DAKSHINA KANNADA
ಜನಾಕರ್ಷಣೆಯ ಕೇಂದ್ರವಾಗಿದೆ ಸ್ಮಾರ್ಟ್ ಸಿಟಿ ಮಂಗಳೂರಿನ ಕಿರೀಟ ‘ಕದ್ರಿ ಪಾರ್ಕ್’..!
ವರದಿ : ಗಣೇಶ್ ಪೂಜಾರಿ
ಮಂಗಳೂರು : ಬಂದರು ನಗರಿ ಮಂಗಳೂರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ಸ್ಮಾರ್ಟ್ ಸಿಟಿಯಾಗಿ ಅಭಿವೃದ್ದಿಯಾಗುತ್ತಿದೆ.
ಜೊತೆಗೆ ಸುಂದರ ನಗರವಾಗಿಯೂ ರೂಪುಗೊಳ್ಳುತ್ತಿದೆ. ಇಲ್ಲಿನ ರಸ್ತೆ, ಒಳ ಚರಂಡಿ, ವಿದ್ಯುತ್ ಎಲ್ಲವೂ ಮೇಲ್ದರ್ಜೆಗೆ ಏರಿರುವ ಕಾರ್ಯ ಭರದಿಂದ ನಡೆಯುತ್ತಿದ್ದು ಇದರ ಜೊತೆಗೆ ಮುಖ್ಯವಾಗಿ ಬೇಕಾಗಿರುವ ಮತ್ತು ನಗರದ ಅಂದವನ್ನು ಹೆಚ್ಚಿಸಲಿರುವ ಉದ್ಯಾನವನಗಳನ್ನು ಸುಂದರೀಕರಣಗೊಳಿಸುವ ಕಾರ್ಯವೂ ವೇಗವಾಗಿ ನಡೆಯುತ್ತಿದೆ, ಇವುಗಳಲ್ಲಿ ಒಂದು ಹೃದಯಭಾಗದಲ್ಲಿರುವ ಕದ್ರಿ ಉದ್ಯಾನವನ.
2025 ರ ಗುರಿಯನ್ನಿಟ್ಟು ಈ ವಿಶಾಲವಾದ ಪಾರ್ಕನ್ನು ಅಭಿವೃದ್ದಿ ಮಾಡುವ ಯೋಜನೆಯನ್ನು ಆರಂಭಿಸಲಾಗಿದ್ದು ಕಾಮಗಾರಿ ಭರದಿಂದ ಸಾಗುತ್ತಿದೆ. ಈಗಾಗಲೇ ಒಂದು ಹಂತದ ಕಾಮಗಾರಿ ನಡೆದಿದ್ದು ಪಾರ್ಕ್ ಪರಿಸರ ಒಂದು ಹೊಸ ನೋಟದಲ್ಲಿ ಕಂಗೊಳಿಸುತ್ತಿದೆ.
ಜನಾರ್ಷಣೆಯ ಕೇಂದ್ರ ಗಂಗನಪಳ್ಳ:
ಕದ್ರಿ ಪಾರ್ಕಿನ ಒಳಗಡೆ ಇರುವ ಗಂಗನಪಳ್ಳ ಮತ್ತು ಸಂಗೀತ ಕಾರಂಜಿಯನ್ನು ಸರಿ ಸುಮಾರು ಒಂದು ಕೋಟಿ ರೂಪಾಯಿ ವೆಚ್ಚಲ್ಲಿ ಅಭಿವೃದ್ದಿ ಪಡಿಸಲಾಗಿದ್ದು ಈಗಾಗಲೇ ಲೋಕಾರ್ಪಣೆಗೊಂಡಿದೆ.
ಉದ್ಘಾಟನೆಗೊಂದ ದಿನದಿಂದಲೇ ಈ ಕದ್ರಿ ಪಾರ್ಕ್ ಜನಾಕರ್ಷಣೆಯ ಕೇಂದ್ರ ಬಿಂದುವಾಗಿದೆ,
ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ರವಿಶಂಕರ್ ಮಿಜಾರ್ ನೇತ್ರತ್ವದಲ್ಲಿ ಇಲ್ಲಿನ ಗಂಗನಪಳ್ಳ ಕೆರೆಯನ್ನು ಒಂದು ವಿಶೇಷ ವಿನ್ಯಾಸದಲ್ಲಿ ರೂಪಿಸಿದ್ದು ಇದಕ್ಕೆ ಅಗತ್ಯ ಇರುವ ಹಣಕಾಸಿನ ನೆರವನ್ನೂ ಪ್ರಾಧಿಕಾರದಿಂದ ನೀಡಿದ್ದಾರೆ.
ಬಣ್ಣ ಬಣ್ಣದ ವಿದ್ಯುತ್ ದೀಪಗಳ ಅಲಂಕಾರದೊಂದಿಗೆ ಉದ್ಯಾನವನ ಕಂಗೊಳಿಸುತ್ತಿದೆ.
ಇದರ ಜೊತೆಗೆ ಜಲಸಸ್ಯೆ ತಜ್ಞೆ ಸ್ನೇಹ ಉಳ್ಳಾಲರ ಮಾರ್ಗದರ್ಶನದಲ್ಲಿ ಗಂಗನಪಳ್ಳದಲ್ಲಿ ಆಕರ್ಷಕ ಜಲಸಸ್ಯಗಳನ್ನು ಬೆಳೆಸಲು ಯೋಜನೆ ರೂಪಿಸಲಾಗಿದೆ.
ಕೋಮಲೆ, ನೈದಿಲೆ, ತಾವರೆಗಳೊಂದಿಗೆ ವಾಟರ್ ಲಿಲ್ಲಿ ಹಿಗೇ ನೂರಕ್ಕೂ ಅಧಿಕ ಜಲಸಸ್ಯಗಳನ್ನು ಬೆಳೆಸಲಾಗುತ್ತಿದೆ.
ಜಲಚರಗಳೊಂದಿಗೆ, ಜಲಸಸ್ಯಗಳೊಂದಿಗೆ ದೋಣಿ ವಿಹಾರ ಕೂಡ ಆರಂಭಿಸಿದರೆ ಇನ್ನಷ್ಟು ಮೆರುಗು ಬರಲಿದೆ ಕದ್ರಿ ಉದ್ಯಾನವನಕ್ಕೆ ಅನ್ನುತ್ತಾರೆ ಪರಿಸರ ಪ್ರಿಯರು.
ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕರಾದ ವೇದವ್ಯಾಸ್ ಕಾಮತ್ ಅವರು ವಿಶೇಷ ಮುತುವರ್ಜಿ ವಹಿಸಿ ಪಾರ್ಕನ್ನು ಸಮಗ್ರ ಅಭಿವೃದ್ದಿ ಮಾಡಲು ಪಣತೊಟ್ಟಿದ್ದಾರೆ.
” ಸ್ಮಾರ್ಟ್ ಸಿಟಿ ಮೂಲಕ ದೊಡ್ಡ ಮಟ್ಟದಲ್ಲಿ ಕದ್ರಿ ಪಾರ್ಕ್ ಅಭಿವೃದ್ಧಿ ಪಡಿಸಲಾಗುತ್ತಿದೆ.
ತಿಂಡಿತಿನಸುಗಳ ಅಂಗಡಿ ಫುಡ್ ಕೋರ್ಟ್ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಕದ್ರಿ ಪಾರ್ಕಿನ ಒಳಗಡೆ ಇರುವ ಗಂಗನಪಳ್ಳ , ಸಂಗೀತ ಕಾರಂಜಿಯನ್ನು 97 ಲಕ್ಷ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ.
ಆಸುಪಾಸಿನಲ್ಲಿ ಬಿಎಸ್ಎನ್ಎಲ್ 2 ಎಕರೆ ಜಾಗ ಮನಪಾಕ್ಕೆ ಪಾರ್ಕಿಂಗ್ಗೆ ಬಳಸಲು ನಾವು ಯೋಜನೆ ರೂಪಿಸಿದ್ದೇವೆ.
ಸಂಗೀತ ಕಾರಂಜಿ ಮತ್ತೆ ಚಾಲನೆ ನೀಡಲಿದ್ದೇವೆ.ಲೇಸರ್ ಶೋ ಕೂಡ ಮಾಡಲಿದ್ದೇವೆ. ಮೂಡಾದ ವತಿಯಿಂದ ಪಾರ್ಕಿನ ಒಳಭಾಗದಲ್ಲಿ ನೇಶನಲ್ ಹೈವೇಯಿಂದ ಅಂಡರ್ ಪಾರ್ಕಿಂಗ್ ವ್ಯವಸ್ಥೇ ಮಾಡಿ ರಾಷ್ಟ್ರೀಯ ಹೆದ್ದಾರಿಯನ್ನು ಸಂಪರ್ಕಿಸುವ ವ್ಯವಸ್ಥೆ ಮಾಡುವ ನನ್ನ ಕನಸಿದೆ.
ಅದನ್ನು 2025 ರೊಳಗೆ ಪೂರ್ಣಗೊಳಿಸುತ್ತೇನೆಂಬ ವಿಶ್ವಾಸವಿದೆ ಎನ್ನುತ್ತಾರೆ ಶಾಸಕ ವೇದವ್ಯಾಸ್ ಕಾಮತ್.
ಒಟ್ಟಿನಲ್ಲಿ ಪುಟ್ಟ ಮಕ್ಕಳಿಂದ ಹಿಡಿದು ವಯೋವೃದ್ಧರಾದಿಯಾಗಿ ಎಲ್ಲರಿಗೂ ಮನಸ್ಸನ್ನು ಉಲ್ಲಸಿತರನ್ನಾಗಿಡುವ ನಿಟ್ಟಿನಲ್ಲಿ ಕದ್ರಿ ಪಾರ್ಕಿನ ಅಭಿವೃದ್ಧಿ ಆಗುತ್ತಿರುವುದು ಸಂತಸದ ವಿಚಾರ.
ಕದ್ರಿ ಪಾರ್ಕ್ನ ಇನ್ನೂ ಹಲವು ಅಭಿವೃದ್ಧಿ ಕೆಲಸಗಳ ತ್ವರಿತಗತಿಯಲ್ಲಿ ಮುಗಿದು ಇನ್ನಷ್ಟು ಪ್ರವಾಸಿಗರು ಆಗಮಿಸಿ ತುಳುನಾಡಿನ ಸೌಂದರ್ಯದ ವೀಕ್ಷಣೆಯೊಂದಿಗೆ ಮಂಗಳೂರು ನಗರ ಅಭಿವೃದ್ದಿಯಾಗಲಿ ಅನ್ನುವುದೇ ಮಂಗಳೂರಿಗರ ಆಶಯ..
Ancient Mangaluru
ಕುಂದಾಪುರ: 15 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆ ನೌಕರ
ಕುಂದಾಪುರ: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ ಕುಂದಾಪುರ ಅರಣ್ಯ ಇಲಾಖೆಯ ನೌಕರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ ಬಿ.ಮಂಜುನಾಥ್ ಪೂಜಾರಿ ಬಂಧಿತ ಆರೋಪಿ.
ಅರಣ್ಯ ಇಲಾಖೆ ವಶದಲ್ಲಿದ್ದ ಆಲೂರಿನ ಆದಿತ್ಯ ಎಂಬವರ ವಾಹನ ಬಿಡುಗಡೆಗಾಗಿ ಮಂಜುನಾಥ್ ಪೂಜಾರಿ 15 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದನು. ಲಂಚ ನೀಡಲು ನಿರಾಕರಿಸಿದ ಆದಿತ್ಯ ಈ ಬಗ್ಗೆ ಉಡುಪಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಆದಿತ್ಯ ಅವರಿಂದ 15 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ಮಂಜುನಾಥ್ ಪೂಜಾರಿಯನ್ನು ಬಂಧಿಸಿದರು. ಲೋಕಾಯುಕ್ತ ಎಸ್ಪಿ ಸೈಮನ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಕೆ.ಸಿ. ಪ್ರಕಾಶ್ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಮಂಜುನಾಥ್ ಮತ್ತು ರಫೀಕ್ ಹಾಗೂ ಸಿಬಂದಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
DAKSHINA KANNADA
ಉಡುಪಿ : ಬೈಕ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಜೀವಾಂತ್ಯ
ಉಡುಪಿ : ಉಡುಪಿಯ ಬ್ರಹ್ಮಾವರದ ಧರ್ಮಾವರಂ ಎಂಬಲ್ಲಿ ಬೈಕಿಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಉಪ್ಪಿನಕೋಟೆಯ 31 ವರ್ಷ ಪ್ರಾಯದ ಪ್ರೀತಮ್ ಡಿ’ ಸಿಲ್ವಾ ಸ್ಥಳದಲ್ಲೇ ಮೃತಪಟ್ಟ ಘಟನೆ ನಿನ್ನೆ ನಡೆದಿದೆ.
ಪ್ರೀತಮ್ ಅವರು ಬೈಕ್ ಚಲಾಯಿಸಿಕೊಂಡು ಬ್ರಹ್ಮಾವರ ಆಕಾಶವಾಣಿ ಪೆಟ್ರೋಲ್ ಪಂಪ್ ಕಡೆಯಿಂದ ಸರ್ವಿಸ್ ರೋಡ್ನಲ್ಲಿ ಆಗಮಿಸಿ ಉಪ್ಪಿನಕೋಟೆಗೆ ತೆರಳಲು ಡಿವೈಡರ್ ಬಳಿ ಸಾಗುತ್ತಿದ್ದಾಗ ಎದುರಿನಿಂದ ಬಂದ ಖಾಸಗಿ ಬಸ್ ಢಿಕ್ಕಿ ಹೊಡೆಯಿತು. ಅವಿವಾಹಿತರಾಗಿದ್ದ ಪ್ರೀತಮ್ ಕೆಟರಿಂಗ್ ಉದ್ಯಮ ನಡೆಸುತ್ತಿದ್ದರು. ಪ್ರೀತಮ್ ಅವರು ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
DAKSHINA KANNADA
ಮನೆ ಬಿಟ್ಟು ಓಡಿ ಹೋಗಿದ್ದ ಬಂಟ್ವಾಳದ ಪ್ರೇಮಿಗಳು ಕಾಸರಗೋಡಿನಲ್ಲಿ ಪತ್ತೆ
ಬಂಟ್ವಾಳ : 4 ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕು ಸಜೀಪಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿಗಳಾದ ಅಕ್ಕ ಪಕ್ಕದ ಮನೆಗಳ ಯುವಕ ಹಾಗೂ ಯುವತಿಯನ್ನು ಬಂಟ್ವಾಳ ಪೊಲೀಸರು ಕೇರಳದ ಕಾಸರಗೋಡು ಜಿಲ್ಲೆಯ ಕಾಂಞಂಗಾಡಿನಲ್ಲಿ ಪತ್ತೆ ಹಚ್ಚಿ ಊರಿಗೆ ಕರೆ ತಂದಿದ್ದಾರೆ.
ಉದ್ದೊಟ್ಟು ನಿವಾಸಿ ಅಬ್ದುಲ್ಹಮೀದ್ಅವರ ಪುತ್ರಿ ಆಯಿಸತ್ರಸ್ಮಾ(18) ಮತ್ತು ಹೈದರ್ಅವರ ಪುತ್ರ ಮಹಮ್ಮದ್ಸಿನಾನ್ (23) ಅವರು ನ. 23 ರಂದು ತಂತಮ್ಮ ಮನೆಗಳಲ್ಲಿ ಮಲಗಿದ್ದವರು ನ. 24ರಂದು ಬೆಳಗಾಗುವಷ್ಟರಲ್ಲಿ ಕಾಣೆಯಾಗಿದ್ದರು. ಮನೆಯವರ ದೂರಿನಂತೆ ಹುಡುಕಾಟ ನಡೆಸಿದ ಬಂಟ್ವಾಳ ಪೊಲೀಸರು ಅವರಿಬ್ಬರನ್ನೂ ಕಾಂಞಂಗಾಡಿನಲ್ಲಿ ಪತ್ತೆ ಹಚ್ಚಿದ್ದು, ಠಾಣೆಗೆ ತಂದು ವಿಚಾರಿಸಿದಾಗ ತಾವಿಬ್ಬರೂ ಪರಸ್ಪರ ಪ್ರೀತಿಸಿದ್ದು, ಮದುವೆಯಾಗುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.
- bengaluru6 days ago
ಸಿಂಪಲ್ ಆಗಿ ಮದುವೆಯಾದ ಒಳ್ಳೆ ಹುಡುಗ ಪ್ರಥಮ್
- bangalore6 days ago
ವಿನಯ್ ತರ ದುಷ್ಮಾನ್ ಆದ್ರೂ ಓಕೆ, ಆದ್ರೆ ಸಂಗೀತಾ ತರ ಪ್ರೆಂಡ್ಸ್ ಬೇಡ..!
- bangalore3 days ago
ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ನಲ್ಲಿ ಎಂಟ್ರಿಯಾದ ಈ ಸ್ಪರ್ಧಿಗಳು ಯಾರು..?
- DAKSHINA KANNADA5 days ago
Puttur: ಮಹಿಳೆಗೆ ಅಮಲು ಬರಿಸುವ ಪಾನೀಯ ಕುಡಿಸಿ ಅತ್ಯಾಚಾರ..!