Connect with us

BANTWAL

ನಾಲಗೆ ಇದೆ ಎಂದು ಅಸಂಬದ್ಧ ಮಾತನಾಡಬೇಡಿ-ಕಲ್ಲಡ್ಕ ಪ್ರಭಾಕರ್ ಭಟ್

Published

on

ಬಂಟ್ವಾಳ: ನಾಲಗೆ ಇದೆ ಎಂದು ಅಸಂಬದ್ಧವಾದ ರೀತಿಯಲ್ಲಿ ಮಾತನಾಡುವುದು ಸರಿಯಲ್ಲ. ದೇಶದ್ರೋಹ ಹಾಗೂ ನಪುಂಸಕತೆಯ ನಡುವಿರುವ ವ್ಯತ್ಯಾಸ ಏನು ಅಂತ ಹೇಳಲಿ ಎಂದು ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ ಎಚ್ಚರಿಕೆ ನೀಡಿದ್ದಾರೆ.

ಆರ್‌ಎಸ್‌ಎಸ್‌ ಬಗ್ಗೆ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್‌ನ ಹೇಳಿಕೆಗೆ ನಿನ್ನೆ ಕಲ್ಲಡ್ಕದಲ್ಲಿ ಮೊದಲ ಬಾರಿಗೆ ಪ್ರತಿಕ್ರಿಯಿಸಿದ, ಕಳೆದ 97 ವರ್ಷಗಳಿಂದ ದೇಶಕ್ಕಾಗಿ ಬದುಕುತ್ತಿರುವ, ಸೇವೆಯ ಕಣ್ಣ ಮುಂದೆ ಇಟ್ಟುಕೊಂಡು, ಕೋಟಿ ಕೋಟಿ ಜನರಿಗೆ ದೇಶಕ್ಕೋಸ್ಕರ ಬದುಕುವ ಚಿಂತನೆ ನಡೆಸುತ್ತಿರುವ ಏಕೈಕ ಸಂಸ್ಥೆ ಅದು ಆರ್‌ಎಸ್‌ಎಸ್ ಇದರ ಬಗ್ಗೆ ಮಾತನಾಡಲು ಇವರಲ್ಲಿ ಏನಿದೆ ನೈತಿಕತೆ ಎಂದು ಅವರು ಗುಡುಗಿದ್ದಾರೆ.


ಸುಮಾರು ವರ್ಷಗಳ ಹಿಂದೆ ಮುಸ್ಲಿಂ ದೇಶಕ್ಕೆ ಹೊರಟ ಎರಡು ವಿಮಾನಗಳು ರಾಜಸ್ಥಾನದಲ್ಲಿ ಅಪಘಾತ ನಡೆದ ಸಂದರ್ಭದಲ್ಲಿ ತಕ್ಷಣ ಅಲ್ಲಿ ಹೋಗಿದ್ದು ಆರ್.ಎಸ್.ಎಸ್.ಸಂಘಟನೆ, ಅಲ್ಲಿ ಹೋಗಿ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಗಳ ಶವ ಹಾಗೂ ಚಿನ್ನಾಭರಣಗಳನ್ನು ಅವರ ಅವರ ಕುಟುಂಬಕ್ಕೆ ಹಸ್ತಾಂತರ ಮಾಡಿದ ಬಳಿಕ ಮಾಜಿ ಕೇಂದ್ರ ಸಚಿವ ಸಿ.ಎಂ.ಇಬ್ರಾಹಿಂ ಅವರು ಅಲ್ಲಿಗೆ ಭೇಟಿ ನೀಡಿ ಮೊತ್ತಮೊದಲ ಬಾರಿಗೆ ಆರ್.ಎಸ್.ಎಸ್.ಬಗ್ಗೆ ಹೊಗಳಿ ಮಾತನಾಡಿದರು.


ಸರ್ವೇ ಸಾಮಾನ್ಯರಿಗೋಸ್ಕರ ಬದುಕುವುದು ಸಂಘದ ಮೂಲ ಉದ್ದೇಶ. ದಿನ ನಿತ್ಯ ಭಾರತ್ ಮಾತ ಕೀ ಜೈ ಅಂತ ಹೇಳಿದರೆ ಅದು ಸಂಘದ ಕಾರ್ಯಕರ್ತರು ಮಾತ್ರ. ಇವರು ಇಟಲಿಯವರಿಗೆ ಜೈ ಕಾರ ಹಾಕಿದವರು. ದೇಶ ವಿಭಜನೆ ಮಾಡಿದ್ದು ಯಾರು? ಸಮಾಜ ವಿಭಜನೆ ಮಾಡಿದ್ದು ಯಾರು?

ನೆಹರು, ಗಾಂಧೀಜಿಯವರು ಎಂಬುದು ಇವರಿಗೆ ನೆನಪಿದೆಯಾ? ಅ ಮೂರೇ ಜನ ಇದ್ದದ್ದು, ಮುಸ್ಲಿಂ ಲೀಗ್, ಕಾಂಗ್ರೆಸ್, ಬ್ರಿಟಿಷರು. ಇವರು ದೇಶ ವಿಭಜನೆ ಮಾಡಿ ಇಷ್ಟು ದೊಡ್ಡ ಆಪತ್ತು ಬಂದಿದೆ ಅಲ್ವಾ ಅದನ್ನು ನಾವು ಒಪ್ಪಿಕೊಳ್ಳಬೇಕಾಲ್ವ ಎಂದು ಅವರು ಪ್ರಶ್ನಿಸಿದರು.

ದೇಶ ವಿಭಜನೆಯ ಕಾರಣ ನಿತ್ಯ ನಿರಂತರ ತಲೆ ಬಿಸಿ ಆಗುವಂತೆ ಮಾಡಿದ್ದು ಕಾಂಗ್ರೇಸ್ ಅಲ್ವಾ, ಹೊರಗಿನಿಂದ ಆಕ್ರಮಣ, ಒಳಗಿನಿಂದ ಅಕ್ರಮಣ, ಪಾಕಿಸ್ತಾನ್ ಜಿಂದಾಬಾದ್ ಎಂದು ಹೇಳಲು ಅವಕಾಶ ನೀಡಿದ್ದು ಕಾಂಗ್ರೇಸ್ ಅಲ್ವವೇ ಎಂದು ಪ್ರಶ್ನೆ ಮಾಡಿದರು.

ಮಳಲಿಯನ್ನು ಬಿಟ್ಟುಕೊಡುವ ಪ್ರಶ್ನೆಯಿಲ್ಲ: ಡಾ!ಭಟ್
ಮಳಲಿಯ ಮಸೀದಿಯಲ್ಲಿ ಹಿಂದೂ ಧಾರ್ಮಿಕ ಕೇಂದ್ರಕ್ಕೆ ಸಂಬಂಧಿಸಿದ ಕುರುಹುಗಳು ಸಿಕ್ಕಿದ ಕಾರಣಕ್ಕಾಗಿ ಅದನ್ನು ಒಪ್ಪಂದ ಮಾಡಿಕೊಂಡು ಹಿಂದೂಗಳಿಗೆ ಬಿಟ್ಟು ಕೊಡಬೇಕು ಎಂದು ಕಲ್ಲಡ್ಕ ಡಾ! ಪ್ರಭಾಕರ್ ಭಟ್ ಹೇಳಿದ್ದಾರೆ. ಇಂತಹ ಅನೇಕ ಕೇಂದ್ರಗಳು ಇವೆ. ಎಲ್ಲವನ್ನೂ ಬಿಟ್ಟುಕೊಡುವ ಒಪ್ಪಂದಕ್ಕೆ ತಯಾರಿರಬೇಕು ಎಂದರು.

ದೇವಸ್ಥಾನಕ್ಕೆ ಮತ್ತು ಮಸೀದಿ, ಚರ್ಚ್‌ಗೆ ವ್ಯತ್ಯಾಸ ಇದೆ. ಅದು ಎರಡೂ ಕೂಡ ಪ್ರಾರ್ಥನಾ ಮಂದಿರಗಳು.ಅದು ಎಲ್ಲಿ ಬೇಕಾದರೂ ಮಾಡಬಹುದು. ಆದರೆ ದೇವಸ್ಥಾನ, ದೈವಸ್ಥಾನಗಳಿಗೆ ಇತಿಹಾಸ ಇರುವುದರಿಂದ ಅದೇ ಸ್ಥಳದಲ್ಲಿ ನಿರ್ಮಾಣವಾಗಬೇಕಾಗಿದೆ ಎಂದು ಅವರು ಹೇಳಿದರು.

BANTWAL

ಅನಾರೋಗ್ಯದ ನಡುವೆಯೂ ಮತ ಚಲಾಯಿಸಿ ಕೊ*ನೆಯುಸಿರೆಳೆದ ನಿವೃತ್ತ ಯೋಧ

Published

on

ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಮಾಜಿ ಸೈನಿಕರೊಬ್ಬರು ಮತದಾನ ಪೂರೈಸಿ ಮರಳಿ ಅಸ್ಪತ್ರೆಗೆ ದಾಖಲಾಗಿದ್ದು, ಈಗ ಚಿಕಿತ್ಸೆಗೆ ಸ್ಪಂದಿಸದೆ ಮೃ*ತಪಟ್ಟಿದ್ದಾರೆ.

ಬಂಟ್ವಾಳ ವಗ್ಗ ನಿವಾಸಿ, ನಿವೃತ್ತ ಯೋಧ ಮಾಧವ ಪ್ರಭು (83) ಅನಾರೋಗ್ಯದ ನಡುವೆಯೂ ಪವಿತ್ರ ಮತದಾನ ಕರ್ತವ್ಯ ಪೂರೈಸಿದವರು.

ಮಾಧವ ಪ್ರಭುಗಳು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 85 ವರ್ಷ ಮತ್ತು ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಮಾಧವ ಪ್ರಭುಗಳು ವೈದ್ಯರ ಅನುಮತಿ ಪಡೆದು ನೇರವಾಗಿ ಮನೆಗೆ ತೆರಳಿ ಅಲ್ಪಿ ಏ.15 ರಂದು ಮತದಾನ ಕರ್ತವ್ಯ ಪೂರೈಸಿ ಆಸ್ಪತ್ರೆಗೆ ಮರಳಿದ್ದರು. ಮಾಧವ ಪ್ರಭುಗಳು ಆಸ್ಪತ್ರೆಯಲ್ಲಿ ಬುಧವಾರ ಮೃ*ತಪಟ್ಟಿದ್ದಾರೆ.

ಸೈನ್ಯಕ್ಕೆ ಸೇರುವ ಮೊದಲು ಮಲೇರಿಯಾ ನಿರ್ಮೂಲನಾ ವಿಭಾಗದ ಇನ್‌ಸ್ಪೆಕ್ಟರ್ ಆಗಿದ್ದರು. ಸೈನ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ ನಂತರ ಇವರು ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾಗಿದ್ದರು. ಮೃ*ತರು ಪತ್ನಿ ಹಾಗೂ ಇಬ್ಬರು ಪುತ್ರಿ ಮತ್ತು ಪುತ್ರರನ್ನು ಅ*ಗಲಿದ್ದಾರೆ.

Continue Reading

BANTWAL

ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

Published

on

ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.

drinks ban for 3 days

ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.

Continue Reading

BANTWAL

ಬಂಟ್ವಾಳ : ಬಾವಿಯೊಳಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಸಾ*ವು

Published

on

ಬಂಟ್ವಾಳ : 30 ಅಡಿ ಇರುವ ಆಳದ ಬಾವಿಗೆ ರಿಂಗ್‌ ಅಳವಡಿಸಲು ಇಳಿದ ಇಬ್ಬರು ಕೂಲಿ ಕಾರ್ಮಿಕರು ಬಾವಿಯೊಳಗೆ ಆಕ್ಸಿಜನ್ ಸಿಗದೇ ಸಾ*ವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಪಡಿಬಾಗಿಲಿನಲ್ಲಿ ನಡೆದಿದೆ.


ಮೃ*ತರನ್ನು ಪರ್ತಿಪ್ಪಾಡಿ ನಿವಾಸಿ ಇಬ್ರಾಹಿಂ(40) ಹಾಗೂ ಮಲಾರ್ ನಿವಾಸಿ ಆಲಿ (24) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ : ಡಿವೈಡರ್ ಗೆ ಡಿ*ಕ್ಕಿ ಹೊಡೆದ ಬೈಕ್; ಸವಾರ ಸ್ಥಳದಲ್ಲೇ ಸಾ*ವು

ಮೃ*ತ ಇಬ್ರಾಹಿಂ ಎಂಬವರು ಸುಮಾರು 20 ವರ್ಷಗಳಿಂದ ಬಾವಿಗೆ ರಿಂಗ್ ಹಾಕುವಲ್ಲಿ ಪರಿಣಿತರಾಗಿದ್ದರು. ಮೃ*ತ ದೇಹವನ್ನು ಬಾವಿಯಿಂದ ಮೇಲಕ್ಕೆತ್ತಲಾಗಿದೆ.

Continue Reading

LATEST NEWS

Trending