Thursday, March 23, 2023

ಕಲಬುರ್ಗಿಯಲ್ಲಿ ಮಳೆ : ವಿದ್ಯುತ್ ತಗುಲಿ ತಾಯಿ, ಇಬ್ಬರು ಮಕ್ಕಳ ದಾರುಣ ಅಂತ್ಯ..!

ವಿದ್ಯುತ್ ತಗುಲಿ ಒಂದೇ ಕುಟುಂಬದ ಮೂವರು ಮೃತಪಟ್ಟ ದಾರುಣ ಘಟನೆ ಕಲಬುರ್ಗಿಯ ಚಿಂಚೋಳಿ ಪಟ್ಟಣದ ಧನಗರ ಗಲ್ಲಿಯಲ್ಲಿ ನಡೆದಿದೆ.

ಕಲಬುರ್ಗಿ : ವಿದ್ಯುತ್ ತಗುಲಿ ಒಂದೇ ಕುಟುಂಬದ ಮೂವರು ಮೃತಪಟ್ಟ ದಾರುಣ ಘಟನೆ ಕಲಬುರ್ಗಿಯ ಚಿಂಚೋಳಿ ಪಟ್ಟಣದ ಧನಗರ ಗಲ್ಲಿಯಲ್ಲಿ ನಡೆದಿದೆ.

ಘಟನೆಯಲ್ಲಿ ಝರಣಮ್ಮ ಅಂಬಣ್ಣ ಬಸಗೊಂಡ (45), ಮಹೇಶ ಅಂಬಣ್ಣ ಬಸಗೊಂಡ (20), ಸುರೇಶ ಅಂಬಣ್ಣ ಬಸಗೊಂಡ (18) ಮೃತ ದುರ್ದೈವಿಗಳಾಗಿದ್ದಾರೆ.

ಬೆಳಗಿನ ಜಾವ 1ಗಂಟೆ ಸುಮಾರಿಗೆ ಗುಡುಗು ಮಿಂಚು ಸಹಿತ ಜೋರು ಮಳೆ ಸುರಿಯುತ್ತಿದ್ದಾಗ ವಿದ್ಯುತ್ ತಂತಿ ಕಡಿದು ನೆಲಕ್ಕೆ ಬಿದ್ದಿದೆ.

ಮನೆಯ ಹೊರಗಡೆ ಸಂಗ್ರಹಿಸಿದ್ದ (ಹೊಟ್ಟು) ಜಾನುವಾರುಗಳ ಮೇವು ಮಳೆಯಲ್ಲಿ ನೆನೆಯುತ್ತದೆ ಎಂದು ತರ್ಪಾಲ್ ಮುಚ್ಚಲು ಹೋದಾಗ ವಿದ್ಯುತ್  ತಗುಲಿ ಸ್ಥಳದಲ್ಲೇ ದಾರುಣ ಅಂತ್ಯ ಕಂಡಿದ್ದಾರೆ.

ಘಟನೆಯಲ್ಲಿ ಅಂಬಣ್ಣನಿಗೆ ಗಾಯಗಳಾಗಿದ್ದು, ಚಿಂಚೋಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Hot Topics

ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಜಿನೈಕ್ಯ..!

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಆವರು ಜಿನೈಕ್ಯರಾಗಿದ್ದಾರೆ.ಹಾಸನ : ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ...

ಕಲಬುರಗಿಯಲ್ಲಿ ಹಾಡು ಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ ಹತ್ಯೆ..!

ಹಾಡುಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ ಹತ್ಯೆ ಮಾಡಲಾದ ಘಟನೆ ಕಲಬುರಗಿಯ ಹಾಗರಗಾ ಕ್ರಾಸ್ ಬಳಿ ನಡೆದಿದೆ. ಮಜತ್ ಸುಲ್ತಾನ್ (35) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಕಲಬುರಗಿ : ಹಾಡುಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ...

40 ವರ್ಷಗಳಿಂದ ಅದೇ ಪೊಳ್ಳು ಭರವಸೆ : ಚುನಾವಣಾ ಬಹಿಷ್ಕಾರಕ್ಕೆ ಮುಂದಾದ ಸುಳ್ಯ ಅರಮನೆಗಾಯದ ಜನತೆ..!

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಈ ಗ್ರಾಮದ ಜನ ಕಳೆದ 40 ವರ್ಷಗಳಿಂದ ಬಿದಿರಿನ ತೂಗು ಸೇತುವೆಯ ಮುಖಾಂತರ ಜೀವ ಭಯದಲ್ಲಿ ಜೀವನ ನಡೆಸುತಿದ್ದಾರೆ.ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ...