Connect with us

    LATEST NEWS

    ಸುಗಂಧ ದ್ರವ್ಯವನ್ನು ನೇರವಾಗಿ ಚರ್ಮಕ್ಕೆ ಬಳಸುವವರೇ, ಕ್ಯಾನ್ಸರ್ ಅಪಾಯ ಹೆಚ್ಚಾದೀತು ಹುಷಾರ್

    Published

    on

    ಸಾಮಾನ್ಯವಾಗಿ ನಮ್ಮ ಸುತ್ತಮುತ್ತ, ಸುಗಂಧ ದ್ರವ್ಯವನ್ನು ಇಷ್ಟ ಪಡುವವರ ಸಂಖ್ಯೆ ಹೆಚ್ಚಾಗಿಯೇ ಇದೆ. ಹಲವರು ಇದನ್ನು ನಿಯಮಿತವಾಗಿ ಬಳಸುತ್ತಾರೆ. ಇದರ ಒಂದೊಂದು ರೀತಿಯ ಪರಿಮಳ ಒಬ್ಬೊಬ್ಬರಿಗೆ ಇಷ್ಟವಾಗುತ್ತದೆ. ಕೆಲವರಿಗೆ ಇದನ್ನು ಬಳಸುವುದು ಅಭ್ಯಾಸವಾಗಿರುತ್ತದೆ. ಅದರಲ್ಲಿಯೂ ಇದರ ಪರಿಮಳ ಮನಸ್ಸಿಗೆ ತುಂಬಾ ಒಳ್ಳೆಯದು ಎನ್ನಲಾಗುತ್ತದೆ. ಆದರೆ ವಾಸ್ತವದಲ್ಲಿ ಸುಗಂಧ ದ್ರವ್ಯದಲ್ಲಿ, ಆಲ್ಕೋಹಾಲ್ ಅನ್ನು ಮತ್ತು ವಿವಿಧ ರೀತಿಯ ರಾಸಾಯನಿಕಗಳನ್ನು ಬೆರೆಸುವ ಮೂಲಕ ತಯಾರಿಸಲಾಗುತ್ತದೆ. ಹೆಚ್ಚಾಗಿ ಜನ ಆ ಸುಗಂಧ ದ್ರವ್ಯವನ್ನು ನೇರವಾಗಿ ಚರ್ಮದ ಮೇಲೆ ಹಚ್ಚುವುದರಿಂದ ಚರ್ಮದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದು ತಜ್ಞರು ಹೇಳುತ್ತಾರೆ. ಹಾಗಾದರೆ ಇದರಿಂದ ಯಾವ ರೀತಿಯ ಆರೋಗ್ಯ ಸಮಸ್ಯೆಗಳು ಉಂಟಾಗುತ್ತದೆ? ಇಲ್ಲಿದೆ ತಜ್ಞರ ಅಭಿಪ್ರಾಯ.

    ತಜ್ಞರು ಹೇಳುವ ಪ್ರಕಾರ, ಈ ರೀತಿ ಮಾಡುವುದು ಒಳ್ಳೆಯದಲ್ಲ. ಸುಗಂಧ ದ್ರವ್ಯವನ್ನು ನೇರವಾಗಿ ಚರ್ಮದ ಮೇಲೆ ಹಚ್ಚುವುದರಿಂದ ವಿವಿಧ ರೀತಿಯ ಸೋಂಕುಗಳು ಉಂಟಾಗಬಹುದು. ಇದರಲ್ಲಿರುವ ಆಲ್ಕೋಹಾಲ್ ಅಂಶವು ಚರ್ಮದಲ್ಲಿನ ತೇವಾಂಶವನ್ನು ಹೀರಿಕೊಂಡು ಚರ್ಮವನ್ನು ಶುಷ್ಕವಾಗಿಸುತ್ತದೆ. ಸುಗಂಧ ದ್ರವ್ಯಗಳಲ್ಲಿರುವ ನ್ಯೂರೋಟಾಕ್ಸಿನ್ ಗಳು ನರಮಂಡಲದ ಮೇಲೂ ಪರಿಣಾಮ ಬೀರುತ್ತವೆ ಎಂದು ಹೇಳಲಾಗುತ್ತದೆ.

    ಚರ್ಮದ ಕ್ಯಾನ್ಸರ್ ಬರಬಹುದು;

    ದಿನನಿತ್ಯ ಚರ್ಮದ ಮೇಲೆ ಸುಗಂಧ ದ್ರವ್ಯವನ್ನು ನೇರವಾಗಿ ಬಳಸುವುದರಿಂದ ಚರ್ಮದ ಕಿರಿಕಿರಿ ಉಂಟಾಗುತ್ತದೆ. ವಿಶೇಷವಾಗಿ ಸೂಕ್ಷ್ಮ ಚರ್ಮ ಹೊಂದಿರುವವರಿಗೆ ಹೆಚ್ಚು ಹಾನಿಕಾರಕ ಎಂದು ತಜ್ಞರು ಹೇಳುತ್ತಾರೆ. ಅದಲ್ಲದೆ ಇದರಿಂದ ಚರ್ಮದ ಮೇಲೆ ಬ್ಯಾಕ್ಟೀರಿಯಾ ಬೆಳೆಯಬಹುದು. ಸುಗಂಧ ದ್ರವ್ಯಗಳಲ್ಲಿರುವ ರಾಸಾಯನಿಕಗಳು ಹಾರ್ಮೋನುಗಳ ಸಮತೋಲನವನ್ನು ಕೂಡ ಭಂಗಗೊಳಿಸಬಹುದು. ಇದು ಚರ್ಮದ ಕ್ಯಾನ್ಸರ್ ಅಪಾಯವನ್ನು ಕೂಡ ಹೆಚ್ಚಿಸುತ್ತದೆ.

    ಹೆಚ್ಚಿನ ಸುಗಂಧ ದ್ರವ್ಯಗಳಲ್ಲಿ ಥಾಲೇಟ್ ಗಳು, ಸ್ಟೈರೀನ್, ಗ್ಯಾಲೋಕ್ಸೋಲೈಡ್ ಗಳು ಮತ್ತು ಗ್ಲೈಕಾಲ್ ಗಳಂತಹ ಸಂಯುಕ್ತಗಳನ್ನು ಹೊಂದಿರುತ್ತವೆ. ಅವು ದೇಹವನ್ನು ಪ್ರವೇಶಿಸಿದರೆ, ಅದು ಉಸಿರಾಟದ ವ್ಯವಸ್ಥೆಯನ್ನು ಹಾನಿಗೊಳಿಸುತ್ತದೆ. ಜೊತೆಗೆ ಈ ಸಂಯುಕ್ತಗಳು ಕೆಲವರ ಚರ್ಮದ ಮೇಲೆ ಅನೇಕ ರೀತಿಯ ಪರಿಣಾಮಗಳಿಗೆ ಕಾರಣವಾಗುತ್ತದೆ. ಕೆಲವರಿಗೆ ಅಲರ್ಜಿಯಾಗುತ್ತದೆ. ಪರಿಣಾಮವಾಗಿ, ಉಸಿರಾಟದ ಸಮಸ್ಯೆಗಳು ಉದ್ಭವಿಸುತ್ತವೆ.

    LATEST NEWS

    ವರದಕ್ಷಿಣೆಗಾಗಿ ಗೃಹಣಿಯ ಕತ್ತು ಹಿಸುಕಿ ಕೊ*ಲೆ

    Published

    on

    ಮಂಗಳೂರು/ಹುಬ್ಬಳ್ಳಿ: ತವರು ಮನೆಯಿಂದ ವರದಕ್ಷಿಣೆ ತರದ್ದಕ್ಕೆ ಗಂಡನ ಮನೆಯವರು ಗೃಹಿಣಿಯ ಕತ್ತು ಹಿಸುಕಿ ಕೊ*ಲೆ ಮಾಡಿರುವ ಘಟನೆ ಹುಬ್ಬಳ್ಳಿಯ ವಿಶಾಲ ನಗರದಲ್ಲಿ ನಡೆದಿದೆ.

    ಹೀನಾ ಕೌಸರ(28) ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ಗೃಹಿಣಿ. ಎರಡೂ ವರ್ಷದ ಹಿಂದೆ ಮಹಮ್ಮದ್ ಅಜರುದ್ದೀನ್ ಎಂಬಾತನೊಂದಿಗೆ ಹೀನಾ ಮದುವೆಯಾಗಿತ್ತು. ಮದುವೆಯ ಹೊಸತರಲ್ಲಿ ಎಲ್ಲವೂ ಚೆನ್ನಾಗಿ ಇತ್ತು. ನಂತರ ಮಹಮ್ಮದ್ ಕುಟುಂಬಸ್ಥರು ಹೀನಾಗೆ ವರದಕ್ಷಿಣೆ ತರುವಂತೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದರು.
    ಈ ಹಿಂದೆ ಹಲವು ಬಾರಿ ಮಹಮ್ಮದ್ ಕುಟುಂಬಸ್ಥರಿಗೆ ಹಿರಿಯರು ಬುದ್ಧಿವಾದ ಹೇಳಿದ್ದರು. ಆದರೂ ಹೀನಾಳಿಗೆ ವರದಕ್ಷಿಣೆ ಕಿರುಕುಳ ಮಾತ್ರ ಮುಂದುವರೆದಿತ್ತು.
    ಭಾನುವಾರವೂ ವರದಕ್ಷಿಣೆ ತರುವಂತೆ ಹೀನಾಳೊಂದಿಗೆ ಮಹಮ್ಮದ್ ಕುಟುಂಬಸ್ಥರು ಜಗಳವಾಡಿದ್ದರು. ಗಂಡ ಮಹಮ್ಮದ್ ಅಜರುದ್ದೀನ್, ಅತ್ತೆ ಫರಿದಾಬಾನು, ಮಾವ ಕರೀಮ್‌ಸಾಬ್, ಹಾಗೂ ನಾದಿನಿ ಶಬ್ಬೋ ಸೇರಿ ಆಕೆಯನ್ನು ಕ*ತ್ತು ಹಿಸುಕಿ ಕೊಂದಿದ್ದಾರೆ ಎಂದು ಆರೋಪಿಸಿ ಹೀನಾ ತಂದೆ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.

     

    Continue Reading

    LATEST NEWS

    ವರದಕ್ಷಿಣೆ ಕಿರುಕುಳ – ಕೆರೆಗೆ ಹಾರಿ ಮಹಿಳೆ ಆತ್ಮ*ಹತ್ಯೆ

    Published

    on

    ಮಂಗಳೂರು/ಕೊಲಾರ: ಪತಿ ಮತ್ತು ಆತನ ಕುಟುಂಬಸ್ಥರಿ0ದ ನಿರಂತರ ವರದಕ್ಷಿಣಿ ಕಿರುಕುಳದಿಂದಾಗಿ ಬೇಸತ್ತು ಮಹಿಳೆ ಕೆರೆಗೆ ಹಾರಿ ಆತ್ಮ*ಹತ್ಯೆಗೆ ಶರಣಾದ ಘಟನೆ ಬಂಗಾರಪೇಟೆ ಪಟ್ಟಣದಲ್ಲಿ ನಡೆದಿದೆ.

    ಆತ್ಮ*ಹತ್ಯೆಗೆ ಶರಣಾದ ಮಹಿಳೆಯನ್ನು ಕೊಲಾರದ ಕೆಜಿಎಫ್‌ನ ಕಂಗನಲ್ಲೂರು ಗ್ರಾಮದ ಸೌಮ್ಯ (25) ಎಂದು ಗುರುತಿಸಲಾಗಿದೆ.
    ಅ. 6ರ ಭಾನುವಾರ ಬಂಗಾರಪೇಟೆ ಪಟ್ಟಣದ ಅಮರಾವತಿ ಬಡಾವಣೆಯಲ್ಲಿರುವ ತಾಯಿಯ ಮನೆಗೆ ಬಂದಿದ್ದ ಸೌಮ್ಯ, ರಾತ್ರಿ ಮನೆಯಿಂದ ಹೊರ ಬಂದು ಕೆರೆಗೆ ಹಾರಿ ಆತ್ಮ*ಹತ್ಯೆಗೆ ಶರಣಾಗಿದ್ದಾರೆ. ಎರಡು ವರ್ಷದ ಹಿಂದೆ ಸುನಿಲ್ ಕುಮಾರ್ ಎಂಬಾತನ ಜೊತೆ ಸೌಮ್ಯ ಮದುವೆಯಾಗಿದ್ದರು.
    ಮೃ*ತ ಮಹಿಳೆಯ ಪೋಷಕರು ಆಕೆಯ ಪತಿ ಸುನಿಲ್ ಕುಮಾರ್ ಹಾಗೂ ಕುಟುಂಬಸ್ಥರ ಕಿರುಕುಳದಿಂದ ಸೌಮ್ಯ ಆತ್ಮ*ಹತ್ಯೆಗೆ ಶರಣಾಗಿದ್ದಾಳೆ ಎಂದು ಆರೋಪಿಸಿ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    Continue Reading

    LATEST NEWS

    ವಿದ್ಯುತ್ ತಂತಿ ಸ್ಪರ್ಶಿಸಿ ಮಗು ಸಹಿತ ಎರಡು ಕರಡಿ ಮೃ*ತ್ಯು

    Published

    on

    ಮಂಗಳೂರು/ಹಾಸನ: ವಿದ್ಯುತ್ ತಂತಿ ಸ್ಪರ್ಶಿಸಿ 3 ಕರಡಿಗಳು ಮೃ*ತಪಟ್ಟ ಘಟನೆ ಅರಸೀಕೆರೆ ತಾಲೂಕಿನ ಕಲ್ಲುಸಾಗರಹಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದಿದೆ. ತಡವಾಗಿ ಸ್ಥಳೀಯರ ಗುರುತಿಸಿದ್ದಾರೆ.


    ಹಾಸನದ ಗುಡ್ಡಗಾಡು ಪ್ರದೇಶಗಳಲ್ಲಿ ಕರಡಿಗಳು ಹೆಚ್ಚಾಗಿದ್ದು, ಕಳೆದ 6 ತಿಂಗಳಲ್ಲಿ ಸುಮಾರು ಐದಾರು ಮಂದಿ ದಾಳಿ ಮಾಡಿ ಗಾಯ**ಗೊಳಿಸಿದ್ದವು.


    ಅರಣ್ಯ ಪ್ರದೇಶದ ಬಳಿ ವಿದ್ಯುತ್ ಕಂಬದಿಂದ ತಂಡಾಗಿ ಬಿದ್ದಿದ್ದ ತಂತಿ ತುಳಿದ ಹಿನ್ನಲೆ ತಾಯಿ ಮತ್ತು ಮರಿ ಕರಡಿಯ ಜೊತೆ ಗಂಡು ಕರಡಿ ಸಾವಿಗೀಡಾಗಿದೆಯೆಂದು ಅಧಿಕಾರಿಗಳು ತಿಳಿಸಿದ್ದಾರೆ.

    Continue Reading

    LATEST NEWS

    Trending