Connect with us

BANTWAL

ಇತಿಹಾಸದ ಪುಟ ಸೇರಿದ ಮೂರು ತಲೆಮಾರಿನ ಕಲ್ಲಡ್ಕ ಕೆ.ಟಿ ಹೋಟೇಲ್‌…!

Published

on

ಮಂಗಳೂರು: ಸಿನಿಮಾ ನಟರು, ರಾಜಕಾರಣಿಗಳು, ಜನಸಾಮಾನ್ಯರು, ಉದ್ಯಮಿಗಳು ಅಥವಾ ವಿವಿಐಪಿಗಳೇ ಇರಲಿ ಕಲ್ಲಡ್ಕಕ್ಕೆ ಬಂದರೆ ಈ ಹೋಟೆಲ್‌ ಭೇಟಿ ನೀಡದವರಿಲ್ಲ.

ಭೇಟಿ ನೀಡಿ ಮೊದಲು ಆರ್ಡರ್‌ ಮಾಡೋದೆ ಕೆಟಿ. ಆಮೇಲೆ ಉಳಿದೆಲ್ಲಾ ಈ ಚಹದ ಸ್ವಾದ ಅಂಥದ್ದು. ಇದೀಗ ಹಳೇ ಕಟ್ಟಡ ಇತಿಹಾಸದ ಪುಟ ಸೇರಲಿದ್ದು, ಹೊಸ ರೂಪದೊಂದಿಗೆ ಗ್ರಾಹಕರ ಸೇವೆಗೆ ಸಿದ್ಧವಾಗಲಿದೆ.

ಕಲ್ಲಡ್ಕ ಕೆ.ಟಿ ಹೀಗಂದ್ರೆ ಚಹಾ ಪ್ರಿಯರ ಕಿವಿ ನೆಟ್ಟಗಾಗುತ್ತದೆ. ಅಷ್ಟರ ಮಟ್ಟಿಗೆ ಕಲ್ಲಡ್ಕ ಕೆಟಿ ಫೇಮಸ್ಸು. ಚಹಾ ಅಂದ್ರೆ ಬಹುತೇಕ ಎಲ್ಲರಿಗೂ ಇಷ್ಟು.

ಹೊಟ್ಟೆ ತುಂಬಾ ಬಿಸಿ ಬಿಸಿ ಯಾಗಿರೋ ರುಚಿಕರ ತಿಂಡಿ ತಿಂದ್ರೆ ಕೊನೆಗೆ ಸ್ಟ್ರಾಂಗ್ ಆಗಿರೋ ಚಹಾ ಕುಡಿಲೇಬೇಕು ಅನ್ಸುತ್ತೆ.

ಅದ್ರಲ್ಲಿ ಈ ಕಲ್ಲಡ್ಕ ಟೀ ಸ್ವಲ್ಪ ಸ್ಪೆಷಲ್. ಎಲ್ಲೆಲ್ಲಿಂದಲೋ ಈ ಕೆ.ಟಿ ಚಹಾ ಸವಿಯೋಕೆ ಬರ್ತಾರೆ ಅಂದ್ರೆ ಊಹೆ ಮಾಡಿ ಈ ಚಹಾ ಅದೆಂಥಾ ಮೋಡಿ ಮಾಡ್ರೋದು ಅಂತ.

ಮಂಗಳೂರು-ಬೆಂಗಳೂರು ರಾಷ್ಟ್ರಿಯ ಹೆದ್ದಾರಿ 75ರಲ್ಲಿ ಹಾಗೆ ಹಾದು ಕಲ್ಲಡ್ಕದ ಲಕ್ಷ್ಮೀ ನಿವಾಸ ಹೋಟೆಲ್ ಕಾಣಸಿಗುತ್ತೆ. ಇಲ್ಲೆ ಸ್ಪೆಷಲ್ ಟೀ ಕಲ್ಲಡ್ಕ ಟೀ ಸಿಗೋದು.
ಸುಮಾರು 70 ವರ್ಷಗಳಷ್ಟು ಹಳೆಯದಾದ ಈ ಹೊಟೇಲನ್ನು ಮೂರು ತಲೆಮಾರುಗಳಿಂದ ನಡೆಸಿಕೊಂಡು ಬರಲಾಗ್ತ ಇದೆ.

ಲಕ್ಷ್ಮೀ ನಾರಾಯಣ ಹೊಳ್ಳ ಈ ಹೋಟೆಲನ್ನು ಪ್ರಾರಂಭಿಸಿದರು. ಬೈಕ್ ರೈಡ್, ಲಾಂಗ್ ಡ್ರೈವ್‌ಗಾಗಿ ಈ ದಾರಿಯಲ್ಲಿ ತೆರಳುವವರು ಇಲ್ಲಿನ ಚಹಾ ಕುಡಿಯದೇ ಹೋಗುವ ಮಾತೇ ಇಲ್ಲ.

ಪುತ್ತೂರು ಮಾರ್ಗವಾಗಿ ಬೆಂಗಳೂರು ಸಾಗುವವರು ಕೂಡ ಹೆಚ್ಚಾಗಿ ಇಲ್ಲಿ ಕೇಟಿ ಕುಡಿದೇ ಮುಂದೆ ಸಾಗುತ್ತೀರಿ. ಅಷ್ಟರ ಮಟ್ಟಿಗೆ ನಮ್ಮ ಕಲ್ಲಡ್ಕ ಕೆಟಿ ಫೇಮಸ್ಸು. ಆ ದಾರಿಯಲ್ಲಿ ಯಾವತ್ತಾದರೂ ಓಡಾಡಿದರೆ ನೀವೂ ಸವಿಯಿರಿ ಕಲ್ಲಡ್ಕ ಚಾ.
ಆದ್ರೆ ಈಗ ಈ ಲಕ್ಷ್ಮೀ ನಿವಾಸ ಹೋಟೆಲ್ ಧರಶಾಹಿಯಾಗುತ್ತಿದೆ. ಬಂಟ್ವಾಳ ತಾಲೂಕಿನ ಹೆದ್ದಾರಿ ಬದಿಯ ಕಲ್ಲಡ್ಕದಲ್ಲಿ ಫ್ಲೈ ಓವರ್ ನಿರ್ಮಾಣ ಹಾಗೂ ರಸ್ತೆ ಅಗಲಗೊಳಿಸುವ ಕಾರ್ಯಕ್ಕೆ ಪೂರ್ವಭಾವಿಯಾಗಿ ಕಟ್ಟಡಗಳನ್ನು ಕೆಡವಲಾಗುತ್ತಿದೆ.

ರಸ್ತೆ ಅಭಿವೃದ್ಧಿ ಹಿನ್ನೆಲೆ ಈ ಹಳೆಯ ಹೋಟೆಲ್ ಧರಾಶಾಹಿಯಾದರೆ, ಈಗ ಇರುವ ಜಾಗದ ಹಿಂದೆಯೇ ಹೊಸ ಕಟ್ಟಡ ನಿರ್ಮಾಣವಾಗುತ್ತಿದ್ದು, ಕೆಲ ಸಮಯದಲ್ಲೇ ಹೊಸ ವಿನ್ಯಾಸದೊಂದಿಗೆ ಗ್ರಾಹಕರ ಸೇವೆಗೆ ಸಿದ್ಧವಾಗಲಿದೆ.
ಅದೇನೇ ಇರಲಿ 70 ವರ್ಷಗಳ ಹಿಂದಿನ ಟೇಸ್ಟೇ ಇಂದಿಗೂ ಇದೆ. ಮಂಗಳೂರಿಗೆ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಕೂಡ ಕಲ್ಲಡ್ಕಕ್ಕೆ ಬಂದು ಕೆಟಿ ಸವಿದಿದ್ದರು. ನೀವು ಒಮ್ಮೆ ಕೇಟಿ ಕುಡ್ದು ಟೇಸ್ಟ್ ನೋಡಿ ಮಾರ್ರೇ

ವರದಿ ಮತ್ತು ಚಿತ್ರ:
ನಿತಿನ್ ಅಮೀನ್ ಕಲ್ಲಡ್ಕ , ನಮ್ಮ ಕುಡ್ಲ ನ್ಯೂಸ್ ಮಂಗಳೂರು

ವಿಡಿಯೋ..

 

BANTWAL

ಪುತ್ತೂರು ಜಾತ್ರೆಯಿಂದ ಹಿಂದಿರುಗುವ ವೇಳೆ ಜವರಾಯನ ಅಟ್ಟಹಾಸ; ಜೀಪ್ ಡಿಕ್ಕಿ; ಬೈಕ್ ಸವಾರ ಸಾ*ವು

Published

on

ಪುತ್ತೂರು : ಜೀಪೊಂದು ಬೈಕ್ ಗೆ ಡಿ*ಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃ*ತಪಟ್ಟು, ಅವರ ಇಬ್ಬರು ಮಕ್ಕಳು ಗಂಭೀ*ರ ಗಾ*ಯಗೊಂಡ ಘಟನೆ ಬುಧವಾರ ರಾತ್ರಿ ಪುತ್ತೂರು ಸುಬ್ರಹ್ಮಣ್ಯ ರಸ್ತೆಯಲ್ಲಿನ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್ (48) ಮೃ*ತಪಟ್ಟವರು. ಅವರ ಇಬ್ಬರು ಮಕ್ಕಳು ಗಂಭೀ*ರ ಗಾಯಗೊಂಡಿದ್ದು, ಗಾ*ಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಲೋಕೇಶ್ ಅವರು  ಮಕ್ಕಳೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಜಾತ್ರೆಗೆ ಆಗಮಿಸಿ ಹಿಂದಿರುಗುತ್ತಿದ್ದ ವೇಳೆಯಲ್ಲಿ ಮುಂಭಾಗದಿಂದ ಆಗಮಿಸಿದ ಜೀಪು ಅವರು ಚಲಾಯಿಸುತ್ತಿದ್ದ ಬೈಕ್ ಗೆ ಡಿ*ಕ್ಕಿಯಾಗಿತ್ತು.

ಇದನ್ನೂ ಓದಿ : ಕರಡಿಗೂ ಕ್ಯಾಪ್ಟನ್ ಗೂ ಫೈಟ್; ಮನೆಯಂಗಳದಲ್ಲೇ ಕಾದಾಟ! ವೀಡಿಯೋ ವೈರಲ್

ಡಿ*ಕ್ಕಿಯ ರಭಸಕ್ಕೆ ಬೈಕ್ ಎರಡು ತುಂಡಾಗಿದೆ. ಸುಮಾರು 50 ಮೀಟರ್ ದೂರದ ತನಕ ಬೈಕನ್ನು ಜೀಪ್‌ ಎಳೆದುಕೊಂಡು ಹೋಗಿದೆ. ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟ ಲೋಕೇಶ್ ಅವರು ಸ್ಥಳದಲ್ಲಿಯೇ ಸಾ*ವನ್ನಪ್ಪಿದ್ದಾರೆ. ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

BANTWAL

ಗಂಡ ಹೆಂಡತಿಗೆ ನಾಲ್ವರಿಂದ ಹಲ್ಲೆ..!!

Published

on

ಬಂಟ್ವಾಳ; ಅಪಘಾತದ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ಮಾಡಿರುವ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಎ.15ರಂದು ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ ಹಲ್ಲೆಗೊಳಗಾದವರು. ಹಲ್ಲೆಗೊಳಗಾದವರು ಬಂಟ್ವಾಳ ನಗರ ಪೋಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಮಂಜುನಾಥ್ ಅವರು ಮಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ವೇಳೆ ಕಲ್ಲಡ್ಕ ಸಮೀಪದ ನರಹರಿ ಎಂಬಲ್ಲಿ ಇವರ ಕಾರಿಗೆ ಹರಿಯಾಣ ಮೂಲದ ಕಾರೊಂದ ಓವರ್ ಟೇಕ್ ಮಾಡುವ ಭರದಲ್ಲಿ ಡಿಕ್ಕಿಯಾಗಿದೆ. ಈ ಸಂದರ್ಭದಲ್ಲಿ ಕೈ ಸನ್ನೆಯ ಮೂಲಕ ಪ್ರಶ್ನಿಸಿದಕ್ಕೆ ಅಪಘಾತ ಎಸಗಿದ ಕಾರು ಮುಂದೆ ಹೋಗಿ ಕರಿಂಗಾಣ ಕ್ರಾಸ್ ಎಂಬಲ್ಲಿ ಅಡ್ಡವಾಗಿ ಇರಿಸಿ ಮಂಜುನಾಥ್ ಹಾಗೂ ಅವರ ಪತ್ನಿ ಪೂರ್ಣಿಮಾ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

ಇದೇ ಸಂದರ್ಭದಲ್ಲಿ ಪೂರ್ಣಿಮಾ ಅವರ ಕುತ್ತಿಗೆಯಲ್ಲಿದ್ದ ಬಂಗಾರದ ಚೈನ್ ನಾಪತ್ತೆಯಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.ಹಲ್ಲೆಯಿಂದ ಮಂಜುನಾಥ್ ಅವರ ಕಣ್ಣಿಗೆ ಏಟಾಗಿದ್ದು, ಅವರು ಬಂಟ್ವಾಳ ನಗರ ಪೋಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಘಟನೆ ನಡೆದ ಕೂಡಲೇ ಸಂಚಾರ ಪೊಲೀಸರು ಭೇಟಿ ನೀಡಿ ವಾಹನವನ್ನು ಹಾಗೂ ಸ್ಥಳದಲ್ಲಿದ್ದವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಟ್ವಾಳ ನಗರ ಪೊಲೀಸ್‌ ಇನ್ಸ್ ಪೆಕ್ಟರ್ ಅನಂತ ಪದ್ಮನಾಭ ಅವರು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಗೆ ಭಜರಂಗದಳ, ವಿಶ್ವಹಿಂದೂಪರಿಷತ್ ಕಲ್ಲಡ್ಕ ಪ್ರಖಂಡ ಖಂಡನೆ ವ್ಯಕ್ತಪಡಿಸಿದ್ದಾರೆ.

Continue Reading

BANTWAL

ಹಿಂದೂ ಸಂಘಟನೆಯ ಮುಖಂಡನಿಗೆ ಸ್ನೇಹಿತನಿಂದಲೆ ಚೂ*ರಿ ಇರಿತ

Published

on

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತನೇ ಚೂ*ರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ಭಾನುವಾರ(ಎ.14) ರಾತ್ರಿ ನಡೆದಿದೆ.

ಹಿಂದೂ ಯುವಸೇನೆಯ ಮುಖಂಡ ಉದ್ಯಮಿಯಾಗಿರುವ ಪುಷ್ಪರಾಜ್ ಎಂಬವರಿಗೆ ಜಕ್ರಿಬೆಟ್ಟು ಎಂಬಲ್ಲಿ ಚೂ*ರಿ ಇರಿತವಾಗಿದೆ. ಇರಿತಕ್ಕೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ. ರಿಕ್ಷಾದಲ್ಲಿ ಜತೆಯಾಗಿ ತೆರಳುತ್ತಿದ್ದಾಗಲೇ ಸ್ನೇಹಿತ ರವಿ ಎಂಬಾತ ಚೂ*ರಿಯಿಂದ ಕುತ್ತಿಗೆಗೆ ಇರಿದಿದ್ದಾನೆ ಎಂದು ಹೇಳಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಪುಷ್ಪರಾಜ್ ರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಆರೋಪಿ ರವಿ ಚೂ*ರಿ ಇರಿದು ಪರಾರಿಯಾಗಿದ್ದಾನೆ. ಬಂಟ್ವಾಳ ನಗರ ಠಾಣಾ ಪೋಲೀಸರು ಸ್ಥಳಕ್ಕೆ ‌ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Continue Reading

LATEST NEWS

Trending