Connect with us

    BANTWAL

    ಬಂಟ್ವಾಳದಲ್ಲಿ ಪಾದಾಚಾರಿ ಸಾವಿಗೆ ಕಾರಣವಾಗಿದ್ದ ತಮಿಳುನಾಡು ಚಾಲಕನಿಗೆ ನ್ಯಾಯಾಂಗ ಬಂಧನ

    Published

    on

    ಬಂಟ್ವಾಳ: ಬಂಟ್ವಾಳ ಬಿಸಿರೋಡ್ ನ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ 2017ನೇ ವರ್ಷದಲ್ಲಿ ಪಾದಚಾರಿಯೋರ್ವನಿಗೆ ಢಿಕ್ಕಿ ಹೊಡೆದು ಆತನ ಸಾವಿಗೆ ಕಾರಣನಾಗಿ, ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿ ಟ್ಯಾಂಕರ್ ಚಾಲಕನನ್ನು ಟ್ರಾಫಿಕ್ ಠಾಣೆಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.


    ದಕ್ಷಿಣ ಕನ್ನಡ ಜಿಲ್ಲೆಯ ಪಾದಾಚಾರಿಗೆ ತಮಿಳುನಾಡು ಮೂಲದ ಪೆರಂಬದೂರು ಜಿಲ್ಲೆಯ ವೇಪನ್ ತಾಲೂಕಿನ ಪೆರಿಯಾ ವಡಗರೈ ನಿವಾಸಿ ಸೇಲ್ವರಾಜ್ (44) ಎಂಬಾತನನ್ನು ಆಂಧ್ರಪ್ರದೇಶದದ ಕಡಪ ಎಂಬಲ್ಲಿಂದ ಪೋಲಿಸರು ಬಂಧಿಸಿದ್ದಾರೆ.


    ಈತ ಟ್ಯಾಂಕರ್ ಚಾಲಕನಾಗಿದ್ದು 2017ರಲ್ಲಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡು ಕೈಕಂಬದ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೋರ್ವನಿಗೆ ಢಿಕ್ಕಿ ಹೊಡೆದ ಪರಿಣಾಮ ಆತ ಮೃತಪಟ್ಟಿದ್ದ.

    ಆರೋಪಿಯನ್ನು ಟ್ರಾಫಿಕ್ ಎಸ್.ಐ.ಮೂರ್ತಿ ಅವರ ಮಾರ್ಗದರ್ಶನದಲ್ಲಿ ಸಿಬ್ಬಂದಿ ದೇವದಾಸ್ ಹಾಗೂ ರಾಜು ಅವರು ಅಂಧ್ರಪ್ರದೇಶದಿಂದ ಬಂಧಿಸಿ ಕರೆ ತಂದಿದ್ದಾರೆ.

     

    Click to comment

    Leave a Reply

    Your email address will not be published. Required fields are marked *

    BANTWAL

    ಕಾರು-ಲಾರಿ ಮುಖಾಮುಖಿ ಡಿಕ್ಕಿ; ಕಾರಿನಲ್ಲಿದ್ದ ವ್ಯಕ್ತಿ ಗಂಭೀ*ರ

    Published

    on

    ಬಂಟ್ವಾಳ: ಬಂಟ್ವಾಳ ತಾಲೂಕಿನ ಮೆಲ್ಕಾರ್ ಸಮೀಪದ ಮಾರ್ನಬೈಲು ಎಂಬಲ್ಲಿ ಕ್ರೆಟ್ಟಾ ಕಾರು ಹಾಗೂ ಲಾರಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಎರಡೂ ವಾಹನಗಳು ಅತ್ಯಂತ ವೇಗವಾಗಿ ಸಂಚರಿಸುತ್ತಿದ್ದ ಸಂದರ್ಭದಲ್ಲಿ ನಡೆದ ಈ ಅಪಘಾತದಲ್ಲಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಸಜಿಪ ಎಂಬಲ್ಲಿ ಅಂಗಡಿ ನಡೆಸುತ್ತಿದ್ದ ಬೋಳಂಗಡಿಯ ಮುಸ್ತಾಫ ಎಂಬವರಿಗೆ ಸೇರಿದ ಕಾರು ಇದಾಗಿದ್ದು ಕಾರಿನಲ್ಲಿದ್ದ ಮುಸ್ತಾಫ ಅವರಿಗೆ ಗಂಭೀರ ಗಾಯವಾಗಿದೆ.

     

    ಅಪಘಾತ ನಡೆದ ತಕ್ಷಣ ಸ್ಥಳೀಯರು ಕಾರಿನಲ್ಲಿ ಸಿಲುಕಿದ್ದ ಮುಸ್ತಾಫ ಅವರನ್ನು ಕಾರಿನಿಂದ ಹೊರಗೆ ತೆಗೆದು ಆಸ್ಪತ್ರೆಗೆ ರವಾನಿಸಿದ್ದಾರೆ.

    ಪ್ರೀತಿಗಾಗಿ ಪೀಡಿಸಿದ ಅನ್ಯಮತೀಯ ಯುವಕ ಪೊಲೀಸ್ ವಶಕ್ಕೆ..!

    ತೀವ್ರ ಸ್ವರೂಪದ ಗಾಯವಾಗಿರುವ ಮುಸ್ತಾಫ ಅವರಿಗೆ ಬಂಟ್ವಾಳದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆತರಲಾಗಿದೆ. ಗಾಯಾಳು ಮುಸ್ತಾಫ ಅವರ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

    Continue Reading

    BANTWAL

    ಬಿರುಗಾಳಿ ಸಹಿತ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ; ಎಲ್ಲೆಲ್ಲಿ?

    Published

    on

    ಮಂಗಳೂರು : ರಾಜ್ಯದ ಹಲವು ಭಾಗಗಳು ಭಾರಿ ಮಳೆಯಿಂದ ಹೈರಾಣಾಗಿದ್ದವು. ಆ ಬಳಿಕ ಕೊಂಚ ವಿರಾಮ ಪಡೆದಿದ್ದ ಮಳೆ ಮತ್ತೆ ಆರ್ಭಟಿಸುವ ಲಕ್ಷಣ ಕಾಣುತ್ತಿದೆ. ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
    ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನಲ್ಲೂ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

    ಎಲ್ಲೆಲ್ಲಿ ಮಳೆ ?

    ದಕ್ಷಿಣ ಒಳನಾಡಿನ‌ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ.

    ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಾದ್ಯಂತ ರಭಸವಾಗಿ ಗಾಳಿ ಬೀಸಲಿದೆ. ಜೊತೆಗೆ ಭಾರೀ ಮಳೆ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಸೇರಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಧ್ಯಮ ಮಳೆಯಾಗಲಿದೆ.

    ಶಿವಮೊಗ್ಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುನ್ಸೂಚನೆ ನೀಡಿದೆ.

    Continue Reading

    BANTWAL

    ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ; ಪ್ರಯಾಣಿಕರು ಗಂಭೀ*ರ

    Published

    on

    ಬಂಟ್ವಾಳ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಮಗುಚಿ ಬಿದ್ದು ಹತ್ತಕ್ಕೂ ಅಧಿಕ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಪರಂಗಿಪೇಟೆ ಸಮೀಪದ ಹತ್ತನೇ ಮೈಲಿಕಲ್ಲು ಎಂಬಲ್ಲಿ ಆ.16ರಂದು ಮುಂಜಾನೆ ಸಂಭವಿಸಿದೆ.

    ಬಸ್ಸು ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿತ್ತು. ಘಟನೆಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ, ಆದರೆ ಚಾಲಕನ ಅತಿ ವೇಗದ ಚಾಲನೆ ಅಥವಾ ವಾಹನದಲ್ಲಿನ ತಾಂತ್ರಿಕ ದೋಷಗಳಿಂದ ಅಪಘಾತ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯ ಯುವಕರು ಗಾಯಗೊಂಡವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದರು.  ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೋಲೀಸರು ಭೇಟಿ ನೀಡಿದ್ದಾರೆ.

    Continue Reading

    LATEST NEWS

    Trending