DAKSHINA KANNADA
ಸುರತ್ಕಲ್ ಮಸಣ ಸೇರಿದ್ದು ಅಭಿನಂದನೆಯ ಫ್ಲೆಕ್ಸಲ್ಲ-ಬಿಜೆಪಿಯ ರಾಜಕಾರಣ: ಮುನೀರ್ ಕಾಟಿಪಳ್ಳ
ಮಂಗಳೂರು: ಸುರತ್ಕಲ್ ಅಕ್ರಮ ಟೋಲ್ ಗೇಟ್ ವಿರುದ್ಧದ ಹೋರಾಟ ಯಶಸ್ವಿಯ ಹಂತಕ್ಕೆ ತಲುಪಿದೆ. ದ.ಕ ಜಿಲ್ಲಾಧಿಕಾರಿ ಡಿಸೆಂಬರ್ ಒಂದರಿಂದ ಟೋಲ್ ಸಂಗ್ರಹ ಸ್ಥಗಿತಕ್ಕೆ ಲಿಖಿತ ಆದೇಶ ಹೊರಡಿಸಿದ್ದಾರೆ. ಬಿಜೆಪಿ ಪಕ್ಷ ಮಾತ್ರ ತನ್ನದೇ ಸಾಧನೆಯಂತೆ ಬಿಂಬಿಸಲು ಹೊರಟು ಮುಜುಗರಗೊಳಗಾಗಿ ಇನ್ನು ಈಗಾಗಲೇ ತಯಾರಿಸಿದ ಅಭಿನಂದನೆಯ ಬ್ಯಾನರ್, ಫ್ಲೆಕ್ಸ್ ಗಳನ್ನು ಅಳವಡಿಸಲು ಸಾಧ್ಯವಾಗದೆ ಅವುಗಳೆಲ್ಲಾ ಸುರತ್ಕಲ್ ಸ್ಮಶಾನದ ಮೂಲೆ ಸೇರಿದೆ. ನಿಜವಾಗಿ ಸ್ಮಶಾನ ಸೇರಿದ್ದು ಅಭಿನಂದನೆಯ ಪ್ಲೆಕ್ಸ್ ಗಳಲ್ಲ ಅದು ಬಿಜೆಪಿ ಪಕ್ಷದ ಅತ್ಯಂತ ಕೆಟ್ಟ, ನಿರ್ಲಜ್ಜ, ಜನವಿರೋಧಿ ರಾಜಕಾರಣ ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕರಾದ ಮುನೀರ್ ಕಾಟಿಪಳ್ಳ ಇಂದು 33ನೇ ದಿನದ ಹಗಲು ರಾತ್ರಿ ಧರಣಿಯನ್ನು ಉದ್ದೇಶಿಸಿ ಮಾತನಾಡಿದರು.
ಸುರತ್ಕಲ್ ಅಕ್ರಮ ಟೋಲ್ ಗೇಟ್ ವಿರುದ್ಧದ ಹೋರಾಟವು ಐತಿಹಾಸಿಕ ಗೆಲುವನ್ನು ಸಾಧಿಸಿದೆ. ಈ ಹೋರಾಟದ ಜೊತೆಯಾಗಿ ನಿಂತ ದ.ಕ ಮತ್ತು ಉಡುಪಿ ಜಿಲ್ಲೆಯ ಜನಕ್ಕೂ ಹೋರಾಟದಿಂದ ಏನನ್ನೂ ಸಾಧಿಸಬಹುದೆಂಬ ಒಂದು ಹೊಸ ಭರವಸೆಯನ್ನು ತುಂಬಲು ಸಾಧ್ಯವಾಗಿದೆ.
ತುಳುನಾಡಿನ ಮಣ್ಣಿನ ನಿಜವಾದ ಬೇಡಿಕೆ ಶಿಕ್ಷಣ, ಉದ್ಯೋಗ, ಆರೋಗ್ಯದಂತಹ ಪ್ರಶ್ನೆಗಳು. ಶಿಕ್ಷಣ, ಆರೋಗ್ಯದಂತಹ ವ್ಯಾಪಾರಿಕರಣದ ವಿರುದ್ಧವೂ ಜಿಲ್ಲೆಯ ಜನ ಮುಂದಿನ ದಿನಗಳಲ್ಲಿ ಹೋರಾಟವನ್ನು ಕೈಗೊಳ್ಳಲು ಸಾಧ್ಯವಾಗಬೇಕು.
ಈಗಾಗಲೇ ಸುರತ್ಕಲ್ ಟೋಲ್ ಗೇಟ್ ರದ್ದುಗೊಂಡಿರುವ ಹಿಂದೆಯೇ ಹೆಜಮಾಡಿ ಟೋಲ್ ಗೇಟ್ ನಲ್ಲಿ ಹೆಚ್ಚುವರಿ ಸುಂಕ ವಸೂಲಿ ಮಾಡಲು ಮುಂದಾಗುವುದರ ವಿರುದ್ಧ ಆಕ್ರೋಶಗಳು ಆ ಭಾಗದಲ್ಲೂ ದಾಖಲಾಗುತ್ತಿದ್ದೆ.
ಹೆಜಮಾಡಿಯಲ್ಲೂ ಕೋಮುವಾದಿ, ನಿರ್ಲಜ್ಜ, ಫರ್ಸಂಟೇಜ್ ಬಿಜೆಪಿ ಸರಕಾರದ ಜನವಿರೋಧಿ ನೀತಿಗಳನ್ನು ಎಳೆಎಳೆಯಾಗಿ ವಿವರಿಸಲಿದ್ದೇವೆ. ಡಿಸೆಂಬರ್ ಎರಡರಂದು ಹೆಜಮಾಡಿ ಟೋಲ್ ಗೇಟ್ ಮುಂಭಾಗ ನಡೆಯುವ ಧರಣಿಯಲ್ಲೂ ನಾವುಗಳು ಭಾಗವಹಿಸುವ ಮೂಲಕ ಅಲ್ಲಿನ ಹೋರಾಟಕ್ಕೆ ಸಹಮತವನ್ನು ವ್ಯಕ್ತಪಡಿಸಬೇಕಾಗಿದೆ ಎಂದರು.
ಮಾಜಿ ಶಾಸಕ ಮೊಯಿದ್ದಿನ್ ಬಾವಾ, ಸಿಐಟಿಯು ಕಾರ್ಮಿಕ ಮುಖಂಡರಾದ ಬಾಲಕೃಷ್ಣ ಶೆಟ್ಟಿ, ಬೀಡಿ ಕಾರ್ಮಿಕ ಮುಖಂಡರು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು ಪದ್ಮಾವತಿ ಶೆಟ್ಟಿ, ಬಾಬು ಪಿಲಾರ್, ಸದಾಶಿವ ದಾಸ್, ಹೋರಾಟ ಸಮಿತಿ ಮುಖಂಡರಾದ ರಾಘವೇಂದ್ರ ರಾವ್ ಧರಣಿಯನ್ನು ಉದ್ದೇಶಿಸಿ ಮಾತನಾಡಿದರು.
ಮಾಜಿ ಮೇಯರ್ ಪುರುಷೋತ್ತಮ ಚಿತ್ರಾಪುರ, ಮುಹಮ್ಮದ್ ಕುಂಜತ್ತಬೈಲ್, ಮಾಜಿ ಮೇಯರ್ ಬಶೀರ್ ಬೈಕಂಪಾಡಿ, ಡಿವೈಎಫ್ಐ ದ.ಕ ಜಿಲ್ಲಾಧ್ಯಕ್ಷರಾದ ಬಿ.ಕೆ ಇಮ್ತಿಯಾಜ್, ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಮೂಸಬ್ಬ ಪಕ್ಷಿಕೆರೆ, ಮಾಜಿ ಕಾರ್ಪೊರೇಟರ್ ಜಯಂತಿ ಬಿ ಶೆಟ್ಟಿ, ಕಾಂಗ್ರೇಸ್ ಮುಖಂಡರಾದ ಸಾಹುಲ್ ಹಮೀದ್ , ಪಾರಡೈಸ್ ಯೂತ್ ಕ್ಲಭ್ ನ ಅಬೂಬಕ್ಕರ್, ಉಸ್ಮಾನ್, ಝಾಕಿರ್, ಡಿವೈಎಫ್ಐ ಮುಖಂಡರಾದ ಮಾಧುರಿ ಬೋಳಾರ, ಪ್ರಮೀಳಾ ಶಕ್ತಿನಗರ, ವಿಲ್ಲಿ ವಿಲ್ಸನ್ ಮುಂತಾದವರು ಉಪಸ್ಥಿತರಿದ್ದರು.
DAKSHINA KANNADA
ಪಾವಂಜೆ ನದಿಯಲ್ಲಿ ಅಪರಿಚಿತ ಯುವಕನ ಶವ ಪತ್ತೆ..!
ಮುಲ್ಕಿ: ಮಂಗಳೂರು ಹೊರವಲಯದ ಮುಲ್ಕಿಯ ಠಾಣಾ ವ್ಯಾಪ್ತಿಯ ಹಳೆಯಂಗಡಿ ಸಮೀಪದ ಪಾವಂಜೆ ಮಹಾಲಿಂಗೇಶ್ವರ ದೇವಸ್ಥಾನದ ನಂದಿನಿ ನದಿಯ ದಡದಲ್ಲಿ ಸುಮಾರು 19 ರಿಂದ 20 ವರ್ಷದ ಒಳಗಿನ ಪ್ರಾಯದ ಯುವಕನ ಶವ ಪತ್ತೆಯಾಗಿದೆ.
ಹಳೆಯಂಗಡಿ ಪೂಜಾ ಫ್ರೆಂಡ್ಸ್ ನ ಸದಸ್ಯರು ಸ್ಥಳಕ್ಕೆ ಧಾವಿಸಿ ಶವವನ್ನು ಆಂಬುಲೆನ್ಸ್ ಮೂಲಕ ಮೂಲ್ಕಿ ಸಮುದಾಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಯುವಕನ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.
ಕಳೆದ ದಿನಗಳ ಹಿಂದೆ ಇದೇ ಪರಿಸರದ ಚೇಳಾಯರು ಅಣೆಕಟ್ಟಿನ ಬಳಿ ಯುವಕನೊಬ್ಬ ನಾಪತ್ತೆಯಾಗಿದ್ದು, ಈ ಶವ ಆತನದ್ದೇ ಇರಬೇಕು ಇರಬೇಕೆಂಬ ಶಂಕೆ ವ್ಯಕ್ತವಾಗಿದೆ.
ಮುಲ್ಕಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆದಿದೆ.
DAKSHINA KANNADA
Kadaba: ಹಠಾತ್ ಕಾಡಾನೆ ದಾಳಿ- ವ್ಯಕ್ತಿ ಗಂಭೀರ..!
ಕಡಬ: ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಗಂಭೀರ ಸ್ಥಿತಿಗೊಂಡು ಆಸ್ಪತ್ರೆಯಲ್ಲಿ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತೂರು ಗ್ರಾಮದ ಮರ್ಧಾಳ-ಕೊಣಾಜೆಯಲ್ಲಿ ನಡೆದಿದೆ.
ಐತ್ತೂರು ಗ್ರಾಮದ ಗರ್ತಿಲ ನಿವಾಸಿ ಓಡಿ ಎಂಬವರ ಪುತ್ರ ಕೂಲಿ ಕಾರ್ಮಿಕ ಚೋಮ (56) ಗಾಯಗೊಂಡವರು.
ಚೋಮ ಅವರು ಸಂಜೆ ವೇಳೆ ಕೆಲಸ ಬಿಟ್ಟು ಮನೆಗೆ ತೆರಳುತ್ತಿದ್ದ ಸಂದರ್ಭ ನೆಲ್ಯಡ್ಕ ಶಾಲೆಯ ಸಮೀಪ ಇರುವ ಕಾರ್ತಿಕೇಯ ಭಜನಾ ಮಂದಿರ ಬಳಿ ಆನೆಯೊಂದು ಹಠತ್ ದಾಳಿ ನಡೆಸಿದೆ.
ಪರಿಣಾಮ ವ್ಯಕ್ತಿ ಗಂಭೀರ ಗಾಯಗೊಂಡಿದ್ದಾರೆ.
ಸದ್ಯ ಚೋಮ ಅವರ ಸ್ಥಿತಿಯು ಚಿಂತಾಜನಕವಾಗಿದ್ದು, ಕಡಬದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಈ ಹಿಂದೆ ಆನೆ ದಾಳಿಯ ಘಟನೆಗಳು ನಡೆದಿದ್ದು, ಕೃಷಿ ನಾಶದಂತಹ ಘಟನೆಗಳು ದಿನಂಪ್ರತಿ ನಡೆಯುತ್ತಿದೆ ಎನ್ನಲಾಗಿದೆ.
DAKSHINA KANNADA
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಅಧ್ಯಕ್ಷರಾಗಿ ಪದ್ಮಪ್ರಸಾದ್ ಜೈನ್ ಆಯ್ಕೆ
ಮಂಗಳೂರು: ಮಂಗಳೂರು ಸೊಬೆಸ್ಟಿಯನ್ ಹಾಲ್ ನಲ್ಲಿ ನಡೆದ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಪದಾಧಿಕಾರಿಗಳ ಚುನಾವಣಾ ಪ್ರಕ್ರಿಯೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯನ್ನೊಳಗೊಂಡ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷರಾಗಿ ಪದ್ಮಪ್ರಸಾದ್ ಜೈನ್ ಆಯ್ಕೆಯಾಗಿದ್ದಾರೆ.
ಸಂಚಾಲಕರಾಗಿ ಕರುಣಾಕರ್ ಕಾನಂಗಿ ಮಂಗಳೂರು, ಪ್ರಧಾನ ಕಾರ್ಯದರ್ಶಿಯಾಗಿ ದಯಾನಂದ ಬಂಟ್ವಾಳ, ಕೋಶಾಧಿಕಾರಿಯಾಗಿ ನವೀನ್ ರೈ ಪಂಜಳ, ಉಪಾಧ್ಯಕ್ಷರಾಗಿ ರಮೇಶ್ ಕಲಾ ಶ್ರೀ ಮಂಗಳೂರು, ಜಯಕರ್ ಸುವರ್ಣ ಉಡುಪಿ, ಜೊತೆ ಕಾರ್ಯದರ್ಶಿ ಹರೀಶ್ ಪಿ ಕೋಟ್ಯಾನ್ ಮುಲ್ಕಿ, ಹೆರಿಕ್ ಡಿಸೋಜ ಬ್ರಹ್ಮಾವರ, ಸಂಘಟನಾ ಕಾರ್ಯದರ್ಶಿ ಕೃಷ್ಣರಾವ್ ಕಾಪು, ರಮೇಶ್ ಹೊಸಬೆಟ್ಟು ಸುರತ್ಕಲ್, ಛಾಯಾ ಕಾರ್ಯದರ್ಶಿ ರವಿ ಕೋಟ್ಯಾನ್ ಮೂಡಬಿದ್ರಿ, ಕ್ರೀಡಾ ಕಾರ್ಯದರ್ಶಿ ರಂಜಿತ್ ಕುಂದಾಪುರ, ಭಾರದ್ವಾಜ್ ಬೆಳ್ತಂಗಡಿ, ಸಾಂಸ್ಕೃತಿಕ ಕಾರ್ಯದರ್ಶಿ ಚಿದಾನಂದ್ ಉಳ್ಳಾಲ ಮಾಧ್ಯಮ ಕಾರ್ಯದರ್ಶಿ ಹರೀಶ್ ರಾವ್ ಆಯ್ಕೆಯಾಗಿದ್ದಾರೆ.
ಈ ಚುನಾವಣಾ ಪ್ರಕ್ರಿಯೆಯನ್ನು ಎಸ್ ಕೆಪಿಎ ಯ ನಿಕಟ ಪೂರ್ವ ಜಿಲ್ಲಾಧ್ಯಕ್ಷ ಆನಂದ್ ಬಂಟ್ವಾಳ್ ಅವರು ನಡೆಸಿಕೊಟ್ಟರು.
- bangalore6 days ago
ಹುಡುಗಿ ಚೇಂಜ್ ಆದ್ರೂ ಡ್ರೆಸ್ ಚೇಂಜ್ ಆಗಿಲ್ಲ ಅಲ್ವಾ ಶೆಟ್ರೇ?
- bengaluru5 days ago
ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ..!
- DAKSHINA KANNADA4 days ago
2ನೇ ಮದುವೆಯಾದ ಕಿರುತೆರೆ ನಟಿ ಜ್ಯೋತಿ ರೈ …!
- DAKSHINA KANNADA5 days ago
ಮುಂದಿನ ವರ್ಷದಿಂದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ 3 ಬೋರ್ಡ್ ಎಕ್ಸಾಮ್- ಮಧು ಬಂಗಾರಪ್ಪ