Connect with us

LATEST NEWS

ಮುಂಬೈ ರಸ್ತೆಗೆ ಬಿಲ್ಲವ ನೇತಾರ ಜಯ ಸಿ ಸುವರ್ಣ ಹೆಸರಿಟ್ಟು ಗೌರವ

Published

on

ಮಂಗಳೂರು: ನಾರಾಯಣ ಗುರುಗಳ ಆದರ್ಶ, ಸಮಾಜೋದ್ಧಾರಕ್ಕಾಗಿ ತನ್ನ ಜೀವನದ ಸರ್ವಸ್ವವನ್ನೂ ಮುಡುಪಾಗಿಟ್ಟ ಮಹಾನ್‌ ಚೇತನ ದೇಶವಿದೇಶದ ಬಿಲ್ಲವ ಜನಾಂಗಗಳನ್ನು ಒಗ್ಗೂಡಿಸಿ ಸಮಾಜ ಕಟ್ಟಿಮ ಮಹಾ ಯಶಸ್ವೀ ನಾಯಕ, ಭಾರತ್‌ ಕೋ ಆಪರೇಟಿವ್‌ ಬ್ಯಾಂಕಿನ ಸಂಸ್ಥಾಪಕ ದಿ.ಜಯ ಸಿ ಸುವರ್ಣ ಅವರ ಹೆಸರನ್ನು ಮುಂಬೈ ಮಹಾನಗರಿಯ ರಸ್ತೆಯೊಂದಕ್ಕೆ ಇರಿಸುವ ಮೂಲಕ ಚಿರಸ್ಮಾಯಿನ್ನಾಗಿಸಲಾಗಿದೆ.


ಎಲ್ಲರ ಪ್ರೀತಿಯ ಜಯಣ್ಣ ಎಂದೇ ಕರೆಸಲ್ಪಡುವವರು ದಿ. ಜಯ ಸಿ ಸುವರ್ಣ. ನಾರಾಯಣ ಗುರುಗಳ ಆದರ್ಶ, ಸಮಾಜೋದ್ಧಾರಕ್ಕಾಗಿ ತನ್ನ ಜೀವನವನ್ನೇ ಮುಡಿಪಾಗಿಸಿಟ್ಟ ಕರ್ಮಯೋಗಿ, ಮಹಾನಗರದಲ್ಲಿ ಜನಾನುರಾಗಿಯಾಗಿ ಬೆಳೆದ ದಿ. ಜಯ ಸಿ ಸುವರ್ಣ ಮಾಡಿದ ಸಾಧನೆಗಳು ಒಂದೆರಡಲ್ಲ.

ಭಾರತ್‌ ಕೋ ಆಪರೇಟಿವ್‌ ಬ್ಯಾಂಕಿನ ಸಂಸ್ಥಾಪಕರಾಗಿ ಒಂದಿಷ್ಟೂ ಕಪ್ಪು ಚುಕ್ಕೆ ಇಲ್ಲದೇ ಬೆಳೆದು ಬಂದ ಇದರ ಜಯ ಸುವರ್ಣರ ಹೆಸರು ಇಂದು ಮಹಾರಾಷ್ಟ್ರ ನೆಲದಲ್ಲಿ ಅಚ್ಚಳಿಯದೇ ನಿಂತಿದೆ.

ಮುಂಬಯಿಯ ಗೋರೆಗಾಂವ್‌ ಪಿ ದಕ್ಷಿಣ ವಾರ್ಡ್‌ ಶ್ರೀ ದತ್ತ ಮಂದಿರ ಚೌಕ್‌, ಗೋರೆಗಾಂವ್‌ ರೈಲ್ವೇ ನಿಲ್ದಾಣ ಮಾರ್ಗಕ್ಕೆ ಜಯ ಸುವರ್ಣ ರಸ್ತೆ ಎನ್ನುವ ಹೆಸರನ್ನಿರಿಸಲಾಗಿದ್ದು, ಇದರ ಉದ್ಘಾಟನಾ ಸಮಾರಂಭ ಅದ್ದೂರಿಯಾಗಿ ನಡೆಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಗಣ್ಯಾತಿಗಣ್ಯರು ಪಾಲ್ಗೊಂಡರು.

ದಿವಂಗತ ಜಯ ಸಿ ಸುವರ್ಣ ಅವರು ಪ್ರತಿಯೊಂದು ಕ್ಷೇತ್ರದಲ್ಲಿ ಸಾಧನೆ ಮಾಡಿದವರು. ಅವರಂತಹ ಕೆಲಸವನ್ನು ಯಾರಿಂದಲೂ ಮಾಡಲು ಸಾಧ್ಯವಿಲ್ಲ. ಅವರೊಬ್ಬರಿಂದಲೇ ಈ ಸಾಧನೆ ಮಾಡಲು ಸಾಧ್ಯ.

ಪ್ರಾಮಾಣಿಕತೆ, ಪರಿಶ್ರಮ, ಕೌಶಲ್ಯ, ಬುದ್ಧಿಮತ್ತೆ ಹೀಗೆ ಪ್ರತಿಯೊಂದರಲ್ಲೂ ಅವರು ಅಷ್ಟೇ ಕಾಳಜಿ ವಹಿಸಿಕೊಂಡು ಕೆಲಸ ಮಾಡುತ್ತಿದ್ದರು.

ಬ್ಯಾಂಕಿಂಗ್‌ ವಿಚಾರದಲ್ಲಿ ಹಲವು ಗೋಲ್‌ ಮಾಲ್ ಆಗುತ್ತಿದೆ. ಆದರೆ ಇಂದಿಗೂ ಕೂಡಾ ಭಾರತ್‌ ಬ್ಯಾಂಕ್‌ ಇಂದು ತನ್ನ ಹೆಸರನ್ನು ಅಷ್ಟೇ ಪರಿಶುದ್ಧವಾಗಿ ಉಳಿಸಿಕೊಂಡು ಬಂದಿದೆ. ದುಡ್ಡು ಮನುಷ್ಯನ್ನು ಸಿರಿವಂತನನ್ನಾಗಿ ಮಾಡುತ್ತದೆ.

ಆದರೆ ಸಿರಿವಂತನಾದರೂ ಒಂದಿಷ್ಟೂ ಅಹಂ ತೋರಿಸದೇ ಕಪ್ಪು ಚುಕ್ಕೆ ಇಲ್ಲದೇ ಕೆಲಸ ಮಾಡಿದವರು ಜಯ ಸಿ ಸುವರ್ಣ ಎಂದು ಸಚಿವರು ಶ್ಲಾಘಿಸಿದರು.

ನಾನು ಭಾರತ್‌ ಕೋ ಆಪರೇಟಿವ್‌ ಬ್ಯಾಂಕ್‌ನಿಂದಲೇ ಎಲ್ಲಾ ಕೆಲಸ ಕಾರ್ಯಗಳನ್ನು ಆರಂಭಿಸಿದೆ. ಭಾರತ್‌ ಬ್ಯಾಂಕ್‌ ಬಿಟ್ಟು ಇನ್ಯಾವುದರಲ್ಲೂ ನಾವು ನಂಬಿಕೆ ಇಡುವಂತೆ ಕಾಣ್ತಿಲ್ಲ ಎಂದು ನನ್ನ ಸ್ನೇಹಿತರಲ್ಲಿ ಹೇಳಿದ್ದೆ. ಇದು ಅವರ ಮೇಲೆ ನಾವು ಬಹಳಷ್ಟು ಇಟ್ಟಿರುವ ಪ್ರೀತಿಗೆ ಕಾರಣವಾಗಿದೆ ಎಂದರು.

ಸ್ವಪ್ನೇಲಿಂ ತೆಂಡೂಲ್ಕರ್ ಕಾರ್ಪೋರೇಟರ್‌, ಶ್ರೀಮತಿ ಸಾಧನಾ ತಾಯಿ ಮಾಣೈ, ಬಿಲ್ಲವರ ಅಸೋಸಿಯೇಶನ್‌ ಅಧ್ಯಕ್ಷ ಹರೀಶ್ ಅಮೀನ್‌, ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಕೆ ಶೆಟ್ಟಿ, ಬಿಲ್ಲವರ ಮಹಾಮಂಡಳದ ಅಧ್ಯಕ್ಷ ರಾಜಶೇಖರ ಕೋಟ್ಯಾನ್‌, ಭಂಡಾರಿ ಸಮುದಾಯದ ನೇತಾರ ಆರ್‌ ಎಂ ಭಂಡಾರಿ,

ಕರ್ನಾಟಕದ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್‌, ಬೆಂಗಳೂರು ಬಿಲ್ಲವರ ಸಂಘದ ಅಧ್ಯಕ್ಷ ವೇದಕುಮಾರ್‌ ಹಲವು ಮಂದಿ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಜಯ ಸಿ ಸುವರ್ಣ ಅವರ ಜೀವನದ ಕುರಿತಾದ ಸಾಧನೆಗಳ ಕುರಿತಂತೆ ನಿತ್ಯಾನಂದ ಕೋಟ್ಯಾನ್ ಅವರು ಬರೆದ ಪುಸ್ತಕವನ್ನು ಸಚಿವರು ಈ ಸಂದರ್ಭ ಬಿಡುಗಡೆ ಮಾಡಿದರು. ದಿ. ಜಯ ಸಿ ಸುವರ್ಣ ಅವರ ಪುತ್ರ ಸೂರ್ಯಕಾಂತ ಸುವರ್ಣ ಎಲ್ಲರನ್ನೂ ಸ್ವಾಗತಿಸಿದರು.

ಮುಂಬೈಯ ಉಪನಗರವಾಗಿರುವ ಗೋರೆಗಾಂವ್ ಪೂರ್ವದಲ್ಲಿ ಸಣ್ಣ ಉದ್ಯಮವನ್ನು ಪ್ರಾರಂಭಿಸಿ ಸಾಧನೆಯ ಮೆಟ್ಟಿಲನ್ನು ಏರುತ್ತಾ ಏರುತ್ತಾ ಮಹಾನಗರದಲ್ಲಿ ಜನನಾಯಕರಾಗಿ ಬೆಳೆದು ನಿಂತವರು.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಅಪೂರ್ವ ಸಮಾಜಸೇವಕ ಜಯ ಸಿ ಸುವರ್ಣರು ಇಹಲೋಕ ತ್ಯಜಿಸಿ ಅಕ್ಟೋಬರ್ 21ಕ್ಕೆ ಒಂದು ವರ್ಷ ಪೂರ್ತಿಯಾಗುತ್ತಿದ್ದು, ಇಂತಹ ಸಂದರ್ಭದಲ್ಲಿ ಗೋರೆಗಾಂವ್ ರಸ್ತೆಗೆ ಅವರ ಹೆಸರು ಚಿರಸ್ಥಾಯಿಯಾಗಿ ಇರುವಂತೆ ಮಾಡಿರುವುದು ನಮಗೂ ಹೆಮ್ಮೆಯ ವಿಚಾರ.

 

Click to comment

Leave a Reply

Your email address will not be published. Required fields are marked *

LATEST NEWS

ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

Published

on

ಉಡುಪಿ : ಪ್ರಧಾನಿ ಮೋದಿ ಚಿಕ್ಕಬಳ್ಳಾಪುರ ಬೆಂಗಳೂರು ಪ್ರವಾಸ ಮಾಡ್ತಿದ್ದಾರೆ. ಮೂರು ಬಾರಿ ಕಾರಣಾಂತರದಿಂದ ಉಡುಪಿಗೆ ಬರಲು ಸಾಧ್ಯವಾಗಿರಲಿಲ್ಲ. ಪ್ರಧಾನಮಂತ್ರಿ ಕಚೇರಿಯಿಂದ ಅನುಮತಿ ಪಡೆದು ಉಡುಪಿ ಬಂದಿದ್ದೇನೆ. ಕರಾವಳಿ ಜನರ ರಕ್ತದಲ್ಲಿ ಹಿಂದುತ್ವ ಇದೆ. ಮೋದಿಯ 10 ವರ್ಷದ ಆಡಳಿತವನ್ನು ಜಗತ್ತು ಕೊಂಡಾಡಿದೆ. ಎಲ್ಲಾ ಅಸಾಧ್ಯಗಳನ್ನು ಪ್ರಧಾನಿ ಮೋದಿ ಸಾಧ್ಯ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಹೇಳಿದ್ದಾರೆ.


ಉಡುಪಿಯಲ್ಲಿ ನಡೆದ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಡೀ ದೇಶದ ಜನರಲ್ಲಿ ವಿಶ್ವಾಸ -ಭರವಸೆ ಮೂಡಿಸಿದ್ದು ಮೋದಿ. ರಾಮಮಂದಿರ, ಆರ್ಟಿಕಲ್ 370 ರದ್ದು, ಅಭಿವೃದ್ಧಿ ಎಲ್ಲವೂ ಮೋದಿ ಕಾಲದಲ್ಲಿ ಆಗಿದೆ. ಬಿಜೆಪಿ ಸಂವಿಧಾನ ಬದಲಾವಣೆ ಮಾಡುತ್ತೆ. ನಾವು ರಕ್ಷಣೆ ಮಾಡ್ತೇವೆ ಎಂದು ಖರ್ಗೆ ಹೇಳ್ತಾರೆ. ಮೋದಿ ಮತ್ತೆ ಪ್ರಧಾನಿ ಆಗಬಾರದು ಅಂತ ಖರ್ಗೆ ಕರೆ ಕೊಡ್ತಾರೆ. ಕಾಂಗ್ರೆಸ್ಸಿಗರು ಅಂಬೇಡ್ಕರ್ ಅವರನ್ನು ಬದುಕಿದ್ದಾಗಲೇ ಕಗ್ಗೊ*ಲೆ ಮಾಡಿದ್ದಾರೆ. ಅಂಬೇಡ್ಕರ್ ರನ್ನು ಸೋಲಿಸಿದ್ದು ಕಾಂಗ್ರೆಸ್ ಪಕ್ಷ. ಬಾಬಾ ಸಾಹೇಬರ ಅಂತ್ಯ ಸಂಸ್ಕಾರಕ್ಕೂ ಅವಕಾಶ ಕೊಟ್ಟಿಲ್ಲ. ಅಂಬೇಡ್ಕರ್ ರ ಪಂಚ ತೀರ್ಥಕ್ಷೇತ್ರ ಅಭಿವೃದ್ಧಿ ಮಾಡಿದ್ದು ಮೋದಿ – ಬಿಜೆಪಿ ಸರಕಾರ ಎಂದರು.

ಇದನ್ನೂ ಓದಿ : ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್

Continue Reading

DAKSHINA KANNADA

ಕಡಬ: ಬಿಳಿನೆಲೆ ಕಾಡಿನಲ್ಲಿ ಅಸ್ಥಿಪಂಜರ ಪತ್ತೆ ..!

Published

on

ಕಡಬ: ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿಯಿರುವ ಕಾಡಿನಲ್ಲಿ ಅಸ್ಥಿಪಂಜರ ಪತ್ತೆಯಾಗಿರುವ ಬಗ್ಗೆ ಎ.19ರಂದು ವರದಿಯಾಗಿದೆ. ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದ ಪಕ್ಕದಲ್ಲಿ ಅಸ್ಥಿಪಂಜರ ದೊರಕಿದೆ.

ಅಸ್ಥಿಪಂಜರ

ಬಿಳಿನೆಲೆಯ ಚಂದ್ರಶೇಖರ್ ಎಂವರು ಕಾಡಿಗೆ ಸೌದೆ ತರಲು ಹೋಗಿದ್ದಾಗ ಕೊಳೆತ ವಾಸನೆ ಬಂದಿದೆ. ಈ ಬಗ್ಗೆ ಹುಡುಕಾಡಿದಾಗ ಮೃತ ವ್ಯಕ್ತಿಯ ಅಸ್ಥಿಪಂಜರ ಕಂಡುಬಂದಿದೆ. ದೂರದದಲ್ಲಿದ್ದ ಮರದ ಕೊಂಬೆಯಲ್ಲಿ ಬಟ್ಟೆಯೊಂದು ನೇತಾಡುವುದು ಕಂಡು ಬಂದಿದೆ.

Read More..;ಸೈಕಲ್ ರಿಪೇರಿ ವಿಚಾರಕ್ಕೆ ಜೀ*ವಾಂತ್ಯಗೊಳಿಸಿದ ಬಾಲಕ..!

ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಯುಡಿ ಆರ್‌:12/2024 ಕಲಂ:174(3),(iv) CrPC ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Continue Reading

DAKSHINA KANNADA

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್

Published

on

ಬಂಟ್ವಾಳ : ಅನೇಕ ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಕಾರ್ಪೋರೇಟರ್‌ ಆಗಿ ಮೇಯರ್ ಆಗಿದ್ದ ಕವಿತಾ ಸನಿಲ್ ಇದೀಗ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಮುಂಚೂಣಿಯಲ್ಲಿದ್ದ ಕವಿತಾ ಸನಿಲ್‌ ವಿಧಾನ ಸಭಾ ಚುನಾವಣೆಯಲ್ಲೂ ಸಾಕಷ್ಟು ಪ್ರಚಾರ ಮಾಡಿದ್ರು. ಸಿಎಂ ಸಿದ್ದರಾಮಯ್ಯ ಅವರಿಗೂ ಉತ್ತಮ ಒಡನಾಟ ಇಟ್ಟುಕೊಂಡಿದ್ದ ಕವಿತಾ ಸನಿಲ್ ಸದ್ಯ ಪಕ್ಷದ ನಾಯಕರ ಬಗ್ಗೆ ಅಸಮಾಧಾನಗೊಂಡಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ರೂ ತನಗೆ ಸೂಕ್ತ ಸ್ಥಾನಮಾನ ನೀಡಿಲ್ಲ ಎಂದು ಪಕ್ಷ ಚಟುವಟಿಕೆಯಿಂದ ದೂರ ಉಳಿದಿದ್ದರು. ಯಾವುದಾದರು ಒಂದು ನಿಗಮ ಸಿಗಬಹುದು ಎಂಬ ಅವರ ನಿರೀಕ್ಷೆ ಹುಸಿಯಾದ ಹಿನ್ನಲೆಯಲ್ಲಿ ಇದೀಗ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬಂಟ್ವಾಳಕ್ಕೆ ಆಗಮಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಂದ ಬಿಜೆಪಿ ಬಾವುಟ ಪಡೆದು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಇದನ್ನೂ ಓದಿ : ಸೂಪರ್ ಹಿಟ್ ಚಿತ್ರ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್ ಡೇಟ್ ಫಿಕ್ಸ್!

Continue Reading

LATEST NEWS

Trending