Connect with us

    LATEST NEWS

    ಆಪಲ್ ಐಫೋನ್‌ಗಳು ಪ್ರತಿ ವರ್ಷ ಸೆಪ್ಟೆಂಬರ್​ನಲ್ಲೇ ​ಬಿಡುಗಡೆಯಾಗೋದೇಕೆ? ಇದರ ಹಿಂದಿದೆ ಈ ಕಾರಣ

    Published

    on

    ಮಂಗಳೂರು: ಕೋಟ್ಯಂತರ ಜನರ ಬಹಳ ಸಮಯದಿಂದ ಕಾಯುವಿಕೆ ಕೊನೆಗೂ ಅಂತ್ಯವಾಗಿದೆ. ಮೊನ್ನೆಯಷ್ಟೆ ಆಪಲ್ ಹೊಸ ಐಫೋನ್ 16 ಸರಣಿ ಮತ್ತು ಆಪಲ್ ಏರ್​ಪಾ​ಡ್ಸ್ 4, ಆಪಲ್ ವಾಚ್ ಸೀರಿಸ್ 10 ಮತ್ತು ಹೊಸ ಆಪಲ್ ವಾಚ್ ಆಲ್ಟ್ರಾ-2 ಅನ್ನು ಬಿಡುಗಡೆ ಮಾಡಿದೆ. ಕಳೆದ ಬಾರಿಗಿಂತ, ಈ ಬಾರಿ ಆಪಲ್ ಐಫೋನ್ ಸರಣಿಯಲ್ಲಿ ಅನೇಕ ಹೊಸ ಹೊಸ ಫೀಚರ್ಸ್ ನೀಡಲಾಗಿದೆ. ಅಲ್ಲದೆ, AI ಬೆಂಬಲವನ್ನು ಸಹ ಒದಗಿಸಲಾಗಿದೆ. ಆದರೆ, ಆಪಲ್ ಪ್ರತಿ ವರ್ಷ ಸೆಪ್ಟೆಂಬರ್‌ನಲ್ಲಿಯೇ ಹೊಸ ಐಫೋನ್‌ಗಳನ್ನು ಏಕೆ ಬಿಡುಗಡೆ ಮಾಡುತ್ತದೆ ಎಂದು ನೀವು ಎಂದಾದರೂ ಯೋಚಿಸಿದ್ದೀರಾ..?

    ಈ ವರ್ಷ ಐಫೋನ್ 16 ಸರಣಿಯನ್ನು ಸೆಪ್ಟೆಂಬರ್ 9 ರಂದು ಬಿಡುಗಡೆ ಮಾಡಲಾಯಿತು. ಐಫೋನ್ 15 ಸರಣಿಯ ಬಿಡುಗಡೆ ದಿನಾಂಕ 12 ಸೆಪ್ಟೆಂಬರ್ 2023 ಆಗಿತ್ತು. ಆದರೆ, ಮೊದಲ ಐಫೋನ್ ಜೂನ್ 29, 2007 ರಂದು ಅನಾವರಣಗೊಳಿಸಲಾಯಿತು. ಆ ಬಳಿಕ ಆಪಲ್‌ನ ಹೆಚ್ಚಿನ ಹೊಸ ಐಫೋನ್ ಸರಣಿಗಳನ್ನು ಸೆಪ್ಟೆಂಬರ್ ತಿಂಗಳಿನಲ್ಲಿ ಮಾತ್ರ ರಿಲೀಸ್ ಆಗಿದೆ. ಬಿಡುಗಡೆಯ ದಿನಾಂಕದಲ್ಲಿ ಮಾತ್ರ ವ್ಯತ್ಯಾಸವಿತ್ತಷ್ಟೆ, ಆದರೆ ತಿಂಗಳು ಸೆಪ್ಟೆಂಬರ್ ಆಗಿತ್ತು. ಸೆಪ್ಟೆಂಬರ್‌ನಲ್ಲಿಯೇ ಐಫೋನ್ ಹೊಸ ಸರಣಿ ಪ್ರಾರಂಭಿಸುವ ಹಿಂದೆ ಆಪಲ್ ಏನಾದರೂ ದೊಡ್ಡ ತಂತ್ರವನ್ನು ಹೊಂದಿದೆಯೇ? ಇದು ದೊಡ್ಡ ಮಾರ್ಕೆಟಿಂಗ್ ಗಿಮಿಕ್ ಆಗಿದೆಯೇ? ಇಂತಹ ಎಲ್ಲಾ ಪ್ರಶ್ನೆಗಳಿಗೆ ಉತ್ತರಗಳನ್ನು ವಿವರವಾಗಿ ತಿಳಿದುಕೊಳ್ಳೋಣ.

    ಆಪಲ್​ನ ಆರ್ಥಿಕ ವರ್ಷ

    ಆಪಲ್ ಕಂಪನಿಯ ಆರ್ಥಿಕ ವರ್ಷ ಸಂಪೂರ್ಣ ಭಿನ್ನವಾಗಿದೆ. ಆಪಲ್ ತನ್ನದೇ ಆದ ಪ್ರತ್ಯೇಕ ಆರ್ಥಿಕ ವರ್ಷವನ್ನು ಹೊಂದಿದೆ. ಆಪಲ್‌ನ ಆರ್ಥಿಕ ವರ್ಷವು ಸೆಪ್ಟೆಂಬರ್‌ನ ಕೊನೆಯ ಭಾನುವಾರದಂದು ಪ್ರಾರಂಭವಾಗುತ್ತದೆ ಮತ್ತು ಮುಂದಿನ ವರ್ಷದ ಸೆಪ್ಟೆಂಬರ್‌ನ ಕೊನೆಯ ಶನಿವಾರದಂದು ಕೊನೆಗೊಳ್ಳುತ್ತದೆ.

    ಉದಾಹರಣೆಗೆ, ಈ ವರ್ಷ ಅಂದರೆ 2024ರ ಆಪಲ್​ನ ಹಣಕಾಸು ವರ್ಷವು ಸೆಪ್ಟೆಂಬರ್, 29ರ ಕೊನೆಯ ಭಾನುವಾರದಂದು ಪ್ರಾರಂಭವಾಗುತ್ತದೆ ಮತ್ತು ಮುಂದಿನ ವರ್ಷ 2025ರ ಸೆಪ್ಟೆಂಬರ್ 27 ರ ಕೊನೆಯ ಶನಿವಾರದಂದು ಕೊನೆಗೊಳ್ಳುತ್ತದೆ. ಹೀಗೆ ಆಪಲ್‌ನ ಹಣಕಾಸು ವರ್ಷವು ಎಲ್ಲಾ ಕಂಪನಿಗಳಿಗಿಂತ ಭಿನ್ನವಾಗಿದೆ. ಆದ್ದರಿಂದ ಹಣಕಾಸು ವರ್ಷದ ಅಂತ್ಯದ ಮೊದಲು ಹೊಸ ಐಫೋನ್ ಸರಣಿಯನ್ನು ಕಂಪನಿ ಪ್ರಾರಂಭಿಸುತ್ತದೆ.

    ಹಬ್ಬದ ಸೀಸನ್

    ಭಾರತ ಸೇರಿದಂತೆ ವಿಶ್ವದಲ್ಲಿ ಮೂರನೇ ತ್ರೈಮಾಸಿಕದ ಕೊನೆಯ ತಿಂಗಳು ಸೆಪ್ಟೆಂಬರ್​ನಲ್ಲಿ ಕೊನೆಗೊಳ್ಳುತ್ತದೆ. ನಾಲ್ಕನೇ ಅಂದರೆ ಕೊನೆಯ ತ್ರೈಮಾಸಿಕ ಅಕ್ಟೋಬರ್‌ನಿಂದ ಪ್ರಾರಂಭವಾಗುತ್ತದೆ. ಭಾರತ ಸೇರಿದಂತೆ ಜಗತ್ತಿನಲ್ಲಿ, ಅಕ್ಟೋಬರ್ ನಾಲ್ಕನೇ ತ್ರೈಮಾಸಿಕದಿಂದ ಹಬ್ಬಗಳು, ಜಾತ್ರೆಗಳು ಶುರುವಾಗುತ್ತವೆ. ಅಕ್ಟೋಬರ್ ಮತ್ತು ಡಿಸೆಂಬರ್ ನಡುವೆ, ದೀಪಾವಳಿ, ಕ್ರಿಸ್‌ಮಸ್, ಹೊಸ ವರ್ಷದಂತಹ ಅನೇಕ ದೊಡ್ಡ ಹಬ್ಬಗಳನ್ನು ಭಾರತ ಸೇರಿದಂತೆ ಪ್ರಪಂಚದಾದ್ಯಂತ ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಇದು ಹಬ್ಬದ ಸೀಸನ್ ಎನ್ನಬಹುದು.

    ಹಬ್ಬದ ಋತುವಿನ ಸಮಯವನ್ನು ಗಮನದಲ್ಲಿಟ್ಟುಕೊಂಡು, ಆಪಲ್ ಸೆಪ್ಟೆಂಬರ್‌ನಲ್ಲಿ ಹೊಸ ಐಫೋನ್ ಸರಣಿಯನ್ನು ಪ್ರಾರಂಭಿಸುವುದು ಮತ್ತೊಂದು ಟ್ರಿಕ್ ಆಗಿದೆ. ಏಕೆಂದರೆ ಜನರು ದೀಪಾವಳಿ, ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಸಂದರ್ಭ ನೂತನವಾದ ಫೋನನ್ನು ಹೆಚ್ಚಿನ ಪ್ರಮಾಣದಲ್ಲಿ ಖರೀದಿಸುತ್ತಾರೆ. ಹೀಗಾಗಿ ದೇಶ ಮತ್ತು ಪ್ರಪಂಚದಲ್ಲಿ ಹಬ್ಬದ ಸೀಸನ್ ಪ್ರಾರಂಭವಾಗುವ ಮೊದಲು ಸೆಪ್ಟೆಂಬರ್‌ನಲ್ಲಿಯೇ ಹೊಸ ಸರಣಿಯ ಐಫೋನ್‌ಗಳನ್ನು ಪ್ರಾರಂಭಿಸಲು ಇದು ಮುಖ್ಯ ಕಾರಣ.

    ಹಾಗೆಯೇ ಹಬ್ಬದ ಋತುವಿನಲ್ಲಿ, ಅನೇಕ ಇ-ಕಾಮರ್ಸ್ ವೆಬ್‌ಸೈಟ್‌ಗಳು ಐಫೋನ್ ಖರೀದಿಯ ಮೇಲೆ ಭಾರಿ ರಿಯಾಯಿತಿ ಕೊಡುಗೆಗಳನ್ನು ನೀಡುತ್ತವೆ. ಆದ್ದರಿಂದ ಈ ಸಮಯದಲ್ಲಿ, ಹೊಸ ರೂಪಾಂತರವನ್ನು ಬಿಡುಗಡೆ ಮಾಡಿದಾಗ, ಹಳೆಯ ಐಫೋನ್‌ನ ಬೆಲೆ ತೀವ್ರವಾಗಿ ಕುಸಿಯುತ್ತದೆ. ಆಗ ಆಪಲ್ ಉತ್ಪನ್ನಗಳು ಹೆಚ್ಚು ಮಾರಾಟವಾಗುತ್ತದೆ.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಕೋಟಿ ಗಾಯತ್ರಿ ಯಾಗ: ಸೆ. 29ರಂದು ಚಿತ್ರಾಪುರ ಮಠದಲ್ಲಿ ಸಂಕಲ್ಪ ದಿನ

    Published

    on

    ಮಂಗಳೂರು : ಅಖಿಲ ಭಾರತ ಬ್ರಾಹ್ಮಣ ಮಹಾಸಭಾ ವತಿಯಿಂದ ಅಕ್ಟೋಬರ್ 26 ಮತ್ತು 27ರಂದು ನಡೆಯಲಿರುವ ಕೋಟಿ ಗಾಯತ್ರಿ ಯಾಗದ ಪೂರ್ವಭಾವಿಯಾಗಿ ಸೆ. 29ರ ಭಾನುವಾರ ಮುಂಜಾನೆ ಸಂಕಲ್ಪ ದಿನವನ್ನು ಮಂಗಳೂರಿನ ಚಿತ್ರಾಪುರ ಮಠದಲ್ಲಿ ನಡೆಲು ಉದ್ದೇಶಿಸಲಾಗಿದೆ ಎಂದು ಪ್ರಧಾನ ಸಂಚಾಲಕ ಶ್ರೀಧರ ಹೊಳ್ಳ ಹೇಳಿದರು. ಚಿತ್ರಾಪುರ ಮಠದಲ್ಲಿ ನಡೆದ ಬ್ರಾಹ್ಮಣ ಸಮುದಾಯದ ಸಮಸ್ತರ ಸಭೆಯಲ್ಲಿ ಕೋಟಿ ಗಾಯತ್ರಿ ಯಾಗದ ಯಶಸ್ವಿಗಾಗಿ ನಾನಾ ಸಮಿತಿಗಳನ್ನು ರಚನೆಯ ಬಗ್ಗೆ ಚರ್ಚಿಸಿ ನಿರ್ಣಯಿದ ಬಳಿಕ ನಡೆದ ಸಭೆಯಲ್ಲಿ ಮಾತನಾಡಿದರು.

    ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಬ್ರಾಹ್ಮಣ ಸಮುದಾಯವು ಈಗಾಗಲೇ ಗಾಯತ್ರಿ ಯಜ್ಞದ ಪೂರ್ವಭಾವಿಯಾಗಿ ಜಪದ ಸಂಕಲ್ಪ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಹೊರಭಾಗದಲ್ಲಿರುವ ಜಿಲ್ಲೆಯ ಬ್ರಾಹ್ಮಣರು ಕೂಡಾ ಹೆಸರು ನೋಂದಾಯಿಸಿಕೊಳ್ಳುತ್ತಿದ್ದಾರೆ. ಇನ್ನೂ ಹೆಚ್ಚಿನ ಮಂದಿ ಹೆಸರು ನೋಂದಾಯಿಸುವ ನಿಟ್ಟಿನಲ್ಲಿ ಪ್ರೇರೇಪಿಸುವ ಕೆಲಸವಾಗಬೇಕು ಎಂದರು. ಬ್ರಾಹ್ಮಣ ಸಮಾಜದ ಎಲ್ಲಾ ಬಾಂಧವರು ಒಂದೇ ಸೂರಿನಡಿ ಸೇರಿಸಿ, ಹೊರ ಜಗತ್ತಿಗೆ ಬ್ರಾಹ್ಮಣ ಎಂಬ ಸಂದೇಶ ಮುಟ್ಟಿಸುವಂತಾಗಬೇಕು. ಇದೊಂದು ವಿಶೇಷ ಕಾರ್ಯಕ್ರಮ ಈ ಕಾರ್ಯಕ್ರಮವು ಗಾಯತ್ರಿ ಸಂಗಮವಾಗಿದೆ. ’ಸಾಮರಸ್ಯದಿ ಜಗವ ಬೆಳಗುವ ಬ್ರಹ್ಮ ತೇಜದ ಬೆಳಕಲಿ’ ಶೀರ್ಷಿಕೆಯಡಿ ಜರಗಲಿದೆ. ಆದುದರಿಂದ ರಚನೆಯಾದ ಸಮಿತಿಯ ಸದಸ್ಯರು ಎಲ್ಲರೂ ಒಂದಾಗಿ ತಮ್ಮ ಮನೆ ಕಾರ್ಯಕ್ರಮ ಎಂಬ ರೀತಿಯಲ್ಲಿ ದುಡಿಯಬೇಕು. ಆ ಮೂಲಕ ಸಮಾಜಕ್ಕೆ ನಮ್ಮ ಒಗ್ಗಟ್ಟನ್ನು ತೋರಿಸಿಕೊಡಬೇಕು ಎಂದು ಸಮಿತಿಯ ಕಾರ್ಯಾಧ್ಯಕ್ಷ ನ್ಯಾಯವಾದಿ ಶ್ರೀ ಮಹೇಶ್ ಕಜೆ ಹೇಳಿದರು.

    ನಾನಾ ಸಮಿತಿಗಳ ಜವಾಬ್ದಾರಿ, ಹೋಮದ ರೂಪು ರೇಶೆ, ಹೋಮದ ಉದ್ದೇಶ, ಕಾರ್ಯಯೋಜನೆಯ ಕುರಿತು ಮಾಹಿತಿ ನೀಡಿದ ವಿದ್ವಾನ್ ಕಶೆಕೋಡಿ ಸೂರ್ಯನಾರಾಯಣ ಭಟ್ ಸಾಂದರ್ಭಿಕವಾಗಿ ಮಾತನಾಡಿದರು. ಅ. 26ರಂದು ಮಹಿಳೆಯರಿಗಾಗಿ ಮಾತೃ ಸಂಗಮ ಕಾರ್ಯಕ್ರಮ ಆಯೋಜಿಸಲಾಗಿದೆ. ಎಲ್ಲ ಮಾತೆಯರು ಈ ಸಂಗಮದಲ್ಲಿ ಭಾಗವಹಿಸಬೇಕು. ಮುಂದಿನ ದಿನಗಳಲ್ಲಿ ಈ ವೇದಿಕೆಯೇ ಇಡೀ ಸಮಾಜದ ಮುಖವಾಗಬೇಕು ಎಂಬ ಅಭಿಪ್ರಾಯ ವ್ಯಕ್ತವಾಯಿತು. ಈ ಹಿಂದೆ ಗಾಯತ್ರಿ ಯಾಗ ಮಾಡಿ ಅನುಭವ ಇರುವ ವಿದ್ವಾನ್ ಬಂದಗದ್ದೆ ನಾಗರಾಜ್ ಮಾತನಾಡಿ, ಗಾಯತ್ರಿ ಮಂತ್ರ ಅನುಷ್ಠಾನ ಮಾಡುವುದರಿಂದ ಸಿಗುವ ಲಾಭ, ಮಾನಸಿಕ ವಿಕಸನದ ಬಗ್ಗೆ ತಮ್ಮ ಅನುಭವವನ್ನು ಹಂಚಿಕೊಂಡರು.

    ವಿದ್ವಾನ್ ಕಟೀಲಿನ ಶ್ರೀಹರಿ ನಾರಾಯಣದಾಸ ಆಸ್ರಣ್ಣ ಮಾತನಾಡಿ, ಎಲ್ಲಾ ವಿಪ್ರ ಸಮಾಜ ಬಾಂಧವರು ಒಟ್ಟು ಸೇರಿ ಈ ಯಜ್ಞ ಕಾರ್ಯದಲ್ಲಿ ಭಾಗಿಗಳಾಗೋಣ, ಪ್ರತಿಯೊಬ್ಬ ಬ್ರಾಹ್ಮಣನು ಸಹ ಕುಟುಂಬ ಸಹಿತ ಪಾಲ್ಗೊಳ್ಳಬೇಕು ಹಾಗೂ ಸೆ.೨೯ರ ಸಂಕಲ್ಪ ಕಾರ್ಯದಲ್ಲಿ ಕನಿಷ್ಠ ೫೦೦ ಜನ ಬಾಂಧವರು ಸೇರಬೇಕು ಎಂದರು. ಬ್ರಾಹ್ಮಣ ಮಹಾಸಭಾ ಸುರತ್ಕಲ್‌ನ ಗೌರವಾಧ್ಯಕ್ಷ ಪಿ. ಪುರುಷೋತ್ತಮ ರಾವ್ ಇದು ನಮ್ಮೆಲ್ಲರ ಕಾರ್ಯಕ್ರಮ ಪ್ರತಿಯೊಬ್ಬರು ತಾನು ಮನ ಧನಗಳಿಂದ ಸಾಹಕರಿಸೋಣ ಎಂದರು.

    ವಿವಿಧ ಬ್ರಾಹ್ಮಣ ಸಮಾಜದ ಪ್ರಮುಖರಾದ ಕರ್ಗಿ ಶ್ರೀನಿವಾಸ ಅಚಾರ್, ಶ್ರೀನಿವಾಸ್ ಚಿತ್ರಾಪುರ, ಸುರೇಶ್ ರಾವ್ ಚಿತ್ರಾಪುರ, ಶ್ರೀಕರ ದಾಮ್ಲೆ, ಎಂ.ಟಿ. ಭಟ್, ಉದಯ ಕುಮಾರ್, ಉದಯ ಕುಮಾರ್ ಸುರತ್ಕಲ್, ಕಾತ್ಯಾಯಿನಿ ರಾವ್, ಶೋಭಾ ಚಿತ್ರಾಪುರ, ಸಾವಿತ್ರಿ ಹೆಚ್ ಭಟ್, ಹೊಸಬೆಟ್ಟು, ರಮಾ.ವಿ ರಾವ್, ಯಮುನಾ ಪಿ ರಾವ್, ಎಂ ಸದಾಶಿವ ಕುಳಾಯಿ, ಪ್ರಕಾಶ್ ಕೋಟೆಕಾರ್, ಜಯಪ್ರಕಾಶ್ ಹೆಬ್ಬಾರ್, ಜಯರಾಮ್ ಭಟ್, ಸುಬ್ರಹ್ಮಣ್ಯ ವಿ ಭಟ್, ಗೋಪಾಲಕೃಷ್ಣ ಮಯ್ಯ, ಜ್ಯೋತಿಷಿ ರಂಗ ಐತಾಳ್ ಕದ್ರಿ, ವಿದ್ವಾನ್ ಸತ್ಯಕೃಷ್ಣ ಭಟ್ ಮೊದಲಾದ ಪ್ರಮುಖರು ಉಪಸ್ಥಿತರಿದ್ದರು.

    Continue Reading

    LATEST NEWS

    ಪೋಕ್ಸೋ ಪ್ರಕರಣ: ಖ್ಯಾತ ಜ್ಯೋತಿಷಿ ಬಂಧನ

    Published

    on

    ಸುಳ್ಯ: ತಾಲೂಕಿನ ಬೆಳ್ಳಾರೆಯ ಪೊಲೀಸರು ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಜ್ಯೋತಿಷಿಯೊಬ್ಬನನ್ನು ಬಂಧಿಸಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಯಲ್ಲಿ ಧಾರ್ಮಿಕ ಉಪನ್ಯಾಸದ ಜೊತೆಗೆ ಜ್ಯೋತಿಷ್ಯ ಶಾಸ್ತ್ರದ ಮೂಲಕ ಫೇಮಸ್ ಆಗಿದ್ದ ನರಸಿಂಹ ಪ್ರಸಾದ್ ಪಾಂಗಣೇಯ ಬಂಧಿತ ಆರೋಪಿ.

    ಕಾಣಿಯೂರಿನ ಬೆಳಂದೂರು ನಿವಾಸಿಯಾಗಿರುವ ಈತನ ಮನೆಗೆ ಮುಂಜಾನೆಯ ವೇಳೆ ದಾಳಿ ಮಾಡಿದ ಪೊಲೀಸರು ಪ್ರಸಾದ್ ಪಾಂಗಣೇಯನನ್ನು ಬಂಧಿಸಿದ್ದಾರೆ. ಮಂಗಳೂರಿನಲ್ಲಿ ಬಾಲಕಿಯೊಬ್ಬಳ ಕೌನ್ಸಿಲಿಂಗ್ ವೇಳೆ ಸಿಕ್ಕ ಮಾಹಿತಿಯ ಆಧಾರದಲ್ಲಿ ಈ ಬಂಧನ ಆಗಿದೆ ಎಂಬ ಮಾಹಿತಿ ದೊರೆತಿದೆ.

    Continue Reading

    LATEST NEWS

    ಗೌರವಧನ ಸರಿಯಾಗಿ ನೀಡದೇ ಇದ್ದಲ್ಲಿ ಕೆಲಸ ಸ್ಥಗಿತ: ಅಂಗನವಾಡಿ ಕಾರ್ಯಕರ್ತೆಯರಿಂದ ಎಚ್ಚರಿಕೆ

    Published

    on

    ಉಡುಪಿ: ವಿವಿಧ ಬೇಡಿಕೆಗಳನ್ನು ಈಡೇರಿಸಿ ಅಂತ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಪ್ರತಿಭಟನೆ ನಡೆಸಿದ್ದಾರೆ.

    ಉಡುಪಿ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತರೆಯರು ಹಾಗೂ ಸಹಾಯಕಿಯರು ಈ ಪ್ರತಿಭಟನೆ ನಡೆಸಿದ್ದಾರೆ. ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ದಾರೆ.

    ಪ್ರಮುಖವಾಗಿ ಗೌರವಧನವನ್ನು ಪ್ರತಿ ತಿಂಗಳ ಸರಿಯಾಗಿ ಪಾವತಿ ಮಾಡಬೇಕು ಹಾಗೂ ಮೊಟ್ಟೆ ವಿತರಣೆಗೆ ತಗಲುವ ಖರ್ಚನ್ನು ಮುಂಚಿತವಾಗಿ ನೀಡಬೇಕು ಮತ್ತು ಮಾರುಕಟ್ಟೆ ದರದಲ್ಲಿ ಏರಿಳಿತಕ್ಕೆ ತಕ್ಕಂತೆ ಮೊಟ್ಟದರವನ್ನು ನಿಗದಿ ಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

    ನಮ್ಮನ್ನು ದುಡಿಸಿಕೊಳ್ಳೂತ್ತಿರುವ ಸರ್ಕಾರ ನಮಗೆ ಸಾಮಾಜಿಕ ಮತ್ತು ಆರ್ಥಿಕ ಭದ್ರತೆಯನ್ನು ನೀಡದೆ ಶೋಷಣೆ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಈ ವೇಳೆ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷೆ ಫಿಲೋಮಿನಾ ಫೆರ್ನಾಂಡಿಸ್ ಸರ್ಕಾರ ಸೂಕ್ತವಾಗಿ ಸ್ಪಂಧಿಸದೇ ಇದ್ದಲ್ಲಿ ಕೆಲಸ ಸ್ಥಗಿತಗೊಳಿಸುವುದಾಗಿ ಎಚ್ಚರಿಸಿದ್ದಾರೆ.

    Continue Reading

    LATEST NEWS

    Trending