Connect with us

    FILM

    ಕನ್ನಡತಿ ರಂಜನಿ ರಾಘವನ್‌ಗೆ ‘ಯುವ ಸಾಹಿತ್ಯ ರತ್ನ’ ಪ್ರಶಸ್ತಿಯ ಗರಿ..!! ಈ ಬಗ್ಗೆ ರಂಜನಿ ಹೇಳಿದ್ದೇನು?

    Published

    on

    ಬೆಂಗಳೂರು: ಪುಟ್ಟಗೌರಿ ಧಾರಾವಾಹಿ ಮೂಲಕ ಮನೆಮಾತಾಗಿದ್ದ ರಂಜನಿ ರಾಘವನ್ ಕನ್ನಡತಿ ಸೀರಿಯಲ್ ಮೂಲಕ ಅತೀ ಹೆಚ್ಚು ಮೆಚ್ಚುಗೆಯನ್ನು ಪಡೆದಿದ್ದಾರೆ. ಈ ಧಾರಾವಾಹಿ ಮೂಲಕ ಕನ್ನಡಿಗರ ಮನಸ್ಸನ್ನು ಗೆದ್ದಿದ್ದಾರೆ. ತನ್ನ ಸ್ವಚ್ಛಂದವಾದ ಕನ್ನಡದಿಂದಾಗಿ ಕನ್ನಡಿಗರ ಹೃದಯ ಕದ್ದ ನಟಿ. ನಟನೆಯಲ್ಲಿ ಮಾತ್ರವಲ್ಲದೇ ಬರಹದಲ್ಲೂ ಸೈ ಎನಿಸಿಕೊಂಡಿದ್ದಾರೆ ರಂಜನಿ.

    ಒಳ್ಳೆಯ ಬರಹಗಾರ್ತಿಯೂ ಆಗಿರುವ ರಂಜನಿ ರಾಘವನ್ ಇತ್ತೀಚೆಗೆ ‘ಕಥೆ ಡಬ್ಬಿ’ ಎಂಬ ಕಥಾಸಂಕಲನ ಹಾಗೂ ‘ಸ್ವೈಪ್‌ರೈಟ್’ ಎಂಬ ಕಾದಂಬರಿಯನ್ನು ಬರೆದಿದ್ದು ಸಾಹಿತ್ಯ ಲೋಕದಲ್ಲಿ ಮಿಂಚುತ್ತಿದ್ದಾರೆ. ಧಾರಾವಾಹಿ, ಸಿನೆಮಾ ಶೂಟಿಂಗ್‌ಗಳಲ್ಲಿ ಬ್ಯುಸಿ ಇದ್ದರೂ ಬಿಡುವ ಮಾಡಿಕೊಂಡು ಕಥೆ ಬರೆಯುತ್ತಾರೆ. ಇನ್ನು ನಟನೆಯಲ್ಲಿ ಸದಾ ಬ್ಯುಸಿ ಇರುವವರು ಬಿಡುವು ಮಾಡಿಕೊಳ್ಳುವುದೇ ಕಷ್ಟ. ಈ ಮಧ್ಯೆ ರಂಜನಿ ತಮ್ಮ ಸಾಹಿತ್ಯ ಆಸಕ್ತಿಗಾಗಿ ಬಿಡುವು ಮಾಡಿಕೊಂಡು ಕಥೆಗಳನ್ನು ಬರೆಯುತ್ತಾರೆ.

    ಕುಡಿದ ಅಮಲಿನಲ್ಲಿ ತೇಲಾಡಿದ ಉರ್ಫಿ ಜಾವೇದ್..!

    ಇದೀಗ ಇವರ ಸಾಹಿತ್ಯಾಭಿರುಚಿಗಾಗಿ ಹೆಮ್ಮೆಯ ಗರಿಯೊಂದು ಮುಡಿಗೇರಿದೆ. ಇವರ ಸಾಹಿತ್ಯ ಪ್ರೇಮವನ್ನು ಗುರುತಿಸಿ ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕ ಸಂಘದ ವತಿಯಿಂದ “ಯುವ ಸಾಹಿತ್ಯ ರತ್ನ ಬಿರುದು” ನೀಡಿ ಗೌರವಿಸಲಾಗಿದೆ. ಪ್ರಶಸ್ತಿ ಜೊತೆ ವೀಡಿಯೋ ಮಾಡಿ ರಂಜನಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಜೊತೆಗೆ ಅವರ ಕಥೆ ಡಬ್ಬಿ ಸಾಹಿತ್ಯಕ್ಕೆ ಪ್ರೋತ್ಸಾಹ ನೀಡಿದ ಸಾಹಿತ್ಯಾಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. “ಈ ಹಿಂದೆ ನಾನು ಬರೆದ ಕಥೆ ಡಬ್ಬಿ ಪುಸ್ತಕಕ್ಕೆ ಬಹಳಷ್ಟು ಜನ ಬೆಂಬಲ ವ್ಯಕ್ತಪಡಿಸಿದ್ದೀರಿ. ಹಾಗೆ ತುಂಬಾ ಜನ ನನ್ನ ಫ್ಯಾನ್ ಪೇಜ್ ಮೂಲಕ ಪ್ರಮೋಷನ್ ಗಳನ್ನು ನೀಡಿದ್ದೀರಿ ನಿಮಗೆಲ್ಲರಿಗೂ ಧನ್ಯವಾದ ಎಂದು ಹೇಳಿದ್ದಾರೆ.

    ಈ ಪ್ರಶಸ್ತಿಯನ್ನು ಪಡೆದುಕೊಳ್ಳಲು ಮುಜುಗರ ಎನಿಸುತ್ತಿದೆ. ಈ ಪ್ರಶಸ್ತಿಯನ್ನು ಎಲ್ಲಾ ಸಾಹಿತಿಗಳಿಗೆ, ಓದುಗಾರರಿಗೆ ಮತ್ತು ಅಭಿಮಾನಿಗಳಿಗೆ ನಾನು ಅರ್ಪಣೆ ಮಾಡುತ್ತೇನೆ ಎಂದು ಹೇಳಿದರು.

    FILM

    ನಡುರಸ್ತೇಲಿ ನಿಂತ ಕಾರಲ್ಲೇ ಡ್ರೆಸ್ ಚೇಂಜ್ ಮಾಡುತ್ತಿದ್ದ ಈ ನಟಿ…ಯಾರು ಗೊತ್ತಾ?

    Published

    on

    ನಮಗೆಲ್ಲಾ ತಿಳಿದಿರುವಂತೆ, ಕಹಾನಿ 2012 ರಲ್ಲಿ ಬಿಡುಗಡೆಯಾಗಿತ್ತು. ಇದರಲ್ಲಿ ನವಾಜುದ್ದೀನ್ ಸಿದ್ದಿಕಿ, ಪರಂಬ್ರತ ಚಟರ್ಜಿ, ಶಾಶ್ವತ ಚಟರ್ಜಿ, ಇಂದ್ರನೀಲ್ ಸೆಂಗುಪ್ತ, ಧೃತಿಮಾನ್ ಚಟರ್ಜಿ, ದರ್ಶನ್ ಜರಿವಾಲಾ ಮತ್ತು ಇತರರು ನಟಿಸಿದ್ದರು. ಕಾಣೆಯಾದ ಗಂಡನನ್ನು ಹುಡುಕಲು ಲಂಡನ್‌ನಿಂದ ಕೋಲ್ಕತ್ತಾಗೆ ಪ್ರಯಾಣಿಸುವ ವಿದ್ಯಾ ಬಾಗ್ಚಿ ಎಂಬ ಗರ್ಭಿಣಿ ಮಹಿಳೆಯನ್ನು ಕಥೆಯನ್ನು ಇದು ಹೊಂದಿದೆ. ಆದರೆ, ಸಿನಿಮಾದ ಕ್ಲೈಮ್ಯಾಕ್ಸ್‌ ಮಾತ್ರ ಬಹಳ ವಿಭಿನ್ನವಾಗಿ ಚಿತ್ರಿಸಲಾಗಿತ್ತು.


    ಕಹಾನಿ ಸ್ಲೀಪರ್ ಹಿಟ್ ಆಗಿ ಹೊರಹೊಮ್ಮಿ 12 ವರ್ಷಗಳಾಗಿವೆ. ಆದರೆ, ಸುಜಯ್‌ ಘೋಷ್‌ ನಿರ್ದೇಶನದ ಈ ಸಿನಿಮಾದ ಇನ್‌ಸೈಡ್‌ ಸ್ಟೋರಿಗಳು ಇಂದಿಗೂ ಈ ಸಿನಿಮಾ ಬಗ್ಗೆ ಕುತೂಹಲ ಹುಟ್ಟಿಸುವಂತೆ ಮಾಡುತ್ತದೆ. ಕೋಲ್ಕತ್ತಾದ ದುರ್ಗಾಪೂಜೆಯ ಸಂಭ್ರವವನ್ನು ಸಿನಿಮಾದಲ್ಲಿ ದೊಡ್ಡ ಮಟ್ಟದಲ್ಲಿ ಚಿತ್ರಿಸಲಾಗಿತ್ತು. ಅದರೊಂದಿಗೆ ಸಿನಿಮಾವನ್ನು ಗೆರಿಲ್ಲಾ ಫಿಲ್ಮ್‌ಮೇಕಿಂಗ್‌ ಮಾಡಲಾಗಿತ್ತು. ಅದೇನೇ ಇದ್ದರೂ ಕಹಾನಿ ಸಿನಿಮಾವನ್ನು ಶೂಟಿಂಗ್‌ ಮಾಡೋದು ನಿರ್ದೇಶಕರಿಗೆ ಮಾತ್ರವಲ್ಲ ನಟರಿಗೂ ಕಷ್ಟವಾಗಿತ್ತು.


    “ಈ ಸಿನಿಮಾಗಾಗಿ ದೊಡ್ಡ ಬಜೆಟ್‌ ಇದ್ದಿರಲಿಲ್ಲ. ವ್ಯಾನಿಟಿ ವ್ಯಾನ್‌ ಸೌಲಭ್ಯವೂ ಇರಲಿಲ್ಲ. ನಿಸಲ್ಲಿಸುವ ಹಾಗೆಯೂ ಇರಲಿಲ್ಲ. ಹಾಗಾಗಿ ಪ್ರತಿ ಬಾರಿ ಅವರು ಬಟ್ಟೆ ಬದಲಾಯಿಸಬೇಕಾದಾಗ, ಅವರ ಇನ್ನೋವಾ ಕಾರ್‌ಗೆ ಕಪ್ಪು ಬಟ್ಟೆ ಹೊದಿಸಿ, ನಡು ರಸ್ತೆಯಲ್ಲಿ ನಿಂತಿದ್ದ ಕಾರ್‌ನಲ್ಲಿಯೇ ಬಟ್ಟೆ ಬಸಲಾಯಿಸಿ, ಶೂಟಿಂಗ್‌ಗೆ ಬರುತ್ತಿದ್ದರು” ಎಂದು ನಿರ್ದೇಶಕರು ಹೇಳಿದ್ದಾರೆ.
    “ಅಲಾದಿನ್‌ನ ವೈಫಲ್ಯದ ನಂತರ, ವಿದ್ಯಾ ಅವರು ಕಹಾನಿ ಬೇಡ ಎಂದು ಸುಲಭವಾಗಿ ಹೇಳಬಹುದಿತ್ತು. ಆದರೆ, ಅವರು ಅದಾಗಲೇ ಮಾತು ಕೊಟ್ಟಾಗಿತ್ತು. ಅಮಿತಾಬ್‌ ಬಚ್ಚನ್‌, ಶಾರುಖ್‌ ಖಾನ್‌ ರೀತಿಯಲ್ಲಿ ಕೊಟ್ಟ ಮಾತನ್ನು ಪಾಲಿಸುವಂತ ಕಲಾವಿದೆ ವಿದ್ಯಾ ಬಾಲನ್‌” ಎಂದು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

    Continue Reading

    BIG BOSS

    ಮಹಿಳೆಯರ ಒಳ ಉಡುಪಿನ ಬಗ್ಗೆ ಲಾಯರ್ ಜಗದೀಶ್ ಮಾತು.. ಏನಿದು ವಿವಾದ?

    Published

    on

    ಲಾಯರ್ ಜಗದೀಶ್ ಅವರು ಬಿಗ್ ಬಾಸ್ ಮನೆಯಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ಸದ್ಯ ಮಹಿಳೆಯರ ಒಳಉಡುಪಿನ ಬಗ್ಗೆ ಮಾತನಾಡಿ ವಿವಾದ ಸೃಷ್ಟಿ ಮಾಡಿದ್ದಾರೆ. ಈ ವಿಚಾರದ ಬಗ್ಗೆ ಸಖತ್ ಚರ್ಚೆ ಆಗುತ್ತಿದೆ.

    ಬಿಗ್ ಬಾಸ್ ಮನೆಯಲ್ಲಿ ಕ್ಯಾಪ್ಟನ್ಸಿ ಟಾಸ್ಕೆ ಅವಕಾಶ ನೀಡಲಾಗಿತ್ತು. ಇದರಲ್ಲಿ ಸ್ವರ್ಗ ನಿವಾಸಿಗಳು ಮಾತ್ರ ಭಾಗಿ ಆಗಲು ಅವಕಾಶ ಇತ್ತು. 10 ಮಂದಿಯಲ್ಲಿ ಆರು ಜನರು ಮಾತ್ರ ಕ್ಯಾಪ್ಟನ್ಸಿ ಟಾಸ್ಕಲ್ಲಿ ಇರಬಹುದು ಎಂದು ಬಿಗ್ ಬಾಸ್ ಆದೇಶ ಕೊಟ್ಟರು. ಇಷ್ಟೇ ಅಲ್ಲ, ಆರು ಮಂದಿಯನ್ನು ಸ್ವರ್ಗ ನಿವಾಸಿಗಳ ಒಮ್ಮತದ ನಿರ್ಧಾರದಿಂದ ಆಯ್ಕೆ ಮಾಡಬೇಕು ಎಂದು ಬಿಗ್ ಬಾಸ್ ಆದೇಶ ನೀಡಿದರು.

    ವೋಟಿಂಗ್ ಆಧಾರದ ಮೇಲೆ ಸ್ಪರ್ಧಿಗಳನ್ನು ಆಯ್ಕೆ ಮಾಡೋಣ ಎನ್ನುವ ನಿರ್ಧಾರಕ್ಕೆ ಎಲ್ಲರೂ ಬಂದರು. ಇದು ಜಗದೀಶ್ ಅವರ ಕೋಪಕ್ಕೆ ಕಾರಣ ಆಯಿತು. ಅವರು ನೇರವಾಗಿ ಸ್ಪರ್ಧಿಗಳ ವಿರುದ್ಧ ಹರಿಹಾಯ್ದರು. ಅದರಲ್ಲೂ ಈ ಐಡಿಯಾ ನೀಡಿದ ಉಗ್ರಂ ಮಂಜು ವಿರುದ್ಧ ಸಿಡಿದೆದ್ದರು. ಮಾತು ಮಿತಿ ಮೀರುತ್ತಿತ್ತು. ‘ನೀನು ಸಿನಿಮಾದಲ್ಲಿ ಮಾತ್ರ ಉಗ್ರಂ ನಿಜ ಜೀವನದಲ್ಲಿ ನಾನು ನಿನಗೆ ಉಗ್ರಂ ತೋರಿಸುತ್ತೇನೆ’ ಎಂದು ಜಗದೀಶ್ ಹೇಳಲು ಆರಂಭಿಸಿದರು.

    ಇದಕ್ಕೆ ಮಂಜು ಹೆಚ್ಚಿನ ಉತ್ತರ ಕೊಡೋಕೆ ಹೋಗಿಲ್ಲ.’ಬೋ..’ `ಬೋ..’ ಎಂದಷ್ಟೇ ಹೇಳಿದರು.’ಬೋ ಪ್ಯಾಂಟೀಸ್ ಎಲ್ಲ ನೋಡಿದೀನಿ.ನನ್ನ ಹೆಂಡತಿ ಹಾಕೋದು ಇದನ್ನೇ’ ಎಂದು ಜಗದೀಶ್ ಹೇಳಿದ್ದಾರೆ. ಇದು ಮನೆಯವರ ಅಸಮಾಧಾನಕ್ಕೆ ಕಾರಣ ಆಗಿದೆ. ಈ ವೇಳೆ ನಿಜವಗಾಲೂ ಇನ್ಸ್‌ಕ್ಯೂರ್ ಫೀಲ್ ಆಗ್ತಿದೆ ಎಂದು ಭವ್ಯಾ ಗೌಡ ಹೇಳಿದ್ದಾರೆ.

    Continue Reading

    BIG BOSS

    BBK11: ಧನರಾಜ್​ ಆಚಾರ್ಯ ಡೈಲಾಗ್​ಗೆ ಬಿಗ್​ಬಾಸ್​ ಮನೆಮಂದಿ ಫುಲ್​ ಖುಷ್

    Published

    on

    ಕನ್ನಡದ ದೊಡ್ಡ ರಿಯಾಲಿಟಿ ಶೋ ಬಿಗ್​ಬಾಸ್​ ಸೀಸನ್ 11 ಗ್ರ್ಯಾಂಡ್​ ಆಗಿ ಓಪನಿಂಗ್ ಪಡೆದುಕೊಂಡು 5ನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಬಿಗ್​ಬಾಸ್​ ಮನೆಯಲ್ಲಿ ಸ್ಪರ್ಧಿಗಳು ಹೊಂದಿಕೊಳ್ಳಲು ಕಷ್ಟ ಪಡುತ್ತಿದ್ದಾರೆ.

    ಬಿಗ್​ಬಾಸ್​ ಮನೆಗೆ ಬಂದ ಮೊದಲ ದಿನವೇ ಜಗಳ ಮಾಡಿಕೊಂಡಿದ್ದಾರೆ. ಕಳೆದ ಸೀಸನ್​ನಲ್ಲಿ ನಡೆದ ಗಲಾಟೆ ರೀತಿಯಲ್ಲೇ ಬಿಗ್​ಬಾಸ್​ ಸ್ಪರ್ಧಿಗಳು ಆಡುತ್ತಿದ್ದಾರೆ. ಸಣ್ಣ ಪುಟ್ಟ ವಿಚಾರಕ್ಕೆ ಜಗಳ ವಾದ ವಿವಾದ ಮಾಡಿಕೊಳ್ಳುತ್ತಿದ್ದಾರೆ.

    ಆದರೆ ಇದರ ಮಧ್ಯೆ ಗಿಚ್ಚಿ ಗಿಲಿಗಿಲಿ ಖ್ಯಾತಿಯ ಧನರಾಜ್​ ಆಚಾರ್ಯ ಗೋಲ್ಡನ್ ಸ್ಟಾರ್ ಗಣೇಶ್ ಅವರ ಡೈಲಾಂಗ್​ ಅನ್ನು ಹೇಳಿ ಎಲ್ಲಾ ಸ್ಪರ್ಧಿಗಳ ಮನಸ್ಸನ್ನು ಗೆದ್ದುಕೊಂಡಿದ್ದಾರೆ. ಹೌದು, ಬಿಗ್​ಬಾಸ್​ ಮನೆಗೆ ಎಂಟ್ರಿ ಕೊಟ್ಟ ಬಳಿಕ ಧನರಾಜ್​ ಆಚಾರ್ಯ ಕೊಂಚ ಡಲ್​ ಆಗಿದ್ದರು. ಬಳಿಕ ಬಿಗ್​ಬಾಸ್​ ಧೈರ್ಯ ತುಂಬಿದ ಬಳಿಕ ಧನರಾಜ್​ ಅವರು ಮತ್ತೆ ಟ್ರಾಕ್​​ಗೆ ಬಂದಿದ್ದಾರೆ.

    ಈ ಬಾರಿಯ ಬಿಗ್​ಬಾಸ್​ ಮನೆಯಲ್ಲಿ ನಗುವೆ ಇಲ್ಲದಂತೆ ಆಗಿಬಿಟ್ಟಿದೆ. ಏಕೆಂದರೆ ಒಂದೇ ವಾರಕ್ಕೆ ಬಿಗ್​ಬಾಸ್​ ಮನೆಯಲ್ಲಿ ಗಲಾಟೆ, ಮನಸ್ಥಾಪ ಹೀಗೆ ಸಾಕಷ್ಟು ವಿಚಾರಗಳಿಂದ ಸ್ಪರ್ಧಿಗಳು ಬೇಸರ ಆಗಿದ್ದರು. ಇದೀಗ ಧನರಾಜ್​ ಅವರ ಕಾಮಿಡಿಗೆ ಸ್ಪರ್ಧಿಗಳು ಬಿದ್ದು ಬಿದ್ದು ನಕ್ಕಿದ್ದಾರೆ. ಮುಂಗಾರು ಮಳೆ ಸಿನಿಮಾ ಗೋಲ್ಡನ್ ಸ್ಟಾರ್ ಗಣೇಶ್ ಅವರ ಫೇಮಸ್​ ಡೈಲಾಗ್​ ಅನ್ನು ಬಿಗ್​ಬಾಸ್​ ಮನೆಯಲ್ಲಿ ರೀಕ್ರಿಯೇಟ್ ಮಾಡಿದ್ದಾರೆ.

    Continue Reading

    LATEST NEWS

    Trending