LATEST NEWS
ಉಡುಪಿ: KMCಯಲ್ಲಿ ಮಕ್ಕಳ ಅಸ್ಥಿಮಜ್ಜೆ ಕಸಿ ಸೌಲಭ್ಯ ಚಿಕಿತ್ಸೆ ಕುರಿತ ಮಾಹಿತಿ ಕಾರ್ಯಾಗಾರ
ಉಡುಪಿ: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಣಿಪಾಲದ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರದ ಭಾಗವಾಗಿರುವ ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕೊಲಾಜಿ ವಿಭಾಗವು ಮಕ್ಕಳ ಅಸ್ಥಿಮಜ್ಜೆ ಕಸಿ ಸೌಲಭ್ಯದ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗುತ್ತಿದೆ ಎಂದು ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಡೀನ್ ಡಾ.ಶರತ್ ಕುಮಾರ್ ರಾವ್ ಹೇಳಿದರು.
ಮಕ್ಕಳಲ್ಲಿ ಅಸ್ಥಿಮಜ್ಜೆ ಕಸಿ ಚಿಕಿತ್ಸೆಯ ಕುರಿತಾದ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು “ದೇಶದಲ್ಲಿರುವ 130 ಕೋಟಿ ಜನರಲ್ಲಿ ಪ್ರತಿವರ್ಷ 10 ಸಾವಿರ ಜನರಿಗೆ ಅಸ್ಥಿಮಜ್ಜೆ ಕಸಿ ಚಿಕಿತ್ಸೆಯ ಅಗತ್ಯವಿದೆ. ಇದಕ್ಕಾಗಿ ಇಂತಹ ಕೇಂದ್ರಗಳು ಅಗತ್ಯವಿದೆ” ಎಂದರು.
ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ್ ಶೆಟ್ಟಿ ಮಾತನಾಡಿ “ಅಸ್ಥಿಮಜ್ಜೆ ಕಸಿ ಚಿಕಿತ್ಸೆಯು ದುಬಾರಿ ಚಿಕಿತ್ಸೆಯಾಗಿದೆ. ಹೀಗಾಗಿ ನಮ್ಮಲ್ಲಿಗೆ ಬರುವ ಹಲವಾರು ಬಡ ರೋಗಿಗಳಿಗೆ ಈ ಚಿಕಿತ್ಸೆಯ ಅಗತ್ಯ ಬಿದ್ದ ಸಂಧರ್ಭದಲ್ಲಿ ದಾನಿಗಳ ಮತ್ತು ಇತರ ಮೂಲಗಳ ನೆರವಿನಿಂದ ಇಂತಹ ರೋಗಿಗಳ ಚಿಕಿತ್ಸಾ ವೆಚ್ಚವನ್ನು ಭರಿಸಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ.
ಆರ್ಥಿಕ ಸಂಕಷ್ಟದ ಕಾರಣಕ್ಕಾಗಿ ಯಾರೂ ಕೂಡಾ ಚಿಕಿತ್ಸೆಯಿಂದ ವಂಚಿತರಾಗಬಾರದು ಎಂಬುವುದು ಕಸ್ತೂರ್ನಾ ಆಸ್ಪತ್ರೆಯ ಆಶಯ” ಎಂದರು.
ಈ ಸಂಧರ್ಭದಲ್ಲಿ ಸಹ ಪ್ರಾದ್ಯಾಪಕ ಮತ್ತು ವಿಭಾಗದ ಮುಖ್ಯಸ್ತರಾದ ಡಾ.ವಾಸುದೇವ ಭಟ್ ಕೆ, ವಿಭಾಗದ ಸಹಾಯಕ ಪ್ರಾಧ್ಯಾಪಕ ಮತ್ತು ಮಕ್ಕಳ ಅಸ್ಥಿಮಜ್ಜೆ ಕಸಿ ತಜ್ಞರಾದ ಡಾ.ವಿನಯ್ ಎಂ.ವಿ ಮತ್ತು ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಅರ್ಚನಾ ಎಂ.ವಿ ಅವರು ಮಕ್ಕಳಲ್ಲಿ ಅಸ್ಥಿಮಜ್ಜೆಯ ಕಸಿ ಪ್ರಕ್ರಿಯೆಯ ಕುರಿತು ಮಾಹಿತಿಯನ್ನು ನೀಡಿದರು.
Baindooru
ಬಿಗ್ ಬಾಸ್ ಗೆ ಮೂರನೇ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟ ಹಿಂದೂ ಫೈರ್ ಬ್ರಾಂಡ್ ಚೈತ್ರಾ
ಮಂಗಳೂರು : ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್. ಕಿಚ್ಚ ಸುದೀಪ್ ನಿರೂಪಣೆಯಲ್ಲಿ ಮೂಡಿ ಬರೋ ಈ ಶೋಗೆ ಸ್ಪರ್ಧಿಗಳು ಯಾರಾಗ್ತಾರೆ ಅನ್ನೋದು ಕುತೂಹಲವೇ ಹೆಚ್ಚು. ಈ ಬಾರಿ ಅಂದ್ರೆ ಸೀಸನ್ 11 ರ ಸ್ಪರ್ಧಿಗಳು ಯಾರು ಅನ್ನೋ ‘ರಾಜ ರಾಣಿ’ ರಿಯಾಲಿಟಿ ಶೋ ನ ಗ್ರ್ಯಾಂಡ್ ಫಿನಾಲೇಲಿ ರಿವೀಲ್ ಆಗುತ್ತಿದೆ.
ಎಂಟ್ರಿ ಕೊಟ್ಟ ಚೈತ್ರಾ!
ಮೊದಲ ಸ್ಪರ್ಧಿಯಾಗಿ ‘ಸತ್ಯ’ ಧಾರಾವಾಹಿ ನಟಿ ಗೌತಮಿ ಜಾಧವ್, 2ನೇ ಸ್ಪರ್ಧಿಯಾಗಿ ಲಾಯರ್ ಜಗದೀಶ್ ಬಿಗ್ ಬಾಸ್ ಮನೆ ಸೇರುತ್ತಿದ್ದು, ಇನ್ನೂ 3ನೇ ಸ್ಪರ್ಧಿಯಾಗಿ ‘ಬಿಗ್ ಬಾಸ್’ ಮನೆಯೊಳಗೆ ಫೈರ್ ಬ್ರ್ಯಾಂಡ್ ಭಾಷಣಕಾರ್ತಿ ಚೈತ್ರಾ ಎಂಟ್ರಿ ಕೊಟ್ಟಿದ್ದಾರೆ.
ಖಡಕ್ ಮಾತುಗಳಿಂದಲೇ, ಹಿಂದುತ್ವದ ಹೆಸರಿನಲ್ಲಿ ಭಾಷಣ ಮಾಡಿ, ತಮ್ಮದೇ ಆದ ಅಪಾರ ಹಿಂಬಾಲಕರನ್ನು ಹೊಂದಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ಮೂಲದ ಚೈತ್ರಾ, ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
ಅಲ್ಲದೇ, ಖಾಸಗಿ ವಾಹಿನಿ, ಪತ್ರಿಕೆಗಳಲ್ಲಿ ಕೆಲಸ ಮಾಡಿದ ಅನುಭವವೂ ಇದೆ.
ಇದನ್ನು ಓದಿ: ನಟಿ ಸುಕೃತಾ ನಾಗ್ ಸಿಲ್ಕ್ ಸೀರೆಯಲ್ಲಿ ಮಿಂಚಿಂಗ್… ಬಿಗ್ ಬಾಸ್ ಗೆ ಸ್ವಾಗತ ಅಂತಿದ್ದಾರೆ ಜನ!
ವಂಚನೆ ಪ್ರಕರಣ:
ಪ್ರಖರ ಭಾಷಣಗಳ ಮೂಲಕ ಗಮನ ಸೆಳೆದಿದ್ದ ಚೈತ್ರಾ ಕಾಂಟ್ರವರ್ಸಿಗಳ ಮೂಲಕವೂ ಸದ್ದು ಮಾಡಿದ್ದಾರೆ. ಅಲ್ಲದೇ, ಬಿಜೆಪಿ ಟಿಕೆಟ್ ಕೊಡುವ ವಿಚಾರದಲ್ಲಿ ಬೈಂದೂರಿನ ಉದ್ಯಮಿಯೊಬ್ಬರಿಗೆ ವಂಚಿಸಿರುವ ಆರೋಪದಡಿ ಜೈಲು ಪಾಲಾಗಿದ್ದರು.
ಸದ್ಯ ಬಿಗ್ ಬಾಸ್ ಮನೆಗೆ ಪ್ರವೇಶ ಪಡೆದಿರುವ ಚೈತ್ರಾ ಅಲ್ಲಿ ಹೇಗಿರ್ತಾರೆ? ಅನ್ನೋದನ್ನ ಕಾದು ನೋಡಬೇಕಿದೆ.
DAKSHINA KANNADA
ಮೈಸೂರು ದಸರಾದಲ್ಲಿ ತುತ್ತೂರಿ ಬ್ಯಾನ್
ಮಂಗಳೂರು/ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದೆ. ಜಂಬೂ ಸವಾರಿ ನೋಡಲು ಜನರು ಕಾಯುತ್ತಿದ್ದಾರೆ. ಈ ಹಿಂದೆ ದಸರಾ ಆನೆಗಳೊಂದಿಗೆ ಫೋಟೋ, ರೀಲ್ಸ್ ಗೆ ಸರ್ಕಾರ ಬ್ರೇಕ್ ಹಾಕಿತ್ತು. ಈಗ ತತ್ತೂರಿ ಬ್ಯಾನ್ ಮಾಡಲಾಗಿದೆ.
ತುತ್ತೂರಿ ಬ್ಯಾನ್ ಮಾಡುವಂತೆ ಸೂಚಿಸಿ ಮೈಸೂರು ಪೊಲೀಸ್ ಕಮೀಷನರ್ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ. ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ತುತ್ತೂರಿ ಕಿರಿಕಿರಿ ಉಂಟುಮಾಡುವ ಹಿನ್ನೆಲೆ ಈ ಆದೇಶ ಹೊರಡಿಸಲಾಗಿದೆ.
ಕರ್ನಾಟಕ ಪೊಲೀಸ್ ಕಾಯ್ದೆ 1963, ಕಲಂ 35, 36 ಮತ್ತು 92 (Q) ಅಡಿ ವುವುಜೆಲಾ (ತುತ್ತೂರಿ) ಮಾರಾಟ ಮಾಡುವುದು ಹಾಗೂ ಬಳಸುವುದನ್ನು ನಿಷೇಧಿಸಲಾಗಿದೆ. ಕರ್ನಾಟಕ ಪೊಲೀಸ್ ಕಾಯ್ದೆ 1963 ಸೆಕ್ಷನ್ 92 (Q) ಪ್ರಕಾರ ಹಾಗೂ ಭಾರತೀಯ ನ್ಯಾಯ ಸಂಹಿತೆ-2023 ಸೆಕ್ಷನ್ 270ರಲ್ಲಿ ಸಾರ್ವಜನಿಕ ಉಪದ್ರವವನ್ನು ಅಪರಾಧವೆಂದು ಪರಿಗಣಿಸಿದ್ದು, ಸಾರ್ವಜನಿಕ ಆರೋಗ್ಯ, ಸುರಕ್ಷತೆ, ನೈತಿಕತೆಗೆ ಕಿರಿಕಿರಿ ಉಂಟುಮಾಡುತ್ತದೆ ಎಂದು ಪರಿಗಣಿಸಲಾಗಿದೆ.
ಇದನ್ನೂ ಓದಿ : ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಗೆ ಬಾಂ*ಬ್ ಬೆದರಿಕೆ ಇ-ಮೇಲ್
ಆದೇಶ ಉಲ್ಲಂಘಿಸುವವರ ವಿರುದ್ಧ ಕಾನೂನಿನನ್ವಯ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಈ ಘಟಕದ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
LATEST NEWS
ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ; 3 ಮೃ*ತ್ಯು, 7 ಗಾ*ಯ
ಮಂಗಳೂರು/ಹರಿಯಾಣ: ಹರಿಯಾಣದ ಸೋನಿಪತ್ನಲ್ಲಿ ಇಂದು (ಸೆ.28) ಬೆಳಿಗ್ಗೆ ಅಕ್ರಮವಾಗಿ ನಡೆಸುತ್ತಿದ್ದ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋ*ಟವು ಸಂಭವಿಸಿದ್ದು, 3 ಜನರ ಮೃ*ತ್ಯು ಹಾಗೂ 7 ಮಂದಿಗೆ ಗಂ*ಭೀರ ಗಾಯವಾಗಿದೆ.
ವೇದ್ ಎಂಬುವವರ ಮನೆಯಲ್ಲಿ ಪಟಾಕಿಗಳನ್ನು ತಯಾರಿಸುತ್ತಿದ್ದು, ಮನೆಯಲ್ಲಿ ಸಂಗ್ರಹಿಸಿದ ರಾಸಾಯನಿಕಗಳಿಂದ ಬೆಂ*ಕಿ ಅವ*ಘಡ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮೂವರ ದೇಹವು ಛಿಧ್ರ*ವಾಗಿದ್ದು, ಗಾ*ಯಾಳುಗಳನ್ನು ಆಸ್ಪತ್ರೆಗೆ ಚಿಕಿ*ತ್ಸೆಗಾಗಿ ಕಳುಹಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದು, ಪಟಾಕಿ ಕಾರ್ಖಾನೆ ನಡೆಸುತ್ತಿದ್ದ ವೇದ್ ಪರಾರಿಯಾಗಿದ್ದಾನೆ. ಈ ಕುರಿತು ಸೋನಿಪತ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- LATEST NEWS6 days ago
ವೃಶ್ಚಿಕದಲ್ಲಿ ಬುಧ-ಶುಕ್ರ ಯುತಿ; ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ
- LATEST NEWS4 days ago
ಸೆಪ್ಟಂಬರ್ 29 ರಿಂದ ಆಕಾಶದಲ್ಲಿ ಎರಡು ಚಂದ್ರ ಗೋಚರ..! ಏನಿದು ವಿಸ್ಮಯ..?
- LATEST NEWS4 days ago
ಮಂಗಳೂರು: ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಮೃ*ತ್ಯು
- LATEST NEWS3 days ago
ಲಕ್ಷ್ಮೀ ಹೆಬ್ಬಾಳ್ಕರ್ಗೆ 1 ಕೆಜಿ ಬಂಗಾರದ ಆಫರ್ ನೀಡಿದ ಮಾಜಿ ಸಚಿವ