ಸಾಮಾಜಿಕ ಜಾಲತಾಣದಲ್ಲಿ ಹಿಂದೂ ದೇವತೆಗಳಿಗೆ ಅವಮಾನ: ಅನ್ಯಕೋಮಿನ ಯುವಕನ ಬಂಧನಕ್ಕೆ ಆಗ್ರಹ ..!
ಮಂಗಳೂರು : ಹಿಂದೂ ದೇವಿ ದೇವತೆಗಳನ್ನು ಅವಹೇಳನ ಶಬ್ದಗಳಲ್ಲಿ ನಿಂದಿಸುವ ಮೂಲಕ ಕೋಮು ಗಲಭೆ ವಾತಾವರಣ ಸೃಷ್ಟಿ ಮಾಡಿರುವ ರಿಜ್ವಾನ್ ಖಾನ್ ಎಂಬಾತನನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ವಿಟ್ಲ ಆರಕ್ಷಕ ಠಾಣೆಗೆ ಪುತ್ತೂರು ಹಿಂದೂ ಜಾಗರಣ ವೇದಿಕೆ ವತಿಯಿಂದ ದೂರು ನೀಡಲಾಯಿತು.
ಆರೋಪಿ ವಿರುದ್ಧ ಕೂಡಲೇ ಎಫ್ ಐ ಆರ್ ದಾಖಲು ಮಾಡಿ, ಆತನನ್ನು ಬಂಧಿಸಿ ಕ್ರಮ ಕೈಗೊಳ್ಳುವಂತೆ ಸಂಘಟನೆ ಸದಸ್ಯರು ಒತ್ತಾಯಿಸಿದ್ದಾರೆ. ನಿಯೋಗದಲ್ಲಿ ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲೆ ಸಂಪರ್ಕ ಪ್ರಮುಖ್ ನರಸಿಂಹ ಮಾಣಿ, ವಿಟ್ಲ ತಾಲ್ಲೂಕು ಉಪಾಧ್ಯಕ್ಷ ರಾಜೇಶ್ ಕರೋಪಾಡಿ, ಕಾರ್ಯದರ್ಶಿ ಹರ್ಷೇಂದ್ರ ರೈ ಹಾಗೂ ಚೇತನ್ ಕಡಂಬು ಉಪಸ್ಥಿತರಿದ್ದರು..