Connect with us

    ಕೊರೊನಾ ಆತಂಕದ ಭೀತಿ, ಅವ್ಯವಸ್ಥೆಗಳ ಆಗರ, ಹಲವು ಎಡವಟ್ಟುಗಳೊಂದಿಗೆ ಪಿಯು ಪರೀಕ್ಷೆ ಅಂತ್ಯ..

    Published

    on

    ಕೊರೊನಾ ಆತಂಕದ ಭೀತಿ, ಅವ್ಯವಸ್ಥೆಗಳ ಆಗರ, ಹಲವು ಎಡವಟ್ಟುಗಳೊಂದಿಗೆ ಪಿಯು ಪರೀಕ್ಷೆ ಅಂತ್ಯ..

    ಮಂಗಳೂರು: ಕೊರೊನಾ ಆತಂಕದ ಭೀತಿ, ಅವ್ಯವಸ್ಥೆಗಳ ಆಗರ, ಹಲವು ಎಡವಟ್ಟುಗಳ ಅನಾವರಣ, ಮುಂಜಾಗ್ರತಾ ಕ್ರಮ ಕೈಗೊಳ್ಳುವಲ್ಲಿ ಹಲವೆಡೆ ಸರ್ಕಾರದ ವಿಫಲತೆ ನಡುವೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಇಂಗ್ಲಿಷ್ ಪರೀಕ್ಷೆ ಬರೆದರು.

    ರಾಜ್ಯಾದ್ಯಂತ 1016 ಕೇಂದ್ರಗಳಲ್ಲಿ 5.95 ಲಕ್ಷ ವಿದ್ಯಾರ್ಥಿಗಳು ಇಂದು ಪರೀಕ್ಷೆ ಬರೆದಿದ್ದಾರೆ.

    ಪರೀಕ್ಷೆ ಆರಂಭಕ್ಕೂ ಮುನ್ನ ಪರೀಕ್ಷಾ ಕೇಂದ್ರಗಳ ಮುಂದೆ ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಪಾಡದೇ ಗುಂಪು ಗುಂಪಾಗಿ ಸೇರಿದ್ದಲ್ಲದೆ,

    ನೋಂದಣಿ ಸಂಖ್ಯೆ ಹಾಗೂ ಕೊಠಡಿ ಸಂಖ್ಯೆ ಹುಡುಕಲು ಮುಗಿಬಿದ್ದ ದೃಶ್ಯ ಎಲ್ಲೆಡೆ ಸಾಮಾನ್ಯವಾಗಿತ್ತು.

    ಪರೀಕ್ಷೆ 10ಗಂಟೆ 15 ನಿಮಿಷಕ್ಕೆ ಆರಂಭವಾಗಬೇಕಿತ್ತಾದರೂ ಪರೀಕ್ಷಾ ಕೇಂದ್ರಗಳಿಗೆ ಬೆಳಿಗ್ಗೆ 8 ಗಂಟೆಗೆ ಬಂದಿದ್ದ ವಿದ್ಯಾರ್ಥಿಗಳು ರೋಲ್ ನಂಬರ್ ಪರಿಶೀಲನೆಗಾಗಿ ಪರದಾಡಿದರು.

    ಇನ್ನೂ ಕೆಲವು ಕಡೆ, ವಿದ್ಯಾರ್ಥಿಗಳು ಗುಂಪು ಗುಂಪಾಗಿ ಕುಳಿತು ಕೊನೆಯ ಕ್ಷಣದ ವಿಷಯದ ಸಮಾಲೋಚನೆಯಲ್ಲಿ ತೊಡಗಿದ್ದರು.

    ಕೊರೊನಾ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿ ಬರುವಂತೆ ಆದೇಶ ನೀಡಲಾಗಿತ್ತು.

    ಆದರೆ, ಕೆಲವು ಕಡೆ ಮಾಸ್ಕ್ ಧರಿಸದೇ ಬಂದಿದ್ದು, ಸರ್ಕಾರದ ಕಡೆಯಿಂದ ಮಾಸ್ಕ್ ವಿತರಿಸಿದರು.

    ಇನ್ನು ಹಲವೆಡೆ ಪರೀಕ್ಷಾ ಕೇಂದ್ರಗಳಲ್ಲಿ ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಜಿಂಗ್ ಮಾಡಲು ಕೂಡ ಒತ್ತಡ ಹೆಚ್ಚಾಗಿ ಪರೀಕ್ಷಾ ಕೇಂದ್ರದ ಸಿಬ್ಬಂದಿಗಳು ಹರಸಾಹಸ ಪಡಬೇಕಾಯಿತು.

    ಮತ್ತೆ ಕೆಲವು ಕೇಂದ್ರಗಳಲ್ಲಿ ಎಲ್ಲ ಕೆಲಸಗಳೂ ಸುಸೂತ್ರವಾಗಿ ನಡೆದು ವಿದ್ಯಾರ್ಥಿಗಳು ನಿರ್ಭೀತಿಯಿಂದ ಪರೀಕ್ಷೆ ಬರೆದರು.

    ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ 26,942 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು.

    ಇಂದು ಬೆಳಿಗ್ಗೆ 8.30ಕ್ಕೆ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಹಾಜರಿರುವಂತೆ ಸೂಚನೆಯನ್ನೂ ನೀಡಲಾಗಿತ್ತು.

    ಪರೀಕ್ಷೆ ಆರಂಭದ ಮುಂಚಿತವಾಗಿ ಎಲ್ಲಾ ವಿದ್ಯಾರ್ಥಿಗಳ ಥರ್ಮಲ್ ಸ್ಕ್ಯಾನಿಂಗ್, ಸ್ಯಾನಿಟೈಸರ್ ವಿತರಣೆ ನಡೆಸುವ ನಿಟ್ಟಿನಲ್ಲಿ ಈ ಸೂಚನೆಯನ್ನು ನೀಡಲಾಗಿತ್ತು.

    ಆದರೆ ಪುತ್ತೂರು ಹಾಗೂ ಮಂಗಳೂರಿನ ಕೆಲವು ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ಥರ್ಮಲ್ ಸ್ಕ್ಯಾನಿಂಗ್ ನಡೆಸಿಲ್ಲ ಎಂದು ಆರೋಪಿಸಲಾಗಿದೆ.

    ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ಸಂದರ್ಭದಲ್ಲಿ ಮಳೆಯಿದ್ದ ಪರಿಣಾಮ ಹೆಚ್ಚಿನ ವಿದ್ಯಾರ್ಥಿಗಳು ಮಳೆಗೆ ನಿಲ್ಲಲು ಜಾಗವಿಲ್ಲದೆ ಗುಂಪಾಗಿ ಸೇರಿದ್ದು, ಸಾಮಾಜಿಕ ಅಂತರ ಮಾಯವಾಗಿತ್ತು.

    ಅಲ್ಲದೆ ಥರ್ಮಲ್ ಸ್ಕ್ಯಾನಿಂಗನ್ನೂ ಸರಿಯಾಗಿ ಮಾಡಿಲ್ಲ ಎನ್ನುವ ಆರೋಪ ವಿದ್ಯಾರ್ಥಿಗಳಿಂದ ಕೇಳಿ ಬಂದಿದೆ.

    ವಿದ್ಯಾರ್ಥಿಗಳು ಗುಂಪಾಗಿ ಸೇರುತ್ತಿರುವ ದೃಶ್ಯಗಳು ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ಕಂಡು ಬಂದಿದ್ದು,

    ಮಕ್ಕಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮನವೊಲಿಸುವುದು ಕಷ್ಟ ಸಾಧ್ಯ ಅನ್ನೋದು ಇಂದು ನಡೆದ ಪರೀಕ್ಷೆಯನ್ನು ಗಮನಿಸಿದಾಗಿ ತಿಳಿದುಬಂದಿದೆ.

    ಪಿಯುಸಿ ವಿದ್ಯಾರ್ಥಿಗಳೇ ಸಾಮಾಜಿಕ ಅಂತರದಂತಹ ನಿಯಮಗಳನ್ನು ಉಲ್ಲಂಘಿಸುತ್ತಿರುವುದು ಕಂಡುಬಂದ ಕಾರಣ ಮುಂದೆ,

    ಎಸ್.ಎಸ್‌.ಎಲ್.ಸಿ ಪರೀಕ್ಷೆಯನ್ನು ಸರಕಾರ ಹೇಗೆ ನಿರ್ವಹಿಸಲಿದೆ ಎನ್ನುವ ಪ್ರಶ್ನೆಗಳೂ ಪೋಷಕರಿಂದ ಕೇಳಿ ಬರಲಾರಂಭಿಸಿದೆ.

    Click to comment

    Leave a Reply

    Your email address will not be published. Required fields are marked *

    LATEST NEWS

    ಫರಂಗಿಪೇಟೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ, ಮೂವರಿಗೆ ಗಾಯ

    Published

    on

    ವಿಟ್ಲದಿಂದ ಮಂಗಳೂರು ವಿಮಾನ ನಿಲ್ದಾಣದ ಕಡೆಗೆ ಸಾಗುತ್ತಿದ್ದ ಕಾರೊಂದು ಮಾರ್ಗ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಮೂವರು ಗಾಯಗೊಂಡ ಘಟನೆ ಇಂದು ಬೆಳಗ್ಗೆ ಬಂಟ್ವಾಳ ತಾಲೂಕಿನ ಫರಂಗಿಪೇಟೆಯಲ್ಲಿ ಸಂಭವಿಸಿದೆ.

    ಬೆಳಗ್ಗೆ 6.15 ರ ವೇಳೆಗೆ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಈ ಮೂವರು ಪ್ರಯಾಣಿರಿಗೆ ತುರ್ತಾಗಿ ವಿಮಾನ ನಿಲ್ದಾಣಕ್ಕೆ ಹೋಗಬೇಕಾಗಿದ್ದರಿಂದ ಅವರನ್ನು ಆಟೋ ರಿಕ್ಷಾದಲ್ಲಿ ವಿಮಾನ ನಿಲ್ದಾಣಕ್ಕೆ ಕಳುಹಿಸಿ ಕೊಡಲಾಯಿತು.

    ವೇಗವಾಗಿ ಸಾಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಢಿಕ್ಕಿ ಹೊಡೆದು ಬಳಿಕ ಮನೆಯೊಂದರ ಅಂಗಳದಲ್ಲಿ ಮಗುಚಿ ಬಿದ್ದಿದೆ. ಬೆಳಗ್ಗಿನ ವೇಳೆ ಜಿಟಿ ಜಿಟಿ ಮಳೆ ಸುರಿಯುತ್ತಿದ್ದು, ಇದರಿಂದಾಗಿ ಚಾಲಕನ ನಿಯಂತ್ರಣ ಕಳೆದುಕೊಂಡಿರ ಬೇಕೆಂದು ಶಂಕಿಸಲಾಗಿದೆ.

    Continue Reading

    LATEST NEWS

    ಮೆಟ್ರೋ ನಿಲ್ದಾಣದಲ್ಲಿಅನಾಹುತ; ಹಳಿಗೆ ಹಾರಿ ವ್ಯಕ್ತಿ ಆತ್ಮಹ*ತ್ಯೆ

    Published

    on

    ದೆಹಲಿ/ಮಂಗಳೂರು: ದೆಹಲಿಯ ಲೋಕ ಕಲ್ಯಾಣ್ ಮಾರ್ಗದ ಮೆಟ್ರೋ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಹಳಿಗೆ ಹಾರಿ ಆತ್ಮಹ*ತ್ಯೆ ಮಾಡಿಕೊಂಡ ಘಟನೆ ನಡೆದಿದೆ. 28 ವರ್ಷದ ದೇವೇಂದ್ರಕುಮಾರ್ ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ.

    ರಾಜಸ್ಥಾನ್‌ ಅಲ್ವಾರ್ ನಿವಾಸಿಯಾಗಿರುವ ದೇವೆಂದ್ರ ಕುಮಾರ್ ಲೋಕಕಲ್ಯಾಣ್ ಮಾರ್ಗ ಮೆಟ್ರೋ ನಿಲ್ದಾಣದ ಪ್ಲಾಟ್‌ ಫಾರ್ಮ್‌ ಸಂಖ್ಯೆ 2ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಪ್ರಕರಣದ ಕುರಿತು ತನಿಖೆ ನಡೆಯುತ್ತಿದ್ದು, ಶವವನ್ನು ಆರ್‌ಎಂಎಲ್‌ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

    Continue Reading

    LATEST NEWS

    ಶಿರೂರು ಗುಡ್ಡ ಕುಸಿತ; ಮೂಳೆ ಸಿಕ್ಕಿದ್ದು ದನದ್ದು, ಮನುಷ್ಯನದಲ್ಲ

    Published

    on

    ಅಂಕೋಲಾ: ತಾಲೂಕಿನ ಶಿರೂರು ಗುಡ್ಡ ಕುಸಿತದ ಶೋಧ ಕಾರ್ಯಾಚರಣೆ ವೇಳೆ ಗಂಗಾವಳಿ ನದಿಯಲ್ಲಿ ಪತ್ತೆಯಾಗಿದ್ದ ಮೂಳೆ ದನದ ಮೂಳೆ ಎಂದು ವೈಜ್ಞಾನಿಕ ಪರೀಕ್ಷೆಯಿಂದ ದೃಢಪಟ್ಟಿದೆ.

    ಭಾನುವಾರ ಸಂಜೆ ಕಾರ್ಯಾಚರಣೆಯಲ್ಲಿ ಮೂಳೆ ಪತ್ತೆಯಾಗಿದ್ದರಿಂದ ಇದು ಶಿರೂರು ದುರಂತದಲ್ಲಿ ಗಂಗಾವಳಿ ನದಿಯಲ್ಲಿ ಕಣ್ಮರೆಯಾಗಿರುವ ಮೂವರಲ್ಲಿ ಯಾರದಾದರೂ ಮೂಳೆ ಇರಬಹುದು ಎಂಬ ಜಿಜ್ಞಾಸೆಗೆ ಕಾರಣವಾಗಿತ್ತು.

    ಆದರೆ ಇದೀಗ ಮೂಳೆ ಪರೀಕ್ಷೆ ನಡೆಸಿ ವರದಿ ನೀಡಲಾಗಿದ್ದು ದನದ ಮೂಳೆ ಎಂಬುದು ದೃಢಪಟ್ಟಿದೆ.

    Continue Reading

    LATEST NEWS

    Trending