Connect with us

LATEST NEWS

ಶ್ರೀ ಕುಂದೇಶ್ವರ ಸಮ್ಮಾನ್‌ ಪ್ರಶಸ್ತಿ ಪ್ರದಾನ – ತುಳುನಾಡಿನ ದೈವ ಧರ್ಮ, ಸಂಸ್ಕೃತಿ ಅನನ್ಯ: ಮುತಾಲಿಕ್

Published

on

ಕಾರ್ಕಳ: ಕಲಾ ಸವ್ಯಸಾಚಿ ಪ್ರಶಾಂತ್‌ ಸಿ.ಕೆ. ಅವರಿಗೆ ಹಿರ್ಗಾನ ಕುಂದೇಶ್ವರ ಕ್ಷೇತ್ರದಿಂದ ಶ್ರೀ ಕುಂದೇಶ್ವರ ಸಮ್ಮಾನ್‌ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.


ಪ್ರಶಸ್ತಿ ಪ್ರದಾನ ಮಾಡಿದ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ಮಾತನಾಡಿ, ಕರಾವಳಿಯ ಸಂಸ್ಕೃತಿಯು ಜಗದ್ವಿಖ್ಯಾತವಾಗುತ್ತಿದೆ.

ದೈವ, ಆಧ್ಯಾತ್ಮ, ಭಜನೆ. ಪೂಜೆ ಪುನಸ್ಕಾರಗಳಿಂದಾಗಿ ಕರಾವಳಿ ನಿಜವಾಗಿಯೂ ದೇವರನಾಡು. ಕರಾವಳಿಯಲ್ಲಿ ಭಜನೆ ಮೂಲಕ ಆಧ್ಯಾತ್ಮಿಕ ವಿಚಾರಧಾರೆ ಪಸರಿಸುತ್ತಿವೆ.

ಒಂದಿಲ್ಲ ಒಂದು ಕಾರ್ಯಕ್ರಮಗಳಿಂದ ವರ್ಷವಿಡೀ ಹಬ್ಬದಂತೆ ಆಚರಿಸುವ ಪುಣ್ಯ ಕ್ಷೇತ್ರಕ್ಕೆ ಆಕಸ್ಮಿಕವಾಗಿ ಬಂದೆ ಕುಂದೇಶ್ವರ ದರ್ಶನದಿಂದ ಪುನೀತನಾದೆ ಎಂದರು.

ಗುರುರಕ್ಷಾ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಮಂಜುನಾಥ ಪೂಜಾರಿಮಾತನಾಡಿ, ಹಿಂದೆಲ್ಲ ಯಕ್ಷಗಾನದ ಮೂಲಕ ಪುರಾಣ, ಮಹಾಗ್ರಂಥಗಳ ಸಾರವನ್ನು ತಿಳಿದುಕೊಳ್ಳುತ್ತಿದ್ದೆವು.

ದೇಶದ ಜನರನ್ನು ಸೆಳೆಯುತ್ತಿರುವ ತುಳುನಾಡು ಸಾಂಸ್ಕೃತಿಕವಾಗಿ, ಧಾರ್ಮಿಕವಾಗಿ ಹಿಂದುಗಳ ಪುಣ್ಯಭೂಮಿ ಆಗಿದೆ ಎಂದರು.

ಕಾರ್ಯಕ್ರಮ ಸಂಯೋಜಕ ಜಿತೇಂದ್ರ ಕುಂದೇಶ್ವರ ಅಭಿನಂದನಾ ಭಾಷಣ ಮಾಡಿ, ಯಕ್ಷಗಾನ, ನಾಟಕ, ಸಿನಿಮಾ ಕ್ಷೇತ್ರದಲ್ಲಿ ರಚನೆಕಾರ, ನಿರ್ದೇಶಕ, ಕಲಾವಿದನಾಗಿ, ಕಿರುತೆರಯಲ್ಲಿ ಹಾಸ್ಯ ಧಾರವಾಹಿಗಳ ನಿರ್ದೇಶಕನಾಗಿ ಹಾಸ್ಯ ಕಲಾವಿದನಾಗಿ ಕರಾವಳಿಯಾದ್ಯಂತ ಜನಮೆಚ್ಚುಗೆ ಗಳಿಸುತ್ತಿರುವ ಪ್ರತಿಭೆಯ ಖನಿ ಪ್ರಶಾಂತ್‌ ಸಿ.ಕೆ. ಅವರಿಗೆ ಇನ್ನೂ ಹೆಚ್ಚಿನ ಪ್ರೋತ್ಸಾಹ ಸಿಕ್ಕರೆ ದೇಶಾದ್ಯಂತ ಮನ್ನಣೆಗಳಿಸುವುದರಲ್ಲಿ ಸಂಶಯ ಇಲ್ಲ ಎಂದರು.

ಪ್ರಶಸ್ತಿ ಸ್ವೀಕರಿಸಿದ ಕಲಾ ಸವ್ಯಸಾಚಿ ಪ್ರಶಾಂತ್‌ ಸಿ.ಕೆ. ಮಾತನಾಡಿ, ನನ್ನ ತಂದೆ -ತಾಯಿ, ಪತ್ನಿ, ಮಕ್ಕಳ ತ್ಯಾಗವಿದೆ. ನನ್ನ ಜತೆ, ಗುರುಗಳು, ಹಿರಿಯರು, ಕಿರಿಯರು ನನ್ನ ಕಲಾಬದುಕಿನಲ್ಲಿ ಬೆನ್ನೆಲುಬಾಗಿ ನಿಂತಿದ್ದಾರೆ.

ನನ್ನ ಕಲಾಸೇವೆ ಗುರುತಿಸಿ ಈ ಮಹಾನ್‌ ಪ್ರಶಸ್ತಿಗೆ ಆಯ್ಕೆ ಮಾಡಿದವರಿಗೆ ಕೃತಜ್ಞತೆಗಳು ಎಂದರು.

ಕೆ.ಪಿ. ಲಕ್ಷ್ಮೀನಾರಾಯಣ ಪ್ರಾರ್ಥಿಸಿದರು. ಧರ್ಮದರ್ಶಿ ಕೃಷ್ಣರಾಜೇಂದ್ರ ಭಟ್‌, ವೇದಮೂರ್ತಿ ರವೀಂದ್ರ ಭಟ್‌, ಉದ್ಯಮಿ ಸಿರಿಯಣ್ಣ ಶೆಟ್ಟಿ, ಪ್ರಗತಿಪರ ಕೃಷಿಕ ಸತೀಶ್‌ ಭಟ್‌ ಕುಂದೇಶ್ವರ, ಕದ್ರಿ ಯಕ್ಷಕೂಟ ಸಂಚಾಲಕ ರಾಮಚಂದ್ರ ಭಟ್‌ ಎಲ್ಲೂರು, ಸುಧೀಂದ್ರ ಭಟ್‌, ಕುಂಜತ್ತೋಡಿ ವಾಸುದೇವ ಭಟ್‌ ಕದ್ರಿ, ಗ್ರಾಮಪಂಚಾಯಿತಿ ಸದಸ್ಯರ ಮಹಾವೀರ ಕಟ್ಟಡ, ಗಂಗಾ ಆರ್.ಭಟ್‌, ರಂಜಿನಿ, ರಂಗಿಣಿ ಉಪೇಂದ್ರ ರಾವ್‌, ಇದ್ದರು.

ಹಿರಣ್ಯಾಕ್ಷ ಹಿರಣ್ಯ ಕಶಿಪು ಕನ್ನಡ- ತುಳು ಯಕ್ಷಗಾನ ನಡೆಯಿತು. ಪ್ರಾಪ್ತಿ ಕಲಾವಿದೆರ್‌ ಕುಡ್ಲ ತಂಡದವರಿಂದ ಮಾಯದಪ್ಪೆ ಮಂತ್ರದೇವತೆ ತುಳು ನಾಟಕ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲಾ ಹೋಮ್‌ಗಾರ್ಡ್‌ ಕಮಾಂಡೆಂಟ್‌ ಡಾ.ಮುರಲೀ ಮೋಹನ ಚೂಂತಾರು, ಉದಯಕೃಷ್ಣ ಚಾರಿಟೇಬಲ್‌ ಟ್ರಸ್ಟ್‌ ಅಧ್ಯಕ್ಷ ಮುನಿಯಾಲು ಉದಯಕುಮಾರ್‌ ಶೆಟ್ಟಿ, ಹಿರ್ಗಾನ ಗ್ರಾಮಪಂಚಾಯಿತಿ ಅಧ್ಯಕ್ಷ ಸಂತೋಷ್‌ ಕುಮಾರ್‌ ಶೆಟ್ಟಿ ಕ್ಷೇತ್ರಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ಕ್ಷೇತ್ರದಲ್ಲಿ ಮೂರು ದಿನಗಳ ಕಾಲ ವರ್ಷಾವಧಿ ಜಾತ್ರೆ, ರಂಗಪೂಜೆ, ದರ್ಶನ ಬಲಿ, ನೇಮೋತ್ಸವ, ಕಟ್ಟೆಪೂಜೆ ಸಂಭ್ರಮದಿಂದ ನಡೆಯಿತು.

ಹಿರ್ಗಾನ ಶ್ರೀ ಕುಂದೇಶ್ವರ ಕ್ಷೇತ್ರದಲ್ಲಿ ಕಲಾ ಸವ್ಯಸಾಚಿ ಪ್ರಶಾಂತ್‌ ಸಿ.ಕೆ. ಅವರಿಗೆ ಕುಂದೇಶ್ವರ ಸಮ್ಮಾನ್‌ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಮೋದ್‌ ಮುತಾಲಿಕ್‌, ಮಂಜುನಾಥ ಪೂಜಾರಿ, ಜಿತೇಂದ್ರ ಕುಂದೇಶ್ವರ ಇದ್ದರು.

ಕಾರ್ಕಳ ಹಿರ್ಗಾನ ಶ್ರೀ ಕುಂದೇಶ್ವರ ಕ್ಷೇತ್ರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹಿರಣ್ಯಾಕ್ಷ ಹಿರಣ್ಯ ಕಶಿಪು ಯಕ್ಷಗಾನ ನಡೆಯಿತು.

ಕಾರ್ಕಳ ಹಿರ್ಗಾನ ಶ್ರೀ ಕುಂದೇಶ್ವರ ಕ್ಷೇತ್ರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಾಯದಪ್ಪೆ ಮಂತ್ರದೇವತೆ ತುಳು ನಾಟಕ ನಡೆಯಿತು.

Click to comment

Leave a Reply

Your email address will not be published. Required fields are marked *

DAKSHINA KANNADA

ಅತ್ತಾವರ ಅಪಾರ್ಟ್‌ಮೆಂಟ್‌ನಲ್ಲಿ ಆಕಸ್ಮಿಕ ಬೆಂಕಿ – ವೃದ್ಧೆ ಸಾವು..!

Published

on

ಮಂಗಳೂರು: ಮಂಗಳೂರಿನ ಅತ್ತಾವರದ ಅಪಾರ್ಟ್‌ ಮೆಂಟ್‌ವೊಂದರಲ್ಲಿ ಇಂದು ಬೆಳಗ್ಗೆ ನಡೆದ ಆಕಸ್ಮಿಕ ಬೆಂಕಿ ಅನಾಹುತದಲ್ಲಿ ಗಂಭೀರ ಗಾಯಗೊಂಡಿದ್ದ ವೃದ್ಧೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ‌ಮಾಹಿತಿ ನೀಡಿದ್ದಾರೆ.

ಶಾಹಿನಾ ನುಸ್ಬಾ(58) ಸಾವನ್ನಪ್ಪಿದ ವೃದ್ಧೆ ಎಂದು ಗುರುತಿಸಲಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮುಂಜಾನೆ 4 ಗಂಟೆಯ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿದ್ದು, ಐವರು ಮಕ್ಕಳ ಸಹಿತ ಎಂಟು ಮಂದಿ ಅಪಾಯದಿಂದ ಪಾರಾಗಿದ್ದಾರೆ.

ಅನಾರೋಗ್ಯದಿಂದಾಗಿ ಬೆಡ್ ರೂಮ್ ನಲ್ಲೇ ಇದ್ದ ವೃದ್ಧ ಮಹಿಳೆ ದಟ್ಟ ಹೊಗೆಯಿಂದಾಗಿ ತಕ್ಷಣ ಹೊರಬರಲಾಗದೇ ಉಸಿರುಗಟ್ಟಿ ಚಿಂತಾಜನಕ ಸ್ಥಿತಿಯಲ್ಲಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

Continue Reading

LATEST NEWS

ಬೋರ್ ವೆಲ್ ನಲ್ಲಿ ಸುರಿದ ಹಾಲು – ಪಾತ್ರೆ ಹಿಡಿದು ಓಡೋಡಿ ಬಂದ ಜನ..!

Published

on

ಉತ್ತರ ಪ್ರದೇಶ: ಸಾಮನ್ಯವಾಗಿ ಬೋರ್ ವೆಲ್ ನಲ್ಲಿ ನೀರು ಬರುವದನ್ನು ನೋಡಿದ್ದೇವೆ ಆದರೆ ಇಲ್ಲೊಂದು ಕಡೆ ಹಾಲಿನ ಬಣ್ಣದ ನೀರು ಸುರಿದ ವಿಸ್ಮಯ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್ ನಲ್ಲಿ ನಡೆದಿದೆ.


ಇಲ್ಲಿನ ಸಾರ್ವಜನಿಕ ಸ್ಥಳವೊಂದರಲ್ಲಿರುವ ಬೋರ್ ವೆಲ್ ನಲ್ಲಿ ನೀರಿನ ಬದಲು ಬಿಳಿ ಬಣ್ಣ ಇರುವ ನೀರು ಸುರಿದಿದೆ. ಇದನ್ನು ಕಂಡ ಸ್ಥಳಿಯರಿಗೆ ಅಚ್ಚರಿಯ ಪ್ರಶ್ನೆ ಮೂಡಿದೆ. ಅಲ್ಲದೆ ಇದೀಗ ಇದರ ವಿಡಿಯೋ ವೈರಲ್ ಆದ ಬೆನ್ನಲ್ಲೇ ಈ ಸ್ಥಳಕ್ಕೆ ಸಾಕಷ್ಟು ಜನ ಬಂದು ಸೇರಿದ್ದಾರೆ.


ಇದನ್ನು ಕಂಡ ಜನರು ಇದು ನೀರಲ್ಲ ಹಾಲು ಎಂದು ಪಾತ್ರ , ಬಾಟಲಿ ಹಾಗೂ ಕೈಗೆ ಸಿಕ್ಕಿದ ಪಾತ್ರವನ್ನು ಹಿಡಿದು ಓಡಾಡಿಕೊಂಡು ಬಂದು ಸರತಿ ಸಾಲಿನಲ್ಲಿ ನಿಂತು ತಮ್ಮ ಪಾತ್ರೆಗಳಿಗೆ ತುಮಬಿಸಿ ಮನೆಗೆ ಕೊಂಡೊಯ್ಯುತ್ತಿದ್ದರು. ಈ ವಿಚಾರ ತಿಳಿದ ಪುರಸಭೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಆದರೆ ಇದು ಹಾಲಲ್ಲ ಇದು ಕಲುಷಿತ ನೀರು ಎಂದು ಸ್ಪಷ್ಟನೆ ನೀಡಿದ್ದಾರೆ. ಬೋರ್ ವೆಲ್ ನಲ್ಲಿರುವ ಹ್ಯಾಂಡ್ ಪಂಪ್ ನ ಕೆಳಭಾಗ ಹಾನಿಗೊಳಗಾದ ಕಾರಣ ಇದರಲ್ಲಿ ಹಾಲಿನ ಬಣ್ಣದ ಕಲುಷಿತ ನೀರು ಸೊರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿರುವುದು ವರದಿಯಾಗಿದೆ.

Continue Reading

DAKSHINA KANNADA

ನ.30ರಂದು ಶ್ರೀ ಆದಿ ಕ್ಷೇತ್ರ ಜಾರದಲ್ಲಿ ನಿಧಿ ಕುಂಭ ಮತ್ತು ಶಿಲಾನ್ಯಾಸ ಕಾರ್ಯಕ್ರಮ

Published

on

ಮಂಗಳೂರು: ಧಾರ್ಮಿಕ ಕ್ಷೇತ್ರ ಜಾರದಲ್ಲಿ ನ. 30ರಂದು ಬೆಳಿಗ್ಗೆ 8 ಗಂಟೆಯಿಂದ ಜಾರಂದಾಯ ಬಂಟ ಪರಿವಾರ ಸಾನಿಧ್ಯ ಮತ್ತು ಕ್ಷೇತ್ರ ಕಲ್ಲುರ್ಟಿ ಸಾನಿಧ್ಯಗಳ ನಿಧಿ ಕುಂಭ ಮತ್ತು ಶಿಲಾನ್ಯಾಸ ಕಾರ್ಯಕ್ರಮ ವಿಜೃಂಭಣೆಯಿಂದ ಜರಗಲಿದೆ ಎಂದು ದೈವಜ್ಞ ಪ್ರಕಾಶ ವಿ. ಹೊಳ್ಳ ಶಕ್ತಿನಗರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

“ಕಾರ್ಯಕ್ರಮದ ಯಶಸ್ಸಿಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು ಕ್ಷೇತ್ರದ ತಂತ್ರಿಗಳಾದ ಕೊಂರ್ಗಿಬೈಲು ನಾರಾಯಣ ಮಯ್ಯರ ಪೌರೋಹಿತ್ಯದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನೆರವೇರಲಿದೆ. ಖ್ಯಾತ ವಾಸ್ತು ತಜ್ಞಮಹೇಶ್ ಮುನಿಯಂಗಳ ಇವರ ವಾಸ್ತು ವಿನ್ಯಾಸದೊಂದಿಗೆ ಸುಮಾರು 12 ರಿಂದ 15 ಕೋಟಿ ವೆಚ್ಚದಲ್ಲಿ ಹಂತ ಹಂತವಾಗಿ ಕ್ಷೇತ್ರ ಜೀರ್ಣೋದ್ಧಾರ ನಡೆಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡಿದೆ. ಈಗಾಗಲೇ ನವೆಂಬರ್ 11ರಂದು ಜಾರಚಾವಡಿಯಲ್ಲಿ ಪ್ರಧಾನ ದೈವ ಜಾರಂದಾಯ  ಬಂಟ ಮಾಯಾಂದಾಲ್ ದೈವಗಳ ನೇಮೋತ್ಸವ ಶ್ರದ್ಧಾ ಭಕ್ತಿಯಿಂದ ನೆರವೇರಿದೆ. ನವೆಂಬರ್ 30ರಂದು
ಬೆಳಿಗ್ಗೆ 9.00 ಗಂಟೆಗೆ ಸರಳ ಜುಮಾದಿ ಬಂಟ ಹಾಗೂ ಪರಿವಾರ ದೈವಗಳಿಗೆ ಹಾಗೂ 11.00 ಗಂಟೆಗೆ ಶ್ರೀ ಜಾರ ಆದಿ ಕ್ಷೇತ್ರದ ಗಿರಿಯಲ್ಲಿ ಗ್ರಾಮ ದೈವ ಶ್ರೀ ಬಂಟ ಸರಳ ಜುಮಾದಿ ಬಂಟ ಮತ್ತು ಪರಿವಾರ ದೈವಗಳಿಗೆ ನಿಧಿ ಕುಂಬ ಮತ್ತು ಶಿಲಾನ್ಯಾಸ ಕಾರ್ಯಕ್ರಮ ನೆರವೇರಲಿದೆ. ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೆ  ಭಕ್ತಾಧಿಗಳು ತನು ಮನ ಧನಗಳಿಂದ ಸಹಕರಿಸಬೇಕು” ಎಂದು ಮನವಿ ಮಾಡಿದರು.

ಬಳಿಕ ಮಾತಾಡಿದ ಕ್ಷೇತ್ರದ ತಂತ್ರಿಗಳಾದ ಕೊಂರ್ಗಿಬೈಲು ನಾರಾಯಣ ಮಯ್ಯ ಅವರು, “ಶ್ರೀ ಆದಿ ಕ್ಷೇತ್ರ ಜಾರ ಇದು ತುಳುನಾಡಿನ ಕಾರ್ಣಿಕ ಕ್ಷೇತ್ರಗಳಲ್ಲಿ ಒಂದಾಗಿದೆ. ಸಾನಿಧ್ಯ ಪ್ರಧಾನ ದೈವಗಳಾಗಿ ಶ್ರೀ ಉಳ್ಳಾಯ, ಶ್ರೀ ಜಾರಂದಾಯ ಬಂಟ, ಸರಳ ಧೂಮಾವತಿ ಬಂಟ, ಕಾಂತೇರಿ ಧೂಮಾವತಿ ಬಂಟ, ಮಾಯಾಂದಾಲ್ ದೈವ, ಪಿಲಿ ಚಾಮುಂಡಿ, ಬಬ್ಬರ್ಯ ದೈವಗಳು ಕ್ಷೇತ್ರ ಹಾಗೂ ಗ್ರಾಮದ ಮಾಗಣೆಯ ದೈವಗಳಾಗಿವೆ. ಕ್ಷೇತ್ರದ ಆದಿ ದೈವಗಳಾಗಿ ಕಲ್ಲುರ್ಟಿ, ಪಟ್ಟದ ಅಣ್ಣಪ್ಪ ಸ್ವಾಮಿ, ಸ್ಥಳದ ಪಂಜುರ್ಲಿ, ನಾಗಬ್ರಹ್ಮ ಪ್ರಧಾನ ಸಾನಿಧ್ಯಗಳಾಗಿವೆ” ಎಂದರು. ಸುದ್ದಿಗೋಷ್ಠಿಯಲ್ಲಿ ದೈವಜ್ಞ ಶ್ರೀ ಪ್ರಕಾಶ ವಿ. ಹೊಳ್ಳ ಶಕ್ತಿನಗರ, ಕ್ಷೇತ್ರದ ತಂತ್ರಿಗಳಾದ ಕೊಂರ್ಗಿಬೈಲು ನಾರಾಯಣ ಮಯ್ಯರ , ಕ್ಷೇತ್ರದ ಗಡಿ ಪ್ರಧಾನರಾದ ಜತ್ತಿ ಪೂಜಾರಿ ಜಾರ, ಅಧ್ಯಕ್ಷರಾದ ಉದಯಶಂಕರ ಜಾರಮನೆ, ಕಾರ್ಯದರ್ಶಿ ಎಂ. ವಿಠಲ್ ಪೂಜಾರಿ ಕುಕ್ಕುದಡಿ, ಕೋಶಾಧಿಕಾರಿ ಜೀವನ್ ದಾಸ್ ಜಾರ ಮತ್ತಿತರರು ಉಪಸ್ಥಿತರಿದ್ದರು.

Continue Reading

LATEST NEWS

Trending