LATEST NEWS
ಕಾಂಚನ್ಜುಂಗಾ ಎಕ್ಸ್ಪ್ರೆಸ್ ರೈಲು ಅಪಘಾತ; 8 ಮಂದಿ ಸಾವು
ನವದಹಲಿ: ಪಶ್ಚಿಮ ಬಂಗಾಳದ ರಂಗಪಾಣಿ ನಿಲ್ದಾಣದ ಬಳಿ ಸೋಮವಾರ(ಜೂ.17) ಗೂಡ್ಸ್ ರೈಲು ಸೀಲ್ದಾಹ್ ಕಡೆಗೆ ಹೋಗುವ ಕಾಂಚನ್ಜುಂಗಾ ಎಕ್ಸ್ಪ್ರೆಸ್ಗೆ ಡಿಕ್ಕಿ ಹೊಡೆದ ನಂತರ ಕನಿಷ್ಠ 19 ರೈಲುಗಳನ್ನು ರದ್ದುಗೊಳಿಸಲಾಗಿದೆ. ಈ ದುರ್ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದು, ಸುಮಾರು 50 ಮಂದಿ ಗಾಯಗೊಂಡಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ಎರಡು ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.
Read More..; ಉಪ್ಪಿನಂಗಡಿ: ಮಹಿಳೆ ಸಾ*ವಿನಲ್ಲಿ ಅನುಮಾನ; ಕೊ*ಲೆ ಶಂಕೆ
ನ್ಯೂ ಜಲ್ಪೈಗುರಿ ಬಳಿ ಗೂಡ್ಸ್ ರೈಲು ಸಿಗ್ನಲ್ ಅನ್ನು ನಿರ್ಲಕ್ಷಿಸಿದ ಕಾರಣ ಮತ್ತು ಅಗರ್ತಲಾದಿಂದ ಸೀಲ್ದಾಹ್ಗೆ ತೆರಳುತ್ತಿದ್ದ ಕಾಂಚನ್ಜುಂಗಾ ಎಕ್ಸ್ಪ್ರೆಸ್ಗೆ ಡಿಕ್ಕಿ ಹೊಡೆದಿದ್ದರಿಂದ ಸಂಭವಿಸಿದೆ ಎಂದು ರೈಲ್ವೇ ಮಂಡಳಿಯ ಅಧ್ಯಕ್ಷ ಜಯ ವರ್ಮ ಸಿನ್ಹಾ ಹೇಳಿದ್ದಾರೆ.
DAKSHINA KANNADA
ಜಪ್ಪಿನಮೊಗರು ದೊಂಪದಬಲಿ ಗದ್ದೆ ಸಮೀಪ ಮನೆಗಳು ಜಲಾವೃತ
ಮಂಗಳೂರು ಹೊರವಲಯದ ಜಪ್ಪಿನಮೊಗೆರು ಪ್ರದೇಶದಲ್ಲಿ ಮಳೆಯಿಂದಾಗಿ ಹಲವು ರಸ್ತೆಗಳು ಹಾಗೂ ಮನೆಗಳು ಜಲಾವೃತಗೊಂಡಿದೆ. ಇಲ್ಲಿನ ದೊಂಪದಬಲಿ ಎಂಬಲ್ಲಿನ ರಾಜಾಕಾಲುವೆ ಬ್ಲಾಕ್ ಆಗಿ ನೀರು ನದಿ ಸೇರದೆ ಈ ಕೃತಕ ನೆರೆ ಉಂಟಾಗಿದೆ.
ಹಲವಾರು ವರ್ಷಗಳಿಂದ ಇಲ್ಲಿ ರಸ್ತೆ ಸಮಸ್ಯೆ ಇದ್ದು, ಇತ್ತೀಚೆಗೆ ನೂತನ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಲಾಗಿದೆ. ಆದ್ರೆ ಕಾಂಕ್ರೀಟ್ ರಸ್ತೆಯ ಇಕ್ಕೆಲೆಗಳಲ್ಲಿ ನಿರ್ಮಿಸಬೇಕಾದ ಚರಂಡಿಯನ್ನು ನಿರ್ಮಾಣ ಮಾಡದೆ ಇರುವುದು ಇದಕ್ಕೆ ಕಾರಣ ಎಂದು ಸ್ಥಳಿಯರು ದೂರಿದ್ದಾರೆ. ಮೊದಲೇ ತಗ್ಗು ಪ್ರದೇಶದಲ್ಲಿ ಇರುವ ದೊಂಪದ ಬಲಿ ಪ್ರದೇಶ ರಸ್ತೆಗಿಂತ ಕೆಳಗೆ ಇರುವ ಕಾರಣ ರಸ್ತೆಯಲ್ಲಿ ಹರಿಯುವ ನೀರು ನೇರ ಜನವಸತಿ ಪ್ರದೇಶಕ್ಕೆ ನುಗ್ಗುತ್ತಿದೆ. ಚರಂಡಿ ನಿರ್ಮಾಣ ಮಾಡಿದ್ದೇ ಆಗಿದ್ದಲ್ಲಿ ಈ ರೀತಿಯ ಸಮಸ್ಯೆ ಆಗುತ್ತಿರಲಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿ ಕಾರ್ಪೋರೇಟರ್ ವೀಣಾಮಂಗಳ ಸ್ಥಳೀಯ ನಿವಾಸಿಗಳು ತ್ಯಾಜ್ಯ ವಿಲೇವಾರಿಯಲ್ಲಿ ಸಹಕರಿಸದೇ ಇರುವುದು ಈ ಸಮಸ್ಯೆಗೆ ಮೂಲಕ ಕಾರಣ ಎಂದು ಹೇಳಿದ್ದಾರೆ. ಎಲ್ಲಾ ತ್ಯಾಜ್ಯಗಳನ್ನು ಇಲ್ಲಿನ ಚರಂಡಿಗೆ ಎಸೆಯುವ ಕಾರಣ ರಾಜಾಕಾಲುವೆಯಲ್ಲಿ ಶೇಖರಣೆಯಾಗಿ ಈ ರೀತಿ ಅವಾಂತರ ಸೃಷ್ಟಿಯಾಗಿದೆ ಎಂದು ಹೇಳಿದ್ದಾರೆ.
ಇಷ್ಟೇ ಅಲ್ಲದೆ ನೀರು ಸರಾಗವಾಗಿ ಹರಿದು ರಾಜಕಾಲುವ ಸೇರಲು ಚರಂಡಿ ನಿರ್ಮಾಣದ ವೇಳೆ ಕೆಲವರು ಅನಗತ್ಯವಾಗಿ ಸ್ಟೇ ತಂದು ಕಾಮಾಗಾರಿ ತಡೆ ಹಿಡಿದಿದ್ದಾರೆ ಎಂದು ಸ್ಥಳಿಯರ ಅಸಹಕಾರದಿಂದ ಈ ರೀತಿ ಆಗಿದೆ ಎಂದು ಹೇಳಿದ್ದಾರೆ.
FILM
ಖ್ಯಾತ ನಟ ಜಯಂ ರವಿ – ಆರತಿ ದಾಂಪತ್ಯ ಜೀವನದಲ್ಲಿ ಬಿರುಕು!?
ಸಿನಿಮಾ ಲೋಕದಲ್ಲಿ ವಿಚ್ಛೇದನ ಎಂಬುದು ಸಾಮಾನ್ಯ ಸಂಗತಿಯಾಗಿ ಹೋಗಿದೆ. ಹಿಂದಿ, ತಮಿಳು, ತೆಲುಗು, ಚಂದನವನ ಎಲ್ಲೆಡೆಯೂ ವಿಚ್ಛೇದನದ್ದೇ ಸುದ್ದಿ.
ಕಾಲಿವುಡ್ನಲ್ಲಿ ನಟ ಧನುಷ್ ಹಾಗೂ ಐಶ್ವರ್ಯ ವಿಚ್ಛೇದನದ ಸುದ್ದಿ ಈಗಾಗಲೇ ಸುದ್ದಿಯಾಗಿತ್ತು. ಇತ್ತೀಚೆಗೆ ಸಂಗೀತ ನಿರ್ದೇಶಕ, ನಟ ಜಿ. ವಿ ಪ್ರಕಾಶ್ ವಿಚ್ಛೇದನ ಪಡೆಯುವ ಬಗ್ಗೆ ಘೋಷಿಸಿದ್ದರು. ಇದೀಗ ಮತ್ತೊಬ್ಬ ನಟನ ಬಗ್ಗೆ ವಿಚ್ಛೇದನದ ಗಾಸಿಪ್ ಹರಿದಾಡಿದೆ.
ಹೌದು, ನಟ ಜಯಂ ರವಿ – ಆರತಿ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎಂಬುದಾಗಿ ಗುಸುಗುಸು ಶುರುವಾಗಿದೆ.
ಇಬ್ಬರ ನಡುವೆ ಭಿನ್ನಾಭಿಪ್ರಾಯ?
ತಮಿಳು ಸಿನಿಮಾ ಸಂಕಲನಕಾರ ಮೋಹನ್ ಪುತ್ರ ರವಿ ಬಾಲನಟನಾಗಿ ಚಿತ್ರರಂಗಕ್ಕೆ ಪಾದರ್ಪಣೆ ಮಾಡಿದರು. ಬಳಿಕ ಅವರು 2003ರಲ್ಲಿ ‘ಜಯಂ’ ಚಿತ್ರದ ಮೂಲಕ ನಾಯಕ ನಟನಾಗಿ ಪಾದರ್ಪಣೆ ಮಾಡಿದ್ದರು. ಅಲ್ಲಿಂದ ‘ಜಯಂ ರವಿ’ ಎಂದೇ ಜನಪ್ರಿಯರಾದರು. ಬಳಿಕ ಹಲವು ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ಇತ್ತೀಚೆಗೆ ಬಂದ ಪೊನ್ನಿಯಿನ್ ಸೆಲ್ವನ್ ಚಿತ್ರದ ಟೈಟಲ್ ರೋಲ್ನಲ್ಲಿ ಮಿಂಚಿ ಮೆಚ್ಚುಗೆ ಗಳಿಸಿದ್ದರು.
ಇದನ್ನೂ ಓದಿ : ಮಕ್ಕಳಿಗೆ ಯಾವ ವಯಸ್ಸಿನಿಂದ ಚಹಾ, ಕಾಫಿ ಕೊಡಬಹುದು?
2009 ರಲ್ಲಿ ಕಿರುತೆರೆ ನಿರ್ಮಾಪಕ ಸುಜಾತಾ ವಿಜಯಕುಮಾರ್ ಮಗಳು ಆರತಿ ಎಂಬುವವರ ಜೊತೆ ಜಯಂ ರವಿ ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಇದೀಗ ರವಿ – ಆರತಿ ವಿಚ್ಛೇದನಕ್ಕೆ ಮುಂದಾಗಿದ್ದಾರೆ. ಇಬ್ಬರ ನಡುವೆ ಭಿನ್ನಾಭಿಪ್ರಾಯಗಳಿವೆ ಎಂಬ ಗಾಸಿಪ್ ಹರಿದಾಡುತ್ತಿದೆ. ಇದೇ ವೇಳರ ಆರತಿ ಇನ್ಸ್ಟಾಗ್ರಾಮ್ನಿಂದ ಪತಿ ಜೊತೆಗಿನ ಫೋಟೊಗಳನ್ನು ಡಿಲೀಟ್ ಮಾಡಿದ್ದು, ಅನುಮಾನ ಇನ್ನಷ್ಟು ಬಲವಾಗಿದೆ.
DAKSHINA KANNADA
ಅತ್ತಾವರ: ಮಳೆಗೆ ಧರೆಗುರುಳಿದ ಬೃಹತ್ ಮರ
ಮಂಗಳೂರು: ಭಾರೀ ಮಳೆಯ ಹಿನ್ನೆಲೆಯಲ್ಲಿ ಅತ್ತಾವರ ಕಾಪ್ರಿಗುಡ್ಡದ ಬ್ರಿಟ್ಟೋಲೇನ್ ಬಳಿ ವಾಣಿಜ್ಯ ಸಂಕೀರ್ಣದ ತಳಪಾಯದ ಕಾಮಗಾರಿ ನಡೆಯುತ್ತಿದ್ದ ಜಾಗಕ್ಕೆ ಮೇಲ್ಭಾಗದಲ್ಲಿದ್ದ ಬೃಹತ್ ಮರವೊಂದು ಬುಡ ಸಹಿತ ಉರುಳಿ ಬಿದ್ದಿದೆ.
ಮಳೆಯ ಹಿನ್ನೆಲೆಯಲ್ಲಿ ಕಳೆದೆರಡು ದಿನಗಳಿಂದ ಕಾಮಗಾರಿ ನಿಲ್ಲಿಸಲಾಗಿದ್ದ ಕಾರಣ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಸ್ಥಳೀಯ ಕಾರ್ಪೊರೇಟರ್ ಅಬ್ದುಲ್ ಲತೀಫ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
- LATEST NEWS4 days ago
ಮುಂದಿನ ಐದು ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ; ಹವಾಮಾನ ಇಲಾಖೆ ಎಚ್ಚರಿಕೆ
- LATEST NEWS5 days ago
ನಟ ದರ್ಶನ್ ಅಭಿಮಾನಿಯ ವಿರುದ್ಧ ಬಿತ್ತು ಕೇಸ್
- DAKSHINA KANNADA6 days ago
ಇನ್ಮುಂದೆ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಿಸುವಂತಿಲ್ಲ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
- LATEST NEWS5 days ago
ನಟ ದರ್ಶನ್ ಪರ ವಾದ ಮಂಡಿಸಲಿರುವ ಹಿರಿಯ ವಕೀಲ ಸಿವಿ ನಾಗೇಶ್; ಯಾರಿವರು ಗೊತ್ತಾ!?
Pingback: ಉಡುಪಿಯಲ್ಲಿ ಮತ್ತೊಂದು ಗ್ಯಾಂಗ್ ವಾರ್..!! ಪುಂಡರ ಅಟ್ಟಹಾಸಕ್ಕೆ ಬೆಚ್ಚಿಬಿದ್ದ ಜನ - NAMMAKUDLA NEWS - ನಮ್ಮಕುಡ್ಲ ನ್ಯೂಸ್