Connect with us

    LATEST NEWS

    ನವದುರ್ಗಾ ಲೇಖನ ಯಜ್ಞದೊಂದಿಗೆ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಹೊಸ ಮಾರಿಗುಡಿ ದೇಗುಲ

    Published

    on

    ಕಾಪು: ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥ ಮತ್ತು ಸಾನ್ನಿಧ್ಯ ವೃದ್ಧಿಗಾಗಿ ನವದುರ್ಗೆಯರ ಹೆಸರಿನೊಂದಿಗೆ ಕಾಪುವಿನ ಅಮ್ಮನ ಹೆಸರನ್ನು ಬರೆಯುವ ನವದುರ್ಗಾ ಲೇಖನ ಯಜ್ಞ ಮಹಾಸಂಕಲಕ್ಕೆ ಶುಕ್ರವಾರ (ಅ.18) ನವ ದಂಪತಿಗಳಿಂದ ನವದುರ್ಗಾ ನಾಮಜಪ ಪಠಣಾರಂಭ ಕಾರ್ಯಕ್ರಮ ಜರುಗಿತು.


    ಕ್ಷೇತ್ರದ ಪ್ರಧಾನ ತಂತ್ರಿ ವಿದ್ವಾನ್ ಕೆ.ಪಿ ಕುಮಾರ ಗುರು ತಂತ್ರಿ ನೇತೃತ್ವದಲ್ಲಿ, ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಉಪಸ್ಥಿತಿಯಲ್ಲಿ ಒಂಬತ್ತು ದಂಪತಿಗಳು ಏಕಕಾಲದಲ್ಲಿ ದೀಪ ಬೆಳಗಿ ಪುಷ್ಪಾರ್ಚನೆ ಯೊಂದಿಗೆ ನವದುರ್ಗಾ ನಾಮ ಜಪ ಪಠಣೆ ಪ್ರಾರಂಭಿಸಿದರು. ಪ್ರಾರ್ಥನೆ ನೆರವೇರಿಸಿ ಮಾತನಾಡಿದ ದೇವಳದ ತಂತ್ರಿ, ಶರನ್ನವರಾತ್ರಿ ಮಹೋ ತ್ಸವದ 9ನೇ ದಿನ ಮತ್ತು ಕ್ಷೇತ್ರದಲ್ಲಿ ವಾಗೀಶ್ವರಿ ಮಾತೆಗೆ ನಡೆಯುವ ಪೂಜೆಯಂದೇ ನವ ದಂಪತಿಗಳ ಜತೆಗೆ ಪದಾಧಿಕಾರಿಗಳು, ಸಿಬ್ಬಂದಿ ಮತ್ತು ಭಕ್ತರ ಸಮಕ್ಷಮದಲ್ಲಿ ನವದುರ್ಗಾ ನಾಮ ಜಪ ಪಠಣೆ ಮಾಡಲಾಗಿದೆ, ಅ.28ರ ವರೆಗೆ ನಿತ್ಯ ನಿರಂತರವಾಗಿ ತಾಯಿಯ ಹೆಸರನ್ನು ಪಠಣೆ ಮಾಡಿದರೆ, ಬರೆಯಲು ಅನುಕೂಲವಾಗುತ್ತದೆ ಎಂದರು. ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ,

    ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯಾ, ಕೋಶಾಧಿಕಾರಿ ಮತ್ತು ದೇವಳದ ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಮಹಾದಾನಿಗಳು ಮತ್ತು ಆರ್ಗಾನಿಕ್ ಇಂಡಸ್ಟ್ರೀಸ್‌ ಆಡಳಿತ ನಿರ್ದೇಶಕ ಆನಂದ ಎಂ.ಶೆಟ್ಟಿ ತೋನ್ಸೆ, ಮುಂಬಯಿಯ ನ್ಯಾಯವಾದಿ ಮಹೇಶ್ ಕೋಟ್ಯಾನ್, ಸಾಯಿ ರಾಧಾ ಸಮೂಹ ಸಂಸ್ಥೆಯ ಆಡಳಿತ ನಿರ್ದೇಶಕ ಮನೋಹ‌ರ್ ಎಸ್. ಶೆಟ್ಟಿ, ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷ ಕೆ. ರಘುಪತಿ ಭಟ್, ಎಸ್‌ಕೆಎಫ್ ಸಂಸ್ಥೆಯ ಆಡಳಿತ ಆಚಾರ್ಯ ನಿರ್ದೇಶಕ ರಾಮಕೃಷ್ಣ ಮೂಡುಬಿದಿರೆ, ದೇವಸ್ಥಾನದ ಪ್ರಬಂಧಕ ಗೋವರ್ಧನ್ ಸೇರಿಗಾರ್ ಸಹಿತ 9 ಜನ ದಂಪತಿ ಸಮೇತರಾಗಿ ದೀಪ ಬೆಳಗಿಸಿ ನವದುರ್ಗಾ ನಾಮಜಪ ಪ್ರಾರಂಭಿಸಿದರು. ಉಪಾಧ್ಯಕ್ಷ ಮಾಧವ ಆರ್. ಪಾಲನ್, ನವದುರ್ಗಾ ಲೇಖನ ಯಜ್ಞ ಸಮಿತಿ ಕೋಶಾಧಿಕಾರಿ ಕೆ. ವಿಶ್ವನಾಥ್, ಆರ್ಥಿಕ ಸಮಿತಿ ಮುಖ್ಯ ಸಂಚಾಲಕ ರತ್ನಾಕರ ಹೆಗ್ಡೆ ಕಲ್ಯಾ ಬೀಡು ಮತ್ತು ರಮೇಶ್ ಶೆಟ್ಟಿ ಕಾಪು ಕೊಲ್ಯ ಉಪಸ್ಥಿತರಿದ್ದರು.

    Click to comment

    Leave a Reply

    Your email address will not be published. Required fields are marked *

    BIG BOSS

    ಮತ್ತೆ ಜೈಲು ಸೇರಿದ ಚೈತ್ರಾ ಕುಂದಾಪುರ

    Published

    on

    ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​ಬಾಸ್​ ಸೀಸನ್​ 11, ನಾಲ್ಕನೇ ವಾರಕ್ಕೆ ಕಾಲಿಡುತ್ತಿದೆ. ಇದೇ ಹೊತ್ತಲ್ಲಿ ಚೈತ್ರಾ ಕುಂದಾಪುರ ಬಿಗ್​ಬಾಸ್​ ಮನೆಯ ಜೈಲು ಪಾಲಾಗಿದ್ದಾರೆ. ಬಿಗ್​ಬಾಸ್​ ಮನೆಗೆ ಕಾಲಿಟ್ಟಿದ್ದ ಚೈತ್ರಾ ಕುಂದಾಪುರ ನೇರವಾಗಿ ನರಕಕ್ಕೆ ಎಂಟ್ರಿ ಕೊಟ್ಟಿದ್ದರು.

    ಬಿಗ್‌ ಬಾಸ್ ಸೀಸನ್ 11ರಲ್ಲಿ ಚೈತ್ರಾ ಕುಂದಾಪುರ ಅವರು ಮೊದಲ ಬಾರಿಗೆ ಜೈಲಿಗೆ ಹೋಗಿದ್ದಾರೆ. ಮೂರನೇ ವಾರದಲ್ಲಿ ಮನೆಯಲ್ಲಿದ್ದ 14 ಸ್ಪರ್ಧಿಗಳಿಗೆ ಬಿಗ್​ಬಾಸ್​ ಟಾಸ್ಕ್​ವೊಂದನ್ನು ನೀಡಿದ್ದರು. ಬಿಗ್​ಬಾಸ್​ ಮನೆಯಲ್ಲಿ ಅಪ್ರಾಮಾ ಣಿಕ ಯಾರು ಹಾಗೂ ಕುತಂತ್ರಿ ಯಾರು ಅಂತ ಹೇಳಿ ಎಂದಿದ್ದರು.

    ಬಿಗ್​ಬಾಸ್​ ಮನೆಯಲ್ಲಿರೋ ಸ್ಪರ್ಧಿಗಳು ಅತಿ ಹೆಚ್ಚಾಗಿ ಹಣೆ ಪಟ್ಟಿಯನ್ನು ಚೈತ್ರಾ ಕುಂದಾಪುರ ಅವರಿಗೆ ಕೊಟ್ಟಿದ್ದಾರೆ. ಹೀಗಾಗಿ ಪ್ರಕ್ರಿಯೆಯ ಅನುಸಾರ ಚೈತ್ರಾ ಕುಂದಾಪುರ ಬಿಗ್​ಬಾಸ್​ ಜೈಲಿಗೆ ಹೋಗಿದ್ದಾರೆ. ಬಿಗ್​ಬಾಸ್​ ಅವರ ಮುಂದಿನ ಆದೇಶದವರೆಗೂ ಚೈತ್ರಾ ಜೈಲಿನಲ್ಲೇ ಇರಬೇಕಾಗುತ್ತದೆ.

    Continue Reading

    BIG BOSS

    BBK11: ವಾರದ ಕತೆ ಕಿಚ್ಚನ ಜೊತೆ; ಕುತೂಹಲ ಮೂಡಿಸಿದ 5 ವಿಚಾರಗಳು..!

    Published

    on

    ಬಿಗ್​​ಬಾಸ್​ ಸೀಸನ್​-11 ಮೂರು ವಾರ ಪೂರೈಸಿದ್ದು, ಇಂದು ಕಿಚ್ಚ ಸುದೀಪ್ ಎಂಟ್ರಿ ಆಗಲಿದ್ದಾರೆ. ಕಳೆದ ಒಂದು ವಾರದಿಂದ ಬಿಗ್​ಬಾಸ್ ಮನೆಯಲ್ಲಿ, ನಡೆದ ಅನೇಕ ವಿಚಾರಗಳು ದೊಡ್ಡ ಮೊಟ್ಟದಲ್ಲಿ ಸದ್ದು ಮಾಡಿವೆ. ಹೀಗಾಗಿ ಇವತ್ತಿನ ಕಿಚ್ಚನ ಎಪಿಸೋಡ್​​ ತುಂಬಾನೇ ಕುತೂಹಲ ಮೂಡಿಸಿದೆ.

    ಭಾರೀ ಹೈಡ್ರಾಮಾ..!

    ದಸರಾ ಹಿನ್ನೆಲೆಯಲ್ಲಿ ಕಳೆದ ವಾರ ಎಲಿಮಿನೇಷನ್​ ಪ್ರಕ್ರಿಯೆ ನಡೆದಿರಲಿಲ್ಲ. ಈ ವಾರ ನಡೆದ ಕೆಲವು ಅಹಿತಕರ ಘಟನೆಗಳಿಂದಾಗಿ ಸ್ಪರ್ಧಿಗಳಾದ ಲಾಯರ್ ಜಗದೀಶ್ ಹಾಗೂ ರಂಜಿತ್ ಅವರನ್ನು ಮನೆಯಿಂದ ಆಚೆ ಹಾಕಲಾಗಿದೆ. ಅಂದರೆ ಇಬ್ಬರು ಸ್ಪರ್ಧಿಗಳು ಬ್ಯಾಗ್ ಹಿಡಿದು ಮನೆಗೆ ವಾಪಸ್ ಆಗಿದ್ದಾರೆ. ಈ ವಿಚಾರಗಳಿಗೆ ಸುದೀಪ್ ಪ್ರತಿಕ್ರಿಯೆ ಹೇಗಿರುತ್ತದೆ ಅನ್ನೋ ಕುತೂಹಲ ವೀಕ್ಷಕರಲ್ಲಿ ಹೆಚ್ಚಾಗಿದೆ.

    ಆಕ್ಷೇಪಾರ್ಹ ಪದ ಬಳಕೆ

    ಕೆಲವು ಸ್ಪರ್ಧಿಗಳು ಮನೆಯಲ್ಲಿ ಆಕ್ಷೇಪಾರ್ಹ ಪದಗಳನ್ನು ಬಳಕೆ ಮಾಡ್ತಿದ್ದಾರೆ. ಇದು ವೀಕ್ಷಕರ ಸಮಾಧಾನಕ್ಕೆ ಕಾರಣವಾಗಿದೆ. ಟಾಸ್ಕ್​ ವೇಳೆ, ವಾದ-ಪ್ರತಿವಾದ ವೇಳೆ ಅತಿರೇಕಕ್ಕೆ ಹೋಗುವ ಸ್ಪರ್ಧಿಗಳು ಮನಸೋ ಇಚ್ಛೆ ನಿಂದನೆ ಮಾಡಿಕೊಳ್ತಿದ್ದಾರೆ. ಇಂಥ ವಿಚಾರಗಳ ಬಗ್ಗೆ ಸ್ಪರ್ಧಿಗಳಿಗೆ ಸುದೀಪ್ ಹೇಗೆ ಕ್ಲಾಸ್ ತೆಗೆದುಕೊಳ್ತಾರೆ ಅನ್ನೋ ನಿರೀಕ್ಷೆಯಲ್ಲಿ ಅಭಿಮಾನಿಗಳಿದ್ದಾರೆ.

    ಎಲಿಮಿನೇಷನ್ ಇರುತ್ತಾ..?

    ಈಗಾಗಲೇ ಬಿಗ್​​ಬಾಸ್​ ಮನೆಯಿಂದ ಜಗದೀಶ್ ಹಾಗೂ ರಂಜಿತ್​ರನ್ನು ಹೊರಹಾಕಲಾಗಿದೆ. ಹೀಗಾಗಿ, ಈ ವಾರ ಎಲಿಮಿನೇಷನ್ ನಡೆಯೋದು ಡೌಟ್. ಆದರೂ ಸುದೀಪ್ ಯಾರನ್ನೆಲ್ಲಾ ಸೇವ್ ಮಾಡುತ್ತಾರೆ? ಮೊದಲು ಸೇವ್ ಆಗೋದು ಯಾರು ಅನ್ನೋದ್ರ ಬಗ್ಗೆ ವೀಕ್ಷಕರಲ್ಲಿ ಎಕ್ಸೈಟ್​ಮೆಂಟ್ ಹೆಚ್ಚಾಗಿದೆ.

    ಕನ್ನಡ ಮಾಯ

    ಸ್ಪರ್ಧಿಗಳು ಕನ್ನಡ ಪದ ಬಳಕೆಯನ್ನು ಕಡಿಮೆ ಮಾಡಿದ್ದಾರೆ ಅನ್ನೋ ಆರೋಪ ಇದೆ. ಪದೇ ಪದೇ ಇಂಗ್ಲಿಷ್​​ನಲ್ಲಿ ಮಾತನಾಡುತ್ತಿರುವ ಸಂಬಂಧ ಈಗಾಗಲೇ ಸ್ಪರ್ಧಿಗಳಿಗೆ ಬಿಗ್​ಬಾಸ್​ ಎಚ್ಚರಿಕೆಯನ್ನೂ ನೀಡಿದ್ದಾರೆ. ಹೀಗಿದ್ದೂ ಸ್ಪರ್ಧಿಗಳು ಇಂಗ್ಲಿಷ್​​ನಲ್ಲಿ ಮಾತನಾಡ್ತಿದ್ದಾರೆ.

    ಬಿಗ್​ಬಾಸ್​ಗೆ ಸುದೀಪ್ ಗುಡ್​ಬೈ

    ಕಳೆದ ಭಾನುವಾರ ಟ್ವೀಟ್ ಮಾಡುವ ಮೂಲಕ ಕಿಚ್ಚ ಸುದೀಪ್, ಬಿಗ್​ಬಾಸ್​ಗೆ ಗುಡ್​ಬೈ ಹೇಳಿದ್ದಾರೆ. ಮುಂದಿನ ವರ್ಷದಿಂದ ಸುದೀಪ್, ಬಿಗ್​​ಬಾಸ್ ಶೋನಲ್ಲಿ ಕಾಣಿಸಿಕೊಳ್ಳಲ್ಲ. ಇದು ಅಭಿಮಾನಿಗಳಿಗೆ ಭಾರೀ ಬೇಸರವುಂಟು ಮಾಡಿದೆ. ಸುದೀಪ್ ಈ ನಿರ್ಧಾರ ಪ್ರಕಟಿಸಿದ ಬಳಿಕ ಮೊದಲ ಬಾರಿಗೆ ಬಿಗ್​ಬಾಸ್​ ವೇದಿಕೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ.

    Continue Reading

    LATEST NEWS

    ಹಾವುಗಳನ್ನು ನುಂಗಿದ ಕಾಳಿಂಗ : ಅರಗಿಸಿಕೊಳ್ಳಲಾಗದೆ ವಿಲವಿಲ

    Published

    on

    ಹಾವುಗಳಲ್ಲೇ ಅತ್ಯಂತ ಪವರ್ ಫುಲ್, ಉದ್ದವಾದ ಮತ್ತು ಅತ್ಯಂತ ವಿಷಕಾರಿ ಹಾವು ಎಂದು ಕಾಳಿಂಗ ಸಪ್ರವನ್ನು ಪರಿಗಣಿಸಲಾಗಿದೆ. ಹೆಬ್ಬಾವುಗಳನ್ನು ಸೇರಿ ಇತರ ಹಾವು, ಪ್ರಾಣಿ ಮನುಷ್ಯರ ಮೇಲೂ ಈ ಕಾಳಿಂಗ ಸರ್ಪಗಳು ದಾಳಿ ಮಾಡುತ್ತವೆ.

     

    ಸದ್ಯ, ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್ ಆಗುತ್ತಿದ್ದು, ದೊಡ್ಡದಾರ ಕಾಳಿಂಗ ಸರ್ಪ ನೆಲದ ಮೇಲೆ ಮಲಗಿರುವುದನ್ನು ನೋಡಬಹುದು. ಆ ಮಲಗಿರುವ ಹಾವು ನಿಧಾನವಾಗಿ ತನ್ನ ಬಾಯಿಂದ ಹಾವುಗಳನ್ನು ಉಗುಳುತ್ತಿದೆ.

     

     

    ಇದನ್ನೂ ಓದಿ : VIDEO: ನಾಗರ ಹಾವಿನಿಂದ ಮಗುವನ್ನು ರಕ್ಷಿಸಿದ ಪಿಟ್‌ ಬುಲ್‌ ನಾಯಿ..! 

     

    ನೆರೆದಿದ್ದ ಜನ ಹಾವನ್ನು ಸುತ್ತುವರೆದು ಇಡೀ ದೃಶ್ಯವನ್ನು ಮೂಕವಿಸ್ಮಿತರಾಗಿ ನೋಡುತ್ತಿದ್ದಾರೆ. ಬಹುಷ ಆ ಮೂರು ಹಾವುಗಳನ್ನು ಒಂದರ ಮೇಲೊಂದರಂತೆ ಈ ದೈತ್ಯ ಕಾಳಿಂಗ ನುಂಗಿದೆ. ಬಳಿಕ ಅರಗಿಸಿಕೊಳ್ಳಲಾಗದೆ ಅದು ವಾಪಾಸ್ ಉಗುಳಿದೆ ಎಂದು ನೆಟ್ಟಿಗರು ಅಭಿಪ್ರಾಯ ಪಟ್ಟಿದ್ದಾರೆ,

    Continue Reading

    LATEST NEWS

    Trending