DAKSHINA KANNADA
ನಟಿ – ಸಂಸದೆ ಕಂಗಾನಾಗೆ ಕಪಾಳ ಮೋಕ್ಷ..! CISF ಸಿಬ್ಬಂದಿ ವಿರುದ್ಧ ಆರೋಪ..!
ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಫ್ (CISF) ಮಹಿಳಾ ಸಿಬ್ಬಂದಿ ತನಗೆ ಕಪಾಳಮೋಕ್ಷ ಮಾಡಿದ್ದಾಗಿ ಬಾಲಿವುಡ್ ನಟಿ ಹಾಗೂ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ನೂತನ ಸಂಸದೆ ಕಂಗನಾ ರನೌತ್ ಆರೋಪಿಸಿದ್ದಾರೆ. ದೆಹಲಿಗೆ ಆಗಮಿಸಿದ ಕಂಗನಾ ಹಿರಿಯ ಸಿಐಎಸ್ಎಫ್ (CISF) ಅಧಿಕಾರಿಗಳ ದೂರು ನೀಡಿದ್ದಾರೆ.
ಕಂಗನಾಗೆ ಕಪಾಳಮೋಕ್ಷ ಮಾಡಿದ್ದು ಯಾಕೆ?
ದೆಹಲಿಗೆ ಪ್ರಯಾಣ ಬೆಳೆಸಲು ಕಂಗನಾ ಚಂಢೀಗಢ ವಿಮಾನ ನಿಲ್ದಾಣಕ್ಕೆ ಮದ್ಯಾಹ್ನ 3.30 ರ ಸುಮಾರಿಗೆ ಆಗಮಿಸಿದ್ದರು. ಈ ವೇಳೆ ಭದ್ರತಾ ತಪಾಸಣೆ ಮಾಡುತ್ತಿದ್ದ ಮಹಿಳಾ ಸಿಐಎಸ್ಎಫ್ (CISF) ಸಿಬ್ಬಂದಿ ಜೊತೆ ಕಿರಿಕ್ ನಡೆದಿದೆ. ಸಿಐಎಸ್ಎಫ್ನ ಮಹಿಳಾ ಸಿಬ್ಬಂದಿ ಕುಲ್ವಿಂದರ್ ಕೌರ್ ಅವರು ಈ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿರುವ ಕಂಗನಾ ಇದು ರೈತರ ಆಂದೋಲನದ ವಿರುದ್ಧ ತಾನು ಮಾತನಾಡಿದ ಕೋಪದಿಂದ ಈ ರೀತಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಸಿಐಎಸ್ಎಫ್ ಕಾನ್ಸ್ಟೆಬಲ್ ಬಂಧನ..!
ದೆಹಲಿಯ ಹಿರಿಯ ಅಧಿಕಾರಿಗಳಿಗೆ ಕಂಗನಾ ದೂರು ನೀಡಿದ ಹಿನ್ನಲೆಯಲ್ಲಿ ಕುಲ್ವಿಂದರ್ ಕೌರ್ ಅವರನ್ನು ಕಮಾಂಡಿಗ್ ಆಫೀಸರ್ ಬಂಧಿಸಿದ್ದಾರೆ. ಘಟನೆಯ ಕುರಿತು ಕೌರ್ ಅವರಿಂದ ಮಾಹಿತಿ ಪಡೆಯಲಾಗಿದ್ದು, ಘಟನಾ ಸ್ಥಳದಲ್ಲಿದ್ದ ಸಿಸಿ ಟಿವಿ ದೃಶ್ಯಾವಳಿಗಳನ್ನು ಪರೀಶೀಲನೆ ನಡೆಸಿದ್ದಾರೆ. ಇದೊಂದು ಗಂಭೀರ ಆರೋಪವಾಗಿ ಪರಿಗಣಿಸಿದ ಸಿಐಎಸ್ಎಪ್ ಅಧಿಕಾರಿಗಳು ತನಿಖಾ ಸಮಿತಿ ರಚಿಸಿ ತನಿಖೆ ನಡೆಸುತ್ತಿದ್ದಾರೆ.
2024 ರ ಲೋಕಸಭಾ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರವನ್ನು ಗೆಲ್ಲುವ ಮೂಲಕ ಕಂಗನಾ ಸಂಸದೆಯಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ ರನೌತ್ ಅವರು ಕಾಂಗ್ರೆಸ್ನ ವಿಕ್ರಮಾದಿತ್ಯ ಸಿಂಗ್ ವಿರುದ್ಧ ನಿರ್ಣಾಯಕ ಗೆಲುವು ಸಾಧಿಸಿದ್ದಾರೆ.
BELTHANGADY
ಹಿರಿಯ ಸಾಹಿತಿ, ವಿಶ್ರಾಂತ ಪ್ರಧ್ಯಾಪಕ ಪ್ರೊ. ಎನ್.ಜಿ ಪಟವರ್ಧನ್ ಅಸ್ತಂಗತ
ಬೆಳ್ತಂಗಡಿ; ತಾಲೂಕಿನ ಹಿರಿಯ ಸಾಹಿತಿ, ಉಜಿರೆ ಎಸ್ ಡಿ ಎಂ ಕಾಲೇಜಿನ ವಿಶ್ರಾಂತ ಕನ್ನಡ ಪ್ರಾಧ್ಯಾಪಕ ಪ್ರೊ. ಎನ್ ಜಿ ಪಟವರ್ಧನ್ ಅವರು ಅಲ್ಪ ಕಾಲದ ಅಸೌಖ್ಯದಿಂದಾಗಿ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಜು.1 ರಂದು ಕೊನೆಯುಸಿರೆಳೆದಿದ್ದಾರೆ.
ಮುಂಡಾಜೆ ಗ್ರಾಮದ ಮೂಲಾರು ಎಂಬಲ್ಲಿ ಮೂಲ ಮನೆ ಹೊಂದಿದ್ದ ಅವರು ಕಳೆದ ಅನೇಕ ವರ್ಷಗಳಿಂದ ಉಜಿರೆಯಲ್ಲಿ ನೆಲೆಸಿದ್ದರು.
ಚಿತ್ಪಾವನ ಸಮಾಜದ ಹಿರಿಯರೂ ಆಗಿದ್ದ ಅವರು ಹಲವು ಕಥೆ, ಕವನ, ವಿಮರ್ಷೆ ರಚನಾಕರ್ತರಾಗಿದ್ದರು. ಅವರ ಹಲವು ಕೃತಿಗಳು ಸಾಹಿತ್ಯ ಲೋಕಕ್ಕೆ ಸಮರ್ಪಿತ ವಾಗಿತ್ತು.
ಉತ್ತಮ ಶೋತೃ ಹಾಗೂ ಸಾಹಿತ್ಯ ವಿಷಯಾಸಕ್ತಿ ಹೊಂದಿದ್ದ ಅವರು ಹಲವಾರು ಯುವ ಬರಹಗಾರರ ಬರಹಗಳ ಬಗ್ಗೆ ವಿಮರ್ಷೆ ಬರೆದು ಆ ಮೂಲಕ ಅವರನ್ನು ಪ್ರೋತ್ಸಾಹಿಸುತ್ತಿದ್ದರು. ಬೆಳ್ತಂಗಡಿ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸಿದ್ದ ತಾಲೂಕು ಮಟ್ಟದ ಸಮ್ಮೇಳನದ ಅಧ್ಯಕ್ಷರೂ ಆಗಿದ್ದರು. ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ದೀರ್ಘ ವರ್ಷ ಅಂಕಣಗಳನ್ನೂ ಪ್ರಕಟಿಸುತ್ತಿದ್ದರು.
DAKSHINA KANNADA
ಮಂಗಳೂರು ಸಬ್ ಜೈಲಿನಲ್ಲಿ ಮಾರಾಮಾರಿ..! ಇಬ್ಬರು ಆಸ್ಪತ್ರೆಗೆ ದಾಖಲು
ಮಂಗಳೂರು ಸಬ್ ಜೈಲಿನಲ್ಲಿ ಖೈದಿಗಳ ನಡುವೆ ಮಾರಾಮಾರಿ ನಡೆದಿದ್ದು, ಇಬ್ಬರು ಗಾಯಗೊಂಡು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳೆದ 20 ದಿನಗಳಿಂದ ವಿಚಾರಣಾಧೀನ ಖೈದಿಗಳಾಗಿ ಜೈಲು ಸೇರಿದ್ದ ಉಳ್ಳಾಲದ ಮಹಮ್ಮದ್ ಸಮೀರ್ ಹಾಗೂ ಮಹಮ್ಮದ್ ಮನ್ಸೂರ್ ಮೇಲೆ ಟೋಪಿ ನೌಫಾಲ್ ಹಾಗೂ ಇತರ ಹತ್ತು ರೌಡಿಗಳಿಂದ ಈ ದಾಳಿ ನಡೆಸಲಾಗಿದೆ.
ಸಂಜೆ 6.45ರ ಸುಮಾರಿಗೆ ಈ ಘಟನೆ ನಡೆದಿದ್ದು,ಜೈಲಿನ ಅಡುಗೆ ರೂಮಿನಲ್ಲಿ ಹರಿತವಾದ ವಸ್ತುಗಳಿಂದ ದಾಳಿ ನಡೆಸಲಾಗಿದೆ. ಹಲ್ಲೆಗೊಳಗಾದ ಇಬ್ಬರಿಗೂ ತಲೆ,ಭುಜ ಸೇರಿದಂತೆ ದೇಹದ ಹಲವೆಡೆ ಗಾಯಗಳಾಗಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಹಲ್ಲೆ ನಡೆಸಿದವರು ಹಾಗೂ ಹಲ್ಲೆಗೆ ಒಳಗಾದವರು ನಟೋರಿಯಸ್ ಗಳಾಗಿದ್ದು ಹಲವಾರು ಪ್ರಕರಣಗಳ ಆರೋಪಿಗಳಾಗಿದ್ದಾರೆ.
ಘಟನೆಯ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಆರೋಪಿಗಳ ವಿರುದ್ದ ಜೈಲರ್ ನೀಡಿದ ದೂರಿನ ಅನ್ವಯ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
DAKSHINA KANNADA
ಮನೆಯೊಳಗೆ ಈ ಪ್ರಾಣಿ ಪಕ್ಷಿಗಳು ಬರಬಾರದಂತೆ, ಯಾವುದು? ಯಾಕೆ ಗೊತ್ತಾ?
ಕಷ್ಟಗಳು ಮನುಷ್ಯನಿಗೆ ಬರದೇ ಮರಕ್ಕೆ ಬರುತ್ತಾ ಎನ್ನುವ ಮಾತಿದೆ. ಹುಟ್ಟಿದ ಪ್ರತಿಯೊಬ್ಬ ಮನುಷ್ಯನು ಕಷ್ಟ ಸುಖ ಎರಡನ್ನು ಸಮಭಾಗವಾಗಿ ಸ್ವೀಕರಿಸಬೇಕು. ಆದರೆ ಜ್ಯೋತಿಷ್ಯದ ಪ್ರಕಾರ ಈ ಪ್ರಾಣಿ ಪಕ್ಷಿಗಳು ಮನೆಯೊಳಗೆ ಬಂದರೆ ಸಂಕಷ್ಟ ಕಟ್ಟಿಟ್ಟ ಬುತ್ತಿ. ಹೀಗಾಗಿ ಈ ಕೆಲವು ಪ್ರಾಣಿ ಹಾಗೂ ಪಕ್ಷಿಗಳು ಮನೆಯನ್ನು ಪ್ರವೇಶಿಸಬಾರದು ಎಂದು ಹೇಳುತ್ತಾರೆ. ಆದರೆ ಇದರಿಂದ ಏನೆಲ್ಲಾ ಸಮಸ್ಯೆಗಳು ಉಂಟಾಗುತ್ತದೆ ಎನ್ನುವುದು ಅನೇಕರಿಗೆ ತಿಳಿದಿಲ್ಲ.
ಏಡಿ : ಏಡಿಯು ಮನೆಯೊಳಗೆ ಪ್ರವೇಶಿಸಿದರೆ ಮನೆಗೆ ಮಾಟ ಮಾಡಿದ್ದಂತೆ ಎನ್ನಲಾಗುತ್ತದೆ. ಇದು ಪ್ರವೇಶಿಸಿದರೆ ಮನೆಯಲ್ಲಿ ಸಂಕಷ್ಟಗಳು ಎದುರಾಗಿ ಮನೆಯೇ ಸರ್ವನಾಶವಾಗುತ್ತದೆ ಎನ್ನಲಾಗುತ್ತದೆ.
ಕಪ್ಪು ಬೆಕ್ಕು : ಕೆಲವೊಮ್ಮೆ ಬೇರೆಯವರ ಮನೆಯ ಬೆಕ್ಕು ಮನೆಗೆ ಬಂದು ಉಳಿಯುತ್ತವೆ. ಆದರೆ ಕಪ್ಪು ಬೆಕ್ಕು ಮನೆಯನ್ನು ಪ್ರವೇಶಿಸುವುದು ಒಳ್ಳೆಯದಲ್ಲ. ಈ ಬೆಕ್ಕು ಅಪಶಕುನವಂತೆ, ಮನೆಗೆ ಬಂದರೆ ಕೆಟ್ಟದಾಗುತ್ತದೆ ಎನ್ನಲಾಗುತ್ತದೆ.
ಉಡ : ಅಪರೂಪವಾಗಿ ಕಾಣಸಿಗುವ ಉಡವನ್ನು ನೋಡುವುದೇ, ಅದರ ಬಗ್ಗೆ ಮಾತನಾದುವುದೇ ಕೆಟ್ಟದಂತೆ. ಈ ಪ್ರಾಣಿಯು ಅನಿಷ್ಟವಂತೆ, ಹೀಗಾಗಿ ಮನೆಗೆ ಬರುವುದು ಒಳ್ಳೆಯದಲ್ಲ. ಒಂದು ವೇಳೆ ಅಪ್ಪಿ ತಪ್ಪಿ ಮನೆಯನ್ನು ಪ್ರವೇಶಿಸಿದರೆ ಮನೆಗೆ ಮಾಟ ಮಾಡಿದ್ದಂತೆ. ಇದರಿಂದ ಮನೆಯೇ ನಾಶವಾಗುತ್ತದೆ ಎನ್ನಲಾಗುತ್ತದೆ.
ಕಾಗೆ : ಕಾಗೆಯು ಮನೆಗೆ ಬಂದರೆ ಶನಿಯು ಮನೆಗೆ ಪ್ರವೇಶಿಸುತ್ತಿದ್ದಾನೆ ಎನ್ನುವುದರ ಸೂಚಕ. ಕಾಗೆಯೂ ಮನೆಯೊಳಗೆ ಬಂದರೆ ಸಂಕಷ್ಟಗಳು ಎದುರಾಗುತ್ತದೆ. ಆರ್ಥಿಕ ಧನನಷ್ಟ ಹಾಗೂ ಆರೋಗ್ಯ ಸಮಸ್ಯೆಯು ಕಾಣಿಸಿಕೊಳ್ಳುತ್ತದೆ ಎನ್ನಲಾಗಿದೆ.
ಬಾವುಲಿ : ಬಾವಲಿಯು ಮನೆಗೆ ಪ್ರವೇಶಿಸುವುದರಿಂದ ಮನೆಯು ಹಾಳಾಗುತ್ತಿದೆ ಎಂದು ಸೂಚಿಸುತ್ತದೆ. ಇದರಿಂದ ನಕಾರಾತ್ಮಕ ಶಕ್ತಿಗಳು ಮನೆಯಲ್ಲಿ ಉಳಿಯುತ್ತವೆ. ಅಷ್ಟೇ ಅಲ್ಲದೇ, ಮನೆಯಲ್ಲಿ ವಾಸಿಸುವ ಜನರ ಜೀವನದಲ್ಲಿ ಸಮಸ್ಯೆಗಳು ಆರಂಭವಾಗುತ್ತದೆಯಂತೆ.
ಜೇನುಗೂಡು ಅಥವಾ ಜೇನುಹುಳ: ಮನೆಯೊಳಗೆ ಜೇನುಹುಳಗಳು ಒಂದೆರಡು ಬಂದರೆ ಪರವಾಗಿಲ್ಲ. ಆದರೆ ಜೇನುಹುಳಗಳು ಮನೆಯೊಳಗೆ ಗೂಡು ಕಟ್ಟುವುದು ಒಳ್ಳೆಯದಲ್ಲ. ಇದರಿಂದ ಆ ಮನೆಯಲ್ಲಿ ವಾಸಿಸುತ್ತಿರುವವರಿಗೆ ಸಂಕಷ್ಟ ಎದುರಾಗುತ್ತದೆ.
ಗೂಬೆ : ಗೂಬೆಯು ಅನಿಷ್ಟ ವಾಗಿದ್ದು ಇದರ ಆಗಮನವು ನಕಾರಾತ್ಮಕ ಶಕ್ತಿಯನ್ನು ಸೃಷ್ಟಿಸುತ್ತದೆ. ಮನೆಗೆ ಗೂಬೆ ಬಂದರೆ ಮನೆಯ ಪ್ರಗತಿಯು ಕುಂಠಿತವಾಗುತ್ತದೆ. ಮನೆಯಲ್ಲಿ ವಾಸಿಸುವ ಸದಸ್ಯರ ನಡುವೆ ವೈಮನಸ್ಸು ಉಂಟಾಗಿ ಮನೆಯೇ ನಾಶವಾಗುವ ಸಾಧ್ಯತೆ ಇರುತ್ತದೆ.
ರಣಹದ್ದುಗಳು : ರಣ ಹದ್ದುಗಳು ಮನೆಯೊಳಗೆ ಪ್ರವೇಶಿಸಿದರೆ ಯಜಮಾನನಿಗೆ ಸಮಸ್ಯೆಯಾಗುತ್ತದೆ. ಅದಲ್ಲದೇ, ಮನೆಯಲ್ಲಿ ಭಿನ್ನಾಭಿಪ್ರಾಯಗಳು ಮೂಡುತ್ತದೆ ಎನ್ನಲಾಗಿದೆ.
Pingback: ಗಾಂಜಾ ಮಾರಾಟಕ್ಕೆ ಯತ್ನ ಆರೋಪ; ಮಣಿಪಾಲದಲ್ಲಿ ಕೇರಳದ ವಿದ್ಯಾರ್ಥಿ ಬಂಧನ - NAMMAKUDLA NEWS - ನಮ್ಮಕುಡ್ಲ ನ್ಯೂಸ್
Pingback: ''ಇನ್ಮೇಲೆ ನನ್ನನ್ನು ಬುದ್ಧಿವಂತ ಅಂತ ಕರೆದ್ರೆ ಚೆನ್ನಾಗಿರಲ್ಲ'' ಅಂದಿದ್ಯಾಕೆ ಉಪೇಂದ್ರ..!? ಪವನ್ ಕಲ್ಯಾ