LATEST NEWS
ಅರ್ಜುನ್ ಮನೆಯವರಿಗೆ ವಿಶ್ವಾಸ ಮೂಡಿಸಿದ ಈಶ್ವರ್ ಮಲ್ಪೆ..!
ಉಡುಪಿ/ ಅಂಕೋಲಾ : ಉತ್ತರ ಕನ್ನಡ ಜಿಲ್ಲೆಯ ಶಿರೂರಿನಲ್ಲಿ ನಡೆದ ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿರುವ ಕೇರಳದ ಲಾರಿ ಡ್ರೈವರ್ ಅರ್ಜುನ್ಗಾಗಿ ತೀವ್ರ ಶೋಧ ಮುಂದುವರಿದಿದೆ. ಭಾರತೀಯ ಸೇನೆ ಕೂಡ ಈ ಕಾರ್ಯಾಚರಣೆಗೆ ಇಳಿದಿದೆಯಾದ್ರೂ ರಾಡರ್ ಮೂಲಕ ಲಾರಿ ಇರುವ ಜಾಗವನ್ನು ಮಾತ್ರ ಗುರುತಿಸಲು ಸಾಧ್ಯವಾಗಿದೆ. ಗಂಗಾವಳಿ ನದಿಯ ನೀರಿನ ಒಳಹರಿವಿನ ವೇಗಕ್ಕೆ ನದಿಗೆ ಇಳಿಯುವ ಸಾಹಸಕ್ಕೆ ಸೇನಾ ಸಿಬ್ಬಂದಿ ಕೂಡ ಕೈ ಹಾಕಿಲ್ಲ. ಹೀಗಾಗಿ ಅಕ್ವಾ ಮ್ಯಾನ್ ಎಂದೇ ಖ್ಯಾತಿ ಪಡೆದಿರುವ ಉಡುಪಿಯ ಈಶ್ವರ್ ಮಲ್ಪೆಯ ಸಹಾಯವನ್ನು ಉತ್ತರ ಕನ್ನಡ ಜಿಲ್ಲಾಡಳಿತ ಪಡೆದುಕೊಂಡಿದೆ. ಶನಿವಾರ ( ಜುಲೈ 27 ) ರಂದು ಶಿರೂರಿಗೆ ತೆರಳಿದ ಈಶ್ವರ ಮಲ್ಪೆ ಹಾಗೂ ಅವರ ಎಂಟು ಮಂದಿ ಸದಸ್ಯರು ಗಂಗಾವಳಿ ನದಿಯಲ್ಲಿ ಅರ್ಜುನ್ಗಾಗಿ ಹುಡುಕಾಟ ನಡೆಸಿದ್ದಾರೆ.
ಅಕ್ವಾಮ್ಯಾನ್ ಈಶ್ವರ ಮಲ್ಪೆಯಿಂದ ಶೋಧ ಕಾರ್ಯ..!
ಸೇನಾ ಸಿಬ್ಬಂದಿ ಜೊತೆ ಗಂಗಾವಳಿ ನದಿಯಲ್ಲಿ ಈಶ್ವರ ಮಲ್ಪೆ ಶೋಧ ಕಾರ್ಯ ಆರಂಭಿಸಿದ್ದಾರೆ. ಖುದ್ದು ಕಾರ್ಯಾಚರಣೆಗೆ ಇಳಿದ ಈಶ್ವರ ಮಲ್ಪೆ ಆರಂಭದಲ್ಲಿ ಎರಡು ಬಾರಿ ನದಿಯಲ್ಲಿ ಮುಳುಗಿ ತಕ್ಷಣ ಮೇಲೆ ಬಂದಿದ್ದು, ಮೂರನೇ ಬಾರಿ ಮುಳುಗಿದಾಗ ನದಿಯ ಒಳಹರಿವಿನಲ್ಲಿ ಸುಮಾರು 50 ಅಡಿ ಮುಂದೆ ಹೋಗಿದ್ದಾರೆ. ಈಶ್ವರ ಮಲ್ಪೆ ಅವರ ಸಹಾಯಕ್ಕೆ ನೀಡಿದ್ದ ಲಂಗರು ಹಗ್ಗ ಕೈ ತಪ್ಪಿದ ಕಾರಣ ಈ ಘಟನೆ ನಡೆದಿತ್ತು. ಆದರೆ, ನಿರಂತರ ಮೂರು ಗಂಟೆಗಳ ಕಾಲ ಈಶ್ವರ ಮಲ್ಪೆ ವೇಗವಾಗಿ ಹರಿಯುವ ನದಿಯಲ್ಲಿ ಮುಳುಗಿ ಸೇನೆಯವರು ಗುರುತಿಸಿದ ಜಾಗವನ್ನು ತಲುಪುವ ಪ್ರಯತ್ನ ಮಾಡಿದ್ದಾರೆ. ಆದರೆ ಶನಿವಾರ ( ಜುಲೈ 27 ) ಸಂಜೆಯ ತನಕವೂ ಹುಡುಕಾಟ ನಡೆಸಿದ್ದರೂ ಲಾರಿಯ ಯಾವುದೇ ಸುಳಿವು ಪತ್ತೆಯಾಗಿಲ್ಲ.
ಈಶ್ವರ್ ಮಲ್ಪೆಗೆ ಸೇನೆಯಿಂದ ರಕ್ಷಣೆ..!
ಮಡಿಕೇರಿಯಲ್ಲಿ ಕಾವೇರಿ ನದಿಯಲ್ಲಿ ನಾಪತ್ತೆಯಾಗಿದ್ದ ಯುವಕನನ್ನು ಮೂರು ದಿನಗಳ ನಿರಂತರ ಹುಡುಕಾಟದ ಬಳಿಕ ಈಶ್ವರ್ ಮಲ್ಪೆ ಪತ್ತೆ ಹಚ್ಚಿದ್ದರು. ಕಾವೇರಿ ನದಿಯಲ್ಲಿ ಮುಳುಗಿ ಮೃತ ಪಟ್ಟಿದ್ದ ಯುವಕನ ಮೃತದೇಹ ಮೇಲೆತ್ತಿ ಕುಟುಂಬಕ್ಕೆ ಹಸ್ತಾಂತರಿಸಿದ್ದರು. ಈ ಕಾರ್ಯಾಚರಣೆ ಮುಗಿಸಿ ಊರಿಗೆ ಮರಳುತ್ತಿರುವಾಗಲೇ ಶಿರೂರಿಗೆ ಬರುವಂತೆ ಕರೆ ಬಂದಿದೆ. ಹೀಗಾಗಿ ನೇರ ಶಿರೂರಿಗೆ ತೆರಳಿದ ಈಶ್ವರ್ ಮಲ್ಪೆ ಅವರ ತಂಡ ಕಾರ್ಯಾಚರಣೆಗೆ ಇಳಿದಿದೆ. ಈ ವೇಳೆ ಈಶ್ವರ್ ಮಲ್ಪೆ ಅವರ ತಂಡದ ಮೂರು ದೋಣಿ ಹಾಗೂ ಸೇನೆಯ ಒಂದು ದೋಣಿ ಈಶ್ವರ್ ಮಲ್ಪೆಯವರ ರಕ್ಷಣೆಗೆ ನಿಂತಿದೆ. ಮುಳುಗುವ ಸಮಯದಲ್ಲಿ ಯಾವುದೇ ಅಪಾಯ ಬಾರದಂತೆ ಈಶ್ವರ್ ಮಲ್ಪೆ ಅವರ ಮೇಲೆ ಸೇನೆ ತೀವ್ರ ನಿಗಾ ವಹಿಸಿದೆ. ಈಶ್ವರ್ ಮಲ್ಪೆ ನೀರಿನಲ್ಲಿ ಮುಳುಗಿದ್ದರೂ ಅವರು ಅಪಾಯದಲ್ಲಿ ಇಲ್ಲ ಎಂದು ತಿಳಿಯುವ ರೀತಿಯಲ್ಲಿ ವ್ಯವಸ್ಥೆಗಳನ್ನು ಮಾಡಿಕೊಂಡಿದೆ.
ಇದನ್ನೂ ಓದಿ : ಬೈಂದೂರು: ಪೇಂಟ್ ಮಾಡುವ ಯಂತ್ರದಲ್ಲಿ ವಿದ್ಯುತ್ ಪ್ರವಹಿಸಿ ಪೈಂಟರ್ ಮೃ*ತ್ಯು
ಕೇರಳಿಗರ ವಿಶ್ವಾಸ ಹೆಚ್ಚಿಸಿದ ಈಶ್ವರ ಮಲ್ಪೆ..!
ಈಶ್ವರ್ ಮಲ್ಪೆ ಕಾರ್ಯಾಚರಣೆ ಆರಂಭಿಸಿದ ಕ್ಷಣದಿಂದ ಕೇರಳದ ಮಾಧ್ಯಮಗಳಲ್ಲಿ ಈಶ್ವರ್ ಮಲ್ಪೆ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಸೇನೆಯೂ ಕೂಡ ಕೈ ಚೆಲ್ಲಿ ಕುಳಿತಿರುವಾಗ ಈಶ್ವರ್ ಮಲ್ಪೆ ನದಿಯಲ್ಲಿ ಮುಳುಗಿ ಅರ್ಜುನ್ ಹುಡುಕಾಟಕ್ಕೆ ಮುಂದಾಗಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಲಾಗುತ್ತಿದೆ. ಈಶ್ವರ್ ಮಲ್ಪೆ ಮೂಲಕ ಅರ್ಜುನ್ ಲಾರಿ ಹಾಗೂ ಲಾರಿಯಲ್ಲಿ ಅರ್ಜುನ್ ಮೃತದೇಹ ಇದೆಯಾ ಇಲ್ಲವಾ ಎಂಬ ವಿಚಾರ ಗೊತ್ತಾಗಲಿದೆ ಎಂದು ಅಭಿಪ್ರಾಯ ವ್ಯಕ್ತವಾಗುತ್ತಿದೆ.
DAKSHINA KANNADA
ಬಂಟ್ವಾಳ :ನವದಂಪತಿ ಪ್ರಯಾಣಿಸುತ್ತಿದ್ದ ಕಾರು ಅಪಘಾ*ತ; ಪತ್ನಿ ಸಾ*ವು; ಪತಿ ಗಂಭೀ*ರ
ಬಂಟ್ವಾಳ : ನವದಂಪತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ ಸಂಭವಿಸಿ ಪತ್ನಿ ಸಾ*ವನ್ನಪ್ಪಿದ್ದು, ಪತಿ ಗಂ*ಭೀರವಾಗಿ ಗಾ*ಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು-ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನಡೆದಿದೆ. ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಸಾ*ವನ್ನಪ್ಪಿದ ನವವಿವಾಹಿತೆ. ಘಟನೆಯಿಂದ ಅನಿಶ್ ಕೃಷ್ಣ ಗಂಭೀ*ರವಾಗಿ ಗಾ*ಯಗೊಂಡಿದ್ದಾರೆ.
ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಸಿರೋಡಿನ ಕಡೆಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ನವದಂಪತಿಯ ಆಲ್ಟೋ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ ಡಿವೈಡರ್ ಮೇಲಿನಿಂದ ಇನ್ನೊಂದು ಬದಿಗೆ ಹಾರಿದೆ. ಬಳಿಕ ಮಂಗಳೂರು ಕಡೆಯಿಂದ ಬಿಸಿರೋಡಿನ ಕಡೆಗೆ ಬರುತ್ತಿದ್ದ ಕೆ.ಎಸ್.ಆರ್ಟಿ.ಸಿ ಬಸ್ ಗೆ ಡಿ*ಕ್ಕಿ ಹೊಡೆದಿದೆ.
ಡಿ*ಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಘಟನೆಯಿಂದ ಹೆದ್ದಾರಿಯಲ್ಲಿ ಕೆಲಹೊತ್ತು ಸಂಚಾರಕ್ಕೆ ಅಡಚಣೆ ಉಂಟಾಯಿತು.
ಎರಡು ದಿನದ ಹಿಂದಷ್ಟೇ ಮದುವೆ :
ಸೆ.5 ರಂದು ದೇಂತಡ್ಕ ದೇವಸ್ಥಾನದಲ್ಲಿ ಮಾನಸ ಹಾಗೂ ಅನಿಶ್ ಕೃಷ್ಣ ಮದುವೆ ನಡೆದಿತ್ತು. ಮದುವೆ ಕಾರ್ಯಕ್ರಮದ ವಿಚಾರವಾಗಿ ಇಂದು ಅಲ್ಲಿನ ಕೆಲವೊಂದು ಲೆಕ್ಕಾಚಾರ ಮಾಡಲು ದೇಂತಡ್ಕ ದೇವಸ್ಥಾನಕ್ಕೆ ಬಂದು ವಾಪಸ್ ಮಾವನ ಮನೆಗೆ ಹೋಗುವ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಇಬ್ಬರು ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ
LATEST NEWS
ಲಿಫ್ಟ್ ಕೊಡುವ ಮುನ್ನ ಎಚ್ಚರ: ಡ್ರಾಪ್ ಕೇಳಿ ಚಾಕು ಇರಿದ ದು*ಷ್ಕರ್ಮಿ
ಮಂಗಳೂರು/ಬೆಂಗಳೂರು : ಇತ್ತೀಚಿಗೆ ಕ್ರೈಂ ಪ್ರಕರಣಗಳು ಹೆಚ್ಚುತ್ತಿವೆ. ಅದರಲ್ಲೂ ಕೊ*ಲೆ ಮಾಡೋದಕ್ಕಂತೂ ಕಾರಣವೇ ಬೇಡ. ಕ್ಷುಲ್ಲಕ ಕಾರಣಕ್ಕಾಗಿ ಒಬ್ಬ ವ್ಯಕ್ತಿಯನ್ನು ಹ*ತ್ಯೆ ಮಾಡಲು ಹೇಸುವುದಿಲ್ಲ. ಅಂತಹುದೇ ಕೃ*ತ್ಯ ಬೆಂಗಳೂರಿನಲ್ಲಿ ನಡೆದಿದೆ. ಬೈಕ್ ನಲ್ಲಿ ಲಿಫ್ಟ್ ಕೊಟ್ಟಾತನಿಗೆ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದಿದ್ದಾನೆ.
ಖಾಸಗಿ ಬ್ಯಾಂಕ್ ಉದ್ಯೋಗಿ ಪಿ.ಈಶ್ವರಗೌಡ(38) ಚೂ*ರಿ ಇರಿತಕ್ಕೊಳಗಾದವರು. ರೋಹಿತ್ ಗೌಡ (24) ಚೂ*ರಿ ಇರಿದಾತ. ಈಶ್ವರಗೌಡ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ರೋಹಿತ್ ಗೌಡನನ್ನು ಬಂಧಿಸಲಾಗಿದೆ.
ಅವಮಾನಕ್ಕೆ ಪ್ರತೀಕಾರ :
ಸಾಲ ವಸೂಲಾತಿ ಏಜೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಪಿ.ಈಶ್ವರಗೌಡ ಕ್ರಿಕೆಟ್ ಟೂರ್ನಮೆಂಟ್ ವೇಳೆ ರೋಹಿತ್ ಗೌಡನನ್ನು ಸಾರ್ವಜನಿಕವಾಗಿ ಅವಮಾನಿಸಿದ್ದ ಎನ್ನಲಾಗಿದೆ. ಇದಕ್ಕೆ ಪ್ರತೀಕಾರವಾಗಿ ಆರೋಪಿ ಆತನನ್ನು ಕೊ*ಲ್ಲಲು ಸಂಚು ರೂಪಿಸಿದ್ದ ಎಂಬುದು ತನಿಖೆಯಿಂದ ತಿಳಿದುಬಂದಿದೆ.
ಈಶ್ವರಗೌಡ ತನ್ನ ಸ್ನೇಹಿತನೊಂದಿಗೆ ಢಾಬಾವೊಂದಕ್ಕೆ ಊಟಕ್ಕೆ ಹೋಗಿದ್ದರು. ಅವರು ಢಾಬಾದಿಂದ ಹೊರಬಂದ ನಂತರ, ಗೇಟ್ನಲ್ಲಿದ್ದ ಆರೋಪಿ ಡ್ರಾಪ್ ನೀಡುವಂತೆ ವಿನಂತಿಸಿದ್ದ. ಈಶ್ವರ್ ಕೂಡ ಅದೇ ದಾರಿಯಲ್ಲಿ ಹೋಗುತ್ತಿದ್ದರಿಂದ ಅವನು ಡ್ರಾಪ್ ನೀಡಲು ಒಪ್ಪಿದರು. ಸ್ವಲ್ಪ ಹೊತ್ತು ಬೈಕ್ ಹಿಂದೆ ಕುಳಿತು ಸವಾರಿ ಮಾಡಿದ ರೋಹಿತ್, ಸ್ಮಶಾನದ ಬಳಿ ನಿರ್ಜನ ಪ್ರದೇಶದಲ್ಲಿ ತಾನು ತಂದಿದ್ದ ಚಾಕುವಿನಿಂದ ಈಶ್ವರ್ ಗೆ ಇ*ರಿದಿದ್ದಾನೆ.
ಈ ವೇಳೆ ಬೈಕ್ ಚಲಾಯಿಸುತ್ತಿದ್ದ ಈಶ್ವರ್ ರ ನಿಯಂತ್ರಣ ತಪ್ಪಿದ್ದು, ಇಬ್ಬರೂ ಕೆಳಗೆ ಬಿದ್ದಿದ್ದಾರೆ. ಚಾಕು ಇ*ರಿತದಿಂದ ಈಶ್ವರ್ ಗೆ ಗಾ*ಯವಾಗಿದೆ. ಆದರೂ ರೋಹಿತ್ನಿಂದ ಹರಸಾಹಸ ಮಾಡಿ ತಪ್ಪಿಸಿಕೊಂಡು ಪರಾರಿಯಾಗಲು ಯತ್ನಿಸಿದ್ದಾರೆ. ಆದರೂ ಬಿಡದ ರೋಹಿತ್ ಬೆನ್ನತ್ತಿ ಇ*ರಿದಿದ್ದಾನೆ.
ಇದನ್ನೂ ಓದಿ : ಗಣೇಶ ವಿಗ್ರಹ ತರಲು ತೆರಳುತ್ತಿದ್ದ ಟಾಟಾ ಏಸ್ ಪಲ್ಟಿ, ಇಬ್ಬರು ಸಾ*ವು
ಈ ವೇಳೆ ಈಶ್ವರ್ ತಪ್ಪಿಸಿಕೊಂಡು ಮುಖ್ಯರಸ್ತೆಗೆ ಬಂದು ಸಹಾಯಕ್ಕಾಗಿ ತನ್ನ ಸಹೋದರನನ್ನು ಕರೆದಿದ್ದು, ಆತನ ಸಹೋದರ ಆತನನ್ನು ಆಟೋರಿಕ್ಷಾದಲ್ಲಿ ಆಸ್ಪತ್ರೆಗೆ ಸೇರಿಸಿದರು. ಅಷ್ಟು ಹೊತ್ತಿಗಾಗಲೇ ಆರೋಪಿ ರೋಹಿತ್ ಬೈಕ್ ನಲ್ಲಿ ಪರಾರಿಯಾಗಿದ್ದ. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.
LATEST NEWS
ಉಡುಪಿ : ಲಲಿತಾ ಕಲ್ಕೂರ ವಿಧಿವಶ
ಉಡುಪಿ : ದಿವಂಗತ ಪ್ರೊ. ಮಂಜುನಾಥ ಕಲ್ಕೂರ ಅವರ ಪತ್ನಿ ಲಲಿತಾ ಕಲ್ಕೂರ (83) ವಿ*ಧಿವಶರಾಗಿದ್ದಾರೆ. ಅಲ್ಪ ಕಾಲದ ಅಸೌಖ್ಯದಿಂದ ಶನಿವಾರ(ಸೆ.7) ಉಡುಪಿಯ ಸ್ವಗೃಹದಲ್ಲಿ ನಿಧ*ನ ಹೊಂದಿದರು.
ಮೃತರು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್.ಪ್ರದೀಪ ಕುಮಾರ ಕಲ್ಕೂರ ಸಹಿತ 3ಮಂದಿ ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.
- LATEST NEWS4 days ago
ಪೇಟಿಎಂ ಮೂಲಕ ಲಕ್ಷ ಹಣ ವರ್ಗಾವಣೆ..! ಆರೋಪಿಯ ಬಂಧನ
- FILM7 days ago
ಬಳ್ಳಾರಿ ಜೈಲಿಗೆ ಮೂರು ಬ್ಯಾಗ್ನೊಂದಿಗೆ ಬಂದ ದರ್ಶನ್ ಪತ್ನಿ..! ಒಂದು ವಸ್ತುವನ್ನು ಹಿಂದೆ ಕಳುಹಿಸಿದ ಪೊಲೀಸರು
- DAKSHINA KANNADA7 days ago
ಶಾಪಿಂಗ್ ವೇಳೆ ಕುಸಿದು ಬಿದ್ದ ಡಿ.ವಿ ಪತ್ನಿ..! ಆಸ್ಪತ್ರೆ ದಾಖಲು
- LATEST NEWS7 days ago
ಕಂಟೈನರ್ ನಿಂದ 11 ಕೋಟಿ ರೂ. ಮೌಲ್ಯದ 1,500 ಐಫೋನ್ ಗಳ ಲೂಟಿ