Connect with us

LATEST NEWS

Karkala: 11 ವರ್ಷಗಳ ಹಿಂದೆ ನಡೆದ ಚಿನ್ನ ಕಳವು ಪ್ರಕರಣ- ಇಬ್ಬರು ಆರೋಪಿಗಳಿಗೆ ಶಿಕ್ಷೆ

Published

on

ಕಾರ್ಕಳದ ಕುಕ್ಕುಂದೂರು ಗ್ರಾಮದ ಜಯಂತಿನಗರದ ಮನೆಯೊದರಲ್ಲಿ 11ವರ್ಷಗಳ ಹಿಂದೆ ನಡೆದ ಚಿನ್ನಾಭರಣ ಮತ್ತು ನಗದು ಕಳವು ಪ್ರಕರಣವು ಕಾರ್ಕಳ ಪ್ರಧಾನ ಸಿವಿಲ್‌ ಮತ್ತು ಜೆ.ಎಂ.ಎಫ್‌.ಸಿ ನ್ಯಾಯಲಯದಲ್ಲಿ ಸಾಬೀತಾಗಿದ್ದು, ಪ್ರಕರಣದ ಇಬ್ಬರು ಆರೋಪಿಗಳಿಗೆ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.

ಕಾರ್ಕಳ: ಕಾರ್ಕಳದ ಕುಕ್ಕುಂದೂರು ಗ್ರಾಮದ ಜಯಂತಿನಗರದ ಮನೆಯೊದರಲ್ಲಿ 11ವರ್ಷಗಳ ಹಿಂದೆ ನಡೆದ ಚಿನ್ನಾಭರಣ ಮತ್ತು ನಗದು ಕಳವು ಪ್ರಕರಣವು ಕಾರ್ಕಳ ಪ್ರಧಾನ ಸಿವಿಲ್‌ ಮತ್ತು ಜೆ.ಎಂ.ಎಫ್‌.ಸಿ ನ್ಯಾಯಲಯದಲ್ಲಿ ಸಾಬೀತಾಗಿದ್ದು, ಪ್ರಕರಣದ ಇಬ್ಬರು ಆರೋಪಿಗಳಿಗೆ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.

ಆನಂದ ಹಾಗೂ ರತ್ನಾ ಅವರು ಶಿಕ್ಷೆಗೊಳಗಾದ ಆರೋಪಿಗಳು

2012 ಏಪ್ರಿಲ್ 27ರ ಮಧ್ಯರಾತ್ರಿ ಕಾರ್ಕಳದ ಕುಕ್ಕುಂದೂರು ಗ್ರಾಮದ ಜಯಂತಿನಗರ 2ನೇ ಕ್ರಾಸ್‌ ನಿವಾಸಿ ರಮಾ ಆಚಾರ್ಯ ಎಂಬವರ ಮನೆಯಿಂದ ಒಟ್ಟು ರೂ.90,000. ಮೌಲ್ಯದ ಚಿನ್ನಾಭರಣ ಮತ್ತು ನಗದು ಕಳವು ಆಗಿತ್ತು.

ಕಾರ್ಕಳ ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಗಳಾದ ಆನಂದ ಹಾಗೂ ರತ್ನಾ ಅವರನ್ನು ಬಂಧಿಸಿದ್ದರು.

ಪೋಲೀಸ್‌ ಉಪನಿರೀಕ್ಷಕರಾಗಿದ್ದ ಜಿ.ಎಂ. ನಾಯ್ಕರ್ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆಯನ್ನು ನಡೆಸಿದ ಕಾರ್ಕಳ ಪ್ರಧಾನ ಸಿವಿಲ್‌ ಮತ್ತು ಜೆ.ಎಂ.ಎಫ್‌.ಸಿ ನ್ಯಾಯಾಧೀಶರಾದ ಚೇತನಾ ಎಸ್‌.ಎಫ್‌. ಇವರು ಆರೋಪಿಗಳ ವಿರುದ್ಧದ ಆರೋಪವು ಸಾಬೀತು ಆಗಿದೆ ಎಂದು ಅಭಿಪ್ರಾಯಪಟ್ಟು, ಆರೋಪಿ ಆನಂದನಿಗೆ ಐಪಿಸಿ ಕಲಂ.457ರ ಅನ್ವಯ 3 ವರ್ಷ 6 ತಿಂಗಳ ಸಜೆ ಮತ್ತು ರೂ.2,000 ದಂಡ, ದಂಡ ತೆರಲು ತಪ್ಪಿದ್ದಲ್ಲಿ 1 ತಿಂಗಳ ಸಾದಾ ಶಿಕ್ಷೆ, ಐಪಿಸಿ ಕಲಂ 380ರ ಅನ್ವಯ 2 ವರ್ಷಗಳ ಸಾದಾ ಸಜೆ ಮತ್ತು ರೂ.2,000 ದಂಡ, ದಂಡ ತೆರಲು ತಪ್ಪಿದ್ದಲ್ಲಿ 1 ತಿಂಗಳ ಸಾದಾ ಶಿಕ್ಷೆ ಹಾಗೂ ಆರೋಪಿ ರತ್ನಾಳಿಗೆ ಐಪಿಸಿ ಕಲಂ.414 ಅನ್ವಯ 6 ತಿಂಗಳ ಸಾಮಾನ್ಯ ಸಜೆ ಮತ್ತು ರೂ.5,000 ದಂಡ, ದಂಡ ತೆರಲು ತಪ್ಪಿದ್ದಲ್ಲಿ 1 ತಿಂಗಳ ಸಾದಾ ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದ್ದಾರೆ.

ಸಿಆರ್ ಪಿಸಿ 367ರ ಅನ್ವಯ ಸಂತ್ರಸ್ತ ಮಹಿಳೆ ರಮಾ ಆಚಾರ್ಯ ಅವರಿಗೆ 4,000ವನ್ನು ಪರಿಹಾರದ ರೂಪದಲ್ಲಿ ಹಣವನ್ನು ನೀಡುವಂತೆ ನ್ಯಾಯಾಲಯ ಆದೇಶ ಮಾಡಿದೆ.

ಈ ಪ್ರಕರಣದಲ್ಲಿ ಸರಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕ ರಾಜಶೇಖರ ಪಿ ಶಾಮರಾವ್‌ ಅವರು ಸಾಕ್ಷಿಗಳ ವಿಚಾರಣೆ ನಡೆಸಿ ವಾದ ಮಂಡಿಸಿದ್ದರು.

Click to comment

Leave a Reply

Your email address will not be published. Required fields are marked *

DAKSHINA KANNADA

ಅಕ್ಕಿಯಲ್ಲಿ ಕೀಟಗಳಿದ್ದರೆ ಅದನ್ನು ದೂರ ಮಾಡಲು ಹೀಗೆ ಮಾಡಿ…!

Published

on

ಮಂಗಳೂರು: ಅಕ್ಕಿ ಹೆಚ್ಚಿನವರ ಆಹಾರ ಪದಾರ್ಥಗಳಲ್ಲಿ ಒಂದಾಗಿದೆ. ಹೀಗಾಗಿ ಅಕ್ಕಿಯಿಂದ ವಿವಿಧ ತಿಂಡಿ ತಿನಿಸುಗಳನ್ನು ತಯಾರಿಸಿ ಸೇವಿಸುತ್ತಾರೆ. ಆದರೆ ಈ ಅಕ್ಕಿಯನ್ನು ಹೆಚ್ಚು ದಿನಗಳವರೆಗೆ ಸಂಗ್ರಹಿಸಿಡುವುದು ಸ್ವಲ್ಪ ಕಷ್ಟವೇ. ಕೆಲವೊಮ್ಮೆ ಮಾಡುವ ಸಣ್ಣ ಪುಟ್ಟ ತಪ್ಪುಗಳಿಂದ ಅಕ್ಕಿಯಲ್ಲಿ ಹುಳಗಳು ಹಾಗೂ ಕೀಟಗಳು ಕಾಣಿಸಿಕೊಳ್ಳುತ್ತವೆ. ಹೀಗಾಗಿ ಮನೆಯಲ್ಲೇ ಸುಲಭವಾದ ವಿಧಾನವನ್ನು ಬಳಸಿ ಹುಳಗಳು ಹಾಗೂ ಕೀಟಗಳಿಂದ ಅಕ್ಕಿಯನ್ನು ದೀರ್ಘಕಾಲದವರೆಗೆ ಸಂಗ್ರಹಿಸಿಡಬಹುದಾಗಿದೆ.

ಅಕ್ಕಿಯಲ್ಲಿ ವಿವಿಧ ಜೀವಸತ್ವಗಳು ಮತ್ತು ಖನಿಜಗಳು ಹೇರಳವಾಗಿದ್ದು, ವಿಟಮಿನ್ ಡಿ, ಕ್ಯಾಲ್ಸಿಯಂ, ಫೈಬರ್, ಕಬ್ಬಿಣ, ಥಯಾಮಿನ್ ಮತ್ತು ರಿಬೋಫ್ಲಾವಿನ್ ಗಳಿವೆ. ಕೆಲವರು ಮನೆಯಲ್ಲಿ ಅಕ್ಕಯನ್ನ ಶೇಖರಿಸಿ ಇಟ್ಟರೂ ಕೀಟಗಳು ಹಾಗೂ ಹುಳಗಳ ಬಾಧೆ ತಪ್ಪಿದ್ದಲ್ಲ. ಅಕ್ಕಿಗೆ ಕೀಟಬಾಧೆ ಬಾರದಂತೆ ರಾಸಾಯನಿಕ ಮಿಶ್ರಿತ ಪೌಡರ್ ಬಳಸಿದರೆ ಅನೇಕ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ.

  • ಅಕ್ಕಿಯನ್ನು ಸಂಗ್ರಹಿಸುವ ಪ್ರದೇಶವು ಶುಷ್ಕವಾಗಿಟ್ಟುಕೊಳ್ಳಿ. ಅಕ್ಕಿಯ ಚೀಲದಲ್ಲಿ ಮಸಾಲೆ ಪದಾರ್ಥಗಳನ್ನು ಇಟ್ಟರೆ ಕೀಟಗಳು ಬರುವುದಿಲ್ಲ. ಕರ್ಪೂರ, ಇಂಗು, ಲವಂಗ, ದಾಲ್ಚಿನ್ನಿ, ಬಿರಿಯಾನಿ ಎಲೆಗಳು ಮತ್ತು ನಕ್ಷತ್ರದ ಹೂವುಗಳನ್ನು ಕವರ್‌ನಲ್ಲಿ ಹಾಕಿ ಅಕ್ಕಿ ಚೀಲಗಳಲ್ಲಿ ಹಾಕಿಟ್ಟರೆ ದೀರ್ಘಕಾಲದವರೆಗೆ ಯಾವುದೇ ಕೀಟಗಳು ಬಾರದಂತೆ ಸಂರಕ್ಷಿಸಿಡಬಹುದು.
  • ಅಕ್ಕಿಯನ್ನು ಕೀಟಗಳಿಂದ ಮುಕ್ತವಾಗಿಡುವಲ್ಲಿ ಬೇವು ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ. ಇದು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದ್ದು, ಬಹಳಷ್ಟು ಪರಿಣಾಮಕಾರಿಯಾಗಿದೆ.
  • ಅಕ್ಕಿ ಚೀಲಗಳಲ್ಲಿ ಬೆಳ್ಳುಳ್ಳಿ ಮತ್ತು ಉಪ್ಪನ್ನು ಹಾಕಿಟ್ಟರೆ ಅಕ್ಕಿಗೆ ಕೀಟಗಳು ಬರದಂತೆ ನೋಡಿಕೊಳ್ಳಬಹುದು. ಸಿಪ್ಪೆ ಸುಲಿದ ಬೆಳ್ಳುಳ್ಳಿ ಹಾಗೂ ಉಪ್ಪನ್ನು ಕವರ್ ನಲ್ಲಿಟ್ಟು ಅಕ್ಕಿಯ ಶೇಖರಣೆಯಲ್ಲಿಟ್ಟರೆ ಕೀಟಗಳು ಬರುವುದಿಲ್ಲ.
  • ಅಕ್ಕಿ ಚೀಲದಲ್ಲಿ ತುಳಸಿ ಎಲೆಗಳನ್ನು ಇರಿಸಿದರೆ ಹುಳಗಳು ಬೇಗನೇ ಆಗುವುದಿಲ್ಲ.
  • ಒಂದು ವೇಳೆ ಅಕ್ಕಿಯಲ್ಲಿ ಹುಳಗಳು ಆಗಿದ್ದರೆ ಆ ಅಕ್ಕಿಯನ್ನು ಗಾಳಿಯಾಡದ ಕವರ್‌ನಿಂದ ಹಾಕಿಟ್ಟು 3-4 ದಿನಗಳವರೆಗೆ ಫ್ರಿಜ್‌ನಲ್ಲಿ ಇಟ್ಟರೆ ಕೀಟಗಳು ಹಾಗೂ ಹುಳಗಳು ಸಾಯುತ್ತವೆ.
Continue Reading

FILM

ಮಲತಂದೆಯಿಂದ ಹತ್ಯೆಯಾದ ಜಗ್ಗೇಶ್ ಸಿನೆಮಾ ನಟಿ..! 13 ವರ್ಷದ ಬಳಿಕ ಮಹತ್ವದ ತೀರ್ಪು

Published

on

ಮಂಗಳೂರು: ಜಗ್ಗೇಶ್ ಸಿನೆಮಾದ ನಾಯಕಿ ಲೈಲಾ ಖಾನ್ ಹತ್ಯೆ ಪ್ರಕರಣ್ಕಕೆ 13 ವರ್ಷಗಳ ಬಳಿಕ ಮಹತ್ವದ ತೀರ್ಪು ಹೊರಬಂದಿದೆ.  ಲೈಲಾ ಖಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮುಂಬೈ ಸೆಷನ್ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಲೈಲಾ ಮಲತಂದೆ ಪರ್ವೀನ್ ಪ್ರಕರಣದ ದೋಷಿ ಎಂದು ಕೋರ್ಟ್ ತೀರ್ಪು ಪ್ರಕಟಿಸಿದೆ.

laila khan

2011ರ ಫೆಬ್ರವರಿಯಲ್ಲಿ ಮುಂಬೈಯ ಇಗ್ತಪುರಿಯಲ್ಲಿರುವ ಬಂಗಲೆಯಲ್ಲಿ ನಟಿ ಲೈಲಾ ಖಾನ್ ಹಾಗೂ ಆಕೆಯ ತಾಯಿ ಸೆಲೀನಾ ಹಾಗೂ ನಾಲ್ವರು ಒಡಹುಟ್ಟಿದವರು ಸೇರಿ ಒಟ್ಟು 6 ಮಂದಿಯನ್ನು ಪರ್ವೀನ್ ತಾಕ್ ಬರ್ಬರವಾಗಿ ಹತ್ಯೆ ಮಾಡಿದ್ದ. ಅಚ್ಚರಿ ಎಂದರೆ ಪರ್ವೀನ್ ತಾಕ್ ಲೈಲಾ ಖಾನ್‌ ತಾಯಿ ಸೆಲೀನಾ ಅವರ ಮೂರನೇ ಪತಿ. ಲೈಲಾ ತಾಯಿ ಸೆಲೀನಾರವರ ಜಮೀನಿಗೆ ಸಂಬಂಧಪಟ್ಟು ಈ ಕೃತ್ಯ ನಡೆದಿದೆ. ತಾಯಿ, ಲೈಲಾ ಸೇರಿದಂತೆ ನಾಲ್ವರು ಒಡಹುಟ್ಟಿದವರನ್ನು ಪೆರವಿನ್ ಬರ್ಬರ ಹತ್ಯೆಗೈದು ಪರಾರಿಯಾಗಿದ್ದ. 20212ರಲ್ಲಿ ಈತನನ್ನು ಬಂಧಿಸಲಾಗಿತ್ತು. ಇದೀಗ ಕೋರ್ಟ್ ಪೆರ್ವಿನನ್ನು ದೋಷಿ ಎಂದು ತೀರ್ಮಾನಿಸಿದ್ದು, ಮೇ.14ರಂದು ಶಿಕ್ಷೆ ಪ್ರಕಟವಾಗಲಿದೆ.

ಮುಂದೆ ಓದಿ..;  ಇಂಡೊನೇಷಿಯಾದಲ್ಲಿ ತುಳು ಮಾತನಾಡಿದ ಡಾ ಬ್ರೋ..! ಸಖತ್ ವೈರಲ್ ಆಯ್ತು ವೀಡಿಯೋ

ಘಟನೆ ವಿವರ:

ಲೈಲಾ ಖಾನ್, ಆಕೆಯ ತಾಯಿ ಸೆಲೀನಾ ಮತ್ತು ಒಡಹುಟ್ಟಿದವರಾದ ಆಮಿನಾ ಅವಳಿಗಳಾದ ಝಾರ, ಇಮ್ರಾನ್, ಕಸಿನ್ ರೇಷ್ಮಾ ನಾಪತ್ತೆಯಾಗಿದ್ದರೆಂದು 2011ರಲ್ಲಿ ಲೈಲಾ ಖಾನ್ ತಂದೆ ನಾದಿರ್ ಪಟೇಲ್ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಹಿನ್ನೆಲೆ ಪೊಲೀಸರು ತನಿಖೆ ಆರಂಭ ಮಾಡ್ತಾರೆ. ನಾಸಿಕ್ ಬಳಿಯ ಇಗ್ತಪುರಿಯಲ್ಲಿರುವ ಕುಟುಂಬದ ತೋಟದ ಮನೆಯನ್ನು ಅಧಿಕಾರಿಗಳು ಪರಿಶೀಲಿಸಿದಾಗ ಆ ಬಂಗಲೆ ಬೆಂಕಿಯಲ್ಲಿ ಭಾಗಶಃ ಆಹುತಿಯಾಗಿತ್ತು. ಅಲ್ಲದೆ ಲೈಲಾ ಖಾನ್‌ ಅವರ ಮೊಬೈಲ್‌ ನಾಪತ್ತೆಯಾಗುವ ವೇಳೆ ನಾಸಿಕ್‌ನಲ್ಲೇ ಇತ್ತು ಎನ್ನುವುದು ಕಂಡು ಬಂದಿತ್ತು. ಇದೇ ವೇಳೆ ಲೈಲಾ ಖಾನ್‌ಗೆ ಸೇರಿದ ವಾಹನ ಜಮ್ಮು ಮತ್ತು ಕಾಶ್ಮೀರದಲ್ಲಿ ಪತ್ತೆಯಾಗಿತ್ತು. ಇನ್ನು ಲೈಲಾ ಖಾನ್ ಮಲತಂದೆ ಪರ್ವೀನ್ ತಾಕ್ ಮೂಲತಃ ಕಾಶ್ಮೀರದವನು. ಹೀಗಾಗಿ ಪೊಲೀಸರಿಗೆ ಆತನ ಮೇಲೆ ಸಂಶಯ ಇನ್ನೂ ಬಲವಾಗಿತ್ತು. ಬಳಿಕ ಆತನನ್ನು ಬಂಧಿಸಲಾಯಿತು. ಈ ವೇಳೆ ಆತ ಆಸ್ತಿ ವಿಚಾರದಲ್ಲಿ ಕೊಲೆ ಮಾಡಿರುವ ಸಂಗತಿ ಹೊರ ಬಿದ್ದಿತ್ತು. ಇನ್ನು ಪ್ರಕರಣಕ್ಕೆ ಸಂಬಂಧಿಸಿ ಸೆಲೀನಾ ಅವರ ಇಬ್ಬರು ಮಾಜಿ ಪತಿಯರು ಸೇರಿದಂತೆ ಸುಮಾರು 40 ಸಾಕ್ಷಿಗಳನ್ನು ವಿಚಾರಣೆಗೊಳಪಡಿಸಲಾಗಿತ್ತು.

ಜಗ್ಗೇಶ್ ನಟನೆಯ ಕನ್ನಡ ಸಿನೆಮಾ 2002ರಲ್ಲಿ ಬಿಡುಗಡೆಯಾದ ‘ಮೇಕಪ್’ ಚಿತ್ರದಲ್ಲಿ ಲೈಲಾ ಖಾನ್ ನಾಯಕಿಯಾಗಿ ನಕಾಣಿಸಿಕೊಂಡಿದ್ದರು. ಕನ್ನಡದಲ್ಲಿ ಇದು ಅವರ ಮೊದಲ ಹಾಗೂ ಕೊನೆಯ ಚಿತ್ರವಾಗಿದೆ. ಲೈಲಾ 2008ರಲ್ಲಿ ರಾಜೇಶ್‌ ಖನ್ನಾ ನಟನೆಯ ʼವಫಾ: ಎ ಡೆಡ್ಲಿ ಲವ್‌ ಸ್ಟೋರಿʼ ಹಿಂದಿ ಸಿನಿಮಾದಲ್ಲಿ ನಾಯಕಿಯಾಗಿದ್ದರು. ಲೈಲಾ ಬಾಂಗ್ಲಾ ದೇಶ ಮೂಲದ ಮುನೀರ್‌ ಖಾನ್‌ ಎನ್ನುವವರನ್ನು ಮದುವೆಯಾಗಿದ್ದರು ಎನ್ನಲಾಗಿದೆ.

Continue Reading

FILM

ಬದುಕುಳಿವ ಛಾನ್ಸ್ ಇದ್ದಿದ್ದು ಕೇವಲ ಶೇ. 30 ರಷ್ಟು…ನಿತ್ಯ ಜಗಳ…ಗಾಬರಿ; ನಟಿ ಸೋನಾಲಿ ಬೇಂದ್ರೆ ಕ್ಯಾನ್ಸರ್ ಗೆದ್ದ ಕಥೆ ಇಲ್ಲಿದೆ

Published

on

ಮುಂಬೈ : ಕ್ಯಾನ್ಸರ್ ಎಂಬ ಮಾರಕ ಕಾಯಿಲೆಯಿಂದ ಅನೇಕ ಮಂದಿ ಬಳಲುತ್ತಿದ್ದಾರೆ. ಕೆಲವರು ಇಹಲೋಕ ತ್ಯಜಿಸಿದ್ದಾರೆ. ಇನ್ನು ಕೆಲವರು ಕ್ಯಾನ್ಸರ್ ಗೆ ಸೆಡ್ಡು ಹೊಡೆದು ಜಯಿಸಿದವರಿದ್ದಾರೆ. ಕ್ಯಾನ್ಸರ್ ಗೆ ಸಾಮಾನ್ಯ ವ್ಯಕ್ತಿ ಮಾತ್ರವಲ್ಲ ಸೆಲೆಬ್ರಿಟಿಗಳೂ ತುತ್ತಾಗಿದ್ದಾರೆ. ಅವರಲ್ಲಿ ಸೋನಾಲಿ ಬೇಂದ್ರೆಯೂ ಒಬ್ಬರು. ಸೋನಾಲಿ ಬೇಂದ್ರೆ ಕ್ಯಾನ್ಸರ್ ನ್ನು ಜಯಿಸಿದ್ದಾರೆ.

ಧೈರ್ಯ ತುಂಬಿದ ನಟಿ :

ನಟಿ ಸೋನಾಲಿ ಬೇಂದ್ರೆ ಕ್ಯಾನ್ಸರ್ ನ್ನು ಯಶಸ್ವಿಯಾಗಿ ಜಯಿಸಿದ್ದಾರೆ. ಚಿತ್ರರಂಗದಲ್ಲಿ ತೊಡಗಿಕೊಂಡಿದ್ದಾರೆ. ಆರು ವರ್ಷಗಳ ಹಿಂದೆ ಸೋನಾಲಿ ಬೇಂದ್ರೆ ಅವರನ್ನು ಕ್ಯಾನ್ಸರ್ ಖಾಯಿಲೆ ಅಪ್ಪಿಕೊಂಡಿತ್ತು. ಆಗ ಆಕೆಗೆ 49 ವರ್ಷ ವಯಸ್ಸು.

ಸಾಮಾನ್ಯವಾಗಿ ಕ್ಯಾನ್ಸರ್ ಎಂದಾಕ್ಷಣ ಭಯ ಆವರಿಸಿಕೊಳ್ಳುತ್ತೆ. ಆದರೆ, ಸೋನಾಲಿ ಧೃತಿಗೆಡಲಿಲ್ಲ. ಯಾವಾಗ ತನಗೆ ಕ್ಯಾನ್ಸರ್ ಇದೆ ಅಂತ ಗೊತ್ತಾಗಿತ್ತೋ ಅಂದೇ ಆಕೆ ತನ್ನ ಪರಿಸ್ಥಿತಿ ಮತ್ತು ಗುಣಮುಖವಾಗುವ ವಿಚಾರವಾಗಿ ಬಹಿರಂಗವಾಗಿ ಚರ್ಚೆ ಮಾಡಿದ್ದರು. ಆ ಮೂಲಕ ಕ್ಯಾನ್ಸರ್ ಪೀಡಿತರಿಗೂ ಧೈರ್ಯ ತುಂಬುವ ಕೆಲಸವನ್ನು ಮಾಡಿದ್ದರು.

ಇದೀಗ ಸೊನಾಲಿ ಬೇಂದ್ರೆ ಮೇ 3 ರಂದು ಆರಂಭವಾಗಿರುವ ಝೀ ಟಿವಿಯ ದಿ ಬ್ರೋಕನ್ ನ್ಯೂಸ್ 2 ನೊಂದಿಗೆ ಮತ್ತೆ ಕ್ಯಾಮೆರಾ ಮುಂದೆ ಕಾಣಿಸಿದ್ದಾರೆತಾನು ಕ್ಯಾನ್ಸರ್ ಜೊತೆ ಹೇಗೆ ಹೋರಾಡಿದೆ ಎಂಬುದರ ಕುರಿತು ಆಕೆ ಬಹಿರಂಗವಾಗಿ ಮಾತನಾಡಿದ್ದಾರೆ.

ನಿತ್ಯ ಜಗಳ…ಗಾಬರಿ…ಕ್ಯಾನ್ಸರ್ ಜಯಿಸಿದ್ದು ಹೇಗೆ?

ಕ್ಯಾನ್ಸರ್ ನಿಂದ ಬಳಲಿದ ನಟಿ ಗುಣಮುಖರಾಗಿದ್ದು ಹೇಗೆ ಅನ್ನೋದನ್ನು ಸಂದರ್ಶನವೊಂದರಲ್ಲಿ ಬಹಿರಂಗವಾಗಿಯೇ ಹೇಳಿದ್ದಾರೆ. ರಿಯಾಲಿಟಿ ಶೋ ಚಿತ್ರೀಕರಣದ ಸಮಯದಲ್ಲಿ ನನಗೆ ಕ್ಯಾನ್ಸರ್ ಇದೆ ಅನ್ನೋದು ಗೊತ್ತಾಗಿತ್ತು. ನನಗೆ ಇದು ಆಶ್ಚರ್ಯದ ವಿಚಾರವಾಗಿದ್ದು, ನನಗೆ ಕ್ಯಾನ್ಸರ್ ಹೇಗೆ ಬಂತು ಅನ್ನೋ ಗೊಂದಲಕ್ಕೆ ಬಿದ್ದಿದ್ದೆ. ಆರಂಭದಲ್ಲಿ ಇದೊಂದು ಆರಂಭ ಅಂತ ಗಾಬರಿಯಾಗಿಲ್ಲವಾದ್ರೂ ಪರೀಕ್ಷೆಗಳು ಮುಂದುವರೆದಾಗ ಇದು ಗಂಭೀರ ಅನ್ನೋದು ಗೊತ್ತಾಗಿತ್ತು. ನನ್ನ ಪತಿ ಮತ್ತು ವೈದ್ಯರ ಮುಖದಲ್ಲೂ ಆ ಗಾಬರಿಯನ್ನು ನಾನು ಗುರುತಿಸಿದ್ದೆ. ಕ್ಯಾನ್ಸರ್ ನನ್ನ ದೇಹವನ್ನು ವ್ಯಾಪಿಸಿಕೊಂಡಿದೆ ಅನ್ನೋದು ನನಗೆ ಆಗ ಸ್ಪಷ್ಟವಾಗಿ ಅರ್ಥವಾಗಿತ್ತು.

ಕ್ಯಾನ್ಸರ್ ಇದೆ ಅಂತ ಗೊತ್ತಾದಾಗಿನಿಂದ ಸೊನಾಲಿ ಬೇಂದ್ರೆ ಭಯವನ್ನು ದೂರಮಾಡಲು ಉಪಾಯ ಹೂಡಿದ್ದರು. ಅದೇ ನಿದ್ದೆ ಮಾಡುವುದು. ನಿದ್ರೆ ಮಾಡುವ ಮೂಲಕ ಅವರು ಕ್ಯಾನ್ಸರ್ ಭಯವನ್ನು ಮನಸ್ಸಿನಿಂದ ಕಿತ್ತು ಹಾಕಲು ಪ್ರಯತ್ನಪಟ್ಟಿದ್ದರಂತೆ. ಇನ್ನು ಮಾನಸಿಕವಾಗಿ ಕುಗ್ಗಿ ಹೋಗಿದ್ದ ಕಾರಣ ಮನೆಯಲ್ಲಿ ನಿತ್ಯ ಜಗಳ ನಡೆಯುತ್ತಿತ್ತು.

ಇದನ್ನೂ ಓದಿ : “ನಿವೇದಿತಾಜೈನ್”ಗೆ ಸಾ*ವಿನ ಸುಳಿವು ಮೊದಲೇ ಇತ್ತಾ.!? ಈಬಗ್ಗೆ ನಿವೇದಿತಾ ತಾಯಿ ಹೇಳಿದ್ದೇನು ಗೊತ್ತಾ?

ಮಗುವನ್ನು ಬಿಟ್ಟು ವಿದೇಶಕ್ಕೆ ಚಿಕಿತ್ಸೆಗೆ ಹೋಗಬೇಕಾಗಿ ಬಂದ ದಿನ ಬಹಳ ದುಃಖಕರವಾಗಿತ್ತು ಎಂದಿದ್ದಾರೆ. ನಾನು ಬದುಕುವುದು ಕೇವಲ 30 ಶೇಕಡಾ ಮಾತ್ರ ಇದೆ ಅಂತ ಗೊತ್ತಾದಾಗ ವೈದ್ಯರ ಜೊತೆ ತಾಳ್ಮೆ ಕಳೆದುಕೊಂಡಿದ್ದೆ ಎಂದು ಹೇಳಿದ್ದಾರೆ.
ನಾನು ವೈದ್ಯರಲ್ಲಿ ಪದೇ ಪದೇ ನನಗೆ ಕ್ಯಾನ್ಸರ್ ಬರಲು ಹೇಗೆ ಸಾಧ್ಯ ಎಂದು ಕೇಳುತ್ತಿದ್ದೆ. ಆದ್ರೆ ಅವರು ನನಗೆ ನಿಧಾನವಾಗಿ ಎಲ್ಲಾ ಸತ್ಯಗಳನ್ನು ಹೇಳುತ್ತಿದ್ದರು. ಆ ಕಾರಣದಿಂದ ನನ್ನನ್ನು ನಾನು ಬದಲಾಯಿಸಿಕೊಂಡೆ ಎಂದು ಹೇಳಿದ್ದಾರೆ.

ಬಳಿಕ ಚಿಕಿತ್ಸೆಯನ್ನು ಮುಂದುವರೆಸಿದ್ದ ಸೊನಾಲಿ ಬೇಂದ್ರೆ ದೇಹ ಸಾಕಷ್ಟು ಜರ್ಜರಿತವಾಗಿತ್ತು ಎಂದು ತಿಳಿಸಿದ್ದಾರೆ. ಇದೀಗ ಕ್ಯಾನ್ಸರ್ ನ್ನು ಗೆದ್ದು ಬಂದಿದ್ದಾರೆ. ಮತ್ತೆ ತೆರೆಯ ಮೇಲೆ ಕಾಣಿಸಿಕೊಂಡಿದ್ದಾರೆ. ತಮ್ಮ ಕ್ಯಾನ್ಸರ್ ಅನುಭವವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.

Continue Reading

LATEST NEWS

Trending