ತನ್ನ ಫೋಟೋ ಟ್ರೋಲ್ ಮಾಡಿದವರ ಕ್ರಿಯೇಟಿವಿಟಿಗೆ ಮನಸೋತ ಟ್ರಂಪ್ ಪುತ್ರಿ
ತಮ್ಮ ಫೋಟೋವನ್ನು ಮನಬಂದಂತೆ ಎಡಿಟ್ ಮಾಡಿ ಟ್ರೋಲ್ ಮಾಡಿದ ಭಾರತೀಯರಿಗೆ ಟ್ರಂಪ್ ಪುತ್ರಿಯ ಥ್ಯಾಂಕ್ಸ್
ನವದೆಹಲಿ: ಇತ್ತೀಚೆಗೆ ತಮ್ಮ ಕುಟುಂಬದೊಂದಿಗೆ ಭಾರತಕ್ಕೆ ಆಗಮಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೊದಲನೇ ದಿನವೇ ಆಗ್ರಾದ ತಾಜ್ ಮಹಲ್ ಗೆ ಭೇಟಿ ನೀಡಿದ್ದರು.
ಟ್ರಂಪ್ ತಮ್ಮ ಪತ್ನಿ ಮೆಲಾನಿಯಾ ಜತೆಗೆ ತಾಜ್ ಮಹಲ್ ಎದುರು ಫೋಟೋ ತೆಗೆಸಿಕೊಂಡರೆ, ಅವರ ಪುತ್ರಿ ಇವಾಂಕಾ ತಮ್ಮ ಪತಿ ಜೇರ್ಡ್ ಕುಶ್ನರ್ ಜೊತೆ ಪೋಸ್ ಕೊಟ್ಟಿದ್ದಾರೆ.
ಆದರೆ ಈಗ ಇವಾಂಕಾ ಫೋಟೋಗಳು ತುಂಬ ವೈರಲ್ ಆಗುತ್ತಿವೆ.
ಅದೂ ಕೂಡ ವಿವಿಧ ರೀತಿಯ ಟ್ರೋಲ್ ಮಾಡಿ, ಫೋಟೋಶಾಪ್ ಮೂಲಕ ವಿಭಿನ್ನವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗುತ್ತಿದೆ.
ಆದರೆ ವಿಶೇಷ ಎಂದರೆ, ಹೀಗೆ ಟ್ವಿಟರ್ನಲ್ಲಿ ಶೇರ್ ಆದ ಫನ್ನಿ ಫೋಟೋಗಳಿಗೆ ಇವಾಂಕಾ ಟ್ರಂಪ್ ಸಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡಿದ್ದು.
“ಜಗತ್ತಿನ ಅದ್ಭುತಗಳಲ್ಲಿ ಒಂದಾದ ತಾಜ್ ಮಹಲ್ಗೆ ನನ್ನನ್ನು ಕರೆದುಕೊಂಡು ಹೋಗಿದ್ದಕ್ಕೆ ನಿಮಗೆ ಧನ್ಯವಾದ. ಆ ಸುಂದರ ಅನುಭವವನ್ನು ನಾನೆಂದಿಗೂ ಮರೆಯುವುದಿಲ್ಲ” ಎಂದು ಹೇಳಿದ್ದಾರೆ.
ಮತ್ತೊಂದು ಕಡೆ ಆದಿತ್ಯ ಚೌಧರಿ ಎಂಬುವರು ಕೂಡ ತಮ್ಮ ಟ್ವಿಟರ್ನಲ್ಲಿ ಇವಾಂಕಾ ಅವರ ಫೋಟೋಶಾಪ್ಡ್ ಫೋಟೋಗಳನ್ನು ಪೋಸ್ಟ್ ಮಾಡಿಕೊಂಡಿದ್ದರು.
ಇವಾಂಕಾ ಟ್ರಂಪ್ ಸೈಕಲ್ ಮೇಲೆ ಹೋಗುತ್ತಿರುವಂತೆ, ಅವರ ಪಕ್ಕದಲ್ಲಿ ಹಲವರನ್ನು ಕೂರಿಸಿದಂತೆ ಎಡಿಟ್ ಮಾಡಿದ್ದ ಫೋಟೋಗಳನ್ನೂ ಪೋಸ್ಟ್ ಮಾಡಿದ್ದರು.
ಈ ಟ್ವಿಟ್ಟರ್ ಪೋಸ್ಟ್ಗೆ ಕೂಡ, “ಭಾರತೀಯರ ಆದರಣೆ ನೋಡಿ ತುಂಬ ಖುಷಿಯಾಗಿದೆ. ನನಗೆ ಹಲವು ಹೊಸ ಸ್ನೇಹಿತರು ಸಿಕ್ಕಂತಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.
ಇವಾಂಕಳ ಈ ಸರಳತೆಯನ್ನು ಭಾರತೀಯ ನೆಟ್ಟಿಗರು ತುಂಬ ಮೆಚ್ಚಿಕೊಂಡಿದ್ದಾರೆ.
ತಮ್ಮನ್ನು ಟ್ರೋಲ್ ಮಾಡಿದರೂ, ಮನಬಂದಂತೆ ಎಡಿಟ್ ಮಾಡಿದ ಫೋಟೋಗಳನ್ನು ನೋಡಿ ಕೂಡ ಇವಾಂಕಾ ತುಂಬ ಪ್ರಬುದ್ಧವಾಗಿ ಪ್ರತಿಕ್ರಿಯೆ ನೀಡಿದ್ದಾರೆಂದು ಹಲವರು ಕಾಮೆಂಟ್ ಮಾಡಿದ್ದಾರೆ.
BELTHANGADY
ಬೆಳ್ತಂಗಡಿ : ನೇಣು ಬಿಗಿದು ದಂಪತಿ ಆತ್ಮ*ಹತ್ಯೆ
ಬೆಳ್ತಂಗಡಿ : ದಂಪತಿ ನೇ*ಣು ಬಿಗಿದು ಆತ್ಮ*ಹತ್ಯೆ ಮಾಡಿಕೊಂಡಿರುವ ಘಟನೆ ಕಾಶಿಪಟ್ನ ಗ್ರಾಮದ ಉರ್ದು ಗುಡ್ಡೆಯಲ್ಲಿ ನಡೆದಿದೆ. ಉರ್ದುಗುಡ್ಡೆ ನಿವಾಸಿಗಳಾದ ನೋಣಯ್ಯ ಪೂಜಾರಿ (63) ಹಾಗೂ ಬೇಬಿ (46) ಆತ್ಮ*ಹತ್ಯೆ ಮಾಡಿಕೊಂಡವರು.
ಮನೆ ಸಮೀಪ ಇರುವ ಕಾಡಿನಲ್ಲಿ ದಂಪತಿ ನೇ*ಣಿಗೆ ಶರಣಾಗಿದ್ದಾರೆ. ಕಳೆದ 5 ವರ್ಷಗಳಿಂದ ನೋಣಯ್ಯ ಪೂಜಾರಿ ತಲೆ ನೋವಿನಿಂದ ಬಳಲುತ್ತಿದ್ದು, ಬೇಬಿ ಅವರಿಗೆ ಮಕ್ಕಳಿಲ್ಲದ ಕೊರಗು ಇತ್ತು ಎಂದು ತಿಳಿದು ಬಂದಿದೆ.
ನೋಣಯ್ಯ ಪೂಜಾರಿಯವರಿಗೆ ಇದು ಎರಡನೇ ವಿವಾಹವಾಗಿದ್ದು , ಮೊದಲ ಪತ್ನಿ 10 ವರ್ಷದ ಹಿಂದೆಯೇ ಸಾವನ್ನಪ್ಪಿದ್ದು, ಮೊದಲ ಪತ್ನಿಗೆ 5 ಜನ ಗಂಡು ಮಕ್ಕಳು ಇದ್ದರು ಎಂದು ತಿಳಿದುಬಂದಿದೆ. ಆತ್ಮ*ಹತ್ಯೆ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
ತಿರುಪತಿ ಲಡ್ಡಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ; ಗುಣಮಟ್ಟ ಪರೀಕ್ಷೆಗೆ ಸಮಿತಿ ರಚನೆ
ಮಂಗಳೂರು/ಆಂಧ್ರ : ದೇಶ – ವಿದೇಶದ ಭಕ್ತರನ್ನು ಹೊಂದಿರುವ ದೇಶದ ಪ್ರಸಿದ್ಧ ದೇವಸ್ಥಾನ ತಿರುಪತಿಯಲ್ಲಿ ಪ್ರಸಾದ ರೂಪವಾಗಿ ನೀಡುವ ಲಡ್ಡು ಅಪವಿತ್ರವಾಗಿರುವ ವಿಚಾರ ಬೆಳಕಿಗೆ ಬಂದಿದೆ. ಆಂಧ್ರದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಆರೋಪದ ಬಳಿಕ ಲ್ಯಾಬ್ ಪರೀಕ್ಷೆಯಲ್ಲಿ ಲಡ್ಡು ಅಪವಿತ್ರವಾಗಿರುವುದು ಸಾಬೀತಾಗಿದೆ. ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ದೃಢಪಟ್ಟ ಹಿನ್ನಲೆಯಲ್ಲಿ ಇದೀಗ ತುಪ್ಪದ ಗುಣಮಣ್ಣ ಪರೀಕ್ಷೆಗೆ ಸಮಿತಿಯನ್ನು ರಚಿಸಲಾಗಿದೆ.
ಡಾ.ಸುರೇಂದ್ರನಾಥ್, ಡಾ.ವಿಜಯ್ ಭಾಸ್ಕರ್ ರೆಡ್ಡಿ, ಡಾ.ಸ್ವರ್ಣಲತಾ ಮತ್ತು ಡಾ.ಮಹದೇವನ್ ಅವರನ್ನೊಳಗೊಂಡ ನಾಲ್ಕು ತಜ್ಞರ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿ ಒಂದು ವಾರದ ಒಳಗಾಗಿ ವರದಿ ನೀಡಲಿದೆ ಎಂದು ಟಿಟಿಡಿ ಕಾರ್ಯನಿರ್ವಹಣಾಧಿಕಾರಿ ಜೆ. ಶ್ಯಾಮಲಾ ರಾವ್ ಮಾಹಿತಿ ನೀಡಿದ್ದಾರೆ. ತುಪ್ಪ ಸರಬರಾಜು ಮಾಡಲು ಟೆಂಡರ್ ಪಡೆದವರು ಕಳಪೆ ತುಪ್ಪ ಪೂರೈಕೆ ಮಾಡಿದ್ರೆ, ಕಠಿಣ ಕ್ರಮ ಜರುಗಿಸುವ ಎಚ್ಚರಿಕೆಯನ್ನೂ ನೀಡಲಾಗಿದೆ. ಕಲಬೆರಕೆಯ ಪರೀಕ್ಷಾ ಸಾಧನಗಳಿಲ್ಲದ ಕಾರಣ ಈ ಪ್ರಮಾದ ಉಂಟಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಉದ್ಯಮಿ ಮನೆ ದರೋಡೆ ಪ್ರಕರಣ; ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಇಬ್ಬರು ಸೇರಿ ಮೂವರ ಬಂಧನ
ತಿರುಪತಿಯ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬು ಹಾಗೂ ಮೀನಿನ ಎಣ್ಣೆಯ ಬಳಕೆ ಬಗ್ಗೆ ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಇದು ಹಿಂದೂಗಳ ಧಾರ್ಮಿಕ ಭಾವನೆಗೆ ದಕ್ಕೆ ಉಂಟು ಮಾಡಿದ ಪ್ರಕರಣವಾಗಿದ್ದು, ಅಸಂಖ್ಯಾತ ಹಿಂದೂಗಳಿಗೆ ಇದರಿಂದ ನೋವು ಉಂಟಾಗಿದೆ. ಹೀಗಾಗಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು. ಇದರಲ್ಲಿ ಭಾಗಿಯಾಗಿರುವ ಆಂಧ್ರ ಪ್ರದೇಶದ ಹಿಂದಿನ ವೈಎಸ್.ಆರ್ ಸರಕಾರದ ಎಲ್ಲರನ್ನೂ ತನಿಖೆಗೆ ಒಳಪಡಿಸಬೇಕು ಎಂದು ವಿಶ್ವಹಿಂದೂ ಪರಿಷತ್ ಆಗ್ರಹಿಸಿದೆ.
DAKSHINA KANNADA
ಉದ್ಯಮಿ ಮನೆ ದರೋಡೆ ಪ್ರಕರಣ; ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಇಬ್ಬರು ಸೇರಿ ಮೂವರ ಬಂಧನ
ಮಂಗಳೂರು : ಉದ್ಯಮಿ ಐಕಳ ಹರೀಶ್ ಶೆಟ್ಟಿ ಅವರ ಮನೆ ದರೋಡೆ ಪ್ರಕರಣದಲ್ಲಿ ಭಾಗಿಯಾಗಿ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಇಬ್ಬರು ಸೇರಿ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಿದ್ದಕಟ್ಟೆ ನಿವಾಸಿ ಹುಸೈನಬ್ಬ ಯಾನೆ ಸುಹೈಲ್ , ಕೊಲ್ನಾಡು ನಿವಾಸಿ ಝುಬೈರ್ ಹಾಗೂ ಕಾಸರಗೋಡು ನಿವಾಸಿ ಕಲಾಮ್ ಬಂಧಿತರು. ಈ ಪೈಕಿ ಸುಹೈಲ್ ಹಾಗೂ ಝುಬೈರ್ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದ್ದು, ಕಲಾಮ್ ಆರೋಪಿಗಳು ತಲೆ ಮರೆಸಿಕೊಳ್ಳಲು ನಕಲಿ ಪಾಸ್ ಪೋರ್ಟ್ ಮಾಡಿಸಿಕೊಟ್ಟ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಬಂಧಿತರಿಂದ ನಕಲಿ ಪಾಸ್ ಪೋರ್ಟ್, ಮೊಬೈಲ್ ಫೋನ್, ಪಿಸ್ತೂಲು, ಸಜೀವ ಮದ್ದುಗುಂಡುಗಳು, ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳು 2023ರಲ್ಲಿ ಉದ್ಯಮಿ ಹರೀಶ್ ಶೆಟ್ಟಿ ಐಕಳ ಅವರ ಮನೆ ದರೋಡೆ ಪ್ರಕರಣದಲ್ಲಿ ಭಾಗಿಯಾಗಿ ಕಾಸರಗೋಡು ನಿವಾಸಿ ಕಲಾಮ್ನ ಸಹಕಾರದಲ್ಲಿ ನಕಲಿ ಪಾಸ್ ಪೋರ್ಟ್ ಮಾಡಿಸಿಕೊಂಡು ವಿದೇಶಕ್ಕೆ ತೆರಳಿ ಅಲ್ಲಿ ತಲೆ ಮರೆಸಿಕೊಂಡಿದ್ದರು. ಇತ್ತೀಚೆಗೆ ಊರಿಗೆ ಬಂದಿದ್ದ ಆರೋಪಿಗಳು ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ನಾಡು ಕೋರ್ದಬ್ಬು ದೈವಸ್ಥಾನ ಬಳಿ ಮುಲ್ಕಿ ಸುಂದರರಾಮ ಶೆಟ್ಟಿ ಸಭಾಭವನದ ಬಳಿ ಇರುವುದನ್ನು ಖಚಿತ ಪಡಿಸಿಕೊಂಡ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಇದನ್ನೂ ಓದಿ : ಕಿನ್ನಿಗೋಳಿ : ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಅಧಿಕಾರಿಗಳು
ಈಗಾಗಲೇ ಮುಲ್ಕಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬುಧವಾರ ಸಿಸಿಬಿ ಪೊಲೀಸರು ಮತ್ತಿಬ್ಬರನ್ನು ಬಂದಿಸಿದ್ದು, ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 5ಕ್ಕೇರಿದೆ.