Connect with us

DAKSHINA KANNADA

ಕಡಬ : ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು- ಆನೆ ಸೆರೆ ಕಾರ್ಯಾಚರಣೆ ಸ್ಥಗಿತ..!?

Published

on

ಕಳೆದ ಕೆಲದಿನಗಳಿಂದ ಇಲ್ಲಿನ ಕಾಡಿಂಚಿನ ಜನರ ನಿದ್ದೆ ಕೆಡಿಸಿದ್ದ ಕಾಡಾನೆಗಳ ಉಪಟಳಕ್ಕೆ ಅಂಕುಶ ಹಾಕಲು ಆರಂಭಿಸಿದ್ದ ಆಪರೇಷನ್ ಎಲಿಫೆಂಟ್ ಕಾರ್ಯಾಚರಣೆಯನ್ನು ಅಧಿಕಾರಿಗಳು ಸ್ಥಗಿತಗೊಳಿಸಿದ್ದಾರೆ.

ಕಡಬ : ಕಳೆದ ಕೆಲದಿನಗಳಿಂದ ಇಲ್ಲಿನ ಕಾಡಿಂಚಿನ ಜನರ ನಿದ್ದೆ ಕೆಡಿಸಿದ್ದ ಕಾಡಾನೆಗಳ ಉಪಟಳಕ್ಕೆ ಅಂಕುಶ ಹಾಕಲು ಆರಂಭಿಸಿದ್ದ ಆಪರೇಷನ್ ಎಲಿಫೆಂಟ್ ಕಾರ್ಯಾಚರಣೆಯನ್ನು ಅಧಿಕಾರಿಗಳು ಸ್ಥಗಿತಗೊಳಿಸಿದ್ದಾರೆ.

ಕೊಂಬಾರು ಪ್ರದೇಶದಲ್ಲಿ 2 ಜೀವಗಳನ್ನು ಬಲಿ ಪಡೆದ ಕಾಡಾನೆಯನ್ನು ಸೆರೆ ಹಿಡಿದು ಸ್ಥಳಾಂತರ ಮಾಡಿದ ಬಳಿಕ ಕೆಲ ದಿನ ಇನ್ನುಳಿದ ಆನೆಗಳ ಸೆರೆಗೆ ಕಾರ್ಯಾಚರಣೆ ಮುಂದುವರೆಸಲಾಗಿತ್ತು.

ಮೈಸೂರು ಹಾಗೂ ಮಡಿಕೇರಿಯಿಂದ ಒಟ್ಟು ಐದು ಸಾಕಾನೆಗಳನ್ನು ತರಿಸಿ ಅರಣ್ಯಾಧಿಕಾರಿಗಳು ತಂಡೋಪ ತಂಡವಾಗಿ ಆನೆಗಳ ಸೆರೆಗೆ ಸ್ಕೆಚ್ ಹಾಕಿ ಕಾರ್ಯಾಚರಣೆ ಪ್ರಾರಂಭ ಮಾಡಿದ್ದರು.

ಮೂರು ನಾಲ್ಕು ದಿನಗಳ ನಿರಂತರ ಪ್ರಯತ್ನದಿಂದ ಕೊಂಬಾರು ಗ್ರಾಮದ ಮಂಡೆಕರ ಎಂಬಲ್ಲಿ ಆನೆಯೊಂದನ್ನು ಸೆರೆ ಹಿಡಿಯಲಾಗಿತ್ತು.

ಅದುವೇ ನರಹಂತಕ ಆನೆ ಎಂದು ಅದಕ್ಕೆ ಸರ್ಟಿಫಿಕೇಟ್ ನೀಡಲಾಗಿತ್ತು. ಸೆರೆ ಸಿಕ್ಕಾನೆಯನ್ನು ದುಬಾರೆ ಆನೆ ಶಿಬಿರಕ್ಕೆ ಸ್ಥಳಾಂತರಿಸಲಾಯಿತು.

ಈ ಪ್ರದೇಶದಲ್ಲಿ ಕಾಡ್ಗಿಚ್ಚು ಹಬ್ಬಿರುವ ಕಾರಣ ಇದು ಆನೆಗಳ ಸೆರೆಯ ಕಾರ್ಯಾಚರಣೆಗೆ ಸಮಸ್ಯೆಯಾಗಿದ್ದು ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದಾರೆ ಎಂದು ಹೇಳಲಾಗಿದೆ.

ಕೊಂಬಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಟ್ಟು ವಿಸ್ತೀರ್ಣ 17,118,33 ಎಕರೆ ಪ್ರದೇಶವಾದರೆ ಅದರಲ್ಲಿ 14,437,74 ಎಕರೆ ಪ್ರದೇಶ ಅರಣ್ಯವಿದೆ.

ಇಲ್ಲಿ ಕೃಷಿ ಮಾಡಿಕೊಂಡು ಬದುಕುತ್ತಿರುವ ಜನರನ್ನು ಆನೆಗಳ ಉಪಟಳ ನಿರಂತರವಾಗಿ ತೊಂದರೆಗೆ ಒಳಗಾಗುತ್ತಿದ್ದಾರೆ.

ಅಡಕೆ, ರಬ್ಬರ್, ಬಾಳೆ, ತೆಂಗು ಮತ್ತಿತರ ಬಹುತೇಕ ಕೃಷಿ ಹುಟ್ಟುವಳಿಗಳು ಆನೆಗಳ ದಾಳಿಗೆ ಒಳಗಾಗಿ ಲಕ್ಷಾಂತರ ರೂ. ನಷ್ಟ ಸಂಭವಿಸುತ್ತಿದೆ.

ಒಂದು ಅಂದಾಜಿನ ಪ್ರಕಾರ ವರ್ಷದಲ್ಲಿ ಕನಿಷ್ಠ ಎಂದರೂ 3-4 ಸಾವಿರ ಅಡಕೆ ಮರಗಳು, ಸಾವಿರಕ್ಕೂ ಮಿಕ್ಕಿ ರಬ್ಬರ್ ಗಿಡಗಳು, ನೂರಾರು ತೆಂಗಿನ ಮರಗಳು, ಸಾವಿರಾರು ಬಾಳೆ ಗಿಡಗಳು, ಕೃಷಿಗೆ ನೀರುಣಿಸುವ ನೀರಾವರಿ ಪೈಪುಗಳು ಆನೆಗಳಿಂದಾಗಿ ನಾಶವಾಗುತ್ತಿವೆ.

ಲಕ್ಷಾಂತರ ರೂ. ನಷ್ಟ ಅನುಭವಿಸುತ್ತಿದ್ದಾರೆ. ಕಳೆದ ಹಲವು ವರ್ಷಗಳಿಂದ ಕಾಡಾನೆಗಳ ದಾಳಿಯಿಂದಾಗಿ ಕಂಗಾಲಾಗಿರುವ ಕಡಬ ತಾಲೂಕಿನ ಕೊಂಬಾರು, ಸಿರಿಬಾಗಿಲು, ಕೊಣಾಜೆ, ಐತ್ತೂರು, ರೆಂಜಲಾಡಿ, ನೂಜಿಬಾಳ್ತಿಲ, ಕುಟ್ರುಪ್ಪಾಡಿ, ಕೌಕ್ರಾಡಿ, ಶಿರಾಡಿ ಮುಂತಾದ ಗ್ರಾಮಗಳಲ್ಲಿ ಆನೆಗಳ ಹಾವಳಿಯಿಂದ ತತ್ತರಿಸಿದ್ದ ಹೋಗಿದ್ದ ಕೃಷಿಕ ಜನಗಳಿಗೆ ರೆಂಜಿಲಾಡಿಯ ಘಟನೆ ಮತ್ತಷ್ಟು ಭಯವನ್ನು ಹುಟ್ಟಿಸಿದೆ.

ಕೃಷಿ ತೋಟಗಳಿಗೆ ಪಕ್ಕದ ಕಾಡಿನಿಂದ ಆಹಾರ ಅರಸಿಕೊಂಡು ಬರುವ ಕಾಡಾನೆಗಳಿಗೆ ದಿನನಿತ್ಯ ಅಪಾರ ಪ್ರಮಾಣದ ಬೆಳೆ ಆಹುತಿಯಾಗುತ್ತಿರುವುರ ಜೊತೆಗೆ ಜನರು ರಾತ್ರಿ ಮಾತ್ರವಲ್ಲದೇ ಹಗಲು ಹೊತ್ತಿನಲ್ಲಿಯೂ ಪ್ರಾಣ ಭೀತಿಯಿಂದಲೇ ಓಡಾಡುತ್ತಾ ಬದುಕುತ್ತಿದ್ದಾರೆ.

ಆನೆಗಳು ಜನವಸತಿ ಪ್ರದೇಶಕ್ಕೆ ಬಾರದಂತೆ ತಡೆಯಲು ಸರ್ಕಾರ ಆಧುನಿಕ ರೀತಿಯ ವೈಜ್ಞಾನಿಕ ಕ್ರಮಗಳನ್ನು ಕೈಗೊಳ್ಳುವುದರೊಂದಿಗೆ ಕೃಷಿ ಹಾನಿಗೆ ಸಮರ್ಪಕ ಪರಿಹಾರ ಸಿಗುವಂತೆ ಮಾಡಬೇಕು.

ಉಪಟಳ ನೀಡುತ್ತಿರುವ ಆನೆಗಳನ್ನು ಹಿಡಿದು ಆನೆ ಶಿಬಿರಗಳಿಗೆ ಸ್ಥಳಾಂತರಿಸಬೇಕು, ಆನೆ ಕಂದಕದಂತಹ ಶಾಶ್ವತ ಪರಿಹಾರ ಮಾಡಬೇಕು ಎಂದು ನಾಗರೀಕರ ಅಗ್ರಹವಾಗಿದೆ.

Click to comment

Leave a Reply

Your email address will not be published. Required fields are marked *

DAKSHINA KANNADA

ಮೊಬೈಲ್ ನೋಡುತ್ತಿದ್ದಾಗ 16 ವರ್ಷದ ಬಾಲಕ ದಿಢೀರ್ ಸಾ*ವು; ವೈದ್ಯರಿಂದ ಶಾಕಿಂಗ್‌ ರಿಪೋರ್ಟ್‌; ಆಗಿದ್ದೇನು?

Published

on

ಸಾ*ವು ಹೇಗೆ, ಎಲ್ಲಿ ಬೇಕಾದರೂ ಬರಬಹುದು ಅನ್ನೋದಕ್ಕೆ ಈ ಘಟನೆಯೇ ಸಾಕ್ಷಿ. 16 ವರ್ಷದ ಬಾಲಕ ಮೊಬೈಲ್ ಫೋನ್ ನೋಡುತ್ತಿದ್ದಾಗಲೇ ಕುಸಿದು ಬಿದ್ದು ಸಾ*ವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಅಮ್ರೋಹಾದಲ್ಲಿ ಈ ದುರಂತ ನಡೆದಿದೆ.

16 ವರ್ಷದ ಅಮನ್ ಖುರೇಷಿ ಮೃ*ತ ದುರ್ದೈವಿ. ಖುರೇಷಿ ಮೊಬೈಲ್ ಫೋನ್ ನೋಡುತ್ತಿದ್ದಾಗ ಹಾಸಿಗೆ ಮೇಲೆ ಕುಸಿದು ಬಿದ್ದಿದ್ದಾನೆ. ತಕ್ಷಣವೇ ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಅಮನ್ ಖುರೇಷಿ ಆಸ್ಪತ್ರೆ ತಲುಪುವಷ್ಟರಲ್ಲೇ ಪ್ರಾ*ಣ ಕಳೆದುಕೊಂಡಿದ್ದಾರೆ.

ಅಮನ್ ಖುರೇಷಿ ಸಾ*ವನ್ನಪ್ಪಿದ್ದನ್ನು ವೈದ್ಯರು ಖಚಿತ ಪಡಿಸಿದ್ದು, ಹಾರ್ಟ್ ಅಟ್ಯಾಕ್‌ನಿಂದ ಪ್ರಾ*ಣ ಬಿಟ್ಟಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಮೃ*ತಪಟ್ಟ ಬಾಲಕ ಮೊಬೈಲ್ ಫೋನ್‌ನಲ್ಲಿ ವಿಡಿಯೋ ನೋಡುತ್ತಿದ್ದಾಗ ಈ ದುರಂತ ನಡೆದಿದೆ.

ಇತ್ತೀಚೆಗೆ ದೇಶಾದ್ಯಾಂತ ಹೃದಯಾಘಾತಕ್ಕೆ ಸಾ*ವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಹದಿ ಹರಿಯದ ಯುವಕರು ಹೃದಯಾಘಾತಕ್ಕೆ ಒಳಗಾಗುತ್ತಿರೋದು ನಿಜಕ್ಕೂ ಶಾಕಿಂಗ್‌ ಘಟನೆಯಾಗಿದೆ.

ಹೃದಯಾಘಾತವು ವ್ಯಕ್ತಿಯ ಮಾನಸಿಕ ಒತ್ತಡ ಮತ್ತು ದೈಹಿಕ ಪರಿಶ್ರಮದಿಂದ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ದೈನಂದಿನ ಕೆಲಸಗಳಲ್ಲಿ ಒತ್ತಡ ಹೆಚ್ಚಾಗುವುದರಿಂದ ಹೃದಯದ ಮೇಲೆ ಒತ್ತಡವೂ ಹೆಚ್ಚಾಗುತ್ತದೆ.

ಪ್ರಮುಖವಾಗಿ ನಮ್ಮ ದಿನನಿತ್ಯದ ಜೀವನಶೈಲಿ ಹಾಗೂ ಆಹಾರ ಕ್ರಮಗಳು ಸಣ್ಣ ವಯಸ್ಸಿನವರಿಂದ ವಯಸ್ಸಾದವರಿಗೂ ಹೃದಯಾಘಾತ ಆಗಲು ಕಾರಣವಾಗಿದೆ. ನ್ಯುಮೋನಿಯದಂತಹ ತೀವ್ರ ಸೋಂಕು ಹೃದಯ ಸ್ನಾಯುವಿನ ಊತಕವೂ ಸಾ*ವನ್ನು ಉಂಟು ಮಾಡಬಹುದು. ರಕ್ತನಾಳದಲ್ಲಿ ಬೇಗ ರಕ್ತು ಹೆಪ್ಪುಗಟ್ಟುವುದನ್ನು ತಡೆದರೆ ಹೃದಯಾಘಾತದಿಂದ ಪಾರಾಗಬಹುದು.

Continue Reading

DAKSHINA KANNADA

ದೇವಸ್ಥಾನದಲ್ಲಿ ಚಪ್ಪಲಿ ಕಳೆದುಹೋದರೆ ಒಳ್ಳೆಯದಾ..? ಕೆಟ್ಟದ್ದಾ..?

Published

on

ಸಾಮಾನ್ಯವಾಗಿ ಎಲ್ಲರೂ ಚಪ್ಪಲಿ ತೆಗೆದುಕೊಳ್ಳುವಾಗ ಕೊಟ್ಟಂತಹ ಗಮನವನ್ನ ಅದನ್ನು ತೆಗೆದುಕೊಂಡು ಆದ ಮೇಲೆ ಯಾರೂ ಅದನ್ನ ಗಮನಕ್ಕೆ ತೆಗೆದುಕೊಳ್ಳುವುದಿಲ್ಲ. ಚಪ್ಪಲಿಯನ್ನ ಇನ್ನು ಮುಂದೆ ನಿರ್ಲಕ್ಷ್ಯ ಮಾಡಬೇಡಿ. ಚಪ್ಪಲಿ ಸಹ ನಮ್ಮ ನಸೀಬನ್ನ ಬದಲಿಸಿ ನಮ್ಮ ಜೀವನದಲ್ಲಿ ಬದಲಾವಣೆಯನ್ನು ತರಬಲ್ಲದು.

ನಾವು ಫ್ಯಾಶನೇಬಲ್ ಆದ್ರೆ ಮಾತ್ರ ಬೇರೆಯವರ ಗಮನವನ್ನು ನಮ್ಮ ಕಡೆಗೆ ಸೆಳೆಯಬಹುದು ಅಂತ ತುಂಬಾ ಜನ ಅಂದುಕೊಂಡು ಇರುತ್ತಾರೆ. ಫ್ಯಾಶನೇಬಲ್ ಬಟ್ಟೆ, ಟ್ರೆಂಡೀ ಶೂ ಅಥವಾ ಚಪ್ಪಲಿಗಳಿರಬಹುದು ಅಥವಾ ಫ್ಯಾಶನೇಬಲ್ ಜ್ಯುವೆಲ್ಲರಿ ಆಗಿರಬಹುದು ಈ ರೀತಿ ಟ್ರೆಂಡಿಯಾಗಿ ಡ್ರೆಸ್ ಮಾಡಿದ್ರೆ ಎಲ್ಲರ ಗಮನ ನಮ್ಮ ಹತ್ತಿರ ತಿರುಗುತ್ತೆ. ಭಾರತೀಯ ಸಂಸ್ಕೃತಿಯಲ್ಲಿ ಮನೆಯೊಳಗೆ ಚಪ್ಪಲಿಯನ್ನು ಹಾಕಿಕೊಂಡು ಹೋಗುವುದು ಸೂಕ್ತವಲ್ಲ. ನಾವು ಚಪ್ಪಲಿಯನ್ನು ಹೊರಗಡೆ ಎಲ್ಲಿಗೂ ಹೋಗುವಾಗಲು ಹಾಕುತ್ತೇವೆ.

ಹೀಗೆ ದೇವಸ್ಥಾನಕ್ಕೆ ಹೋಗುವಾಗ ಚಪ್ಪಲಿಯನ್ನು ಹಾಕಿಕೊಂಡು ಹೋಗುತ್ತೇವೆ. ಕೆಲವೊಂದು ದೊಡ್ಡ ದೊಡ್ಡ ದೇವಸ್ಥಾನಗಳಲ್ಲಿ ತುಂಬಾ ಭಕ್ತಾಧಿಗಳು ಹೋಗುತ್ತಾ ಬರುತ್ತಾ ಇರುತ್ತಾರೆ. ಅಲ್ಲಿ ಚಪ್ಪಲಿಗೆಂದೇ ಸ್ಟ್ಯಾಂಡ್ ಇಟ್ಟಿರುತ್ತಾರೆ. ನಾವು ಹಣ ಕೊಟ್ಟು ನಮ್ಮ ಚಪ್ಪಲಿಯನ್ನ ಅಲ್ಲಿ ಕಾಪಾಡಬಹುದು. ಆದ್ರೆ ಕೆಲವರು ಚಪ್ಪಲಿಯನ್ನು ಹೊರಗಡೇ ಇಟ್ಟು ಹೋಗುತ್ತಾರೆ. ದೇವರ ದರ್ಶನ ಮಾಡಿ ಹೊರಗೆ ಬರುವಾಗ ಆ ಚಪ್ಪಲಿ ಕಾಣುವುದಿಲ್ಲ. ಕೆಲವೊಮ್ಮೆ ರಶ್ ಇರಬೇಕಾದ್ರೆ ತಿಳಿಯದೇ ಜನರು ಹಾಕಿಕೊಂಡು ಹೋಗುತ್ತಾರೆ. ಕೆಲವೊಮ್ಮೆ ಬೇಕುಬೇಕಂತಲೆ ಅದನ್ನು ಕದ್ದುಕೊಂಡು ಹೋಗುತ್ತಾರೆ. ದೇವಸ್ಥಾನಗಳಲ್ಲಿ ಚಪ್ಪಲಿ ಕಳುವಾದ್ರೆ ಅದು ಒಳ್ಳೆಯದೇ ಎನ್ನುವ ನಂಬಿಕೆ ಕೂಡ ಇದೆ.

ಚಪ್ಪಲಿ ಹಾಳತ್ತಾಗಿದ್ದರೆ ಕಳೆದು ಹೋದರೂ ಬೇಜಾರಿಲ್ಲ. ಆದರೆ ಹೊಸತ್ತಾದರೆ ತುಂಬಾ ಬೇಜಾರ್ ಆಗುತ್ತದೆ. ಇಂತ ಸಮಯದಲ್ಲಿ ಕೆಲವರು ಹೇಳುತ್ತಾರೆ ಚಪ್ಪಲಿ ಕಳೆದು ಹೋದರೆ ನಿನ್ನ ದಾರಿದ್ರ್ಯ ಹೋಯಿತು. ಇನ್ನು ಮುಂದಕ್ಕೆ ನಿನಗೆ ಒಳ್ಳೆಯದಾಗುತ್ತದೆ ಎಂದು ಹೇಳುತ್ತಾರೆ.

ಜ್ಯೋತಿಷ್ಯ ಶಾಸ್ತ್ರದಲ್ಲಿ ಶುಭ ಚಿಹ್ನೆ:

ಚಪ್ಪಲಿ ಕಳೆದುಹೋದರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಶುಭ ಚಿಹ್ನೆ ಎಂದು ಹೇಳುತ್ತಾರೆ. ಅದರಲ್ಲೂ ವಿಶೇಷವಾಗಿ ಶನಿವಾರ ಚಪ್ಪಲಿ ಕಳೆದುಹೋದರೆ ಪಾದರಕ್ಷೆಯೊಂದಿಗೆ ನಿಮ್ಮ ಶನಿಯು ದೂರವಾಯಿತು ಎಂದು ಅರ್ಥ. ನಮ್ಮ ದೇಹದ ಭಾಗಗಳು ಗ್ರಹಗಳಿಂದ ಪ್ರಭಾವಿತವಾಗಿರುತ್ತದೆ. ಶನಿ ಚರ್ಮ ಮತ್ತು ಪಾದಗಳಲ್ಲಿ ವಾಸಿಸುತ್ತಾನೆ. ಹೀಗೆ ಪಾದರಕ್ಷೆ ಕಳುವಾದ್ರೆ ನಿಮ್ಮ ಸಮಸ್ಯೆ ದೂರವಾಯ್ತು ಎಂದು ಹೇಳುತ್ತದೆ ಜ್ಯೋತಿಷ್ಯ ಶಾಸ್ತ್ರ.

Continue Reading

DAKSHINA KANNADA

ULLALA : ಮಲಗಿದ್ದಲ್ಲೇ ಹೃದಯಾಘಾ*ತಕ್ಕೆ ಬ*ಲಿಯಾದ ಯುವಕ

Published

on

ಉಳ್ಳಾಲ : ಇತ್ತೀಚೆಗಿನ ದಿನಗಳಲ್ಲಿ ಹೃದಯಾಘಾ*ತ ಪ್ರಕರಣಗಳು ಹೆಚ್ಚುತ್ತಿವೆ. ಹೃದಯಾಘಾ*ತ ಸಂಭವಿಸಲು ವಯಸ್ಸಿನ ಇತಿ ಮಿತಿ ಎಂಬುದಿಲ್ಲದಂತಾಗಿದೆ. ಇದೀಗ ಕೊಲ್ಯ ಕನೀರುತೋಟ ನಿವಾಸಿ 28 ರ ಹರೆಯದ ವಿವಾಹಿತರೊಬ್ಬರು ಮಲಗಿದ್ದಲ್ಲೇ ಹೃದಯಾಘಾ*ತಕ್ಕೀಡಾಗಿ ಸಾ*ವನ್ನಪ್ಪಿರುವ ಘಟನೆ ಮಂಗಳವಾರ ಸಂಭವಿಸಿದೆ.


ಕನೀರುತೋಟ ನಿವಾಸಿ ಜಿತೇಶ್ (28) ಸಾ*ವನ್ನಪ್ಪಿದವರು. ಜಿತೇಶ್ ಸೋಮವಾರ ರಾತ್ರಿ ಊಟ ಮುಗಿಸಿ ಮಲಗಿದ್ದರು. ಯಾವತ್ತೂ ಬೇಗ ಏಳುತ್ತಿದ್ದ ಜಿತೇಶ್ ಇನ್ನೂ ಯಾಕೆ ಎದ್ದಿಲ್ಲ ಎಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ : ಕಬಕ-ಮುರ ರೈಲ್ವೇ ಹಳಿಯಲ್ಲಿ ವ್ಯಕ್ತಿಯ ಶ*ವ ಪತ್ತೆ

ಮಂಗಳೂರಿನ ಕೆಟಿಎಂ ಷೋರೂಮಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜಿತೇಶ್, ಕೊರೊನಾ ಸಂದರ್ಭ ಪಂಡಿತ್ ಹೌಸ್ ನಿವಾಸಿ ಯುವತಿಯನ್ನು ವಿವಾಹವಾಗಿದ್ದರು. ಮೃ*ತರು ತಂದೆ, ತಾಯಿ, ಪತ್ನಿ, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.

Continue Reading

LATEST NEWS

Trending