BIG BOSS
ನನ್ನ ಹೀರೋ ಸುದೀಪ್, ನನ್ನ ಕ್ಷಮೆಯನ್ನು ದಯವಿಟ್ಟು ಸ್ವೀಕರಿಸಿ: ಬಿಗ್ ಬಾಸ್ ನಿಂದ ಹೊರಬಂದ ಜಗದೀಶ್ ಫಸ್ಟ್ ರಿಯಾಕ್ಷನ್!
ಬೆಂಗಳೂರು: ಬಿಗ್ಬಾಸ್ ಕನ್ನಡ ಸೀಸನ್ 11ರಿಂದ ಲಾಯರ್ ಜಗದೀಶ್ ಹೊರ ಹಾಕಲ್ಪಟ್ಟಿದ್ದಾರೆ. ಮನೆಯಲ್ಲಿ ಅಶಿಸ್ತು ತೋರಿ, ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡಿದ ಕಾರಣ ಜಗದೀಶ್ ಅನ್ನು ಹೊರಗೆ ಹಾಕಲಾಗಿದೆ. ಹೊರಗಡೆ ಬಂದ ಬಳಿಕ ಅವರು, ಸಾಮಾಜಿಕ ಜಾಲತಾಣದ ಮೂಲಕ ನನ್ನ ಹೀರೋ ಸುದೀಪ್, ನನ್ನ ಕ್ಷಮೆಯನ್ನು ದಯವಿಟ್ಟು ಸ್ವೀಕರಿಸಿ ಎಂದು ಅವರು ತಿಳಿಸಿದ್ದಾರೆ.
ನಿಮ್ಮ ಪ್ರತಿ ಒಂದು ಚಪ್ಪಾಳೆ, ಸಂದೇಶ, ನಿಮ್ಮ ಆಶೀರ್ವಾದ ನನ್ನ ಈ ಬಿಗ್ಬಾಸ್ ಪಯಣ ಯಶಸ್ಸು, ಅದು ನೀವು ಇಟ್ಟ ಈ ನಂಬಿಕೆ. ಮತ್ತೊಮ್ಮೆ ಕೋಟಿ ಕೋಟಿ ನಮನ. ಸಾರ್ಥಕ ಆಯಿತು, ನನ್ನ ಈ ಹುಟ್ಟು, ಈ ಪ್ರೀತಿ, ನನ್ನ ಗೆಲುವಿಗೆ ನೀವು ಕೊಟ್ಟ ಆ ಒಡನಾಟ, ವಿಶ್ಲೇಷಣೆ ಮಾಡಲು ನನ್ನ ಬಳಿ ಪದಗಳು ಕಡಿಮೆ ಎಂದು ತಿಳಿಸಿದ್ದಾರೆ. ನೂರಾರು ಕ್ಯಾಮೆರಾ, ಸಾವಿರಾರು ಬಿಗ್ಬಾಸ್ ಸಿಬ್ಬಂದಿ, ಆ ನಿರ್ದೇಶಕ, ಆ ಮಾಂತ್ರಿಕ ತಂತ್ರಜ್ಞರು, ಅವರ 24/7 ಡೆಡಿಕೇಷನ್ ಹಾಗೂ 20 ಕೋಟಿಗೂ ಹೆಚ್ಚಿನ ಬಿಗ್ಬಾಸ್ ಅಭಿಮಾನಿ ದೇವರುಗಳ ಆಶೀರ್ವಾದ ಈ ಹೊಸ ಕರ್ನಾಟಕ ಕ್ರಶ್ ಲಾಯರ್ ಜಗದೀಶ್ ಆಗಿದ್ದಾನೆ ಎಂದು ಹೇಳಿದ್ದಾರೆ.
ನನ್ನ ಹೀರೋ ಸುದೀಪ್, ನನ್ನ ಕ್ಷಮೆಯನ್ನು ದಯವಿಟ್ಟು ಸ್ವೀಕರಿಸಿ. ರಂಜಿತ್, ಮಾನಸ ಮತ್ತು ಎಲ್ಲರೂ ನನ್ನನ್ನು ಕ್ಷಮಿಸಿ, ನೀವೆಲ್ಲ ತುಂಬಾ ಚಿಕ್ಕ ವಯಸ್ಸಿನಲ್ಲೇ ಅಧ್ಭುತ ಕಲಾವಿದರು, ನಾನು ನಿಮ್ಮ ಜೊತೆಯಲ್ಲಿ ಒಬ್ಬನಾಗಿ ನಗಲು ಪ್ರಯತ್ನ ಪಟ್ಟೆ ಅಷ್ಟೆ, ಈ ನಿಟ್ಟಿನಲ್ಲಿ ಕೆಲವು ತಪ್ಪುಗಳು ನನ್ನಿಂದ ಆಗಿದೆ. ಅದು ನಟನೆ ಅಥವಾ ಮನರಂಜನೆಯ ಒಂದು ಭಾಗವಷ್ಟೆ. ವೈಯಕ್ತಿಕ ದ್ವೇಷ ಯಾವುದೂ ಇಲ್ಲ’ ಎಂದಿದ್ದಾರೆ ಜಗದೀಶ್. ಮಾಧ್ಯಮಗಳನ್ನು ಭೇಟಿ ಆಗಲು ಕಾಯುತ್ತಿದ್ದೇನೆ ಎಂದಿರುವ ಜಗದೀಶ್, ಭಾನುವಾರದಂದು ಜಕ್ಕೂರು ಏರೋಸ್ಪೇಸ್ ಬಳಿ ಸುದ್ದಿಗೋಷ್ಠಿ ನಡೆಸಲಿದ್ದೇನೆ ಎಂದು ತಿಳಿಸಿದರು.
BIG BOSS
BBK11: ಓಪನ್ ಆಗಿದೆ ಬಿಗ್ಬಾಸ್ ಮನೆಯ ಮುಖ್ಯದ್ವಾರ; ಕ್ಲೈಮ್ಯಾಕ್ಸ್ನಲ್ಲಿ ಇದೆಯಾ ರೋಚಕ ಟ್ವಿಸ್ಟ್..!
ಬಿಗ್ ಬಾಸ್… ಆರಂಭದಲ್ಲೇ ರಣಾಂಗಣವಾಗಿ ಬದಲಾಗಿರೋ ಬಿಗ್ ಮನೆ ಅತಿರೇಕದ ಕದನಕ್ಕೂ ಸಾಕ್ಷಿಯಾಗಿದೆ. ಇದುವರೆಗೂ ಚರ್ಚೆಯಾಗುತ್ತಿದ್ದ ರೀತಿಯೇ ರಂಜಿತ್ ಹಾಗೂ ಲಾಯರ್ ಜಗದೀಶ್ಗೆ ಕಿರುತೆರೆಯ ದೊಡ್ಮನೆಯಿಂದ ಗೇಟ್ ಪಾಸ್ ಸಿಕ್ಕಿದೆ. ಹೊರಹೋಗಲು ಡೋರ್ ಓಪನ್ ಆಗಿದೆ.
ಬಿಗ್ಬಾಸ್ ಅಂದ್ರೆ.. ಟಾಸ್ಕ್, ಎಲಿಮಿನೇಟ್, ಸೇವ್, ಜಗಳ ಎಲ್ಲ ಮಿಕ್ಸ್ ಮಸಾಲ ಇದ್ದೇ ಇರುತ್ತೆ. ಆದ್ರೆ, ಈ ಸಲದ ಬಿಗ್ಬಾಸ್ ಸೀಸನ್ ನೋಡಿದ್ರೆ ಜನಕ್ಕೆ ಇದೇನಪ್ಪ ಬರೀ ಜಗಳ ಅನಿಸುವಂತೆ ಆಗ್ಬಿಟ್ಟಿದೆ. ಆರಂಭದಿಂದ ಬಿಗ್ ಮನೆಯಲ್ಲಿ ಬರೀ ಜಗಳದ್ದೇ ಸದ್ದು. ಅದರ ಸೆಂಟರ್ ಆಫ್ ಅಟ್ರ್ಯಾಕ್ಷನ್ ಅಭಿಮಾನಿಗಳ ಪಾಲಿನ ಕಿಂಗ್ ಜಗದೀಶ್.
ಆದ್ರೀಗ ಇದೇ ಜಗದೀಶ್, ಜಗಳದ ಜಟಾಪಟಿಯಿಂದ ಬಿಗ್ ಬಾಸ್ ಮನೆಯಿಂದ ಹೊರಹೋಗೋ ಪರಿಸ್ಥಿತಿ ಬಂದಿದೆ. ಎಪಿಸೋಡ್ನಲ್ಲಿ ಬಿಗ್ಬಾಸ್ ಕಂಟೆಸ್ಟ್ಗಳಿಗೆ ಒಂದು ಟಾಸ್ಕ್ ಕೊಟ್ಟಿರುತ್ತೆ. ಟಾಸ್ಕ್ನಲ್ಲಿ ಗೆದ್ದೋರಿಗೆ ಇಬ್ಬರನ್ನ ಸೇವ್ ಮತ್ತು ನಾಮಿನೇಟ್ ಮಾಡೋ ಅವಕಾಶ ಇರುತ್ತೆ. ಆದರೆ ನಾಮಿನೇಟ್ ವೇಳೆ ಜಗಳ ಆಗಿದ್ದೆ ಜಗಳ ಆಗೋಕೆ ಕಾರಣ ಆಗಿದೆ.
ಈ ವಾರದ ನಾಮಿನೇಟ್ ಯಾರು?
ಆಟ ಆದ ಮೇಲೆ.. ನೇರವಾಗಿ ನಾಮಿನೇಟ್ ಆಗಿದ್ದ ಅನುಷಾ.. ಐಶ್ವರ್ಯ, ಮಾನಸ, ಜಗದೀಶ್, ಗೋಲ್ಡ್ ಸುರೇಶ್, ಮೋಕ್ಷಿತಾ, ಧನರಾಜ್ ಹಾಗೂ ಉಗ್ರಂ ಮಂಜು ಈ ವಾರದ ನಾಮಿನೇಟ್ ಅಂತಾ ಬಿಗ್ಬಾಸ್ ಅಂತಿಮ ಪಟ್ಟಿಯನ್ನ ಡಿಸ್ಪ್ಲೇ ಮಾಡಿದೆ ಅಷ್ಟೇ.. ಅಷ್ಟೋತ್ತು ಆಟ ಆಡಿದವ್ರು ಈಗ ಗುಂಪು ಗುಂಪಾಗಿ ಸಮಜಾಯಿಷಿ ಕೋಡೋಕೆ ಶುರು ಮಾಡಿದರು.
ಇಷ್ಟೇ ಆಗಿದ್ರೆ ಬಿಗ್ಬಾಸ್ ಮನೆ ರಣರಂಗ ಆಗುತ್ತಿರಲಿಲ್ಲ. ಆದ್ರೆ ಈ ಗ್ಯಾಪಲ್ಲಿ ಮಹಿಳಾ ಸ್ಪರ್ಧಿಯೊಬ್ಬರ ಬಗ್ಗೆ ಜಗದೀಶ್ ಹೇಳಿದ ಅದೊಂದು ಮಾತು ದೊಡ್ಡ ರಾದ್ದಾಂತ ಸೃಷ್ಟಿಸಿಬಿಟ್ಟಿತು. ಜಗದೀಶ್ ಆ ವರ್ಡ್ ಯೂಸ್ ಮಾಡ್ತಿದ್ದಂತೆ ಬಿಗ್ಬಾಸ್ ಮಹಿಳಾ ಮಣಿಗಳು ಲಾಯರ್ಗೆ ಪ್ರಶ್ನೆ ಮಾಡೋಕೆ ಶುರು ಮಾಡಿದರು.
ಜಗದೀಶ್ ತಪ್ಪಾಗಿ ಮಾತನಾಡಿದ್ರಾ..?
ಮಾಸನ ಹಾಗೂ ಜಗದೀಶ್ ಮಾತಿನ ಚಕಮಕಿ ವೇಳೇ ರಂಜಿತ್ ಬಂದು ಜಗದೀಶ್ರನ್ನ ತಳ್ಳಿದ್ದಾರೆ. ಅತ್ತ ಮಹಿಳೆಯರ ಬಗ್ಗೆ ಜಗದೀಶ್ ತಪ್ಪಾಗಿ ಮಾತಾಡಿದ್ದಾರೆ. ಹೀಗಾಗಿ ಈ ಇಬ್ಬರನ್ನ ಮನೆಯಿಂದ ಹೊರಬರಲು ಬಿಗ್ಬಾಸ್ ಸೂಚಿಸಿದ್ದು, ಮನೆಯ ಮುಖ್ಯದ್ವಾರ ಓಪನ್ ಆಗಿದೆ. ಡೋರ್ ಏನೋ ಓಪನ್ ಆಗಿದೆ. ಆದ್ರೆ, ಯಾರೂ ಹೊರಗೆ ಹೋಗಿರುವುದು ಎನ್ನುವುದು ತೋರಿಸಿಲ್ಲ. ಹೀಗಾಗಿ ಕ್ಲೈಮ್ಯಾಕ್ಸ್ ಇವತ್ತಿನ ಸಂಚಿಕೆಯಲ್ಲಿ ಕಾಣಸಿಗಲಿದೆ.
BIG BOSS
ಬಿಗ್ಬಾಸ್ ಶೋಗೆ ಸಂಕಷ್ಟ; ತುರ್ತು ನೋಟಿಸ್ ಕೊಟ್ಟ ಕೋರ್ಟ್
ಶಿವಮೊಗ್ಗ: ಕನ್ನಡದ ಬಿಗ್ಬಾಸ್ ಸೀಸನ್ ಆರಂಭವಾಗಿ ಇಂದಿಗೆ 19 ದಿನಗಳು ಆದ ಬೆನ್ನಲ್ಲೇ ದೊಡ್ಡ ಸಂಕಷ್ಟ ಎದುರಾಗಿದೆ. ಕನ್ನಡ ಕಿರುತೆರೆಯ ದೊಡ್ಡ ರಿಯಾಲಿಟಿ ಶೋ ಎನಿಸಿರುವ ಬಿಗ್ಬಾಸ್ ಶೋಗೆ ಸಾಗರ ಕೋರ್ಟ್ ತುರ್ತು ನೋಟಿಸ್ ಜಾರಿ ಮಾಡಿದೆ. ಸೀಸನ್- 11ರ ಪ್ರಸಾರವನ್ನು ಕಾಯಂ ರದ್ದುಪಡಿಸುವಂತೆ ಕೋರಿ ಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಲಾಗಿದೆ.
ಬಿಗ್ ಬಾಸ್- 11ನೇ ಸೀಸನ್ ಪ್ರಸಾರವನ್ನು ಕಾಯಂ ರದ್ದುಪಡಿಸುವಂತೆ ಕೋರಿ ವಕೀಲ ಕೆ.ಎಲ್. ಭೋಜರಾಜ್ ಅವರು ಸಾಗರದ ಪ್ರಧಾನ ವ್ಯವಹಾರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ವ್ಯವಹಾರ ಪ್ರಕ್ರಿಯಾ ಸಂಹಿತೆ ಆದೇಶ 39 ನಿಯಮ 1 ಮತ್ತು 2 ರೆಡ್ ವಿಥ್ ಸೆಕ್ಷನ್ 151ರ ಪ್ರಕಾರ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಈ ಸಂಬಂಧ ನ್ಯಾಯಾಲಯ ವಿಚಾರಣೆಯನ್ನು ಕೈಗೊಂಡಿದ್ದು ಸಿವಿಲ್ ಕಾರ್ಯವಿಧಾನದ ಕೋಡ್ ಕಾಯ್ದೆ ಅಡಿ ನೋಟಿಸ್ ಜಾರಿ ಮಾಡಲಾಗಿದೆ. ಕಲರ್ಸ್ ಕನ್ನಡ ವಾಹಿನಿಯ ನಿರ್ಮಾಪಕರು ಹಾಗೂ ಸಂಪಾದಕರಿಗೆ ತುರ್ತು ನೋಟಿಸ್ ನೀಡಲಾಗಿದೆ.
ಅರ್ಜಿ ವಿಚಾರಣೆ ಅಕ್ಟೋಬರ್ 28 ರಂದು ನಡೆಯಲಿದ್ದು ವಾಹಿನಿಯವರು ಹಾಜರಾಗಬೇಕಿದೆ. ಕಳೆದ ವಾರ ಬಿಗ್ ಬಾಸ್ ಮನೆಯಲ್ಲಿ ಮಹಿಳಾ ಸ್ಪರ್ಧಿಗಳ ಖಾಸಗಿತನಕ್ಕೆ ಧಕ್ಕೆಯಾಗಿದೆ ಎಂದು ಮಹಿಳಾ ಆಯೋಗಕ್ಕೆ ಪತ್ರದ ಮೂಲಕ ದೂರು ವಕೀಲೆ ಒಬ್ಬರು ನೀಡಿದ್ದರು. ಇದೇ ಶೋನಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆಗುತ್ತಿದೆ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡು ನರಕ-ಸ್ವರ್ಗ ಎಂಬ ಪರಿಕಲ್ಪನೆಯನ್ನು ಅರ್ಧಕ್ಕೆ ನಿಲ್ಲಿಸಿ ಎಲ್ಲಾ ಸ್ಪರ್ಧಿಗಳಿಗೂ ಒಂದೇ ಮನೆಯಲ್ಲಿರಲು ಬಿಗ್ ಬಾಸ್ ಟೀಮ್ ಅವಕಾಶ ಕಲ್ಪಿಸಿಕೊಟ್ಟಿತ್ತು.
BIG BOSS
ಲಾಯರ್ ಜಗದೀಶ್ಗೆ ಸೀರೆ ಕೊಡ್ತೀನಿ ಉಟ್ಕೋ ಎಂದ ಮಾನಸ.. ಬೈಗುಳಗಳ ಸುರಿಮಳೆ
ಬಿಗ್ ಬಾಸ್ ಸೀಸನ್ 11ರ ಮನೆ ರಣರಂಗವಾಗಿದ್ದು ಕೆಲ ಸ್ಪರ್ಧಿಗಳೆಲ್ಲ ಲಾಯರ್ ಜದೀಶ್ ಮೇಲೆ ಮುಗಿಬೀಳುತ್ತಿದ್ದಾರೆ. ಗಲಾಟೆ ಅತಿರೇಕದ ಎಲ್ಲೆ ಮೀರಿದ್ದು ಯಾವ್ಯಾವ ಪದಗಳನ್ನು ಬಳಕೆ ಮಾಡುತ್ತಾರೆ ಎನ್ನುವುದೇ ಊಹೆ ಮಾಡೋಕೆ ಆಗುತ್ತಿಲ್ಲ. ಅವರು ಆಡಿದ ಕೆಲ ಮಾತುಗಳು ಸಂಘರ್ಷ ಜೊತೆಗೆ ಮಹಿಳೆಯರು, ಪುರುಷರು ಎನ್ನದೇ ಬಳಕೆ ಮಾಡಲಾಗುತ್ತಿದೆ. ವಿಡಿಯೋವೊಂದರಲ್ಲಿ ಜಗದೀಶ್ ಅವರಿಗೆ ಸೀರೆ ಕೊಡುತ್ತೀನಿ ಹುಟ್ಕೋ ಎಂದು ಹೇಳಲಾಗಿದೆ.
ಬಿಗ್ ಹೌಸ್ನಲ್ಲಿ ಹೆಣ್ಮುಕ್ಕಳು ಬಗ್ಗೆ ಮಾತನಾಡಿದ್ದಕ್ಕೆ ಗಲಾಟೆ ಆರಂಭ ಆಗಿರುವುದು ವಿಡಿಯೋದಿಂದ ಗೊತ್ತಾಗುತ್ತದೆ. ಇದಕ್ಕೆ ವಾಹಿನಿ ‘ಮನೆ ಮಂದಿ ಮನಸನ್ನು ಕೆಡಿಸ್ತಾ ಜಗದೀಶ್ ಮಾತು?’ ಎಂದು ಟ್ಯಾಗ್ಲೈನ್ ಬರೆಯಲಾಗಿದೆ. ವಿಡಿಯೋದಲ್ಲಿ ಗೋಲ್ಡ್ ಸುರೇಶ್ ಮಹಿಳೆಯರ ಬಗ್ಗೆ ಮಾತನಾಡಬೇಡ ಎಂದಿದ್ದಾರೆ. ಇದಕ್ಕೆ ಫುಲ್ ಗರಂ ಆಗಿರುವ ಜಗದೀಶ್ ನಾನು ಮಾತನಾಡುತ್ತೇನೆ, ಏನೋ ಇವಾಗ? ಅಂತ ಪ್ರಶ್ನಿಸಿದ್ದಾರೆ. ಈ ವೇಳೆ ಜಗದೀಶ್ ಮೇಲೆ ಚೈತ್ರಾ, ಮಾನಸ ಸೇರಿ ಕೆಲವು ಮುಗಿಬಿದ್ದಿದ್ದಾರೆ.
ತಾಕತ್ ಇದ್ದರೇ ಏನ್ ಮಾಡ್ಕೊಂತಿಯಾ ಮಾಡ್ಕೊ ಹೋಗು ಎಂದು ಚೈತ್ರಾಗೆ ಜಗದೀಶ್ ಗದರಿದ್ದಾನೆ. ಕೈಕೈ ಮಿಲಾಯಿಸುವ ಮಟ್ಟಿಗೆ ಎಲ್ಲರು ಗುಂಪಾಗಿ ಜಗಳ ಮಾಡಿದ್ದಾರೆ. ಆಗ ನಿನ್ನಂತವರನ್ನು ಎಷ್ಟು ಜನ ನೋಡಿಲ್ಲ.. ಎಂದು ಜಗದೀಶ್ ಮಾನಸ ನೋಡಿಕೊಂಡು ಹೇಳುತ್ತಾರೆ. ಇದಕ್ಕೆ ಸೀರೆ ಕೊಡ್ತೀನಿ ಉಟ್ಕೋ ಮತ್ತೆ ಎಂದು ಜಗದೀಶ್ಗೆ ಹೇಳಿದ್ದಾರೆ. ಇದೇ ವೇಳೆ ಹಂಸಾ ಅವರು ಹೆಂಗಸು ಆಗೋಕೆ ಯೋಗ್ಯತೆ ಇಲ್ಲ ಅವನಿಗೆ ಎಂದು ಹೇಳಿದ್ದಾರೆ. ಇದರಿಂದ ಕೋಪಗೊಂಡ ಜಗದೀಶ್ ಗಟ್ಟಿಧ್ವನಿಯಲ್ಲಿ ಮಾನಸಗೆ ಗದರಿದರು. ಇದರಿಂದ ತೀವ್ರ ಕೋಪದಲ್ಲೇ ಬಿಗ್ಬಾಸ್ ಕ್ಯಾಮೆರಾ ಮುಂದೆ ಬಂದ ಹಂಸಾ ಅವರು ಇದಕ್ಕೆ ಏನಾದರೂ ಸಲ್ಯೂಷನ್ ಬೇಕೆಬೇಕು ಎಂದು ಕೇಳಿದ್ದಾರೆ.
- FILM6 days ago
ಮಾಲ್ಡೀವ್ಸ್ ದ್ವೀಪದಲ್ಲಿ ಹನಿಮೂನ್..! ಜಾಲಿ ಮೂಡ್ನಲ್ಲಿ ತರುಣ್ ಸುಧೀರ್ ದಂಪತಿ
- LATEST NEWS5 days ago
‘ಸೆಕ್ಸ್’ ಗೆ ಅಡ್ಡಿಯಾದ ಇಬ್ಬರು ಮಕ್ಕಳನ್ನೇ ಹತ್ಯೆ ಮಾಡಿದ ಪಾಪಿ ತಾಯಿ.!
- BIG BOSS5 days ago
ಯಾರೂ ಊಹಿಸದ ವ್ಯಕ್ತಿಗೆ ಈ ವಾರ ಕಿಚ್ಚನ ಚಪ್ಪಾಳೆ, ಬಿಗ್ಬಾಸ್ ಮನೆಯಲ್ಲಿ ಇದೇ ಮೊದಲು
- LATEST NEWS5 days ago
ಹಿರಿಯಡ್ಕ: ಉದ್ಯಮಿ ಪ್ರಸನ್ನ ಶೆಟ್ಟಿ ತೀರ್ಥಹಳ್ಳಿಯ ವಸತಿ ಗೃಹದಲ್ಲಿ ಆತ್ಮಹ*ತ್ಯೆ