FILM
ಲಕ್ಷ್ಮೀ ನಿವಾಸದಲ್ಲಿ ಜಾಹ್ನವಿ ಅದ್ಧೂರಿ ಮದುವೆ..! ಮದುವೆಗೆ ಕಂಟಕನಾಗುತ್ತಾನ ವಿಶ್ವ..!!?
ಜೀ ಕನ್ನಡದಲ್ಲಿ ಪ್ರಸಾರವಾಗುವ ಲಕ್ಷ್ಮೀ ನಿವಾಸ ಧಾರಾವಾಹಿ ಜನಮನಸೂರೆಗೊಳ್ಳುವಲ್ಲಿ ಯಶಸ್ವಿಯಾಗಿದೆ. ಇತ್ತೀಚೆಗೆ ಆರಂಭಗೊಂಡ ಈ ಧಾರಾವಾಹಿ ತನ್ನ ಕೌಟುಂಬಿಕ ಕಥಾಹಂದರದಿಂದ ಜನಮನ ಗೆದ್ದಿದೆ. ಜೊತೆಗೆ ಈ ಧಾರಾವಾಹಿಯನ್ನು ನೋಡುವ ಜನರ ಸಂಖ್ಯೆ ಕೂಡಾ ಹೆಚ್ಚಾಗುತ್ತಿದೆ.
ದೊಡ್ಡ ತರಾಬಳಗ ಹೊಂದಿರುವ ಲಕ್ಷ್ಮೀ ನಿವಾಸ ಕಥೆ, ಚಿತ್ರಕಥೆ, ಸಂಭಾಷಣೆ, ನಟನಾ ವರ್ಗ ಎಲ್ಲದರಿಂದಲೂ ಗಮನ ಸೆಳೆಯುತ್ತಿದೆ. ಸದ್ಯ ಧಾರಾವಾಹಿ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ.
ಧಾರಾವಾಹಿಯಲ್ಲಿ ಇತ್ತೀಚೆಗೆ ಮದುವೆ ಸಮಾರಂಭಗಳು ಬಹಳ ಅದ್ಧೂರಿಯಾಗಿ ನಡೆಯುತ್ತಿದೆ. ಮದುವೆ ಸೆಟ್ ನೋಡಿದ್ರೆ ರಿಯಲ್ ಮದುವೆಯ ಸಂಭ್ರಮದ ಕಳೆ ಕಾಣಿಸುತ್ತದೆ. ಲಕ್ಷ್ಮೀ ನಿವಾಸದಲ್ಲಿ ಈಗಾಗಲೇ ಭಾವನಾಳ ಮದುವೆಯನ್ನು ಸಾಲ-ಸೋಲ ಮಾಡಿ ಬಹಳ ವಿಜೃಂಭಣೆ ಅಲ್ಲದಿದ್ದರೂ ಒಂದಷ್ಟರ ಮಟ್ಟಿಗೆ ಮದುವೆಯನ್ನು ಮಾಡಿದ್ದರು. ಆದರೆ ಆ ಮದುವೆ ಅರ್ಧದಲ್ಲೇ ಮುರಿದು ಹೋಯಿತು. ಇದೀಗ ಜಾಹ್ನವಿಯ ಮದುವೆ ಮುರಿದು ಬೀಳುತ್ತೊ ಅನ್ನೋ ಚಿಂತೆಯಲ್ಲಿದ್ದಾರೆ ಪ್ರೇಕ್ಷಕರು.
ಜಯಂತ್ ಮತ್ತು ಜಾಹ್ನವಿ ಮದುವೆಗೆ ತಯಾರಾಗಿದ್ದು, ಜಾಹ್ನವಿ ಬಹಳ ಮದುಮಗಳಾಗಿ ಸುಂದರವಾಗಿ ಅಲಂಕಾರಗೊಂಡಿದ್ದಾಳೆ. ಜಾಹ್ನವಿಯನ್ನು ಮದುವೆಯಾಗುವ ಜಯಂತ್ ಶ್ರೀಮಂತ ಕುಟುಂಬದಿಂದ ಬಂದಿರುವುದರಿಂದ ಮದುವೆಯಂತೂ ಬಹಳ ವಿಜೃಂಭಣೆಯಿಂದ ನಡೆಯುತ್ತಿದೆ. ಮದುವೆಗೆ ಹಾಕಿರುವ ಸೆಟ್ ಅಂತೂ ಕಣ್ಮನ ಸೆಳೆಯುವಂತಿತ್ತು.
ಕಾಶಿಗೆ ಹೊರಟ ಜಯಂತ್ನನ್ನು ತಡೆಹಿಡಿದ ಶ್ರೀನಿವಾಸ್..
ಮದುವೆ ಮುಹೂರ್ತಕ್ಕೂ ಮೊದಲು ಗಂಡಿನ ಕಾಲು ತೊಳಿಯುವುದು ಶಾಸ್ತ್ರ. ಜಯಂತ್ ನನಗೆ ಮದುವೆ ಬೇಡ ನಾನು ಕಾಶಿಗೆ ಹೋಗುತ್ತೇನೆ ಎಂದು ಹೊರಟು ನಿಂತಿದ್ದ. ಆದರೆ ಮಾವ ಶ್ರೀನಿವಾಸ್ ಅಳಿಯನ ಮನವೊಲಿಸಿ ಮದುವೆಗೆ ಒಪ್ಪಿಸುತ್ತಾನೆ. ಕಾಶಿಗೆ ಹೋಗದ ಅಳಿಯ ತನ್ನ ಕಾಲನ್ನು ಮಾವನಿಂದ ತೊಳೆಸಿಕೊಳ್ಳದೆ ಮಾವನ ಕಾಲನ್ನು ತೊಳೆದು ಕನ್ಯಾದಾನವನ್ನು ಕೇಳುತ್ತಾನೆ.
ಮದುವೆ ಮನೆಗೆ ಕಾಲಿಟ್ಟ ವಿಶ್ವ..!!
ಇನ್ನೇನು ಜಾಹ್ನವಿ-ಜಯಂತ್ ದಂಪತಿಗಳಾಗುವ ಸಮಯ ಸಮೀಪಿಸುತ್ತಿರುವ ವೇಳೆ ವಿಶ್ವ ಮದುವೆಯನ್ನು ಮುರಿಯುತ್ತಾನಾ..!? ಎನ್ನುವ ಭಯ ಪ್ರೇಕ್ಷಕರಲ್ಲಿ ಕಾಡಿದೆ. ಹೌದು, ವಿಶ್ವ ಜಾಹ್ನವಿ ಇಬ್ರೂ ಜೊತೆಗೆ ಕಾಲೇಜಿಗೆ ಹೋಗ್ತಾ ಇದ್ರು. ವಿಶ್ವ ಜಾಹ್ನವಿ ಮೇಲೆ ಬೆಟ್ಟದಷ್ಟು ಪ್ರೀತಿ ಇಟ್ಟುಕೊಂಡಿದ್ದರೂ ಕೂಡಾ ಜಾಹ್ನವಿ ಬಳಿ ತನ್ನ ಪ್ರೀತಿಯನ್ನು ಹೇಳಿಕೊಳ್ಳಿಲ್ಲ. ಜಾಹ್ನವಿಗೂ ತನ್ನ ಜೀವದ ಗೆಳೆಯ ವಿಶ್ವ ತನ್ನನ್ನ ಪ್ರೀತಿಸುತ್ತಿದ್ದಾನೆ ಅನ್ನುವುದು ಗೊತ್ತಿಲ್ಲ. ಇದೀಗ ಜಾಹ್ನವಿ- ಜಯಂತ್ ಮದುವೆ ಸಿದ್ಧವಾಗಿದೆ. ವಿಶ್ವ ಮದುವೆಗೆ ಬಾರದೇ ಇದ್ದುದ್ದನ್ನು ಕಂಡು ಜಾಹ್ನವಿ ಫೋನ್ ಮಾಡಿ ಮದುವೆಗೆ ಬರುವಂತೆ ಹೇಳಿ ಬರದಿದ್ದಲ್ಲಿ ಇನ್ನುಮುಂದೆ ಮಾತುಕತೆ ಇರುವುದಿಲ್ಲ ಎಂದು ಹೇಳುತ್ತಾಳೆ. ಮನಸ್ಸು ಪೂರ್ತಿ ಜಾಹ್ನವಿಯನ್ನು ಪ್ರೀತಿಯಿಂದ ಪೂಜಿಸುತ್ತಿರುವ ವಿಶ್ವನಿಗೆ ಅವಳು ಇನ್ನೊಬ್ಬನ ಜೊತೆ ಮದುವೆಯಾಗುವುದನ್ನು ನೋಡಲು ಸಾಧ್ಯವಾಗಲಿಲ್ಲ. ಜಾಹ್ನವಿಯ ಮಾತಿಗೆ ಕಟ್ಟುಬಿದ್ದು ಮದುವೆಗೆ ಬರುತ್ತಾನೆ.
ಮದುವೆ ಮುರಿಯುತ್ತಾನಾ ವಿಶ್ವ..!?
ಮನಸ್ಸಿನಲ್ಲಿ ಜಾಹ್ನವಿಯನ್ನು ತುಂಬಿಕೊಂಡು ಒಲ್ಲದ ಮನಸ್ಸಿನಿಂದ ಮದುವೆ ಸಮಾರಂಭಕ್ಕೆ ಬಂದ ವಿಶ್ವ ಮದುವೆ ಮಂಟಪದ ಮುಂದೆ ಹಾಕಿರುವ ಜಾಹ್ನವಿ ವೆಡ್ಸ್ ವಿಶ್ವ ಬೋರ್ಡ್ ನೋಡಿ ಮತ್ತಷ್ಟು ಉದ್ವೇಗಕ್ಕೆ ಒಳಗಾಗುತ್ತಾನೆ. ಬೋರ್ಡ್ ಕಿತ್ತು ಹಾಕುವಷ್ಟು ಕೋಪ. ಮದುವೆಯನ್ನು ನಿಲ್ಲಿಸುವ ಉದ್ದೇಶದಿಂದ ಒಳ ಹೋಗುತ್ತಾನೆ.
ಈ ಧಾರಾವಾಹಿಯಲ್ಲಿ ಈಗಾಗಲೇ ಅಕ್ಕ ಭಾವನಾಳ ಮದುವೆಯನ್ನು ಮುರಿದು ಹಾಕಿದ್ದು ಸಾಕಷ್ಟು ನಷ್ಟ ಆಗಿತ್ತು. ಇದೀಗ ತಂಗಿಯ ಮದುವೆಯನ್ನೂ ಮುರಿದು ಇನ್ನಷ್ಟು ನಷ್ಟಕ್ಕೆ ಸಿಲುಕುತ್ತಿದ್ದಾರೆ. ಧಾರಾವಾಹಿಯ ನಿರ್ಮಾಪಕರಿಗೆ ಹಣ ಜಾಸ್ತಿ ಆಗಿರಬೇಕೋ ಏನೋ.. ಎಂದು ನೆಟ್ಟಿಗರು ಹೇಳುತ್ತಿದ್ದಾರೆ. ಒಂದು ವೇಳೆ ಜಾಹ್ನವಿಯ ಮದುವೆ ಮುರಿದರೆ ನಾವಂತೂ ಧಾರಾವಾಹಿಯನ್ನು ನೋಡಲ್ಲ ಎಂದು ಹೇಳುತ್ತಿದ್ದಾರೆ. ಧಾರಾವಾಹಿಯಲ್ಲಿ ಮುಂದೇನಾಗುತ್ತೆ ಎಂದು ಕಾದು ನೋಡಬೇಕಿದೆ.
FILM
ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ‘ಸ್ಯಾಂಡಲ್ ವುಡ್ ಸಲಗ’
ಬೈಂದೂರು : ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ರಾಜಕೀಯ ಮುಖಂಡರು, ನಟ ನಟಿಯರು ಭೇಟಿ ನೀಡುತ್ತಿರುತ್ತಾರೆ. ಇದೀಗ ದುನಿಯಾ ವಿಜಯ್ ಅವರು ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಶ್ರೀ ಮೂಕಾಂಬಿಕೆ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ತಮ್ಮ ಸ್ನೇಹಿತರೊಂದಿಗೆ ದುನಿಯಾ ವಿಜಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ ಸಂದರ್ಭ ಅವರ ಅಭಿಮಾನಿಗಳು ಅವರೊಂದಿಗೆ ಫೋಟೋ ತೆಗೆಸಿಕೊಂಡರು.
ಕಾಲ್ನಡಿಗೆಯಲ್ಲಿ ನಂಜನಗೂಡು ಕ್ಷೇತ್ರಕ್ಕೆ ಹೋಗಿದ್ದ ನಟ:
ದುನಿಯಾ ವಿಜಿ ಇತ್ತೀಚೆಗೆ ಬೆಂಗಳೂರಿನಿಂದ ಕಾಲ್ನಡಿಗೆಯಲ್ಲಿ ಹೊರಟು ನಂಜನಗೂಡಿನ ನಂಜುಂಡೇಶ್ವರ ದರ್ಶನ ಪಡೆದಿದ್ದರು. ಸತತ ಐದು ದಿನಗಳ ಕಾಲ ತಮ್ಮ ಸಂಗಡಿಗರ ಜೊತೆ ನಡೆದುಕೊಂಡೇ ನಂಜನಗೂಡು ತಲುಪಿದ್ದರು. ಹಗಲು ರಾತ್ರಿ ಲೆಕ್ಕಿಸದೇ ಪಾದಯಾತ್ರೆ ಮಾಡಿದ್ದರು.
ಸಿನಿಮಾಗಳಲ್ಲಿ ಬ್ಯುಸಿ :
ದುನಿಯಾ ವಿಜಯ್ ಸಾಲು ಸಾಲು ಸಿನಿಮಾಗಳಲ್ಲಿ ಬಿಝಿಯಾಗಿದ್ದಾರೆ. ನಟನೆಯ ಜೊತೆಗೆ ನಿರ್ದೇಶಕನ ಕ್ಯಾಪ್ ಕೂಡ ಅವರು ಹಾಕಿದ್ದಾರೆ.’ಸಲಗ’ ಚಿತ್ರದ ಮೂಲಕ ನಿರ್ದೇಶಕನಾಗಿ ಬಡ್ತಿ ಪಡೆದಿದ್ದ ಅವರು, ‘ಭೀಮ’ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ. ನಿಖಿಲ್ ಕುಮಾರ್ ಸಿನಿಮಾದಲ್ಲೂ ದುನಿಯಾ ವಿಜಯ್ ನಟಿಸುತ್ತಿದ್ದಾರೆ.
ಇದನ್ನೂ ಓದಿ : ಬಿಗ್ ಬಾಸ್ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ನಮ್ರತಾ ಗೌಡ!
ಚಿತ್ರರಂಗಕ್ಕೆ ವಿಜಿ ಮಗಳು ಎಂಟ್ರಿ :
ದುನಿಯಾ ವಿಜಯ್ ತಮ್ಮ ಮಗ ಸಾಮ್ರಾಟ್ ನನ್ನು ಈಗಾಗಲೇ ಭೀಮ ಚಿತ್ರದ ಮೂಲಕ ಪರಿಚಯಿಸುವ ತಯಾರಿಯಲ್ಲಿದ್ದಾರೆ. ಇದೀಗ ಮಗಳನ್ನೂ ಚಿತ್ರರಂಗಕ್ಕೆ ಕರೆತರುತ್ತಿದ್ದಾರೆ. ಕಾಟೇರ ಚಿತ್ರಕ್ಕೆ ಕಥೆ ಬರೆದಿದ್ದ ಜಡೇಶ್ ಹಂಪಿ ನಿರ್ದೇಶನದಲ್ಲಿ ಮೂಡಿ ಬರಲಿರುವ ಹೊಸ ಸಿನಿಮಾದಲ್ಲಿ ತಂದೆ – ಮಗಳು ಇಬ್ಬರೂ ಕಾಣಿಸಿಕೊಳ್ಳುತ್ತಿದ್ದಾರೆ.
‘ಜಾನಿ ಮೇರಾ ನಾಮ್ ಪ್ರೀತಿ ಮೇರಾ ಕಾಮ್’ ಚಿತ್ರದಲ್ಲಿ ಜೊತೆಯಾಗಿದ್ದ ದುನಿಯಾ ವಿಜಯ್ ಮತ್ತು ರಚಿತಾ ರಾಮ್ ಮತ್ತೆ ಈ ಚಿತ್ರದ ಮೂಲಕ ಒಂದಾಗುತ್ತಿದ್ದಾರೆ. ಇದರಲ್ಲಿ ವಿಜಿ ಮಗಳು ಮೋನಿಕಾ/ರಿತನ್ಯಾ ನಟಿಸುತ್ತಿದ್ದಾರೆ. ಇದು ದುನಿಯಾ ವಿಜಯ್ ಅವರ 29 ನೇ ಸಿನಿಮಾ.
FILM
ಬಿಗ್ ಬಾಸ್ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ನಮ್ರತಾ ಗೌಡ!
ಬೆಂಗಳೂರು : ಬಿಗ್ ಬಾಸ್ ಕನ್ನಡ ಕಿರುತೆರೆಯಲ್ಲಿ ಬಹಳ ಸದ್ದು ಮಾಡುವ ಅತಿದೊಡ್ಡ ರಿಯಾಲಿಟಿ ಶೋ. ಹಿರಿತೆರೆ, ಕಿರುತೆರೆ, ಸಾಮಾನ್ಯ ವ್ಯಕ್ತಿ, ಸಾಧಕ ಶೋನಲ್ಲಿ ಭಾಗಿಯಾಗ್ತಾನೆ. ಈ ಶೋ ಯಾವಾಗಲೂ ಸದ್ದು ಮಾಡುತ್ತಿರುತ್ತದೆ. ಸ್ಪರ್ಧಿಗಳೂ ಸದಾ ಸುದ್ದಿಯಲ್ಲಿರುತ್ತಾರೆ. ಇದೀಗ ಬಿಗ್ ಬಾಸ್ ಸೀಸನ್ 10 ರ ಸ್ಪರ್ಧಿ, ನಟಿ ನಮ್ರತಾ ಗೌಡ ಆಶ್ಚರ್ಯಕರ ಹೇಳಿಕೆ ನೀಡಿದ್ದಾರೆ.
ಪ್ಲ್ಯಾನ್ ಪ್ರಕಾರ ನಡೆಯುತ್ತಿಲ್ಲ:
ನಮ್ರತಾ ಗೌಡ ಯಾರಿಗೆ ತಾನೇ ಗೊತ್ತಿಲ್ಲ. ನಾಗಿಣಿ ಎಂದಾಕ್ಷಣ ತಟ್ಟನೆ ನೆನಪಾಗುವ ಹೆಸರು. ಕನ್ನಡ ಕಿರುತೆರೆಯಲ್ಲಿ ಖ್ಯಾತರಾದವರು. ನಾಗಿಣಿ ಮುಗಿಯುತ್ತಿದ್ದಂತೆ ಬಿಗ್ ಬಾಸ್ ನತ್ತ ಲಗ್ಗೆ ಇಟ್ಟರು. ಬಿಗ್ ಬಾಸ್ ನಲ್ಲಿ ಇದ್ದಾಗ ವಿನಯ್ ಗೌಡ, ನಮ್ರತಾ, ರಕ್ಷಕ್ ಬುಲೆಟ್, ಈಶಾನಿ, ಮೈಕಲ್ ಅಜಯ್ ಜೊತೆಯಾಗಿ ಇರುತ್ತಿದ್ದರು.
ಬಿಗ್ ಬಾಸ್ ಪೂರ್ಣಗೊಂಡ ಬಳಿಕ ಹೊರಗೆ ಪ್ರತಿ ವಾರ ಸಿಗೋಣ, ಪಾರ್ಟಿ ಮಾಡೋಣ ಎಂದೆಲ್ಲ ಪ್ಲ್ಯಾನ್ ಮಾಡಿದ್ದರು. ಬಿಗ್ ಬಾಸ್ ಪೂರ್ಣಗೊಂಡ ಬಳಿಕ ಆರಂಭದಲ್ಲಿ ಕೆಲವು ಬಾರಿ ಇವರು ಭೇಟಿ ಆಗಿದ್ದು ಇದೆ. ಈಗ ಆ ರೀತಿಯ ಭೇಟಿಗಳು ನಿರಂತರವಾಗಿ ನಡೆಯುತ್ತಿಲ್ಲ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ : ಅತ್ತೆ – ಅಳಿಯ ಲವ್; ಹೆಂಡತಿಯನ್ನೇ ತ್ಯಾಗ ಮಾಡಿದ ಪತಿ! ಏನಿದು ಕಥೆ?
ದಿನವೂ ಸಿಗಬೇಕು ಇಲ್ಲವಾದರೆ ವಾರಕ್ಕೆ ಒಮ್ಮೆ ಆದರೂ ಸಿಗಬೇಕು ಎಂದು ಬಿಗ್ ಬಾಸ್ನಲ್ಲಿ ಪ್ಲ್ಯಾನ್ ಮಾಡಿದ್ದೀವಿ. ಆದರೆ, ಅದೆಲ್ಲ ನಡೆಯುತ್ತಿಲ್ಲ. ನನ್ನ ಸರ್ಕಲ್ನಲ್ಲಿ ಇರುವವರನ್ನು ನನ್ನ ಬರ್ತ್ ಡೇ ಕರೆದಿದ್ದೆ. ನಾನು ರೆಗ್ಯುಲರ್ ಆಗಿ ಯಾರ ಜೊತೆಗೂ ಕಂಟ್ಯಾಕ್ಟ್ ಇಲ್ಲ. ವಿನಯ್, ಈಶಾನಿ ಜೊತೆ ಆಗಾಗ ಕಾಲ್ನಲ್ಲಿ ಮಾತನಾಡುತ್ತೇನೆ. ರಕ್ಷಕ್, ಕಾರ್ತಿಕ್ ಹಾಗೂ ಇತರರು ಈವೆಂಟ್ನಲ್ಲಿ ಮಾತಾಡ್ತೀನಿ ಎಂದಿದ್ದಾರೆ.
ಕಾರು ಖರೀದಿಸಿದ ನಟಿ :
ಇತ್ತೀಚೆಗಷ್ಟೇ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ನಮ್ರತಾ ಗೌಡ, ಅಂದು ನಮ್ರತಾ ಗೌಡ ಅವರು ಹೊಸ ಕಾರೊಂದನ್ನು ಖರೀದಿಸಿದ್ದರು. ಎಂಜಿ ಕಾಮೆಟ್ ಎಲೆಕ್ಟ್ರಿಕ್ ಕಾರನ್ನು ನಮ್ರತಾ ಗೌಡ ಖರೀದಿಸಿದ್ದರು. ಈ ಕಾರಿನ ಬೆಲೆ 8 ರಿಂದ 9 ಲಕ್ಷ ರೂ. ಆಗಿದೆ. ಕಾರು ಕೊಂಡ ಸಂಭ್ರಮವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಅವರ ಅಭಿಮಾನಿಗಳು ಶುಭಹಾರೈಸಿದ್ದರು.
FILM
ಬೆಳ್ಳಿತೆರೆಯಲ್ಲಿ ಮತ್ತೊಮ್ಮೆ ಅಬ್ಬರಿಸಲಿದೆ ‘ಪುನೀತ್’ ಸಿನೆಮಾ..! ಯಾವ ಸಿನೆಮಾ?
ಬೆಂಗಳೂರು: ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿನಯದ ಫ್ಯಾಮಿಲಿ ಪ್ಯಾಕೇಜ್, ಹಿಟ್ ಮೂವಿಯೊಂದು ರಿ ರಿಲೀಸ್ಗೆ ರೆಡಿಯಾಗಿದೆ. ಮಾರ್ಚ್ ನಲ್ಲಿ ಅಪ್ಪು ಅಭಿನಯದ ಜಾಕಿ ಚಿತ್ರ ರಿ ರಲೀಸ್ ಆಗಿದ್ದು ಹಿಟ್ ಲಿಸ್ಟ್ಅಲ್ಲಿ ಸೇರಿಕೊಂಡಿದೆ. ಇದೀಗ ಅವರ ಅಭಿನಯದ ಮತ್ತೊಂದು ಸಿನೆಮಾ ‘ಅಂಜನಿಪುತ್ರ’ ರಿ ರಲೀಸ್ಗೆ ತಯಾರಾಗಿದೆ.
ರಿ ರಿಲೀಸ್ ಯಾವಾಗ?
ಪುನೀತ್ ರಾಜ್ಕುಮಾರ್, ರಶ್ಮಿಕಾ ಮಂದಣ್ಣ, ರಮ್ಯಾ ಕೃಷ್ಣನ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದ ಅಂಜನಿ ಪುತ್ರ ಸಿನಿಮಾ ಇದೀಗ ಮರು ಬಿಡುಗಡೆ ಆಗುತ್ತಿದೆ. ಹರ್ಷ ನಿರ್ದೇಶನದಲ್ಲಿ ಮೂಡಿ ಬಂದ ಈ ಚಿತ್ರ, ಎನ್ಎಮ್ಕೆ ಮೂವೀಸ್ ಲಾಂಛನದಲ್ಲಿ ಬಿಡುಗಡೆಗೊಂಡಿತ್ತು. 2017ರಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾ ಈಗ ಆರು ವರ್ಷಗಳ ಬಳಿಕ ಮತ್ತೆ ಚಿತ್ರಮಂದಿರಕ್ಕೆ ಬರುತ್ತಿದೆ. ರಾಜ್ಯದ ಹಲವು ಚಿತ್ರಮಂದಿರಗಳಲ್ಲಿ ಮೇ.10ರಂದು ಸಿನೆಮಾ ರಿಲೀಸ್ ಆಗಲಿದೆ ಎಂದು ನಿರ್ಮಾಪಕ ಎಮ್ಎನ್ ಕುಮಾರ್ ತಿಳಿಸಿದ್ದಾರೆ.
ಮುಂದೆ ಓದಿ..; ನೇ*ಣಿಗೆ ಶರಣಾದ ಯುವ ನಟಿ..! ಸಾ*ವಿಗೂ ಮುನ್ನ ವ್ಯಾಟ್ಸಾಪ್ ಸ್ಟೇಟಸ್ನಲ್ಲಿ ಬರೆದಿದ್ದೇನು..!
ರವಿ ಬಸ್ರೂರು ಸಂಗೀತ ನಿರ್ದೇಶನದಲ್ಲಿ ಮೂಡಿ ಬಂದ ಈ ಚಿತ್ರ ಹಿಟ್ ಸಾಂಗ್ಗಳನ್ನು ಒಳಗೊಂಡಿದೆ. ಅದರಲ್ಲೂ’ಭಾರಿ ಖುಷಿ ಮರ್ರೆ ನನ್ನ ಹೆಂಡ್ತಿ ಕಂಡ್ರೆ’ ಸಾಂಗ್ ಎಲ್ಲರ ತುಟಿಯಂಚಿನಲ್ಲಿ ಈಗಲೂ ಗುಣುಗುಟ್ಟುವಂತಿದೆ. ಮುಂದಿನ ದಿನಗಳಲ್ಲಿ ಪುನೀತ್ ಹಲವು ಸಿನೆಮಾಗಳು ರಿ ರಿಲೀಸ್ ಆಗುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗಿದೆ.
- FILM7 days ago
“ನಿತ್ಯಾಮೆನನ್” ಚಿತ್ರರಂಗದಿಂದ ‘ಬ್ಯಾನ್’ ಆಗಲು ಕಾರಣವೇನು ಗೊತ್ತಾ? ಈ ಬಗ್ಗೆ ನಿತ್ಯಾ ಹೇಳಿದ್ದೇನು?
- DAKSHINA KANNADA7 days ago
ನಮ್ಮ ಮಾತುಗಳಿಗೆ ಅಸ್ತು ಅನ್ನುವ ಅಶ್ವಿನಿ ದೇವತೆಗಳು – ಯಾರಿವರು?
- LATEST NEWS7 days ago
ಕಾಲಿನ ಮೂಲಕವೇ ಕಾರು ಚಲಾಯಿಸಿ, ಡ್ರೈವಿಂಗ್ ಲೈಸೆನ್ಸ್ ಪಡೆದ ಏಷ್ಯಾದ ಮೊದಲ ಮಹಿಳೆ!
- DAKSHINA KANNADA6 days ago
ಪತ್ನಿ ಮಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಪದ್ಮರಾಜ್ ಪೂಜಾರಿ