Connect with us

DAKSHINA KANNADA

Kadaba: ಸುಳ್ಯ ಕ್ಷೇತ್ರದ ಕಾಂಗ್ರೆಸ್ ಸೋಲಿನ ಪರಾಮರ್ಶೆ ಸಭೆಯಲ್ಲಿ ಮಾರಾಮಾರಿ

Published

on

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಸೋಲಿನ ಪರಾಮರ್ಶೆ ಸಭೆಯಲ್ಲಿ ಎರಡು ಬಣಗಳ ಮಧ್ಯೆ ಅಸಮಾಧಾನ ಮತ್ತೆ ಸ್ಪೋಟಗೊಂಡು, ಬಡಿದಾಟ ಮಾರಾಮಾರಿ ನಡೆದಿದೆ.

ಕಡಬ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಸೋಲಿನ ಪರಾಮರ್ಶೆ ಸಭೆಯಲ್ಲಿ ಎರಡು ಬಣಗಳ ಮಧ್ಯೆ ಅಸಮಾಧಾನ ಮತ್ತೆ ಸ್ಪೋಟಗೊಂಡು, ಬಡಿದಾಟ ಮಾರಾಮಾರಿ ನಡೆದಿದೆ.

ಶುಕ್ರವಾರದಂದು ಕಡಬ ಅಂಬೇಡ್ಕರ್ ಭವನದಲ್ಲಿ ನಡೆದ ಪರಾಮರ್ಶೆ ಸಭೆಯು ಕಾಂಗ್ರೆಸ್ ಮುಖಂಡರಾದ ಜಿ.ಕೃಷ್ಣಪ್ಪ ಹಾಗೂ ನಂದಕುಮಾರ್ ಬಣದ ನಾಯಕರ ಕಾರ್ಯಕರ್ತರ ವಾಕ್ಸಮರ, ಕೈ, ಕೈ ಮಿಲಾಯಿಸಿಕೊಳ್ಳವ ರಣರಂಗಕ್ಕೆ ವೇದಿಕೆಯಾಯಿತು.

ರಾಜ್ಯದಲ್ಲಿ ಕಾಂಗ್ರೇಸ್ ಅಭೂತಪೂರ್ವ ಗೆಲವು ಸಾಧಿಸಿದರೂ ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿನ ಹೀನಾಯ ಸೋಲು ಅರಗಿಸಕೊಳ್ಳಲಾಗದ ಪರಿಸ್ಥಿತಿಯಲ್ಲಿ ಕಾಂಗ್ರೇಸ್ ಪಕ್ಷ ಒದ್ದಾಡುತ್ತಿರುವಾಗ ಎರಡು ಬಣಗಳ ಮಧ್ಯೆ ಉಂಟಾದ ಬಹಿರಂಗ ಗುದ್ದಾಟ ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿದೆ.

ಸೋಲಿನ ಪರಾಮರ್ಶೆ ಅವಲೋಕನ ಮಾಡಲು ಆಗಮಿಸಿದ ಕಾಂಗ್ರೆಸ್ ನಾಯಕರು ಬಣ ರಾಜಕೀಯದ ಒಳಬೇಗುದಿ ಹೊರಹಾಕಿದ್ದಾರೆ. ಕಾಂಗ್ರೆಸ್ ಉಸ್ತುವಾರಿಯಾಗಿದ್ದ ನಂದಕುಮಾರ್ ಈ ಬಾರಿ ಸುಳ್ಯ ವಿಧಾನಸಭಾ ಕ್ಷೇತ್ರದ ಟಿಕೇಟ್ ಪಡೆದು ಸ್ಪರ್ಧಿಸುವ ಆಕಾಂಕ್ಷೆ ಇಟ್ಟುಕೊಂಡಿದ್ದರು, ಇದರ ಪೂರ್ವಬಾವಿ ಎಂಬಂತೆ ಕ್ಷೇತ್ರದಾದ್ಯಂತ ಓಡಾಡುತ್ತಾ ಹಣ ಖರ್ಚ ಮಾಡಿ ಪಕ್ಷ ಸಂಘಟನೆ ಹಾಗೂ ಕಾರ್ಯಕರ್ತರ ಒಡನಾಟ ಸಂಪಾದಿಸಿದ್ದರು.

ಕೃಷ್ಣ ಅವರು ಕೂಡಾ ಉಸ್ತುವಾರಿಯಾಗುದ್ದುಕೊಂಡು ತನ್ನದೇ ರೀತಿಯಲ್ಲಿ ಕ್ಷೇತ್ರದಲ್ಲಿ ಓಡಾಟ ನಡೆಸಿಕೊಂಡು ಮಿಂಚುತ್ತಿದ್ದರು.

ಕೊನೆಗಳಿಗೆಯಲ್ಲಿ ಕೃಷ್ಣಪ್ಪ ಅವರಿಗೆ ಟಿಕೇಟು ಗೋಷಣೆಯಾದ ಬಳಿಕ ನಂದಕುಮಾರ್ ಅಭಿಮಾನಿಗಳು ತಮ್ಮದೇ ತಂಡ ಕಟ್ಟಿಕೊಂಡು ಕೃಷ್ಣಪ್ಪ ಅವರ ಬದಲಿಗೆ ನಂದಕುಮಾರ್ ಅವರಿಗೆ ಬಿಫಾರಂ ನೀಡುವಂತೆ ನಾನಾ ರೀತಿಯ ಒತ್ತಡ ಹಾಕಿದ್ದರೂ ಕೃಷ್ಣಪ್ಪ ಅವರೇ ಅಭ್ಯರ್ಥಿಯಾಗಿ ಉಳಿದರು.

ಬಳಿಕ ನಡೆದ ಬೆಳವಣಿಗೆಯಲ್ಲಿ ಪಕ್ಷದ ಮುಖಂಡರು ಎರಡೂ ಬಣಗಳನ್ನು ಸೇರಿಸಿ ತೇಪೆ ಹಚ್ಚುವ ಕಾರ್ಯ ಮಾಡಿದರೂ ಮುಖಂಡರು ತಿರುಗಿ ಹೋದ ಬಳಿಕ ತೇಪೆ ಹರಿದು ಹಂಚಿ ಹೋಗಿತ್ತು.

ಕೆಲವು ಮುಖಂಡರು ಒಗ್ಗಟ್ಟಿನ ಮಂತ್ರ ಜಪಿಸಿದ್ದರೂ ಸುಳ್ಯ ವಿಧಾನ ಸಭಾ ಕ್ಷೇತ್ರದ ಎಲ್ಲಾ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಒಟ್ಟಾಗಿ ದುಡಿದು ಪಕ್ಷವನ್ನು ಗೆಲ್ಲಿಸುವಲ್ಲಿ ವಿಫಲರಾದರು.

ಬಳಿಕ ನಡೆದು ಬೆಳವಣಿಗೆಯಲ್ಲಿ ಕೆಲವು ನಾಯಕರಿಗೆ ಪಕ್ಷ ವಿರೋಧಿ ಚಟುವಟಿಕೆಯ ಪಟ್ಟ ಕಟ್ಟಿ ಪಕ್ಷದಿಂದ ಉಚ್ಚಾಟಿಸಲಾಗಿತ್ತು.

ಉಚ್ಚಾಟಿತರು ಇದರಿಂದ ಕೆಂಡಾಮಂಡಲಾಗಿದ್ದರು. ಕೆಲವರು ಪತ್ರಿಕಾ ಹೇಳಿಕೆ ನೀಡಿ ಅಕ್ರೋಶ ವ್ಯಕ್ತಪಡಿಸಿದ್ದರೆ.

ಇನ್ನು ಕೆಲವು ನಾಯಕರು ನ್ಯಾಯಕ್ಕಾಗಿ ದೈವದ ಮೊರೆ ಹೋಗಿದ್ದರು.

ಬುಧವಾರ ರಾಹುಲ್ ಗಾಂಧಿಯವ ಅವರ ಸಂಸತ್ ಸದಸ್ಯತನ ಅನರ್ಹತೆಯ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಉಚ್ಚಾಟಿತ ನಾಯಕರು ಭಾಗವಹಿಸಿ ತಮ್ಮ ಪಕ್ಷ ನಿಷ್ಠೆಯನ್ನು ಪ್ರದರ್ಶಿಸಿದ್ದರು.

ಇದು ಕೃಷ್ಣಪ್ಪ ಬಣದವರ ಪಿತ್ತ ನೆತ್ತಿಗೇರಸಿತ್ತು.

ಇದೇ ಬೇಗುದಿ ಕಡಬದ ಪರಾಮರ್ಶೆ ಸಭೆಯಲ್ಲಿ ಸ್ಪೋಟಗೊಂಡಿದೆ.

ಅಂಬೇಡ್ಕರ್ ಭವನದಲ್ಲಿ ಸಭೆ ಆರಂಭವಾಗಿ ಉಚ್ಚಾಟಿತ ಮುಖಂಡರು ಆಗಮಿಸತ್ತಿದ್ದಂತೆ ಕೃಷ್ಣಪ್ಪ ಅವರ ಬಣದ ಅಕ್ರೋಶಕ್ಕೆ ಕಾರಣವಾಯಿತು.

ಸಭೆ ಮಾತಿನ ಚಕಮುಖಿ ಮೂಲಕವೇ ಪ್ರಾರಂಭವಾಯಿತು.

ಸ್ವತಃ ಕೃಷ್ಣಪ್ಪ ಅವರೇ ಉಚ್ಚಾಟಿತ ಮುಖಂಡರಿಗೆ ನೀವು ಈ ಸಭೆಗೆ ಯಾಕೆ ಬಂದಿದ್ದೀರಿ, ನಿಮಗೆ ಮಾನ ಮರ್ಯಾದೆ ಇಲ್ಲವೇ ಎಂದು ಛೇಡಿಸಿದ್ದಾರೆ ಎನ್ನಲಾಗಿದೆ.

ಬಳಿಕ ಮುಖಂಡರೋರ್ವರು ಸಭೆಯಲ್ಲಿ ಇಂದಿನ ಈ ಸಭೆಯಲ್ಲಿ ಪಕ್ಷದಿಂದ ಉಚ್ಚಾಟಿತರು ಭಾಗವಹಿಸಲು ಅವಕಾಶವಿದೆಯೇ ಎಂದು ಪ್ರಶಸ್ನಿಸಿದರು.

ಅಷ್ಟೇ ಸಾಕಾಯಿತು ಮಾತಿನಚಕಮುಖಿ, ಪರಸ್ಪರ ಹಲ್ಲೆ, ತಳ್ಳಾಟ ನಡೆಯುವ ತನಕ ಮುಟ್ಟಿತು.

ಕೃಷ್ಣಪ್ಪ ಬಣದ ಮೂರು ನಾಲ್ಕು ಮಂದಿ ಮುಖಂಡರು ನಂದಕುಮಾರ್ ಬಣದ ಮಹಿಳಾ ಮುಖಂಡರೋರ್ವರು ಸೇರಿದಂತೆ ನಾಲ್ವರ ಮೇಲೆ ಹಲ್ಲೆ ನಡೆಸಿದ ಆರೋಪ ವ್ಯಕ್ತವಾಗಿದೆ.

ಮಾರಾಮಾರಿ ನಡೆದಿರುವ ವಿಡಿಯೋಗಳು ಲಭ್ಯವಾಗಿದೆ.

ನಂದಕುಮಾರ್ ಬಣದ ಸಾಮಾಜಿಕ ಜಾಲತಾಣ ನಿರ್ವಹಣ ಮಾಡಿದ ಮುಖಂಡರೋರ್ವರನ್ನು ಎಳೆದಾಡಿಕೊಂಡು ಹೋಗಿ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

ಈ ಮಧ್ಯೆ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಆದರೂ ಇತ್ತಂಡಗಳ ಮಧ್ಯೆ ಅಸಮಾಧಾನ , ಸಿಟ್ಟು ಸೇಡು ಬೂದಿಮುಚ್ಚಿದ ಕೆಂಡದಂತಿದ್ದು ಕೊತಕೊತನೆ ಕುದಿಯುತ್ತಿದೆ.

ಇದಕ್ಕೆ ಸಾಕ್ಷಿ ಎಂಬಂತೆ ಈ ಹಿಂದೆ ಕೂಡಾ ಒಮ್ಮೆ ಕಡಬದಲ್ಲಿ ಪಕ್ಷದ ಕಛೇರಿಯಲ್ಲಿಯೇ ಇತ್ತಂಡಗಳ ಮಧ್ಯೆ ವಾಕ್ಸಮರ ನಡೆದು ಕೈಮಿಲಾಯಿಸುವ ಹಂತಕ್ಕೆ ಹೋಗಿತ್ತು ಎಂದು ಕೆಲವು ಮುಖಂಡರು ಹೇಳಿಕೊಳ್ಳುತ್ತಿದ್ದಾರೆ.

DAKSHINA KANNADA

ಮಂಗಳೂರಿನ ಆಟೋಮ್ಯಾಟ್ರಿಕ್ಸ್‌ ಶೋ ರೂಮ್‌ ನಲ್ಲಿ ಟಾಟಾ ನೆಕ್ಸಾನ್‌, ಇ.ವಿ ಬಿಡುಗಡೆ

Published

on

ಟಾಟಾ ಕಂಪೆನಿಯ ವಾಹನಗಳ ಅಧಿಕೃತ ಡೀಲರ್ ಆಗಿರುವ ಮಂಗಳೂರಿನ ಬಿಜೈನ ಆಟೋಮ್ಯಾಟ್ರಿಕ್ಸ್‌ ಶೋ ರೂಮ್‌ ನಲ್ಲಿ ನೂತನ ಟಾಟಾ ನೆಕ್ಸಾನ್‌ ಮತ್ತು ನೆಕ್ಸಾನ್‌ ಇ.ವಿ. 3.0 ವಾಹನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವ ಸಮಾರಂಭ  ನಡೆಯಿತು.

ಮಂಗಳೂರು: ಟಾಟಾ ಕಂಪೆನಿಯ ವಾಹನಗಳ ಅಧಿಕೃತ ಡೀಲರ್ ಆಗಿರುವ ಮಂಗಳೂರಿನ ಬಿಜೈನ ಆಟೋಮ್ಯಾಟ್ರಿಕ್ಸ್‌ ಶೋ ರೂಮ್‌ ನಲ್ಲಿ ನೂತನ ಟಾಟಾ ನೆಕ್ಸಾನ್‌ ಮತ್ತು ನೆಕ್ಸಾನ್‌ ಇ.ವಿ. 3.0 ವಾಹನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವ ಸಮಾರಂಭ  ನಡೆಯಿತು.

ಟಾಟಾ ವಾಹನಗಳ ಗ್ರಾಹಕ ವರದರಾಜ ಶೆಣೈ, ಶರಣ್‌ ಚಿಲಿಂಬಿ ಮತ್ತು ಪ್ರಿಯಾ ಮೋನಿಕಾ ಡಿ’ಸೋಜಾ ಆವರು ಈ ನೂತನ ವಾಹನಗಳನ್ನು ಅನಾವರಣಗೊಳಿಸಿದರು.

ಟಾಟಾ ಮೋಟಾರ್ಸ್‌ ನ ವಿಠಲದಾಸ್‌ ಅವರು ಹೊಸ ವಾಹನಗಳ ವೈಶಿಷ್ಟ್ಯಗಳನ್ನು ವಿವರಿಸಿ ಅತ್ಯಾಧುನಿಕ ತಾಂತ್ರಿಕತೆ, ವಿನೂತನ ವಿನ್ಯಾಸ, ಇಂಧನ ದಕ್ಷತೆ, ಕಂಫರ್ಟ್‌ ಇತ್ಯಾದಿ ಎಲ್ಲವೂ ಸೇರಿದಂತೆ ಹೊಸ ಅನುಭವವನ್ನು ಈ ವಾಹನಗಳು ನೀಡುತ್ತವೆ ಎಂದು ಹೇಳಿದರು.

ಗ್ರಾಹಕ ವರದರಾಜ ಶೆಣೈ ಮಾತನಾಡಿ ಟಾಟಾ ವಾಹನಗಳು ಜನಪ್ರಿಯ ಬ್ರಾಂಡ್‌ ಆಗಿದ್ದು, ನೆಕ್ಸಾನ್‌ ಕಾರು ಸುರಕ್ಷತೆ ಮತ್ತು ಇಂಧನ ದಕ್ಷತೆಗೆ ಹೆಸರಾಗಿದೆ. ಆಟೋಮ್ಯಾಟ್ರಿಕ್ಸ್‌ ಉತ್ತಮ ಸರ್ವೀಸ್‌ ಒದಗಿಸುತ್ತದೆ ಎಂದರು.

ನಾನು ಈ ಹಿಂದೆ ಟಾಟಾ ಪಂಚ್‌ ಖರೀದಿಸಿದ್ದು, ಈ ವಾಹನದ ಬಗ್ಗೆ ಇದುವರೆಗೆ ಯಾವುದೇ ದೂರು ಇಲ್ಲ.

ಆಟೋಮ್ಯಾಟ್ರಿಕ್ಸ್‌ ನಿಂದ ಉತ್ತಮ ಸೇವೆ ಲಭಿಸಿದೆ. ಇದೀಗ ಟಾಟಾ ನೆಕ್ಸಾನ್‌ ಖರೀದಿಸುತ್ತಿದ್ದೇನೆ ಎಂದು ಶರಣ್‌ ಚಿಲಿಂಬಿ ಹೇಳಿದರು.

2017 ರಲ್ಲಿ ಬಿಡುಗಡೆಯಾಗಿದ್ದ ನೆಕ್ಸಾನ್‌ ಕಾರು 2020 ರಲ್ಲಿ ಸುಧಾರಣೆ ಕಂಡಿತ್ತು. ದೇಶದಲ್ಲಿ ಅಧಿಕ ಪ್ರಮಾಣದಲ್ಲಿ ಮಾರಾಟವಾಗುವ ಎಸ್.ಯು.ವಿ. ಎನಿಸಿರುವ ನೆಕ್ಸಾನ್‌ ಇದೀಗ ಆಲ್‌ ನ್ಯೂ ನೆಕ್ಸಾನ್‌ ಮತ್ತು ನೆಕ್ಸಾನ್‌ ಇವಿ 3.0 ಸುಧಾರಿತ ಆವೃತ್ತಿಗಳೊಂದಿಗೆ ಮಾರುಕಟ್ಟೆಗೆ ಬಿಡುಗಡೆಯಾಗಿದೆ.

ಆಟೋಮ್ಯಾಟ್ರಿಕ್ಸ್‌ ಮಳಿಗೆಯ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಕುಮಾರ್‌, ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಪ್ರದೀಪ್‌ ಮಯ್ಯ ಮತ್ತು ಇತರರು ಉಪಸ್ಥಿತರಿದ್ದರು.

 

Continue Reading

bengaluru

ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ..!

Published

on

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಕನ್ನಡ ಖ್ಯಾತ ನಟ ವಿಜಯ ರಾಘವೇಂದ್ರ ಸೆ.24ರಂದು ಭೇಟಿ ನೀಡಿದರು.

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಸ್ಯಾಂಡಲ್ ವುಡ್ ನ ಖ್ಯಾತ ನಟ ವಿಜಯ ರಾಘವೇಂದ್ರ ಅವರು ಭೇಟಿ ನೀಡಿದರು.


ಬಳಿಕ ತಾಯಿ ದುರ್ಗಾಪರಮೇಶ್ವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ ಪ್ರಾರ್ಥಿಸಿದರು.

ಈ ಸಂದರ್ಭ ದೇವಳದ ವತಿಯಿಂದ ವಿಜಯ ರಾಘವೇಂದ್ರ ಅವರನ್ನು ಗೌರವಿಸಲಾಯಿತು.


ಈ ಹಿಂದೆ ಯಾವತ್ತೂ ನಟ ರಾಘು ಕಟೀಲು ಕ್ಷೇತ್ರಕ್ಕೆ ಪತ್ನಿ ಸ್ಪಂದನ ಜೊತೆ ಭೇಟಿ ನೀಡುತ್ತಿದ್ದರು.

ಆದರೆ ಈ ಬಾರಿ ಪತ್ನಿಯ ಅಗಲಿಕೆಯ ಬಳಿಕ ಇದೇ ಮೊದಲ ಬಾರಿಗೆ ಕ್ಷೇತ್ರಕ್ಕೆ ನಟ ಭೇಟಿ ನೀಡಿದ್ದು, ಮುಖದಲ್ಲಿ ಪತ್ನಿಯ ಅಗಲಿಕೆಯ ನೋವು ಕಂಡು ಬರ್ತಾ ಇತ್ತು.

Continue Reading

bengaluru

ಬೆಂಗಳೂರಿನಲ್ಲಿ ಅನಾವರಣಗೊಂಡ ತುಳುನಾಡ ಸಂಸ್ಕೃತಿ -ಶಾಸಕ ಪೂಂಜಾ ಮೆಚ್ಚುಗೆ

Published

on

ಬೆಂಗಳೂರು: ತುಳುನಾಡ ಜವನೆರ್ ಬೆಂಗಳೂರು ರಿಜಿಸ್ಟರ್ ಆಯೋಜಿಸಿರುವ ರಾಜಬೂಡುಡು ಕುಡೊರ ಗರ್ದ್ ಗಮ್ಮತ್ ದ “ಅಸ್ಟೆಮಿದ ಐಸಿರ” ತುಳುವ ತಿರ್ಲ್ ಸಾಸಿರ ಎಂಬ ಕಾರ್ಯಕ್ರಮವು ಸೆ.24ರಂದು ಬೆಂಗಳೂರಿನ ವಿಜಯನಗರದ ಬಂಟರ ಸಂಘದ ಸಭಾಭವನದಲ್ಲಿ  ನಡೆಯಿತು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಅತಿಥಿ ಗಣ್ಯರ ಸಮ್ಮುಖದಲ್ಲಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಗುವನ್ನು ತೊಟ್ಟಿಲಿಗೆ ಹಾಕಿ ತೂಗುವ ಮೂಲಕ ಮತ್ತೊಮ್ಮೆ ವಿಶೇಷವಾಗಿ “ಅಸ್ಟೆಮಿದ ಐಸಿರ” ತುಳುವ ತಿರ್ಲ್ ಸಾಸಿರ ಕಾರ್ಯಕ್ರಮಕ್ಕೆ ಅತಿಥಿಗಳು ಚಾಲನೆ ನೀಡಿದರು.

ನಂತರ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಹರೀಶ್ ಪೂಂಜಾ ಅವರು ತುಳುನಾಡಿನ ಸಂಸ್ಕೃತಿಯನ್ನು ಉಳಿಸಿ – ಬೆಳೆಸುವ ಕಾರ್ಯವನ್ನು ತುಳುನಾಡ ಜವನೆರ್ ಬೆಂಗಳೂರು ಇವರ ತಂಡ ಮಾಡ್ತ ಇರುವುದು ಶ್ಲಾಘನೀಯ ಎಂದರು.

ಇದೇ ವೇಳೆ ವೇಳೆ ಕಾರ್ಯಕ್ರದಮಲ್ಲಿ ಹಲವಾರು ಮಂದಿ ಅತಿಥಿ ಗಣ್ಯರು ಬೆಂಗಳೂರಿನಲ್ಲಿ “ಅಸ್ಟೆಮಿದ ಐಸಿರ” ತುಳುವ ತಿರ್ಲ್ ಸಾಸಿರ ಕಾರ್ಯಕ್ರಮವನ್ನು ಆಯೋಜನೆ ಮಾಡಿದ ಸಂಘಟನೆ ಕುರಿತು ಸಂದರ್ಭೋಚಿತವಾಗಿ ಮಾತನಾಡಿ ಮೆಚ್ಚುಗೆ ವ್ಯಕ್ತಪಡಿಸಿದರು.

ಬಳಿಕ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ ಸಾಧಕರನ್ನು ಈ ಸಂದರ್ಭ ತುಳುನಾಡ ಜವನೆರ್ ಸಂಘಟನೆಯಿಂದ ಸನ್ಮಾನಿಸಿ ಸನ್ಮಾನಿಸ ಗೌರವಿಸಲಾಯಿತು.

ಇದಕ್ಕೂ ಮೊದಲು ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ, ಕುಣಿತ ಭಜನೆ, ಹುಲಿ ವೇಷದ ತಂಡಗಳಿಂದ ಹುಲಿ ವೇಷದ ಕುಣಿತ ಪ್ರದರ್ಶನಗೊಂಡಿತು.

ಬಳಿಕ ಸಂಗೀತಗಾರದ ವಿದ್ಯಾಭೂಷಣ್ ಮತ್ತವರ ತಂಡದಿಂದ “ರಂಗಗ್ ಪದರಂಗ್” ಎನ್ನುವ ಭಕ್ತ ಗಾನೆ ಸುಧೆ ಮೂಡಿ ಬಂತು.

ಜೈ ತುಳುನಾಡು ರಿಜಿಸ್ಟರ್ ಬೆಂಗಳೂರು ಶಾಖೆ ಇವರ ತುಳುಲಿಪಿಯ ಕುರಿತಾದ “ತುಳು ಬರುವುದ ಐಸಿರ” ಎನ್ನುವ ಕೃತಿಯನ್ನು ವಿದ್ಯಾಭೂಷಣ್ ಅವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಮಕ್ಕಳಿಗಾಗಿ ಕೃಷ್ಣ ವೇಷ ಮಕ್ಕಳ ವೇಷ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿತ್ತು.

ಮುದ್ದು ಮಕ್ಕಳು ಈ ಕೃಷ್ಣ ವೇಷ ಸ್ಪರ್ಧೆಯಲ್ಲಿ ಪಾಲ್ಗೊಂಡು ಸಂಭ್ರಮಿಸಿದರು.

ನಂತರ ವಿಠಲ್ ನಾಯಕ್ ಅವರ ತಂಡದಿಂದ ಗೀತಾ ಸಾಹಿತ್ಯ ಸಂಭ್ರಮ ಸೇರಿದಂತೆ,ಇನ್ನಿತರ ಹಲವಾರು ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಮೂಡಿ ಬಂತು.

ಒಟ್ಟಿನಲ್ಲಿ ತುಳುನಾಡಿ ಸಂಪೂರ್ಣ ಸಂಸ್ಕೃತಿ “ಅಸ್ಟೆಮಿದ ಐಸಿರ” ತುಳುವ ತಿರ್ಲ್ ಸಾಸಿರ ಕಾರ್ಯಕ್ರಮದಲ್ಲಿ ಪ್ರದರ್ಶನಗೊಂಡು ನೋಡುಗರ ಮನಸೊರೆಗೊಂಡಿತು.

ಅಧ್ಯಕ್ಷ ಮಹೇಶ್ ಬೈಲೂರು ಅತಿಥಿಗಳನ್ನು ಸ್ವಾಗತಿಸಿದರು.

ಈ ಸಂದರ್ಭ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬಿಪಿಎಂಪಿ ನಿಕಟ ಪೂರ್ವ ಅಧ್ಯಕ್ಷ ಉಮೇಶ್ ಶೆಟ್ಟಿ, ಕಾರ್ಕಳದ ಬಾಲಾಜಿ ಶಿಬಿರದ ಬಾಲಕೃಷ್ಣ ಹೆಗಡೆ, ಬಂಟರ ಸಂಘದ ಗೌರವ ಕಾರ್ಯದರ್ಶಿ ಅನಂದ್ ರಾಮ್ ಶೆಟ್ಟಿ ಸೇರಿದಂತೆ ಹಲವಾರು ಮಂದಿ ಅತಿಥಿ-ಗಣ್ಯರು ಪಾಲ್ಗೊಂಡಿದ್ದರು.

 

Continue Reading

LATEST NEWS

Trending