Thursday, March 23, 2023

ಕಡಬ: ಸರಕಾರಿ ಅಧಿಕಾರಿಗಳ ಮೇಲೆ ದಾಳಿ ಪ್ರಕರಣ-7 ಮಂದಿಗೆ ಜಾಮೀನು

ಕಡಬ: ಕೆಲ ದಿನಗಳ ಹಿಂದೆ ಅರಣ್ಯ ಮತ್ತು ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಬಂಧಿತರಾಗಿದ್ದ 7 ಮಂದಿ ಆರೋಪಿಗಳಿಗೆ ನ್ಯಾಯಾಲಯ ಷರತ್ತು ಬದ್ದ ಜಾಮೀನು ನೀಡಿದೆ.


ಕೆಲ ದಿನಗಳ ಹಿಂದೆ ಕಡಬ ತಾಲೂಕಿನ ರೆಂಜಿಲಾಡಿಯಲ್ಲಿ ಕಾಡಾನೆಯೊಂದು ಅಮಾಯಕರಿಬ್ಬರನ್ನು ಬಲಿ ತೆಗೆದುಕೊಂಡಿತ್ತು. ಈ ವೇಳೆ ಅರಣ್ಯ ಇಲಾಖೆಯವರು ಆನೆ ಸೆರೆಹಿಡಿಯುತ್ತಿದ್ದ ವೇಳೆ ಪೊಲೀಸರು, ಅರಣ್ಯಾಧಿಕಾರಿಗಳು ಮತ್ತು ಸ್ಥಳೀಯರ ನಡುವೆ ಗಲಾಟೆ ನಡೆದು ಇಲಾಖಾ ವಾಹನಗಳಿಗೆ ಕಲ್ಲು ತೂರಾಟ ಮಾಡಿ ಹಾನಿ ಉಂಟು ಮಾಡಿ ಅಧಿಕಾರಿಗಳ ಕೊಲೆಗೆ ಯತ್ನಿಸಿದ್ದರು ಎಂದು ಪ್ರಕರಣ ದಾಖಲಿಸಿ 7 ಆರೋಪಿಗಳನ್ನು ಬಂಧಿಸಲಾಗಿತ್ತು.
ಈ ಬಗ್ಗೆ ವಿಚಾರಣೆ ನಡೆಸಿದ ಜಿಲ್ಲಾ ನ್ಯಾಯಾಲಯ ಆರೋಪಿಗಳಾದ ಉಮೇಶ್ ಕಮರ್ಕಜೆ, ರಾಜೇಶ್ ಕಮರ್ಕಜೆ, ಜನಾರ್ದನ ರೈ ಕೊಲ್ಯ, ಕೋಕಿಲ ಕಮರ್ಕಜೆ, ತೀರ್ಥಕುಮಾರ ಕೋಲ್ಪೆ, ಗಂಗಾಧರ ಗೌಡ ಬಾರ್ಯ ಸಿರಿಬಾಗಿಲು ಮತ್ತು ಅಜಿತ್ ಕುಮಾರ್ ಕೆಂಜಾಳ ಎಂಬವರಿಗೆ ಷರತ್ತು ಬದ್ದ ಜಾಮೀನು ಮಂಜೂರುಗೊಳಿಸಿದರು.
ಆರೋಪಿಗಳ ಪರವಾಗಿ ನ್ಯಾಯವಾದಿ ಮಹೇಶ್ ಕಜೆ ಅವರು ವಾದ ಮಂಡಿಸಿದ್ದರು.

ಕಡಬ: ಕಾಡಾನೆ ಸೆರೆ ಹಿಡಿದು ಸಾಗಿಸುತ್ತಿದ್ದಾಗ ಅಧಿಕಾರಿ ವಾಹನಗಳ ಮೇಲೆ ದಾಳಿ- ವಾಹನಗಳು ಪುಡಿಪುಡಿ..!

LEAVE A REPLY

Please enter your comment!
Please enter your name here

Hot Topics

40 ವರ್ಷಗಳಿಂದ ಅದೇ ಪೊಳ್ಳು ಭರವಸೆ : ಚುನಾವಣಾ ಬಹಿಷ್ಕಾರಕ್ಕೆ ಮುಂದಾದ ಸುಳ್ಯ ಅರಮನೆಗಾಯದ ಜನತೆ..!

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಈ ಗ್ರಾಮದ ಜನ ಕಳೆದ 40 ವರ್ಷಗಳಿಂದ ಬಿದಿರಿನ ತೂಗು ಸೇತುವೆಯ ಮುಖಾಂತರ ಜೀವ ಭಯದಲ್ಲಿ ಜೀವನ ನಡೆಸುತಿದ್ದಾರೆ.ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ...

ಶುಕ್ರವಾರದ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ : 3 ವಾರ ಯಾವುದೇ ಮುಷ್ಕರ ನಡೆಸದಂತೆ ಕಟ್ಟಾಜ್ಞೆ..!

ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ಕರ್ನಾಟಕ ಹೈ ಕೋರ್ಟ್ ಬ್ರೇಕ್​​ ಹಾಕಿದ್ದು, 3 ವಾರಗಳ ಕಾಲ ಯಾವುದೇ ಮುಷ್ಕರ ನಡೆಸದಂತೆ ಕಟ್ಟಾಜ್ಞೆ ಹೊರಡಿಸಿದೆ.ಬೆಂಗಳೂರು: ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ಕರ್ನಾಟಕ ಹೈ ಕೋರ್ಟ್...

ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಜಿನೈಕ್ಯ..!

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಆವರು ಜಿನೈಕ್ಯರಾಗಿದ್ದಾರೆ.ಹಾಸನ : ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ...