Connect with us

    BANTWAL

    ಕರ್ನಾಟಕ ವಿಧಾನಸಭಾ ಚುನಾವಣೆ: ದ.ಕ.ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಮುಂದುವರಿಕೆ..!

    Published

    on

    ರಾಜ್ಯ ವಿಧಾನಸಭೆಯ ಚುನಾವಣೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಇಂದು ಬೆಳಗ್ಗೆ ಅರಂಭಗೊಂಡು ಶಾಂತಿಯುತವಾಗಿ ಮುಂದುವರೆದಿದ್ದು ಅಪರಾಹ್ನ 1 ಗಂಟೆ ಸುಮಾರಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇಕಡ 44ರಷ್ಟು ಮತದಾನವಾಗಿದೆ.  

    ಮಂಗಳೂರು: ರಾಜ್ಯ ವಿಧಾನಸಭೆಯ ಚುನಾವಣೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಇಂದು ಬೆಳಗ್ಗೆ ಅರಂಭಗೊಂಡು ಶಾಂತಿಯುತವಾಗಿ ಮುಂದುವರೆದಿದ್ದು ಅಪರಾಹ್ನ 1 ಗಂಟೆ ಸುಮಾರಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇಕಡ 44ರಷ್ಟು ಮತದಾನವಾಗಿದೆ.

    ಬೆಳ್ಳಂ ಬೆಳಗ್ಗೆಯೇ ಮತಗಟ್ಟೆಗಳ ಮುಂದೆ ಮತದಾರರು ಸಾಲುಗಟ್ಟಿ ನಿಂತು ಮತದಾನ ಮಾಡುತ್ತಿದ್ದಾರೆ. . ಮತದಾನವು ಸುಸೂತ್ರವಾಗಿ ನಡೆಯಲು ಜಿಲ್ಲೆಯಲ್ಲಿ ಪೊಲೀಸ್/ಅರೆಸೇನಾ ಪಡೆಯ ಅಧಿಕಾರಿ, ಸಿಬ್ಬಂದಿ ಸಹಿತ 4,500ಕ್ಕೂ ಮಂದಿಯನ್ನು ಚುನಾವಣಾ ಆಯೋಗ ನಿಯೋಜಿಸಿದೆ.


    ಜಿಲ್ಲೆಯಲ್ಲಿ 8,70,991 ಪುರುಷ ಮತ್ತು 9,10,314 ಮಹಿಳಾ ಹಾಗೂ 84 ತೃತೀಯ ಲಿಂಗಿಗಳ ಸಹಿತ 17,81,389 ಮಂದಿ ತಮ್ಮ ಹಕ್ಕು ಚಲಾಯಿಸಲು ಹೆಸರು ನೋಂದಾಯಿಸಿದ್ದಾರೆ. ಅದಕ್ಕಾಗಿ ಜಿಲ್ಲೆಯಲ್ಲಿ 1,860 ಮತಗಟ್ಟೆಗಳನ್ನು ತೆರೆಯಲಾಗಿದ್ದು ಗ್ರಾಮೀಣ ವ್ಯಾಪ್ತಿಯಲ್ಲಿ 1,184 ಮತ್ತು ನಗರ, ಪಟ್ಟಣ ಪ್ರದೇಶದಲ್ಲಿ 676 ಮತಗಟ್ಟೆ ಕೇಂದ್ರಗಳು ಸೇರಿವೆ.

    ಚುನಾವಣಾ ಆಯೋಗದ ಸೂಚನೆಯಂತೆ ಜಿಲ್ಲೆಯ 939 ಮತಗಟ್ಟೆಗಳಲ್ಲಿ ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. 164 ಮತಗಟ್ಟೆಗಳಲ್ಲಿ ಮೈಕ್ರೋ ವೀಕ್ಷಕರನ್ನು, ಉಳಿದ ಮತಗಟ್ಟೆಗಳಲ್ಲಿ ಸಿಪಿಎಂಎಫ್‌ಗಳನ್ನು ನಿಯೋಜಿಸಲಾಗಿದೆ.

    ಜಿಲ್ಲೆಯ ಮತದಾನದ ಒಟ್ಟು ಮತದಾನ ವಿವರಗಳು..!

    ಮಂಗಳೂರು ದಕ್ಷಿಣ ಕ್ಷೇತ್ರ :

    ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜೆ. ಆರ್. ಲೋಬೊ ಅವರು ಇಂದು ಬೆಳಗ್ಗೆ ನಗರದ ಬೆಂದೂರಿನ ಸಂತ ಸಬೆಸ್ಟಿಯನ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪತ್ನಿ ಸಮೇತರಾಗಿ ಮತದಾನ ಮಾಡಿದರು.

    ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್‌ ಅವರು ಪತ್ನಿ ಸಮೇತರಾಗಿ ಬಂದು ಗಾಂಧಿ ನಗರ ಸರಕಾರಿ ಶಾಲೆಯಲ್ಲಿ ಮತ ಚಲಾಯಿಸಿದರು.

    ಆಮ್‌ ಆದ್ಮಿ ಪಕ್ಷದ ಅಭ್ಯರ್ಥಿ ಸಂತೋಷ್ ಕಾಮತ್ ಲೇಡಿಹಿಲ್‌ ಬೂತ್‌ನಲ್ಲಿ ಮತ ಚಲಾಯಿಸಿದರು.

    ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ನಗರದ ಕದ್ರಿ ಸರ್ಕಾರಿ ಶಾಲೆಯಲ್ಲಿ ಮತದಾನ ಮಾಡಿದರು.

    ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಲೇಡಿ ಹಿಲ್ ಶಾಲೆಯಲ್ಲಿ ಮತದಾನ ಮಾಡಿದ್ದಾರೆ.

    ಮಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಕದ್ರಿ ಕೆಪಿಟಿ ಯ ಬೂತ್ ಸಂಖ್ಯೆ 132ರಲ್ಲಿ ಪತ್ನಿ ಸಮೇತರಾಗಿ ಬಂದು ಮತ ಚಲಾಯಿಸಿದ್ದಾರೆ.

    ಮತ ಚಲಾಯಿಸಿದ ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಆಲಿ

     ಬಂಟ್ವಾಳ ವಿಧಾನ ಸಭಾ ಕ್ಷೇತ್ರ :

    ಬಂಟ್ವಾಳ ವಿಧಾನಸಭಾ ತಾಲೂಕಿನ 249 ಮತಗಟ್ಟೆಗಳಲ್ಲಿಯೂ ಬೆಳಿಗ್ಗೆ 7 ರಿಂದ ಮತದಾನದ ಪ್ರಕ್ರಿಯೆ ಆರಂಭವಾಗಿದ್ದು ಉತ್ಸಾಹದಿಂದಲೇ ಮತದಾನಕ್ಕೆ ಜನರು ಸರತಿ‌ ಸಾಲಿನಲ್ಲಿ ನಿಂತಿರುವ ದೃಶ್ಯ ಕಂಡು ಬಂತು.

    ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ, ಮಾಜಿ ಸಚಿವ  ಬಿ.ರಮಾನಾಥ ರೈ ರವರು  ತಮ್ಮ ಮತ ಕ್ಷೇತ್ರದಲ್ಲಿ ಮತ ಚಲಾಯಿಸುವ ಮೊದಲು  ತಿರುಮಲ ಶ್ರೀ ವೆಂಕರಮಣ ದೇವಸ್ಥಾನ ಹಾಗೂ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ  ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಅಲ್ಲಿಂದ  ಕುಟುಂಬ ಸಮೇತರಾಗಿ ಕಳ್ಳಿಗೆ ಗ್ರಾಮದ ತೊಡಂಬಿಲ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

    ಮಂಗಳೂರು ವಿಧಾನ ಸಭಾ ಕ್ಷೇತ್ರ: 

    ಮಂಗಳೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ಇಂದು ಮುಂಜಾನೆ ಮತದಾನ ಮಾಡುವ ಮುನ್ನ ಸೋಮೇಶ್ವರ ದೇವಸ್ಥಾನ ಹಾಗೂ ಕುಂಪಲ ಬಾಲಕೃಷ್ಣ ಮಂದಿರದಲ್ಲಿ ವಿಶೇಷ ಪೂಜೆಯಲ್ಲಿ ಭಾಗಿಯಾದರು. ಬಳಿಕ ಅವರು ಮತ ಚಲಾಯಿಸಿದರು.

    ಮಂಗಳೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯು ಟಿ ಖಾದರ್ ಬೋಳಿಯಾರು ಜಾರದಗುಡ್ಡೆ ಶಾಲೆಯಲ್ಲಿ ಮತ ಚಲಾಯಿಸಿದರು.

    ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ :

    ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜು ತೆಂಕ ಎಡಪಡವು ಇಲ್ಲಿ ಬಂಟ್ವಾಳ ಕ್ಷೇತ್ರದ ಶಾಸಕರಾದ  ರಾಜೇಶ್ ನಾಯ್ಕ್ ಇವರು ಇಲ್ಲಿನ ಬೂತ್ ಸಂಖ್ಯೆ 186 ಇಲ್ಲಿ ನಿಗದಿತ ಸಮಯಕ್ಕಿಂತ ಮೊದಲೇ ಅಂದರೆ 6.30ಕ್ಕೇ ಆಗಮಿಸಿ ಸರತಿ ಸಾಲಿನಲ್ಲಿ ಮೊದಲಿಗರಾಗಿ ನಿಂತು ಬೂತ್ ನಲ್ಲಿ ಮೊದಲಿಗರಾಗಿ ತಮ್ಮ ಮತ ಚಲಾಯಿಸಿದರು.

     

     

    BANTWAL

    ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕ ಮೃ*ತ್ಯು

    Published

    on

    ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃ*ತಪಟ್ಟಿದ್ದಾರೆ.

    ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮೆಕೇನಿಕ್ ಸಿ.ಎಚ್. ಹನೀಫ್ ಅವರ ಪುತ್ರ ಬಾತಿಷಾ( 22) ಮೃ*ತಪಟ್ಟವರು.

    ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದ, ಗುರುವಾರ ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃ*ತಪಟ್ಟಿದ್ದಾರೆ

    Continue Reading

    BANTWAL

    ಬಂಟ್ವಾಳ: ಭಾರೀ ಗಾಳಿ ಮಳೆಗೆ ತಾಲೂಕಿನ ಕೆಲ ಭಾಗಗಳಲ್ಲಿ ಹಾನಿ

    Published

    on

    ಬಂಟ್ವಾಳ: ರಾತ್ರಿ ಬೀಸಿದ ಗಾಳಿ ಮಳೆಗೆ ಬಂಟ್ವಾಳ ತಾಲೂಕಿನ ಕೆಲವು ಭಾಗದಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಹಾನಿಯಾದ ಘಟನೆ ವರದಿಯಾಗಿದೆ.

    ಬಿಸಿ ರೋಡಿನ ಸರ್ಕಲ್ ಸಹಿತ ಅನೇಕ ಭಾಗದಲ್ಲಿ ವಿದ್ಯುತ್ ಕಂಬ, ಕಾಂಪೌಂಡ್, ಮರಗಳು ಉರುಳಿಬಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.

    ಮಂಗಳವಾರ ರಾತ್ರಿ ಸುಮಾರು 9.30ರ ವೇಳೆ ಭಾರಿ ಗಾಳಿ ಮಳೆಯಾಗಿದ್ದು, ಇದರಿಂದ ಬಿ.ಸಿ.ರೋಡ್ ಸರ್ಕಲ್ ಬಳಿ ಸಹಿತ ಹಲವೆಡೆ ಒಟ್ಟು 5 ವಿದ್ಯುತ್ ಕಂಬಗಳು ಉರುಳಿಬಿದ್ದು ಮೆಸ್ಕಾಂ ಇಲಾಖೆಗೆ ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ ಬಳಿ ಬೃಹತ್ ಮರವೊಂದು ಉರುಳಿಬಿದ್ದಿದ್ದು, ಅನಾಹುತವನ್ನೇ ಉಂಟುಮಾಡಿದೆ.

    ಇನ್ನು ಬಂಟ್ವಾಳ ತಾಲೂಕಿನ ಮಾಧ್ವ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದಿದ್ದು, ಅಪಾರ ಹಾನಿಯಾಗಿದೆ.

    Continue Reading

    BANTWAL

    ವಿಟ್ಲ: ಯುವಕ ನೇಣು ಬಿಗಿದು ಆತ್ಮಹ*ತ್ಯೆ..!

    Published

    on

    ವಿಟ್ಲ: ವಿಟ್ಲ ಬುಡೋಳಿ ಮಡಲ ನಿವಾಸಿ ಸುಶಾಂತ್(25 ವ) ಮನೆಯಲ್ಲಿ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಸುಶಾಂತ್ ರವರು ಇತ್ತೀಚೆಗೆ ಮಿನಿ ಬಸ್‌ ಖರೀದಿಸಿದ್ದು ಬಸ್ಸನ್ನು ತಾನೇ ಚಾಲನೆ ಮಾಡಿಕೊಂಡು ಕೆಲಸ ನಿರ್ವಹಿಸುತ್ತಿದ್ದರು. ಈತ ಸಂಘಟನೆಯ ಜೊತೆಗೆ ಸಾಮಾಜಿಕ ಸೇವಾಕಾರ್ಯಗಳನ್ನು ಮಾಡಿಕೊಂಡಿದ್ದರು. ಗ್ರಾಮದಲ್ಲಿ ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದ ಈತನ ಸಾವಿಗೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.

    ಸುರತ್ಕಲ್: ಖಾಸಗಿ ಬಸ್ ಢಿ*ಕ್ಕಿ; ದ್ವಿಚಕ್ರ ಸವಾರನಿಗೆ ಗಾ*ಯ

    Continue Reading

    LATEST NEWS

    Trending