DAKSHINA KANNADA
ಸಾರಾ ಅಬೂಬಕ್ಕರ್ ಗೆ ಅಂತಿಮ ಗೌರವ ಸಲ್ಲಿಸದೆ ಅಸಹಿಷ್ಣುತೆ ತೋರಲಾಗಿದೆ : ಸರಕಾರ, ಜಿಲ್ಲಾಡಳಿತ, ಜನಪ್ರತಿನಿಧಿಗಳ ನಡೆಗೆ ಗಣ್ಯರ ಖಂಡನೆ..!
ಮಂಗಳೂರು : ಕನ್ನಡದ ಪ್ರಖ್ಯಾತ ಬರಹಗಾರ್ತಿ ಸಾರಾ ಅಬೂಬಕ್ಕರ್ ಅವರು ನಿಧನ ಹೊಂದಿದ ಸಂದರ್ಭ ಸರಿಯಾದ ಗೌರವ ಸಲ್ಲಿಸದೆ ರಾಜ್ಯ ಸರಕಾರ ಹಾಗೂ ಜಿಲ್ಲಾಡಳಿತ ಕಡೆಗಣಿಸಿರುವುದ ಖೇದಕರ. ಸರಕಾರದ ನಡೆಯನ್ನು ಸಾಹಿತಿ, ಬುದ್ದಿ ಜೀವಿಗಳ ಕರಾವಳಿಯ ಸಮಾನ ಮನಸ್ಕರು ತೀವ್ರವಾಗಿ ಖಂಡಿಸಿದ್ದಾರೆ.
ಬಿ.ಎಂ.ರೋಹಿಣಿ, ಪ್ರೊ.ನರೇಂದ್ರ ನಾಯಕ್, ಟಿ.ಆರ್.ಭಟ್, ಚಂದ್ರಕಲಾ ನಂದಾವರ, ಪ್ರೊ. ಚಂದ್ರ ಪೂಜಾರಿ, ಪ್ರೊ.ಪಟ್ಟಾಭಿರಾಮ ಸೋಮಯಾಜಿ, ಎಂ.ದೇವದಾಸ್, ಬಿ.ಎಂ.ಹನೀಫ್, ವಾಸುದೇವ ಉಚ್ಚಿಲ, ಡಾ. ಬಿ.ಶ್ರೀನಿವಾಸ ಕಕ್ಕಿಲ್ಲಾಯ, ಗುಲಾಬಿ ಬಿಳಿಮಲೆ, ಪ್ರೊ.ಕೆ.ರಾಜೇಂದ್ರ ಉಡುಪ, ಮೋಹನ್ ಪಿ. ವಿ., ಐ.ಕೆ.ಬೊಳುವಾರು, ಯಶವಂತ ಮರೋಳಿ, ಮುನೀರ್ ಕಾಟಿಪಳ್ಳ, ಡಾ.ಕೃಷ್ಣಪ್ಪ ಕೊಂಚಾಡಿ, ಶ್ರೀನಿವಾಸ ಕಾರ್ಕಳ ಮತ್ತಿರರು ಒಳಗೊಂಡ ಜಂಟಿ ಹೇಳಿಕೆಯಲ್ಲಿ
ಸಾರಾ ಅಬೂಬಕ್ಕರ್ ಪ್ರಖ್ಯಾತ ಕತೆಗಾರರು, ಬರಹಗಾರರು ಎಂಬಲ್ಲಿಗೆ ಅವರ ಪ್ರಾಮುಖ್ಯತೆ ಮುಗಿಯುವುದಿಲ್ಲ.
ಕರ್ನಾಟಕದ ಮುಸ್ಲಿಂ ಸಮುದಾಯ ಕನ್ನಡದಲ್ಲಿ ಸಾಹಿತ್ಯ ಕೃಷಿ ನಡೆಸುವುದೇ ಅಪರೂಪವಾಗಿದ್ದ ಕಾಲಘಟ್ಟದಲ್ಲಿ ಆ ಸಮುದಾಯದ ಹೆಣ್ಣು ಮಗಳು ಕನ್ನಡ ಸಾಹಿತ್ಯ ಲೋಕಕ್ಕೆ ಪ್ರವೇಶ ಪಡೆದದ್ದು, ಸಮಾಜದ ಕಂದಾಚಾರ, ತನ್ನದೇ ಸಮುದಾಯದ ಹೆಣ್ಣು ಮಕ್ಕಳ ಸಂಕಟಗಳನ್ನು ಕತೆಯಾಗಿಸಿದ್ದು ಸಣ್ಣ ಸಾಧನೆಯೇನೂ ಅಲ್ಲ.
ಅಂತಹ ಬರವಣಿಗೆಗಳ ಕಾರಣಕ್ಕೆ ಅವರು ಎದುರಿಸಿದ ದಾಳಿ, ದಬ್ಬಾಳಿಕೆಗಳೂ ಸಣ್ಣದಲ್ಲ. ಬರವಣಿಗೆಯ ಜೊತೆಗೆ ಮಹಿಳಾಪರ ಹೋರಾಟಗಳಲ್ಲಿಯೂ ತೊಡಗಿಸಿಕೊಂಡ ಹೆಗ್ಗಳಿಕೆ ಸಾರಾ ಅವರದ್ದು.
ಅವರ ಕತೆ, ಕಾದಂಬರಿಗಳು ಕನ್ನಡ ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದ್ದು ಮಾತ್ರವಲ್ಲ, ಕನ್ನಡದ ಹಿರಿಮೆಯನ್ನು ಹೊರನಾಡಿನಲ್ಲಿಯೂ ಎತ್ತಿ ಹಿಡಿದಿದೆ.
ತನ್ನ ಸಾಧನೆಗಾಗಿ ಅವರು ಅರ್ಹವಾಗಿಯೇ ಹಲವು ಪ್ರತಿಷ್ಠಿತ ಪ್ರಶಸ್ತಿಗಳನ್ನು ಗಳಿಸಿದ್ದಾರೆ.
ಇಂತಹ ಗಣ್ಯ ಬರಹಗಾರ್ತಿ, ಲೇಖಕಿ ಅಗಲಿದ ಸಂದರ್ಭ ಸಹಜವಾಗಿಯೇ ಅವರಿಗೆ ಸರಕಾರಿ ಗೌರವಗಳು ಸಲ್ಲಬೇಕಿತ್ತು.
ಆದರೆ ಸರಕಾರದ ಯಾವುದೇ ಅಂತಿಮ ಗೌರವಗಳು ಅವರಿಗೆ ಸಲ್ಲಲಿಲ್ಲ. ಸರಕಾರದ, ಜಿಲ್ಲಾಡಳಿತದ ಪ್ರತಿನಿಧಿಗಳು ಅಧಿಕೃತ ಗೌರವ ಸಲ್ಲಿಸಲಿಲ್ಲ.
ಉಸ್ತುವಾರಿ ಸಚಿವರು, ಶಾಸಕರುಗಳು ನಗರದಲ್ಲೇ ಇದ್ದರೂ ಸಾರಾ ಅಬೂಬಕ್ಕರ್ ಅವರ ಅಂತಿಮ ದರ್ಶನ ಪಡೆಯಲಿಲ್ಲ.
ಇದು ನಮಗೆಲ್ಲಾ ಅಪಾರ ನೋವು ತಂದಿದೆ. ಈ ಕಡೆಗಣನೆ ಆಕಸ್ಮಿಕ ಆಗಿರಲಾರದು ಎಂಬುದು ನಮ್ಮ ಅಂದಾಜು.
ಇದು ಸರಕಾರ ಪ್ರಗತಿಪರ, ಜಾತ್ಯಾತೀತ ವಿಚಾರಗಳು, ಸಾಹಿತಿ, ಬುದ್ದಿಜೀವಿಗಳ ಕುರಿತು ಇತ್ತೀಚೆಗೆ ಹೊಂದಿರುವ ಅಸಹಿಷ್ಣು ಧೋರಣೆಗಳು, ಕೋಮುವಾದಿ ದೃಷ್ಟಿಕೋನದ ಭಾಗವಾದ ನಿಲುವೇ ಆಗಿದೆ ಎಂಬಂತೆ ತೋರುತ್ತದೆ.
ಸರಕಾರ, ಜಿಲ್ಲಾಡಳಿತ, ಜನಪ್ರತಿನಿಧಿಗಳ ಈ ಧೋರಣೆ ಆಘಾತಕಾರಿಯಾಗಿದ್ದು, ಕನ್ನಡನಾಡಿನ ವಿಶಾಲ, ಉದಾರ ಪ್ರಜ್ಞೆಗೆ ವಿರುದ್ದವಾಗಿದೆ, ನಾವಿದನ್ನು ಬಲವಾಗಿ ಖಂಡಿಸುತ್ತೇವೆ ಎಂದು ಹೇಳಿದ್ದಾರೆ.
DAKSHINA KANNADA
ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ
ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.
ಉತ್ತರದ ಬ್ರೇಕ್ ವಾಟರ್ 831 ಮೀಟರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.
ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.
DAKSHINA KANNADA
ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು
ಮಂಗಳೂರು: ಗುಜರಾತ್ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.
ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್ ಗಾರ್ಡ್ ತಂಡ ಹೆಲಿಕಾಪ್ಟರ್ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.
ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್ ಗಾರ್ಡ್ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್ ಗಾರ್ಡ್ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.
DAKSHINA KANNADA
ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!
ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.
ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.
ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.
ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.
ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.
- LATEST NEWS5 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ