LATEST NEWS
ಶ್ರೀ ಕುಂದೇಶ್ವರ ಸಮ್ಮಾನ್ ಪ್ರಶಸ್ತಿ ಪ್ರದಾನ – ತುಳುನಾಡಿನ ದೈವ ಧರ್ಮ, ಸಂಸ್ಕೃತಿ ಅನನ್ಯ: ಮುತಾಲಿಕ್
ಕಾರ್ಕಳ: ಕಲಾ ಸವ್ಯಸಾಚಿ ಪ್ರಶಾಂತ್ ಸಿ.ಕೆ. ಅವರಿಗೆ ಹಿರ್ಗಾನ ಕುಂದೇಶ್ವರ ಕ್ಷೇತ್ರದಿಂದ ಶ್ರೀ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಪ್ರಶಸ್ತಿ ಪ್ರದಾನ ಮಾಡಿದ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಮಾತನಾಡಿ, ಕರಾವಳಿಯ ಸಂಸ್ಕೃತಿಯು ಜಗದ್ವಿಖ್ಯಾತವಾಗುತ್ತಿದೆ.
ದೈವ, ಆಧ್ಯಾತ್ಮ, ಭಜನೆ. ಪೂಜೆ ಪುನಸ್ಕಾರಗಳಿಂದಾಗಿ ಕರಾವಳಿ ನಿಜವಾಗಿಯೂ ದೇವರನಾಡು. ಕರಾವಳಿಯಲ್ಲಿ ಭಜನೆ ಮೂಲಕ ಆಧ್ಯಾತ್ಮಿಕ ವಿಚಾರಧಾರೆ ಪಸರಿಸುತ್ತಿವೆ.
ಒಂದಿಲ್ಲ ಒಂದು ಕಾರ್ಯಕ್ರಮಗಳಿಂದ ವರ್ಷವಿಡೀ ಹಬ್ಬದಂತೆ ಆಚರಿಸುವ ಪುಣ್ಯ ಕ್ಷೇತ್ರಕ್ಕೆ ಆಕಸ್ಮಿಕವಾಗಿ ಬಂದೆ ಕುಂದೇಶ್ವರ ದರ್ಶನದಿಂದ ಪುನೀತನಾದೆ ಎಂದರು.
ಗುರುರಕ್ಷಾ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಮಂಜುನಾಥ ಪೂಜಾರಿಮಾತನಾಡಿ, ಹಿಂದೆಲ್ಲ ಯಕ್ಷಗಾನದ ಮೂಲಕ ಪುರಾಣ, ಮಹಾಗ್ರಂಥಗಳ ಸಾರವನ್ನು ತಿಳಿದುಕೊಳ್ಳುತ್ತಿದ್ದೆವು.
ದೇಶದ ಜನರನ್ನು ಸೆಳೆಯುತ್ತಿರುವ ತುಳುನಾಡು ಸಾಂಸ್ಕೃತಿಕವಾಗಿ, ಧಾರ್ಮಿಕವಾಗಿ ಹಿಂದುಗಳ ಪುಣ್ಯಭೂಮಿ ಆಗಿದೆ ಎಂದರು.
ಕಾರ್ಯಕ್ರಮ ಸಂಯೋಜಕ ಜಿತೇಂದ್ರ ಕುಂದೇಶ್ವರ ಅಭಿನಂದನಾ ಭಾಷಣ ಮಾಡಿ, ಯಕ್ಷಗಾನ, ನಾಟಕ, ಸಿನಿಮಾ ಕ್ಷೇತ್ರದಲ್ಲಿ ರಚನೆಕಾರ, ನಿರ್ದೇಶಕ, ಕಲಾವಿದನಾಗಿ, ಕಿರುತೆರಯಲ್ಲಿ ಹಾಸ್ಯ ಧಾರವಾಹಿಗಳ ನಿರ್ದೇಶಕನಾಗಿ ಹಾಸ್ಯ ಕಲಾವಿದನಾಗಿ ಕರಾವಳಿಯಾದ್ಯಂತ ಜನಮೆಚ್ಚುಗೆ ಗಳಿಸುತ್ತಿರುವ ಪ್ರತಿಭೆಯ ಖನಿ ಪ್ರಶಾಂತ್ ಸಿ.ಕೆ. ಅವರಿಗೆ ಇನ್ನೂ ಹೆಚ್ಚಿನ ಪ್ರೋತ್ಸಾಹ ಸಿಕ್ಕರೆ ದೇಶಾದ್ಯಂತ ಮನ್ನಣೆಗಳಿಸುವುದರಲ್ಲಿ ಸಂಶಯ ಇಲ್ಲ ಎಂದರು.
ಪ್ರಶಸ್ತಿ ಸ್ವೀಕರಿಸಿದ ಕಲಾ ಸವ್ಯಸಾಚಿ ಪ್ರಶಾಂತ್ ಸಿ.ಕೆ. ಮಾತನಾಡಿ, ನನ್ನ ತಂದೆ -ತಾಯಿ, ಪತ್ನಿ, ಮಕ್ಕಳ ತ್ಯಾಗವಿದೆ. ನನ್ನ ಜತೆ, ಗುರುಗಳು, ಹಿರಿಯರು, ಕಿರಿಯರು ನನ್ನ ಕಲಾಬದುಕಿನಲ್ಲಿ ಬೆನ್ನೆಲುಬಾಗಿ ನಿಂತಿದ್ದಾರೆ.
ನನ್ನ ಕಲಾಸೇವೆ ಗುರುತಿಸಿ ಈ ಮಹಾನ್ ಪ್ರಶಸ್ತಿಗೆ ಆಯ್ಕೆ ಮಾಡಿದವರಿಗೆ ಕೃತಜ್ಞತೆಗಳು ಎಂದರು.
ಕೆ.ಪಿ. ಲಕ್ಷ್ಮೀನಾರಾಯಣ ಪ್ರಾರ್ಥಿಸಿದರು. ಧರ್ಮದರ್ಶಿ ಕೃಷ್ಣರಾಜೇಂದ್ರ ಭಟ್, ವೇದಮೂರ್ತಿ ರವೀಂದ್ರ ಭಟ್, ಉದ್ಯಮಿ ಸಿರಿಯಣ್ಣ ಶೆಟ್ಟಿ, ಪ್ರಗತಿಪರ ಕೃಷಿಕ ಸತೀಶ್ ಭಟ್ ಕುಂದೇಶ್ವರ, ಕದ್ರಿ ಯಕ್ಷಕೂಟ ಸಂಚಾಲಕ ರಾಮಚಂದ್ರ ಭಟ್ ಎಲ್ಲೂರು, ಸುಧೀಂದ್ರ ಭಟ್, ಕುಂಜತ್ತೋಡಿ ವಾಸುದೇವ ಭಟ್ ಕದ್ರಿ, ಗ್ರಾಮಪಂಚಾಯಿತಿ ಸದಸ್ಯರ ಮಹಾವೀರ ಕಟ್ಟಡ, ಗಂಗಾ ಆರ್.ಭಟ್, ರಂಜಿನಿ, ರಂಗಿಣಿ ಉಪೇಂದ್ರ ರಾವ್, ಇದ್ದರು.
ಹಿರಣ್ಯಾಕ್ಷ ಹಿರಣ್ಯ ಕಶಿಪು ಕನ್ನಡ- ತುಳು ಯಕ್ಷಗಾನ ನಡೆಯಿತು. ಪ್ರಾಪ್ತಿ ಕಲಾವಿದೆರ್ ಕುಡ್ಲ ತಂಡದವರಿಂದ ಮಾಯದಪ್ಪೆ ಮಂತ್ರದೇವತೆ ತುಳು ನಾಟಕ ನಡೆಯಿತು.
ದಕ್ಷಿಣ ಕನ್ನಡ ಜಿಲ್ಲಾ ಹೋಮ್ಗಾರ್ಡ್ ಕಮಾಂಡೆಂಟ್ ಡಾ.ಮುರಲೀ ಮೋಹನ ಚೂಂತಾರು, ಉದಯಕೃಷ್ಣ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮುನಿಯಾಲು ಉದಯಕುಮಾರ್ ಶೆಟ್ಟಿ, ಹಿರ್ಗಾನ ಗ್ರಾಮಪಂಚಾಯಿತಿ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಕ್ಷೇತ್ರಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ಕ್ಷೇತ್ರದಲ್ಲಿ ಮೂರು ದಿನಗಳ ಕಾಲ ವರ್ಷಾವಧಿ ಜಾತ್ರೆ, ರಂಗಪೂಜೆ, ದರ್ಶನ ಬಲಿ, ನೇಮೋತ್ಸವ, ಕಟ್ಟೆಪೂಜೆ ಸಂಭ್ರಮದಿಂದ ನಡೆಯಿತು.
ಹಿರ್ಗಾನ ಶ್ರೀ ಕುಂದೇಶ್ವರ ಕ್ಷೇತ್ರದಲ್ಲಿ ಕಲಾ ಸವ್ಯಸಾಚಿ ಪ್ರಶಾಂತ್ ಸಿ.ಕೆ. ಅವರಿಗೆ ಕುಂದೇಶ್ವರ ಸಮ್ಮಾನ್ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಮೋದ್ ಮುತಾಲಿಕ್, ಮಂಜುನಾಥ ಪೂಜಾರಿ, ಜಿತೇಂದ್ರ ಕುಂದೇಶ್ವರ ಇದ್ದರು.
ಕಾರ್ಕಳ ಹಿರ್ಗಾನ ಶ್ರೀ ಕುಂದೇಶ್ವರ ಕ್ಷೇತ್ರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹಿರಣ್ಯಾಕ್ಷ ಹಿರಣ್ಯ ಕಶಿಪು ಯಕ್ಷಗಾನ ನಡೆಯಿತು.
ಕಾರ್ಕಳ ಹಿರ್ಗಾನ ಶ್ರೀ ಕುಂದೇಶ್ವರ ಕ್ಷೇತ್ರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಾಯದಪ್ಪೆ ಮಂತ್ರದೇವತೆ ತುಳು ನಾಟಕ ನಡೆಯಿತು.
DAKSHINA KANNADA
ನರ್ಸ್ಗೆ ಶಾಕ್ ನೀಡಿದ ಅಂಬ್ಯುಲೆನ್ಸ್..! ಇದು ಮನಕಲಕುವ ಘಟನೆ..!
ನಿರಂಜಿನಿ… ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೆವಿಜಿ ಮೆಡಿಕಲ್ ಕಾಲೇಜಿನಲ್ಲಿರೋ ಆಸ್ಪತ್ರೆಯ ತುರ್ತು ಸೇವಾ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಯುವತಿ. ಮುಂಜಾನೆ ಆಸ್ಪತ್ರೆಗೆ ಬಂದ್ರೆ ಡ್ಯೂಟಿ ಮುಗಿಸಿ ಮತ್ತೆ ಮನೆಗೆ ವಾಪಾಸಾಗೋದು ಸಂಜೆಯ ವೇಳೆಗೆ. ಆಸ್ಪತ್ರೆಯಲ್ಲಿರೋ ಆಕೆಗೆ ಸಾವು ನೋವು ಎಲ್ಲವನ್ನೂ ನೋಡಿ ಅಭ್ಯಾಸ ಆಗಿದೆ. ಆದ್ರೆ ಇಂದು ಮಾತ್ರ ಅಂಬ್ಯುಲೆನ್ಸ್ನಲ್ಲಿ ಬಂದಿರೋ ಮೃತ ದೇಹ ನೋಡಿ ಆಕೆಯ ಆಕ್ರಂದನ ಮುಗಿಲು ಮುಟ್ಟಿದೆ. ಆಕೆಯ ಆಕ್ರಂದನ ನೋಡಿ ಶಾಕ್ ಆದ ಇತರ ಸಿಬ್ಬಂದಿ ವಿಚಾರ ತಿಳಿದ ಬಳಿಕ ತಾವೂ ಕಂಬನಿ ಮಿಡಿದಿದ್ದಾರೆ.
ಇಂದು ನಿರಂಜಿನಿ ಆಸ್ಪತ್ರೆಗೆ ಬಂದು ತುರ್ತು ಚಿಕಿತ್ಸಾ ವಿಭಾಗದಲ್ಲಿ ಡ್ಯೂಟಿಯಲ್ಲಿದ್ದ ವೇಳೆ ಅಂಬ್ಯುಲೆನ್ಸ್ ಒಂದು ವೇಗವಾಗಿ ಬಂದು ಗಂಭೀರವಾಗಿದ್ದ ಇಬ್ಬರನ್ನು ತುರ್ತು ಚಿಕಿತ್ಸಾ ವಿಭಾಗಕ್ಕೆ ಶಿಫ್ಟ್ ಮಾಡಿದೆ. ದೇಹ ಜರ್ಜರಿತವಾಗಿದ್ದ ಒಂದು ದೇಹವನ್ನು ಅಂಬ್ಯುಲೆನ್ಸ್ನಿಂದ ಇಳಿಸಿದಾಗ ಅದಾಗಲೇ ಆ ವ್ಯಕ್ತಿಯ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಮತ್ತೊಂದು ಮಹಿಳೆಯೂ ಗಂಭೀರವಾಗಿದ್ದು ತಕ್ಷಣ ಅವರನ್ನು ತುರ್ತು ಚಿಕಿತ್ಸೆಗೆ ದಾಖಲಿಸಲಾಗಿತ್ತು. ಈ ವೇಳೆ ಮೃತ ದೇಹವನ್ನು ನೋಡಿದ ನಿರಂಜನಿ ಇದ್ದಕ್ಕಿದ್ದಂತೆ ಜೋರಾಗಿ ಅಳಲು ಆರಂಭಿಸಿದ್ದಾಳೆ. ಆಕೆಯ ಅಳುವಿಗೆ ಕಾರಣವಾಗಿದ್ದು ಅಲ್ಲಿದ್ದ ಮೃತ ದೇಹ ಆಕೆಯ ತಂದೆಯದೇ ಆಗಿದ್ದು.
ಮುಂಜಾನೆ ತಂದೆ ತಾಯಿ ಇಬ್ಬರೂ ಅಜ್ಜಾವರ ಗ್ರಾಮದಲ್ಲಿನ ಕೆಎಫ್ಡಿಸಿಗೆ ಕೆಲಸಕ್ಕೆ ಹೋಗಿ ವಾಪಾಸಾಗುವಾಗ ಜೀಪ್ ಒಂದು ಇವರ ಬೈಕ್ಗೆ ಡಿಕ್ಕಿ ಹೊಡೆದಿದೆ. ಜೀಪ್ ಅಡಿಗೆ ಬಿದ್ದಿದ್ದ ತಂದೆ ವಿನಾಯಕ ಮೂರ್ತಿ ಮೃ*ತ ಪಟ್ಟಿದ್ದರೆ, ತಾಯಿ ಮಂಜುಳ ಕೂಡಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಆದ್ರೆ ಇದ್ಯಾವುದು ವಿಚಾರ ಗೊತ್ತಿಲ್ಲದ ನಿರಂಜಿನಿ ಎಂದಿನಂತೆ ಇದೂ ಒಂದು ಅಕ್ಸಿಡೆಂಟ್ ಕೇಸ್ ಅಂತ ಅಟೆಂಡ್ ಮಾಡಲು ಹೋಗಿದ್ದಾಳೆ. ಅಂಬ್ಯುಲೆನ್ಸ್ನಲ್ಲಿ ತಂದೆಯ ಮೃತ ದೇಹ ಹಾಗೂ ಪ್ರಜ್ಞಾ ಹೀನ ಸ್ಥಿತಿಯಲ್ಲಿ ತಾಯಿಯನ್ನ ನೋಡಿದ್ರೆ ಮಗಳ ಪರಿಸ್ಥಿತಿ ಹೇಗಿರಬಹುದು ಅನ್ನೋದು ಊಹಿಸಲೂ ಅಸಾದ್ಯ. ತಾಯಿ ಮಂಜುಳ ಪರಿಸ್ಥಿತಿ ಕೂಡಾ ಗಂಭೀರವಾಗಿದ್ದು, ಬೆನ್ನು ಮೂಳೆಗೆ ಗಾಯವಾದ ಮಾಹಿತಿ ಇದೆ. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
LATEST NEWS
ಹೋಟೆಲ್ನಲ್ಲಿ ಅ*ಗ್ನಿ ದುರಂತ; 6 ಮಂದಿ ಸಜೀವ ದ*ಹನ
ಪಾಟ್ನಾ: ಹೋಟೆಲ್ವೊಂದರಲ್ಲಿ ಆಕಸ್ಮಿಕವಾಗಿ ಬೆಂ*ಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ 6 ಜನರು ಸಜೀವವಾಗಿ ದಹನಗೊಂಡು ಸಾ*ವನ್ನಪ್ಪಿದ್ದು ಹಲವು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಬಿಹಾರದ ಪಾಟ್ನಾದ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.
ರೈಲು ನಿಲ್ದಾಣದ ಸಮೀಪದ ಹೋಟೆಲ್ನಲ್ಲಿ ಬೆಂ*ಕಿ ಹೊತ್ತಿಕೊಂಡ ಪರಿಣಾಮ ಸ್ಥಳದಲ್ಲೇ 6 ಜನರು ಮೃ*ತಪಟ್ಟಿದ್ದಾರೆ. ಅಗ್ನಿಶಾಮಕ ದಳದ ಅಧಿಕಾರಿಗಳು ಮತ್ತು ಪೊಲೀಸರು ತಕ್ಷಣ ಸ್ಥಳಕ್ಕೆ ಆಗಮಿಸಿ ಹೋಟೆಲ್ ಒಳಗಿದ್ದ ಹಲವರನ್ನು ರಕ್ಷಣೆ ಮಾಡಿದ್ದಾರೆ. ಇದರಲ್ಲಿ ಗಂಭೀರವಾಗಿ ಗಾಯಗೊಂಡ ಕೆಲವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿಸಿದ್ದಾರೆ. ಬೆಂ*ಕಿಯಿಂದಾಗಿ ಹೋಟೆಲ್ನಲ್ಲಿನ ಎಲ್ಲ ವಸ್ತುಗಳೆಲ್ಲ ಸಂಪೂರ್ಣವಾಗಿ ಸುಟ್ಟು ಹೋಗಿವೆ ಎಂದು ತಿಳಿದು ಬಂದಿದೆ.
ಇನ್ನು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಅ*ಗ್ನಿ ಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಮಾಹಿತಿ ಪ್ರಕಾರ ಹೋಟೆಲ್ನಲ್ಲಿನ ಸುಮಾರು 45 ಜನರನ್ನು ಪೊಲೀಸರು ಹಾಗೂ ಅಗ್ನಿ ಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಬೆಂಕಿಯಿಂದಾಗಿ ಸುಟ್ಟಗಾಯಗಳಿಂದ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಹೇಳಿದ್ದಾರೆ ಎನ್ನಲಾಗಿದೆ.
ಹೋಟೆಲ್ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಬೆಂ*ಕಿ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಆದ್ರೆ ಈ ಬಗ್ಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಅಲ್ಲದೇ ಹೋಟೆಲ್ನಲ್ಲಿ ಸುರಕ್ಷತಾ ಮಾನದಂಡಗಳನ್ನು ಸರಿಯಾಗಿ ಅನುಸರಿಸದ ಕಾರಣ 6 ಜನರ ಸಾ*ವಿಗೆ ಕಾರಣವಾಗಿದೆ. ಸದ್ಯ ಈ ಘಟನೆ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
FILM
ಹೊಸ ಅವತಾರದಲ್ಲಿ ZEE ಕನ್ನಡ ‘ಕಾಮಿಡಿ ಕಿಲಾಡಿಗಳು’… ಸ್ಟಾರ್ ನಿರೂಪಕರು ಈಗ ಜಡ್ಜಸ್? ಏನಿದು ಟ್ವಿಸ್ಟ್?
ಬೆಂಗಳೂರು: ಜೀ ಕನ್ನಡ ವಾಹಿನಿ ವಿಭಿನ್ನ ರೀತಿಯ ಕಥೆಗಳನ್ನೊಳಗೊಂಡ ಧಾರವಾಹಿಗಳ ಜೊತೆಗೆ ರಿಯಾಲಿಟಿ ಶೋಗಳೂ ಜನರ ಮನಸ್ಸು ಗೆದ್ದಿದೆ. ಜೀ ಕನ್ನಡ ವಾಹಿನಿಯ ಅಚ್ಚು ಮೆಚ್ಚಿನ ರಿಯಾಲಿಟಿ ಶೋ ಗಳಲ್ಲಿ ಜನರನ್ನು ನಕ್ಕು ನಗಿಸುವ ರಿಯಾಲಿಟಿ ಶೋ ಅಂದ್ರೆ ಅದು ಕಾಮಿಡಿ ಕಿಲಾಡಿಗಳು… ಹೌದು, ನಗುವಿನ ಅಲೆಯಲ್ಲಿ ತೇಲಿಸಿ ಮನೆಯವರೆಲ್ಲರೂ ಒಟ್ಟಾಗಿ ಕೂತು ನೋಡುವಂತಹ ಶೋ ‘ಕಾಮಿಡಿ ಕಿಲಾಡಿಗಳು’.
ಮಾಸ್ಟರ್ ಆನಂದ್ ನಿರೂಪಣೆಯಲ್ಲಿ ಮೂಡಿ ಬರುತ್ತಿದ್ದ ಕಾರ್ಯಕ್ರಮವನ್ನು ‘ಸೈಡ್ಗಿಡ್ರಿ ನಿಮ್ ಟೆನ್ಷನ್ಗಳು, ಮತ್ತೆ ಬಂದಿದ್ದಾರೆ ಕಾಮಿಡಿ ಕಿಲಾಡಿಗಳು’ ಎಂದು ಶೋ ಆರಂಭ ಮಾಡ್ತಾ ಇದ್ದು ಕರ್ನಾಟಕವನ್ನೇ ನಗುವಿನ ಕಡಲಲ್ಲಿ ತೇಲಿಸುವುದಿತ್ತು. ಇದೀಗ ಸೀಸನ್ 5 ಪ್ರೇಕ್ಷಕರ ಮುಂದೆ ಬರುತ್ತಿದೆ. ಈಗ ಜೀ ವಾಹಿನಿ ʻಕಾಮಿಡಿ ಕಿಲಾಡಿಗಳು ಪ್ರೀಮಿಯರ್ ಲೀಗ್ʼಮೂಲಕ ನಿಮ್ಮನ್ನು ಮನರಂಜಿಸಲು ಸಿದ್ಧವಾಗಿದೆ.
ಮುಂದೆ ಓದಿ..; “ನಿತ್ಯಾಮೆನನ್” ಚಿತ್ರರಂಗದಿಂದ ‘ಬ್ಯಾನ್’ ಆಗಲು ಕಾರಣವೇನು ಗೊತ್ತಾ? ಈ ಬಗ್ಗೆ ನಿತ್ಯಾ ಹೇಳಿದ್ದೇನು?
ಪ್ರೀಮಿಯರ್ ಲೀಗ್ನಲ್ಲಿ ಇರಲಿದ್ದಾರೆ 5 ಜಡ್ಜಸ್..!
ಈ ಕಾಮಿಡಿ ಪ್ರೀಮಿಯರ್ ಲೀಗ್ನಲ್ಲಿ ಈ ಬಾರಿ ಐವರು ನಿರೂಪಕರು ಇರಲಿದ್ದಾರೆ. ಸ್ಟೇಜ್ನಲ್ಲಿ ಕಂಟೆಂಸ್ಟೆಂಟ್ಗಳ ಕುರಿತು ಜಡ್ಜಸ್ ಗಳಲ್ಲಿ ಕಮೆಂಟ್ಸ್ ಕೆಳ್ತಾ ಇದ್ದ ನಿರೂಪಕರು ಈಗ ತಾವೇ ಜಡ್ಜ್ಮೆಂಟ್ ನೀಡಲು ಹೊರಟಿದ್ದಾರೆ. ಹೌದು, ನಿರೂಪಕರುಗಳಾದ ಅನುಶ್ರೀ, ಮಾಸ್ಟರ್ ಆನಂದ್, ಅಕುಲ್ ಬಾಲಾಜಿ, ಶ್ವೇತಾ ಚಂಗಪ್ಪ ಹಾಗೂ ಕುರಿ ಪ್ರತಾಪ್ ಅವರು ಈ ಕಾರ್ಯಕ್ರಮದಲ್ಲಿ ಹೊಸ ಜವಾಬ್ದಾರಿಯನ್ನು ನಿಭಾಯಿಸಲಿದ್ದಾರಂತೆ.
5 ತಂಡಗಳು.. 1 ಟ್ರೋಫಿಗಾಗಿ ಗುದ್ದಾಟ..!
ಮೂಲಗಳ ಪ್ರಕಾರ ಈ ಬಾರಿಯ ಶೋನಲ್ಲಿ ಟಿ-20 ರೀತಿಯಲ್ಲಿ ಹೇಗೆ ತಂಡಗಳು, ಮಾಲೀಕರು , ಕ್ಯಾಪ್ಟನ್ಗಳು ಇರುತ್ತಾರೋ ಅದೇ ರೀತಿ ಇಲ್ಲಿಯೂ ಇರಲಿದೆ. ಕರ್ನಾಟಕದ 31 ಜಿಲ್ಲೆಗಳಿಂದ ಆಯ್ಕೆ ಮಾಡಿ ತಂದ ಕಲಾವಿದರನ್ನು ಮೆಗಾ ಆಕ್ಷನ್ ಮೂಲಕ ತಮ್ಮ ತಂಡಗಳಿಗೆ ಸೇರಿಸಿಕೊಳ್ಳಲಾಗುವುದು. 5 ತಂಡಗಳು 1 ಟ್ರೋಫಿಗಾಗಿ ಗುದ್ದಾಟ ನಡೆಸಲಿದೆ. ಈ ಶೋ ವಾರಾಂತ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ತಂಡಕ್ಕೆ ಬರೋಬ್ಬರಿ 1 ಲಕ್ಷ ಬಹುಮಾನ ಪಡೆಯುವ ಅವಕಾಶವಿದೆ. ಈ ʻಕಾಮಿಡಿ ಕಿಲಾಡಿಗಳು ಪ್ರೀಮಿಯರ್ ಲೀಗ್ʼಗೆ ಐವರು ನಿರೂಪಕರು ಹೊಸ ಜವಬ್ದಾರಿ ಹೊತ್ತಿದ್ದಾರೆ. ಹೀಗಾಗಿ ಹೊಸ ನಿರೂಪಕರನ್ನು ಈ ಶೋ ಮೂಲಕ ಕರೆ ತರಲಾಗುತ್ತಿದೆ ಎಂದು ವರದಿಯಾಗಿದೆ. ಆ ನಿರೂಪಕರು ಯಾರು ಎಂಬ ಕುತೂಹಲ ಎಲ್ಲರಲ್ಲೂ ಮೂಡಿತ್ತು ಇದಕ್ಕೆ ಇದೇ ಶನಿವಾರ ಹಾಗೂ ಭಾನುವಾರು ರಾತ್ರಿ 9ಗಂಟೆಗೆ ತೆರೆ ಬೀಳಲಿದೆ.