Connect with us

    LATEST NEWS

    ‘ಐ ಲವ್ ಯು’ ಹೇಳುವ ಬದಲು ಜಸ್ಟ್ ಹೀಗೆ ಮಾಡಿ ಸಾಕು …. ಸಂಗಾತಿ ಫುಲ್ ಫಿದಾ !!

    Published

    on

    ಮಂಗಳೂರು : ಈಗಿನ ಕಾಲದಲ್ಲಿ ಟೈಮ್ ಪಾಸ್‌ಗಾಗಿಯೇ ಲವ್ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲಿ ಎಲ್ಲರ ಮುಂದೆ ಐ ಲವ್ ಯು ಹೇಳಿದರೆ ಅಥವಾ ದಿನಕ್ಕೆ ನೂರಾರು ಸಲ ಐ ಲವ್ ಯು ಎಂದು ಹೇಳಿದರೆ ಪ್ರೀತಿಯಿದೆ ಎಂದು ಸಾಬಿತಾಗುವಂತೆ ಮಾಡುತ್ತಾರೆ.ಪ್ರೀತಿ ಹೇಳಿ ಕೇಳಿ ಹುಟ್ಟಲ್ಲ, ನಿಜವಾದ ಪ್ರೀತಿಗೆ ಕೊನೆಯಿಲ್ಲ. ಪದೇ ಪದೆ ಪ್ರೇಮಿಗೆ ಅಥವಾ ಸಂಗಾತಿಗೆ ಐ ಲವ್ ಯು ಎಂದು ಹೇಳಲು ಸಂಕೋಚವಾಗುತ್ತಿದ್ದರೆ ಈ ರೀತಿಯಾಗಿ ಪ್ರೀತಿ ವ್ಯಕ್ತಪಡಿಸಿ ಸಂಬಂಧವನ್ನು ಗಟ್ಟಿಗೊಳಿಸಿಕೊಳ್ಳಿ.


    ಪ್ರೀತಿ ಎಂಬುವುದು ಮಧುರವಾದ ಭಾವನೆ. ಆದರೆ ಈಗಿನ ಕಾಲದಲ್ಲಿ ಪರಿಶುದ್ಧವಾಗಿ ಪ್ರೀತಿಸೋರು ಸಿಗೋದು ಕಷ್ಟ. ಪ್ರೀತಿಗೆ ಗ್ಯಾರಂಟಿಯೇ ಇರುವುದಿಲ್ಲ. ಪ್ರೀತಿಸುತ್ತೇನೆ ಎಂದು ಹೇಳುವ ಬದಲು ಈ ಟ್ರಿಕ್ಸ್ ಬಳಸಿ ಪ್ರೀತಿ ವ್ಯಕ್ತಪಡಿಸಬಹುದು.

    ಸಂಗಾತಿಯ ಪುಟ್ಟ ಪುಟ್ಟ ವಿಷಯಕ್ಕೂ ಆಧ್ಯತೆ ನೀಡಿ :
    ಪ್ರೇಮ ಸಂಬಂಧದಲ್ಲಿ ಅಥವಾ ದಾಂಪತ್ಯ ಜೀವನದಲ್ಲಿ ಮಾಡುವ ದೊಡ್ಡ ತಪ್ಪುಗಳಲ್ಲಿ ಇದು ಒಂದು. ನಮ್ಮವರು ಎನ್ನಿಸಿಕೊಂಡವರ ಸಣ್ಣ ಪುಟ್ಟ ವಿಷಯಗಳನ್ನು ನಿರ್ಲಕ್ಷಿಸುವುದು. ಆದರೆ ಪ್ರಾರಂಭದಲ್ಲಿ ಇದೇನು ಇಷ್ಟು ಸಣ್ಣ ವಿಷಯವೆಂದೆನಿಸಬಹುದು. ಆದರೆ ಈ ಸಣ್ಣಸಣ್ಣ ವಿಷಯಗಳೇ ಇಬ್ಬರೂ ವ್ಯಕ್ತಿಗಳ ನಡುವಿನ ಬಾಂಧವ್ಯವನ್ನು ಗಟ್ಟಿಗೊಳಿಸುತ್ತದೆ. ಹೀಗಾಗಿ ಸಂಗಾತಿಯ ಸಣ್ಣ ಪುಟ್ಟ ವಿಷಯಗಳತ್ತ ಹೆಚ್ಚು ಗಮನ ಕೊಡುವ ಮೂಲಕ ಪ್ರೀತಿಯನ್ನು ವ್ಯಕ್ತಪಡಿಸಬಹುದು.

    ಸದಾ ಪ್ರೀತಿಯ ಅಪ್ಪುಗೆಯಿರಲಿ :
    ಸಂಗಾತಿಗಳಿಬ್ಬರೂ ಐಲವ್ ಯು ಎಂದು ಹೇಳಲೇ ಬೇಕೆಂದೇನಿಲ್ಲ. ಆದರೆ ದೀರ್ಘವಾದ ಅಪ್ಪುಗೆಯು ಕೂಡ ಪ್ರೀತಿಯಿದೆ ಎನ್ನುವುದನ್ನು ವ್ಯಕ್ತಪಡಿಸುತ್ತದೆ. ಸಂಗಾತಿಯ ಮಾತು ಕೇಳುವಾಗ ಅಪ್ಪುಗೆಯನ್ನು ನೀಡಿ ಸಂಬಂಧವನ್ನು ಗಟ್ಟಿಗೊಳಿಸಿಕೊಳ್ಳಿ.

    ಸಂಗಾತಿಗಾಗಿ ಸಮಯ ಮೀಸಲಿಡಿ :
    ಯಾವುದೇ ಸಂಬಂಧವಿರಲಿ ಸಮಯಕ್ಕಿಂತ ಮತ್ತೊಂದು ಅಮೂಲ್ಯವಾದ ವಸ್ತುವಿಲ್ಲ. ನಮ್ಮ ಪ್ರೀತಿಯನ್ನು ವ್ಯಕ್ತಪಡಿಸುವ ವಿಧಾನಗಳಲ್ಲಿ ಸಮಯ ನೀಡುವುದು ಕೂಡ ಒಂದು. ಇಬ್ಬರೂ ಜೊತೆಯಾಗಿ ಕಾಲ ಕಳೆಯಬೇಕು. ಸಂಗಾತಿಯ ಬೇಕು ಬೇಡಗಳ ಬಗ್ಗೆ ಸ್ಪಷ್ಟತೆಯಿರಬೇಕು.

    ಮಚ್ಚುಗೆ ವ್ಯಕ್ತಪಡಿಸುತ್ತಿರಿ :
    ಸಂಗಾತಿಗಳಿಬ್ಬರೂ ಐಲವ್ ಯು ಹೇಳದೇನೇ ಮೆಚ್ಚುಗೆಯ ಮಾತುಗಳಿಂದ ಒಬ್ಬರು ಇನ್ನೊಬ್ಬರ ಮನಸ್ಸನ್ನು ಗೆಲ್ಲಬಹುದು. ನಿಮ್ಮವರು ಯಾವುದೇ ಕೆಲಸವು ನನ್ನ ಕೈಯಲ್ಲಿ ಆಗುವುದಲ್ಲ ಎಂದು ಕುಳಿತಿದ್ದಾಗ ಅವರಿಗೆ ಧೈರ್ಯ ತುಂಬಿ ಆ ಕೆಲಸದಲ್ಲಿ ತೊಡಗಿ ಕೊಳ್ಳುತ್ತವೆ. ನಮ್ಮ ಮಾತು ನಮ್ಮವರ ಮೇಲೆ ಎಷ್ಟು ಪ್ರೀತಿಯಿದೆ ಎನ್ನುವುದನ್ನು ಅರ್ಥ ಮಾಡಿಸುತ್ತದೆ.

    LATEST NEWS

    ಉಡುಪಿ: ಬೈಂದೂರಿನ ಒತ್ತಿನೆಣೆ ತಿರುವಿನಲ್ಲಿ ಗುಡ್ಡ ಕುಸಿತ

    Published

    on

    ಉಡುಪಿ: ಬೈಂದೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿಯ ಒತ್ತಿನೆಣೆ ತಿರುವಿನಲ್ಲಿ ಗುಡ್ಡದ ಮಣ್ಣು ಕುಸಿದ ಘಟನೆ ನಡೆದಿದೆ. ಕಳೆದ ಕೆಲವು ದಿನಗಳಿಂದ ಅಲ್ಲಲ್ಲಿ ಮಳೆ ಸುರಿಯುತ್ತಿದ್ದು, ರಾತ್ರಿ ಅಧಿಕ ಮಳೆ ಸುರಿದ ಪರಿಣಾಮ ಗುಡ್ಡ ಕುಸಿತ ಸಂಭವಿಸಿದೆ.


    ಗುಡ್ಡದ ಮೇಲ್ಭಾಗದಲ್ಲಿ ಮಣ್ಣು ಅಪಾಯಕಾರಿ ಸ್ಥಿತಿಯಲ್ಲಿದೆ. ಕೆಲವು ತಿಂಗಳ ಹಿಂದೆ ಅಗ್ನಿಶಾಮಕ ವಾಹನದ ಮೂಲಕ ನೀರು ಸಿಂಪಡಿಸಿ ಕುಸಿಯುವ ಭೀತಿಯಲ್ಲಿರುವ ಗುಡ್ಡದ ಮಣ್ಣನ್ನು ಸಮತಟ್ಟು ಮಾಡಲಾಗಿತ್ತು. ಈ ಹಿಂದೆಯೂ ಈ ಭಾಗದಲ್ಲಿ ಗುಡ್ಡ ಕುಸಿಯುವ ಸಂಭವವಿದ್ದಾಗ ಮಣ್ಣು ತೆರವುಗೊಳಿಸಿ ಮುಂಜಾಗ್ರತೆ ವಹಿಸಲಾಗಿತ್ತು. ಆದರೆ ಕಳೆದೆರಡು ದಿನದಿಂದ ಮಳೆಯ ಪ್ರಮಾಣ ಅಧಿಕವಾದ ಕಾರಣ ಗುಡ್ಡದ ಮಣ್ಣು ಕುಸಿದಿದೆ.

    ಭೂ ಕುಸಿತದಿಂದ ಚರಂಡಿಗೆ ಬಿದ್ದ ಮಣ್ಣನ್ನು ಜೆಸಿಬಿ ಮೂಲಕ ತೆರವು ಮಾಡಲಾಗಿದೆ. ಗುಡ್ಡದ ಮಣ್ಣು ಕುಸಿತದಿಂದ ಹೆದ್ದಾರಿ ಸಂಚಾರಕ್ಕೆ ಯಾವುದೇ ತೊಂದರೆಯಾಗಿಲ್ಲ. ಸ್ಥಳಕ್ಕೆ ತೆರಳಿದ ಐಆರ್‌ಬಿ ಅಧಿಕಾರಿಗಳು ಮಣ್ಣು ತೆರವುಗೊಳಿಸಿ ಮುಂಜಾಗ್ರತ ಕ್ರಮ ಕೈಗೊಂಡಿದ್ದಾರೆ. ಒತ್ತಿನೆಣೆ ತಿರುವಿನ ರಾಘವೇಂದ್ರ ಮಠದ ಬಳಿ ಕುಸಿತ ಸಂಭವಿಸುವ ಆತಂಕ ಇರುವ ಕಾರಣ ಹೆದ್ದಾರಿ ಇಲಾಖೆ ಮತ್ತು ಐಆರ್‌ಬಿ ಕಂಪೆನಿ ಪ್ಲಾಸ್ಟರಿಂಗ್‌ ಮೂಲಕ ಸೂಕ್ತ ಮುನ್ನೆಚ್ಚರಿಕೆ ಕೈಗೊಂಡಿದೆ.

    ಉತ್ತರ ಕನ್ನಡದ ಶಿರೂರು ಗುಡ್ಡ ಕುಸಿತ ಬಳಿಕ ದಿಲ್ಲಿಯಿಂದ ಹಿರಿಯ ಭೂ ವಿಜ್ಞಾನಿಗಳು ಈ ಪ್ರದೇಶಗಳಿಗೆ ಭೇಟಿ ನೀಡಿದ್ದರು. ಇದರ ಹೊರತಾಗಿ, ಸಮೀಪದಸೋಮೇಶ್ವರ ಗುಡ್ಡ ಕೂಡಾ ಮಳೆಯ ಅಬ್ಬರದಿಂದಾಗಿ ಕುಸಿಯುತ್ತಿದೆ.ಗುಡ್ಡ ಭಾಗದಲ್ಲಿ ಖಾಸಗಿ ವ್ಯಕ್ತಿಗಳು ರೆಸಾರ್ಟ್‌ ನಿರ್ಮಿಸಲು ಅನಧಿಕೃತವಾಗಿ ರಸ್ತೆ ನಿರ್ಮಿಸಿದ ಕಾರಣ ಮಳೆಗಾಲದಲ್ಲಿ ಗುಡ್ಡದ ಮಣ್ಣು ನೀರಿನಲ್ಲಿ ಕೊಚ್ಚಿಹೋಗಿ ಆತಂಕ ಉಂಟು ಮಾಡಿತ್ತು.

    ಸ್ಥಳಕ್ಕೆ ಜಿಲ್ಲಾಧಿಕಾರಿಗಳು, ಉಸ್ತುವಾರಿ ಸಚಿವರು ಭೇಟಿ ನೀಡಿ ಪರಿಶೀಲಿಸಿದ್ದರು. ಆದರೆ ಇದುವರಗೆ ಯಾವುದೆ ಕ್ರಮ ಕೈಗೊಂಡಿಲ್ಲ. ಎರಡು ದಿನಗಳ ಹಿಂದೆ ಮಳೆಗೆ ಗುಡ್ಡ ಇನ್ನಷ್ಟು ಕುಸಿದಿದ್ದು, ಗುಡ್ಡದ ಮೇಲ್ಭಾಗದಲ್ಲಿರುವ ಕ್ಷಿತಿಜ ನೇಸರ ಧಾಮ ಕೂಡಾ ಅಪಾಯದಲ್ಲಿದೆ.ಈ ಬಗ್ಗೆ ಸ್ಥಳೀಯರು ಹಲವು ಬಾರಿ ಸಂಬಂಧಪಟ್ಟವರ ಗಮನಕ್ಕೆ ತಂದಿದ್ದರೂ ಇಲಾಖೆ ಗಂಭೀರವಾಗಿ ಪರಿಗಣಿಸಿಲ್ಲ ಎಂದು ಸ್ಥಳೀಯ ಜನರು ತಿಳಿಸಿದ್ದಾರೆ.

    Continue Reading

    DAKSHINA KANNADA

    ದೀಪಾವಳಿಗೆ ಬಂಪರ್ ಆಫರ್; ಮಂಗಳೂರು – ಬೆಂಗಳೂರು ವಿಶೇಷ ರೈಲು

    Published

    on

    ಮಂಗಳೂರು: ಬೆಳಕಿನ ಹಬ್ಬ ದೀಪಾವಳಿಯ ಸಂದರ್ಭ ದೀರ್ಘ ರಜೆಯ ಕಾರಣ ಬೆಂಗಳೂರು – ಮಂಗಳೂರು ಮಧ್ಯೆ ಓಡಾಡುವವರ ಸಂಖ್ಯೆ ಹೆಚ್ಚಿರುತ್ತದೆ. ಟಿಕೇಟ್ ರೇಟ್ ಕೇಳಿಯೇ ಕಂಗಾಲಾಗುತ್ತಾರೆ. ಅದರ ಮಧ್ಯೆಯೂ ಸೀಟ್ ಭರ್ತಿಯಾಗಿದೆ ಎಂದಾಗ ಆತಂಕಕ್ಕೊಳಗಾಗುತ್ತಾರೆ. ಹಾಗಾಗಿ ಅಂತಹವರ ಭಾರ ಕಡಿಮೆ ಮಾಡುವ ನಿಟ್ಟಿನಲ್ಲಿ ಯಶವಂತಪುರ – ಮಂಗಳೂರು ಜಂಕ್ಷನ್‌- ಯಶವಂತಪುರ ನಡುವೆ ವಿಶೇಷ ರೈಲು ಓಡಿಸಲು ನೈಋತ್ಯ ರೈಲ್ವೇ ನಿರ್ಧರಿಸಿದ್ದು, ಅ.30 ಮತ್ತು 31ರಂದು ಈ ರೈಲುಗಳು ಸಂಚರಿಸಲಿವೆ.


    ನಂ.06565 ಯಶವಂತಪುರ-ಮಂಗಳೂರು ಜಂಕ್ಷನ್‌ ವಿಶೇಷ ರೈಲು ಅ.30ರಂದು ರಾತ್ರಿ 11.50ಕ್ಕೆ ಯಶವಂತಪುರದಿಂದ ಹೊರಡಲಿದ್ದು, ಅ.31ರಂದು ಮಧ್ಯಾಹ್ನ 11.45ಕ್ಕೆ ಮಂಗಳೂರು ಜಂಕ್ಷನ್‌ ತಲುಪಲಿದೆ. ನಂ.06566 ಮಂಗಳೂರು ಜಂಕ್ಷನ್‌ – ಯಶವಂತಪುರ ವಿಶೇಷ ರೈಲು ಅ.31ರಂದು ಮಧ್ಯಾಹ್ನ 1 ಗಂಟೆಗೆ ಮಂಗ ಳೂರು ಜಂಕ್ಷನ್‌ನಿಂದ ಹೊರಡಲಿದ್ದು, ರಾತ್ರಿ 9.45ಕ್ಕೆ ಬೆಂಗಳೂರು ತಲುಪಲಿದೆ.
    ಕುಣಿಗಲ್‌, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್‌, ಕಬಕ ಪುತ್ತೂರು, ಬಂಟ್ವಾಳ ನಿಲ್ದಾಣದಲ್ಲಿ ನಿಲುಗಡೆಯಾಗಲಿದೆ. ರೈಲು ಒಟ್ಟು 21 ಬೋಗಿ ಸಂಯೋಜನೆಯನ್ನು ಒಳಗೊಂಡಿದೆ.

    ಪ್ರಯಾಣಿಕರ ಬೇಡಿಕೆ :
    ಕಳೆದ ವರ್ಷ ದಸರಾ, ದೀಪಾವಳಿ ಸಂದರ್ಭದಲ್ಲಿ ಮಂಗಳೂರು – ಬೆಂಗಳೂರು – ಮೈಸೂರು ನಡುವೆ ವಿಶೇಷ ರೈಲು ಓಡಾಟ ನಡೆಸಿತ್ತು. ಈ ಬಾರಿ ದಸರಾದಲ್ಲಿ ನಂ.06569 ಯಶವಂತಪುರ – ಕಾರವಾರ ವಿಶೇಷ ಎಕ್ಸ್‌ಪ್ರೆಸ್‌ ರೈಲು ಮತ್ತು ನಂ. 06570 ಕಾರವಾರ – ಮೈಸೂರು ವಿಶೇಷ ಎಕ್ಸ್‌ಪ್ರೆಸ್‌ ರೈಲು ವಯಾ ಪಡೀಲ್‌ ಮೂಲಕ ಸಂಚರಿಸಿದೆ. ಇದರಿಂದ ಮಂಗಳೂರಿಗೆ ಬರುವವರಿಗೆ ಹೆಚ್ಚಿನ ಲಾಭವಾಗಿಲ್ಲ. ದೀಪಾವಳಿಗಾದರೂ ಮಂಗಳೂರು – ಬೆಂಗಳೂರು ನಡುವೆ ಹೆಚ್ಚುವರಿ ರೈಲು ಓಡಲಿ ಎನ್ನುವುದು ರೈಲ್ವೇ ಹೋರಾಟಗಾರರ ಆಗ್ರಹವಾಗಿತ್ತು.

    ಸಂಸದರಿಂದ ಮನವಿ ಪತ್ರ:
    ವಿಶೇಷ ರೈಲಿಗೆ ಬೇಡಿಕೆ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಸಂಸದ ಕ್ಯಾ| ಬ್ರಿಜೇಶ್‌ ಚೌಟ ಅವರು ನೈಋತ್ಯ ರೈಲ್ವೇ ಮಹಾ ಪ್ರಬಂಧಕರಿಗೆ ಪತ್ರ ಬರೆದು, ದೀಪಾವಳಿ ಹಬ್ಬಕ್ಕೆ ಬೆಂಗಳೂರು – ಮಂಗಳೂರು ನಡುವೆ ವಿಶೇಷ ರೈಲು ಓಡಿಸುವಂತೆ ಮನವಿ ಮಾಡಿದ್ದರು. ಬೆಂಗಳೂರಿನಿಂದ ಊರಿಗೆ ಬರುವ ಸಾವಿರಾರು ಪ್ರಯಾಣಿಕರಿಗೆ ಈ ರೈಲಿನಿಂದ ಅನುಕೂಲವಾಗಲಿದೆ. ಆದ್ದರಿಂದ ಆದ್ಯತೆ ಮೇರೆಗೆ ರೈಲನ್ನು ಓಡಿಸಲು ಕ್ರಮ ಕೈಗೊಳ್ಳಬೇಕು. ಇದರಿಂದ ರೈಲ್ವೇ ಇಲಾಖೆಗೂ ಹೆಚ್ಚಿನ ಲಾಭವಾಗಲಿದೆ ಎಂದು ಸಂಸದರು ಪತ್ರದಲ್ಲಿ ವಿವರಿಸಿದ್ದರು. ಪ್ರಯಾಣಿಕರು, ಹೋರಾಟಗಾರರು ಹಾಗೂ ಜನ ಪ್ರತಿನಿಧಿಗಳ ಬೇಡಿಕೆ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೇ ವಿಶೇಷ ರೈಲು ಓಡಾಟಕ್ಕೆ ಮುಂದಾಗಿದೆ.

    Continue Reading

    LATEST NEWS

    ಶೋಭಾ ಕರಂದ್ಲಾಜೆ ಚಿಕನ್ ಆ್ಯಂಡ್ ಮಟನ್ ಶಾಪ್; ಪೋಟೋ ವೈರಲ್.!

    Published

    on

    ಮಂಗಳೂರು/ಕೊಪ್ಪಳ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಅಪ್ಪಟ ಅಭಿಮಾನಿಯೋರ್ವ ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದಲ್ಲಿ ಅವರ ಹೆಸರಿನಲ್ಲಿ ಚಿಕನ್ ಆ್ಯಂಡ್ ಮಟನ್ ಅಂಗಡಿ ಓಪನ್‌ ಮಾಡಿದ್ದಾರೆ.

    ಯುವಕ ಖಾಧೀರ್ ಕಲಾಲ ಎಂಬುವರು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಅಪ್ಪಟ ಅಭಿಮಾನಿಯಾಗಿದ್ದು, ಅವರ ಹೆಸರಿನಲ್ಲಿ ಈ ಅಂಗಡಿ ತೆರೆದಿದ್ದಾರೆ.

    ಶೋಭಾ ಕರಂದ್ಲಾಜೆ ಮೇಲಿನ ಅಭಿಮಾನಕ್ಕೆ ಈ ರೀತಿ ಹೆಸರು ಇಟ್ಟಿದ್ದೇನೆ ಎಂದು ಖಾಧೀರ್‌ ಕಲಾಲ ತಿಳಿಸಿದ್ದಾರೆ. ‌2008ರಲ್ಲಿ ಚುನಾವಣೆಗೆ ಪ್ರಚಾರಕ್ಕಾಗಿ ಪಟ್ಟಣಕ್ಕೆ ಆಗಮಿಸಿದ್ದ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಆಗಿದ್ದರು. ಅವರ ರಾಜಕೀಯ ಮಾತುಗಳನ್ನು ಕೇಳಿ ಅಭಿಮಾನಿ ಆಗಿದ್ದೇನೆ ಎಂದಿದ್ದಾರೆ.

    ಚಿಕನ್‌ ಆ್ಯಂಡ್ ಮಟನ್‌ ಅಂಗಡಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೆಸರು ಹಾಕಿಸಿರುವ ವಿಚಾರ ಸಾಕಷ್ಟು ವೈರಲ್ ಆಗಿದೆ.

    ಅಪ್ಪಟ ಅಭಿಮಾನಿ ಆಗಿರುವ ಖಾಧೀರ್ ಕಲಾಲ್ ಕಳೆದ 5 ವರ್ಷಗಳ ಹಿಂದೆ ಶೋಭಾ ಕರಂದ್ಲಾಜೆ ಅವರ ಪೋಟೋವನ್ನು ಕೈಮೇಲೆ ಟ್ಯಾಟೋ ಹಾಕಿಸಿಕೊಂಡಿದ್ದಾರೆ.

    ಈಗ ಹೊಸದಾಗಿ ಪ್ರಾರಂಭಿಸಿರುವ ಅಂಗಡಿಗೆ ಶೋಭಾ ಕರಂದ್ಲಾಜೆ ಮಟನ್ ಆ್ಯಂಡ್ ಚಿಕನ್ ಸೆಂಟರ್ ಹೆಸರು ಹಾಕಿಸಿದ್ದಾರೆ.

    Continue Reading

    LATEST NEWS

    Trending