LATEST NEWS
ಕಲಬುರ್ಗಿಯಲ್ಲಿ ಕಳ್ಳ- ಪೊಲೀಸ್ ಆಟ- ಪಿಎಸ್ಐ ಲೋಡೆಡ್ ರಿವಾಲ್ವರ್ ಕಸಿದು ಕಳ್ಳ ಪರಾರಿ..!
ಖತರ್ನಾಕ್ ಕಳ್ಳನೊಬ್ಬನನ್ನು ಹಿಡಿಯಲು ಹೋದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಅವರ ರಿವಾಲ್ವರ್ ನ್ನೇ ಕಿತ್ತುಕೊಂಡು ಕಳ್ಳ ಪರಾರಿಯಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಅಫಜಲಪುರದಲ್ಲಿ ನಡೆದಿದೆ.
ಕಲಬುರ್ಗಿ: ಖತರ್ನಾಕ್ ಕಳ್ಳನೊಬ್ಬನನ್ನು ಹಿಡಿಯಲು ಹೋದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಅವರ ರಿವಾಲ್ವರ್ ನ್ನೇ ಕಿತ್ತುಕೊಂಡು ಕಳ್ಳ ಪರಾರಿಯಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಅಫಜಲಪುರದಲ್ಲಿ ನಡೆದಿದೆ.
ಬಳ್ಳೂರ್ಗಿ ಮೂಲದ ಖಾಜಾ ಎಂಬ ಕಳ್ಳನನ್ನು ಹಿಡಿಯಲು ಬೆಂಗಳೂರು ಸಿಸಿಬಿ ಪೊಲೀಸರು ಅಫಜಲಪುರಕ್ಕೆ ಆಗಮಿಸಿದ್ದು, ಕಳ್ಳನನ್ನು ಬಂಧಿಸುವ ವೇಳೆ ಪಿಎಸ್ ಐ ಭೀಮರಾವ್ ಬಂಕಲಿ ಅವರ ಸರ್ವಿಸ್ ರಿವಾಲ್ವರ್ ಕಸಿದುಕೊಂಡು ಎಸ್ಕೇಪ್ ಆಗಿದ್ದಾನೆ.
ಖಾಜಾ ಬೆಂಗಳೂರು, ಕಲಬುರ್ಗಿ, ಅಫಜಲಪುರ ಸೇರಿದಂತೆ ಹಲವೆಡೆ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದು 20ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಪೊಲೀಸರು ಹುಡುಕಾಟ ನಡೆಸಿದ್ದರು.
ನಿನ್ನೆಯಿಂದ ಖಾಜಾನ ಬಂಧನಕ್ಕಾಗಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಕಳ್ಳನನ್ನು ಹಿಡಿಯಲು ಹೋದಾಗ ಆತ ಕಾರಿನಲ್ಲಿ ಕುಳಿತಿದ್ದ ಪಿಎಸ್ ಐ ಸರ್ವಿಸ್ ರಿವಾಲ್ವರ್ ಹಿಡಿದು ಕಾರಿನ ಗಾಜು ಒಡೆಯಲು ಯತ್ನಿಸಿದ್ದರು. ಈ ವೇಳೆ ಪಿಎಸ್ ಐ ಕೈಯಲ್ಲಿದ್ದ ಲೋಡೆಡ್ ರಿವಾಲ್ವರ್ ಕಸಿದುಕೊಂಡು ಪರಾರಿಯಾಗಿದ್ದಲ್ಲದೇ ಮರವೇರಿ ಕುಳಿತಿದ್ದಾನೆ.
ಕೊನೆಗೆ ಎಂಟುವರೆ ಗಂಟೆಗಳ ಕಾಲ ನಡೆದ ಕಾರ್ಯಾಚರಣೆಯಲ್ಲಿ ಆರೋಪಿ ಶರಣಾಗಿದ್ದಾನೆ.
ಏನಿದು ಘಟನೆ ..?
ಸರಿಸುಮಾರು ಎಂಟುವರೆ ಗಂಟೆಗಳ ಕಾಲ ಕಳ್ಳಾಟವಾಡಿ ಪೊಲೀಸರಿಗೆ ಶರಣಾದ ಕಿಲಾಡಿ ಕಳ್ಳನ ಹೆಸರು ಖಾಜಪ್ಪಾ ಅಂತ.
ಮೂಲತ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಬಳ್ಳೂರಗಿ ಗ್ರಾಮದ ನಿವಾಸಿ.
ಬಳ್ಳೂರಗಿ ಗ್ರಾಮದವನಾದರೂ ಕೂಡ ಈತ ಇರ್ತಿದ್ದು ಹೆಚ್ಚಾಗಿ ಮಹರಾಷ್ಟ್ರದ ಪುಣೆ, ಅಕ್ಕಲಕೋಟೆ ಸೇರಿದಂತೆ ಅನೇಕ ಬಾಗದಲ್ಲಿಯೇ.
ಈತನ ಮೇಲೆ ಕಲಬುರಗಿ, ಮಹರಾಷ್ಟ್ರ, ತೆಲೆಂಗಾಣದ ವಿವಿಧ ಪೊಲೀಸ್ ಠಾಣೆಗಳಲ್ಲಿ ಬರೋಬ್ಬರಿ 28 ಮನೆಗಳ್ಳತನ ಪ್ರಕರಣಗಳಿವೆ.
ಕಳೆದ ಕೆಲ ದಿನಗಳ ಹಿಂದೆ ಈತ ಮಹರಾಷ್ಟ್ರದ ಅಕ್ಕಲಕೋಟೆಯಲ್ಲಿ ಮನೆಕಳ್ಳತನ ಮಾಡಿದ್ದನಂತೆ.
ಹೀಗಾಗಿ ಖಾಜಪ್ಪನ ಚಲನವಲನದ ಬಗ್ಗೆ ಅಕ್ಕಲಕೋಟೆ ಪೊಲೀಸರು ಮಾಹಿತಿ ಸಂಗ್ರಹಿಸಿದ್ದರು.
ಆದರೆ ಕಳೆದ ರಾತ್ರಿ ಆತ ಅಫಜಲಪುರಕ್ಕೆ ಹೋಗ್ತಿರೋದು ಗೊತ್ತಾಗಿತ್ತು.
ಹೀಗಾಗಿ ಅಫಜಲಪುರ ಪೊಲೀಸರಿಗೆ ಅಕ್ಕಲಕೋಟೆ ಪೊಲೀಸರು ಮಾಹಿತಿ ನೀಡಿದ್ದರು.
ಇಂದು ನಸುಕಿನ ಜಾವ ಮೂರು ಗಂಟೆಯಿಂದ ಅಫಜಲಪುರ ಪೊಲೀಸರು, ಅಫಜಲಪುರ ಹೊರವಲಯದ ಸೊನ್ನ ಕ್ರಾಸ್ ಬಳಿ ಚೆಕ್ ಪೋಸ್ಟ್ ಹಾಕಿಕೊಂಡು ವಾಹನ ತಪಾಸಣೆ ಮಾಡ್ತಿದ್ದರು.
ಮೂರುವರೆ ಸಮಯದಲ್ಲಿ ಖಾಜಪ್ಪಾ ಕಾರ್ನಲ್ಲಿ ಬಂದಿದ್ದ. ಆದರೆ ಪೊಲೀಸರನ್ನು ನೋಡುತ್ತಿದ್ದಂತೆ, ಕಾರ್ನ್ನು ರಿಟರ್ನ್ ತೆಗದುಕೊಂಡು ಹೋಗಲು ಮುಂದಾಗಿದ್ದ.
ಕೂಡಲೇ ಅಫಜಲಪುರ ಪಿಎಸ್ಐ ಭೀಮರಾಯ್ ಬಂಕಲಿ, ಕಾರ್ ನ ಗ್ಲಾಸ್ನ್ನು ಒಡೆದು, ಆತನನ್ನು ಹಿಡಿಯುವ ಯತ್ನ ಮಾಡಿದ್ದರು.
ಆದರೆ ಪಿಎಸ್ಐ ಕೈಯಲ್ಲಿದ್ದ ಲೋಡೆಡ್ ಸರ್ವಿಸ್ ಪಿಸ್ತೂಲ್ ಕೈಜಾರಿ ಕಾರ್ನೊಳಗೆ ಬಿದಿತ್ತು.
ಕಳ್ಳ ಖಾಜಪ್ಪ ಕಾರ್ನ್ನು ರಿಟರ್ನ್ ಮಾಡಿಕೊಂಡು ಪರಾರಿಯಾಗಿದ್ದ.
ಲೋಡೆಡೆ ಸರ್ವಿಸ್ ಪಿಸ್ತೂಲ್ ತಗೆದುಕೊಂಡು ಹೋಗಿದ್ದ ಪೊಲೀಸರ ತಲೆಬಿಸಿ ಹೆಚ್ಚಿಸಿತ್ತು.
ನಸುಕಿನ ಜಾವ ನಾಲ್ಕು ಗಂಟೆಯಿಂದ ಖಾಜಪ್ಪನಿಗಾಗಿ ಕಲಬುರಗಿ ಜಿಲ್ಲಾ ಪೊಲೀಸರು ಹುಡುಕಾಟ ನಡೆಸಿದ್ದರು.
ಆದ್ರೆ ಮುಂಜಾನೆ ಎಂಟು ಗಂಟೆಗೆ ಗೊತ್ತಾಗಿತ್ತು, ಆತ ಬಳ್ಳೂರಗಿ ಹೊರವಲಯದ ಮಹಾಲಕ್ಷ್ಮಿ ದೇವಸ್ಥಾನದ ಬಳಿಯಿದ್ದಾನೆ ಅಂತ.
ಅಲ್ಲಿಗೆ ಬರುವಷ್ಟರಲ್ಲಿ ಖಾಜಪ್ಪ ಮರವೇರಿ ಕೂತಿದ್ದ. ಮತ್ತೊಂದಡೆ ಆತನ ಸಹಚರರಾದ ಸಂಜು ಮತ್ತು ರವಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
ಮುಂಜಾನೆ ಎಂಟು ಗಂಟೆಯಿಂದ ಆತನನ್ನು ಮರದಿಂದ ಕೆಳಗಿಳಿಸೋ ಯತ್ನವನ್ನು ಪೊಲೀಸರು ಮಾಡಿದ್ದರು.
ಆದ್ರೆ ನನ್ನ ಸಮೀಪ ಬಂದ್ರೆ ನಾನೇ ಪೈರ್ ಮಾಡಿಕೊಂಡು ಸಾಯ್ತೇನೆ ಅಂತ ಬೆದರಿಕೆ ಹಾಕಿದ್ದನಂತೆ.
ಕೊನೆಗೆ ಆತನ ಕುಟುಂಬದವರನ್ನು ಕರೆಸಿ, ಆತನಿಗೆ ಏನು ಮಾಡೋದಿಲ್ಲಾ ಅಂತ ಹೇಳಿ, ಮನವೊಲಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಇಂದು ಮಧ್ಯಾಹ್ನ 12-45 ಕ್ಕೆ ಆರೋಪಿ ಖಾಜಪ್ಪ ಪೊಲೀಸರಿಗೆ ಶರಣಾಗಿದ್ದು, ತನ್ನ ಬಳಿಯಿದ್ದ ಸರ್ವಿಸ್ ಪಿಸ್ತೂಲ್ನ್ನು ಪೊಲೀಸರಿಗೆ ನೀಡಿದ್ದಾನೆ.
ಯಾವುದೇ ತೊಂದರೆಯಿಲ್ಲದೆ ಕಾರ್ಯಾಚರಣೆ ಯಶಸ್ವಿಯಾಗಿದ್ದ ಹಿನ್ನೆಲೆ, ಮರವಿದ್ದ ದೇವಸ್ಥಾನದ ಕೆಳಗಿದ್ದ ಮಹಾಲಕ್ಷ್ಮಿ ದೇವಿಗೆ ಕಲಬುರಗಿ ಎಸ್ಪಿ ಇಶಾ ಪಂತ್ ಪೂಜೆ ಮಾಡಿ ನಿಟ್ಟುಸಿರು ಬಿಟ್ಟಿದ್ದಾರೆ.
ಸದ್ಯ ಖಾಜಪ್ಪನನ್ನು ವಶಕ್ಕೆ ಪಡೆದಿರೋ ಪೊಲೀಸರು ಆತನಿಗೆ ವೈದ್ಯಕೀಯ ಚಿಕಿತ್ಸೆ ಕೊಡಿಸಿ, ವಿಚಾರಣೆ ನಡೆಸಲು ಮುಂದಾಗಿದ್ದಾರೆ.
FILM
ಬಾಲಿವುಡ್ ಜನಪ್ರಿಯ ನಿರೂಪಕಿ ಭಾರತಿ ಸಿಂಗ್ ಆಸ್ಪತ್ರೆ ದಾಖಲು..!
ಮುಂಬೈ: ಬಾಲಿವುಡ್ ನಿರೂಪಕಿ, ಹಾಸ್ಯ ನಟಿ ಭಾರತಿ ಸಿಂಗ್ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಸ್ತುತ ಡ್ಯಾನ್ಸ್ ದೀವಾನೆ ಸೀಸನ್ 4 ಅನ್ನು ಹೋಸ್ಟ್ ಮಾಡುತ್ತಿರುವ ಖ್ಯಾತ ನಿರೂಪಕಿ ಭಾರತಿ ಸಿಂಗ್ ತೀವ್ರ ಹೊಟ್ಟೆ ನೋವಿನಿಂದ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
‘ಕಳೆದ ಮೂರು ದಿನಗಳಿಂದ ತೀವ್ರವಾದ ಹೊಟ್ಟೆ ನೋವನ್ನು ಅನುಭವಿಸುತ್ತಿದ್ದೇನೆ’ ಎಂದು ತನ್ನ ವ್ಲಾಗ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಆರಂಭದಲ್ಲಿ ಅದನ್ನು ಗ್ಯಾಸ್ಟ್ರೊನಲ್ ಅಥವಾ ಆಮ್ಲೀಯ ಅಸ್ವಸ್ಥತೆ ಆಗಿರಬಹುದೆಂದು ಭಾವಿಸಿ ನಿರ್ಲಕ್ಷ ಮಾಡಿದ್ದರಂತೆ. ಆದರೆ, ನೋವು ತಡೆದುಕೊಳ್ಳಲಾಗದೆ ವೈದ್ಯಕೀಯ ಚಿಕಿತ್ಸೆ ಪಡೆಯಲು ನಿರ್ಧರಿಸಿ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ವ್ಲಾಗ್ನಲ್ಲಿ ಹೇಳಿದ್ದಾರೆ. ಇನ್ನು ವೈದ್ಯಕೀಯ ಪರೀಕ್ಷೆ ಬಳಿಕ ಭಾರತಿಗೆ ಪಿತ್ತಕೋಶದಲ್ಲಿ ಕಲ್ಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಏನೂ ತಿನ್ನಲು ಆಗುತ್ತಿಲ್ಲ ತಿಂದರೂ ವಾಂತಿ ಆಗುತ್ತಿದೆ ಎಂದ ಹೇಳಿದ ಅವರು ಭಾವುಕರಾದರು.
ಮುಂದೆ ಓದಿ..;‘ಅರ್ಜುನ’ ಆನೆಯನ್ನು ನೆನೆದ ಡಿಬಾಸ್; ದರ್ಶನ್ ಕೋರಿಕೆ ಏನು?
ಈ ನಡುವೆ ಭಾರತಿ ಆರೋಗ್ಯದಲ್ಲಿ ಏರುಪೇರು ಉಂಟಾಗಿರುವುದಕ್ಕೆ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು ಸೋಶಿಯಲ್ ಮೀಡಿಯಾದಲ್ಲಿ ಬೇಗ ಚೇತರಿಸಿಕೊಳ್ಳುವಂತೆ ದೇವರಲ್ಲಿ ಪ್ರಾರ್ಥಿಸುತ್ತೇವೆ ಎಂದು ಕಮೆಂಟ್ಗಳನ್ನು ಹಾಕಿದ್ದಾರೆ.
DAKSHINA KANNADA
ಪ್ರವಾಸಿಗರಿಗೆ ಗುಡ್ ನ್ಯೂಸ್ : ಮತ್ತೆ ಆರಂಭವಾಯ್ತು ಲಕ್ಷದ್ವೀಪ – ಮಂಗಳೂರು ಸ್ಪೀಡ್ ಪ್ಯಾಸೆಂಜರ್ ಹಡಗು
ಮಂಗಳೂರು : ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರು ಲಕ್ಷದ್ವೀಪದ ಬೀಚ್ನಲ್ಲಿ ವಾಯುವಿಹಾರ ನಡೆಸುವ ಮೂಲಕ ಲಕ್ಷದ್ವೀಪ ಬಾರಿ ಸುದ್ದಿಯಾಗಿತ್ತು. ಈ ವೇಳೆ ಮಂಗಳೂರು ಲಕ್ಷದ್ವೀಪ ನಡುವೆ ಈ ಹಿಂದೆ ಇದ್ದ ಪ್ರಯಾಣಿಕರ ಹಡಗು ಆರಂಭಿಸಲು ಬೇಡಿಕೆ ಕೂಡಾ ಆರಂಭವಾಗಿತ್ತು.
ಇದೀಗ ಲಕ್ಷದ್ವೀಪದ ಆಡಳಿತ ಮಂಗಳೂರಿಗೆ ಸ್ಪೀಡ್ ಪ್ಯಾಸೆಂಜರ್ ಹಡಗನ್ನು ಆರಂಭಿಸಿದೆ. ಗುರುವಾರ ಸಂಜೆ ಮಂಗಳೂರಿಗೆ ಆಗಮಿಸಿದ ಸ್ಪೀಡ್ ಪ್ಯಾಸೆಂಜರ್ ಬೋಟ್ನಲ್ಲಿ 150 ಜನ ಲಕ್ಷದ್ವೀಪವಾಸಿಗಳು ಆಗಮಿಸಿದ್ದಾರೆ.
ಪ್ರಯಾಣ ದರ ಎಷ್ಟು?
ಮಂಗಳೂರು ಲಕ್ಷದ್ವೀಪದ ನಡುವೆ ಮತ್ತೆ ಸಂಪರ್ಕ ಸೇತುವೆ ನಿರ್ಮಿಸಲು ಲಕ್ಷದ್ವೀಪ ಆಡಳಿತ ಸ್ಪೀಡ್ ಪ್ಯಾಸೆಂಜರ್ ಹಡಗು ಆರಂಭಿಸಿದೆ. ಕೋವಿಡ್ ಆರಂಭಕ್ಕೂ ಮೊದಲು ಮಂಗಳೂರು ಲಕ್ಷದ್ವೀಪದ ನಡುವೆ ಎರಡು ಪ್ರಯಾಣಿಕ ಹಡಗುಗಳು ಸಂಚಾರ ಮಾಡುತ್ತಿತ್ತು. ಸಾಕಷ್ಟು ಪ್ರಯಾಣಿಕರು ಮಂಗಳೂರು ಲಕ್ಷದ್ವೀಪ ನಡುವೆ ಪ್ರಯಾಣ ಮಾಡುವ ಮೂಲಕ ಅದರ ಅನುಕೂಲ ಪಡೆದುಕೊಂಡಿದ್ದರು.
ಲಕ್ಷದ್ವೀಪದವರಿಗೆ ತಮ್ಮ ದೈನಂದಿನ ಅವಶ್ಯಕತೆಗೆ ಮಂಗಳೂರು ಅವಲಂಬಿತರಾಗಿದ್ದರೆ, ಮಂಗಳೂರಿನ ಜನರಿಗೆ ಲಕ್ಷದ್ವೀಪ ವೀಕೆಂಡ್ ಪಾಯಿಂಟ್. ಆದ್ರೆ ಕೋವಿಡ್ ಕಾರಣದಿಂದ ಲಕ್ಷಾದ್ವೀಪಕ್ಕೆ ಇದ್ದ ಹಡಗಿನ ವ್ಯವಸ್ಥೆ ನಿಂತು ಹೋಗಿದ್ದು, ಈಗ ಮತ್ತೆ ಆರಂಭವಾಗಿದೆ. ಹಿಂದೆ 24 ಗಂಟೆ ಇದ್ದ ಪ್ರಯಾಣ ಕೇವಲ 5.30 ರಿಂದ 6 ಗಂಟೆಗಳಿಗೆ ಇಳಿದಿದೆ. ಹಡಗಿನಲ್ಲಿ ಎಲ್ಲಾ ವ್ಯವಸ್ಥೆ ಇರೋ ಕಾರಣದಿಂದ ಜನರು ಕೂಡಾ ಉತ್ಸಾಹದಿಂದ ಟಿಕೆಟ್ ಬುಕ್ ಮಾಡಿಕೊಂಡಿದ್ದಾರೆ. ಅಂದಹಾಗೆ, ಈ ಹೈ-ಸ್ಪೀಡ್ ಪ್ರಯಾಣಿಕ ಹಡಗಿನ ದರ ಕೇವಲ 450 ರೂ. ಆಗಿದೆ.
ಹೆಚ್ಚಿನ ಹಡಗಿಗೆ ಬೇಡಿಕೆ :
ಲಕ್ಷದ್ವೀಪದ ನಡುವೆ ಪ್ರಯಾಣಿಕರ ಹಡಗು ಆರಂಭದಿಂದ ಮಂಗಳೂರಿನಲ್ಲಿ ವ್ಯಾಪಾರ ವಹಿವಾಟು ಇನ್ನಷ್ಟು ಹೆಚ್ಚಾಗಲಿದೆ. ಅಷ್ಟೇ ಅಲ್ಲದೆ, ಲಕ್ಷದ್ವೀಪಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಮಂಗಳೂರಿನಿಂದ ತೆರಳುವ ಮೂಲಕ ಅಲ್ಲೂ ಕೂಡಾ ಆರ್ಥಿಕ ಅಭಿವೃದ್ದಿ ಆಗಲಿದೆ.
ಸ್ಪೀಡ್ ಪ್ಯಾಸೆಂಜರ್ ಹಡಗು ಕನಿಷ್ಟ ಎರಡು ದಿನಕ್ಕೊಮ್ಮೆ ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಹೋಗುವ ವ್ಯವಸ್ಥೆ ಮಾಡಬೇಕು ಅನ್ನೋದು ಸ್ಥಳೀಯರ ಆಗ್ರಹ. ಈಗ ಆರಂಭವಾಗಿರೋ ಹಡಗಿನಲ್ಲಿ ಸುಖಕರ ಪ್ರಯಾಣಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಪ್ರಯಾಣಿಕರಿಗೆ ಟಿವಿ, ಎಸಿ, ಸೇರಿದಂತೆ ಅಗತ್ಯ ಸೇವೆಗಳು ಲಭ್ಯವಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಈ ಹಡಗಿನ ಬಳಕೆ ಮಾಡುವ ಸಾಧ್ಯತೆ ಇರುವ ಕಾರಣ ಹೆಚ್ಚಿನ ಹಡಗಿನ ವ್ಯವಸ್ಥೆ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಇದೀಗ ಆರಂಭಗೊಂಡಿರೋ ಪ್ರಯಾಣಿಕರ ಹಡಗು ಸೇವೆ ಜೂನ್ ತಿಂಗಳ ಬಳಿಕ ಸ್ಥಗಿತವಾಗಲಿದೆ.
ಇದನ್ನೂ ಓದಿ : ‘ಅರ್ಜುನ’ ಆನೆಯನ್ನು ನೆನೆದ ಡಿಬಾಸ್; ದರ್ಶನ್ ಕೋರಿಕೆ ಏನು?
ಮಳೆಗಾಲ ಕಳೆದ ಬಳಿಕ ಇದು ಮತ್ತೆ ಆರಂಭವಾಗುತ್ತದೆಯೋ ಇಲ್ಲವೋ ಅನ್ನೋದು ಇನ್ನೂ ನಿರ್ಧಾರವಾಗಿಲ್ಲ. ಆದ್ರೆ, ಮತ್ತೆ ಆರಂಭಿಸುವ ಬಗ್ಗೆ ಲಕ್ಷಾದ್ವೀಪ ಆಡಳಿತ ಭರವಸೆ ನೀಡಿದೆ. ಒಟ್ಟಾರೆ ಹೇಳೋದಾದ್ರೆ ಸದ್ಯಕ್ಕಂತೂ ಲಕ್ಷದ್ವೀಪಕ್ಕೆ ಸ್ಪೀಡ್ ಪ್ಯಾಸೆಂಜರ್ ಹಡಗು ಆರಂಭದಿಂದ ಮಂಗಳೂರಿನ ಜನರಿಗಂತೂ ಸಾಕಷ್ಟು ಖುಷಿಯಾಗಿರೋದಂತು ನಿಜ.
LATEST NEWS
ಈಜಲು ಹೋದ ಅಣ್ಣ ನೀರು*ಪಾಲು.! ತಂಗಿಯ ವೀಡಿಯೋದಲ್ಲಿ ಸೆರೆಯಾಯ್ತು ಅಣ್ಣನ ಸಾ*ವಿನ ಕೊನೆ ಕ್ಷಣ..!
ಕೋಲಾರ: ಕೃಷಿ ಹೊಂಡದಲ್ಲಿ ಈಜುತ್ತಿರುವುದನ್ನು ತಂಗಿ ವೀಡಿಯೋ ಮಾಡುತ್ತಿದ್ದಾಗಲೇ ಸಹೋದರ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆಯೊಂದು ಕೋಲಾರದಲ್ಲಿ ನಡೆದಿದೆ. ಕೋಲಾರ ತಾಲೂಕಿನ ನಾಗವಾಳ ಗ್ರಾಮದಲ್ಲಿಈ ಘಟನೆ ನಡೆದಿದೆ.
ಮುಂದೆ ಓದಿ..; ಈ ಸರ್ವಾಧಿಕಾರಿಗೆ ಬೇಕಂತೆ ವರ್ಷಕ್ಕೆ 25 ಕನ್ಯೆಯರು..!! ಏನಿದು ಕಾಮಕಾಂಡ?
ಮೈಸೂರಿನ ರಾಘವೇಂದ್ರ ನಗರ ನಿವಾಸಿ ಗೌತಮ್(26 ವ) ಮೃತ ದುರ್ದೈವಿ. ಗೌತಮ್ ತನ್ನ ತಂದೆಯ ಊರು ವೇಮಗಲ್ ಸಮೀಪದ ನಾಗಾವಾಳಕ್ಕೆ ಬಂದಿದ್ದರು. ಈ ವೇಳೆ ಕುಟುಂಬ ಸದಸ್ಯರು ಹಾಗೂ ತಂಗಿಯ ಜೊತೆ ಕೃಷಿ ಹೊಂಡದ ಬಳಿ ಹೋಗಿದ್ದಾರೆ. ಅಲ್ಲಿ ತಂಗಿಯ ಬಳಿ ವೀಡಿಯೋ ಮಾಡಲು ಮೊಬೈಲ್ ಕೊಟ್ಟು ಹೊಂಡಕ್ಕೆ ಈಜಲು ಧುಮುಕಿದ್ದಾರೆ. ಸರಿಯಾಗಿ ಈಜಲು ಗೊತ್ತಿರದ ಗೌತಮ್ ನೀರಿಗೆ ಧುಮುಕಿದ್ದು, ಇತ್ತ ತಂಗಿ ಈಚೆ ಬಾ ಎಂದು ಕೂಗುವುದು ವೀಡಿಯೋದಲ್ಲಿ ರೆಕಾರ್ಡ್ ಆಗಿದೆ. ನೋಡು ನೋಡುತ್ತಿದ್ದಂತೆ ಗೌತಮ್ ನೀರಲ್ಲಿ ಮುಳುಗಿ ಉಸಿರು ಚೆಲ್ಲಿದ್ದಾರೆ. ಇನ್ನು ಈ ವೀಡಿಯೋದಲ್ಲಿ ಗೌತಮ್ ನೀರಿನಲ್ಲಿ ಮುಳುಗುವ ದೃಶ್ಯ ಸೆರಯಾಗಿದೆ. ಈ ಕುರಿತಾಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- FILM6 days ago
PHOTOS : ಗೀತಾ ‘ವಿಜಯ್’ ಅದ್ದೂರಿ ಮದುವೆ; ಮೆಚ್ಚುಗೆ ಪಡೆದ ಧನುಷ್ ಮಾಡಿದ ಆ ಒಂದು ಕಾರ್ಯ!
- DAKSHINA KANNADA6 days ago
ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!
- FILM7 days ago
ರಾಮ-ಸೀತೆಯಂತೆ ಕಾಣಿಸಿಕೊಂಡ ರಣ್ಬೀರ್, ಸಾಯಿ ಪಲ್ಲವಿ.. ರಾಮಾಯಣ ಸಿನಿಮಾ ಸೆಟ್ಟಿನ ಫೋಟೋ ಲೀಕ್
- DAKSHINA KANNADA6 days ago
ದೆಹಲಿಯ ರಾಣಾ ಪ್ರತಾಪ್ ನಗರದ ಜಿನ ಬಸದಿ 24ತೀರ್ಥಂಕರ ಪಂಚ ಕಲ್ಯಾಣ; ಮೂಡುಬಿದಿರೆ ಸ್ವಾಮೀಜಿ ಭಾಗಿ