Connect with us

    ಉದಾಸೀನ ಪ್ರವೃತ್ತಿಯ ವ್ಯಕ್ತಿಗಳಿಗೆ ಮಾದರಿಯಾಗುವ ಸ್ವಾಭಿಮಾನದ ಕಥೆ ಇದು…

    Published

    on

    ಉದಾಸೀನ ಪ್ರವೃತ್ತಿಯ ವ್ಯಕ್ತಿಗಳಿಗೆ ಮಾದರಿಯಾಗುವ ಸ್ವಾಭಿಮಾನದ ಕಥೆ ಇದು…

    ಉಡುಪಿ: ಇವರ ಹೆಸರು ಕಲ್ಮಾಡಿಯ ಜಯಣ್ಣ…. ತೆಂಗಿನಕಾಯಿ ಕೀಳೋ ಜಯಣ್ಣ ಇವರ ನಾಮಧೇಯ. ತೆಂಗಿನ ಮರವೇರಿ ಕಾಯಿ ಕೀಳುವ ಉದ್ಯೋಗ ಇವರದಾಗಿತ್ತು.

    ಆದರೆ ಆ ಒಂದು ದಿನ ಜಯಣ್ಣನ ಪಾಲಿಕೆ ಕರಾಳ ದಿನವಾಗಿತ್ತು. ಎಂದಿನಂತೆ ಕಾಯಿ ಕೀಳಲು ಎತ್ತರದ ಮರ ಏರಿದ್ದ ಜಯಣ್ಣ ಕಾಯಿ ಸಮೇತ ಕೆಳಗೆ ಉರುಳಿದ್ರು.

    ಪರಿಣಾಮ ಬೆನ್ನು ಮೂಳೆ ಮುರಿಯಿತು. ಕಾಲುಗಳೆರಡೂ ಸ್ವಾಧೀನ ಕಳೆದುಕೊಂಡವು.

    ಎಂಟು ಜನ ಸದಸ್ಯರಿರುವ ಆ ದೊಡ್ಡ ಕುಟುಂಬದ ಹಿರಿಯ ಮಗ ಎಂಟು ವರ್ಷ ಹಾಸಿಗೆಯಲ್ಲಿ ಮಲಗಿದಲ್ಲೇ ಕಾಲ ಕಳೆದ್ರು.

    ದಿನಾ ಮರವೇರಿ ಕಾಯಿ ಕಿತ್ತು, ದುಡಿಮೆ ಮಾಡಿ ಸ್ವಂತ ಕಾಲಲ್ಲಿ ನಿಂತಿದ್ದ ಜಯಣ್ಣನ ಕಾಲುಗಳು ಸ್ವಾಧೀನ ಕಳಕೊಂಡಿದ್ದವು.

    ಬೆನ್ನು ಹುರಿಯ ಗಾಯದಿಂದ ಅಪಾರ ಯಾತನೆ ಅನಭವಿಸುತ್ತಿದ್ದರು. ಆದರೆ ಸ್ವಾವಲಂಬನೆ ಅವರನ್ನು ಎಚ್ಚರಿಸಿತು.

    ಅಸಹಾಯಕತೆಯ ನಡುವೆಯೂ ಜೀವನ ಪ್ರೀತಿ ಅವರನ್ನು ಪ್ರೇರೇಪಿಸಿತು. ಸ್ವಾಭಿಮಾನದ ಪ್ರೀತಿ, ಸೋಲಾರ್ ವಿದ್ಯುತ್ ಚಾಲಿತ ಸಣ್ಣ ಬಂಡಿಯನ್ನು ಬಳಸಿ ಎಳನೀರು ವ್ಯಾಪಾರದಲ್ಲಿ ಅವರನ್ನು ತೊಡಗಿಸಿಯೇಬಿಟ್ಟಿತು.

    ಉಡುಪಿಯ ಆ ಪ್ರಶಾಂತ ಪರಿಸರದ ಮಲ್ಪೆ ಕಡಲ ಕಿನಾರೆಗೆ ಹೋಗುವಾಗ ಕಲ್ಮಾಡಿ ಸೇತುವೆಯ ಬಳಿ, ಬೊಬ್ಬರ್ಯ ಗುಡ್ಡಕ್ಕೆ ಹೋಗುವ ದ್ವಾರದ ಮುಂದೆ ಚಿಕ್ಕ ಗಾಡಿಯಲ್ಲಿ ಇವರು ಬೊಂಡದ ಗಾಡಿಯಲ್ಲಿ ಕುಳಿತುಕೊಳ್ಳುತ್ತಾರೆ.

    ಸಂಜೆ ನಾಲ್ಕರಿಂದ ಎಂಟು ಗಂಟೆಯವರೆಗೆ ಇವರ ಬೊಂಡ ವ್ಯಾಪಾರ. ಎಳನೀರು ಕುಡಿಯೋಕೆ ಬಂದವರಿಗೆ ಬಂಡಿಯೊಳಗೆ ಕೂತಿದ್ದ ಅವರ ಹಸನ್ಮುಖ ಎಲ್ಲರನ್ನು ಸೆಳೆದು ಬಿಡುತ್ತೆ.

    ಬಂದ ಗಿರಾಕಿಗಳಿಗೆ ಬೊಂಡ ಕೆತ್ತುವುದನ್ನು ನೋಡಿದ್ರೆ ಅವರು ಅನಾರೋಗ್ಯದಿಂದ ಬಳಲುತ್ತಿದ್ದವರೆಂದು ಗೊತ್ತೇ ಆಗಲ್ಲ.

    ಎಳನೀರು ಕುಡಿಯೋದಕ್ಕೆಂದು ತಮ್ಮ ಗಾಡಿಯಿಂದ ಇಳಿಯುವವರು, ಅವರ ಕಾಲನ್ನು ಗಮನಿಸಿ ಕಥೆ ಕೇಳಿದ್ರೆ ಅವರ ಆತ್ಮವಿಶ್ವಾಸದ ಚಿಲುಮೆ ಎಂಥವರನ್ನು ನಾಚಿಸಿ ಬಿಡುತ್ತೆ.

    ಹಾಸಿಗೆಯಲ್ಲೇ ಇದ್ದ ಎಂಟು ವರ್ಷದ ಸೋಲನ್ನು ಗೆಲ್ಲಲೇಬೇಕೆಂಬ ಹಠ ನನ್ನದು ಎನ್ನುತ್ತಾ, ತಾನಿವತ್ತು ಸ್ವಾವಲಂಬನೆಯ ಬದುಕನ್ನು ಕಂಡುಕೊಳ್ಳುತ್ತಿರಲು ನೆರವಾದ ಸಂಸ್ಥೆ, ವ್ಯಕ್ತಿಗಳನ್ನು ನೆನೆಯುವಾಗ ಅವರ ಕಣ್ಣಂಚಿನಲ್ಲಿ ನೀರು ಜಿನುಗುತ್ತೆ.

    ಹಾಸಿಗೆ ಹಿಡಿದಿದ್ದ ಜಯಣ್ಣನಿಗೆ ಸ್ನೇಹಿತರೊಬ್ಬರು ಬೆಳ್ತಂಗಡಿ ತಾಲೂಕಿನ ಕನ್ಯಾಡಿಯಲ್ಲಿರುವ ಸೇವಾಭಾರತಿಯ ಟ್ರಸ್ಟ್ ಬಗ್ಗೆ ಮಾಹಿತಿ ನೀಡಿದರಂತೆ.

    ಆ ಸಂಸ್ಥೆ ನಡೆಸುತ್ತಿದ್ದ ಶಿಬಿರಕ್ಕೆ ಇವರು ಸೇರಿದರು. ಒಟ್ಟು 40 ಮಂದಿಯಲ್ಲಿ ಐದು ಜನರನ್ನು ಆಯ್ಕೆ ಮಾಡಿ ಬೆಂಗಳೂರಿನ APD ಸಂಸ್ಥೆಯ ಶಿಬಿರಕ್ಕೆ ಕಳುಹಿಸಿಕೊಟ್ಟಿದ್ದರು.

    ಅಲ್ಲಿ ಚಿಕಿತ್ಸೆ ಹಾಗೂ ಆತ್ಮವಿಶ್ವಾಸ ತುಂಬಿ ಇವರು ಮಾಡಬಹುದಾದ ಉದ್ಯೋಗವನ್ನು ಮನಗಾಣಿಸಿ, ಅದಕ್ಕೆ ಬೇಕಾದ ವಾಹನವನ್ನೂ ಉಚಿತವಾಗಿ ತಯಾರಿಸಿಕೊಟ್ಟರಂತೆ.

    ನಿಜಕ್ಕೂ ಜಯಣ್ಣ ಪ್ರತಿಯೊಬ್ಬರಿಗೂ ಪ್ರೇರಣೆ. ಈ ರೀತಿಯ ನೋವಿನಿಂದ ಬಳಲುತ್ತಿರುವವರಿಗೆಲ್ಲ ಮಾದರಿ.

    ಮಲ್ಪೆಗೆ ಹೋದಾಗ ಕಲ್ಮಾಡಿ ಸೇತುವೆ ಸಮೀಪದ ಇವರ ಗಾಡಿಯಂಗಡಿಯಿಂದ ಒಂದು ಎಳನೀರು ಕೊಂಡು ಕುಡಿದರೆ ಅದು ಜಯಣ್ಣನ ಸ್ವಾವಲಂಬನೆಯ ಬದುಕಿಗೆ ನಾವೆಲ್ಲ ಪ್ರೋತ್ಸಾಹ ನೀಡಿದಂತಾಗುತ್ತದೆ ಅಲ್ವ.

    ಮಲ್ಪೆಗೆ ಬಂದ್ರೆ ಜಯಣ್ಣನ ಹತ್ರ ಹೋಗಿ ಬೊಂಡ ಕುಡಿಯದೆ ವಾಪಾಸು ಬರಬೇಡಿ ಆಯ್ತಾ….!…

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಹಳ್ಳ ಹಿಡಿದ ಸ್ಮಾರ್ಟ್‌ ಸಿಟಿಯ ಕಾಮಗಾರಿ; ಕುಂಟುತ್ತಾ ಸಾಗಿದ ಮಹಾಕಾಳಿ ಪಡ್ಪು ಅಂಡರ್ ಪಾಸ್

    Published

    on

    ಮಂಗಳೂರು: ಮಂಗಳೂರು ಸ್ಮಾರ್ಟ್‌ ಸಿಟಿ ಯೋಜನೆಯಲ್ಲಿ ಕೈಗೆತ್ತಿಕೊಂಡಿರುವ ಮಹಾಕಾಳಿ ಪಡ್ಪುವಿನ ರೈಲ್ವೇ ಅಂಡರ್‌ ಪಾಸ್‌ ಕಾಮಗಾರಿ ಸದ್ಯಕ್ಕಂತು ಮುಗಿಯುವ ಲಕ್ಷಣ ಕಾಣಿಸುತ್ತಿಲ್ಲ. ಈ ಕಾಮಗಾರಿ ಕೈಗೆತ್ತಿಕೊಂಡು ವರ್ಷಗಳೇ ಕಳೆದರೂ ಕಾಮಗಾರಿ ಮುಗಿಸಬೇಕು ಅನ್ನೋ ಇಚ್ಚೆ ಸ್ಮಾರ್ಟ್‌ ಸಿಟಿ ಯೋಜನೆಯವರಿಗೂ ಇದ್ದಂತಿಲ್ಲ.

    ಕೆಲ ತಿಂಗಳ ಹಿಂದೆ ಕಳಪೆ ಕಾಮಗಾರಿಯಿಂದಾಗಿ ಇಲ್ಲಿ ಕಾಮಗಾರಿ ಕುಸಿತ ಕೂಡಾ ಉಂಟಾಗಿತ್ತು. ಇದೀಗ ಕೆಲ ದಿನಗಳಿಂದ ಯಾವುದೇ ಕಾಮಗಾರಿ ನಡೆಸದೆ ಕಾರ್ಮಿಕರು ಕೂಡಾ ಕೆಲಸ ಇಲ್ಲದೆ ಸುಮ್ಮನೆ ಕುಳಿತಿರುವ ದೃಶ್ಯ ಇಲ್ಲಿ ಮಾಮೂಲಾಗಿದೆ. ಮಾರ್ಗನ್‌ ಗೇಟ್ ಮೂಲಕವಾಗಿ ಜೆಪ್ಪಿನ ಮೊಗೆರು ಹೈವೆ ಸಂಪರ್ಕಿಸುವ ಈ ರಸ್ತೆಯಲ್ಲಿ ನಿತ್ಯ ಸಾವಿರಾರು ವಾಹನಗಳು ಓಡಾಡುತ್ತಿದೆ. ಸದ್ಯ ಈ ಕಾಮಗಾರಿ ಆರಂಭವಾದ ಬಳಿಕ ಇಲ್ಲಿ ದ್ವಿಚಕ್ರ ವಾಹನಕ್ಕಷ್ಟೇ ಓಡಾಡಲು ವ್ಯವಸ್ಥೆ ಮಾಡಲಾಗಿದೆ.

    ಉಪ್ಪಳದಲ್ಲಿ 3.5 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್‌ ವಶ; ಓರ್ವ ಬಂಧನ

    ಹೀಗಾಗಿ ಈ ರಸ್ತೆಯ ಮೂಲಕ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಕಾಮಗಾರಿ ಯಾವಾಗ ಮುಗಿಸ್ತೀರಿ ಅಂತ ಪ್ರಶ್ನೆ ಮಾಡುತ್ತಿದ್ದಾರೆ. ಆದರೆ ಇಲ್ಲಿ ನಡಿಯುತ್ತಿರುವ ಕಾಮಗಾರಿಯ ವೇಗ ನೋಡಿದರೆ ಇದು 2024 ರಲ್ಲಿ ಪೂರ್ಣಗೊಳ್ಳುವ ಯಾವುದೇ ಲಕ್ಷಣ ಇಲ್ಲ ಅನ್ನೋದು ಸ್ಪಷ್ಟವಾಗುತ್ತಿದೆ. ಹೀಗಾಗಿ ತಕ್ಷಣ ಅಂಡರ್ ಪಾಸ್ ಕೆಲಸ ಮಗಿಸಿ ಅಂತ ಜನ ಒತ್ತಾಯಿಸಿದ್ದಾರೆ.

    Continue Reading

    LATEST NEWS

    11 ವರ್ಷದ ಬಾಲಕ ಹೃದಯಘಾ*ತಕ್ಕೆ ಬ*ಲಿ

    Published

    on

    ಹಾಸನ : ಹೃದಯಾಘಾ*ತ ಎಂಬುದು ಇತ್ತೀಚೆಗೆ ಸಾಮಾನ್ಯವಾಗಿದೆ. ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಸಾದವರೂ ಹೃದಯಾ*ಘಾತಕ್ಕೆ ಒಳಗಾಗುತ್ತಿದ್ದಾರೆ. ರಾಜ್ಯದಲ್ಲಿ ಮತ್ತೊಂದು ಕಳವಳಕಾರಿ ಘಟನೆ ನಡೆದಿದ್ದು, 11 ವರ್ಷದ ಬಾಲಕ ಹೃದಯಾ*ಘಾತಕ್ಕೆ ಬ*ಲಿಯಾಗಿದ್ದಾನೆ. ಈ  ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಸಚಿನ್ ಮೃ*ತ ಬಾಲಕ.

    ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ ಸಚಿನ್, ಮನೆಯಲ್ಲಿ ಟಿವಿ ನೋಡುತ್ತಿದ್ದ ವೇಳೆ ಹೃದಯಾ*ಘಾತವಾಗಿದೆ.

    ಇದನ್ನೂ ಓದಿ : ಮನೆಯಲ್ಲಿ ಹಲ್ಲಿ ಕಾಟವೇ? ಈ ಸಿಂಪಲ್​ ಮನೆಮದ್ದು ಟ್ರೈ ಮಾಡಿ

    ಟಿವಿ ನೋಡುತ್ತಲೇ ಕುಸಿ*ದು ಬಿದ್ದ ಮಗನನ್ನು ಮಾತನಾಡಿಸಲು ಮನೆಯವರು ಪ್ರಯತ್ನಿಸಿದ್ದು, ಏನು ಮಾತನಾಡದೆ ಇರೋದನ್ನು ಗಮನಿಸಿ ಪೋಷಕರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಆಲೂಕು ಸರ್ಕಾರಿ ಆಸ್ಪತ್ರೆಗೆ ಕರೆತರುವ ಮುನ್ನವೇ ಬಾಲಕ ಸಾ*ವನ್ನಪ್ಪಿದ್ದ ಎಂದು ವೈದ್ಯರು ಘೋಷಿಸಿದ್ದಾರೆ ಎಂದು ತಿಳಿದು ಬಂದಿದೆ.

    Continue Reading

    FILM

    ಕನ್ನಡದ ಸೀರಿಯಲ್‌ನಲ್ಲಿ ಮಿಂಚುತ್ತಿರುವ ಉಡುಪಿಯ ಬೆಡಗಿ

    Published

    on

    ಬೆಂಗಳೂರು/ಮಂಗಳೂರು: ಸಿನೆಮಾದಲ್ಲಿ ನಟಿಸಬೇಕು ಅನ್ನೋದು ಎಲ್ಲರ ಕನಸು. ಆದರೆ ಇಲ್ಲೊಬ್ಬಾಕೆ ನಟಿಗೆ ಸೀರಿಯಲ್‌ನಲ್ಲಿ ನಟಿಸಬೇಕು ಎಂಬ ಆಸೆ. ಆದರೆ ಆಕೆಗೆ ಮಾತ್ರ ಮೊದಲು ಒಲಿದು  ಬಂದಿದ್ದು ಸಿನೆಮಾದಲ್ಲಿ ನಟಿಸುವ ಅವಕಾಶ. ಇದೀಗ ಆ ನಟಿ ಸುರ್ವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಅವನು ಮತ್ತು ಶ್ರಾವಣಿ’ ಧಾರವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೌದು, ಈ ಧಾರಾವಾಹಿಯಲ್ಲಿ ಶ್ರಾವಣಿಯಾಗಿ ಕಾಣಿಸಿಕೊಂಡಿರುವ ಇಶಿಕಾ ಶೆಟ್ಟಿಗಾರ್ ಮೂಲತಃ ಉಡುಪಿಯವರಾಗಿದ್ದಾರೆ.

    ಶ್ರಾವಣಿ ಪಾತ್ರದ ಇಶಿಕಾ ಶೆಟ್ಟಿಗಾರ್ ಮೂಲತಃ  ಉಡುಪಿಯವರಾಗಿದ್ದು ಸದ್ಯ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಈಕೆ 9 ನೇ ತರಗತಿಯಲ್ಲಿದ್ದಅಗಲೇ ಸಿನೆಮಾ ನಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಊರ್ವಿ, ಗರುಡ, ಮನದ ಮರೆಯಲಿ ಸೇರಿದಂತೆ ನಾಳ್ಕೈದು ಸಿನೆಮಾಗಳಲ್ಲಿ ನಟಿಸಿದ್ದಾರೆ. ಬಳಿಕ ಕಾನೂನು ಪದವಿ ಮುಗಿಸಿರುವ ಇವರು ಸೀರಿಯಲ್‌ ನಲ್ಲಿ ಆಭಿನಯಿಸುವತ್ತ ಒಲವು ಮಾಡಿದ್ದಾರೆ. ಹೀಗಾಗಿ ಲುಕ್‌ ಟೆಸ್ಟ್ ಕೂಡಾ ಕೊಟ್ಟಿದ್ದಾರೆ.

    ಜಾನಿ ಮಾಸ್ಟರ್ ಪತ್ನಿಗೂ ಬಂತು ಕಂಟಕ..! ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್..!!

    ಇದೇ ವೇಳೆ ‘ಅವನು ಮತ್ತು ಶ್ರಾವಣಿ’ ಧಾರಾವಾಹಿಗೆ ರಿಪ್ಲೇಸ್‌ಮೆಂಟ್‌ ಪಾತ್ರಕ್ಕೆ ಕರೆ ಬರುತ್ತದೆ. ರಿಪ್ಲೇಸ್‌ಮೆಂಟ್‌ ಪಾತ್ರ ಆಗಿದ್ದರಿಂದ ಜನರಿಗೆ ಇಷ್ಟ ಆಗ್ಬೋದಾ ಅನ್ನುವ ಮೈಂಡ್‌ ಸೆಟ್ ನಲ್ಲಿ ಇವರು ಕೊನೆಗೂ ಪಾತ್ರಕ್ಕೆ ಸೈ ಎಂದು ಹೇಳಿದ್ದಾರೆ. ಇದೀಗ ಧಾರಾವಾಹಿ ಮೂಲಕ ಕನ್ನಡಿಗರ ಮನಗೆದ್ದಿದ್ದಾರೆ. ಈ ಧಾರಾವಾಹಿಯಲ್ಲಿ ನಟನೆ ಆರಂಭಿಸಿದ ಮೇಲೆ ಆಫರ್‌ಗಳು ಬರುತ್ತಿದೆ ಎಂದು ಇಶಿಕಾ ಶೆಟ್ಟಿಗಾರ್ ಹೇಳಿದ್ದಾರೆ.

    Continue Reading

    LATEST NEWS

    Trending