Connect with us

DAKSHINA KANNADA

ಗಾಯದೊಳಗಿದ್ದ ಕಲ್ಲುಗಳ ಸಮೇತ ಸ್ಟಿಚ್‌ ಹಾಕಿದ ಕಡಬದ ಬೋದಾಳ ಸರ್ಕಾರಿ ವೈದ್ಯರು

Published

on

ಪುತ್ತೂರು: ಅಪಘಾತದಲ್ಲಿ ದೇಹದೊಳಗೆ ಸೇರಿದ್ದ ಕಲ್ಲು-ಮಣ್ಣನ್ನು ಶುಚಿಗೊಳಿಸಿ ಹೊರತೆಗೆಯದೆ ಅದರ ಮೇಲೆಯೇ ಸ್ಟಿಚ್‌ ಹಾಕಿದ ಕಡಬ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಬೇಜಾವಾಬ್ದಾರಿ ತೋರಿದ ಪರಿಣಾಮ ಗಾಯ ಉಲ್ಬಣಗೊಂಡು ಇದೀಗ ಶಸ್ತ್ರಚಿಕಿತ್ಸೆ ಮೂಲಕ ಕಲ್ಲು ಹೊರತೆಗೆದಿದ್ದಾರೆ.

ಈ ಮೂಲಕ ಸರ್ಕಾರಿ ಸಂಬಳ ಪಡೆದು ತಿಂದು ತೇಗಿ ಪ್ರಾಣದ ಜೊತೆ ಚೆಲ್ಲಾಟವಾಡುವ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.


ಕಡಬದ ಕೋಡಿಂಬಾಳ ಗ್ರಾಮದ ಕಲ್ಪುರೆ ನಿವಾಸಿ, ಪುರುಷೋತ್ತಮ ಎಂಬುವರು ಏ. 25 ರಂದು ರಾತ್ರಿ ಪತ್ನಿಯೊಂದಿಗೆ ಸಂಬಂಧಿಕರ ಮನೆಗೆಂದು ಹೊರಟಿದ್ದರು. ದಾರಿ ಮಧ್ಯೆ ಅವರ ಸ್ಕೂಟಿ ಸ್ಕಿಡ್ ಆಗಿ ಬಿದ್ದು, ಅವರ ಮೊಣಕಾಲಿಗೆ ಗಾಯವಾಗಿತ್ತು.

ಕೂಡಲೇ ಗಾಯಾಳುವನ್ನು ಸ್ಥಳೀಯರು ಸೇರಿ ಕಡಬ ಸಮುದಾಯ ಆಸ್ಪತ್ರೆಗೆ ಕರೆ ತಂದಿದ್ದರು. ಈ ವೇಳೆ ಆಸ್ಪತ್ರೆಯ ವೈದ್ಯರು ಪರಿಶೀಲಿಸಿ ಗಾಯಕ್ಕೆ ಸ್ಟಿಚ್ ಹಾಕುವಂತೆ ಸೂಚಿಸಿದ್ದರು.

ತಕ್ಷಣ ದಾದಿಯರು ಹಾಗೂ ಸಿಬ್ಬಂದಿ ಗಾಯಕ್ಕೆ ಸ್ಟಿಚ್ ಹಾಕಿ ಮನೆಗೆ ಕಳುಹಿಸಿದ್ದರು.


ಇದಾದ ವಾರದ ಬಳಿಕವೂ ಪುರುಷೋತ್ತಮ ಅವರ ಗಾಯ ಗುಣವಾಗದೆ, ಉಲ್ಬಣಗೊಂಡಿತ್ತು. ಇದರಿಂದ ಅನುಮಾನಗೊಂಡ ಪುರುಷೋತ್ತಮ ಅವರು ಮೇ. 4ರಂದು ಡಯಾಗ್ನಸ್ಟಿಕ್ ಸೆಂಟರ್‌ನಲ್ಲಿ ಗಾಯದ ಎಕ್ಸ್‌ರೇ ತೆಗೆಸಿದ್ದರು.

ನಂತರ ಕ್ಲಿನಿಕ್‌ನಲ್ಲಿದ್ದ ವೈದ್ಯರು ಎಕ್ಸರೇ ಪರಿಶೀಲಿಸಿ ಕೂಡಲೇ ಆಸ್ಪತ್ರೆಗೆ ದಾಖಲಾಗುವಂತೆ ಸೂಚಿಸಿದ್ದರು.

ಈ ಹಿನ್ನೆಲೆಯಲ್ಲಿ ಪುರುಷೋತ್ತಮ ಅವರು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.


ಆಸ್ಪತ್ರೆಯಲ್ಲಿ ಮೇ 4 ರಂದು ರಾತ್ರಿ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಈ ವೇಳೆ ವೈದ್ಯರಿಗೆ ಬರೋಬ್ಬರಿ 14 ಕಲ್ಲುಗಳು ದೊರೆತಿದೆ.

ಏ. 25 ರಂದು ಸರ್ಕಾರದಿಂದ ಸಂಬಳ ಪಡೆಯುವ ಆಸ್ಪತ್ರೆಯ ಸಿಬ್ಬಂದಿ ಕಾಟಾಚಾರಕ್ಕೆ ಗಾಯ ಶುಚಿಗೊಳಿಸದೆ ಸ್ಟಿಚ್‌ ಹಾಕಿ ಪ್ರಾಣದ ಜೊತೆ ಚೆಲ್ಲಾಟವಾಡಿದ್ದರು.

ಇವರ ಬೇಜಾಬ್ದಾರಿತನದಿಂದ ಒಂದು ವೇಳೆ ಗಾಯ ಮತ್ತಷ್ಟು ಉಲ್ಬಣಗೊಂಡಿದ್ದರೆ ಕಾಲನ್ನೇ ಕತ್ತರಿಸುವ ಮಟ್ಟಕ್ಕೆ ಹೋಗುತ್ತಿತ್ತು ಅನ್ನುತ್ತಾರೆ ಗಾಯಾಳು ಸಂಬಂಧಿಗಳು.

ಘಟನೆ ಬಗ್ಗೆ ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ, ಕಡಬ ಪ್ರತಿಕ್ರಿಯಿಸಿ ಪ್ರಕರಣದ ಕುರಿತು ಸ್ಥಳೀಯ ವೈದ್ಯಾಧಿಕಾರಿಯಿಂದ ಮಾಹಿತಿ ಪಡೆದುಕೊಂಡು ಅಗತ್ಯ ಕ್ರಮಕ್ಕಾಗಿ ಇಲಾಖೆಯ ಉನ್ನತಾಧಿಕಾರಿಗಳಿಗೆ ವರದಿ ಕಳುಹಿಸಿಕೊಡಲಾಗುವುದು ಎಂದಿದ್ದಾರೆ.

DAKSHINA KANNADA

Sullia: ನದಿಗೆ ಸ್ನಾನಕ್ಕೆ ತೆರಳಿದ ವ್ಯಕ್ತಿ ಶವವಾಗಿ ಪತ್ತೆ..!

Published

on

ಸುಳ್ಯ: ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸುಳ್ಯದಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿ ಎರಡನೇ ಮಣ್ಣಗೇರಿಯ ನಿವಾಸಿ ವೆಂಕಟರಮಣ ಎಂದು ಗುರುತಿಸಲಾಗಿದೆ.

ಸುಳ್ಯದಲ್ಲಿರುವ ಆರಂಬೂರು ಸೇತುವೆ ಬಳಿಯ ಪಯಸ್ವಿನಿ ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿಯು ಕಾಣೆಯಾಗಿದ್ದಾರೆ. ಬಳಿಕ ಅವರ ಹುಡುಕಾಟ ನಡೆಸಲಾಗಿದೆ. ಆದರೆ ಎಷ್ಟು ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ. ಆ ಕಾರಣದಿಂದ ಸುಳ್ಯದ ಪೈಚಾರ್ ನ ಮುಳುಗು ತಜ್ಞರ ತಂಡವು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಮೇಳಕ್ಕೆತ್ತುವಲ್ಲಿ ಯಶಸ್ವಿಯಾಗಿದೆ. ಸುಳ್ಯ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ

Continue Reading

DAKSHINA KANNADA

Sullia: ಮದ್ಯ ಸೇವಿಸಿ ಅಡ್ಡಾದಿಡ್ಡಿ ವಾಹನ ಚಲಾವಣೆ- ಎಪಿಎಂಸಿ ಕಾರ್ಯದರ್ಶಿ ಅಮಾನತು

Published

on

ಸುಳ್ಯ: ಮದ್ಯಪಾನ ಮಾಡಿ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಸರಕಾರಿ ವಾಹನ ಚಲಾಯಿಸಿದ ಪ್ರಕರಣದ ಆರೋಪಿ ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್‌ ಕುಮಾರ್‌ನನ್ನು ಅಮಾನತುಗೊಳಿಸಿ ಇಲಾಖೆ ಆದೇಶ ಹೊರಡಿಸಿದೆ.

ನವೀನ್‌ ಕುಮಾರ್ ಮಂಗಳವಾರ ರಾತ್ರಿ ಅರಂಬೂರು ಬಳಿ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ ಸರಕಾರಿ ಇಲಾಖೆಯ ನಾಮಫ‌ಲಕವಿರುವ ವಾಹನವನ್ನು ಅಪಾಯಕಾರಿಯಾಗಿ ಚಲಾಯಿಸಿದ್ದನೆಂದು ಆರೋಪಿಸಲಾಗಿದೆ. ಅಡ್ಡಾದಿಡ್ಡಿಯಾಗಿ ವಾಹನ ಚಲಾಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ವಾಹನವನ್ನು ಬೆನ್ನಟ್ಟಿ ಅಡ್ಡಗಟ್ಟಿ ವಿಚಾರಿಸಿದ್ದರು. ಈ ಸಂದರ್ಭ ತಾನು ಸುಳ್ಯ ಎಪಿಎಂಸಿ ಕಾರ್ಯದರ್ಶಿ, ನನ್ನದು ತಪ್ಪಾಯಿತು ಎಂದು ಕ್ಷಮೆ ಯಾಚಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಬುಧವಾರ ಎಪಿಎಂಸಿ ಕಾರ್ಯದರ್ಶಿಯವರನ್ನು ಅಮಾನತುಗೊಳಿಸಿ ಆದೇಶ ಮಾಡಲಾಗಿದೆ. ಬೆಳ್ತಂಗಡಿ ಎಪಿಎಂಸಿ ಕಾರ್ಯದರ್ಶಿ ರವೀಂದ್ರ ಅವರಿಗೆ ಸುಳ್ಯ ಎಪಿಎಂಸಿ ಪ್ರಭಾರ ವಹಿಸಲಾಗಿದೆ.

 

Continue Reading

DAKSHINA KANNADA

ಕಟೀಲು ಕ್ಷೇತ್ರಕ್ಕೆ ಮಾಜಿ ಸಚಿವ, ಶಾಸಕ ಶ್ರೀರಾಮುಲು ಭೇಟಿ

Published

on

ಕಿನ್ನಿಗೋಳಿ: ಪುರಾಣ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಮಾಜಿ ಸಚಿವ, ಶಾಸಕ ಶ್ರೀರಾಮುಲು ಭೇಟಿ ನೀಡಿದರು.

ದೇವಳದ ವತಿಯಿಂದ ಶ್ರೀ ರಾಮುಲು ಅವರನ್ನು ಗೌರವಿಸಲಾಯಿತು.

ಈ ಸಂದರ್ಭ ವೆಂಕಟರಮಣ ಆಸ್ರಣ್ಣ, ಸನತ್ ಕುಮಾರ್ ಶೆಟ್ಟಿ ಕೊಡೆತ್ತೂರುಗುತ್ತು ಉಪಸ್ಥಿತರಿದ್ದರು.

ಕ್ಷೇತ್ರದಲ್ಲಿ ಅವರು ಅನ್ನಪ್ರಸಾದವನ್ನು ಸ್ವೀಕರಿಸಿ ಸರಳತೆ ಮೆರೆದರು. ಬಳಿಕ ಕ್ಷೇತ್ರದ ಕುರಿತಂತೆ ಹೆಚ್ಚಿನ ಮಾಹಿತಿ ಪಡೆದುಕೊಂಡರು.

Continue Reading

LATEST NEWS

Trending