇಶಗಳಿಗೆ ನೀರು ನುಗ್ಗುವ ಭೀತಿ ಉಂಟಾಗಿದೆ. ಈ ಮಧ್ಯೆ, ರಸ್ತೆ ತಡೆ ನಡೆಸಿದ ಕಾರಣ ಬಜ್ಪೆ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಘಟನಾ ಸ್ಥಳದಲ್ಲಿ ಸಿಐಎಸ್ಎಫ್ ಸಿಬ್ಬಂದಿ ಮೊಕ್ಕಾಂ ಹೂಡಿದ್ದಾರೆ.
ಸದ್ಯ ಗ್ರಾಮಸ್ಥರನ್ನು ಮನವೊಲಿಸಿ ರಸ್ತೆ ತೆರವು ಮಾಡಲಾಗಿದೆ. ಪ್ರತಿಭಟನಾನಿರತರು ಜಿಲ್ಲಾಧಿಕಾರಿ ಸ್ಥಳಕ್ಕೆ ಬರಲು ಒಂದು ಗಂಟೆಯ ಗಡುವು ನೀಡಿದ್ದಾರೆ. ಸ್ಥಳಕ್ಕೆ ಮಂಗಳೂರು ಉತ್ತರ ವಿಭಾಗದ ಎಸಿಪಿ ಮನೋಜ್ ನಾಯಕ್, ಮಂಗಳೂರು ತಹಶೀಲ್ದಾರ್ ಪ್ರಶಾಂತ್ ಪಾಟೀಲ್, ಮಂಗಳೂರು ಉತ್ತರ ಶಾಸಕ ಡಾ. ವೈ ಭರತ್ ಶೆಟ್ಟಿ ಭೇಟಿ ನೀಡಿದ್ದಾರೆ. ಏರ್ಪೋರ್ಟ್ ಆಡಳಿತ ಅಧಿಕಾರಿಗಳು, ಸ್ಥಳೀಯರ ಜೊತೆ ಶಾಸಕ ಭರತ್ ಶೆಟ್ಟಿ ಚರ್ಚೆ ನಡೆಸಿದ್ದಾರೆ.
DAKSHINA KANNADA
ನಿವೃತ್ತಿಗೊಂಡ ಪೊಲೀಸ್ ಅಧಿಕಾರಿಗೆ ವಿಶೇಷ ಗೌರವ..! ಪುಷ್ಪಾರ್ಚಣೆ ಸಲ್ಲಿಸಿದ ಪೊಲೀಸ್ ಅಧಿಕಾರಿಗಳು..!
ಮೂಡುಬಿದಿರೆ: ಪೊಲೀಸ್ ಅಧಿಕಾರಿಯಾದವರು ದಕ್ಷತೆ, ಪ್ರಮಾಣಿಕತೆಯಿಂದ ಕೆಲಸ ಮಾಡಿದರೆ ಎಂತಹ ಗೌರವ ಸಿಗುತ್ತದೆ ಅನ್ನೋದಕ್ಕೆ ಮೂಡಬಿದಿರೆಯ ಈ ಪೊಲೀಸ್ ಅಧಿಕಾರಿಯೇ ಸಾಕ್ಷಿ. ಹೌದು, ಪೊಲೀಸ್ ಅಧಿಕಾರಿಯಾಗಿ 39 ವರ್ಷಗಳ ಕಾಲ ಸೇವೆ ಸಲ್ಲಿಸಿ ಇದೀಗ ನಿವೃತ್ತರಾಗಿದ್ದ ಪೊಲೀಸ್ ಉಪನಿರೀಕ್ಷಕ ದಿವಾಕರ್ ರೈ ಅವರಿಗೆ ಸಹೋದ್ಯೋಗಿಗಳು ಪುಷ್ಪಾರ್ಚನೆಯ ಗೌರವ ಸಲ್ಲಿಸಿದ್ದಾರೆ.
ದಿವಾಕರ ರೈ ಅವರು ಸೇವೆಯಿಂದ ನಿವೃತ್ತರಾಗಿದ್ದರು. ಮೂಡಬಿದಿರೆಯ ಪೊಲೀಸ್ ಠಾಣೆಯಿಂದ ಅವರು ಸೇವೆಯನ್ನು ಮುಗಿಸಿ ಮನೆಗೆ ತೆರಳುವ ವೇಳೆಯಲ್ಲಿ ಅವರು ಠಾಣೆಯಿಂದ ಪೊಲೀಸ್ ಜೀಪ್ ಏರುವವರೆಗೂ ಮೂಡಬಿದಿರೆಯ ವೃತ್ತ ನಿರೀಕ್ಷಕರಾದ ಸಂದೇಶ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪುಷ್ಪಾರ್ಚನೆಯನ್ನು ಮಾಡಿದ್ದಾರೆ. ಪೊಲೀಸ್ ಜೀಪ್ನಲ್ಲೇ ಪೊಲೀಸ್ ಅಧಿಕಾರಿಯಾಗಿಯೇ ದಿವಾಕರ ರೈ ಮನೆಗೆ ತೆರಳಿದ್ದಾರೆ. ಸಹೋದ್ಯೋಗಿಗಳು ನೀಡಿದ ಗೌರವಕ್ಕೆ ದಿವಾಕರ ರೈ ಅವರು ಆನಂದ ಬಾಷ್ಪ ಸುರಿಸಿದ್ದಾರೆ. ಸದಾ ಒಂದೊಲ್ಲೊಂದು ಅಪರಾಧ ಪ್ರಕರಣಗಳಿಂದಲೇ ಬ್ಯುಸಿಯಾಗಿರುತ್ತಿದ್ದ ಮೂಡಬಿದಿರೆಯ ಪೊಲೀಸ್ ಠಾಣೆ ಇಂದು ವಿನೂತನ ಸಂದರ್ಭಕ್ಕೆ ಸಾಕ್ಷಿಯಾಗಿತ್ತು.
ಈ ಪುಣ್ಯಕ್ಷೇತ್ರಕ್ಕೆ ಹೋಗಲು ರಾಜ್ಯ ಸರ್ಕಾರದಿಂದ ಸಹಾಯಧನ ಸಿಗಲಿದೆ..!