Connect with us

DAKSHINA KANNADA

ಬೆಂಗಳೂರಿನಲ್ಲಿ ಲಾರಿ ಹರಿದು ಕಡಬದ ಯುವಕ ದಾರುಣ ಸಾವು- ಸಹಸವಾರ ಗಂಭೀರ..!

Published

on

ಕಡಬ :ಬೆಂಗಳೂರಿನಲ್ಲಿ ಬೈಕ್ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಆಲಂಕಾರಿನ ಯುವಕನೊಬ್ಬ ಮೃತಪಟ್ಟಿದ್ದು ಸಹ ಸವಾರ ಗಂಭಿರ ಗಾಯಗೊಂಡಿದ್ದಾನೆ.

ಕಡಬ ತಾಲೂಕಿನ ಆಲಂಕಾರು ಗ್ರಾಮದ ಶರವೂರು ನಿವಾಸಿ ರಾಜೀವಿ ಎಂಬವರ ಪುತ್ರ ನಂದಿಪ್ (21) ಎಂದು ತಿಳಿದು ಬಂದಿದೆ.

ಇವರು ಬೆಂಗಳೂರಿನ ಕಂಪೆನಿಯೊಂದರಲ್ಲಿ ಉದ್ಯೋಗ ದಲ್ಲಿದ್ದು ಬೆಳಿಗ್ಗೆ ಕೆಲಸಕ್ಕೆಂದು ಹಳೆನೇರಂಕಿಯ ನಿವಾಸಿ ಸ್ನೇಹಿತನೊಂದಿಗೆ ಬೈಕ್ ನಲ್ಲಿ ಹೋಗುತ್ತಿದ್ದರುಎನ್ನಲಾಗಿದೆ,

ಈ ಸಂದರ್ಭದಲ್ಲಿ ಅಟೋ ರಿಕ್ಷವೊಂದು ಹಠತ್ತಾಗಿ ಬಲಕ್ಕೆ ತಿರುಗಿದಾಗ ಅದಕ್ಕೆ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದಿದ್ದು ಈ ಸಂದರ್ಭದಲ್ಲಿ ಹಿಂದಿನಿಂದ ಬಂದ ಲಾರಿ ಯುವಕನ ತಲೆ ಮೇಲೆಯೇ ಸಂಚರಿಸಿದ ಪರಿಣಾಮ ನಂದಿಪ್ ಸ್ಥಳದಲ್ಲಿ ಯೇ ಮೃತಪಟ್ಟಿದ್ದರು.

ಸಹ ಸವಾರ ಹಳೆನೆರಂಕಿ ನಿವಾಸಿ ಯುವಕ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮೃತ ನಂದಿಪ್ ಅವರು ತಾಯಿ ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.

DAKSHINA KANNADA

ನಾಲ್ಕು ತಿಂಗಳ ಮಗುವಿಗೆ ಹಾಲಿನಲ್ಲಿ ಆಲ್ಕೋಹಾಲ್ ಬೆರೆಸಿದ ಅಜ್ಜಿ..! ಅಜ್ಜಿ ಮಾಡಿದ ಎಡವಟ್ಟಿಗೆ ಕೋಮಾಗೆ ಜಾರಿದ ಮಗು !!

Published

on

ಮಂಗಳೂರು/ಇಟಲಿ: ಇಟಲಿಯಲ್ಲೊಂದು ಆಘಾತಕಾರಿ ಘಟನೆ ನಡೆದಿದೆ. ಅಜ್ಜಿಯೊಬ್ಬರು ನಾಲ್ಕು ತಿಂಗಳ ಮಗುವಿಗೆ ಕುಡಿಯುವ ಹಾಲಿನಲ್ಲಿ ಆಲ್ಕೋಹಾಲ್‌ ಬೆರೆಸಿರುವ ಘಟನೆ ನಡೆದಿದೆ.

feed

ಮೊಮ್ಮಗು ಕುಡಿಯುವ ಹಾಲಿಗೆ ಅಜ್ಜಿ ತಪ್ಪಾಗಿ ಆಲ್ಕೋಹಲ್ ಬೆರೆಸಿದ್ದಾರೆ. ಮಗು ಅರ್ಧ ಹಾಲು ಕುಡಿದ ಬಳಿಕ ಮಗು ಅಳಲು ಆರಂಭಿಸಿದೆ. ಅಜ್ಜಿಗೆ ಅನುಮಾನ ಬಂದು ತಾನು ಕುಡಿಸಿದ ಹಾಲಿನ ವಾಸನೆಯನ್ನು ತೆಗೆದು ಪರಿಶೀಲನೆ ಮಾಡಿದಾಗ ಅದರಲ್ಲಿ ಆಲ್ಕೋಹಾಲ್‌ ಮಿಶ್ರಣ ಹಾಕಿರುವುದು ಬೆಳಕಿಗೆ ಬಂದಿದೆ.  ಇದರಿಂದ ಆಘಾತಕ್ಕೊಳಗಾದ ವೃದ್ಧೆ ಮಗುವನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಮುಂದೆ ಓದಿ..; ಜೀವಾಂತ್ಯವಾದ ಕಾಂತಾಬಾರೆ-ಬೂದಬಾರೆ ಜನ್ಮಕ್ಷೇತ್ರದ ಮರ..! ಇತಿಹಾಸದ ಜೀವಂತ ಸಾಕ್ಷಿಯ ಅಂತ್ಯ..!

ಕೋಮಾಗೆ ಜಾರಿದ ಮಗು:

ಅದಾಗಲೇ ಮಗುವಿನ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಕೋಮ ಸ್ಥಿತಿಗೆ ಜಾರಿತ್ತು. ಬಳಿಕ ವೈದ್ಯರು ಚಿಕಿತ್ಸೆ ನೀಡಿದ ಬಳಿಕ ಚೇತರಿಸಿಕೊಂಡಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದೆ. ಮಗುವಿಗೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಆದರೆ ಮಗುವಿನ ಆರೋಗ್ಯವನ್ನು ಸಂಪೂರ್ಣ ಪರಿಶೀಲಿಸಿದ ಬಳಿಕ ಅಜ್ಜಿ ವಿರುದ್ಧ ಪ್ರಕರಣ ದಾಖಲಿಸಲು ನಿರ್ಧರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

 

 

Continue Reading

DAKSHINA KANNADA

ಚಲಿಸುತ್ತಿದ್ದಾಗ ಒಡೆದ ಬಸ್ಸಿನ ಗಾಜು; ಇಬ್ಬರು ಮಕ್ಕಳು, ಚಾಲಕನಿಗೆ ಗಾ*ಯ

Published

on

ವಿಟ್ಲ : ಚಲಿಸುತ್ತಿದ್ದ ಕೇರಳ ರಾಜ್ಯದ ಬಸ್ಸಿನ ಗಾಜು ಒಡೆದ ಪರಿಣಾಮ ಇಬ್ಬರು ಮಕ್ಕಳು ಮತ್ತು ಚಾಲಕ ಗಾಯಗೊಂಡ ಘಟನೆ ಉರಿಮಜಲು ಎಂಬಲ್ಲಿ ಸಂಭವಿಸಿದೆ. ಪುತ್ತೂರು ಕಡೆಯಿಂದ ವಿಟ್ಲ ಮೂಲಕ ಕಾಸರಗೋಡಿಗೆ ಹೊರಟಿದ್ದ ಕೇರಳ ರಾಜ್ಯದ ಮಲಬಾರ್ ಬಸ್ ಉರಿಮಜಲು ಸೊಸೈಟಿ ತಲುಪುತ್ತಿದ್ದಂತೆ ಅದರ ಮುಂಭಾಗ ಗಾಜು ಹೊಡೆದಿದೆ.

ಇದನ್ನೂ ಓದಿ : ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೇಟಾ..! ಕಾರು ಜಖಂ

ಇದರಿಂದ ಮುಂಭಾಗದಲ್ಲಿದ್ದ ಬಾಲಕ ಗಂಭೀರ ಗಾಯಗೊಂಡಿದ್ದು, ಚಾಲಕ ಮತ್ತು ಮತ್ತೊಂದು ಮಗು ಸಣ್ಣಪುಟ್ಟವಿಗೆ ಗಾಯಗಳಾಗಿವೆ. ಗಂಭೀರ ಗಾಯಗೊಂಡ ಬಾಲಕನನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಗೊಂಡಿರುವ ಬಾಲಕ ಕೇರಳದ ಚೆರ್ಕಳ ನೆಲ್ಲಿಕಟ್ಟೆ ನಿವಾಸಿ ಎಂದು ಸ್ಥಳೀಯರು ತಿಳಿಸಿದ್ದಾರೆ.

ಬಿಸಿಲಿನ ತಾಪಕ್ಕೆ ಈ ಘಟನೆ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

 

Continue Reading

DAKSHINA KANNADA

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೇಟಾ..! ಕಾರು ಜಖಂ

Published

on

ವಿಟ್ಲ: ನಿಯಂತ್ರಣ ತಪ್ಪಿ ಕ್ರೇಟಾ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ನಡೆದಿದೆ.

accident

accident

ಕಾರು ಪಲ್ಟಿಯಾದ ಪರಿಣಾಮ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಪವಾಡ ಎಂಬಂತೆ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.

ಮುಂದೆ ಓದಿ..; ಪ್ರಾಂಶುಪಾಲೆ, ಶಿಕ್ಷಕಿ ನಡುವೆ ಹೊಯ್‌ ಕೈ..!! ವೀಡಿಯೋ ವೈರಲ್

accident

Continue Reading

LATEST NEWS

Trending