Connect with us

LATEST NEWS

ಕೊನೆಗೂ ಬಂಧಮುಕ್ತಗೊಂಡ ಜಗತ್ತಿನ ಏಕೈಕ ಒಬ್ಬಂಟಿ ಆನೆ ಕಾವನ್..!

Published

on

                  ಕೊನೆಗೂ ಬಂಧಮುಕ್ತಗೊಂಡ ಜಗತ್ತಿನ ಏಕೈಕ ಒಬ್ಬಂಟಿ ಆನೆ ಕಾವನ್..!

ಕರಾಚಿ : ಪಾಕಿಸ್ತಾನದಲ್ಲಿ 35 ವರ್ಷಗಳಿಂದ ಮೃಗಾಲಯದಲ್ಲಿ ಏಕಾಂಗಿಯಾಗಿ ಜೀವಿಸುತ್ತಿದ್ದ ಕಾವನ್ ಎಂಬ ಆನೆಗೆ ಅಂತಿಮವಾಗಿ  ವಿಮುಕ್ತಿ ದೊರೆತಿದೆ.ಪಾಕಿಸ್ಥಾನದ ಇಸ್ಲಾಮಾಬಾದ್‌ ‘ಝೂ’ ನಲ್ಲಿದ್ದ ಏಕೈಕ ಏಷ್ಯನ್‌ ಆನೆಯನ್ನು ಕಾಂಬೋಡಿಯಕ್ಕೆ ಸ್ಥಳಾಂತರ ಮಾಡಲು ಸಿದ್ದತೆ ನಡೆಸಲಾಗುತ್ತಿದೆ.“ಕಾವನ್‌’ ಹೆಸರಿನ ಈ ಆನೆಗೆ ಇಸ್ಲಾಮಾಬಾದ್‌ ಝೂ ನಲ್ಲಿ ಏರ್ಪಡಿಸಿದ್ದ ವಿದಾಯ ಸಮಾರಂಭದಲ್ಲಿ, ಶುಭ ಹಾರೈಸಲು ಪಾಕಿಸ್ತಾನದ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಮಂತ್ರಿಗಳು ಸೇರಿದ್ದು ವಿಶೇಷವಾಗಿತ್ತು.ಪ್ರಾಣಿ ಹಕ್ಕುಗಳ ನ್ಯಾಯವಾದಿ ಮತ್ತು ಪಾಪ್‌ ತಾರೆಯಾದ ‘ಚೆರ್‌’ ಅವರ ಹಲವು ವರ್ಷಗಳ ಪರಿಶ್ರಮ ಮತ್ತು ಅಭಿಯಾನದ ಫ‌ಲವಾಗಿ ಕಾವನ್‌ಗೆ ಏಕಾಂಗಿ ಜೀವನದಿಂದ ಬಿಡುಗಡೆ ದೊರೆತಿದೆ.ಇದೀಗ ಆನೆಯನ್ನು ಇಸ್ಲಾಮಾಬಾದ್‌ ಝೂ ನಿಂದ ಕಾಂಬೋಡಿಯದ ಅಭಯಾರಣ್ಯಕ್ಕೆ ಏರ್‌ಲಿಫ್ಟ್ ಮಾಡಲು ಅನುಮತಿ ದೊರೆತಿದೆ. ಕಾವನ್‌ನ ವಿದಾಯ ಕೂಟದಲ್ಲಿ ಪಾಕಿಸ್ತಾನದ ವಿವಿಧ ಇಲಾಖೆಯ ಮಂತ್ರಿಗಳು, ಶಾಸಕರು ಹಾಜರಿದ್ದು, ಬಲೂನು ಮತ್ತು ಆಕಾಶ ಬುಟ್ಟಿಯನ್ನು  ಶೃಂಗರಿಸುವ  ಮೂಲಕ ವಿದಾಯ  ಸಮಾರಂಭವನ್ನು ಮತ್ತಷ್ಟು ವಿಶೇಷವಾಗಿಸಿದ್ದಾರೆ.ಕಾವನ್‌ಗೆ ಸಂಗೀತ ಮತ್ತು ಪ್ರಾಣಿ ಪಾರುಗಾಣಿಕಾ ಸಂಸ್ಥೆ ಫೋರ್‌ ಪಾವ್ಸ್‌ನ ಪಶುವೈದ್ಯ ಅಮೀರ್‌ ಖಲಿಲ್‌ ಎಂದರೆ ತುಂಬಾ ಇಷ್ಟ. ಕಾವನ್‌ ಆನೆ ಕೋಪಗೊಂಡಾಗೆಲ್ಲ ಫ್ರಾಂಕ್‌ ಸಿನಾತ್ರಾ ಅವರ ಸಂಗೀತ ಕೇಳಿಸುವ ಮೂಲಕ ಖಲೀಲ್‌ ಸಮಾಧಾನಪಡಿಸುತ್ತಿದ್ದರು.

ಆನೆಯನ್ನು ಏರ್‌ಲಿಫ್ಟ್ ಮಾಡುವುದಕ್ಕೂ ಮೊದಲು ಪಾಕಿಸ್ತಾನದ ಜನರಿಗೆ ಕಾವನ್‌ಗೆ ಶುಭ ವಿದಾಯ ಹೇಳಲು ಅವಕಾಶ ಮಾಡಿಕೊಡಲಾಗಿದೆ.4.8 ಟನ್‌ ತೂಕದ ಆನೆಯನ್ನು ಏರ್‌ಲಿಫ್ಟ್ ಮಾಡುವುದು ಅಷ್ಟು ಸುಲಭದ ಮಾತಲ್ಲ. ಇದಕ್ಕೆ ಬೇಕಾದ ತರಭೇತಿಯನ್ನು ಕಾವನ್‌ಗೆ ನೀಡಲಾಗಿದೆ ಎನ್ನುತ್ತಾರೆ ಫೋರ್‌ ಪಾವ್ಸ್‌ನ ವಕ್ತಾರ ಮರಿಯನ್‌ ಲೊಂಬಾರ್ಡ್‌.

10 ಗಂಟೆಗಳ ಹಾರಾಟ, ಸಣ್ಣ ಮತ್ತು ಅಧಿಕ ಪ್ರಮಾಣ ಶಬ್ದಕ್ಕೆ ಒಗ್ಗಿಕೊಳ್ಳುವಂತೆ ಶಸ್ತ್ರಸಜ್ಜಿತ ತರಬೇತುದಾರರ ತಂಡ ಕಾವನ್‌ಗೆ ಒಂದು ವಾರ ಕಾಲ ತರಬೇತಿ ನೀಡುತ್ತಿದೆ. ತದನಂತರದಲ್ಲಿ ಅದನ್ನು ಕಾಂಬೋಡಿಯಕ್ಕೆ ಏರ್‌ಲಿಫ್ಟ್ ಮಾಡಲಾಗುವುದು ಎಂದು ವರದಿಯಾಗಿದೆ.

Click to comment

Leave a Reply

Your email address will not be published. Required fields are marked *

FILM

ಮೊದಲ ಬಾರಿ ಮದುವೆ ರಹಸ್ಯ ಬಿಚ್ಚಿಟ್ಟ ಹಳ್ಳಿಕಾರ್‌ ಒಡೆಯ ವರ್ತೂರು ಸಂತೋಷ್

Published

on

ಬೆಂಗಳೂರು : ಬಿಗ್‌ಬಾಸ್‌ ಕನ್ನಡ ಸೀಸನ್‌ 10ರಲ್ಲಿ ಹಲವು ಸ್ಪರ್ಧಿಗಳು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದಾರೆ. ಇದರಲ್ಲಿ ಹುಲಿ ಉಗುರು ಧರಿಸಿದ ಕಾರಣಕ್ಕೆ ಪೊಲೀಸರಿಂದ ಹಳ್ಳಿಕಾರ್‌ ಒಡೆಯ ವರ್ತೂರು ಸಂತೋಷ್‌ ಅವರ ಬಂಧನವಾಗಿತ್ತು. ಈಗ ಮದುವೆ ವಿಚಾರ ಮತ್ತೆ ಮುನ್ನೆಲೆಗೆ ಬಂದು ನಿಂತಿದೆ.

ಬಿಗ್ ಬಾಸ್ ಮನೆಯಲ್ಲಿಯೇ ತಮ್ಮ ಮದುವೆ ಸತ್ಯವನ್ನು ಬಿಚ್ಚಿಟ್ಟಿದ್ದಾರೆ. ವರ್ತೂರು ಸಂತೋಷ್ ಅವರಿಗೆ ಮದುವೆ ಆಗಿದೆ. ಒಬ್ಬಳು ಹೆಣ್ಣು ಮಗು ಕೂಡ ಇದೆ. ಆದರೆ ಅವರು ಮದುವೆ ಆಗಿಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ಕೆಲದಿನಗಳ ಹಿಂದೆ ಸೋಷಿಯಲ್‌ಮೀಡಿಯಾದಲ್ಲಿ ಗುಲ್ಲೆದ್ದಿತ್ತು. ಈಗ ಬಿಗ್ ಬಾಸ್ ಮನೆಯಲ್ಲಿ ಸ್ವತಃ ವರ್ತೂರ್ ಅವರೇ ತಮ್ಮ ಮದುವೆ, ಪತ್ನಿ ಜೊತೆಗಿನ ಭಿನ್ನಾಭಿಪ್ರಾಯಗಳ ಕುರಿತು ಮನಸ್ಸು ಬಿಚ್ಚಿ ಮಾತನಾಡಿದ್ದಾರೆ.

ಬಿಗ್‌ಬಾಸ್ ಮನೆ ಸೇರಿದಾಗಿನಿಂದ ಈ ವರೆಗೂ ತನಗೆ ಮದುವೆ ಆಗಿದೆ ಎಂಬ ಒಂದೇ ಒಂದು ಸಣ್ಣ ಸುಳಿವನ್ನೂ ಬಿಟ್ಟುಕೊಟ್ಟಿರಲಿಲ್ಲ ವರ್ತೂರು ಸಂತೋಷ್.  ಈಗ ಗುಟ್ಟು ರಟ್ಟಾಗಿದೆ.

‘ವರ್ತೂರ ಸಂತೋಷ್‌ ಒಳಗಡೇ ಏನೈತೆ ಅನ್ನೋದನ್ನು ಹೇಳ್ತಿದ್ದೇನೆ. ನೋಡು ದೊಡ್ಡಪ್ಪ ನೀನು ಹೀಗು ತಾಳಿಕಟ್ಟು ಅಂದ್ರೆ ಕಟ್ಟಿಬಿಡ್ತಿನಿ. ನಾನು ಅವರಿಗೆ ಮಾತು ಕೊಟ್ಟು ಒಪ್ಪಿಕೊಂಡು ಬಿಟ್ಟೆ. ಮದುವೆಯೂ ಆಯ್ತು, ದಿನ ಕಳೆದಂತೆ, ಅಮ್ಮನನ್ನು ಇಗ್ನೋರ್‌ ಮಾಡೋಕೆ ಶುರು ಮಾಡಿದ್ರು. ನಾನು ಸಂಪಾದನೆ ಮಾಡಿದ ಜನರನ್ನು ತೊರೆದು ಇವರ ಹಿಂದೆ ಹೋಗಬೇಕು ಎಂದರೆ ಅದು ಸಾಧ್ಯವಾಗದ ಮಾತು. ಆಗ ಹೆಂಡತಿ ಮನೆ ಹತ್ತಿರ ಹೋಗ್ತಿನಿ. ನನ್ನ ಮಾತಿನ ಪ್ರಕಾರ ಬಂದ್ರೆ, ನೀನು ರಾಣಿನೇ ಎಂದು ಕರೆದೆ. ಮೊದಲು ನೀನು ಗೇಟಿಂದ ಆಚೆ ಹೋಗು ಎನ್ನುತ್ತಾರೆ. ಆವತ್ತು ನಾನು ಮಾತು ಕೊಟ್ಟು ಬಂದಿದ್ದೀನಿ ಇವತ್ತು ಆ ಮಾತಿನ ಮೇಲೆ ನಿಂತಿದ್ದೀನಿ’ ಎಂದಿದ್ದಾರೆ ವರ್ತೂರು.

ಮುಂದೇನಾಗುತ್ತೆ ಅನ್ನುವುದನ್ನ ಇವತ್ತಿನ ಎಪಿಸೋಡ್ ನಲ್ಲಿ ನೋಡ್ಬೇಕಷ್ಟೆ..

Continue Reading

Ancient Mangaluru

ಕುಂದಾಪುರ: 15 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆ ನೌಕರ

Published

on

ಕುಂದಾಪುರ: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ  ಕುಂದಾಪುರ ಅರಣ್ಯ ಇಲಾಖೆಯ ನೌಕರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ ಬಿ.ಮಂಜುನಾಥ್ ಪೂಜಾರಿ ಬಂಧಿತ ಆರೋಪಿ.

ಅರಣ್ಯ ಇಲಾಖೆ ವಶದಲ್ಲಿದ್ದ ಆಲೂರಿನ ಆದಿತ್ಯ ಎಂಬವರ ವಾಹನ ಬಿಡುಗಡೆಗಾಗಿ ಮಂಜುನಾಥ್ ಪೂಜಾರಿ 15 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದನು.  ಲಂಚ ನೀಡಲು ನಿರಾಕರಿಸಿದ ಆದಿತ್ಯ ಈ ಬಗ್ಗೆ ಉಡುಪಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಆದಿತ್ಯ ಅವರಿಂದ 15 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ  ಸಂದರ್ಭ ಮಂಜುನಾಥ್ ಪೂಜಾರಿಯನ್ನು ಬಂಧಿಸಿದರು.  ಲೋಕಾಯುಕ್ತ ಎಸ್ಪಿ ಸೈಮನ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ  ಕೆ.ಸಿ. ಪ್ರಕಾಶ್ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಮಂಜುನಾಥ್ ಮತ್ತು ರಫೀಕ್ ಹಾಗೂ ಸಿಬಂದಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Continue Reading

DAKSHINA KANNADA

ಉಡುಪಿ : ಬೈಕ್ ಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಜೀವಾಂತ್ಯ

Published

on

ಉಡುಪಿ : ಉಡುಪಿಯ ಬ್ರಹ್ಮಾವರದ ಧರ್ಮಾವರಂ ಎಂಬಲ್ಲಿ ಬೈಕಿಗೆ ಬಸ್‌ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಉಪ್ಪಿನಕೋಟೆಯ 31 ವರ್ಷ ಪ್ರಾಯದ ಪ್ರೀತಮ್‌ ಡಿ’ ಸಿಲ್ವಾ ಸ್ಥಳದಲ್ಲೇ ಮೃತಪಟ್ಟ ಘಟನೆ ನಿನ್ನೆ ನಡೆದಿದೆ.

ಪ್ರೀತಮ್‌ ಅವರು ಬೈಕ್‌ ಚಲಾಯಿಸಿಕೊಂಡು ಬ್ರಹ್ಮಾವರ ಆಕಾಶವಾಣಿ ಪೆಟ್ರೋಲ್‌ ಪಂಪ್‌ ಕಡೆಯಿಂದ ಸರ್ವಿಸ್‌ ರೋಡ್‌ನ‌ಲ್ಲಿ ಆಗಮಿಸಿ ಉಪ್ಪಿನಕೋಟೆಗೆ ತೆರಳಲು ಡಿವೈಡರ್‌ ಬಳಿ ಸಾಗುತ್ತಿದ್ದಾಗ ಎದುರಿನಿಂದ ಬಂದ ಖಾಸಗಿ ಬಸ್‌ ಢಿಕ್ಕಿ ಹೊಡೆಯಿತು. ಅವಿವಾಹಿತರಾಗಿದ್ದ ಪ್ರೀತಮ್‌ ಕೆಟರಿಂಗ್‌ ಉದ್ಯಮ ನಡೆಸುತ್ತಿದ್ದರು. ಪ್ರೀತಮ್‌ ಅವರು ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Continue Reading

LATEST NEWS

Trending