Connect with us

    ಇಡೀ ಕ್ರಿಕೆಟ್ ಲೋಕವೇ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತೆ ಮಾಡಿದ್ಲು ಕಾರ್ಕಳದ ಕುವರಿ..!

    Published

    on

    ಜ್ಯೋತಿಯ ಕವರ್ ಡ್ರೈವ್ ಗುರುತಿಸಿದ ಅಂತರಾಷ್ಟ್ರೀಯ ಮಾಧ್ಯಮ ಇಎಸ್ ಪಿಎನ್…!

    ಕಾರ್ಕಳ; ಇತ್ತೀಚಿನ ಆಧುನಿಕ ಯುಗದಲ್ಲಿ ಅದೇನೇ ಮಾಡಿದ್ರೂ ಸುದ್ದಿಯಾಗುತ್ತೆ. ಇಂಟರ್ ನೆಟ್, ಸೋಷಿಯಲ್ ಮೀಡಿಯಾ ಎಂಬ ಹೊಸ ಲೋಕ ತೆರೆದುಕೊಂಡ ಮೇಲಂತೂ ಗ್ರಾಮೀಣ ಪ್ರತಿಭೆಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡ್ತಾರೆ.

    ಇದಕ್ಕೆ ತಾಜಾ ಉದಾಹರಣೆ ಹುಡುಗಿಯೊಬ್ಬಳ ಕವರ್ ಡ್ರೈವ್..

    ಹೌದು.. ಕೇವಲ ಆರೇ-ಆರು ಸೆಕೆಂಡ್ ಇರೋ ಈ ವಿಡಿಯೋ ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಾ ಇದೆ.

    ಎಲ್ಲಿಯವರೆಗೆ ಅಂದ್ರೆ ಅಂತರಾಷ್ಟ್ರೀಯ ಮಾಧ್ಯಮ ಇಎಸ್ ಪಿಎನ್ ಈ ವಿಡಿಯೋವನ್ನು ಪೋಸ್ಟ್ ಮಾಡಿ ಹಾಡಿ ಹೊಗಳಿದೆ..

    ಇಂಥದ್ದೊಂದು ಹೊಡೆತವನ್ನು ನೀವು ಎಂದಾದ್ರೂ ನೋಡಿದ್ದಿರಾ ಅಂತಾ ಬಣ್ಣಿಸಿದೆ.

    ಲೆಗ್ ಸ್ಪಂಪ್ನಿಂದ ಆಚೆ ಹೋಗಿ ಒಂದು ಸ್ಪೆಪ್ ಮುಂದೆ ಬಂದು ಚೆಂಡಿನ ಮೇಲೆ ಹದ್ದಿನ ಕಣ್ಣಿನ ಗುರಿಯಿಟ್ಟ ಹುಡುಗಿಯೊಬ್ಬಳು ಹೊಡೆದ ಕವರ್ ಡ್ರೈವ್ ನೋಡಿ ಕ್ರಿಕೆಟ್ ಅಭಿಮಾನಿಗಳು ಕ್ಲೀನ್ ಬೋಲ್ಡ್ ಆಗಿದ್ದಾರೆ.

    ಈ ಹುಡುಗಿ ಹೊಡೆದ ಈ ಕವರ್ ಡ್ರೈವ್ ಅಂತರಾಷ್ಟ್ರೀಯ ಮಟ್ಟದ ಕ್ರಿಕೆಟಿಗರನ್ನೇ ನಾಚಿಸುವಂತಿದೆ.

    ಇದೇ ಹೊಡೆತ ಒಂದು ವೇಳೆ ಗ್ರೌಂಡ್ ನಲ್ಲಿ ಹೊಡೆದಿದ್ರೆ.. ಚೆಂಡು ಬುಲೆಟ್ ವೇಗದಲ್ಲಿ ನುಗ್ಗಿ ಬೌಂಡರಿ ಗೆರೆಯಲ್ಲಿ ಹಾಕುವ ಜಾಹೀರಾತು ಫಲಕದ ಮೇಲೆ ಸಿಡಿಲಿನಂತೆ ಬಂದಪ್ಪಳಿಸುತ್ತಿತ್ತೋ ಏನೋ..!.

    ವಿರಾಟ್ ಕೊಹ್ಲಿ, ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಇಂಥದ್ದೊಂದು ಕವರ್ ಡ್ರೈವ್ ಹೊಡೆದಿರೋದನ್ನು ನೀವೆಲ್ಲಾ ನೋಡಿರಬಹುದು..

    ಸೇಮ್ ಟು ಸೇಮ್ ಆದೇ ರೀತಿ ಈ ಹುಡುಗಿ ತನ್ನೆಲ್ಲಾ ಬಲವನ್ನು ಚೆಂಡಿಗೆ ರವಾನಿಸಿ ಬ್ಯಾಟ್ ಬೀಸಿದ್ದಾಳೆ.

    ಅಷ್ಟಕ್ಕೂ ಇಂಟರ್ ನೆಟ್ ನಲ್ಲಿ ಸೆನ್ಸೆಷನ್ ಸೃಷ್ಟಿಸಿರುವ ಈ ಹುಡುಗಿ ಯಾರು ಗೊತ್ತಾ..? ಈ ಕವರ್ ಡ್ರೈವ್ ಸ್ಪೆಷಲಿಸ್ಟ್ ನಮ್ಮ ಉಡುಪಿ ಜಿಲ್ಲೆಯ ಕಾರ್ಕಳದ ಕುವರಿ..

    ಕಾರ್ಕಳ ತಾಲೂಕಿನ ಕೆರ್ವಾಶೆ ಗ್ರಾಮದವಳು. ಈಕೆಯ ಹೆಸರು ಜ್ಯೋತಿ… ಈಕೆ ಚಿಕ್ಕ ವಯಸ್ಸಿನಿಂದಲೇ ಬ್ಯಾಟ್ ಬೀಸುತ್ತಿದ್ದಳು.

    ಶಾಲಾ ದಿನಗಳಲ್ಲೂ ಕೂಡ ಹುಡುಗರು ಆಡೋ ಮೈದಾನದಲ್ಲಿ ಚೆಂಡನ್ನು ಲೀಲಾಜಾಲವಾಗಿ ಬೌಂಡರಿ ಗೆರೆ ದಾಟಿಸುತ್ತಿದ್ದಳು..

    ಆದರೆ ಈ ಗ್ರಾಮೀಣ ಮಟ್ಟದ ಪ್ರತಿಭೆ ಕೇವಲ ಪ್ರತಿಭೆಯಾಗಿಯೇ ಉಳಿದಿದೆ..

    ಒಂದು ವೇಳೆ ಸೂಕ್ತ ತರಬೇತಿ ಸಿಕ್ಕಿದಿದ್ರೆ ಈಕೆ ಖಂಡಿತವಾಗಿಯೂ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಪರವಾಗಿ ಆಟ ಆಡುತ್ತಿದ್ದಳು..

    ಅಂದಹಾಗೆ ಇನ್ನು ಕಾಲ ಮಿಂಚಿಲ್ಲ ಈ ಪ್ರತಿಭೆಯನ್ನು ಗುರುತಿಸುವ ಕೆಲಸ ಖಂಡಿತವಾಗ್ಲೂ ಆಗಬೇಕಿದೆ..

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಬಸ್‌ ನಲ್ಲಿ ವಿದ್ಯಾರ್ಥಿನಿಗೆ ಕಿರುಕುಳ..! ಧರ್ಮದೇಟು ತಿಂದ ಮುಸ್ಲಿಂ ಯುವಕ..!

    Published

    on

    ಮಂಗಳೂರು ( ಸುಳ್ಯ ) : ಬೆಂಗಳೂರಿನಿಂದ ಸುಬ್ರಹ್ಮಣ್ಯ ಮಾರ್ಗವಾಗಿ ಸುಳ್ಯಕ್ಕೆ ಬರುತ್ತಿದ್ದ ಸರ್ಕಾರಿ ಬಸ್‌ನಲ್ಲಿ ಯುವಕನೊಬ್ಬ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದಾನೆ. ಈ ವಿಚಾರ ತಿಳಿದ ವಿದ್ಯಾರ್ಥಿನಿಯ ಸಹಪಾಠಿಗಳು ಯುವಕನನ್ನು ಹಿಡಿದು ಹಲ್ಲೆ ನಡೆಸಿದ ಘಟನೆ ಸುಳ್ಯದಲ್ಲಿ ನಡೆದಿದೆ.

    ಸುಬ್ರಹ್ಮಣ್ಯ ಸಮೀಪದ ಬಿಸಲೆ ಘಾಟ್‌ ಬಳಿ ವಿದ್ಯಾರ್ಥಿನಿ ಬೆಂಗಳೂರಿನಿಂದ ಬಂದಿದ್ದ ಬಸ್ ಹತ್ತಿದ್ದಳು. ಈ ವೇಳೆ ಯುವಕೊನೊಬ್ಬ ಕುಳಿತಿದ್ದ ಸೀಟ್‌ ಪಕ್ಕದ ಸೀಟ್ ಖಾಲಿ ಇದ್ದ ಕಾರಣ ಆಕೆ ಆತನ ಪಕ್ಕದಲ್ಲೇ ಕುಳಿತಿದ್ದಾಳೆ. ಆದ್ರೆ ವಿದ್ಯಾರ್ಥಿನಿ ಪಕ್ಕದಲ್ಲಿ ಕುಳಿತ ಸ್ವಲ್ಪ ಸಮಯದಲ್ಲೇ ಯುವಕ ಅನುಚಿತವಾಗಿ ವರ್ತಿಸಲು ಆರಂಭಿಸಿದ್ದಾನೆ. ಈ ವಿಚಾರವನ್ನು ಬಸ್ ನಿರ್ವಾಹಕನಿಗೆ ತಿಳಿಸಿದಾಗ ನಿರ್ವಾಹಕ ಹಾಗೂ ಬಸ್‌ ಪ್ರಯಾಣಿಕರು ಆರೋಪಿ ಯುವಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

    ವಿದ್ಯಾರ್ಥಿನಿ ಈ ವಿಚಾರವನ್ನು ಸುಳ್ಯದ ತನ್ನ ಕಾಲೇಜು ಸಹಪಾಠಿಗಳ ಗಮನಕ್ಕೂ ತಂದಿದ್ದಾಳೆ. ಈ ನಡುವೆ ಯುವಕ ಸುಬ್ರಹ್ಮಣ್ಯದಲ್ಲಿ ಬಸ್‌ನಿಂದ ಇಳಿದು ಬೇರೆ ಬಸ್ ಮೂಲಕ ಸುಳ್ಯದತ್ತ ಪ್ರಯಾಣ ಮಾಡಿದ್ದಾನೆ. ಬೆಂಗಳೂರಿನ ಬಸ್‌ನಲ್ಲಿ ಪ್ರಯಾಣಿಸಿ ಸುಳ್ಯ ತಲುಪಿದ್ದ ವಿದ್ಯಾರ್ಥಿನಿ ಈ ವಿಚಾರವನ್ನು ತನ್ನ ಸಹಪಾಠಿಗಳಿಗೆ ತಿಳಿಸಿದ್ದಾಳೆ. ತಕ್ಷಣ ಸುಳ್ಯದ ಪೈಚಾರು ಎಂಬಲ್ಲಿಗೆ ಕಾರಿನಲ್ಲಿ ತೆರಳಿದ ವಿದ್ಯಾರ್ಥಿಗಳು ಅಲ್ಲಿ ಯುವಕ ಪ್ರಯಾಣಿಸುತ್ತಿದ್ದ ಬಸ್‌ನಿಂದ ಆತನನ್ನು ಇಳಿಸಿದ್ದಾರೆ. ಬಳಿಕ ಆತನನ್ನು ಕಾರಿನಲ್ಲಿ ಸುಳ್ಯ ಬಸ್ ನಿಲ್ದಾಣಕ್ಕೆ ಕರೆತಂದು ಬಸ್ ನಿಲ್ದಾಣದಲ್ಲಿ ಹಿಗ್ಗಾ ಮುಗ್ಗ ಥಳಿಸಿದ್ದಾರೆ.

    ವಿದ್ಯಾರ್ಥಿಗೆ ಕಿರುಕುಳ ನೀಡಿದ ಯುವಕ ಕೇರಳ ಮೂಲದವನಾಗಿದ್ದು, ಆತನ ಹೆಸರು ನಿಯಾಜ್‌ ಎಂದು ಗೊತ್ತಾಗಿದೆ. ಘಟನೆಯ ಬಗ್ಗೆ ಮಾಹಿತಿ ಸಿಕ್ಕ ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ವಿದ್ಯಾರ್ಥಿಗಳಿಂದ ಹಲ್ಲೆಗೊಳಗಾದ ನಿಯಾಜ್‌ನನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಕೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ಮಾಹಿತಿ ಲಭ್ಯವಾಗಿದೆ.

    Continue Reading

    BIG BOSS

    Bigg Boss Kannada 11: ದೊಡ್ಮನೆಯಲ್ಲಿ ಸ್ವರ್ಗ, ನರಕ ಎನ್ನುವ ಎರಡು ಥೀಮ್

    Published

    on

    ‘ಬಿಗ್ ಬಾಸ್ ಕನ್ನಡ 11’ಕ್ಕೆ ಕೌಂಟ್ ಡೌನ್ ಶುರುವಾಗಿದೆ. ದೊಡ್ಮನೆ 2ನೇ ಪ್ರೋಮೋ ರಿಲೀಸ್ ಆಗಿ ಮೆಚ್ಚುಗೆ ಗಳಿಸಿತ್ತು. ಈ ಬಾರಿ ಬಿಗ್ ಬಾಸ್‌ನಲ್ಲಿ ಸ್ವರ್ಗ ಮತ್ತು ನರಕ ಎಂದು ಥೀಮ್ ಇರಲಿದೆ ಎಂದು ಸುದೀಪ್‌ ಇಂಟರೆಸ್ಟಿಂಗ್ ಮಾಹಿತಿ  ತಿಳಿಸಿದ್ದಾರೆ.

    ನಾವು ಮಾಡಿ ಕಳುಹಿಸಲಿಲ್ಲ ಅಂದರೆ ಒಳಗೆ ಹೋಗಿರುವ ಸ್ಪರ್ಧಿಗಳೇ ಟೀಮ್ ಮಾಡಿಕೊಳ್ಳುತ್ತಾರೆ. ಹಾಗಾಗಿ ಈ ಬಾರಿ ದೊಡ್ಮನೆಗೆ ಎಂಟ್ರಿ ಕೊಡುವಾಗಲೇ 2 ತಂಡ ಮಾಡುವುದೇ ಈ ಸೀಸನ್‌ನ ಸ್ಪೆಷಾಲಿಟಿ ಎಂದು ಸುದೀಪ್ ತಿಳಿಸಿದರು.

    ಕಳೆದ ಬಾರಿ ಬಿಗ್ ಬಾಸ್ ಸೀಸನ್ 10 ಪ್ರಾರಂಭವಾದ ವೇಳೆ, ಸ್ಪರ್ಧಿಗಳಿಗೆ ಸಮರ್ಥರು ಮತ್ತು ಅಸಮರ್ಥರು ಎಂದು ಪರಿಗಣಿಸಿ ತಂಡಗಳಾಗಿ ವಿಂಗಡಿಸಿದ್ದರು. ಅದರಂತೆಯೇ ಈ ಬಾರಿಯು ಕೂಡ ಹೊಸ ರೀತಿಯಲ್ಲಿ ಸ್ವರ್ಗ ಮತ್ತು ನರಕ ಎಂದು ಎರಡು ತಂಡ ಮಾಡಿ ಸ್ಪರ್ಧಿಗಳನ್ನು ಕಳುಹಿಸಲಾಗುತ್ತದೆ.

    ಸುದೀಪ್ ನಿರೂಪಣೆಯಲ್ಲಿ ಇದೇ ಸೆ.29ಕ್ಕೆ ಬಿಗ್ ಬಾಸ್ ಗ್ರ್ಯಾಂಡ್ ಆಗಿ ಲಾಂಚ್ ಆಗುತ್ತಿದೆ. ಪ್ರತಿದಿನ ರಾತ್ರಿ 9:30ಕ್ಕೆ ಶೋ ಪ್ರಸಾರವಾಗಲಿದೆ.

    Continue Reading

    BANTWAL

    ವಗ್ಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಬಸ್; ಹಲವರಿಗೆ ಗಾಯ

    Published

    on

    ಬಂಟ್ವಾಳ ತಾಲೂಕಿನ ವಗ್ಗದ ಸಮೀಪ ಕೊಪ್ಪಳ ಎಂಬಲ್ಲಿ ಸರ್ಕಾರಿ ಬಸ್‌ ಉರುಳಿ ಬಿದ್ದಿದ್ದು, ಹಲವರು ಗಾಯಗೊಂಡಿದ್ದಾರೆ.

    ಧರ್ಮಸ್ಥಳ ಮಂಗಳೂರು ನಡುವೆ ಸಂಚರಿಸುವ ಸರ್ಕಾರಿ ಬಸ್ ಇದಾಗಿದ್ದು, ಕೊಪ್ಪಳ ಎಂಬಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿದೆ. ಈ ವೇಳೆ ರಸ್ತೆಯ ಪಕ್ಕದ ಗುಂಡಿಗೆ ಬಸ್ ಉರುಳಿ ಬಿದ್ದಿದ್ದು ಬಸ್‌ನಲ್ಲಿದ್ದ ಹಲವರಿಗೆ ಗಾಯಗಳಾಗಿದೆ. ತಕ್ಷಣ ಸ್ಥಳೀಯ ಯುವಕರು ಸೇರಿ ಬಸ್‌ ಒಳಗಿದ್ದ ಪ್ರಯಾಣಿಕರನ್ನು ಬಸ್‌ ನಿಂದ ಹೊರ ತೆಗೆದಿದ್ದಾರೆ.

    ಗಾಯಾಳುಗಳನ್ನು ಖಾಸಗಿ ವಾಹನಗಳ ಮೂಲಕ ಸಮೀಪದ ಆಸ್ಪತ್ರೆಗೆ ರವಾನಿಸುವ ಕೆಲಸ ಮಾಡಿದ್ದಾರೆ. ಬಸ್ ಬರುತ್ತಿರುವ ವೇಳೆ ಬೈಕ್‌ ಒಂದು ಅಡ್ಡ ಬಂದಿದ್ದು ಈ ವೇಳೆ ಬಸ್ ನಿಯಂತ್ರಿಸುವ ವೇಳೆ ರಸ್ತೆಯಿಂದ ಪಕ್ಕಕ್ಕೆ ಉರುಳಿದೆ ಎಂದು ಬಸ್ ಚಾಲಕ ಮಾಹಿತಿ ನೀಡಿದ್ದಾರೆ . ಆದರೆ ಸ್ಥಳಿಯರು ಇದನ್ನು ನಿರಾಕರಿಸಿದ್ದು ಬಸ್ ಚಾಲಕನ ನಿರ್ಲಕ್ಷ್ಯವೇ ಈ ಅಪಘಾತಕ್ಕೆ ಕಾರಣ ಎಂದು ಹೇಳಿದ್ದಾರೆ.

    ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ಭೇಟಿ ನೀಡಿದ್ದು, ಮಾಹಿತಿ ಪಡೆದುಕೊಂಡು ಘಟನೆಗೆ ಕಾರಣ ಏನು ಎಂಬ ಬಗ್ಗೆ ವಿಚಾರಣೆ ಮುಂದುವರೆಸಿದ್ದಾರೆ.

    Continue Reading

    LATEST NEWS

    Trending