Connect with us

    BANTWAL

    ಕನ್ಯಾನ ಬಾಲಕಿ ಸಾವು ಪ್ರಕರಣ: ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ

    Published

    on

    ಬಂಟ್ವಾಳ: ದಲಿತ ಸಂಘಟನೆ ಸಮಾಜದಲ್ಲಿ ಅನ್ಯಾಯಕ್ಕೊಳಗಾದವರ ಧ್ವನಿಯಾಗಿ ಕೆಲಸ ನಿರ್ವಹಿಸಿದೆ. ನಾವು ಯಾವುದೇ ಧರ್ಮ, ಜಾತಿ, ಪಕ್ಷಗಳಿಗೆ ಸೀಮಿತವಾಗಿ ಕೆಲಸ ಮಾಡಿಲ್ಲ. ಶೋಷಿತ ವರ್ಗದವರ ಪರವಾಗಿ ಕೆಲಸ ಮಾಡುತ್ತಿದ್ದೇವೆ.

    ನಮ್ಮನ್ನು ಮತ್ತೊಂದು ಧರ್ಮದ ವಿರುದ್ಧ ಎತ್ತಿ ಕಟ್ಟಿ ನಮ್ಮ ಯುವಕರನ್ನು ಜೈಲಿಗೆ ಅಟ್ಟುವ ಹಿಂದೂ ಸಂಘಟನೆಗಳು ನಮಗೆ ‌ಬೇಡ. ನಮಗೆ ವಿದ್ಯಾಭ್ಯಾಸ ಕೊಡಿ,  ನ್ಯಾಯ ಒದಗಿಸುವ ಕೆಲಸ ಮಾಡಿ, ನಿಮಗೆ ಖಂಡಿತಾ ನಾವು ಬೆಂಬಲ ನೀಡುತ್ತೇವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿ ಸ್ಥಾಪಕಾಧ್ಯಕ್ಷ ಬಿ.ಕೆ ಸೇಸಪ್ಪ ಬೆದ್ರಕಾಡು ಹೇಳಿದರು.


    ಅವರು ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ಅಪ್ರಾಪ್ತ ಬಾಲಕಿಯ ಸಾವಿಗೆ ಕಾರಣನಾದ ಆರೋಪಿಗೆ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಮತ್ತು ರಾಜ್ಯದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿ ವತಿಯಿಂದ ವಿಟ್ಲ ನಾಡಕಚೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.

    ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಅವರು ಆತ್ಮಿಕಾಳ ಸಾವಿನ ವಿಚಾರದಲ್ಲಿ ದಲಿತ್ ಸೇವಾ ಸಮಿತಿ ವಿರುದ್ಧ ಸುಳ್ಳು ಆರೋಪ ಮಾಡಿರುವುದು ಖಂಡನೀಯವಾಗಿದ್ದು, ಅವರ ಹೇಳಿಕೆಯನ್ನು ಖಂಡಿಸುತ್ತೇವೆ.ಹೋರಾಟ ಮಾಡಿದ್ದು, ಬಾಲಕಿ ಮೃತಪಟ್ಟ ತಕ್ಷಣವೇ ವಿಟ್ಲ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿ, ಆರೋಪಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದೇವೆ,

    ಬಾಲಕಿ ಸಾವಿನ ವಿಚಾರದಲ್ಲಿ ದಲಿತ ಸಂಘಟನೆಗಳು ಮೌನ ವಹಿಸಿದೆ ಎನ್ನುವ ಹಿಂದೂ ಮುಖಂಡ ಶರಣ್ ಪಂಪ್ವೆ‌ಲ್ ರವರ ಆರೋಪಕ್ಕೆ ಹುರುಳಿಲ್ಲ ಎಂದರು.

    ಬೆಳಿಗ್ಗೆ ವಿಟ್ಲ ಜೈನ ಬಸದಿ ಬಳಿಯಿಂದ ಮೆರವಣಿಗೆ ಹೊರಟು ನಾಡಕಚೇರಿಯಲ್ಲಿ ಉಪತಹಶೀಲ್ದಾರ್ ವಿಜಯ ವಿಕ್ರಮರವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

    BANTWAL

    ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕ ಮೃ*ತ್ಯು

    Published

    on

    ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃ*ತಪಟ್ಟಿದ್ದಾರೆ.

    ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮೆಕೇನಿಕ್ ಸಿ.ಎಚ್. ಹನೀಫ್ ಅವರ ಪುತ್ರ ಬಾತಿಷಾ( 22) ಮೃ*ತಪಟ್ಟವರು.

    ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದ, ಗುರುವಾರ ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃ*ತಪಟ್ಟಿದ್ದಾರೆ

    Continue Reading

    BANTWAL

    ಬಂಟ್ವಾಳ: ಭಾರೀ ಗಾಳಿ ಮಳೆಗೆ ತಾಲೂಕಿನ ಕೆಲ ಭಾಗಗಳಲ್ಲಿ ಹಾನಿ

    Published

    on

    ಬಂಟ್ವಾಳ: ರಾತ್ರಿ ಬೀಸಿದ ಗಾಳಿ ಮಳೆಗೆ ಬಂಟ್ವಾಳ ತಾಲೂಕಿನ ಕೆಲವು ಭಾಗದಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಹಾನಿಯಾದ ಘಟನೆ ವರದಿಯಾಗಿದೆ.

    ಬಿಸಿ ರೋಡಿನ ಸರ್ಕಲ್ ಸಹಿತ ಅನೇಕ ಭಾಗದಲ್ಲಿ ವಿದ್ಯುತ್ ಕಂಬ, ಕಾಂಪೌಂಡ್, ಮರಗಳು ಉರುಳಿಬಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.

    ಮಂಗಳವಾರ ರಾತ್ರಿ ಸುಮಾರು 9.30ರ ವೇಳೆ ಭಾರಿ ಗಾಳಿ ಮಳೆಯಾಗಿದ್ದು, ಇದರಿಂದ ಬಿ.ಸಿ.ರೋಡ್ ಸರ್ಕಲ್ ಬಳಿ ಸಹಿತ ಹಲವೆಡೆ ಒಟ್ಟು 5 ವಿದ್ಯುತ್ ಕಂಬಗಳು ಉರುಳಿಬಿದ್ದು ಮೆಸ್ಕಾಂ ಇಲಾಖೆಗೆ ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ ಬಳಿ ಬೃಹತ್ ಮರವೊಂದು ಉರುಳಿಬಿದ್ದಿದ್ದು, ಅನಾಹುತವನ್ನೇ ಉಂಟುಮಾಡಿದೆ.

    ಇನ್ನು ಬಂಟ್ವಾಳ ತಾಲೂಕಿನ ಮಾಧ್ವ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದಿದ್ದು, ಅಪಾರ ಹಾನಿಯಾಗಿದೆ.

    Continue Reading

    BANTWAL

    ವಿಟ್ಲ: ಯುವಕ ನೇಣು ಬಿಗಿದು ಆತ್ಮಹ*ತ್ಯೆ..!

    Published

    on

    ವಿಟ್ಲ: ವಿಟ್ಲ ಬುಡೋಳಿ ಮಡಲ ನಿವಾಸಿ ಸುಶಾಂತ್(25 ವ) ಮನೆಯಲ್ಲಿ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಸುಶಾಂತ್ ರವರು ಇತ್ತೀಚೆಗೆ ಮಿನಿ ಬಸ್‌ ಖರೀದಿಸಿದ್ದು ಬಸ್ಸನ್ನು ತಾನೇ ಚಾಲನೆ ಮಾಡಿಕೊಂಡು ಕೆಲಸ ನಿರ್ವಹಿಸುತ್ತಿದ್ದರು. ಈತ ಸಂಘಟನೆಯ ಜೊತೆಗೆ ಸಾಮಾಜಿಕ ಸೇವಾಕಾರ್ಯಗಳನ್ನು ಮಾಡಿಕೊಂಡಿದ್ದರು. ಗ್ರಾಮದಲ್ಲಿ ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದ ಈತನ ಸಾವಿಗೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.

    ಸುರತ್ಕಲ್: ಖಾಸಗಿ ಬಸ್ ಢಿ*ಕ್ಕಿ; ದ್ವಿಚಕ್ರ ಸವಾರನಿಗೆ ಗಾ*ಯ

    Continue Reading

    LATEST NEWS

    Trending