DAKSHINA KANNADA
ಜನಾಕರ್ಷಣೆಯ ಕೇಂದ್ರವಾಗಿದೆ ಸ್ಮಾರ್ಟ್ ಸಿಟಿ ಮಂಗಳೂರಿನ ಕಿರೀಟ ‘ಕದ್ರಿ ಪಾರ್ಕ್’..!
ವರದಿ : ಗಣೇಶ್ ಪೂಜಾರಿ
ಮಂಗಳೂರು : ಬಂದರು ನಗರಿ ಮಂಗಳೂರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ಸ್ಮಾರ್ಟ್ ಸಿಟಿಯಾಗಿ ಅಭಿವೃದ್ದಿಯಾಗುತ್ತಿದೆ.
ಜೊತೆಗೆ ಸುಂದರ ನಗರವಾಗಿಯೂ ರೂಪುಗೊಳ್ಳುತ್ತಿದೆ. ಇಲ್ಲಿನ ರಸ್ತೆ, ಒಳ ಚರಂಡಿ, ವಿದ್ಯುತ್ ಎಲ್ಲವೂ ಮೇಲ್ದರ್ಜೆಗೆ ಏರಿರುವ ಕಾರ್ಯ ಭರದಿಂದ ನಡೆಯುತ್ತಿದ್ದು ಇದರ ಜೊತೆಗೆ ಮುಖ್ಯವಾಗಿ ಬೇಕಾಗಿರುವ ಮತ್ತು ನಗರದ ಅಂದವನ್ನು ಹೆಚ್ಚಿಸಲಿರುವ ಉದ್ಯಾನವನಗಳನ್ನು ಸುಂದರೀಕರಣಗೊಳಿಸುವ ಕಾರ್ಯವೂ ವೇಗವಾಗಿ ನಡೆಯುತ್ತಿದೆ, ಇವುಗಳಲ್ಲಿ ಒಂದು ಹೃದಯಭಾಗದಲ್ಲಿರುವ ಕದ್ರಿ ಉದ್ಯಾನವನ.
2025 ರ ಗುರಿಯನ್ನಿಟ್ಟು ಈ ವಿಶಾಲವಾದ ಪಾರ್ಕನ್ನು ಅಭಿವೃದ್ದಿ ಮಾಡುವ ಯೋಜನೆಯನ್ನು ಆರಂಭಿಸಲಾಗಿದ್ದು ಕಾಮಗಾರಿ ಭರದಿಂದ ಸಾಗುತ್ತಿದೆ. ಈಗಾಗಲೇ ಒಂದು ಹಂತದ ಕಾಮಗಾರಿ ನಡೆದಿದ್ದು ಪಾರ್ಕ್ ಪರಿಸರ ಒಂದು ಹೊಸ ನೋಟದಲ್ಲಿ ಕಂಗೊಳಿಸುತ್ತಿದೆ.
ಜನಾರ್ಷಣೆಯ ಕೇಂದ್ರ ಗಂಗನಪಳ್ಳ:
ಕದ್ರಿ ಪಾರ್ಕಿನ ಒಳಗಡೆ ಇರುವ ಗಂಗನಪಳ್ಳ ಮತ್ತು ಸಂಗೀತ ಕಾರಂಜಿಯನ್ನು ಸರಿ ಸುಮಾರು ಒಂದು ಕೋಟಿ ರೂಪಾಯಿ ವೆಚ್ಚಲ್ಲಿ ಅಭಿವೃದ್ದಿ ಪಡಿಸಲಾಗಿದ್ದು ಈಗಾಗಲೇ ಲೋಕಾರ್ಪಣೆಗೊಂಡಿದೆ.
ಉದ್ಘಾಟನೆಗೊಂದ ದಿನದಿಂದಲೇ ಈ ಕದ್ರಿ ಪಾರ್ಕ್ ಜನಾಕರ್ಷಣೆಯ ಕೇಂದ್ರ ಬಿಂದುವಾಗಿದೆ,
ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ರವಿಶಂಕರ್ ಮಿಜಾರ್ ನೇತ್ರತ್ವದಲ್ಲಿ ಇಲ್ಲಿನ ಗಂಗನಪಳ್ಳ ಕೆರೆಯನ್ನು ಒಂದು ವಿಶೇಷ ವಿನ್ಯಾಸದಲ್ಲಿ ರೂಪಿಸಿದ್ದು ಇದಕ್ಕೆ ಅಗತ್ಯ ಇರುವ ಹಣಕಾಸಿನ ನೆರವನ್ನೂ ಪ್ರಾಧಿಕಾರದಿಂದ ನೀಡಿದ್ದಾರೆ.
ಬಣ್ಣ ಬಣ್ಣದ ವಿದ್ಯುತ್ ದೀಪಗಳ ಅಲಂಕಾರದೊಂದಿಗೆ ಉದ್ಯಾನವನ ಕಂಗೊಳಿಸುತ್ತಿದೆ.
ಇದರ ಜೊತೆಗೆ ಜಲಸಸ್ಯೆ ತಜ್ಞೆ ಸ್ನೇಹ ಉಳ್ಳಾಲರ ಮಾರ್ಗದರ್ಶನದಲ್ಲಿ ಗಂಗನಪಳ್ಳದಲ್ಲಿ ಆಕರ್ಷಕ ಜಲಸಸ್ಯಗಳನ್ನು ಬೆಳೆಸಲು ಯೋಜನೆ ರೂಪಿಸಲಾಗಿದೆ.
ಕೋಮಲೆ, ನೈದಿಲೆ, ತಾವರೆಗಳೊಂದಿಗೆ ವಾಟರ್ ಲಿಲ್ಲಿ ಹಿಗೇ ನೂರಕ್ಕೂ ಅಧಿಕ ಜಲಸಸ್ಯಗಳನ್ನು ಬೆಳೆಸಲಾಗುತ್ತಿದೆ.
ಜಲಚರಗಳೊಂದಿಗೆ, ಜಲಸಸ್ಯಗಳೊಂದಿಗೆ ದೋಣಿ ವಿಹಾರ ಕೂಡ ಆರಂಭಿಸಿದರೆ ಇನ್ನಷ್ಟು ಮೆರುಗು ಬರಲಿದೆ ಕದ್ರಿ ಉದ್ಯಾನವನಕ್ಕೆ ಅನ್ನುತ್ತಾರೆ ಪರಿಸರ ಪ್ರಿಯರು.
ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕರಾದ ವೇದವ್ಯಾಸ್ ಕಾಮತ್ ಅವರು ವಿಶೇಷ ಮುತುವರ್ಜಿ ವಹಿಸಿ ಪಾರ್ಕನ್ನು ಸಮಗ್ರ ಅಭಿವೃದ್ದಿ ಮಾಡಲು ಪಣತೊಟ್ಟಿದ್ದಾರೆ.
” ಸ್ಮಾರ್ಟ್ ಸಿಟಿ ಮೂಲಕ ದೊಡ್ಡ ಮಟ್ಟದಲ್ಲಿ ಕದ್ರಿ ಪಾರ್ಕ್ ಅಭಿವೃದ್ಧಿ ಪಡಿಸಲಾಗುತ್ತಿದೆ.
ತಿಂಡಿತಿನಸುಗಳ ಅಂಗಡಿ ಫುಡ್ ಕೋರ್ಟ್ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಕದ್ರಿ ಪಾರ್ಕಿನ ಒಳಗಡೆ ಇರುವ ಗಂಗನಪಳ್ಳ , ಸಂಗೀತ ಕಾರಂಜಿಯನ್ನು 97 ಲಕ್ಷ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ.
ಆಸುಪಾಸಿನಲ್ಲಿ ಬಿಎಸ್ಎನ್ಎಲ್ 2 ಎಕರೆ ಜಾಗ ಮನಪಾಕ್ಕೆ ಪಾರ್ಕಿಂಗ್ಗೆ ಬಳಸಲು ನಾವು ಯೋಜನೆ ರೂಪಿಸಿದ್ದೇವೆ.
ಸಂಗೀತ ಕಾರಂಜಿ ಮತ್ತೆ ಚಾಲನೆ ನೀಡಲಿದ್ದೇವೆ.ಲೇಸರ್ ಶೋ ಕೂಡ ಮಾಡಲಿದ್ದೇವೆ. ಮೂಡಾದ ವತಿಯಿಂದ ಪಾರ್ಕಿನ ಒಳಭಾಗದಲ್ಲಿ ನೇಶನಲ್ ಹೈವೇಯಿಂದ ಅಂಡರ್ ಪಾರ್ಕಿಂಗ್ ವ್ಯವಸ್ಥೇ ಮಾಡಿ ರಾಷ್ಟ್ರೀಯ ಹೆದ್ದಾರಿಯನ್ನು ಸಂಪರ್ಕಿಸುವ ವ್ಯವಸ್ಥೆ ಮಾಡುವ ನನ್ನ ಕನಸಿದೆ.
ಅದನ್ನು 2025 ರೊಳಗೆ ಪೂರ್ಣಗೊಳಿಸುತ್ತೇನೆಂಬ ವಿಶ್ವಾಸವಿದೆ ಎನ್ನುತ್ತಾರೆ ಶಾಸಕ ವೇದವ್ಯಾಸ್ ಕಾಮತ್.
ಒಟ್ಟಿನಲ್ಲಿ ಪುಟ್ಟ ಮಕ್ಕಳಿಂದ ಹಿಡಿದು ವಯೋವೃದ್ಧರಾದಿಯಾಗಿ ಎಲ್ಲರಿಗೂ ಮನಸ್ಸನ್ನು ಉಲ್ಲಸಿತರನ್ನಾಗಿಡುವ ನಿಟ್ಟಿನಲ್ಲಿ ಕದ್ರಿ ಪಾರ್ಕಿನ ಅಭಿವೃದ್ಧಿ ಆಗುತ್ತಿರುವುದು ಸಂತಸದ ವಿಚಾರ.
ಕದ್ರಿ ಪಾರ್ಕ್ನ ಇನ್ನೂ ಹಲವು ಅಭಿವೃದ್ಧಿ ಕೆಲಸಗಳ ತ್ವರಿತಗತಿಯಲ್ಲಿ ಮುಗಿದು ಇನ್ನಷ್ಟು ಪ್ರವಾಸಿಗರು ಆಗಮಿಸಿ ತುಳುನಾಡಿನ ಸೌಂದರ್ಯದ ವೀಕ್ಷಣೆಯೊಂದಿಗೆ ಮಂಗಳೂರು ನಗರ ಅಭಿವೃದ್ದಿಯಾಗಲಿ ಅನ್ನುವುದೇ ಮಂಗಳೂರಿಗರ ಆಶಯ..
DAKSHINA KANNADA
ಮತದಾನದ ವೇಳೆ ಮತಗಟ್ಟೆಗೆ ಮೊಬೈಲ್ ಕೊಂಡುಯ್ಯುತ್ತೀರಾ? ಹಾಗಿದ್ರೆ ಇದನ್ನು ಗಮನಿಸಿ
ಮಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕರ್ನಾಟಕದ 14 ಕ್ಷೇತ್ರಗಳಲ್ಲಿ ಎ.26ರಂದು ಮತದಾನ ನಡೆಯಲಿದೆ. ಈ ಬಾರಿ ಚುನಾವಣೆಯ ಸಂದರ್ಭ ಮೊಬೈಲ್ ಫೋನ್ಗಳನ್ನು ಮತಗಟ್ಟೆಗಳಿಗೆ ತೆಗೆದುಕೊಂಡು ಹೋಗುವ ಮೊದಲು ಯೋಚಿಸಿ. ಏಕೆಂದರೆ, ಬೂತ್ಗಳ ಆವರಣದಲ್ಲಿ ಅವುಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಬೂತ್ಗಳಿಗೆ ಹೋಗುವ ಜನರನ್ನು ಕೂಲಂಕುಷವಾಗಿ ತಪಾಸಣೆ ಮಾಡಲಾಗುವುದು. ಮತದಾರರು ಮತ ಚಲಾಯಿಸಲು ಹೋಗುವ ಮೊದಲು ಫೋನ್ಗಳನ್ನು ಇಡಲು ವಿಶೇಷ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಈ ಹಿಂದೆ ಮತಗಟ್ಟೆಗೆ ಮೊಬೈಲ್ ಕೊಂಡೊಯ್ದು ಫೊಟೊ ಹಾಗೂ ವೀಡಿಯೋಗಳನ್ನು ಮಾಡಿದ್ದ ಘಟನೆ ನಡೆದಿತ್ತು. ಹಾಗಾಗಿ ಈ ಬಾರಿ ಮೊಬೈಲ್ ಫೋನ್ ಗಳನ್ನು ಮತಗಟ್ಟೆಯ ಒಳಗಡೆ ಪ್ರವೇಶಿಸುವ ಮೊದಲು ಪ್ರಿಸೈಡಿಂಗ್ ಆಫೀಸರ್ ಬಳಿ ಟ್ರೇಯಲ್ಲಿ ಇಡುವ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ. ಆ ಟ್ರೇಯನ್ನು ಪೊಲೀಸರು ಅಥವಾ ಚುನಾವಣಾ ಅಧಿಕಾರಿಗಳು ಕಾವಲು ಕಾಯುತ್ತಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮುಂದೆ ಓದಿ..; ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ಮತದಾನ ಮಾಡುವಾಗ ಫೋನ್ಗಳನ್ನು ಟ್ರೇನಲ್ಲಿ ಇಡಲು ಸೂಚಿಸಬೇಕೇ ಅಥವಾ ಅವುಗಳನ್ನು ಸೈಲೆಂಟ್ ಮೋಡ್ನಲ್ಲಿ ಇಡುವಂತೆ ಹೇಳಬೇಕೇ ಎಂಬ ನಿರ್ಧಾರ ಕೈಗೊಳ್ಳುವುದನ್ನು ಪ್ರಿಸೈಡಿಂಗ್ ಆಫೀಸರ್ ವಿವೇಚನೆಗೆ ಬಿಡಲಾಗಿದೆ. ಕೆಲವು ಸಂದರ್ಭಗಳಲ್ಲಿ, ಮತಗಟ್ಟೆಯೊಳಗೆ ಫೋನ್ಗಳನ್ನು ಅನುಮತಿಸದಿರಲು ಚುನಾವಣಾಧಿಕಾರಿಗಳು ನಿರ್ಧರಿಸಿದ್ದಾರೆ. ಇದು ಕೆಲವೇ ಸೆಕೆಂಡುಗಳ ವಿಷಯವಷ್ಟೆ. ಮತದಾನದ ಸಮಯದಲ್ಲಿ ಗೋಪ್ಯತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮತದಾರರು ಮತದಾನ ಮಾಡುವಾಗ ಅವುಗಳನ್ನು ಬಳಸಬಾರದು ಎಂದು ಮಾತ್ರ ನಾವು ಹೇಳುತ್ತಿದ್ದೇವೆ ಎಂದು ಅಧಿಕಾರಿ ಹೇಳಿದ್ದಾರೆ. ಸಿಇಒ, ಜಿಲ್ಲಾಧಿಕಾರಿಗಳು ಮತ್ತು ಇತರ ಚುನಾವಣಾಧಿಕಾರಿಗಳು ಭಾಗವಹಿಸಿದ್ದ ಸಭೆಯಲ್ಲಿ ಈ ವಿಷಯ ಚರ್ಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
BELTHANGADY
ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ
ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.
ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?
ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
BANTWAL
ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.
ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ
ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.
- DAKSHINA KANNADA6 days ago
“ಸೆಕ್ಸ್” ನನ್ನ ಸಾಮರ್ಥ್ಯದ ರಹಸ್ಯ…! ಮಾಜಿ ಸಂಸದೆಯ ಹೇಳಿಕೆ ವೈರಲ್..!
- DAKSHINA KANNADA7 days ago
ಕೊರಗಜ್ಜನ ಫೋಟೋವನ್ನು ಮನೆಯಲ್ಲಿ ಇಟ್ಟು ಆರಾಧಿಸಬಹುದಾ?
- LATEST NEWS6 days ago
ಆಲದ ಮರದ ಪೊಟರೆಯಲ್ಲಿ ಪತ್ತೆಯಾಯ್ತು 64 ಲಕ್ಷ ರೂ.!
- DAKSHINA KANNADA6 days ago
ಕಾರ್ಪೋರೇಟರ್ ಮಗಳ ಹ*ತ್ಯೆ..! ಒಂಬತ್ತು ಬಾರಿ ಇರಿದ ಪಾಪಿ…!