MANGALORE
ಕ್ರೀಡಾ ಅಂಕಣಕಾರ ಜಗದೀಶ್ಚಂದ್ರ ಅಂಚನ್ಗೆ KUWJ ದತ್ತಿನಿಧಿ ಪ್ರಶಸ್ತಿ
ಮಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲ್ಯುಜೆ)ದ ಕಾಸರಗೋಡು ಘಟಕ ನೀಡುವ ಕೆ.ಆರ್. ಟ್ಯಾಗೋರ್ ದತ್ತಿನಿಧಿ ಪ್ರಶಸ್ತಿಗೆ ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ ಆಯ್ಕೆಗೊಂಡಿದ್ದಾರೆ.
ನಿವೃತ್ತ ಐಪಿಎಸ್ ಅಧಿಕಾರಿ ಕೆ.ಆರ್.ಟ್ಯಾಗೋರ್ ಸ್ಮರಣಾರ್ಥ ಅವರ ಮಿತ್ರರಾದ ಟಿ.ತಿಮ್ಮೇಗೌಡ ಹಾಗೂ ವೆಂಕಟೇಶ್ ತುಪ್ಪಿಲ್ ನೀಡುವ ಈ ದತ್ತಿನಿಧಿ ಪ್ರಶಸ್ತಿಯೂ 25,000 ರೂ ಹಾಗೂ ಪ್ರಶಸ್ತಿ ಫಲಕಗಳನ್ನೊಳಗೊಂಡಿದೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾಸರಗೋಡು ಘಟಕ ವಿವಿಧ ದತ್ತಿನಿಧಿ ಪ್ರಶಸ್ತಿಗೆ ಏಳು ಮಂದಿ ಪತ್ರಕರ್ತರನ್ನು ಆಯ್ಕೆ ಮಾಡಿದ್ದು,
ಈ ಪೈಕಿ ಎಸ್.ಜಗದೀಶ್ಚಂದ್ರ ಅಂಚನ್ ಅವರನ್ನು ಹಿರಿಯ ಕ್ರೀಡಾ ಅಂಕಣ ಬರಹಗಾರ ಎನ್ನುವ ನೆಲೆಯಲ್ಲಿ ದತ್ತಿನಿಧಿ ಪ್ರಶಸ್ತಿಗೆ ಆಯ್ಕೆ ಮಾಡಿದೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಅವರ ಉಪಸ್ಥಿತಿಯಲ್ಲಿ ಮೇ.22ರಂದು ಪ್ರಶಸ್ತಿ ಪ್ರದಾನ ಸಮಾರಂಭ ಕಾಸರಗೋಡು ಜಿಲ್ಲೆಯ ಕುಂಬಳೆ ನಾರಾಯಣ ಮಂಗಲದಲ್ಲಿ ನಡೆಯಲಿದೆ.
ಸುಮಾರು 30 ವರ್ಷಗಳಿಂದ ಕ್ರೀಡಾ ಲೇಖನಗಳ ಮೂಲಕ ರಾಜ್ಯ , ಅಂತರ್ ರಾಜ್ಯ ಮಟ್ಟದ ದಿನ ಪತ್ರಿಕೆಗಳಲ್ಲಿ ಹಾಗೂ ವಾರಪತ್ರಿಕೆಗಳಲ್ಲಿ ಇವರು ಗುರುತಿಸಿಕೊಂಡಿದ್ದಾರೆ.
ಇವರು ಬರೆದ ಸುಮಾರು 4500ಕ್ಕೂ ಮಿಕ್ಕಿದ ಕ್ರೀಡಾ ಲೇಖನಗಳು ವಿವಿಧ ಪತ್ರಿಕೆಗಳಲ್ಲಿ ಪ್ರಕಟಗೊಂಡಿದೆ.
ಇವರು ‘ವಿಶ್ವಕಪ್ ಕ್ರಿಕೆಟ್ ಸಮರ’ ಎಂಬ ಕೃತಿಯನ್ನು ಪ್ರಕಟಿಸಿದ್ದಾರೆ.
ಕ್ರೀಡಾ ಬರವಣಿಗೆಗಾಗಿ ಇವರಿಗೆ 2013ರಲ್ಲಿ ‘ಮೀಡಿಯಾ ಅವಾರ್ಡ್’,
2014ರಲ್ಲಿ ‘ಸಮಾಜ ರತ್ನ’ ರಾಜ್ಯ ಪ್ರಶಸ್ತಿ, 2016ರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, 2018ರಲ್ಲಿ ಗಡಿನಾಡ ರಾಜ್ಯೋತ್ಸವ ಪ್ರಶಸ್ತಿ; ಜಾನಪದ ಕ್ರೀಡೆಗಳ ಬಗ್ಗೆ ಇವರು ಬರೆದ ಕ್ರೀಡಾ ಲೇಖನಗಳಿಗಾಗಿ 2019ರ ಜಾನಪದ ಲೋಕ ರಾಜ್ಯ ಪ್ರಶಸ್ತಿ;
2020ರಲ್ಲಿ ಕೆ.ಎ.ನೆಟ್ಟಕಲ್ಲಪ್ಪ ರಾಜ್ಯ ಪ್ರಶಸ್ತಿ, 2021ರಲ್ಲಿ ಸಿದ್ಧಗಂಗಾ ಶ್ರೀ ರಾಜ್ಯ ಪ್ರಶಸ್ತಿ, ಅಲ್ಲದೆ ನಮ್ಮ ಕುಡ್ಲ ಸಾಧಕ ಪ್ರಶಸ್ತಿ, ಸೇರಿದಂತೆ ಹಲವು ಪ್ರಶಸ್ತಿಗಳು ಹಾಗೂ ಸನ್ಮಾನ ಪುರಸ್ಕಾರವನ್ನು ಇವರು ಪಡೆದಿದ್ದಾರೆ.
DAKSHINA KANNADA
ರಾಜಕೀಯ ಲಾಭಕ್ಕಾಗಿ ಮಾತನಾಡುತ್ತಿರುವ ಬಿಜೆಪಿ ಜಿಲ್ಲಾಧ್ಯಕ್ಷ- ಬಿರುವೆರ್ ಕುಡ್ಲ ಉದಯ್ ಪೂಜಾರಿ
ಮಂಗಳೂರು : ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ನರೇಂದ್ರ ಮೋದಿಯವರು ರೋಡ್ ಶೋ ನಡೆಸಿದ್ದರು. ಮುಂಬರುವ ಚುನಾವಣೆಯಲ್ಲಿ ದ.ಕ ಜಿಲ್ಲಾ ಅಭ್ಯರ್ಥಿ ಬ್ರಿಜೇಶ್ ಚೌಟ ಹಾಗೂ ಉಡುಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಪರ ಬ್ಯಾಟ್ ಬೀಸಿದ್ದರು. ಈ ವೇಳೆ ನಾರಾಯಣ ಗುರು ಸರ್ಕಲ್ ನಲ್ಲಿರುವ ಗುರುಗಳ ಮೂರ್ತಿಗೆ ಮಾಲಾರ್ಪಣೆ ಮಾಡಿದ್ದರು.
ಆದರೆ ಈ ಸಂದರ್ಭ ಬಿಜೆಪಿ ಬೆಂಬಲಿಗರಾದ ಬಿರುವೆರ್ ಕುಡ್ಲ ಸಂಘಟನೆಯನ್ನು ಕಡೆಗಣಿಸಿರುವುದಕ್ಕೆ ಬಿರುವೆರ್ ಕುಡ್ಲ ಸಂಸ್ಥಾಪಕ ಉದಯ ಪೂಜಾರಿ ಬೇಸರ ವ್ಯಕ್ತಪಡಿಸಿದ್ದಾರೆ.
ನಾರಾಯಣ ಗುರು ವೃತ್ತ ನಿರ್ಮಾಣ ಮಾಡುವಾಗ ಸತೀಶ್ ಕುಂಪಲ ಎಲ್ಲಿದ್ದರು…?
ಮಂಗಳೂರಿನಲ್ಲಿ ನಾರಾಯಣ ಗುರು ವೃತ್ತವನ್ನು ಲೇಡಿಹಿಲ್ ಸರ್ಕಲ್ ಬಳಿ ನೂತನವಾಗಿ ನಿರ್ಮಾಣ ಮಾಡುವ ಸಂದರ್ಭದಲ್ಲಿ ಸತೀಶ್ ಕುಂಪಲ ಎಲ್ಲಿದ್ದರು…? ನಾವು ಸರ್ಕಲ್ ಮಾಡಲು ಹೋರಾಟ ಮಾಡುವಾಗ ಅವರು ಎಲ್ಲಿದ್ದರು..? ಇಂದು ಕೇವಲ ತನ್ನ ರಾಜಕೀಯ ಲಾಭಕ್ಕಾಗಿ ಮಾತನಾಡುತ್ತಿದ್ದಾರೆ. ಅವರು ಬಿಲ್ಲವ ಎನ್ನುವ ಕಾರಣಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷರನ್ನಾಗಿ ಮಾಡಲಾಗಿದೆ. ಆದರೆ, ಅವರು ಬಿಲ್ಲವರಿಗೋಸ್ಕರ, ಬಿಲ್ಲವ ಸಮುದಾಯಕ್ಕೆ ಏನು ಕೊಡುಗೆ ನೀಡಿದ್ದಾರೆ ಎನ್ನುವುದನ್ನು ಮೊದಲು ಹೇಳಲಿ ಎಂದು ಉದಯ ಪೂಜಾರಿ ಹೇಳಿದ್ದಾರೆ.
ಇದನ್ನೂ ಓದಿ..;ಜೆಪಿಯಿಂದ ಬಿಲ್ಲವ ನಾಯಕ ಔಟ್..? ನಾರಾಯಣ ಗುರು ಹೈಜಾಕ್..!
ಬಿಲ್ಲವ ಸಂಘಟನೆಗಳ ಮನವಿ ಬಳಿಕ ನಾರಾಯಣ ಗುರು ವೃತ್ತ ನಿರ್ಮಾಣ
ನಾರಾಯಣ ಗುರು ವೃತ್ತ ನಿರ್ಮಾಣ ಮಾಡಿದ್ದು, ಬಿಜೆಪಿ ನಾಯಕರು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸುದ್ದಿಗೋಷ್ಠಿಯಲ್ಲಿ ಹೇಳಿಕೆ ನೀಡಿದ ಬೆನ್ನಲ್ಲೇ ಬಿರುವೆರ್ ಕುಡ್ಲದ ಮುಖಂಡ ಉದಯ್ ಪೂಜಾರಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಕಳೆದ 13 ವರ್ಷಗಳ ಹಿಂದೆ ನಾವು ಕಾಂಗ್ರೆಸ್ ಸರಕಾರ ಇದ್ದಾಗ ಅಲ್ಲಿ ನಾರಾಯಣ ಗುರು ವೃತ್ತ ಮಾಡಲು ಮನವಿ ಮಾಡಿದ್ದೆವು. ಸಂಸದ ನಳಿನ್ ಕುಮಾರ್ ಸಹಿತ ಎಲ್ಲಾ ಶಾಸಕರಿಗೂ ಮನವಿ ನೀಡಿದ್ದೆವು. ಸುಮಾರು 200 ಬಿಲ್ಲವ ಸಂಘಟನೆಗಳು ಮನವಿ ನೀಡಿದ ಬಳಿಕ ಅಲ್ಲಿ ನಾರಾಯಣ ಗುರು ವೃತ್ತ ಮಾಡಲಾಗಿದೆ ಎಂದು ಹೇಳಿದ್ರು.
ಬಿರುವೆರ್ ಕುಡ್ಲ ಸಂಘಟನೆ ದೂರವಿಟ್ಟಿದ್ದಕ್ಕೆ ಆಕ್ರೋಶ
ಆದರೆ, ಭಾನುವಾರದಂದು ಪ್ರಧಾನಿ ನರೇಂದ್ರ ಮೋದಿಯನ್ನು ಸ್ವಾಗತಿಸಲು ಉದ್ಯಮಿಗಳು, ಪಕ್ಷ ವಿರೋಧಿ ಚಟುವಟಿಕೆ ಮಾಡಿದವರನ್ನು ಕರೆದುಕೊಂಡು ಹೋಗಿದ್ದಾರೆ. ಆದರೆ ನಮ್ಮ ಸಂಘಟನೆಯನ್ನು ದೂರ ಇಟ್ಟಿರುವುದು ನಮಗೆ ಬೇಸರ ಮೂಡಿಸಿದೆ ಎಂದರು. ಕನಿಷ್ಠ ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಎಚ್ ಎಸ್ ಸಾಯಿರಾಂ ಅವರನ್ನಾದರೂ ಕರೆಯಬಹುದಿತ್ತು ಎಂದರು. ನಳಿನ್ ಕುಮಾರ್ ಕಟೀಲು, ವೇದವ್ಯಾಸ ಸಹಿತ ಹಲವು ಮಂದಿ ನಾಯಕರು ನಮ್ಮ ಕಷ್ಟಕ್ಕೆ ಸ್ಪಂದಿಸಿದ್ದವರು. ಆದರೆ ಇಂದು ಬಿಜೆಪಿಯಲ್ಲೇ ಎರಡು ಬಣ ಆಗಿದೆ. ಇದು ನಮಗೆ ಬೇಸರ ತರುವ ಕೆಲಸ ಎಂದರು. ಬಿಜೆಪಿ ನಡೆಯಿಂದ ನಮ್ಮ ಸಂಘಟನೆಗೆ ಬೇಸರವಾಗಿದೆ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ನಾವು ಇಂಥವರಿಗೇ ಮತ ಚಲಾಯಿಸಿ ಎಂದು ಯಾರಿಗೂ ಹೇಳಲ್ಲ. ಯಾರು ಒಳ್ಳೆಯ ಅಭ್ಯರ್ಥಿ ಇದ್ದಾರೋ ಅವರಿಗೆ ಮತ ಹಾಕಿ ಎಂದರು.
DAKSHINA KANNADA
ನಾಳೆ ನಿಮ್ಮೂರಿಗೆ ಬರ್ತಿದ್ದಾನೆ ಮೇಘರಾಜ: ತಂಪಾಗಲಿದೆ ಇಳೆ
ಬೆಂಗಳೂರು: ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ. ಮಲೆನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಮಾಹಿತಿ ನೀಡಿದೆ.
ಈ ಬಾರಿ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಜೂನ್ ವೇಳೆಗೆ ರಾಜ್ಯದಲ್ಲಿ ನೀರಿನ ಸಮಸ್ಯೆ ದೂರವಾಗಲಿದೆ ಎಂದು ಹೇಳಲಾಗುತ್ತಿದೆ.
ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆ
ಈ ಬಾರಿ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚಾಗುವ ಸಾಧ್ಯತೆಗಳಿದ್ದು, 85.2 ಸೆಂ.ಮಿ ಮಳೆ ಬೀಳುವ ನಿರೀಕ್ಷೆಗಳಿವೆ. ಜೂನ್, ಜುಲೈ, ಆಗಸ್ಟ್ ಮತ್ತು ಸೆಪ್ಟೆಂಬರ್ ನಲ್ಲಿ ಕ್ರಮವಾಗಿ 19.9 ಸೆಂ.ಮೀ., 27.1 ಸೆಂ.ಮೀ., ಆಗಸ್ಟ್ 22 ಸೆಂ.ಮೀ ಹಾಗೂ 16.1 ಸೆಂಮೀ ಮಳೆಯಾಗುವ ನಿರೀಕ್ಷೆಗಳಿವೆ ಎಂದು ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಹೇಳಿದೆ.
ನಾಳೆ ಈ ಜಿಲ್ಲೆಗಳಲ್ಲಿ ಆಗಲಿದೆ ಮಳೆ
ನಾಳೆ ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿಕ್ಕಮಗಳೂಉರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಇನ್ನುಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.
DAKSHINA KANNADA
ಮಂಗಳೂರು : ಬೈಕ್ಗೆ ಕಾರು ಡಿಕ್ಕಿ; ಇಹಲೋಕ ತ್ಯಜಿಸಿದ ವಿದ್ಯಾರ್ಥಿ
ಮಂಗಳೂರು : ಬೈಕ್ಗೆ ಕಾರು ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿಯೋರ್ವ ಇಹಲೋಕ ತ್ಯಜಿಸಿದ ಘಟನೆ ಮಂಗಳೂರು – ಬೆಂಗಳೂರು ರಾ.ಹೆ 73ರ ಅಡ್ಯಾರ್ ಸಹ್ಯಾದ್ರಿ ಕಾಲೇಜಿನ ಎದುರು ನಡೆದಿದೆ.
ಬೆಳ್ತಂಗಡಿಯ ನಿವಾಸಿ ಮಹೇಶ್ (20) ಮೃ*ತಪಟ್ಟ ವಿದ್ಯಾರ್ಥಿ. ಇವರು ಇನ್ನೋರ್ವ ವಿದ್ಯಾರ್ಥಿ ಪ್ರಣಮ್ ಶೆಟ್ಟಿ ಅವರೊಂದಿಗೆ ಬೈಕ್ನಲ್ಲಿ ಟ್ಯೂಷನ್ ತರಗತಿ ಮುಗಿಸಿ ಮನೆಗೆ ತೆರಳುತ್ತಿದ್ದರು.
ಸಹ್ಯಾದ್ರಿ ಕಾಲೇಜು ಎದುರಿನ ಡಿವೈಡರ್ ಬಳಿ ಯು ಟರ್ನ್ ಪಡೆದು ಮುಂದಕ್ಕೆ ಹೋಗುತ್ತಿದ್ದಾಗ ಬಿ.ಸಿ.ರೋಡ್ ಕಡೆಯಿಂದ ಬರುತ್ತಿದ್ದ ಕಾರು ಡಿ*ಕ್ಕಿ ಹೊಡೆದಿದೆ. ಪರಿಣಾಮ ಮಹೇಶ್ ಮೃ*ತಪಟ್ಟಿದ್ದಾರೆ. ಪ್ರಣಮ್ ಗಾ*ಯಗೊಂಡಿದ್ದಾರೆ. ಮಹೇಶ್ ಸಹ್ಯಾದ್ರಿ ಕಾಲೇಜಿನ ರೊಬೊಟಿಕ್ ವಿಭಾಗದ ವಿದ್ಯಾರ್ಥಿಯಾಗಿದ್ದರು.
- LATEST NEWS6 days ago
‘ಬಿಗ್ ಬಾಸ್’ ಮತ್ತೆ ಆರಂಭ.. ಇಲ್ಲಿದೆ ಸ್ಪರ್ಧಿಗಳ ಲಿಸ್ಟ್..!
- DAKSHINA KANNADA6 days ago
ಬತ್ತೇರಿ ಹೆಸರು ‘ಗಣಪತಿ ವೆಟ್ಟಂ’… ಟೀಕೆಗೆ ಗುರಿಯಾದ ಸುರೇಂದ್ರನ್ ಹೇಳಿಕೆ.
- LATEST NEWS6 days ago
ಮತ್ತೆ ಕಿರುತೆರೆಗೆ ಕಂಬ್ಯಾಕ್ ಮಾಡಿದ ಸೂಪರ್ ಹಿಟ್ ಧಾರಾವಾಹಿ ‘ಕೃಷ್ಣ ರುಕ್ಮಿಣಿ’ ನಟಿ
- chikkamagaluru6 days ago
ರಾಜ್ಯದ ಹಲವೆಡೆ ಮಳೆಯ ಸಿಂಚನ.. ಸಿಡಿಲಿನ ಅಬ್ಬರಕ್ಕೆ ಇಬ್ಬರ ಬ*ಲಿ..!!