Connect with us

FILM

ಹಿರಿಯ ನಟ ರಾಜೇಶ್ ಆರೋಗ್ಯ ಸ್ಥಿತಿ ಗಂಭೀರ: ವೆಂಟಿಲೇಟರ್‌ನಲ್ಲಿ ಚಿಕಿತ್ಸೆ

Published

on

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ ​ಕಿಡ್ನಿ ವೈಫಲ್ಯ ಮತ್ತು ವಯೋಸಹಜ ಕಾಯಿಲೆಗಳಿಂದ ರಾಜೇಶ್ (82)​ ಅವರು ಬಳಲುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.


ಸದ್ಯ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ವೆಂಟಿಲೇಟರ್​ ಮೂಲಕ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ. ಭಾರತೀಯ ಚಿತ್ರರಂಗದ ಖ್ಯಾತ ನಟ ಅರ್ಜುನ್‌ ಸರ್ಜಾ ಇವರ ಅಳಿಯ.

ಹಲವು ದಶಕಗಳಿಂದ ಚಿತ್ರರಂಗದಲ್ಲಿ ಅನುಭವ ಹೊಂದಿರುವ ಅವರು ಇತ್ತೀಚಿನ ವರ್ಷಗಳಲ್ಲಿ ನಟನೆಯಿಂದ ದೂರ ಉಳಿದುಕೊಂಡಿದ್ದಾರೆ.

FILM

ಕುಟುಂಬ ಸಹಿತರಾಗಿ ಬಂದು ಮತದಾನ ಮಾಡಿದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ

Published

on

ಉಡುಪಿ: ಇಂದು ಬೆಳಂಬೆಳಗ್ಗೆ ರಾಜಕೀಯ ನಾಯಕರು,  ಜನಸಾಮಾನ್ಯರು ಮತಗಟ್ಟೆಗೆ ಬಂದು ಮತ ಚಲಾಯಿಸಿದರೆ ಉಡುಪಿಯ ಮತಗಟ್ಟೆಯಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಮತದಾನ ಮಾಡಿದ್ದಾರೆ.

ಕುಕ್ಕಿಕಟ್ಟೆ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸಂಖ್ಯೆ 197 ಕ್ಕೆ ಆಗಮಿಸಿ ಮತ ಚಲಾಯಿಸಿದರು. ರಕ್ಷಿತ್ ಶೆಟ್ಟಿ ಮನೆಯ ಮುಂಭಾಗದಲ್ಲೇ ಇರುವ ಮತಗಟ್ಟೆಗೆ ಕುಟುಂಬ ಸಹಿತರಾಗಿ ಬಂದು ಮತದಾನ ಮಾಡಿದರು. ರಕ್ಷಿತ್ ಶೆಟ್ಟಿ ಈ ಸಂದರ್ಭದಲ್ಲಿ ಸೆಲೆಬ್ರೆಟಿಯನ್ನು ಕಂಡ ಇತರ ಮತದಾರರು ಹರ್ಷಚಿತ್ತರಾಗಿ ಸೆಲ್ಫೆ ಕ್ಲಿಕಿಸಲು ಮುಂದಾದ ಘಟನೆ ನಡೆಯಿತು.

Continue Reading

FILM

ಹೊಸ ಅವತಾರದಲ್ಲಿ ZEE ಕನ್ನಡ ‘ಕಾಮಿಡಿ ಕಿಲಾಡಿಗಳು’… ಸ್ಟಾರ್ ನಿರೂಪಕರು ಈಗ ಜಡ್ಜಸ್? ಏನಿದು ಟ್ವಿಸ್ಟ್?

Published

on

ಬೆಂಗಳೂರು: ಜೀ ಕನ್ನಡ ವಾಹಿನಿ ವಿಭಿನ್ನ ರೀತಿಯ ಕಥೆಗಳನ್ನೊಳಗೊಂಡ ಧಾರವಾಹಿಗಳ ಜೊತೆಗೆ ರಿಯಾಲಿಟಿ ಶೋಗಳೂ ಜನರ ಮನಸ್ಸು ಗೆದ್ದಿದೆ. ಜೀ ಕನ್ನಡ ವಾಹಿನಿಯ ಅಚ್ಚು ಮೆಚ್ಚಿನ ರಿಯಾಲಿಟಿ ಶೋ ಗಳಲ್ಲಿ ಜನರನ್ನು ನಕ್ಕು ನಗಿಸುವ ರಿಯಾಲಿಟಿ ಶೋ ಅಂದ್ರೆ ಅದು ಕಾಮಿಡಿ ಕಿಲಾಡಿಗಳು… ಹೌದು, ನಗುವಿನ ಅಲೆಯಲ್ಲಿ ತೇಲಿಸಿ ಮನೆಯವರೆಲ್ಲರೂ ಒಟ್ಟಾಗಿ ಕೂತು ನೋಡುವಂತಹ ಶೋ ‘ಕಾಮಿಡಿ ಕಿಲಾಡಿಗಳು’.

zee

ಮಾಸ್ಟರ್ ಆನಂದ್ ನಿರೂಪಣೆಯಲ್ಲಿ ಮೂಡಿ ಬರುತ್ತಿದ್ದ ಕಾರ್ಯಕ್ರಮವನ್ನು  ‘ಸೈಡ್‌ಗಿಡ್ರಿ ನಿಮ್‌ ಟೆನ್ಷನ್‌ಗಳು, ಮತ್ತೆ ಬಂದಿದ್ದಾರೆ ಕಾಮಿಡಿ ಕಿಲಾಡಿಗಳು’ ಎಂದು ಶೋ ಆರಂಭ ಮಾಡ್ತಾ ಇದ್ದು ಕರ್ನಾಟಕವನ್ನೇ ನಗುವಿನ ಕಡಲಲ್ಲಿ ತೇಲಿಸುವುದಿತ್ತು. ಇದೀಗ ಸೀಸನ್‌ 5 ಪ್ರೇಕ್ಷಕರ ಮುಂದೆ ಬರುತ್ತಿದೆ. ಈಗ ಜೀ ವಾಹಿನಿ ʻಕಾಮಿಡಿ ಕಿಲಾಡಿಗಳು ಪ್ರೀಮಿಯರ್‌ ಲೀಗ್‌ʼಮೂಲಕ ನಿಮ್ಮನ್ನು ಮನರಂಜಿಸಲು ಸಿದ್ಧವಾಗಿದೆ.

ಮುಂದೆ ಓದಿ..; “ನಿತ್ಯಾಮೆನನ್” ಚಿತ್ರರಂಗದಿಂದ ‘ಬ್ಯಾನ್’ ಆಗಲು ಕಾರಣವೇನು ಗೊತ್ತಾ? ಈ ಬಗ್ಗೆ ನಿತ್ಯಾ ಹೇಳಿದ್ದೇನು?

ಪ್ರೀಮಿಯರ್ ಲೀಗ್‌ನಲ್ಲಿ ಇರಲಿದ್ದಾರೆ 5 ಜಡ್ಜಸ್..!

ಈ ಕಾಮಿಡಿ ಪ್ರೀಮಿಯರ್‌ ಲೀಗ್‌ನಲ್ಲಿ ಈ ಬಾರಿ ಐವರು ನಿರೂಪಕರು ಇರಲಿದ್ದಾರೆ. ಸ್ಟೇಜ್‌ನಲ್ಲಿ ಕಂಟೆಂಸ್ಟೆಂಟ್‌ಗಳ ಕುರಿತು ಜಡ್ಜಸ್‌ ಗಳಲ್ಲಿ ಕಮೆಂಟ್ಸ್ ಕೆಳ್ತಾ ಇದ್ದ ನಿರೂಪಕರು ಈಗ ತಾವೇ ಜಡ್ಜ್‌ಮೆಂಟ್ ನೀಡಲು ಹೊರಟಿದ್ದಾರೆ. ಹೌದು, ನಿರೂಪಕರುಗಳಾದ ಅನುಶ್ರೀ, ಮಾಸ್ಟರ್‌ ಆನಂದ್‌, ಅಕುಲ್‌ ಬಾಲಾಜಿ, ಶ್ವೇತಾ ಚಂಗಪ್ಪ ಹಾಗೂ ಕುರಿ ಪ್ರತಾಪ್‌ ಅವರು ಈ ಕಾರ್ಯಕ್ರಮದಲ್ಲಿ ಹೊಸ ಜವಾಬ್ದಾರಿಯನ್ನು ನಿಭಾಯಿಸಲಿದ್ದಾರಂತೆ.

5 ತಂಡಗಳು.. 1 ಟ್ರೋಫಿಗಾಗಿ ಗುದ್ದಾಟ..!

zee

ಮೂಲಗಳ ಪ್ರಕಾರ ಈ ಬಾರಿಯ ಶೋನಲ್ಲಿ ಟಿ-20 ರೀತಿಯಲ್ಲಿ ಹೇಗೆ ತಂಡಗಳು, ಮಾಲೀಕರು , ಕ್ಯಾಪ್ಟನ್‌ಗಳು ಇರುತ್ತಾರೋ ಅದೇ ರೀತಿ ಇಲ್ಲಿಯೂ ಇರಲಿದೆ. ಕರ್ನಾಟಕದ 31 ಜಿಲ್ಲೆಗಳಿಂದ ಆಯ್ಕೆ ಮಾಡಿ ತಂದ ಕಲಾವಿದರನ್ನು ಮೆಗಾ ಆಕ್ಷನ್‌ ಮೂಲಕ ತಮ್ಮ ತಂಡಗಳಿಗೆ ಸೇರಿಸಿಕೊಳ್ಳಲಾಗುವುದು. 5 ತಂಡಗಳು 1 ಟ್ರೋಫಿಗಾಗಿ ಗುದ್ದಾಟ ನಡೆಸಲಿದೆ. ಈ ಶೋ ವಾರಾಂತ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ತಂಡಕ್ಕೆ ಬರೋಬ್ಬರಿ 1 ಲಕ್ಷ ಬಹುಮಾನ ಪಡೆಯುವ ಅವಕಾಶವಿದೆ. ಈ ʻಕಾಮಿಡಿ ಕಿಲಾಡಿಗಳು ಪ್ರೀಮಿಯರ್‌ ಲೀಗ್‌ʼಗೆ ಐವರು ನಿರೂಪಕರು ಹೊಸ ಜವಬ್ದಾರಿ ಹೊತ್ತಿದ್ದಾರೆ. ಹೀಗಾಗಿ ಹೊಸ ನಿರೂಪಕರನ್ನು ಈ ಶೋ ಮೂಲಕ ಕರೆ ತರಲಾಗುತ್ತಿದೆ ಎಂದು ವರದಿಯಾಗಿದೆ. ಆ ನಿರೂಪಕರು ಯಾರು ಎಂಬ ಕುತೂಹಲ ಎಲ್ಲರಲ್ಲೂ ಮೂಡಿತ್ತು ಇದಕ್ಕೆ ಇದೇ ಶನಿವಾರ ಹಾಗೂ ಭಾನುವಾರು ರಾತ್ರಿ 9ಗಂಟೆಗೆ ತೆರೆ ಬೀಳಲಿದೆ.

Continue Reading

FILM

“ನಿತ್ಯಾಮೆನನ್” ಚಿತ್ರರಂಗದಿಂದ ‘ಬ್ಯಾನ್’ ಆಗಲು ಕಾರಣವೇನು ಗೊತ್ತಾ? ಈ ಬಗ್ಗೆ ನಿತ್ಯಾ ಹೇಳಿದ್ದೇನು?

Published

on

ನಿತ್ಯಾಮೆನನ್.. ದಕ್ಷಿಣ ಚಿತ್ರರಂಗದಲ್ಲಿ ತನ್ನ ಅಮೋಘ ಅಭಿನಯದ ಮೂಲಕ ಚಿತ್ರರಂಗದಲ್ಲಿ ಕೀರ್ತಿಯ ಪತಾಕೆಯನ್ನ ಹಾರಿಸಿರುವ  ನಟಿ. ತನ್ನ ಮೋಹಕ ನೋಟ, ಹಾಗೆನೆ ನೋಡೋಕೆ ತುಂಬಾನೆ ಸಿಂಪಲ್ ಆಗಿರೋ ಇವರು ಒಂದಲ್ಲ ಒಂದು ಕಾಂಟ್ರವರ್ಸಿಗಳಿಗೆ ಒಳಗಾಗಿದ್ದರು.

nithya menon

ಕನ್ನಡದ ಸೆವೆನ್ ಓ ಕ್ಲಾಕ್ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟವರು. ಆ ನಂತರ ಕನ್ನಡ ಸೇರಿದಂತೆ ಮಲಯಾಳಂ, ತೆಲುಗು, ತಮಿಳು ಭಾಷೆಗಳಲ್ಲಿ ನಟಿಸಿದ್ದ ನಿತ್ಯಾ, ಮಿಷನ್ ಮಂಗಲ್ ಚಿತ್ರದ ಮೂಲಕ ಹಿಂದಿಗೂ ಪದಾರ್ಪಣೆ ಮಾಡಿದ್ದರು.

ತುಂಬಾನೇ ಬೋಲ್ಡ್ ಹುಡುಗಿ ..

ತಮ್ಮ ನೇರ ದಿಟ್ಟ ನಡವಳಿಕೆಗೆ ನಿತ್ಯಾ ಮೆನನ್ ನಂಬರ್ ವನ್ ಪ್ಲೇಸ್ ಅಂದ್ರೆ ತಪ್ಪಾಗಲ್ಲ. ಯಾಕಂದ್ರೆ ಅದೆಷ್ಟೋ ಬಾರಿ ತಮ್ಮ ನೇರ ನಡವಳಿಕೆಯಿಂದ ಹಲವರ ಕೆಂಗಣ್ಣಿಗೆ ಗುರಿಯಾಗುತ್ತಿದ್ರು ನಿತ್ಯಾ. ಇದಕ್ಕೆ ಸಾಕ್ಷಿ ಅನ್ನುವಂತೆ ನಿತ್ಯಾ ಮೆನನ್ ಅವರನ್ನ ಹಿಂದೊಮ್ಮೆ ಮಲಯಾಳಂ ಚಿತ್ರರಂಗ ಒಂದಲ್ಲ…ಎರಡು ಬಾರಿ ಬ್ಯಾನ್ ಮಾಡಲು ಮುಂದಾಗಿತ್ತು.

ಚಿತ್ರರಂಗದಿಂದ ಬ್ಯಾನ್‌ ಆಗಲು ಕಾರಣವೇನು..?

ಹೌದು.. 2012ರಲ್ಲಿ ನಿತ್ಯಾ ವಿರುದ್ದ ಮಲಯಾಳಂ ಚಿತ್ರರಂಗದ ಅನೇಕ ನಿರ್ಮಾಪಕರು ಮುನಿಸಿಕೊಂಡಿದ್ದರು. ಯಾಕೆಂದರೆ ಖ್ಯಾತ ಮಲಯಾಳಂನ ನಿರ್ಮಾಪಕರೊಬ್ಬರು ಆಗ ನಿತ್ಯಾ ಅವರ ಕಾಲ್ ಶೀಟ್ ಕೇಳಿಕೊಂಡು ಅವರ ಮನೆಗೆ ಹೋಗಿದ್ದರು. ಆದರೆ ನಿತ್ಯಾ ಮಾತ್ರ ನಿರ್ಮಾಪಕರ ಮುಖ ನೋಡಲು ಕೂಡ ಮನೆಯಾಚೆ ಬರಲಿಲ್ಲ. ಬದಲಿಗೆ ಮನೆಯಲ್ಲಿಯೇ ಇದ್ದರೂ ಕೂಡ ಮ್ಯಾನೇಜರ್ ನ ಕಳಿಸಿದ್ದರು. ಕೇವಲ ಇವರೊಬ್ಬರಷ್ಟೇ ಅಲ್ಲ ಅನೇಕ ನಿರ್ಮಾಪಕರನ್ನ ನಿತ್ಯಾ ಇದೇ ರೀತಿ ನಡೆಸಿಕೊಂಡಿದ್ದಾರೆ ಎಂಬ ಮಾತು ಆಗ ಕೇಳಿ ಬಂದಿತ್ತು. ಈ ಕಾರಣಕ್ಕೆ ನಿತ್ಯಾ ಅವರ ಮೇಲೆ ನಿಷೇಧ ಹೇರುವ ಚಿಂತನೆ ನಡೆದಿತ್ತು. ಆದರೆ ಈ ಎಲ್ಲ ಬೆಳವಣಿಗೆಯ ನಂತರವೂ 2012ರಲ್ಲಿ ಅರ್ಧ ಡಜನ್ ಮಲಯಾಳಂ ಸಿನಿಮಾಗಳಲ್ಲಿ ನಿತ್ಯಾ ಕಾಣಿಸಿಕೊಂಡರು. ಅದರಲ್ಲಿ ಆ ಕಾಲಕ್ಕೆ ಎಲ್ಲರ ಗಮನ ಸೆಳದು ಸಿಕ್ಕಾಪಟ್ಟೆ ಪ್ರಶಂಸೆಯನ್ನ ಪಡೆದಿದ್ದ ಉಸ್ತಾದ್ ಹೊಟೇಲ್ ಕೂಡ ಒಂದು.

ತಮ್ಮ ನೇರನುಡಿಯ ಮಾತೇ ತನಗೆ ಮುಳುವಾಯಿತಾ…?

ಇನ್ನೂ 2019ರಲ್ಲಿಯೂ ಕೂಡ ಇಂಥಹದ್ದೇ ಬೆಳವಣಿಗೆ ನಡೆದಿತ್ತು. 2019ರಲ್ಲಿ ಮಲಯಾಳಂ ಸಿನಿಮಾದಲ್ಲಿ ನಟಿಸುವ ಸಂದರ್ಭದಲ್ಲಿ ನಿತ್ಯಾ ಮೆನನ್ ರವರ ತಾಯಿಗೆ ಕ್ಯಾನ್ಸರ್ ಇರುವುದಾಗಿ ಸುದ್ದಿ ಬಂದಿತ್ತು. ಅದು ಮೂರನೇ ಹಂತದಲ್ಲಿಯೂ ಇತ್ತು. ಇನ್ನು ನಿತ್ಯಾರವರು ಬಹುಕಾಲದ ಮೈಗ್ರೇನ್ ಸಮಸ್ಯೆಯಿಂದ ಬಳಲುತ್ತಿದ್ದರು. ಇದರಿಂದ ವಿಶ್ರಾಂತಿ ಪಡೆಯಲು ನಿರ್ಧರಿಸಿದ್ದ ನಿತ್ಯಾ ಮನೆಯಲ್ಲಿಯೇ ಉಳಿದರು. ತಾಯಿ ಕ್ಯಾನ್ಸರ್ ನಿಂದ ಬಳಲುತ್ತಿದ್ದರೆ ನಿತ್ಯಾ ಅರೆತಲೆನೋವಿನ ಸಮಸ್ಯೆಯಿಂದ ಬಳಲುತ್ತಿದ್ದರು.

ಮುಂದೆ ನೋಡಿ..; ಶೋಬಿತಾ ಜೊತೆ ಕಾಡಿನಲ್ಲಿ ಕಾಣಿಸಿಕೊಂಡ್ರ ನಾಗಚೈತನ್ಯ..! ಫ್ಯಾನ್ಸ್ ಏನಂದ್ರು..?

ಆಗ ಮಲೆಯಾಳಂ ನಿರ್ಮಾಪಕರು ನಿತ್ಯಾ ಮೆನನ್ ಅನುಮತಿಯಿಲ್ಲದೇ ದಿಢೀರನೇ ಮನೆಗೆ ಧಾವಿಸಿ ಅಪ್ ಕಮಿಂಗ್ ಸಿನಿಮಾದಲ್ಲಿ ಮಾತನಾಡುವುದಕ್ಕೆ ಮುಂದಾಗಿದ್ದರು. ಆಗ ನಿತ್ಯಾ ಈಗ ಸದ್ಯಕ್ಕೆ ನನ್ನ ಆರೋಗ್ಯ ಸರಿ ಇಲ್ಲ. ನನ್ನ ಆರೋಗ್ಯ ಸುಧಾರಿಸಿದ ಮೇಲೆ ಮಾತನಾಡೋಣ ಎಂದಿದ್ದರು. ಇಷ್ಟಕ್ಕೇ ಸಿಟ್ಟಾದ ನಿರ್ಮಾಪಕರು ಕೂಡಲೇ ಮಲಯಾಳಂನ ಹಿರಿಯ ನಿರ್ಮಾಪಕ ಜಿ.ಸುರೇಶ್ ಕುಮಾರ್ ನೇತೃತ್ವದಲ್ಲಿ ಸಭೆ ಕರೆದರು. ನಿತ್ಯಾ ಮೆನನ್ ಗೆ ಅಹಂಕಾರ ಜಾಸ್ತಿ ಈ ಕ್ಷಣದಿಂದನೇ ಅವರನ್ನ ಬ್ಯಾನ್ ಮಾಡಬೇಕೆಂದು ಆಗ್ರಹಿಸಿದರು. ಇನ್ನೂ ಇದೇ ವಿಚಾರಕ್ಕೆ ಅವತ್ತು ಪ್ರತಿಕ್ರಿಯೆ ನೀಡಿದ್ದ ನಿತ್ಯಾ ಮೆನನ್, ನನಗೆ ಅಹಂಕಾರವಿಲ್ಲ. ಅಂತಹ ಅಹಂಕಾರವಿರುವ ನಿರ್ಮಾಪಕರ ಜತೆಗೆ ನಾನು ಮಾತನಾಡಲು ಇಚ್ಛಿಸುವುದಿಲ್ಲ ಎಂದು ಖಡಕ್‌ ಆಗಿ ಹೇಳಿದ್ರು.

ಆದ್ರೆ ಮಳಯಾಲಂ ಚಿತ್ರದಲ್ಲಿ ಮುಂಚೂಣಿ ನಾಯಕಿಯರ ಪಟ್ಟಿಯಲ್ಲಿದ್ದ ಈಕೆ 2019 ರಿಂದ ಇಲ್ಲಿಯವರೆಗೆ ಅವರು ನಟಿಸಿರುವುದು ಕೇವಲ ಬೆರಳೆಣಿಕೆಯ ಸಿನೆಮಾ. ಹೌದು ಇವರ ನೇರ ನುಡಿ ಖಡಕ್ ಮಾತು ಇವರ ವೃತ್ತಿ ಜೀವನಕ್ಕೆ ಪೆಟ್ಟು ಬಿದ್ದಿದೆ ಅಂದ್ರೆ ತಪ್ಪಾಗಲ್ಲ.

Continue Reading

LATEST NEWS

Trending