Connect with us

DAKSHINA KANNADA

ಬೊಮ್ಮಾಯಿ ಸರಕಾರದಿಂದ ಗಡಿ ಬಂದ್ ನಡೆಸಿ ಬಿಕ್ಕಟ್ಟು ಸೃಷ್ಟಿ : ಹರ್ಷಾದ್ ವರ್ಕಾಡಿ

Published

on

ಮಂಗಳೂರು: ಕೇಂದ್ರ ಸರಕಾರ ಮತ್ತು ಸುಪ್ರೀಂ ಕೋರ್ಟ್ ಅಂತಾರಾಜ್ಯ ಸಂಚಾರವನ್ನು ಯಾವುದೇ ಕಾರಣಕ್ಕೂ ನಿರ್ಬಂಧಿಸುವಂತಿಲ್ಲ ಎಂದು ಸೂಚನೆ ನೀಡಿದ್ದರೂ, ಕರ್ನಾಟಕದ ಬೊಮ್ಮಾಯಿ ಸರಕಾರ ಕೋವಿಡ್ ಹೆಸರಲ್ಲಿ ಗಡಿ ಬಂದ್ ಮಾಡಿ ಬಿಕ್ಕಟ್ಟು ಸೃಷ್ಟಿಸಿದೆ ಎಂದು ಕಾಂಗ್ರೆಸ್ ಮುಖಂಡ ಹರ್ಷಾದ್ ವರ್ಕಾಡಿ ಹೇಳಿದರು.

ಕೇರಳ ನಿವಾಸಿಗಳನ್ನು ಕೋವಿಡ್ ನೆಪದಲ್ಲಿ ನಿರ್ಬಂಧಿಸಿರುವ ಕರ್ನಾಟಕ ಸರಕಾರದ ಕ್ರಮವನ್ನು ಖಂಡಿಸಿ ಗಡಿಭಾಗ ತಲಪಾಡಿಯಲ್ಲಿ ವಿವಿಧ ಸಂಘಟನೆಗಳ ವತಿಯಿಂದ ಇಂದು ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.

ಕರ್ನಾಟಕದ ಗಡಿಭಾಗ ಬಂದ್ ನಡೆಸಿರುವ ನೀತಿ ಜನಸಾಮಾನ್ಯರನ್ನು ಬೀದಿಗೆ ತಳ್ಳಿದೆ. ಈ ಬಗ್ಗೆ ಕೇರಳದ ಸಿಎಂ ಪಿಣರಾಯಿ ವಿಜಯನ್ ಮಧ್ಯ ಪ್ರವೇಶ ಮಾಡಿ, ಗಡಿ ಸಮಸ್ಯೆ ಇತ್ಯರ್ಥ ಪಡಿಸಬೇಕಾಗಿದೆ.

ಹಿಂದೆಯೂ ಗಡಿ ಬಂದ್ ಮಾಡಿದಾಗ ನಾವು ಸಹಕಾರ ನೀಡಿದ್ದೇವೆ. ಆದರೆ, ಈಗ ನಾವು ಒಪ್ಪಲ್ಲ. ಕೇಂದ್ರ ಸರಕಾರವೇ ಎರಡು ಡೋಸ್ ಲಸಿಕೆ ಪಡೆದವರಿಗೆ ನಿರ್ಬಂಧ ವಿಧಿಸುವಂತಿಲ್ಲ ಎಂದು ಹೇಳಿದೆ. ಎರಡು ಡೋಸ್ ಕೋವಿಡ್ ವ್ಯಾಕ್ಸಿನ್ ಪಡೆದ ಕೇರಳದ ಗಡಿ ನಿವಾಸಿಗಳನ್ನು ಕರ್ನಾಟಕ ಪ್ರವೇಶಕ್ಕೆ ಅವಕಾಶ ನೀಡಲೇಬೇಕು ಎಂದು ಒತ್ತಾಯಿಸಿದರು. ‌

ಕರ್ನಾಟಕ ಮತ್ತು ಕೇರಳದ ಉಭಯ ಸರಕಾರಗಳ ನಿರ್ಲಕ್ಷ್ಯ ಧೋರಣೆ ವಿರುದ್ಧ ಯುಡಿವೈಎಫ್ ಮಂಜೇಶ್ವರ ಪಂಚಾಯತ್ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಈ ವೇಳೆ ಪ್ರತಿಭಟನಾಕಾರರು ಕೋವಿಡ್ ಲಸಿಕೆಯ ವರದಿಯನ್ನ ಸುಟ್ಟು ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಕೋವಿಡ್ ಲಸಿಕೆ ಪಡೆದರೂ ಅದಕ್ಕೆ ಬೆಲೆಯಿಲ್ಲ ಎಂದಾದ್ರೆ ಈ ಲಸಿಕೆ ಯಾಕೆ ಇರಬೇಕು. ಈ ವರದಿ ಯಾಕೆ ಬೇಕು ಎಂದು ಪ್ರಶ್ನೆ ಮಾಡಿದರು. ‌

ಕೆಎಂಸಿಸಿ ಮುಖಂಡ ಬಾಬಾ ಉದ್ಯಾವರ, ಮುಸ್ಲಿಂ ಲೀಗ್ ಮಂಜೇಶ್ವರ ಪಂಚಾಯತ್ ಸಮಿತಿ ಅಧ್ಯಕ್ಷ ಸೈಫುಲ್ಲಾ ತಂಙಳ್, ಯೂತ್ ಕಾಂಗ್ರೆಸ್ ಮಂಜೇಶ್ವರ ಮಂಡಲ ಸಮಿತಿ ಅಧ್ಯಕ್ಷ ಇರ್ಷಾದ್ ಮಂಜೇಶ್ವರ, ಮಂಜೇಶ್ವರ ಗ್ರಾ.ಪಂ ಸದಸ್ಯರಾದ ಮುಸ್ತಫಾ ಉದ್ಯಾವರ, ಪ್ರಮುಖರಾದ ಸಿದ್ದೀಕ್ ಮಂಜೇಶ್ವರ,ಡೆರಿಕ್ ಮೊಂತೇರೊ, ಹನೀಫ್ ಪಡಿನ್ಯಾರ್, ಎಂ.ಪಿ ಬದ್ರುದ್ದೀನ್ ತುಮಿನಾಡ್ ಮೊದಲಾದವರು ಉಪಸ್ಥಿತರಿದ್ದರು.

ಎಲ್ ಡಿಎಫ್ ಪಕ್ಷದ ಮಂಜೇಶ್ವರ ಮಂಡಲ ಸಮಿತಿ ನೇತೃತ್ವದಲ್ಲೂ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು. ಸಿಪಿಐ ಕಾಸರಗೋಡು ಜಿಲ್ಲಾ ನಿರ್ವಾಹಕ ಸಮಿತಿ ಸದಸ್ಯ ಬಿ.ವಿ ರಾಜನ್ ಪ್ರತಿಭಟನೆಯಲ್ಲಿ ಮಾತನಾಡಿದರು. ಇದೇ ವೇಳೆ, ಕಾಸರಗೋಡು ಜಿಲ್ಲಾಧಿಕಾರಿ ಬಂಧಾರಿ ಸ್ವಾಗತ್ ರಣವೀರ್ ಚಂದ್ ಗಡಿಭಾಗ ತಲಪಾಡಿಗೆ ಭೇಟಿ ನೀಡಿದರು.

Click to comment

Leave a Reply

Your email address will not be published. Required fields are marked *

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

Trending