Connect with us

FILM

ನಟಿ ಕಂಗನಾ ರಣಾವತ್ ಗೆ ‘ವೈ ಪ್ಲಸ್’ ಭದ್ರತೆ ನೀಡಿದ ಕೇಂದ್ರ ಸರ್ಕಾರ..!

Published

on

ನಟಿ ಕಂಗನಾ ರಣಾವತ್ ಗೆ ‘ವೈ ಪ್ಲಸ್’ ಭದ್ರತೆ ನೀಡಿದ ಕೇಂದ್ರ ಸರ್ಕಾರ ..!

ಮುಂಬೈ : ಬಾಲಿವುಡ್ ನಟಿ ಕಂಗನಾ ರಣಾವತ್ ಮುಂಬೈ ಭೇಟಿಗೆ ಕೇಂದ್ರ ಸರ್ಕಾರ ‘ವೈ ಪ್ಲಸ್’ ಶ್ರೇಣಿಯ ಭದ್ರತೆ ನೀಡಿದೆ ಎಂದು ಗೃಹ ಸಚಿವಾಲಯದ ಮೂಲಗಳು ತಿಳಿಸಿವೆ.

ಹಿಮಾಚಲ ಪ್ರದೇಶ ರಾಜ್ಯ ಸರ್ಕಾರ ಕಂಗನಾಗೆ ಭದ್ರತೆ ನೀಡುವುದಾಗಿ ಹೇಳಿದ ಬೆನ್ನಲ್ಲೇ, ಕೇಂದ್ರ ಸರ್ಕಾರ ‘ವೈ ಪ್ಲಸ್’ ಶ್ರೇಣಿಯ ಭದ್ರತೆ ಒದಗಿಸಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಟಿ ಕಂಗನಾ ರಣಾವತ್ ಗೃಹ ಸಚಿವ ಅಮಿತ್ ಶಾಗೆ ಧನ್ಯವಾದ ತಿಳಿಸಿದ್ದಾರೆ.

“ಇದು ದೇಶ ಭಕ್ತರ ಧ್ವನಿಯನ್ನು ನಾಶಮಾಡಲು ಸಾಧ್ಯವಿಲ್ಲ ಎಂದು ಸಾಬೀತುಪಡಿಸಿದೆ.

ಅಮಿತ್ ಶಾ ಅವರಿಗೆ ನಾನು ಕೃತಜ್ಞನಾಗಿದ್ದೇನೆ. ಅವರು ಬಯಸಿದರೆ, ಕೆಲವು ದಿನಗಳ ಬಳಿಕ ಮುಂಬೈಗೆ ಹೋಗಬೇಕೆಂದು ಹೇಳಬಹುದಿತ್ತು.

ಆದರೆ ಅವರು ಭಾರತದ ಮಗಳನ್ನು ಗೌರವಿಸಿದರು. ಹೆಮ್ಮೆ ಮತ್ತು ಸ್ವಾಭಿಮಾನವನ್ನು ರಕ್ಷಿಸಿದರು. ಜೈ ಹಿಂದ್” ಟ್ವೀಟ್ ಮಾಡಿದ್ದಾರೆ.

ಬಾಲಿವುಡ್ ನಟಿ ಕಂಗನಾ ರಣಾವತ್ ಮುಂಬೈ ಭೇಟಿಗೆ ರಾಜ್ಯ ಸರ್ಕಾರ ಭದ್ರತೆ ನೀಡಲಿದೆ ಎಂದು ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಹೇಳಿದ್ದರು.

“ಕಂಗನಾ ಹಿಮಾಚಲ ಪ್ರದೇಶದ ಮಗಳು ಮತ್ತು ಸೆಲೆಬ್ರಿಟಿ ಕೂಡ ಹೌದು. ಅವರಿಗೆ ಭದ್ರತೆ ನೀಡುವುದು ನಮ್ಮ ಕರ್ತವ್ಯ. ಆ ಬಗ್ಗೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಪೊಲೀಸ್ ಮಹಾ ನಿರ್ದೇಶಕರಿಗೆ ತಿಳಿಸಿದ್ದೇನೆ” ಎಂದು ಹೇಳಿದ್ದರು. ಆದರೆ ಕೇಂದ್ರ ಸರ್ಕಾರ ಒಂದು ಹೆಜ್ಜೆ ಮುಂದೆ ಹೋಗಿ Y + ಕೆಟಗರಿಯ ಭದ್ರತೆ ನೀಡಿದ್ದಾರೆ.

ವೈ ಪ್ಲಸ್’ ಶ್ರೇಣಿ ಭದ್ರತೆ ಎಂದರೆ, ಕಂಗನಾ ರಣಾವತ್ ಅವರನ್ನು ವೈಯಕ್ತಿಕ ಭದ್ರತಾ ಅಧಿಕಾರಿ ಮತ್ತು ಕಮಾಂಡೋಗಳು ಸೇರಿದಂತೆ 11 ಸಶಸ್ತ್ರ ಪೊಲೀಸರು ರಕ್ಷಿಸಲಿದ್ದಾರೆ.

ನಟಿ ಕಂಗನಾ ರಣಾವತ್ ಮುಂಬೈ ಪೊಲೀಸರ ಭದ್ರತೆ ನಿರಾಕರಿಸಿ, ‘ಮುಂಬೈ ಪೊಲೀಸರು, ಮಾಫಿಯಾ ಗೂಂಡಾಗಳಿಗಿಂತಲೂ ಭಯ ಹುಟ್ಟಿಸುತ್ತಾರೆ’ ಎಂದು ಹೇಳಿದ್ದರು. ಇದರಿಂದ ಕೋಪಗೊಂಡ ಶಿವಸೇನಾ ಮುಖ್ಯಸ್ಥ ಸಂಜಯ್ ರಾವತ್ ‘ಮುಂಬೈ ಬರಬೇಡಿ’ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದರು.

ಜೀವ ಬೆದರಿಕೆ ಕರೆಗಳು ಬರುತ್ತಿವೆ ಎನ್ನುತ್ತಲೇ, ಸಂಜಯ್ ರಾವತ್ ಗೆ ತಿರುಗೇಟು ನೀಡಿದ್ದ ಕಂಗನಾ ‘ಮುಂಬೈ ನಗರ ಪಾಕ್ ಆಕ್ರಮಿತ ಪಾಕಿಸ್ತಾನದಂತೆ ಕಾಣುತ್ತಿದೆ’ ಎಂದು ಹೇಳಿ ವಿವಾದದ ಕಿಡಿ ಹೊತ್ತಿಸಿದ್ದರು.

ಆದರೂ ಕಂಗನಾ ‘ಮುಂಬೈಗೆ ಬಂದೆ ಬರ್ತೀನಿ, ಧೈರ್ಯ ಇದ್ದರೆ ತಡೀರಿ’ ಎಂದು ಸವಾಲ್ ಹಾಕಿ, ಮುಂಬೈಗೆ ಎಂಟ್ರಿ ಕೊಡುತ್ತಿದ್ದಾರೆ.

bangalore

ಈ ಬಾರಿ ಬಿಗ್ ಬಾಸ್ ಗೆಲ್ಲೋದು ನಾನೆ…ಎಂದು ಪಟ್ಟು ಹಿಡಿದ ಸ್ಪರ್ಧಿ ಯಾರು ಗೊತ್ತಾ..?

Published

on

Bigboss: ಬಿಗ್ ಬಾಸ್ ಮುಕ್ತಾಯಕ್ಕೆ ಇನ್ನು ಅರ್ಧ ಜರ್ನಿ ಬಾಕಿ ಇದೆ. ಆದರೆ ಇದೀಗ ಬಿಗ್ ಬಾಸ್ ಸ್ಪರ್ಧಿಗಳ ಫೈಟ್ ಜೋರಾಗಿದ್ದು, ಈ ಬಾರಿ ಬಿಗ್ ಬಾಸ್ ಗೆಲ್ಲೋದು ನಾವೇ ಎಂದು ಪಟ್ಟು ಹಿಡಿದ ಸ್ಫರ್ಧಿಗಳು ಗೆಲ್ಲುತ್ತಾರೋ ಅನ್ನೋದು ಕಾದು ನೋಡಬೇಕಿದೆ.

ಈ ವಾರ ದೊಡ್ಮನೆಯಲ್ಲಿ ವಿನಯ್ ಆರ್ಭಟ ಜೋರಾಗಿತ್ತು. ಜೊತೆಗೆ ಟೀಮ್ ನಲ್ಲಿ ಕಿತ್ತಾಟ ನಡೆದರೂ ವಿನಯ್ ಮಾತ್ರ ತಲೆಕೆಡಿಸದೆ ಈ ಬಾರಿ ಬಿಗ್ ಬಾಸ್ ಟೈಟಲ್ ನಾನೇ ಗೆಲ್ಲೋದು ಎಂದು ಹೇಳಿಕೊಂಡಿದ್ದಾರೆ.


ಈಗಾಗಲೇ ಬಿಗ್ ಬಾಸ್ ಜರ್ನಿ ಅರ್ಧ ಮುಗಿದಿದ್ದು, ಇನ್ನು ಅರ್ಧ ಬಾಕಿ ಇದೆ. ಹಾಗಾಗಿ ಇದರಲ್ಲಿ ಯಾರು ಗೆಲ್ಲೋತ್ತಾರೋ ಅನ್ನೊ ಪ್ರಶ್ನೆ ಮತ್ತೇ ಕಾಡಿದೆ. ವಾರದಿಂದ ವಾರಕ್ಕೆ ಎಲಿಮಿನೇಟ್ ಸ್ಪರ್ಧಿಗಳು ಎಲಿಮಿನೇಟ್ ಆಗುತ್ತಿದ್ದರೆ. ಇತ್ತ ವಿನಯ್ ಯಾರನ್ನೂ ಲೆಕ್ಕಿಸದೇ ತಾವೇ ಈ ಬಾರಿ ಫಿನಾಲೆ ಮೆಟ್ಟಿಲೇರಬೇಕು ಎಂದಾಗ ಸ್ನೇಹಿತ್ ಬೆಂಬಲ ವ್ಯಕ್ತ ಪಡಿಸಿದ್ದಾರೆ. ಹಾಗಗಿ ವಿನಯ್ ಗೆ ಮತ್ತಷ್ಟು ಧೈರ್ಯ ಬಂದಿದೆ. ಬಿಗ್ ಬಾಸ್ ಮನೆಯಲ್ಲಿ ನಮ್ರತಾ, ಸ್ನೇಹಿತ್ ಮತ್ತು ವಿನಯ್ ಅವರದ್ದು ಒಂದು ಗುಂಪು. ಈ ಮೂವರು ಒಬ್ಬರನ್ನೊಬ್ಬರು ಬಿಟ್ಟು ಕೊಡದೇ ಆಟವಾಡುತ್ತಾ ಬಂದಿದ್ದಾರೆ. ಆದರೆ ಕ್ಯಾಪ್ಟನ್ಸಿ ಟಾಸ್ಕ್ ನಲ್ಲಿ ವಿನಯ್ ವಿರುದ್ಧ ನಮ್ರತಾ ಮತ ಚಲಾಯಿಸಿದ್ದಾರೆ. ಹಾಗಾಗಿ ನಮ್ರತಾ ಇವರ ಗುಂಪಿನಿಂದ ಹೊರ ನಡೆದಿದ್ದಾರೆ.


ಆ ಬಳಿಕ ವಿನಯ್ ಹಾಗೂ ಸ್ನೇಹಿತ್ ಬಿಗ್ ಬಾಸ್ ಗೆಲುವಿನ ಬಗ್ಗೆ ಮಾತನಾಡಿಕೊಂಡಿದ್ದಾರೆ. ಈ ಬಾರಿ ಫಿನಾಲೆ ವೇದಿಕೆಯ ಮೇಲೆ ನಾವೇ ಇರಬೇಕು ಅಂತಾರೆ ಸ್ನೇಹಿತ್. ನಾವೇ ಇರಬೇಕು. ಆದರೆ, ನಾನೇ ವಿನ್ ಆಗಬೇಕು ಎಂದು ವಿನಯ್ ನುಡಿಯುತ್ತಾರೆ. ಅದಕ್ಕೆ ಸ್ನೇಹಿತ್ ಖುಷಿಯಿಂದಲೇ, ನಿಜಕ್ಕೂ ಇದಕ್ಕಿಂತ ಸಂತೋಷ ಏನಿದೆ ಎನ್ನುತ್ತಾರೆ.

ಈ ಮಾತು ಕೇಳಿಸಿಕೊಂಡ ಬಿಗ್ ಬಾಸ್ ನೋಡುಗರು, ನಮ್ರತಾಗಿಂತಾನೂ ಸ್ನೇಹಿತ್ ಸಖತ್ ಚಮಚಾ ಎಂದು ಕಾಮೆಂಟ್ ಮಾಡಿದ್ದಾರೆ. ಇದೀಗ ವಿನಯ್ ನ ಕನಸು ಈಡೇರುತ್ತಾ..? ಅವರೇ ಬಿಗ ಬಾಸ್ ವಿನ್ನರ್ ಆಗುತ್ತಾರ ಎಂದು ಕಾದು ನೋಡಬೇಕಿದೆ.

Continue Reading

FILM

ರಶ್ಮಿಕಾ ಮಂದಣ್ಣ ಪರಭಾಷೆ ನಟರಿಗೆ ಲಕ್ಕಿ ಚಾರ್ಮ್

Published

on

Rashmika mandanna : ಕನ್ನಡ ಬೆಡಗಿ ರಶ್ಮಿಕಾ ಮಂದಣ್ಣ ಅಂದ್ರೆ ಕೆಲವರಿಗೆ ಇಷ್ಟ, ಇನ್ನೂ ಕೆಲವರಿಗೆ ಅಷ್ಟಕಷ್ಟೆ.ಆದ್ರೆ ಬೇರೆ ಭಾಷೆಯ ನಟರಿಗೆ ರಶ್ಮಿಕಾ ಅಂದ್ರೆ ತುಂಬಾನೆ ಇಷ್ಟ ಅಂತೆ.
ಎಲ್ಲಾ ಇಂಡಸ್ಟ್ರಿಗಳಲ್ಲಿಯೂ ರಶ್ಮಿಕಾ ಸದ್ಯ ಬೇಡಿಕೆಯ ನಟಿ.ಸೌತ್ ಟು ನಾರ್ತ್ ರಶ್ಮಿಕಾ ಅವರಿಗೆ ಸಿನಿಮಾರಂಗದಲ್ಲಿ ಭಾರೀ ಬೇಡಿಕೆ ಇದೆ.


ರಶ್ಮಿಕಾ ಅವರ ಮೊದಲ ಸಿನಿಮಾ ಕಿರಿಕ್ ಪಾರ್ಟಿ ಬ್ಲಾಕ್​ ಬಸ್ಟರ್ ಹಿಟ್. ಕನ್ನಡದಲ್ಲಿ ಆ ಬಳಿಕ ಮಾಡಿದ ಚಮಕ್, ಅಂಜನಿಪುತ್ರ, ಪೊಗರು ಸಿನೆಮಾ ಬ್ಲಾಕ್ ಬಸ್ಟರ್ ಚಿತ್ರಗಳು ಎನಿಸಿಕೊಂಡಿವೆ.
ತಮಿಳು, ತೆಲುಗು ಬಾಷೆಯಲ್ಲಿ ಸತತ ಫ್ಲಾಪ್ ಕೊಡುತ್ತಿದ್ದ ಸ್ಟಾರ್ ಹೀರೋಗಳ ಜೊತೆ ಒಂದೊಂದು ಸಿನಿಮಾ ಮಾಡಿ ಅವರಿಗೆ ಬಿಗ್ ಸಕ್ಸಸ್ ಕೊಟ್ಟಿದ್ದಾರೆ.

ವಿಜಯ್, ಅಲ್ಲು ಅರ್ಜುನ್, ರಣಬೀರ್ ಕಪೂರ್​ನಂತ ಸ್ಟಾರ್ ಹೀರೋಗಳು ಸತತವಾಗಿ ಎವರೇಜ್ ಮಟ್ಟದಲ್ಲಿ ಸಿನಿಮಾ ಮಾಡುತ್ತಿದ್ದರು.ಆದ್ರೆ ರಶ್ಮಿಕಾ ಅವರ ಜೊತೆ ನಟಿಸಿ ಅವರಿಗೆ ಗೆಲುವು ತಂದುಕೊಟ್ಟಿದ್ದಾರೆ.

Continue Reading

bangalore

ಇವ್ರು ಯಾರಂತ ಗೊತ್ತಾಯ್ತ ಫ್ರೆಂಡ್ಸ್? ನ್ಯೂ ಕಪಲ್ಸ್ ಫಾರಿನ್ ಟ್ರಿಪ್ ಅಂತೆ..!

Published

on

Film: ತೆಲುಗು ನಟ ನರೇಶ್ ಈಗಾಗಲೇ ಮೂರನೇ ಪತ್ನಿ ರಮ್ಯಾ ರಘುಪತಿಯವರಿಂದ ಡಿವೋರ್ಸ್ ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಆದ್ರೆ ರಮ್ಯಾ ಡಿವೋರ್ಸ್ ನೀಡಲು ಒಪ್ಪುತ್ತಿಲ್ಲ. ಹೀಗಿರುವಾಗಲೇ ಪವಿತ್ರಾ ಲೋಕೇಶ್ ಜೊತೆ ನರೇಶ್ ಸಹಜೀವನ ನಡೆಸುತ್ತಿದ್ದಾರೆ.


ಬಹುದಿನಗಳ ನಂತರ ನರೇಶ್ ಚಿತ್ರರಂಗದಲ್ಲಿ 50 ವರ್ಷ ಪೂರೈಸಿರುವ ಹಿನ್ನೆಲೆ ಸೋಶಿಯಲ್ ಮೀಡಿಯಾದಲ್ಲಿ ಎಮೋಷನಲ್ ಪೋಸ್ಟ್ ಮಾಡಿದ್ದಾರೆ. “ನಾನು ನನ್ನ ಜೀವನದಲ್ಲಿ ಸಂಕಷ್ಟದಲ್ಲಿದ್ದಾಗ, ಈ ಒಂದು ಹಾಡು ನನಗೆ ಸ್ಫೂರ್ತಿ ನೀಡಿತು. ಆ ಸಮಯದಲ್ಲಿ ನಾನು ನನ್ನ ಕರಿಯರ್ ಕಳೆದುಕೊಂಡೆ. ನಾನು ಆರ್ಥಿಕ ಸಮಸ್ಯೆ ಎದುರಿಸಿದೆ. ನನ್ನ ಆತ್ಮೀಯರು ನನ್ನನ್ನು ಅಗಲಿದ್ದರು. ಕ್ಷುಲ್ಲಕ ಪ್ರಕರಣದಲ್ಲಿ ಸಂಬಂಧಿಕರಿಂದ ಕಿರಿಕಿರಿ, ಜೋಕರ್‌ನಿಂದ ತೊಂದರೆ ಎದುರಾದರೂ ನನ್ನ ಬೆಂಬಲಕ್ಕೆ ನಿಂತಿದ್ದು ನನ್ನ ತಾಯಿ ಮತ್ತು ಸ್ನೇಹಿತ ವಿಜಯ್ ವಾಧ್ವಾ ಮಾತ್ರ.ಈಗ ಈ ರೀತಿ ಬದಲಾಗಿದ್ದೇನೆ. ಈ ಹಾಡು ನನಗೆ ಸ್ಫೂರ್ತಿ ನೀಡಿದ್ದು ಮಾತ್ರವಲ್ಲ. ಮತ್ತೆ ಬಲವಾಗಿ ಎದ್ದು ನಿಲ್ಲುವಂತೆ ಮಾಡಿದೆ. ಈಗಲೂ ಪ್ರೇರೇಪಿಸುತ್ತದೆ. ಈಗ ನಾನು ನನ್ನ ವೃತ್ತಿಜೀವನದ 50ನೇ ವರ್ಷದಲ್ಲಿದ್ದೇನೆ. ಈ ಮಹತ್ತರವಾದ ಮೈಲಿಗಲ್ಲನ್ನು ಸಾಧಿಸಲು ನನಗೆ ತುಂಬಾ ಸಹಾಯ ಮಾಡಿದ ಎಲ್ಲರಿಗೂ ನನ್ನ ಪ್ರಾಮಾಣಿಕ ಕೃತಜ್ಞತೆಯನ್ನು ವ್ಯಕ್ತಪಡಿಸಲು ನಾನು ಬಯಸುತ್ತೇನೆ” ಎಂದು ನರೇಶ್ ಇನ್‌ಸ್ಟಾಗ್ರಾಂ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

Continue Reading

LATEST NEWS

Trending