Connect with us

LATEST NEWS

ಕಸ ಗುಡಿಸುತ್ತಿದ್ದಾಕೆ ಜಿಲ್ಲಾಧಿಕಾರಿಯಾದ ಕಥೆ

Published

on

ಜೋಧಪುರ: ಮಹಾನಗರ ಪಾಲಿಕೆಯಲ್ಲಿ ಪೌರಕಾರ್ಮಿಕೆಯಾಗಿ ಕೆಲಸ ಮಾಡ್ತಿದ್ದ ಮಹಿಳೆ ಇದೀಗ ಜಿಲ್ಲಾಧಿಕಾರಿಯಾಗಿ ನೇಮಕಗೊಳ್ಳಲಿದ್ದು, ಮೊದಲ ಪ್ರಯತ್ನದಲ್ಲೇ ರಾಜಸ್ಥಾನ ಆಡಳಿತ ಸೇವಾ ಪರೀಕ್ಷೆ ಪಾಸ್ ಮಾಡಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.

ಜೋಧಪುರ ಮುನ್ಸಿಪಲ್ ಕಾರ್ಪೋರೇಶನ್​​ನಲ್ಲಿ ಕಸ ಗುಡಿಸುವ ಕೆಲಸ ಮಾಡ್ತಿದ್ದ ಆಶಾ ಸೇನೆ ಸೇರುವ ಕನಸು ಕಂಡಿದ್ದರು. ಆದರೆ ಈ ಕನಸು ಈಡೇರುವ ಮೊದಲೇ ಗಂಡನಿಂದ ವಿಚ್ಛೇದನ ಪಡೆದುಕೊಳ್ಳಬೇಕಾಗುತ್ತದೆ. ಹೀಗಾಗಿ ಮೂಲಕ ಮಕ್ಕಳನ್ನ ಸಾಕುವ ಜವಾಬ್ದಾರಿ ಹೊತ್ತುಕೊಳ್ಳಬೇಕಾಗುತ್ತದೆ. ಅನೇಕ ತೊಂದರೆ, ಸವಾಲುಗಳ ಮಧ್ಯೆ ಪದವಿ ವ್ಯಾಸಂಗ ಮುಗಿಸುತ್ತಾರೆ. ಕಳೆದ ಎರಡು ವರ್ಷಗಳ ಹಿಂದೆ ಅಂದರೆ 2018ರಲ್ಲಿ ರಾಜ್ಯ ಆಡಳಿತ ಸೇವಾ ಪರೀಕ್ಷೆ(ಆರ್​​​​ಎಎಸ್​) ಎದುರಿಸಿದ್ದರು. ಇದಾದ ಬಳಿಕ 2019ರಲ್ಲಿ ಮೌಖಿಕ ಪರೀಕ್ಷೆ ಎದುರಿಸುತ್ತಾರೆ. ಇದರ ಫಲಿತಾಂಶ ಬರಲು ತಡವಾಗಿದ್ದರಿಂದ ಜೋಧಪುರ ಮುನ್ಸಿಪಾಲ್ ಕಾರ್ಪೋರೇಷನ್​​ನಲ್ಲಿ ಕಸ ಗುಡಿಸುವ ಕೆಲಸಕ್ಕೆ ಸೇರಿಕೊಳ್ಳುತ್ತಾರೆ.

ಸತತ ಎರಡು ವರ್ಷಗಳ ಕಾಲ ಜೋಧಪುರದ ಬೀದಿಗಳಲ್ಲಿ ಕಸ ಗುಡಿಸುವ ಕೆಲಸ ಮಾಡಿರುವ ಆಶಾ, ಮನೆ ಜವಾಬ್ದಾರಿ ಹೊತ್ತುಕೊಳ್ಳುತ್ತಾರೆ.  2018ರ ರಾಜಸ್ಥಾನ ಆಡಳಿತ ಸೇವಾ ಪರೀಕ್ಷೆ ಫಲಿತಾಂಶ ಕಳೆದ ಮಂಗಳವಾರ ಬಹಿರಂಗಗೊಂಡಿದ್ದು, ಮೊದಲ ಪ್ರಯತ್ನದಲ್ಲೇ ಪರೀಕ್ಷೆ ಪಾಸ್ ಮಾಡಿದ್ದಾರೆ. ಮುಂದಿನ ಕೆಲ ದಿನಗಳಲ್ಲಿ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಆಶಾ ಇಬ್ಬರು ಮಕ್ಕಳ ತಾಯಿಯಾಗಿದ್ದು, ಸದ್ಯ ಮಗ ಪದವಿ ವ್ಯಾಸಂಗ ಮಾಡ್ತಿದ್ದು, ಮಗಳು ಐಐಟಿ ಜೆಇಇಗೆ ಅರ್ಹತೆ ಪಡೆದುಕೊಂಡಿದ್ದಾಳೆ.

Click to comment

Leave a Reply

Your email address will not be published. Required fields are marked *

LATEST NEWS

ಯುವತಿಯ ಹೃದಯವನ್ನು ಬೇಯಿಸಿ ಅಡುಗೆ ಮಾಡಿ ಬಡಿಸಿದ ಕೊಲೆಗಾರ

Published

on

ಅಮೇರಿಕಾ : ಯುವತಿಯೋರ್ವಳನ್ನು ಕೊಲೆ ಮಾಡಿ ಆಕೆಯ ದೇಹದ ಹೃದಯವನ್ನು ಕತ್ತರಿಸಿ ಬಳಿಕ ಮನೆಯವರಿಗೆ ಅಡುಗೆ ಮಾಡಿ ಬಡಿಸಿದ ಘಟನೆ ದೂರದ ಅಮೇರಿಕಾದಲ್ಲಿ ನಡೆದಿದೆ.
ಕೊಲೆ ಮಾಡಿದ ನಂತರ ಆ ದೇಹವನ್ನು ಬಿಸಾಡುವ ಮೊದಲು ಆ ಶವವನ್ನು ಕತ್ತರಿಸಿ, ಅದರಲ್ಲಿರುವ ಹೃದಯವನ್ನು ಹೊರಗೆ ತೆಗೆದು, ಅದನ್ನು ಆಲೂಗಡ್ಡೆಯ ಜೊತೆ ಬೇಯಿಸಿ, ಮನೆಯವರಿಗೆ ಸಾಂಬಾರ್ ಮಾಡಿ ಬಡಿಸಿರುವ ವಿಚಿತ್ರ ಮತ್ತು ಭಯಾನಕ ಘಟನೆಯೊಂದು ಅಮೆರಿಕಾದ ವಾಷಿಂಗ್ಟನ್ ನಲ್ಲಿ ನಡೆದಿದೆ.


ಆಕೆಯ ದೇಹದಿಂದ ಹೃದಯವನ್ನು ಕತ್ತರಿಸಿ, ಆಲೂಗಡ್ಡೆಯೊಂದಿಗೆ ಬೇಯಿಸಿ ಅಡುಗೆ ಮಾಡಿ ಕುಟುಂಬಿಕರಿಗೆ ಬಡಿಸಿದ್ದಾನೆ ಎಂದು ತಿಳಿದು ಬಂದಿದೆ. ಆರೋಪಿಯನ್ನು ಲಾರೆನ್ಸ್ ಪಾಲ್ ಆಂಡರ್ಸನ್ ಎಂದು ಗುರುತಿಸಲಾಗಿದೆ.
ಮೃತ ಮಹಿಳೆಯ ಹೃದಯವನ್ನು ತನ್ನ ಚಿಕ್ಕಪ್ಪನ ಮನೆಗೆ ತಂದು ಅಲ್ಲಿ ಅದನ್ನು ಆಲೂಗಡ್ಡೆಯೊಂದಿಗೆ ಬೇಯಿಸಿ ಚಿಕ್ಕಪ್ಪ ಮತ್ತು ಅವರ ಹೆಂಡತಿಗೆ ಬಡಿಸಿದ್ದಾನೆ ಎಂದು ತನಿಖಾಧಿಕಾರಿಗಳು ಚಿಕಾಶಾದ ಗ್ರೇಡಿ ಕೌಂಟಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಇದಾದ ಬಳಿಕ ಆಂಡರ್ಸನ್ ಆ ಮನೆಯಲ್ಲಿದ್ದ ಚಿಕ್ಕಪ್ಪ ಮತ್ತು ಅವರ ನಾಲ್ಕು ವರ್ಷದ ಮೊಮ್ಮಗಳನ್ನು ಕೂಡ ಕೊಂದಿದ್ದಾನೆ. ತನ್ನ ಚಿಕ್ಕಪ್ಪನಿಗೆ ಚಾಕುವಿನಿಂದ ತಿವಿದು ತೀವ್ರವಾಗಿ ಗಾಯಗೊಳಿಸಿದ್ದಾನೆ ಎಂದು ವರದಿಯಾಗಿದೆ.

Continue Reading

bengaluru

ಮನ್ಸಿಂದ ಯಾರೂನು ಕೆಟ್ಟೋರಲ್ಲ..ಬಿಗ್ ಬಾಸ್ ವಿನಯ್ ಕಣ್ಣೀರು

Published

on

ಬೆಂಗಳೂರು : ಬಿಗ್​ಬಾಸ್ ಮನೆಯಲ್ಲಿ ವಿನಯ್ ಅತ್ಯಂತ ಗಟ್ಟಿ ಸ್ಪರ್ಧಿ ಎಂದು ಕರೆಸಿಕೊಳ್ಳುವ ವಿನಯ್ ಗೌಡ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.ಮಂಗಳವಾರ ಪ್ರಸಾರವಾದ ಎಪಿಸೋಡ್​ನಲ್ಲಿ ಮಾತ್ರ ವಿನಯ್ ಕಣ್ಣೀರು ಹಾಕಿದ್ದಾರೆ.

ಮನೆಗೆ ಇಬ್ಬರು ಹೊಸ ಸ್ಪರ್ಧಿಗಳು ವೈಲ್ಡ್ ಕಾರ್ಡ್ ಎಂಟ್ರಿ ಪಡೆದು ಬಂದಿದ್ದಾರೆ. ಅವರಲ್ಲಿ ಒಬ್ಬರಾದ ಪವಿ ಪೂವಪ್ಪ ಅವರು ಸ್ನೇಹಿತ್, ವಿನಯ್ ಜೊತೆ ಮಾತನಾಡುತ್ತಿದ್ದಾಗ ಸ್ನೇಹಿತ್ ಬಿಗ್​ಬಾಸ್ ಮನೆಯ ಸ್ಪರ್ಧಿಗಳ ಬಗ್ಗೆ ಹೊರಗಿರುವ ಅಭಿಪ್ರಯಾದ ಬಗ್ಗೆ ತಿಳಿಸುವಂತೆ ಹೇಳ್ತಾರೆ.ಆಗ ಪವಿ ಬಳೆಯ ಎಪಿಸೋಡ್ ಭಾರಿ ಸದ್ದು ಮಾಡಿತು ಎಂದರು.ಆ ವಿಷಯ ಸೋಷಿಯಲ್ ಮೀಡಿಯಾಗಳಲ್ಲಿ ಬಹಳ ಚರ್ಚೆಯಾಯಿತು ಎಂದು ಸಹ ಹೇಳಿದರು.

ಇದರಿಂದಾಗಿ ವಿನಯ್‌ ತೀರಾ ಡಲ್‌ ಆಗ್ಬಿಟ್ಟರು. ಬಾತ್‌ರೂಮ್‌ ಒಳಗೆ ಹೋಗಿ ವಿನಯ್ ಗಳಗಳನೆ ಅತ್ತುಬಿಟ್ಟರು. ಬಳಿಕ ‘ಬಿಗ್ ಬಾಸ್‌’ ಬಳಿ ಮಾತನಾಡಿದ್ಮೇಲೆ ವಿನಯ್ ಸಮಾಧಾನಗೊಂಡರು.

Continue Reading

DAKSHINA KANNADA

Sullia : ಕಂಠಪೂರ್ತಿ ಕುಡಿದು ಅಡ್ಡಾದಿಡ್ಡಿ ಕಾರು ಚಲಾಯಿಸಿದ ಸರ್ಕಾರಿ ಅಧಿಕಾರಿ

Published

on

ಸುಳ್ಯ : ಸರ್ಕಾರಿ ಅಧಿಕಾರಿಯೊಬ್ಬರು ಮದ್ಯದ ನಶೆಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಸಾರ್ವಜನಿಕರಿಂದ ಬೈಗುಳ ತಿಂದ ಸುಳ್ಯದ ಅರಂಬೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್ ಕುಮಾರ್ ಎಂಬವರು ಕಂಠಪೂರ್ತಿ ಕುಡಿದ ಮದ್ಯದ ಮತ್ತಿನಲ್ಲಿ ಸುಳ್ಯ ಅರಂಬೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ, ರಸ್ತೆಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಹಲವಾರು ವಾಹನಗಳಿಗೆ ಢಿಕ್ಕಿ ಆಗುವಂತಹ ಸಂಭಾವ್ಯ ದುರಂತವೊಂದು ಸಾರ್ವಜನಿಕರ ಸಮಯ ಪ್ರಜ್ಞೆಯಿಂದ ತಪ್ಪಿದೆ. ರಸ್ತೆಯುದ್ದಕ್ಕೂ ವಿರುದ್ಧ ದಿಕ್ಕಿನಲ್ಲಿ, ಅಡ್ಡಾದಿಡ್ಡಿ ವಾಹನ ಚಲಾಯಿಸಿ ಅಪಘಾತ ಸಂಭವಿಸುವ ಸಾಧ್ಯತೆಯನ್ನು ಮನಗಂಡ ಕೆಲವು ವಾಹನ ಸವಾರರು ಸಾರ್ವಜನಿಕರ ಸಹಕಾರದಿಂದ ಅಡ್ಡಗಟ್ಟಿದ್ದಾರೆ. ಸರ್ಕಾರಿ ಅಧಿಕಾರಿಯ ಈ ವರ್ತನೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

Continue Reading

LATEST NEWS

Trending