LATEST NEWS
IAS ಅಧಿಕಾರಿ ರೋಹಿಣಿ ಸಿಂಧೂರಿ ನಡೆ ಪ್ರಶ್ನಿಸಿದ IPS ಅಧಿಕಾರಿ ಡಿ.ರೂಪಾ ಟ್ವೀಟ್..!
ಬೆಂಗಳೂರು: ಕೊರೊನಾ ಕಾಲದಲ್ಲಿ ಈಜುಕೊಳ ಕಟ್ಟಿದ್ದು ನೈತಿಕ ಅಧಃಪತನ ಎಂದು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಬಗ್ಗೆ ಐಪಿಎಸ್ ಅಧಿಕಾರಿ ಡಿ.ರೂಪಾ ಟ್ವೀಟ್ ಮಾಡಿದ್ದಾರೆ.
ಈಜುಕೊಳಕ್ಕೆ ಲೈಸೆನ್ಸ್ ಪಡೆಯದಿರುವುದು ನಂತರದ ವಿಚಾರ. ಆದರೆ, ಅವರು ಈಜುಕೊಳ ಕಟ್ಟುವುದನ್ನೇ ಮುಂದೂಡಬಹುದಿತ್ತು. ಕೊರೊನಾ ಕಾಲದಲ್ಲಿ ಆರ್ಥಿಕವಾಗಿ ಜನರು ಸಂತ್ರಸ್ತರಾಗಿದ್ದಾರೆ. ಇಂಥ ಸಂದರ್ಭದಲ್ಲಿ ಜನರ ಹಣ ಬಳಸಿ ಸ್ವಿಮ್ಮಿಂಗ್ ಫೂಲ್ ಕಟ್ಟಿದ್ದು ರೋಹಿಣಿ ಅವರ ನೈತಿಕ ಅಧಃಪತನ ಎಂದು ಅವರು ಆಕ್ಷೇಪಿಸಿದ್ದಾರೆ.
ಕೋರೋನ ಹಾಗು ಆರ್ಥಿಕ ವ್ಯವಸ್ಥೆಯಿಂದ ಜನರು ಸಂತ್ರಸ್ತರಾಗಿರುವ ಸಂದರ್ಭದಲ್ಲಿ ಜನರ ಹಣ ಅಂದರೆ ಸಾರ್ವಜನಿಕ ಹಣವ ಬಂಗಲೆಯಲ್ಲಿ ಸ್ವಿಮ್ಮಿಂಗ್ ಪೂಲ್ ಕಟ್ಟಲು ಮುಂದಾಗಿದ್ದು ಮೊಟ್ಟ ಮೊದಲನೆಯದಾಗಿ ರೋಹಿಣಿ ಐಎಎಸ್ ಅವರ ನೈತಿಕ ಪತನ ಎದ್ದು ತೋರಿಸುತ್ತದೆ. ಕಟ್ಟಲು ಪರವಾನಗಿ ತೆಗೆದುಕೊಂಡಿಲ್ಲ ಎನ್ನುವುದು ನಂತರದ ವಿಚಾರ.ಕಟ್ಟುವುದ ಮುಂದೂಡಲೂಬಹುದಿತ್ತು
— D Roopa IPS (@D_Roopa_IPS) June 23, 2021
ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ತಮ್ಮ ನಿವಾಸದಲ್ಲಿ ಈಜುಕೊಳ ನಿರ್ಮಾಣ ವಿಚಾರವಾಗಿ ಉದ್ಭವಿಸಿದ್ದ ವಿವಾದದ ಬಗ್ಗೆ ರೋಹಿಣಿ ಸಿಂಧೂರಿ ಪ್ರಾದೇಶಿ ಆಯುಕ್ತರಿಗೆ ವಿವರಣೆ ನೀಡಿದ್ದರು. ಈಜುಕೊಳವನ್ನು ಕಾನೂನುಬಾಹಿರವಾಗಿ ನಿರ್ಮಾಣ ಮಾಡಿಲ್ಲ. ಈಜುಕೊಳ ನಿರ್ಮಾಣವು 5 ವರ್ಷಗಳ ಹಿಂದಿನ ಯೋಜನೆ. ಇದರ ನಿರ್ಮಾಣ ವೆಚ್ಚವನ್ನು ನಿರ್ಮಿತಿ ಕೇಂದ್ರವೇ ನಿರ್ವಹಿಸಿದೆ. ಈಜುಕೊಳ ನಿರ್ಮಾಣಕ್ಕೆ ₹ 27.72 ಲಕ್ಷ ವೆಚ್ಚವಾಗಿದೆ. ನಿರ್ಮಿತಿ ಕೇಂದ್ರದ ವಾರ್ಷಿಕ ಸಭೆಯಲ್ಲಿ ಅನುಮೋದನೆ ಪಡೆದೇ ಈಜುಕೊಳ ನಿರ್ಮಿಸಲಾಗಿದೆ ಎಂದು ಹೇಳಿದ್ದರು.
ಜಿಲ್ಲೆಯ ವಿವಿಧೆಡೆ ಉತ್ತಮ ಗುಣಮಟ್ಟದ ಈಜುಕೊಳಗಳ ನಿರ್ಮಾಣ ಮಾಡುವ ಉದ್ದೇಶ ಆ ಯೋಜನೆಯದ್ದಾಗಿತ್ತು. ಅದರಂತೆ ಪ್ರಾಯೋಗಿಕವಾಗಿ ಜಿಲ್ಲಾಧಿಕಾರಿ ನಿವಾಸದಲ್ಲಿ ನಿರ್ಮಾಣ ಮಾಡಲಾಗಿದೆ. ಜಿಲ್ಲಾಧಿಕಾರಿ ನಿವಾಸವು 5.15 ಎಕರೆ ಪ್ರದೇಶದಲ್ಲಿದೆ. ಅದರ ಸಣ್ಣಭಾಗದಲ್ಲಿ ಈಜುಕೊಳ ನಿರ್ಮಿಸಲಾಗಿದೆ ಎಂದು ತಿಳಿಸಿದ್ದರು.
ಪಾರಂಪರಿಕ ಕಟ್ಟಡಕ್ಕೆ ಧಕ್ಕೆ ಆರೋಪದ ಬಗ್ಗೆಯೂ ವಿವರಣೆ ನೀಡಿರುವ ಅವರು, ಈಗಾಗಲೇ ಹಲವಾರು ಪಾರಂಪರಿಕ ಕಟ್ಟಡಗಳ ಪಕ್ಕದಲ್ಲಿ ಇತರ ಕಟ್ಟಡಗಳನ್ನೂ ನಿರ್ಮಿಸಲಾಗಿದೆ. ಚುನಾವಣಾ ಶಾಖೆ, ವಸಂತ ಮಹಲ್, ಪ್ರಾದೇಶಿಕ ಆಯುಕ್ತರ ಕಚೇರಿ, ಜಲದರ್ಶಿನಿ ಆವರಣ ಸೇರಿ ಹಲವು ಕಡೆ ಕಟ್ಟಡಗಳ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಈಜುಕೊಳ ನಿರ್ಮಾಣ ಕಾನೂನುಬಾಹಿರ ಅಲ್ಲ ಎಂದು ತಮ್ಮ ವರದಿಯಲ್ಲಿ ರೋಹಿಣಿ ಸಿಂಧೂರಿ ಸಮರ್ಥಿಸಿಕೊಂಡಿದ್ದರು.
DAKSHINA KANNADA
ನಮ್ಮ ಮಾತುಗಳಿಗೆ ಅಸ್ತು ಅನ್ನುವ ಅಶ್ವಿನಿ ದೇವತೆಗಳು – ಯಾರಿವರು?
ಮಂಗಳೂರು : ಕೆಲವೊಮ್ಮೆ ನಾವು ಕೆಟ್ಟ ಮಾತುಗಳನ್ನಾಡುವಾಗ ನಮ್ಮ ಹಿರಿಯರು ತಡೆಯುತ್ತಾರೆ. ಬಿಡ್ತು ಅಂತಾ ಹೇಳು ಎಂದು ಹೇಳಿದ ಅನುಭವ ನಿಮಗೂ ಆಗಿರಬಹುದು. ನಮ್ಮ ಹಿರಿಯರು ಹೇಳುವ ಪ್ರಕಾರ ನಾವು ಕೆಟ್ಟ ಮಾತುಗಳನ್ನಾಡುವಾಗ ಅಶ್ವಿನಿ ದೇವತೆಗಳು ಅಸ್ತು ಎಂದರೆ ಅದು ಖಂಡಿತ ನಡೆಯುತ್ತದೆ ಎನ್ನುತ್ತಾರೆ. ಈ ಕಾರಣಕ್ಕಾಗಿ ಅವರು ನಾವು ಬೇಜಾರಲ್ಲಿ ಏನಾದರೂ ತಪ್ಪಿ ಮಾತನಾಡಿದಾಗ ಬಿಡ್ತು ಎಂದು ಹೇಳುವಂತೆ ನಮಗೆ ಹೇಳುತ್ತಿದ್ದರು. ಹಾಗಾದರೆ ಈ ಅಸ್ತು ದೇವತೆಗಳು ಯಾರು.? ಇವರು ಅಸ್ತು ಅಂದಾಕ್ಷಣ ನಾವು ಆಡಿದ ಮಾತುಗಳು ನಿಜವಾಗುತ್ತದೆಯೇ..?
ಅಶ್ವಿನಿ ದೇವತೆಗಳು ಯಾರು.?
ಅಶ್ವಿನಿ ದೇವತೆಯರು ಅಂದರೆ ಸೂರ್ಯಪುತ್ರರು. ಭಗವಾನ್ ಸೂರ್ಯ ದೇವನಿಗೆ ಮತ್ತು ಸಂಧ್ಯಾದೇವಿಗೆ ಜನಿಸಿದ ಅವಳಿ ಮಕ್ಕಳು. ಇವರು ಅದೃಷ್ಟದ ದೇವತೆಗಳಾಗಿದ್ದು, ಅಸ್ತು ಅಸ್ತು ಎಂದು ಸದಾ ಪಠಿಸುವ ದೇವರು. ಇವರನ್ನು ಅಶ್ವಿನಿ ಕುಮಾರರೆಂದು, ದೇವತೆಗಳ ವೈದ್ಯರೆಂದು ಪರಿಗಣಿಸಲಾಗುತ್ತದೆ. ಅಶ್ವಿನಿ ದೇವತೆಗಳ ರೂಪವೇ ವಿಚಿತ್ರ. ಯಾಕೆಂದರೆ ಈ ಅವಳಿ ಅಶ್ವಿನಿ ಕುಮಾರರದ್ದು ಮಾನವ ದೇಹವಾದರೆ, ಕುದುರೆಯ ಮುಖ. ಆದರೂ ನೋಡಲು ಅತ್ಯಂತ ಆಕರ್ಷಕರಾಗಿದ್ದರು.
ಅಶ್ವಿನಿ ದೇವತೆಗಳಿಗೆ ಕುದುರೆ ಮುಖ ಬರಲು ಕಾರಣವೇನು.?
ಒಮ್ಮೆ ಸೂರ್ಯ ದೇವನ ಪತ್ನಿಯಾದ ಸಂಧ್ಯಾ ದೇವಿಯು ಸೂರ್ಯ ದೇವನ ತಾಪವನ್ನು ತಡೆಯಲಾರದೆ ಕಷ್ಟಕ್ಕೆ ಸಿಲುಕಿಕೊಳ್ಳುತ್ತಾಳೆ. ಇದನ್ನು ನೋಡಿದ ಸೂರ್ಯ ದೇವನು ತನ್ನ ತಾಪವನ್ನು ಕಡಿಮೆ ಮಾಡಿಕೊಳ್ಳಲು ಮುಂದಾಗುತ್ತಾನೆ. ಆಗ ಸಂಧ್ಯಾ ದೇವಿಯು ಸೂರ್ಯದೇವನು ನನಗಾಗಿ ತನ್ನ ತಾಪವನ್ನು ಇನ್ನೂ ಕಡಿಮೆ ಮಾಡಿಕೊಂಡರೆ ಜಗತ್ತಿನಲ್ಲಿರುವ ಎಲ್ಲಾ ಜೀವರಾಶಿಗಳಿಗೆ ಅಪಾರ ಕಷ್ಟಗಳು ಉಂಟಾಗುತ್ತವೆ ಎಂದು ಯೋಚಿಸಿ, ಹಿಮಾಲಯ ಪರ್ವತ ದತ್ತ ಸ್ವಲ್ಪ ವಿಶ್ರಾಂತಿಯನ್ನು ಪಡೆದುಕೊಳ್ಳಲು ಹೋಗುತ್ತಾಳೆ.
ಅಲ್ಲಿ ಯಾರಿಗೂ ಗುರುತು ಸಿಗದ ಹಾಗೆ ಕುದುರೆಯ ಅವತಾರವನ್ನು ತಾಳಿ ಹಿಮಾಲಯದ ತಪ್ಪಲಿನಲ್ಲಿ ಹೋಗುತ್ತಿರುವಾಗ ಸೂರ್ಯ ದೇವನು ಕುದುರೆಯ ರೂಪದಲ್ಲಿ ಇರುವ ಸಂಧ್ಯಾ ದೇವಿಯನ್ನು ಗುರುತಿಸಿ ತಾನು ಕೂಡ ಕುದುರೆಯ ರೂಪವನ್ನು ತೆಗೆದುಕೊಳ್ಳುತ್ತಾನೆ. ಅಶ್ವಗಳ ಅವತಾರದಲ್ಲಿ ಇವರಿಬ್ಬರ ನಡುವೆ ನಡೆದ ಮಿಲನದ ಸಂಕೇತವಾಗಿ ಜನಿಸಿದವರೇ ಅಶ್ವಿನಿ ದೇವತೆಗಳು. ಹಾಗಾಗಿ ಅವರಿಗೆ ಹುಟ್ಟಿದ ಮಕ್ಕಳಿಗೂ ಕುದುರೆಯ ಮುಖ ಇರುತ್ತದೆ. ಇನ್ನು ಕೆಲವು ಕಥೆಗಳಲ್ಲಿ ಅಶ್ವಿನಿ ದೇವತೆಗಳು ಸೂರ್ಯ ಮತ್ತು ಮೋಡದ ಪುತ್ರರು ಎಂದು ಹೇಳಲಾಗಿದೆ.
ಅಶ್ವಿನಿ ದೇವತೆಗಳ ಮಹತ್ವ:
ಅಶ್ವಿನಿ ದೇವತೆಗಳಿಗೆ ಹಿಂದೂ ಧರ್ಮದಲ್ಲಿ ಮಹತ್ತರ ಸ್ಥಾನವನ್ನು ನೀಡಲಾಗಿದೆ. ಮುಸ್ಸಂಜೆ ಸಮಯವನ್ನು ಅಂದರೆ ಸೂರ್ಯ ಮುಳುಗುವುದಕ್ಕಿಂತ ಮೊದಲು 24 ನಿಮಿಷಗಳನ್ನು ಅಶ್ವಿನಿ ದೇವತೆಗಳ ಸಮಯವೆಂದು ಹೇಳುತ್ತಾರೆ. ಈ ಸಮಯದಲ್ಲಿ ಅಶ್ವಿನಿ ದೇವತೆಗಳು ಚಿನ್ನದ ಕುದುರೆಯಲ್ಲಿ ಸಂಚಾರವನ್ನು ಮಾಡುತ್ತಾರೆ ಎನ್ನುವುದು ನಂಬಿಕೆ. ಈ ಸಮಯದಲ್ಲಿ ಅಪಶಕುನದಂತಹ ಮಾತುಗಳನ್ನು ಆಡಬಾರದು, ಸುಳ್ಳನ್ನು ಹೇಳಬಾರದು, ಇನ್ನೊಬ್ಬರ ಮನಸ್ಸಿಗೆ ನೋವಾಗುವಂತಹ ಪದಗಳನ್ನು ಬಳಸಬಾರದು, ಮಲಗಬಾರದು ಎಂದು ಹೇಳಲಾಗುತ್ತದೆ. ಅಶ್ವಿನಿ ದೇವತೆಗಳು ಅಸ್ತು, ಅಸ್ತು ಎಂದು ನುಡಿಯುತ್ತಿರುತ್ತಾರೆ. ನಾವು ಒಂದು ವೇಳೆ ಅಪಶಕುನ ಮಾತನಾಡಿದಾಗ ಅವರು ಅಸ್ತು ಎಂದರೆ ಅದು ಖಂಡಿತ ನಡೆಯುತ್ತದೆ ಎನ್ನುವ ಕಾರಣಕ್ಕಾಗಿ ಯಾವಾಗಲೂ ನಾವು ಒಳ್ಳೆಯದನ್ನೇ ಮಾತನಾಡಬೇಕು.
ಒಟ್ಟಾರೆಯಾಗಿ ಹೇಳುವುದಾದರೆ ಅಶ್ವಿನಿ ದೇವತೆಗಳು ನಾವು ಒಳ್ಳೆಯದನ್ನ ಮಾತನಾಡಿದರೆ ಒಳ್ಳೆಯದೇ ಬಯಸುತ್ತಾರೆ ಹಾಗೆಯೇ ಕೆಟ್ಟದ್ದನ್ನೇ ಮಾತನಾಡಿದರೇ ಕೆಟ್ಟದ್ದು ಬಯಸುತ್ತಾರೆ ಎನ್ನುವುದು ಜನರ ನಂಬಿಕೆ.
FILM
“ನಿತ್ಯಾಮೆನನ್” ಚಿತ್ರರಂಗದಿಂದ ‘ಬ್ಯಾನ್’ ಆಗಲು ಕಾರಣವೇನು ಗೊತ್ತಾ? ಈ ಬಗ್ಗೆ ನಿತ್ಯಾ ಹೇಳಿದ್ದೇನು?
ನಿತ್ಯಾಮೆನನ್.. ದಕ್ಷಿಣ ಚಿತ್ರರಂಗದಲ್ಲಿ ತನ್ನ ಅಮೋಘ ಅಭಿನಯದ ಮೂಲಕ ಚಿತ್ರರಂಗದಲ್ಲಿ ಕೀರ್ತಿಯ ಪತಾಕೆಯನ್ನ ಹಾರಿಸಿರುವ ನಟಿ. ತನ್ನ ಮೋಹಕ ನೋಟ, ಹಾಗೆನೆ ನೋಡೋಕೆ ತುಂಬಾನೆ ಸಿಂಪಲ್ ಆಗಿರೋ ಇವರು ಒಂದಲ್ಲ ಒಂದು ಕಾಂಟ್ರವರ್ಸಿಗಳಿಗೆ ಒಳಗಾಗಿದ್ದರು.
ಕನ್ನಡದ ಸೆವೆನ್ ಓ ಕ್ಲಾಕ್ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟವರು. ಆ ನಂತರ ಕನ್ನಡ ಸೇರಿದಂತೆ ಮಲಯಾಳಂ, ತೆಲುಗು, ತಮಿಳು ಭಾಷೆಗಳಲ್ಲಿ ನಟಿಸಿದ್ದ ನಿತ್ಯಾ, ಮಿಷನ್ ಮಂಗಲ್ ಚಿತ್ರದ ಮೂಲಕ ಹಿಂದಿಗೂ ಪದಾರ್ಪಣೆ ಮಾಡಿದ್ದರು.
ತುಂಬಾನೇ ಬೋಲ್ಡ್ ಹುಡುಗಿ ..
ತಮ್ಮ ನೇರ ದಿಟ್ಟ ನಡವಳಿಕೆಗೆ ನಿತ್ಯಾ ಮೆನನ್ ನಂಬರ್ ವನ್ ಪ್ಲೇಸ್ ಅಂದ್ರೆ ತಪ್ಪಾಗಲ್ಲ. ಯಾಕಂದ್ರೆ ಅದೆಷ್ಟೋ ಬಾರಿ ತಮ್ಮ ನೇರ ನಡವಳಿಕೆಯಿಂದ ಹಲವರ ಕೆಂಗಣ್ಣಿಗೆ ಗುರಿಯಾಗುತ್ತಿದ್ರು ನಿತ್ಯಾ. ಇದಕ್ಕೆ ಸಾಕ್ಷಿ ಅನ್ನುವಂತೆ ನಿತ್ಯಾ ಮೆನನ್ ಅವರನ್ನ ಹಿಂದೊಮ್ಮೆ ಮಲಯಾಳಂ ಚಿತ್ರರಂಗ ಒಂದಲ್ಲ…ಎರಡು ಬಾರಿ ಬ್ಯಾನ್ ಮಾಡಲು ಮುಂದಾಗಿತ್ತು.
ಚಿತ್ರರಂಗದಿಂದ ಬ್ಯಾನ್ ಆಗಲು ಕಾರಣವೇನು..?
ಹೌದು.. 2012ರಲ್ಲಿ ನಿತ್ಯಾ ವಿರುದ್ದ ಮಲಯಾಳಂ ಚಿತ್ರರಂಗದ ಅನೇಕ ನಿರ್ಮಾಪಕರು ಮುನಿಸಿಕೊಂಡಿದ್ದರು. ಯಾಕೆಂದರೆ ಖ್ಯಾತ ಮಲಯಾಳಂನ ನಿರ್ಮಾಪಕರೊಬ್ಬರು ಆಗ ನಿತ್ಯಾ ಅವರ ಕಾಲ್ ಶೀಟ್ ಕೇಳಿಕೊಂಡು ಅವರ ಮನೆಗೆ ಹೋಗಿದ್ದರು. ಆದರೆ ನಿತ್ಯಾ ಮಾತ್ರ ನಿರ್ಮಾಪಕರ ಮುಖ ನೋಡಲು ಕೂಡ ಮನೆಯಾಚೆ ಬರಲಿಲ್ಲ. ಬದಲಿಗೆ ಮನೆಯಲ್ಲಿಯೇ ಇದ್ದರೂ ಕೂಡ ಮ್ಯಾನೇಜರ್ ನ ಕಳಿಸಿದ್ದರು. ಕೇವಲ ಇವರೊಬ್ಬರಷ್ಟೇ ಅಲ್ಲ ಅನೇಕ ನಿರ್ಮಾಪಕರನ್ನ ನಿತ್ಯಾ ಇದೇ ರೀತಿ ನಡೆಸಿಕೊಂಡಿದ್ದಾರೆ ಎಂಬ ಮಾತು ಆಗ ಕೇಳಿ ಬಂದಿತ್ತು. ಈ ಕಾರಣಕ್ಕೆ ನಿತ್ಯಾ ಅವರ ಮೇಲೆ ನಿಷೇಧ ಹೇರುವ ಚಿಂತನೆ ನಡೆದಿತ್ತು. ಆದರೆ ಈ ಎಲ್ಲ ಬೆಳವಣಿಗೆಯ ನಂತರವೂ 2012ರಲ್ಲಿ ಅರ್ಧ ಡಜನ್ ಮಲಯಾಳಂ ಸಿನಿಮಾಗಳಲ್ಲಿ ನಿತ್ಯಾ ಕಾಣಿಸಿಕೊಂಡರು. ಅದರಲ್ಲಿ ಆ ಕಾಲಕ್ಕೆ ಎಲ್ಲರ ಗಮನ ಸೆಳದು ಸಿಕ್ಕಾಪಟ್ಟೆ ಪ್ರಶಂಸೆಯನ್ನ ಪಡೆದಿದ್ದ ಉಸ್ತಾದ್ ಹೊಟೇಲ್ ಕೂಡ ಒಂದು.
ತಮ್ಮ ನೇರನುಡಿಯ ಮಾತೇ ತನಗೆ ಮುಳುವಾಯಿತಾ…?
ಇನ್ನೂ 2019ರಲ್ಲಿಯೂ ಕೂಡ ಇಂಥಹದ್ದೇ ಬೆಳವಣಿಗೆ ನಡೆದಿತ್ತು. 2019ರಲ್ಲಿ ಮಲಯಾಳಂ ಸಿನಿಮಾದಲ್ಲಿ ನಟಿಸುವ ಸಂದರ್ಭದಲ್ಲಿ ನಿತ್ಯಾ ಮೆನನ್ ರವರ ತಾಯಿಗೆ ಕ್ಯಾನ್ಸರ್ ಇರುವುದಾಗಿ ಸುದ್ದಿ ಬಂದಿತ್ತು. ಅದು ಮೂರನೇ ಹಂತದಲ್ಲಿಯೂ ಇತ್ತು. ಇನ್ನು ನಿತ್ಯಾರವರು ಬಹುಕಾಲದ ಮೈಗ್ರೇನ್ ಸಮಸ್ಯೆಯಿಂದ ಬಳಲುತ್ತಿದ್ದರು. ಇದರಿಂದ ವಿಶ್ರಾಂತಿ ಪಡೆಯಲು ನಿರ್ಧರಿಸಿದ್ದ ನಿತ್ಯಾ ಮನೆಯಲ್ಲಿಯೇ ಉಳಿದರು. ತಾಯಿ ಕ್ಯಾನ್ಸರ್ ನಿಂದ ಬಳಲುತ್ತಿದ್ದರೆ ನಿತ್ಯಾ ಅರೆತಲೆನೋವಿನ ಸಮಸ್ಯೆಯಿಂದ ಬಳಲುತ್ತಿದ್ದರು.
ಮುಂದೆ ನೋಡಿ..; ಶೋಬಿತಾ ಜೊತೆ ಕಾಡಿನಲ್ಲಿ ಕಾಣಿಸಿಕೊಂಡ್ರ ನಾಗಚೈತನ್ಯ..! ಫ್ಯಾನ್ಸ್ ಏನಂದ್ರು..?
ಆಗ ಮಲೆಯಾಳಂ ನಿರ್ಮಾಪಕರು ನಿತ್ಯಾ ಮೆನನ್ ಅನುಮತಿಯಿಲ್ಲದೇ ದಿಢೀರನೇ ಮನೆಗೆ ಧಾವಿಸಿ ಅಪ್ ಕಮಿಂಗ್ ಸಿನಿಮಾದಲ್ಲಿ ಮಾತನಾಡುವುದಕ್ಕೆ ಮುಂದಾಗಿದ್ದರು. ಆಗ ನಿತ್ಯಾ ಈಗ ಸದ್ಯಕ್ಕೆ ನನ್ನ ಆರೋಗ್ಯ ಸರಿ ಇಲ್ಲ. ನನ್ನ ಆರೋಗ್ಯ ಸುಧಾರಿಸಿದ ಮೇಲೆ ಮಾತನಾಡೋಣ ಎಂದಿದ್ದರು. ಇಷ್ಟಕ್ಕೇ ಸಿಟ್ಟಾದ ನಿರ್ಮಾಪಕರು ಕೂಡಲೇ ಮಲಯಾಳಂನ ಹಿರಿಯ ನಿರ್ಮಾಪಕ ಜಿ.ಸುರೇಶ್ ಕುಮಾರ್ ನೇತೃತ್ವದಲ್ಲಿ ಸಭೆ ಕರೆದರು. ನಿತ್ಯಾ ಮೆನನ್ ಗೆ ಅಹಂಕಾರ ಜಾಸ್ತಿ ಈ ಕ್ಷಣದಿಂದನೇ ಅವರನ್ನ ಬ್ಯಾನ್ ಮಾಡಬೇಕೆಂದು ಆಗ್ರಹಿಸಿದರು. ಇನ್ನೂ ಇದೇ ವಿಚಾರಕ್ಕೆ ಅವತ್ತು ಪ್ರತಿಕ್ರಿಯೆ ನೀಡಿದ್ದ ನಿತ್ಯಾ ಮೆನನ್, ನನಗೆ ಅಹಂಕಾರವಿಲ್ಲ. ಅಂತಹ ಅಹಂಕಾರವಿರುವ ನಿರ್ಮಾಪಕರ ಜತೆಗೆ ನಾನು ಮಾತನಾಡಲು ಇಚ್ಛಿಸುವುದಿಲ್ಲ ಎಂದು ಖಡಕ್ ಆಗಿ ಹೇಳಿದ್ರು.
ಆದ್ರೆ ಮಳಯಾಲಂ ಚಿತ್ರದಲ್ಲಿ ಮುಂಚೂಣಿ ನಾಯಕಿಯರ ಪಟ್ಟಿಯಲ್ಲಿದ್ದ ಈಕೆ 2019 ರಿಂದ ಇಲ್ಲಿಯವರೆಗೆ ಅವರು ನಟಿಸಿರುವುದು ಕೇವಲ ಬೆರಳೆಣಿಕೆಯ ಸಿನೆಮಾ. ಹೌದು ಇವರ ನೇರ ನುಡಿ ಖಡಕ್ ಮಾತು ಇವರ ವೃತ್ತಿ ಜೀವನಕ್ಕೆ ಪೆಟ್ಟು ಬಿದ್ದಿದೆ ಅಂದ್ರೆ ತಪ್ಪಾಗಲ್ಲ.
LATEST NEWS
ಕಾಲಿನ ಮೂಲಕವೇ ಕಾರು ಚಲಾಯಿಸಿ, ಡ್ರೈವಿಂಗ್ ಲೈಸೆನ್ಸ್ ಪಡೆದ ಏಷ್ಯಾದ ಮೊದಲ ಮಹಿಳೆ!
ಕೈಗಳಿಲ್ಲದಿದ್ದರೂ, ಕಾಲಿನ ಸಹಾಯದಿಂದ ಕಾರು ಚಲಾಯಿಸಿ ಸರ್ಕಾರದಿಂದ ಡ್ರೈವಿಂಗ್ ಲೈಸೆನ್ಸ್ ಪಡೆದಿದ್ದಾಳೆ. ಕೇರಳದ ಜಿಲುಮೋಲ್ ಮರಿಯೆಟ್ ಥಾಮಸ್. ಹುಟ್ಟಿನಿಂದಲೇ ಎರಡು ಕೈಗಳನ್ನು ಕಳೆದುಕೊಂಡಿದ್ದ ಮರಿಯೆಟ್ ಥಾಮಸ್ ಚಿಕ್ಕ ವಯಸ್ಸಿನಲ್ಲೇ ಕಾಲಿನ ಮೂಲಕವೇ ದೈನಂದಿನ ಚಟುವಟಿಕೆಗಳನ್ನು ಅಭ್ಯಾಸ ಮಾಡಿಕೊಂಡಿದ್ದಳು. ಇದೀಗ ಕೈಗಳಿಲ್ಲದಿದ್ದರೂ, ಕಾಲಿನ ಮೂಲಕವೇ ಕಾರು ಚಲಾಯಿಸಿ ದೇಶದ ಗಮನ ಸೆಳೆದಿದ್ದಾಳೆ.
ಇದಲ್ಲದೇ ಎರಡು ಕೈಗಳಿಲ್ಲದೇ ಡ್ರೈವಿಂಗ್ ಲೈಸೆನ್ಸ್ ಪಡೆದ ಏಷ್ಯಾದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾಳೆ.
ಕೈಗಳಿಲ್ಲದಿದ್ದರೂ, ಕಾಲಿನ ಸಹಾಯದಿಂದ ಕಾರು ಚಲಾಯಿಸುವುದರ ಜೊತೆಗೆ ಚಿತ್ರಕಲೆಯಲ್ಲೂ ಸೈ ಎನಿಸಿಕೊಂಡಿರುವ ಈಕೆ ಸಾಕಷ್ಟು ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾಳೆ. ಇದೀಗ ದೇಶದಾದ್ಯಂತ ಖ್ಯಾತಿಯನ್ನು ಪಡೆದಿರುವ ಈಕೆಯನ್ನು ಅನೇಕ ಸೆಲೆಬ್ರಿಟಿಗಳು ಕೂಡ ಭೇಟಿಯಾಗುತ್ತಿದ್ದಾರೆ.
- DAKSHINA KANNADA7 days ago
“ಸೆಕ್ಸ್” ನನ್ನ ಸಾಮರ್ಥ್ಯದ ರಹಸ್ಯ…! ಮಾಜಿ ಸಂಸದೆಯ ಹೇಳಿಕೆ ವೈರಲ್..!
- FILM3 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- LATEST NEWS6 days ago
ಆಲದ ಮರದ ಪೊಟರೆಯಲ್ಲಿ ಪತ್ತೆಯಾಯ್ತು 64 ಲಕ್ಷ ರೂ.!
- FILM3 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು