DAKSHINA KANNADA
ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ರಾಂಬೋ ಸರ್ಕಸ್- ಜನರನ್ನು ಬೆರಗುಗೊಳಿಸುವ ವಿಸ್ಮಯ ಪ್ರದರ್ಶನ..!
ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ರಾಂಬೋ ಸರ್ಕಸ್ ಗೆ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಚಾಲನೆ ನೀಡಿದರು.
ಮಂಗಳೂರು: ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ರಾಂಬೋ ಸರ್ಕಸ್ ಗೆ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಸೆ.21ರ ಗುರುವಾರದಂದು ಚಾಲನೆ ನೀಡಿದರು.
ಮಂಗಳೂರಿನ ಡಾ ಟಿ ಎಂ ಎ ಪೈ ಸೆಂಟರ್ನ ಹವಾನಿಯಂತ್ರಿತ ಆಡಿಟೋರಿಯಂನಲ್ಲಿ ಮೊದಲ ಬಾರಿಗೆ ಸರ್ಕಸ್ ಪ್ರದರ್ಶನಗೊಳ್ಳುತ್ತಿದ್ದು, ಸೆ. 24ರವರೆಗೆ ರಾಂಬೋ ಸರ್ಕಸ್ನ ಬೆರಗುಗೊಳಿಸುವ ಪ್ರದರ್ಶನ ನಡೆಯಲಿದೆ.
ಸರ್ಕಸ್ನ ಮೊದಲ ಪ್ರದರ್ಶನ ಮಂಗಳೂರಿನ ಜನತೆಯ ಮನಸೂರೆಗೊಂಡಿದೆ.
ಬಳಿಕ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು ರಾಂಬೋ ಸರ್ಕಸ್ ಹೊಸ ಮಾದರಿಯಲ್ಲಿ ಮಂಗಳೂರಿನ ಜನತೆಯ ಹೃದಯಕ್ಕೆ ಲಗ್ಗೆ ಇಟ್ಟಿದೆ ಎಂದರು.
ಸರ್ಕಸ್ ತಂಡದ ಎಲ್ಲರಿಗೂ ಅವರು ಶುಭ ಹಾರೈಸಿದರು.
ಸರ್ಕಸ್ಗೆ ಮಂಗಳೂರಿನ ಜನತೆಯ ಬೆಂಬಲ ಖಂಡಿತಾ ನೀಡುತ್ತಾರೆ. ಕುಟುಂಬ ಸಮೇತ ಈ ಸರ್ಕಸ್ ವೀಕ್ಷಣೆ ಮಾಡಿರಿ ಎಂದರು.
ಜನತೆಯ ತಮ್ಮ ದಿನದ ಜಂಜಾಟಗಳನ್ನು ಮರೆತು ಈ ಸರ್ಕಸ್ ವೀಕ್ಷಣೆ ಮಾಡುವ ಮೂಲಕ ಅವರಿಗೆ ನಾವು ಸಹಕಾರ ನೀಡಬೇಕು ಎಂದರು.
ಮಂಗಳೂರು ಮೇಯರ್ ಸುಧೀರ್ ಶಟ್ಟಿ ಕಣ್ಣೂರು ಮಾತನಾಡಿ, 32 ವರ್ಷದ ಹಿಂದೆ ಆರಂಭಗೊಂಡ ರಾಂಬೋ ಸರ್ಕಸ್ ಇಂಡೋರ್ ಸರ್ಕಸ್ ಆಗಿ ಮೂಡಿ ಬಂದರೂ ಈ ಸಂಸ್ಥೆ ನಿತ್ಯನಿರಂತರವಾಗಿ ಪ್ರದರ್ಶನ ನೀಡುವ ಮೂಲಕ ಜನರ ಮನಗೆದ್ದಿದೆ.
60 ಸಿಬ್ಬಂದಿಗಳಿರುವ ಕಲಾವಿದರು ಈ ಪ್ರದರ್ಶನ ನೀಡುವುದು ಮಂಗಳೂರಿಗೆ ನಿಜವಾಗಲೂ ವೀಕ್ಷಣೆಗೆ ಸುವರ್ಣವಕಾಶ ಎಂದರು.
ರಾಂಬೋ ಸರ್ಕಸ್ನಲ್ಲಿ ಸೆ. 22ರಂದು 1, 4 ಮತ್ತು 7 ಗಂಟೆಗೆ ಮೂರು ಶೋ, ಸೆ. 23 ಮತ್ತು ಕೊನೆಯ ದಿನ 24ರಂದು ಬೆಳಿಗ್ಗೆ 11 ಗಂಟೆಗೆ, ಮಧ್ಯಾಹ್ನ 1, 4 ಮತ್ತು ಸಂಜೆ 7 ಗಂಟೆಗೆ ಹೀಗೆ 4 ಪ್ರದರ್ಶನಗಳು ಇರಲಿವೆ.
ಮೊದಲ ದಿನದ ಪ್ರದರ್ಶನ ಕಿಕ್ಕಿರಿದು ತುಂಬಿದ ಪ್ರೇಕ್ಷಕರಿಂದ ಪ್ರದರ್ಶಿಸಲ್ಪಟ್ಟಿದೆ.
ನಕ್ಕುನಗಿಸುವ ಜೋಕರ್ಗಳ ನಡುವೆ ಹಾಡು, ಮಿಮಿಕ್ರಿ, ಕಾಮಿಡಿ, ಪ್ರತಿಭಾನ್ವಿತ ಕಲಾವಿದರು ನೀಡುವ ರೋಮಾಂಚಕಾರಿ ಪ್ರದರ್ಶನ ವೀಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸುವಂತೆ ಮಾಡುತ್ತಿದೆ.
ಪ್ರತಿಯೊಂದು ಒಂದಕ್ಕಿಂತ ಒಂದು ವಿಭಿನ್ನ ಪ್ರದರ್ಶನವಾಗಿದ್ದು, ಕುಡ್ಲ ನಗರಿಯಲ್ಲಿ ಮಾಯಾ ಲೋಕವನ್ನೇ ತೆರೆದಿಟ್ಟಿದೆ.
ಕಾರ್ಯಕ್ರಮದಲ್ಲಿ ಕಾರ್ಪೋರೇಟರ್ ಶಶಿಕಲಾ ಕಾವ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಉದ್ಯಮಿ ಗಂಗಾಧರ್ , ರಾಂಬೋ ಸರ್ಕಸ್ ನ ಮಾಲಕರು, ಪಾಲುದಾರರು ಉಪಸ್ಥಿತರಿದ್ದರು.
DAKSHINA KANNADA
Sullia: ನದಿಗೆ ಸ್ನಾನಕ್ಕೆ ತೆರಳಿದ ವ್ಯಕ್ತಿ ಶವವಾಗಿ ಪತ್ತೆ..!
ಸುಳ್ಯ: ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸುಳ್ಯದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಎರಡನೇ ಮಣ್ಣಗೇರಿಯ ನಿವಾಸಿ ವೆಂಕಟರಮಣ ಎಂದು ಗುರುತಿಸಲಾಗಿದೆ.
ಸುಳ್ಯದಲ್ಲಿರುವ ಆರಂಬೂರು ಸೇತುವೆ ಬಳಿಯ ಪಯಸ್ವಿನಿ ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿಯು ಕಾಣೆಯಾಗಿದ್ದಾರೆ. ಬಳಿಕ ಅವರ ಹುಡುಕಾಟ ನಡೆಸಲಾಗಿದೆ. ಆದರೆ ಎಷ್ಟು ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ. ಆ ಕಾರಣದಿಂದ ಸುಳ್ಯದ ಪೈಚಾರ್ ನ ಮುಳುಗು ತಜ್ಞರ ತಂಡವು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಮೇಳಕ್ಕೆತ್ತುವಲ್ಲಿ ಯಶಸ್ವಿಯಾಗಿದೆ. ಸುಳ್ಯ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ
DAKSHINA KANNADA
Sullia: ಮದ್ಯ ಸೇವಿಸಿ ಅಡ್ಡಾದಿಡ್ಡಿ ವಾಹನ ಚಲಾವಣೆ- ಎಪಿಎಂಸಿ ಕಾರ್ಯದರ್ಶಿ ಅಮಾನತು
ಸುಳ್ಯ: ಮದ್ಯಪಾನ ಮಾಡಿ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಸರಕಾರಿ ವಾಹನ ಚಲಾಯಿಸಿದ ಪ್ರಕರಣದ ಆರೋಪಿ ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್ ಕುಮಾರ್ನನ್ನು ಅಮಾನತುಗೊಳಿಸಿ ಇಲಾಖೆ ಆದೇಶ ಹೊರಡಿಸಿದೆ.
ನವೀನ್ ಕುಮಾರ್ ಮಂಗಳವಾರ ರಾತ್ರಿ ಅರಂಬೂರು ಬಳಿ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ ಸರಕಾರಿ ಇಲಾಖೆಯ ನಾಮಫಲಕವಿರುವ ವಾಹನವನ್ನು ಅಪಾಯಕಾರಿಯಾಗಿ ಚಲಾಯಿಸಿದ್ದನೆಂದು ಆರೋಪಿಸಲಾಗಿದೆ. ಅಡ್ಡಾದಿಡ್ಡಿಯಾಗಿ ವಾಹನ ಚಲಾಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ವಾಹನವನ್ನು ಬೆನ್ನಟ್ಟಿ ಅಡ್ಡಗಟ್ಟಿ ವಿಚಾರಿಸಿದ್ದರು. ಈ ಸಂದರ್ಭ ತಾನು ಸುಳ್ಯ ಎಪಿಎಂಸಿ ಕಾರ್ಯದರ್ಶಿ, ನನ್ನದು ತಪ್ಪಾಯಿತು ಎಂದು ಕ್ಷಮೆ ಯಾಚಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಬುಧವಾರ ಎಪಿಎಂಸಿ ಕಾರ್ಯದರ್ಶಿಯವರನ್ನು ಅಮಾನತುಗೊಳಿಸಿ ಆದೇಶ ಮಾಡಲಾಗಿದೆ. ಬೆಳ್ತಂಗಡಿ ಎಪಿಎಂಸಿ ಕಾರ್ಯದರ್ಶಿ ರವೀಂದ್ರ ಅವರಿಗೆ ಸುಳ್ಯ ಎಪಿಎಂಸಿ ಪ್ರಭಾರ ವಹಿಸಲಾಗಿದೆ.
DAKSHINA KANNADA
ಕಟೀಲು ಕ್ಷೇತ್ರಕ್ಕೆ ಮಾಜಿ ಸಚಿವ, ಶಾಸಕ ಶ್ರೀರಾಮುಲು ಭೇಟಿ
ಕಿನ್ನಿಗೋಳಿ: ಪುರಾಣ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಮಾಜಿ ಸಚಿವ, ಶಾಸಕ ಶ್ರೀರಾಮುಲು ಭೇಟಿ ನೀಡಿದರು.
ದೇವಳದ ವತಿಯಿಂದ ಶ್ರೀ ರಾಮುಲು ಅವರನ್ನು ಗೌರವಿಸಲಾಯಿತು.
ಈ ಸಂದರ್ಭ ವೆಂಕಟರಮಣ ಆಸ್ರಣ್ಣ, ಸನತ್ ಕುಮಾರ್ ಶೆಟ್ಟಿ ಕೊಡೆತ್ತೂರುಗುತ್ತು ಉಪಸ್ಥಿತರಿದ್ದರು.
ಕ್ಷೇತ್ರದಲ್ಲಿ ಅವರು ಅನ್ನಪ್ರಸಾದವನ್ನು ಸ್ವೀಕರಿಸಿ ಸರಳತೆ ಮೆರೆದರು. ಬಳಿಕ ಕ್ಷೇತ್ರದ ಕುರಿತಂತೆ ಹೆಚ್ಚಿನ ಮಾಹಿತಿ ಪಡೆದುಕೊಂಡರು.
- bangalore4 days ago
ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ನಲ್ಲಿ ಎಂಟ್ರಿಯಾದ ಈ ಸ್ಪರ್ಧಿಗಳು ಯಾರು..?
- FILM4 days ago
ಆಲಿಯಾ ಭಟ್ ಡೀಫ್ ಫೇಕ್ ವಿಡಿಯೋ ವೈರಲ್ – ವಿಡಿಯೋ ನೋಡಿದ್ರಾ..?
- bangalore6 days ago
ಬೆಂಗಳೂರು ಕಂಬಳಕ್ಕೆ ಚಾಲನೆ ನೀಡಿದ ಅಶ್ವಿನಿ ಪುನಿತ್ ರಾಜ್ ಕುಮಾರ್
- DAKSHINA KANNADA7 days ago
Puttur: ಮಹಿಳೆಗೆ ಅಮಲು ಬರಿಸುವ ಪಾನೀಯ ಕುಡಿಸಿ ಅತ್ಯಾಚಾರ..!