Connect with us

    LATEST NEWS

    ರೈಲ್ವೆ ಬ್ರಿಡ್ಜ್ ಮೇಲೆ ರೀಲ್ಸ್ ಮಾಡಲು ಹೋಗಿ ಇಬ್ಬರು ಬಾಲಕರು ಸಾವು- ಮತ್ತೋರ್ವ ಗಂಭೀರ..!

    Published

    on

    ರೀಲ್ಸ್ ಮಾಡಲು ಹೋಗಿ ರೈಲಿಗೆ ಸಿಲುಕಿ ಬಾಲಕರಿಬ್ಬರು ಮೃತಪಟ್ಟ ಘಟನೆ ಬಿಹಾರದ ಖಗರಿಯಾದಲ್ಲಿ ನಡೆದಿದೆ. ಮೃತ ಬಾಲಕರು ಸೇರಿದಂತೆ ಒಟ್ಟು ಮೂರು ಜನ ರೈಲು ಹಳಿ ಮೇಲೆ ನಿಂತುಕೊಂಡು ರೀಲ್ಸ್ ಮಾಡುತ್ತಿದ್ದರು.

    ಪಾಟ್ನಾ :  ರೀಲ್ಸ್ ಮಾಡಲು ಹೋಗಿ ರೈಲಿಗೆ ಸಿಲುಕಿ ಬಾಲಕರಿಬ್ಬರು ಮೃತಪಟ್ಟ ಘಟನೆ ಬಿಹಾರದ ಖಗರಿಯಾದಲ್ಲಿ ನಡೆದಿದೆ. ಮೃತ ಬಾಲಕರು ಸೇರಿದಂತೆ ಒಟ್ಟು ಮೂರು ಜನ ರೈಲು ಹಳಿ ಮೇಲೆ ನಿಂತುಕೊಂಡು ರೀಲ್ಸ್ ಮಾಡುತ್ತಿದ್ದರು.


    ರೀಲ್ಸ್ ಮಾಡಲು ಹೋಗಿ ರೈಲಿಗೆ ಸಿಲುಕಿ ಬಾಲಕರಿಬ್ಬರು ಮೃತಪಟ್ಟ ಘಟನೆ ಬಿಹಾರದ ಖಗರಿಯಾದಲ್ಲಿ ನಡೆದಿದೆ.

    ಮೃತ ಬಾಲಕರು ಸೇರಿದಂತೆ ಒಟ್ಟು ಮೂರು ಜನ ರೈಲು ಹಳಿ ಮೇಲೆ ನಿಂತುಕೊಂಡು ರೀಲ್ಸ್ ಮಾಡುತ್ತಿದ್ದರು.

    ಈ ವೇಳೆ ರೈಲು ಬಂದಿದ್ದು, ಓರ್ವ ಬಾಲಕ ರೈಲ್ವೆ ಬ್ರಿಡ್ಜ್‌ನಿಂದ ಕೆಳಗೆ ಹಾರಿದ್ದರೆ, ಮತ್ತಿಬ್ಬರು ಬಾಲಕರು ಪ್ರಾಣ ಕಳೆದುಕೊಂಡಿದ್ದಾರೆ. ಸಾವಿಗೂ 15 ನಿಮಿಷ ಮೊದಲು ಇವರು ಇನ್ಸ್ಟಾಗೆ ರೀಲ್ಸ್ ಅಪ್‌ಲೋಡ್ ಮಾಡಿದ್ದರು.

    ಬಿಹಾರದ ಖಗರಿಯಾದಲ್ಲಿರುವ ರೈಲ್ವೆ ಬ್ರಿಡ್ಜ್‌ ಮೇಲೆ ನಿಂತುಕೊಂಡು ಬಾಲಕರಿಬ್ಬರು ರೀಲ್ಸ್ ಮಾಡುತ್ತಿದ್ದರು.

    ಈ ವೇಳೆ ರೈಲು ಬಂದಿದ್ದು, ಇಬ್ಬರು ಬಾಲಕರು ರೈಲಡಿಗೆ ಬಿದ್ದು ಪ್ರಾಣ ಬಿಟ್ಟರೆ ಮತ್ತೊಬ್ಬ ಬ್ರಿಡ್ಜ್‌ನಿಂದ ನರಿ ತೀರಕ್ಕೆ ಹಾರಿದ್ದು, ಆತನ ಪ್ರಾಣ ಉಳಿದಿದೆ ಆದ್ರೂ ಗಂಭೀರ ಗಾಯಗಳಾಗಿವೆ.

    ಮೃತ ಬಾಲಕರನ್ನು ಸೋನು ಹಾಗೂ ನಿತೀಶ್ ಎಂದು ಗುರುತಿಸಲಾಗಿದೆ. ಈ ಅನಾಹುತದಲ್ಲಿ ಪ್ರಾಣ ಉಳಿಸಿಕೊಂಡಿರುವ ಬಾಲಕ ಅಮನ್ ಘಟನೆ ಬಗ್ಗೆ ವಿವರಿಸಿದ್ದಾನೆ.

    ನಾನು, ಸೋನು ಹಾಗೂ ನಿತೀಶ್ ಮೂವರು ಹೊಸ ವರ್ಷದ ಅಂಗವಾಗಿ ಧಮರಾ ಘಾಟ್ ಸ್ಟೇಷನ್ ( ಬಳಿ ಇರುವ ಮಾ ಕ್ಯಾತ್ಯಾಯಿನಿ ದೇಗುಲಕ್ಕೆ ಹೋಗುತ್ತಿದ್ದೆವು.

    ಈ ವೇಳೆ ಪ್ರಮುಖ ರಸ್ತೆಯಲ್ಲಿ ಭಾರಿ ಜನಸಂದಣಿ ಇದ್ದಿದ್ದರಿಂದ ನಾವು ರೈಲ್ವೆ ಬ್ರಿಡ್ಜ್ ಮೇಲೆ ಹೋಗಲು ನಿರ್ಧರಿಸಿದೆವು.

    ಈ ನಡುವೆ ರೈಲ್ವೆ ಬ್ರಿಡ್ಜ್‌ನಲ್ಲೇ ಸೋನು ಹಾಗೂ ನಿತೀಶ್ ರೀಲ್ಸ್ ಮಾಡಲು ಮುಂದಾಗಿದ್ದಾರೆ ಎಂದು ಆತ ಹೇಳಿದ್ದಾನೆ.

    ಇದರ ಹೊರತಾಗಿ ಮೂರು ರೀಲ್ಸ್‌ಗಳನ್ನು ಸಾಂಗ್‌ ಜತೆ ಸೇರಿಸಿ ಈ ತರುಣರು ಇನ್ಸ್ಟಾಗ್ರಾಮ್‌ಗೆ ಅಪ್‌ಲೋಡ್ ಮಾಡಿದ್ದಾರೆ.

    ಆ ರೀಲ್ಸ್‌ಗಳಲ್ಲಿ 2022ರ ರ ಸ್ಟೇಟಸ್ ತೋರಿಸಿ 2023ರಲ್ಲಿ ಬದುಕಿರುವುದಾಗಿ ಹೇಳುತ್ತಾರೆ.

    ಅದಾಗಿ 15 ನಿಮಿಷದಲ್ಲಿ ಮತ್ತೆ ರೀಲ್ಸ್ ಮಾಡಲು ಮುಂದಾಗಿದ್ದಾರೆ.

    ಇದಾದ ಬಳಿಕ ಇನ್ನೊಂದು ಸೈಡ್‌ನಿಂದ ಅದೇ ಟ್ರ್ಯಾಕ್‌ನಲ್ಲಿ ರೈಲು ಬಂದಿದ್ದು, ದಟ್ಟ ಮಂಜಿನ ಕಾರಣದಿಂದ ಇವರಿಗೆ ರೈಲು ಬರುವುದು ಕಾಣಿಸಿಲ್ಲ.

    ಪರಿಣಾಮ ಸೋನು ಹಾಗೂ ನಿತೀಶ್  ರೈಲಡಿಗೆ ಬಿದ್ದಿದ್ದು, ನಾನು ರೈಲು ನೋಡಿ ಸೇತುವೆಯಿಂದ  ಕೆಳಗೆ ಹಾರಿದೆ ಎಂದು ಈ ಅನಾಹುತದಲ್ಲಿ ಬದುಕುಳಿದ ಅಮನ್ ಹೇಳಿದ್ದಾನೆ.

    ಮಗನ ಸಾವಿನ ಸುದ್ದಿ ಕೇಳಿದ ಸೋನು ತಾಯಿ ಚಂದನಾ ದೇವಿ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

    ಇಬ್ಬರು ಬಾಲಕರ ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಪೋಷಕರಿಗೆ ಹಸ್ತಾಂತರ ಮಾಡಲಾಗಿದೆ ಎಂದು ಮನ್ಸಿ ಪೊಲೀಸ್ ಸ್ಟೇಷನ್ ಮುಖ್ಯಸ್ಥ ನಿಲೇಶ್ ಕುಮಾರ್ ಹೇಳಿದ್ದಾರೆ.

    ಒಟ್ಟಿನಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಲೈಕ್ಸ್ ಕಾಮೆಂಟ್ ಹಿಂದೆ ಬಿದ್ದಿರುವ ಯುವ ಸಮೂಹ ಇದಕ್ಕಾಗಿ ತಮ್ಮ ಪ್ರಾಣದ ಹಂಗನ್ನು ತೊರೆದು ಸಾಹಸ ಮಾಡಲು ಹೋಗುತ್ತಿದ್ದಾರೆ. ಇದರಿಂದ ಮಕ್ಕಳನ್ನು ಕಳೆದುಕೊಂಡು ಪೋಷಕರು ಅಳುವಂತಾಗಿದೆ.

    DAKSHINA KANNADA

    ಬೆಂ*ಕಿಗೆ ಆಹುತಿಯಾದ ಹಡಗಿನಿಂದ ಅಪಾಯವಿಲ್ಲ, ಆತಂಕ ಬೇಡ : ಜಿಲ್ಲಾಧಿಕಾರಿ ಮುಲೈ ಮುಗಿಲನ್ ಸ್ಪಷ್ಟನೆ

    Published

    on

    ಮಂಗಳೂರು : ಮಂಗಳೂರು ಕರಾವಳಿಯ ಸಮುದ್ರದಲ್ಲಿ ಬೆಂ*ಕಿಗೆ ಆಹುತಿಯಾದ ವಿದೇಶಿ ಹಡಗಿನಿಂದ ಮಂಗಳೂರು ಕರಾವಳಿಗೆ ಯಾವುದೇ ಆತಂಕ ಇಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟ ಪಡಿಸಿದ್ದಾರೆ.

    ಜುಲೈ 19 ರಂದು ಗುಜರಾತ್‌ನಿಂದ ಕೊಲೊಂಬೋಕ್ಕೆ ತೆರಳುತ್ತಿದ್ದ ಸರಕು ಸಾಗಟದ ಹಡುಗು ಬೆಂ*ಕಿಗೆ ಆಹುತಿಯಾಗಿತ್ತು. ತಕ್ಷಣ ಕೋಸ್ಟ್‌ಗಾರ್ಡ್ ತಂಡ ನಿರಂತರ ನಲುವತ್ತು ಗಂಟೆ ಪ್ರಯತ್ನ ನಡೆಸಿ ಬೆಂಕಿ ನಂದಿಸುವ ಕೆಲಸವಾಗಿತ್ತು. ಬಳಿಕ ಹಡಗನ್ನು ಮಂಗಳೂರು ಕರಾವಳಿಯ 30 ನಾಟಿಕಲ್ ದೂರದಲ್ಲಿ ನಿಲ್ಲಿಸಲಾಗಿತ್ತು. ಇದರಿಂದ ತೈಲ ಸೋರಿಕೆ ಆಗುವ ಆತಂಕವನ್ನು ಹಲವರು ವ್ಯಕ್ತಪಡಿಸಿದ್ದರು.

    ಇದನ್ನೂ ಓದಿ : 5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    ಹಡಗು ಮುಳುಗಡೆಯಾಗುವ ಭೀತಿ ಇದ್ದು ಹಾಗಾದಲ್ಲಿ ಹಡಗಿನಲ್ಲಿರುವ ತೈಲ ಸೋರಿಕೆ ಆಗಬಹುದು ಎಂದು ಸುದ್ದಿಯಾಗಿತ್ತು. ಆದ್ರೆ, ಈ ವಿಚಾರವಾಗಿ ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು, ಅಂತಹ ಯಾವುದೇ ಅಪಾಯ ಇಲ್ಲ ಎಂದು ಹೇಳಿದ್ದಾರೆ. ಅಂತಹ ಅವ*ಘಡ ನಡೆದಲ್ಲಿ ಅದನ್ನು ಎದುರಿಸಲು ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಜಿಲ್ಲಾಡಳಿತ ಹಾಗೂ ಕೋಸ್ಟ್‌ಗಾರ್ಡ್‌ ಮತ್ತು ಕರಾವಳಿ ಕಾವಲು ಪಡೆ ಸನ್ನದ್ಧವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

    Continue Reading

    kerala

    5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    Published

    on

    ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.

    ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.

    ಆನ್‌ ಲೈನ್ ಗೇಮಿಂಗ್‌ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?

    ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
    ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.

    Continue Reading

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    LATEST NEWS

    Trending